Tag: ಲವ್

  • ಕೆಟ್ಟ ಅಭಿರುಚಿಯ ಚಾಟಿಂಗ್, ವಿಡಿಯೋ ಮಾಡಿದ್ದ ಜೋಡಿ – ಹೈಕೋರ್ಟ್‌ನಲ್ಲಿ ಮಹಿಳೆಯ ರೇಪ್‌ ಕೇಸ್ ವಜಾ

    ಕೆಟ್ಟ ಅಭಿರುಚಿಯ ಚಾಟಿಂಗ್, ವಿಡಿಯೋ ಮಾಡಿದ್ದ ಜೋಡಿ – ಹೈಕೋರ್ಟ್‌ನಲ್ಲಿ ಮಹಿಳೆಯ ರೇಪ್‌ ಕೇಸ್ ವಜಾ

    -ನಿರಾಸೆಯಲ್ಲಿ ಸಂಬಂಧ ಅಂತ್ಯಗೊಂಡರೆ ರೇಪ್ ಅಲ್ಲ

    ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ (Relationship) ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು ನೀಡಿದೆ.

    ಮಹಿಳೆಯೊಬ್ಬರು ಡೇಟಿಂಗ್ ಆಪ್‌ನಲ್ಲಿ ಪರಿಚಯವಾಗಿದ್ದ ಸಾಂಪ್ರಸ್ ಆಂಥೋಣಿ ಎಂಬಾತನ ಒಂದು ವರ್ಷಗಳ ಕಾಲ ಆತ್ಮಿಯವಾಗಿದ್ದರು. ಬಳಿಕ ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಕೇಸಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಾಟ್ಸಪ್‌ನಲ್ಲಿ ಇಬ್ಬರು ಪರಸ್ಪರ ಚಾಟಿಂಗ್ ಮಾಡಿದ್ದು, ಹಾಗೇ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಬಳಿಕ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಮಹಿಳೆ ಸಾಂಪ್ರಸ್ ಆಂಥೋಣಿ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿದೆ. ಇದನ್ನೂ ಓದಿ: 5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    ಇನ್‌ಸ್ಟಾಗ್ರಾಂನಲ್ಲಿ ಇಬ್ಬರು ಕೆಟ್ಟ ಅಭಿರುಚಿಯ ಚಾಟಿಂಗ್ ಮಾಡಿದ್ದರು. ಪರಸ್ಪರ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿದ್ದರು. ಆದ್ರೆ, ಆರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು ಇನ್‌ಸ್ಟಾಗ್ರಾಂ ಚಾಟಿಂಗ್ ಪರಿಗಣಿಸಿರಲಿಲ್ಲ. ಇವುಗಳನ್ನು ಪರಿಶೀಲಿಸಿದರೆ ಮಹಿಳೆಯ ದೂರು ಸುಳ್ಳೆಂದು ಸಾಬೀತಾಗಿದೆ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ:  ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

  • ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಲವ್ವಿ-ಡವ್ವಿ; NCC ಪಾಠ ಹೇಳಿಕೊಟ್ಟ ಗುರುವಿನ ಜೊತೆಯೇ ಜೂಟ್

    ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಲವ್ವಿ-ಡವ್ವಿ; NCC ಪಾಠ ಹೇಳಿಕೊಟ್ಟ ಗುರುವಿನ ಜೊತೆಯೇ ಜೂಟ್

    – ಮದುವೆ ಆಗಿ ಇಬ್ರು ಮಕ್ಕಳಿದ್ರೂ ವಿದ್ಯಾರ್ಥಿನಿ ಜೊತೆಯಲ್ಲಿ ಶಿಕ್ಷಕನ ಚಕ್ಕಂದ

    ಚಿಕ್ಕಬಳ್ಳಾಪುರ: ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ. ಗುರು ಸಾಕ್ಷಾತ್ ಪರಬ್ರಹ್ಮ ಅಂತಾರೆ. ಗುರು ಅಂದ್ರೆ ದೇವರ ಸಮಾನ. ಆದ್ರೆ ಅಂತಹ ಗುರುವೇ ತಾನೇ ಪಾಠ ಹೇಳಿಕೊಟ್ಟ ವಿದ್ಯಾರ್ಥಿನಿ ಜೊತೆ ಓಡಿ ಹೋಗಿ ಪೊಲೀಸರ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕನ್ನಡ ಮೇಷ್ಟ್ರಾಗಿರುವ ಪ್ರವೀಣ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, ಎನ್‌ಸಿಸಿ ತರಬೇತಿಯ ಜೊತೆ ಕನ್ನಡ ಪಾಠ ಮಾಡ್ತಾ ಶಿಸ್ತಿನ ಪಾಠ ಹೇಳಿಕೊಡಬೇಕಿದ್ದ ಶಿಕ್ಷಕ, ತನ್ನ ಶಾಲೆಯ ವಿದ್ಯಾರ್ಥಿನಿಯ ಜೊತೆಯಲ್ಲೇ ಹಲವು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಕದ್ದು ಮುಚ್ಚಿ ಪ್ರಣಯದಾಟ ಆಡಿಕೊಂಡು ಬಂದಿದ್ದ. ಇದನ್ನೂ ಓದಿ: ಗದಗ | ಬಿರಿಯಾನಿ ತಿನ್ನಲು ಹೋಟೆಲ್‌ಗೆ ಬಂದಾತನ ಭೀಕರ ಕೊಲೆ

