Tag: ಲವ್ ಮ್ಯಾರೆಜ್

  • ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    – ವಿಚ್ಛೇದನ ಕೊಟ್ಟು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ ಮಹಿಳೆ

    ಹೈದರಾಬಾದ್‌: ಬಲವಂತದ ಮತಾಂತರ (Forced Conversion), ಮೋಸದ ಮದ್ವೆ, ದ್ರೋಹ ಬಗೆದಿರುವ ಆರೋಪದ ಮೇಲೆ 1998ರಲ್ಲಿ ಭಾರತಕ್ಕೆ ವಲಸೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನ ಹೈದರಾಬಾದ್‌ನ (Hyderabad) ಲಂಗರ್‌ಹೌಸ್ ಪೊಲೀಸರು ಬಂಧಿಸಿದ್ದಾರೆ.

    ಹೈದರಾಬಾದ್‌ನ ಬಂಜಾರ ಹಿಲ್ಸ್‌ನ ಮೌಂಟ್ ಬಂಜಾರ ಕಾಲೋನಿಲ್ಲಿ (Mount Banjara Colony) ನೆಲೆಸಿದ್ದ ಪಾಕ್‌ ವ್ಯಕ್ತಿ 2016ರಲ್ಲಿ ಕೀರ್ತಿ ಎಂಬಾಕೆಯನ್ನ ಬಲವಂತದಿಂದ ಮತಾಂತರಗೊಳಿಸಿ ಮದ್ವೆಯಾಗಿದ್ದಾನೆಂದು ಖುದ್ದು ಪತ್ನಿಯೇ ದೂರು ನೀಡಿದ್ದಾಳೆ. ಇದನ್ನೂ ಓದಿ: 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    ಯೆಸ್‌… ಸಂತ್ರಸ್ತೆ ಹೇಳುವಂತೆ ಫಹಾದ್‌ 1998ರಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ. 2016ರಲ್ಲಿ ತನ್ನನ್ನ ಮದ್ವೆಯಾಗಲು ತನ್ನನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಮೊದಲ ವಿಚ್ಛೇದನದ ಬಳಿಕ ನಾನು ದೌರ್ಬಲ್ಯ ಸ್ಥಿತಿಯಲ್ಲಿದ್ದೆ, ಇದರ ಲಾಭ ಪಡೆದು ನನ್ನನ್ನ ಮತಾಂತರಕ್ಕೆ ಒತ್ತಾಯಿಸಿದ್ದ. ಅದರಂತೆ ನನ್ನ ಹೆಸರನ್ನ ದೋಹಾ ಫಾತಿಮಾ ಅಂತ ಬದಲಾಯಿಸಿಕೊಂಡಿದ್ದೆ. ಮದ್ವೆ ಆಗೋವರ್ಗೂ ಅವನು ಪಾಕಿಸ್ತಾನದವನು ಅಂತ ಗೊತ್ತಿರಲಿಲ್ಲ. ಆದ್ರೆ ಪ್ರತಿವರ್ಷ ನಿಯಮಿತವಾಗಿ ಪಾಸ್‌ಪೋರ್ಟ್ ರಿನಿವಲ್‌ಗಾಗಿ ಆಯುಕ್ತರ ಕಚೇರಿಗೆ ಭೇಟಿ ಕೊಡ್ತಿದ್ದ. ಇದನ್ನ ಪರಿಶೀಲನೆ ಮಾಡಿದಾಗ ಅವನು ಪಾಕ್‌ನಿಂದ ವಲಸೆ ಬಂದಿರೋದು ಗೊತ್ತಾಯ್ತು. ಅಲ್ದೇ ಫಹಾದ್‌ ತನ್ನ ಕಂಪನಿಯಲ್ಲೇ ಬೇರೊಬ್ಬಳೊಂದಿಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದ. ಇದು ತಿಳಿದ ಬಳಿಕವೇ ನಾನು ಮೋಸ ಹೋಗಿದ್ದೇನೆ ಅನ್ನೋದು ಗೊತ್ತಾಯ್ತು ಅಂತ ಕೀರ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇನ್ನೂ ಫಹಾದ್‌ ಪಾಕಿಸ್ತಾನದ ವ್ಯಕ್ತಿ ಅಂತ ಗೊತ್ತಾದ್ಮೇಲೆ ನಾನು ವಿಚ್ಛೇದನ ಪಡೆದು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳ್ಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    ಒಟ್ನಲ್ಲಿ ಮಹಿಳೆ ನೀಡಿದ ದೂರಿನ ಅನ್ವಯ ಕೇಸ್‌ ದಾಖಲಿಸಿಕೊಂಡಿರುವ ಲಂಗರ್‌ ಹೌಸ್‌ನ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ – ಗಣ್ಯರಿಂದ ಗೌರವ ಸಮರ್ಪಣೆ 

  • ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

    ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

    ಗಾಂಧಿನಗರ: ಪ್ರೇಮಿಗಳ ದಿನದಂದು ಸುಮಾರು 10 ಸಾವಿರ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪಡೆಯದೇ ಪ್ರೇಮ ವಿವಾಹವಾಗುವುದಿಲ್ಲ ಎಂದು ಪ್ರಮಾಣ ಮಾಡಲಿದ್ದಾರೆ.

