Tag: ಲಯಸ್ಮಿತಾ

  • ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಬೆಂಗಳೂರು: ಪ್ರತಿಷ್ಠಿತ ಕಾಲೇಜು ಅವರಣ (College Campus) ದಲ್ಲಿ ನಡೆದ ವಿದ್ಯಾರ್ಥಿನಿ ಲಯಸ್ಮಿತಾ ಕೊಲೆ ಇಡೀ ಬೆಂಗಳೂರನ್ನೆ ನಡುಗಿಸಿತ್ತು. ಕಾಲೇಜಿಗೆ ತಮ್ಮ ಮಕ್ಕಳನ್ನ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು. ಇದರಿಂದ ಎಚ್ಚೆತ್ತಿರುವ ಪೊಲೀಸರು ಇಲಾಖೆ ಬೆಂಗಳೂರು ಗ್ರಾಮಾಂತರದ ಠಾಣಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಹೊಸ ಗೈಡ್ ಲೈನ್ (New Guidelines For College) ಹೊರಡಿಸಿದೆ. ಕಾಲೇಜು ಆಡಳಿತ ಮಂಡಳಿಗಳು ಇನ್ಮುಂದೆ ಈ ಹೊಸ ಗೈಡ್ ಲೈನ್ಸ್ ಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪೊಲೀಸರು ತಾಕೀತು ಮಾಡಿದ್ದಾರೆ.

    ಲಯಸ್ಮಿತಾ (Layasmitha) ಕೊಲೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡು ಬಂದಿದ್ದರಿಂದ ಪೊಲೀಸರು ಒಂದಷ್ಟು ಅಂಶಗಳನ್ನ ಫೈಂಡೌಟ್ ಮಾಡಿ ಪಬ್ಲಿಕ್ ಸೇಪ್ಟಿ ಆಕ್ಟ್ ಅಡಿಯಲ್ಲಿ ಹೊಸ ಗೈಡ್ ಲೈನ್ ಹೊರಡಿಸಿದ್ದಾರೆ. ಇದನ್ನೂ ಓದಿ: ನಗರ ಭಾಗದಲ್ಲೂ ಕಂಬಳ ಕಹಳೆ- ಕಾಂತಾರದಿಂದ ಮತ್ತಷ್ಟು ರಂಗೇರಿದ ಹವಾ

    ಕಾಲೇಜುಗಳಿಗೆ ನಯಾ ಗೈಡ್‍ಲೈನ್ಸ್: ಕಾಲೇಜು ಅವರಣದಲ್ಲಿ, ಪಾರ್ಕಿಂಗ್ ಲಾಟ್‍ನಲ್ಲಿ ಸಿಸಿಟಿವಿ ಕಡ್ಡಾಯವಾಗಿರಬೇಕು. ಹೊರಗಡೆಯಿಂದ ಬೈಕ್‍ನಲ್ಲಿ ಬರುವವರನ್ನ ಪರಿಶೀಲಿಸಬೇಕು. ಎಂಟ್ರಿ-ಎಕ್ಸಿಟ್ ಗೇಟ್‍ನಲ್ಲಿ ಭದ್ರತೆಯನ್ನ ಹೆಚ್ಚಿಸಿ ಕೊಡಬೇಕು. ಐಡಿ ಕಾರ್ಡ್ ಇರದೇ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಾರದು. ಗಲಾಟೆ ಸಂದರ್ಭ ಎದುರಾದರೆ ಪೊಲೀಸರಿಗೆ ತಿಳಿಸಬೇಕು. ಇಷ್ಟಲ್ಲದೇ ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸರು ಕೂಡ ಪಬ್ಲಿಕ್ ಸೆಪ್ಟಿ ಆಕ್ಟ್ ಅಡಿಯಲ್ಲಿ ಸೂಕ್ತ ಭದ್ರತೆಗೆ ಸಿದ್ಧಮಾಡಿಕೊಂಡಿದ್ದಾರೆ.

    ಹೀಗೆ ಲಯಸ್ಮಿತಾ ಕೊಲೆಯ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಖಾಕಿ ಪಡೆ ಹೊಸ ಗೈಡ್ ಲೈನ್ಸ್ ಹೊರಡಿಸಿದೆ. ಹಾಗೆ ಕಡ್ಡಾಯವಾಗಿ ಎಲ್ಲಾ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಗೈಡ್‍ಲೈನ್ಸ್ ಪಾಲನೆ ಮಾಡಬೇಕು. ಒಂದು ವೇಳೆ ಗೈಡ್‍ಲೈನ್ಸ್ ಉಲ್ಲಂಘನೆ ಮಾಡುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನ ಪೊಲೀಸರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಯಸ್ಮಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಕೂಡಲೇ ಮದ್ವೆಯಾಗಲು ಒಪ್ಪದ್ದಕ್ಕೆ ಕೊಂದೆ ಎಂದ ಆರೋಪಿ

    ಲಯಸ್ಮಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಕೂಡಲೇ ಮದ್ವೆಯಾಗಲು ಒಪ್ಪದ್ದಕ್ಕೆ ಕೊಂದೆ ಎಂದ ಆರೋಪಿ

    ಬೆಂಗಳೂರು: ಪ್ರೆಸಿಡೆನ್ಸಿ ಕಾಲೇಜಿ (Presidency College) ನಲ್ಲಿ ಯುವತಿ ಹತ್ಯೆ ಪ್ರಕರಣ ಸಂಬಂಧ ಇದೀಗ ಪಾಗಲ್ ಪ್ರೇಮಿ ಪವನ್ ಕಲ್ಯಾಣ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾನೆ.

    ಲಯಸ್ಮಿತಾ (Layasmitha) ಳನ್ನು ಹತ್ಯೆ ಮಾಡಲು ನಿಜವಾದ ಕಾರಣ ಏನು ಎಂಬುದನ್ನು ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಈ ಕೂಡಲೇ ಮದುವೆಯಾಗಲು ಒಪ್ಪದೇ ಇದ್ದಿದ್ದಕ್ಕೆ ಕೊಲೆ ಮಾಡಿದೆ ಎಂದಿದ್ದು, ಪೊಲೀಸರ ಮುಂದೆ ಬಾಯ್ಬಿಟ್ಟ ಸತ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪೊಲೀಸರ ಮುಂದೆ ಪವನ್ (Pawan Kalyan) ಹೇಳಿದ್ದೇನು..?: ಕಳೆದ ಒಂದೂವರೆ ವರ್ಷದಿಂದ ನಾನು ಲಯಸ್ಮಿತಾ ಪ್ರೀತಿ ಮಾಡುತ್ತಾ ಇದ್ದೆವು. ದೂರದ ಸಂಬಂಧಿಯಾಗಿದ್ದರಿಂದ ಜಾತಿಯ ಸಮಸ್ಯೆ ಇರಲಿಲ್ಲ. ಕುಟುಂಬಸ್ಥರನ್ನು ಒಪ್ಪಿಸುವ ಜವಾಬ್ದಾರಿಯನ್ನು ಲಯ ತೆಗೆದುಕೊಂಡಿದ್ದಳು. ಆದರೆ ಕಾಲೇಜಿಗೆ ಸೇರಿದ ಮೇಲೆ ಲಯಾಳ ಹಾವಭಾವ ಬದಲಾಗ್ತಾ ಇತ್ತು. ಲಯಾಳ ಬದಲಾವಣೆ ನನಗೆ ಅನುಮಾನ ಬಂದು ತಕ್ಷಣ ಮದುವೆಯಾಗೋದಕ್ಕೆ ಕೇಳಿದೆ.

    ಮದುವೆ (Marriage) ಅಂದ ಕೂಡಲೇ ವಿರೋಧ ಮಾಡಲು ಪ್ರಾರಂಭಿಸಿದಳು. ನಾನು ಈಗಿನ್ನೂ ಕಾಲೇಜಿಗೆ ಸೇರಿದ್ದೀನಿ, ಕಾಲೇಜು ಮುಗಿದ ಮೇಲೆ ಮದುವೆ ಆಗೋಣ ಅಂದ್ಲು. ಎರಡು ದಿನ ಮಾತನಾಡಲೇ ಇಲ್ಲ, ಡಿಸೆಂಬರ್ 31 ಮತ್ತು ಜನವರಿ 1 ರಂದು ಫೋನ್ ಪಿಕ್ ಮಾಡ್ಲೇ ಇಲ್ಲ. ನಮ್ಮಿಬ್ಬರ ವಿಚಾರ ಎಲ್ಲರಿಗೂ ಗೊತ್ತಾಗ್ಲಿ ಅಂತ ವಾಟ್ಸಪ್ ಡಿಪಿ (Whatsapp DP) ಹಾಕಿದೆ. ಆಗ ಫೋನ್ ಮಾಡಿ ಬೈಯ್ದಳು. ಬಳಿಕ ನಾನು ಕಾಲೇಜಿಗೆ ಹೋಗಲು ತೀರ್ಮಾನ ಮಾಡಿದೆ. ಲಯಾಳ ಕಾಲೇಜಿನ ಬಳಿ ಹೋಗಿ ಅವಳನ್ನು ಹೊರಗೆ ಬರಲು ಹೇಳಿದೆ. ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಲಯಾಳನ್ನು ಕಾಲೇಜಿನ ಹೊರಗೆ ಕರೆಸಿಕೊಂಡು ಕೂಡಲೇ ಮದುವೆ ಮಾಡಿಕೊಳ್ಳಲು ಕೇಳಿಕೊಂಡೆ. ಅವಳು ಜಗಳ ಮಾಡೋದಕ್ಕೆ ಶುರು ಮಾಡಿದಳು. ನನಗೂ ಆ ಸಂದರ್ಭದಲ್ಲಿ ಕೋಪ ಬಂತು. ನಾನು ಅಂದುಕೊಂಡಂತೆ ಅವಳನ್ನು ಕೊಲೆ ಮಾಡಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಇರಲಿಲ್ಲ. ಅವಳು ಸತ್ತ ಬಳಿಕ ನಾನು ಚಾಕುವಿನಿಂದ ಕುಯ್ದುಕೊಂಡೆ ಎಂದು ಪೊಲೀಸರ ಮುಂದೆ ಪವನ್ ತಪ್ಪೊಪ್ಪಿಕೊಂಡಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k