    ಇನ್ನೂ ಇದನ್ನ ಅರಿಯದ ವಿದ್ಯಾರ್ಥಿನಿಯ ಮನೆಯವರು ವಿದ್ಯಾರ್ಥಿನಿಗೆ ವರನನ್ನ ನೋಡಿ ಆಗಸ್ಟ್ 11ಕ್ಕೆ ಮದುವೆ ನಿಶ್ಚಯ ಮಾಡಿದ್ದರು. ಹೀಗಾಗಿ ಮದುವೆ ಢೇಟ್ ಫಿಕ್ಸ್ ಆಗ್ತಿದ್ದಂತೆ ಶಿಕ್ಷಕ ಪ್ರವೀಣ್, ವಿದ್ಯಾರ್ಥಿನಿಯನ್ನ ಕರೆದುಕೊಂಡು ಎಸ್ಕೇಪ್ ಆಗಿದ್ದ. ಬಳಿಕ ದೆಹಲಿಗೆ ಹೋಗಿ ಕಾಲ ಕಳೆದು ಬೆಂಗಳೂರಿಗೆ ವಾಪಾಸ್ ಬಂದಿದ್ದರು. ಇದನ್ನೂ ಓದಿ: DRDO ವಿಜ್ಞಾನಿಗಳ ಮಾಹಿತಿ ಪಾಕ್‌ಗೆ ಹಂಚಿಕೆ – ಅತಿಥಿ ಗೃಹದ ಸಿಬ್ಬಂದಿ ಅರೆಸ್ಟ್‌

    ಇತ್ತ ವಿದ್ಯಾರ್ಥಿನಿ ಮನೆಯವರು ಮದುವೆ ಇಷ್ಟ ಅಲ್ಲ ಎಂದು ಯಾರೋ ಯುವಕನ ಜೊತೆಯಲ್ಲಿ ಓಡಿ ಹೋಗಿರಬೇಕು ಅಂದುಕೊಂಡಿದ್ದರು. ಆದರೆ ಪೊಲೀಸರು ಇಬ್ಬರನ್ನೂ ಹುಡುಕಿ ಕರೆತಂದಾಗಲೇ ತಮ್ಮ ಮಗಳು ಶಿಕ್ಷಕನ ಜೊತೆಯೇ ಓಡಿಹೋಗಿದ್ದು ಎಂದು ತಿಳಿದು ವಿದ್ಯಾರ್ಥಿನಿಯ ಪೋಷಕರು ಶಾಕ್ ಆಗಿದ್ದಾರೆ.

    ಶಿಕ್ಷಕ ಪ್ರವೀಣ್‌ಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದ್ರೂ ವಿದ್ಯಾರ್ಥಿನಿ ಜೊತೆ ಪ್ರಣಯದಾಟ ಆಡಿ ಅಕೆಯ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. ಇತ್ತ ಪ್ರವೀಣ್ ಪತ್ನಿ ಸಹ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಪತಿಯ ವಿರುದ್ಧವೇ ದೂರು ನೀಡಿದ್ದಾರೆ. ಇದೀಗ ಪೊಲೀಸರು ಶಿಕ್ಷಕ ಪ್ರವೀಣ್‌ನನ್ನು ಬಂಧಿಸಿದ್ದಾರೆ.

  • ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

    ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

    ಕೊಪ್ಪಳ: ಕಳೆದ ಎರಡು ದಿನಗಳ ಹಿಂದೆ ಕೊಪ್ಪಳದಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಟ್ರಯಾಂಗಲ್ ಲವ್‌ಗೆ (Triangle Love) ಯುವಕ ಕೊಲೆ ಮಾಡಲಾಗಿದೆ ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದ್ದು, ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಆ. 3ರಂದು ನಡುರಸ್ತೆಯಲ್ಲಿ 27 ವರ್ಷದ ಯುವಕನನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಟ್ರಯಾಂಗಲ್ ಲವ್ ಸ್ಟೋರಿ ವಿಚಾರವಾಗಿ ನಡೆದ ಕೊಲೆ ಇದೀಗ ಸದ್ದು ಮಾಡುತ್ತಿದೆ. ಕೊಲೆ ಮಾಡಿದ ಓರ್ವ ಆರೋಪಿ ಠಾಣೆಗೆ ಶರಣಾಗಿದ್ದು, ಇದೀಗ ಪೊಲೀಸರು ಕೊಲೆಗೆ ಸಹಾಯ ಮಾಡಿದ ಮೂವರನ್ನು ಬಂಧಿಸಿದ್ದಾರೆ. ಕೊಲೆಗೆ ಪೊಲೀಸ್ ವರಿಷ್ಠಾಧಿಕಾರಿ ಹೊಸ ಟ್ವಿಸ್ಟ್ ಕೊಟ್ಟರೆ, ಹತ್ಯೆಯಾದ ಯುವಕನ ತಂದೆ ಮತ್ತೊಂದು ತಿರುವು ಟ್ವಿಸ್ಟ್ ಕೊಟ್ಟಿದ್ದಾರೆ. ಇನ್ನು ಇದೇ ಕೊಲೆಯನ್ನ ರಾಜಕೀಯವಾಗಿ ಬಳಸಿಕೊಳ್ಳಲು ರಾಜಕೀಯ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಹಿಂದೂ ಯುವಕ ಗವಿಸಿದ್ದಪ್ಪನನ್ನು ಸಾಧಿಕ್ ಎಂಬ ಅನ್ಯಕೋಮಿನ ಯುವಕ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದ. ಹತ್ಯೆಯಾದ ಗವಿಸಿದ್ದಪ್ಪ, ಸಾಧಿಕ್ ಪ್ರೀತಿಸುತ್ತಿದ್ದ ಹುಡುಗಿಗೆ ತೊಂದರೆ ಕೊಟ್ಟಿದ್ದ. ಅದಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಸಲಿಗೆ ಇದು ಟ್ರಯಾಂಗಲ್ ಲವ್ ಸ್ಟೋರಿಗಾಗಿ ನಡೆದ ಕೊಲೆ ಎಂಬುದು ಗೊತ್ತಾಗಿದೆ. ಸಾಧಿಕ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ. ಆದ್ರೆ ಆಕೆ ಸಾಧಿಕ್‌ನೊಂದಿಗೆ ಬ್ರೇಕಪ್ ಮಾಡಿಕೊಂಡು, ಗವಿಸಿದ್ದಪ್ಪನನ್ನು ಪ್ರೀತಿಸುತ್ತಿದ್ದಳು. ಗವಿಸಿದ್ದಪ್ಪನನ್ನೇ ಮದುವೆಯಾಗುವುದಾಗಿ ಓಡಿ ಹೋಗಿದ್ದಳು. ಅಪ್ರಾಪ್ತೆಯಾಗಿದ್ದ ಕಾರಣ ಗವಿಸಿದ್ದಪ್ಪನಿಗೆ ಹಿರಿಯರು ಬುದ್ಧಿವಾದ ಹೇಳಿ ಸುಮ್ಮನಿರಿಸಿದ್ದರು. ಇದಾದ ಮೇಲೆ ಆತನೂ ಕೂಡ ಸೈಲೆಂಟ್ ಆಗಿ ಬಿಟ್ಟಿದ್ದ. ಆದರೆ ಭಾನುವಾರ ರಾತ್ರಿ ಸಾಧಿಕ್ ಮಾರಕಾಸ್ತçಗಳಿಂದ ಗವಿಸಿದ್ದಪ್ಪನನ್ನು ಕೊಚ್ಚಿ ಕೊಲೆಗೈದಿದ್ದ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಇಂದು ಕೊನೆಯ ಪಾಯಿಂಟ್‌ನಲ್ಲಿ ಶೋಧ