    ಯುವಕ, ಯುವತಿಯರು ತಮ್ಮ ಪ್ರೀತಿ, ಪ್ರೇಮವನ್ನು ಕಳೆದುಕೊಂಡರೂ ಪರವಾಗಿಲ್ಲ, ಆದರೇ ಪೋಷಕರ ಒಪ್ಪಿಗೆಯಿಲ್ಲದೆ ಪ್ರೇಮ ವಿವಾಹವಾಗುವುದಿಲ್ಲವೆಂದು ನಿರ್ಧಾರ ಮಾಡಿದ್ದಾರೆ. ಲಾಫ್ಟರ್ ಥೆರಪಿಸ್ಟ್ ಕಮಲೇಶ್ ಮಸಾಲಾವಾಲಾ ನಡೆಸುತ್ತಿರುವ ಹಾಸ್ಯಮೇವ ಜಯತೆ ಎಂಬ ಸ್ವಯಂಪ್ರೇರಿತ ಸಂಘಟನೆ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಸೂರತ್‍ನ ಸುಮಾರು 15 ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಲ್ಲಿ ತಾವು ಪ್ರೇಮ ವಿವಾಹವಾಗಲ್ಲ ಎಂದು ಪ್ರಮಾಣ ಮಾಡಲು ಮುಂದಾಗಿದ್ದು, ಸಂಸ್ಕಾರ ಭಾರತಿ, ಪ್ರೆಸಿಡೆನ್ಸಿ ಹೈಸ್ಕೂಲ್ ಸೇರಿ 15 ಶಾಲೆಗಳಲ್ಲಿ ಏಕಕಾಲದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರಮಾಣ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಈ ಬಗ್ಗೆ ಮಾತನಾಡಿದ ಕಾರ್ಯಕ್ರಮ ಆಯೋಜಕರು, “ಇತ್ತೀಚೆಗೆ ಯುವಕ ಯುವತಿಯರು ಪ್ರೀತಿಯಲ್ಲಿ ಬೀಳುತ್ತಾರೆ ಅಲ್ಲದೆ ತಾವು ಪ್ರೀತಿಸಿದವರನ್ನೇ ಮದುವೆಯಾಗುವ ದೃಢ ನಿರ್ಧಾರ ಮಾಡುತ್ತಾರೆ. ಆದರಲ್ಲಿ ಮನೆಬಿಟ್ಟು ಓಡಿ ಹೋಗಿ ಮದುವೆಯಾಗುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಮದುವೆಯಾದವರ ಸಂಬಂಧ ಬೇಗನೇ ಮುರಿದುಬೀಳುತ್ತವೆ. ಇಂತಹ ನಿರ್ಧಾರ ಮಾಡುವಾಗ ಪೋಷಕರ ಸಲಹೆ ಅವಶ್ಯಕ ಎಂಬ ಸಂದೇಶ ನೀಡಲು ಈ ಹೊಸ ಕಾರ್ಯಕ್ರಮವನ್ನು ನಡೆಸಲು ಹೊರಟಿದ್ದೇವೆ” ಎಂದು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೆ ಈ ಕಾರ್ಯಕ್ರಮದ ಸಹ ಆಯೋಜಕರಾಗಿರುವ ಕವಿ ಮುಕುಲ್ ಛೋಕ್ಸಿ ಮಾತನಾಡಿ, “ಹಲವು ಯುವಕರು ಪೋಷಕರ ವಿರೋಧ ಕಟ್ಟಿಕೊಂಡು ಪ್ರೇಮ ವಿವಾಹವಾಗುತ್ತಾರೆ. ಯಾಕೆ ಪೋಷಕರು ತಮ್ಮ ಮಕ್ಕಳ ಪ್ರೀತಿಯನ್ನು ವಿರೋಧಿಸುತ್ತಾರೆ ಎಂದು ಯುವಕರಿಗೆ ತಿಳಿದಿರೋದಿಲ್ಲ. ಹೀಗಾಗಿ ಈ ರೀತಿ ಪ್ರಮಾಣ ಮಾಡಿದಾಗ ತಮ್ಮ ಪೋಷಕರ ಭಾವನೆಗಳಿಗೆ ಗೌರವ ಕೊಡಲು ಯುವಕರು ನಿರ್ಧಾರ ಮಾಡುತ್ತಾರೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ನಮ್ಮ ಪೋಷಕರಿಗೋಸ್ಕರ ನಾವು ಈ ರೀತಿ ಪ್ರಮಾಣ ಮಾಡಲು ಸಿದ್ಧರಿದ್ದೇವೆ. ತಂದೆ ತಾಯಿಯರು ತಮ್ಮ ಮಕ್ಕಳಿಗೆ ಮಾಡಿರುವಷ್ಟು ತ್ಯಾಗ ಈ ಜಗತ್ತಿನಲ್ಲಿ ಬೇರೆ ಯಾರೂ ಮಾಡಿಲ್ಲ. ಹೀಗಾಗಿ ಅವರ ನಿರ್ಧಾರಗಳಿಗೆ ನಾವು ಗೌರವ ನೀಡುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv