Tag: ಲವ್ ಕೇಸರಿ

  • ‘ಲವ್ ಕೇಸರಿ’ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    ‘ಲವ್ ಕೇಸರಿ’ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪಿಗಳಾದ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಏಪ್ರಿಲ್ 10 ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ ನೀಡಿತ್ತು. ಹಿಂದೂಗಳ ಮೇಲೆ ದಾಳಿ ಮಾಡಿದವರನ್ನು ಕೊಚ್ಚಿ ಹಾಕಿ ನಾವಿದ್ದೀವಿ ಎಂದು ಪ್ರಚೋದನಕಾರಿಯಾಗಿ ರಾಜಾಚಂದ್ರ ರಾಮನಗೌಡ ಭಾಷಣ ಮಾಡಿದ್ದ. ವೇದಿಕೆ ಮೇಲೆ ಖಡ್ಗ ಹಿಡಿದು ಯುವಕರನ್ನು ಪ್ರಚೋದನೆ ಮಾಡಿದ್ದ ಆರೋಪದಲ್ಲಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    ಮಣಿಕಾಂತ್ ಎಂಬುವವರು ಮತೀಯ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿ, ಅನ್ಯ ಧರ್ಮೀಯರಲ್ಲಿ ಭಯಹುಟ್ಟಿಸುವಂತ ಕಾರ್ಯಕ್ರಮ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಾದಲ್ಲಿ ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವೈದ್ಯಕೀಯ ತಪಾಸಣೆ ಹಾಗೂ ವಿಚಾರಣೆ ನಂತರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

  • ಲವ್ ಕೇಸರಿ ಶಬ್ದ ಚೆನ್ನಾಗಿದೆ: ಪ್ರಮೋದ್ ಮುತಾಲಿಕ್

    ಲವ್ ಕೇಸರಿ ಶಬ್ದ ಚೆನ್ನಾಗಿದೆ: ಪ್ರಮೋದ್ ಮುತಾಲಿಕ್

    ಧಾರವಾಡ: ಲವ್ ಕೇಸರಿ ನಮ್ಮ ರಾಜ್ಯದ ಅಭಿಯಾನವಲ್ಲ. ಆದರೆ ಲವ್ ಕೇಸರಿ ಶಬ್ದ ಚೆನ್ನಾಗಿದೆ ಎಂದು ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದರು.

    ತಲ್ವಾರ್‌ನಿಂದ ಕೊಚ್ಚಿ ಹಾಕುತ್ತೇವೆ ಎಂಬ ರಾಯಚೂರು ಸಂಘಟನೆಯ ಹೇಳಿಕೆ ತಪ್ಪು. ಅದನ್ನು ನಾವು ಒಪ್ಪುವುದಿಲ್ಲ. ಆ ಹೇಳಿಕೆ ಸರಿಯಲ್ಲ ಎಂದ ಮುತಾಲಿಕ್, ಆದರೆ ಲವ್ ಕೇಸರಿ ಸರಿಯಾಗಿದೆ ಎಂದರು. ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆ

    ಕಳೆದ 15 ವರ್ಷಗಳಿಂದ ಲವ್ ಜಿಹಾದ್ ವಿರುದ್ಧ ಹೋರಾಡುತ್ತಿದ್ದೇವೆ. ನೂರಕ್ಕೆ ನೂರರಷ್ಟು ಲವ್ ಜಿಹಾದ್ ಇದೆ. ಕೇರಳದಲ್ಲೇ 4,000 ಜನ ಲವ್ ಜಿಹಾದ್‌ಗೆ ಬಲಿಯಾಗಿದ್ದಾರೆ. ಎರಡುವರೆ ಸಾವಿರ ಕ್ರಿಶ್ಚಿಯನ್ ಹುಡುಗಿಯರು ಲವ್ ಜಿಹಾದ್ ನಲ್ಲಿದ್ದಾರೆ. ಅದು ಈಗ ಸುಪ್ರಿಂಕೋರ್ಟ್ನಲ್ಲಿದೆ ಎಂದರು.

    ಲವ್ ಜಿಹಾದ್ ವಿಚಾರವಾಗಿ ಮೂರು ರಾಜ್ಯಗಳಲ್ಲಿ ಕಾನೂನು ರಚನೆಯಾಗಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣದಲ್ಲಿ ಕಾನೂನು ಆಗಿದೆ. ಕರ್ನಾಟದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ಆಗಬೇಕು ಎಂದರು.

    ರಸ್ತೆ ಹೆಸರು ಬದಲಾಗಬೇಕು:
    ಈ ವೇಳೆ ರಸ್ತೆ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಬೆಂಗಳೂರು ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ಬ್ರಿಟಿಷರ ಹೆಸರುಗಳಿವೆ. ಅವೆಲ್ಲವನ್ನೂ ಬದಲಾಯಿಸಬೇಕು ಎಂದರು. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಬೊಮ್ಮಾಯಿ

    ವಿಕ್ಟೋರಿಯಾ ರಾಣಿ ಹೆಸರಿವೆ, ಕಬ್ಬನ್ ಪಾರ್ಕ್ ಇದೆ. ಆ ಬ್ರಿಟಿಷರು ಹೋದರೂ ಕಬ್ಬನ್, ವಿಕ್ಟೋರಿಯಾ ಇಲ್ಲೇ ಇದ್ದಾರೆ. ಅವರ ಹೆಸರುಗಳು ಯಾಕೆ? ಕನ್ನಡ ಹೋರಾಟಗಾರರು, ಸಾಹಿತಿ, ಕವಿಗಳ ಹೆಸರಿಡಲಿ ಎಂದರು. ಅವರು ಇಲ್ಲಿಂದ ಹೋಗಿ 75 ವರ್ಷ ಆಗಿ ಹೋಯ್ತಲ್ಲ? ಸ್ವಾಭಿಮಾನ ಇಲ್ಲವಾ? ಘಜ್ನಿ, ಘೋರಿ, ಟಿಪ್ಪು ಸುಲ್ತಾನ್‌ವರೆಗೆ ಹೆಸರು ಬದಲಾಗಬೇಕು. ಕನ್ನಡ ಸಾಹಿತಿ, ಹೋರಾಟಗಾರರ ಹೆಸರಿಡಬೇಕು. ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಮುತಾಲಿಕ್ ಹೇಳಿದರು.