    ಇನ್ನು ಗವಿಸಿದ್ದಪ್ಪ ಕೊಲೆಯನ್ನೇ ಇದೀಗ ರಾಜಕೀಯ ಅಸ್ತ್ರ ಮಾಡಿಕೊಳ್ಳಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ಕೊಲೆಯಾದ ಗವಿಸಿದ್ದಪ್ಪ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಯುವಕನಾದ್ದರಿಂದ ಕೊಲೆಯನ್ನು ಈ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ಅಮಾಯಕ ಯುವಕನ ಕೊಲೆ ಖಂಡಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡೋಕೆ ವಾಲ್ಮೀಕಿ ಸಮುದಾಯದವರು ಚಿಂತನೆ ಮಾಡಿದ್ದಾರೆ. ಇದನ್ನೂ ಓದಿ: ಹವಾಮಾನ ವೈಪರೀತ್ಯ – ಸಿಎಂ ರಾಯಚೂರು ಪ್ರವಾಸ ರದ್ದು

    ಗವಿಸಿದ್ದಪ್ಪನ ಮನೆಗೆ ಶ್ರೀರಾಮುಲು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಈ ವೇಳೆ ಗವಿಸಿದ್ದಪ್ಪನ ತಾಯಿ ರಾಮುಲು ಕಾಲಿಗೆ ಬಿದ್ದು ಗೋಳಾಡಿದ್ದರು. ಅಲ್ಲದೇ ಸಹೋದರಿಯರು ಸಹ ನ್ಯಾಯಕ್ಕಾಗಿ ಕಣ್ಣೀರು ಹಾಕಿದ್ದರು. ಮನೆಗೆ ಭೇಟಿ ನೀಡಿದ ಬಳಿಕ ರಾಮುಲು ಇಡೀ ಪ್ರಕರಣಕ್ಕೆ ಹೊಸ ತಿರುವು ಕೊಟ್ಟಿದ್ದಾರೆ. ಹಂತಕ ಪಿಎಫ್‌ಐ ಸಂಘಟನೆಯುಲ್ಲಿದ್ದ ಎಂದು ಆರೋಪಿಸಿದ್ದಾರೆ. ತನ್ನ ಮಗನ ಸಾವಿಗೆ ಕಾರಣಳಾದ ಯುವತಿ ವಿರುದ್ಧವೂ ದೂರು ನೀಡೋದಾಗಿ ಗವಿಸಿದ್ದಪ್ಪನ ತಂದೆ ಹೇಳಿದ್ದಾರೆ.

    ಒಟ್ಟಾರೆ, ಇಡೀ ಪ್ರಕರಣವನ್ನ ಪೊಲೀಸರು ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

  • ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    – ದಾಳಿಗೆ ಕಾರಣವಾಯ್ತಾ ಲವ್ ಬ್ರೇಕಪ್?

    ಆನೇಕಲ್: ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ಪಟ್ಟಣದ ವಾರ್ಡ್ 9ರ ನಿವಾಸಿ ರವಿಕುಮಾರ್ ಮೃತ ಯುವಕ. ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ (Breakup) ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಈಗಾಗಲೇ ಘಟನಾ ಸ್ಥಳದಿಂದ ಎಫ್‌ಎಸ್‌ಎಲ್ ತಂಡ ಸಾಕ್ಷ್ಯಾಧಾರಗಳನ್ಮು ಸಂಗ್ರಹಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ. ಶೀಘ್ರ ಆರೋಪಿಗಳ ಬಂಧನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಹೇಳಿಕೆ ನೀಡಿದ್ದಾರೆ.

  • ಬಾಲಕಿಗೆ ಪಾಗಲ್‌ ಪ್ರೇಮಿ ಲವ್‌ ಟಾರ್ಚರ್‌ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ

    ಬಾಲಕಿಗೆ ಪಾಗಲ್‌ ಪ್ರೇಮಿ ಲವ್‌ ಟಾರ್ಚರ್‌ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ

    ಮುಂಬೈ: ಇಲ್ಲೊಬ್ಬ ಪಾಗಲ್ ಪ್ರೇಮಿ (Jilted Lover) ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ಮಹಾರಾಷ್ಟ್ರದ (Maharashtra) ಸತಾರಾ (Satara) ನಗರದ ಕರಂಜೆ ಪ್ರದೇಶದ ಶಾಲೆಯಲ್ಲಿ ಅಪ್ರಾಪ್ತ ಬಾಲಕಿ 10ನೇ ತರಗತಿ ಓದುತ್ತಿದ್ದಳು. ಆಕೆಯ ಹಿಂದೆ ಬಿದ್ದಿದ್ದ ಈ ಯುವಕ ಪ್ರೀತಿಸುವಂತೆ ಪೀಡಿಸುತ್ತಿದ್ದ. ಬಾಲಕಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಆಕೆಯನ್ನು ತಡೆದು ಪ್ರೀತಿಸುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದ ನಂತರ ಚಾಕು ತೋರಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಪಾಟ್ನಾ | ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಇಬ್ಬರು ಆರೋಪಿಗಳ ಮೇಲೆ ಫೈರಿಂಗ್

    ಬಾಲಕಿ ಬೇಡಿಕೊಂಡರೂ ಬಿಡದೆ, ಚಾಕು ತೋರಿಸುವ ವಿಡಿಯೋ ವೈರಲ್ ಆಗಿದೆ. ಬಾಲಕಿ ಪೋಷಕರು ಕೂಡ ಯುವಕನಿಗೆ ಬುದ್ಧಿ ಹೇಳಲು ಯತ್ನಿಸಿದ್ದಾರೆ. ನನ್ನ ಮಗಳನ್ನು ಬಿಡು ಎಂದು ಬೇಡಿಕೊಳ್ಳುತ್ತಿದ್ದರೂ ಯುವಕ ಚಾಕು ಕೈಯಲ್ಲಿ ಹಿಡಿದು ಕೊಲ್ಲುವ ಬೆದರಿಕೆ ಹಾಕಿದ್ದಾನೆ.

    ಇದೇ ವೇಳೆ ಅಲ್ಲೇ ಇದ್ದ ಸ್ಥಳೀಯರೂ ಕೂಡ ಯುವಕನನ್ನು ತಡೆಯಲು ಸಾಕಷ್ಟು ಯತ್ನಿಸಿದ್ದಾರೆ. ಹಿಂದಿನಿಂದ ಬಂದ ಸ್ಥಳೀಯರೊಬ್ಬರೂ ಕೊನೆಗೂ ಆ ಯುವಕನ ಕೈಯಿಂದ ಚಾಕು ಕಸಿದು ಬಾಲಕಿಯನ್ನು ರಕ್ಷಿಸಿದ್ದಾರೆ. ಸ್ಥಳೀಯರ ಚಾಕಚಕ್ಯತೆಯಿಂದ ಬಾಲಕಿ ಪ್ರಾಣ ಉಳಿದಿದೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಹುಡುಗಿಯನ್ನು ರಕ್ಷಿಸಿದ ನಂತರ ಕೋಪಗೊಂಡ ಜನರ ಗುಂಪು ಪಾಗಲ್‌ ಪ್ರೇಮಿ ಮೇಲೆ ಹಲ್ಲೆ ನಡೆಸಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜನರಿಂದ ಯುವಕನನ್ನು ರಕ್ಷಿಸಿದರು. ನಂತರ ಆತನನ್ನು ಶಾಹುಪುರಿ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

  • ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

    ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

    – ಪತಿ ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ – ಮುಂದಾಗಿದ್ದೇನು?

    ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯನ್ನು ಗರ್ಭಿಣಿ ಮಾಡಿ, ಪತಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ(Bengaluru) ಕಾಮಾಕ್ಷಿಪಾಳ್ಯದಲ್ಲಿ(Kamakshipalya) ನಡೆದಿದೆ.

    ಕುಣಿಗಲ್(Kunigal) ಮೂಲದ ಯುವತಿಯು ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೇಮಂತ್ ಕುಮಾರ್ ಪರಿಚಿತಯವಾಗಿತ್ತು. ಹೇಮಂತ್, ಯುವತಿಯ ಬೆನ್ನು ಬಿದ್ದು ಪ್ರೀತಿಸುವಂತೆ ಒತ್ತಾಯ ಮಾಡಿದ್ದ. ನಂತರ ಕಳೆದ ಮಾರ್ಚ್‌ನಲ್ಲಿ ಇಬ್ಬರು ವಿವಾಹವಾಗಿದ್ದರು. ಆದರೆ ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯ ನಡತೆ ಸರಿಯಲ್ಲ ಎಂದು ದೂಷಿಸಿ, ಮನೆಬಿಟ್ಟು ಹೋಗಿದ್ದ. ಇದನ್ನೂ ಓದಿ: ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಇದೀಗ 3 ತಿಂಗಳ ಗರ್ಭಿಣಿಯಾಗಿರೋ ಪತ್ನಿ, ಪತಿಗಾಗಿ ಹುಡುಕಾಟ ನಡೆಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಲಾಗಿದೆ. ಪೊಲೀಸರು ಪತಿ, ಪತ್ನಿ ಇಬ್ಬರನ್ನೂ ಕರೆಸಿ ತಿಳಿ ಹೇಳಿ ಕಳುಹಿಸಿದ್ದಾರೆ.

  • ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ

    ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ

    – ಪೊಲೀಸ್ ಠಾಣೆ ಮೆಟ್ಟಿಲೇರಿದ ನೊಂದ ವರನ ಕುಟುಂಬಸ್ಥರು

    ಹಾಸನ: ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ಮದುವೆ ನೆರವೇರಿದೆ.

    ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹವಾಗಿದ್ದಾರೆ. ಆದರೆ ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಇತ್ತ ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

    ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು. ಇಂದು ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು. ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು. ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

    ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ. ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು. ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

  • 2 ವರ್ಷದ ಡೇಟಿಂಗ್‌ ಬಳಿಕ ತಮನ್ನಾ, ವಿಜಯ್‌ ವರ್ಮಾ ಬ್ರೇಕಪ್‌!

    2 ವರ್ಷದ ಡೇಟಿಂಗ್‌ ಬಳಿಕ ತಮನ್ನಾ, ವಿಜಯ್‌ ವರ್ಮಾ ಬ್ರೇಕಪ್‌!

    ಡೇಟಿಂಗ್‌ ಮಾಡುತ್ತಿದ್ದ ನಟಿ ತಮನ್ನಾ ಭಾಟಿಯಾ (Tamannaah Bhatia) ಮತ್ತು ನಟ ವಿಜಯ್ ವರ್ಮಾ (Vijay Varma) ಸಂಬಂಧದಲ್ಲಿ ಈಗ ಬಿರುಕು ಮೂಡಿದೆ. ಇಬ್ಬರು ಈಗ ಬ್ರೇಕಪ್‌ (Love Breakup) ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಪ್ರೀತಿಯಲ್ಲಿರುವ ಇವರು ಶೀಘ್ರವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಬರುತ್ತಿತ್ತು. ಆದರೆ ಈಗ ಇಬ್ಬರು ಸಂಬಂಧವನ್ನು ಕಡಿತಗೊಳಿಸಿದ್ದಾರೆ.

    ಕೆಲ ವಾರದ ಹಿಂದೆ ಇಬ್ಬರು ಬೇರ್ಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಡಿದೆ. ಇಬ್ಬರ ಸಂಬಧವನ್ನು ಕೊನೆಗೊಳಿಸಿದ್ದರೂ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಪರಸ್ಪರ ಗೌರವ ಹೊಂದಿದ್ದಾರೆ. ಇಬ್ಬರೂ ಸ್ನೇಹಿತರಾಗಿ ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

     

    ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರ ಸಂಬಂಧವು 2023 ರಲ್ಲಿ ಜೊತೆಯಾಗಿ ನಟಿಸಿದ ಲಸ್ಟ್ ಸ್ಟೋರೀಸ್ 2 ಬಿಡುಗಡೆಯಾದಾಗ ಸಾರ್ವಜನಿಕವಾಗಿ ಬಹಿರಂಗವಾಗಿತ್ತು. ಇದನ್ನೂ ಓದಿ: ‘ಪುಷ್ಪ’ ಸಿನಿಮಾ ಪಾರ್ಟ್ 10ರವರೆಗೆ ಬರಲಿದ್ಯಾ?: ಸುಳಿವು ಕೊಟ್ಟ ಮ್ಯೂಸಿಕ್ ಡೈರೆಕ್ಟರ್

    ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್‌ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ ಹಾಕಿದ್ದರು ತಮನ್ನಾ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು.

    ನಂತರದ ದಿನಗಳಲ್ಲಿ ಡೇಟಿಂಗ್ ಕುರಿತು ತಮನ್ನಾ ಭಿನ್ನ ಪ್ರತಿಕ್ರಿಯೆ ನೀಡಿದ್ದರು. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದರು.

    ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ವಿಜಯ್‌ ವರ್ಮಾ ಅವರ ಭೇಟಿಯಾಯಿತು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದರು. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

  • ಡ್ಯಾಂಡ್ರಫ್ ಜಾಹೀರಾತಿನಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರುಷ್ಕಾ! – ಇಬ್ಬರ ಲವ್‌ ಸ್ಟೋರಿಯನ್ನು ನೀವು ಓದಲೇಬೇಕು

    ಡ್ಯಾಂಡ್ರಫ್ ಜಾಹೀರಾತಿನಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರುಷ್ಕಾ! – ಇಬ್ಬರ ಲವ್‌ ಸ್ಟೋರಿಯನ್ನು ನೀವು ಓದಲೇಬೇಕು

    ಇಂದು ಪ್ರೇಮಿಗಳ ದಿನಾಚರಣೆ. ಈ ದಿನಾಚರಣೆಯಂದು (Valentine’s Day) ಹಲವರು ಪ್ರೇಮ ಕಥೆಗಳನ್ನು ನೀವು ಓದಿರಬಹುದು. ಈ ಪಟ್ಟಿಗೆ ನೀವು ಓದಲೇಬೇಕಾದ ಮತ್ತು ನೆನಪಿನಲ್ಲಿ ಇಟ್ಟುಕೊಳ್ಳಲೇಬೇಕಾದ ಪ್ರೇಮ ಕಥೆ ಯಾವುದು ಎಂದರೆ ವಿರಾಟ್‌ ಕೊಹ್ಲಿ (Virat kohli) ಮತ್ತು ಅನುಷ್ಕಾ (Anushka Sharma) ಲವ್‌ ಸ್ಟೋರಿ. ಸೆಲೆಬ್ರಿಟಿಗಳು ಲವ್‌ (Love) ಮಾಡಿ ನಂತರ ಬ್ರೇಕಪ್‌ ಆಗುವುದು ಇಂದು ಹೊಸದೆನಲ್ಲ. ಆದರೆ ವಿರಷ್ಕಾ ಜೋಡಿ ಪ್ರೀತಿ ಮಾಡಿ ಮದುವೆಯಾಗುವುದರ ಜೊತೆ ಈಗಲೂ ಅನ್ಯೋನ್ಯವಾಗಿದ್ದಾರೆ. ಈ ಮೂಲಕ ನಿಜವಾದ ಪ್ರೇಮಿಗಳಿಗೆ ಆದರ್ಶವಾಗಿದ್ದಾರೆ.

    ವಿರಾಟ್‌ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರು ಸೆಲೆಬ್ರಿಟಿಗಳು. ಈ ಇಬ್ಬರು ಸ್ಟಾರ್‌ಗಳು ಮೊದಲು ಭೇಟಿಯಾಗಿದ್ದು ಡ್ಯಾಂಡ್ರಫ್ ಜಾಹೀರಾತಿನಲ್ಲಿ. 2013ರಲ್ಲಿ ಟಿವಿ ಜಾಹೀರಾತಿನಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಆರ್‌ಸಿಬಿ ತಂಡದ ನಾಯಕನಾಗಿದ್ದರೆ ಅನುಷ್ಕಾ ಬಾಲಿವುಡ್‌ ಬೇಡಿಕೆಯ ನಟಿಯಾಗಿದ್ದರು.

    ಜಾಹೀರಾತಿನಲ್ಲಿ ಇಬ್ಬರ ನಟನೆಯ ಕೆಮಿಸ್ಟ್ರಿ ವರ್ಕ್‌ ಆಯಿತು. ಪರಸ್ಪರ ಫೋನ್‌ ನಂಬರ್‌ ಬದಲಾವಣೆ ಆಯಿತು. ಆರಂಭದಲ್ಲಿ ಇಬ್ಬರು ಕದ್ದು ಮುಚ್ಚಿ ಡೇಟ್‌ ಮಾಡಲು ಆರಂಭಿಸಿದರು. ಈ ವೇಳೆ ವಿರಾಟ್‌ ಕೊಹ್ಲಿ ಟೀಂ ಇಂಡಿಯಾದ (Team India) ಸ್ಟಾರ್‌ ಬ್ಯಾಟ್ಸ್‌ಮನ್‌ ಆಗಿ ಹೊರಹೊಮ್ಮಿದ್ದರು. ಪರಿಣಾಮ ಕದ್ದು ಮುಚ್ಚಿ ಸಾರ್ವಜನಿಕ ಸ್ಥಳಗಳಲ್ಲಿ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಹೋದರೂ ಜನರು ಗುರುತು ಹಿಡಿಯುತ್ತಿದ್ದರು ಜೊತೆಗೆ ಮಾಧ್ಯಮಗಳ ಕ್ಯಾಮೆರಾದ ಕಣ್ಣು ಇವರನ್ನು ಸೆರೆ ಹಿಡಿಯುತ್ತಿದ್ದವು. ಇಬ್ಬರ ಬಗ್ಗೆ ಅಂತೆ ಕಂತೆ ಸುದ್ದಿಗಳು ಪ್ರಕಟವಾಗುತ್ತಿದ್ದಂತೆ ಕೊಹ್ಲಿ ಮತ್ತು ಅನುಷ್ಕಾ ಸಾರ್ವಜನಿಕವಾಗಿಯೇ ಜೊತೆಯಾಗಿ ಕಾಣಿಸಿಕೊಳ್ಳಲು ಆರಂಭಿಸಿದರು. ಇದನ್ನೂ ಓದಿ: ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ – ಪ್ರೀತಿಯ ಅಪ್ಪುಗೆ ನೀಡಿ ಸಾಂತ್ವನ ಹೇಳಿದ ಅನುಷ್ಕಾ

    2014ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಮುಂಬೈಗೆ ಲ್ಯಾಂಡ್‌ ಆದ ಕೊಹ್ಲಿ ತಮ್ಮ ನಿವಾಸಕ್ಕೆ ಹೋಗಿರಲಿಲ್ಲ. ಮೊದಲು ಹೋಗಿದ್ದು ಪ್ರಿಯತಮೆ ಅನುಷ್ಕಾ ಮನೆಗೆ. ಆ ವರ್ಷವೇ ನ್ಯೂಜಿಲೆಂಡ್ ಪ್ರವಾಸದ ಬಳಿಕ ವಿರಾಟ್ ಮನೆಗೂ ಅನುಷ್ಕಾ ಭೇಟಿ ನೀಡಿ ಸರ್‌ಪ್ರೈಸ್‌ ನೀಡಿದ್ದರು. ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರೂ ಹೆಚ್ಚು ಸುದ್ದಿಯಾಗಿದ್ದು 2014-15 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ. ಧೋನಿ ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ನಿರ್ಧಾರ ತೆಗೆದುಕೊಂಡಾಗ ಕೊಹ್ಲಿಗೆ ನಾಯಕತ್ವ ಪಟ್ಟ ಸಿಕ್ಕಿತು. ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ಗ್ಯಾಲರಿಯಲ್ಲಿ ಕುಳಿತು ವಿರಾಟ್ ಹುರಿದುಂಬಿಸುತ್ತಿದ್ದರು. ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ ವೇಳೆ ಶತಕ ಬಾರಿಸಿದ ಬಳಿಕ ವಿರಾಟ್ ಬ್ಯಾಟ್ ಮೂಲಕ ಅನುಷ್ಕಾಗೆ ಫ್ಲೈಯಿಂಗ್ ಕಿಸ್ ಸಹ ನೀಡಿದ್ದರು. ಇದನ್ನೂ ಓದಿ: Valentines Day; ಮೊದಲ ಪ್ರೇಮ ಪತ್ರ ಬರೆದವರು ಯಾರು ಗೊತ್ತಾ?

    ಇಬ್ಬರು ಪ್ರೇಮಿಗಳ ಬಗ್ಗೆ ಅಂದಿನ ಟೀಂ ಇಂಡಿಯಾದ ಕೋಚ್‌ ಆಗಿದ್ದ ರವಿಶಾಸ್ತ್ರಿ ಮಾಧ್ಯಮದ ಬಳಿಯೂ ಹಂಚಿಕೊಂಡಿದ್ದರು. ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಾಯಕರಾಗಿದ್ದರು. ಈ ವೇಳೆ ಅವರು ನನ್ನ ಬಳಿ ಬಂದು ಪ್ರವಾಸದ ಸಂದರ್ಭದಲ್ಲಿ ಪತ್ನಿಯರನ್ನು ಮಾತ್ರ ಕರೆದುಕೊಂಡು ಬರಲು ಬಿಸಿಸಿಐ ನುಮತಿ ನೀಡುತ್ತದೆ. ಆದರೆ ನಾನು ನನ್ನ ಗೆಳತಿಯನ್ನು ಕರೆದುಕೊಂಡು ಬರಬಹುದೇ ಎಂದು ಕೇಳಿದ್ದರು. ಕೊಹ್ಲಿಯಿಂದ ಈ ಪ್ರಸ್ತಾಪ ಬರುತ್ತಿದ್ದಂತೆ ನಾನು ಬಿಸಿಸಿಐ ಜೊತೆ ಕರೆ ಮಾಡಿ ಅನುಷ್ಕಾಗೆ ಬರಲು ಅನುಮತಿ ನೀಡಿದ್ದೆ ಎಂದು ತಿಳಿಸಿದ್ದರು.

    ಇದಾದ ಬಳಿಕ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂಡಿಯನ್ ಹೈ ಕಮಿಷನ್‌ಗೆ ಭೇಟಿ ನೀಡಿದಾಗಲೂ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ನಂತರ ಶ್ರೀಲಂಕಾ ವಿರುದ್ಧ ನಡೆದ ಸರಣಿಯಲ್ಲೂ ಫ್ಲೈಯಿಂಗ್ ಕಿಸ್ ನೀಡಿ ಅನುಷ್ಕಾಗೆ ಸರ್‌ಪ್ರೈಸ್‌ ನೀಡಿದ್ದರು. ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಎಫ್‌ಸಿ ಗೋವಾ ತಂಡದ ಮಾಲೀಕರಾಗಿದ್ದ ಕೊಹ್ಲಿ ಅವರು ಅನುಷ್ಕಾ ಜೊತೆಗೂಡಿ ತಂಡವನ್ನು ಹುರಿದುಂಬಿಸುತ್ತಿದ್ದರು. ಆರ್‌ಸಿಬಿ ಪಂದ್ಯಗಳಲ್ಲಿ ಭಾಗವಹಿಸಿ ಕೊಹ್ಲಿಗೆ ಅನುಷ್ಕಾ ಚಿಯರ್‌ ಮಾಡುತ್ತಿದ್ದರು. ಆದರಲ್ಲೂ ಕೊಹ್ಲಿ ಬೇಗನೇ ಔಟಾದರೆ ಅನುಷ್ಕಾ ಬಹಳ ಬೇಜಾರ್‌ ಆಗುತ್ತಿದ್ದರು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ಕ್ಷಣಗಳಲ್ಲಿ ವೈರಲ್‌ ಆಗುತ್ತಿತ್ತು.

    ಯುವರಾಜ್ ಸಿಂಗ್ ಹಾಗೂ ಮಾಜಿ ವೇಗಿ ಜಹೀರ್ ಖಾನ್ ವಿವಾಹ ಸಮಾರಂಭದಲ್ಲೂ ಇಬ್ಬರು ಜೊತೆಯಾಗಿ ಡ್ಯಾನ್ಸ್‌ ಮಾಡಿ ರಂಜಿಸಿದ್ದರು. 2015 ಮತ್ತು 2016 ರಲ್ಲಿ ಕೊಹ್ಲಿ ಆಟ ಮಂಕಾಗಿತ್ತು. ಕೊಹ್ಲಿ ಕಳಪೆ ಆಟಕ್ಕೆ ಅನುಷ್ಕಾನೇ ಕಾರಣ ಎಂದು ಕ್ರಿಕೆಟ್‌ ಅಭಿಮಾನಿಗಳು ಟೀಕಿಸಲು ಆರಂಭಿಸಿದ್ದರು. ಪದೇ ಗ್ಯಾಲರಿಯಲ್ಲಿ ಅನುಷ್ಕಾ ಕಾಣಿಸಿಕೊಳ್ಳುತ್ತಿರುವುದರಿಂದ ವಿರಾಟ್ ಕೆಟ್ಟ ಪ್ರದರ್ಶನ ನೀಡುತ್ತಿದ್ದಾರೆ ಎಂಬ ಮಾತುಗಳು ಬರತೊಡಗಿತು. ಜೊತೆ ಅನುಷ್ಕಾ ಶರ್ಮಾ ಅವರ ಪೇಜ್‌ನಲ್ಲೂ ಕೆಟ್ಟ ಕೆಟ್ಟ ಕಮೆಂಟ್‌ಗಳು ಬರತೊಡಗಿತು. ಸಾಮಾಜಿಕ ಜಾಲತಾಣದಲ್ಲಿ ಅನುಷ್ಕಾ ವಿರುದ್ಧ ಟ್ರೋಲ್‌ಗಳು ಹೆಚ್ಚಾಯಿತು.

    ಟೀಕೆಗಳು ಜಾಸ್ತಿ ಆಗುತ್ತಿದ್ದಂತೆ ಅನುಷ್ಕಾ ಪರ ಮಾತನಾಡಿದ ಕೊಹ್ಲಿ, ಟ್ರೋಲ್ ಮಾಡುವ ಜನರಿಗೆ ನಾಚಿಕೆಯಾಗಬೇಕು. ಆಕೆ ಯಾವತ್ತೂ ತನಗೆ ಧನಾತ್ಮಕ ಚಿಂತನೆಯನ್ನು ನೀಡಿದ್ದಾಳೆ ಎಂದು ಬರೆದು ‘SHAME’ ಎಂದು ಬರೆದಿರುವ ಪೋಸ್ಟರ್‌ ಅನ್ನು ಪೋಸ್ಟ್‌ ಮಾಡಿ ಟ್ರೋಲಿಗರಿಗೆ ತಿರುಗೇಟು ನೀಡಿದ್ದರು. 2016 ರಲ್ಲಿ ಮಾಡಿದ ಈ ಟ್ವೀಟ್‌ ಅನ್ನು 98 ಸಾವಿರ ಮಂದಿ ಲೈಕ್‌ ಮಾಡಿದ್ದರೆ 35 ಸಾವಿರ ಜನ ರಿಟ್ವೀಟ್‌ ಮಾಡಿ ಕೊಹ್ಲಿಗೆ ಬೆಂಬಲ ನೀಡಿದ್ದರು.

    ಲವ್‌ ಸ್ಟೋರಿ ಚರ್ಚೆಯಾಗುತ್ತಿದ್ದಂತೆ ಇಬ್ಬರು ಪರಸ್ಪರ ಇನ್‌ಸ್ಟಾದಿಂದ ಅನ್‌ಫಾಲೋ ಮಾಡಿದ್ದರು. ಅಷ್ಟೇ ಅಲ್ಲದೇ ಇಬ್ಬರೂ ಸಾರ್ವಜನಿಕವಾಗಿ ಕಾಣಿಸುವುದನ್ನು ನಿಲ್ಲಿಸಿದ್ದರು. ಈ ವಿಚಾರ ಸುದ್ದಿಯಾಗುತ್ತಿದ್ದಂತೆ ಇಬ್ಬರ ಮಧ್ಯೆ ಬ್ರೇಕಪ್‌ ಆಗಿದೆ ಎಂಬ ವದಂತಿಯೂ ಬರತೊಡಗಿತು. ಮತ್ತೆ ನಮ್ಮ ವಿರುದ್ಧ ನೆಗೆಟಿವ್‌ ಅಭಿಪ್ರಾಯ ಬರಬಾರದು ಎಂದು ಇವರಿಬ್ಬರೂ ಉದ್ದೇಶಪೂರ್ವಕವಾಗಿ ಈ ನಿರ್ಧಾರ ಕೈಗೊಂಡಿದ್ದರು ಎಂಬ ಮಾತು ನಂತರ ಬಂದಿತ್ತು. ಕೆಲ ದಿನಗಳಲ್ಲಿ ಇಬ್ಬರು ಪರಸ್ಪರ ಫಾಲೋ ಮಾಡಿಕೊಂಡರು ಮತ್ತು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಬ್ರೇಕಪ್‌ ವದಂತಿಗೆ ಬ್ರೇಕ್‌ ಹಾಕಿದರು.

    ಅಂತಿಮವಾಗಿ ಡಿಸೆಂಬರ್ 2017 ರಲ್ಲಿ ವಿರುಷ್ಕಾ (ವಿರಾಟ್‌+ ಅನುಷ್ಕಾ) ಜೋಡಿ ಇಟಲಿಯ ಟಸ್ಕನಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಆಪ್ತ ಸ್ನೇಹಿತರು ಮತ್ತು ಕುಟುಂಬದವರಿಗೆ ಮಾತ್ರ ಈ ಮದುವೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಜನವರಿ 2021 ರಲ್ಲಿ ಮಗಳು ವಾಮಿಕಾ ಜನಿಸಿದರೆ, ಫೆಬ್ರವರಿ 2024 ರಲ್ಲಿ ಅಕಾಯ್ ಜನಿಸಿದ್ದ.

    ಹಲವು ಸಂದರ್ಶನಗಳಲ್ಲಿ ವಿರಾಟ್‌ ಕೊಹ್ಲಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಅನುಷ್ಕಾ ಬಂದಾಗಿನಿಂದ ನನ್ನಲ್ಲಿರುವ ಸಾಕಷ್ಟು ನೆಗೆಟಿವ್‌ ಯೋಚನೆಗಳು ದೂರ ಆಗಿದೆ. ನನಗೆ ಅನುಷ್ಕಾ ತುಂಬಾ ಕಫರ್ಟ್‌ ಜೋನ್‌ ಆಗಿದ್ದಾಳೆ ಎಂದು ಪತ್ನಿಯ ಮೇಲಿನ ಪ್ರೀತಿಯನ್ನು ವಿರಾಟ್‌ ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

     

     

  • ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಬೆಂಗಳೂರು: ಕೋರಮಂಗಲದ (Koramangala) ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿಷೇಕ್ ವಿರುದ್ಧ ಕೋರಮಂಗಲ ಪೊಲೀಸರು (Koramangala Police) ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

    ಘಟನೆ ನಡೆದ 38 ದಿನಗಳ ಒಳಗಾಗಿ 39ನೇ ಎಸಿಎಂಎಂ ನ್ಯಾಯಾಲಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. 1,205 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಬಿಎನ್‌ಎಸ್ ಅಡಿಯಲ್ಲಿ ದಾಖಲಾದ ಕೊಲೆ ಪ್ರಕರಣದ ಮೊದಲ ಚಾರ್ಜ್‌ಶೀಟ್ ಇದಾಗಿದೆ. ಜುಲೈ 23ರ ರಾತ್ರಿ 11 ಗಂಟೆಗೆ ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಕೃತಿಕಾ ಎಂಬ ಯುವತಿಯನ್ನು ಅಭಿಷೇಕ್ ಕೊಲೆ ಮಾಡಿದ್ದ. 85 ಸಾಕ್ಷಿಗಳ ಹೇಳಿಕೆಯನ್ನು ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: Paris Paralympics 2024 | ಭಾರತಕ್ಕೆ ಮತ್ತೊಂದು ಪದಕ – ಕಂಚಿಗೆ ರುಬಿನಾ ಶೂಟ್‌

    ಸೈಕೋ ಅಭಿಷೇಕ್, ಮೃತ ಕೃತಿಕಾ ಸ್ನೇಹಿತೆಯನ್ನು ಲವ್ ಮಾಡುತ್ತಿದ್ದ. ಕೃತಿ ಗೆಳತಿಯನ್ನು ಪಾಗಲ್ ಪ್ರೇಮಿ ರೂಂನಲ್ಲಿ ಕೂಡಿ ಹಾಕಿದ್ದ. ರೂಂಮೇಟ್ ಪಿಜಿಗೆ ಬರಲಿಲ್ಲ ಎಂದು ತಲೆಬಿಸಿ ಮಾಡಿಕೊಂಡಿದ್ದ ಕೃತಿ ವಿಷಯ ಗೊತ್ತಾಗಿ ಗೆಳತಿಯನ್ನು ಬಂಧನದಿಂದ ಬಿಡಿಸಿದ್ದಳು. ಕೃತಿಕಾಳಿಂದ ನನ್ನ ಪ್ರೇಯಸಿ ದೂರವಾಗುತ್ತಿದ್ದಾಳೆಂದು ಪಿಜಿ ಬಳಿ ಕಾದು ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕೋರಮಂಗಲ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಮೂರು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಮಧುರೈ-ಬೆಂಗಳೂರು ರೈಲಿಗೂ ಹಸಿರು ಪತಾಕೆ ತೋರಿದ ಪ್ರಧಾನಿ