Tag: ಲವ್

  • Big Boss Kannada: ನಮ್ರತಾ ಕಾರಣದಿಂದ ಸಂಗೀತಾ-ಕಾರ್ತಿಕ್ ಲವ್ ಬ್ರೇಕಪ್

    Big Boss Kannada: ನಮ್ರತಾ ಕಾರಣದಿಂದ ಸಂಗೀತಾ-ಕಾರ್ತಿಕ್ ಲವ್ ಬ್ರೇಕಪ್

    ನಿನ್ನೆಯ ಹಬ್ಬದ ಸಂಭ್ರಮ, ಇಂದಿನ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿಗೆ ಕರಗಿದೆ. ಅಗ್ಗಷ್ಟಿಕೆಯೆದುರು ನೋವು ಹಂಚಿಕೊಳ್ಳುತ್ತ ಒಂದಾಗಿದ್ದ ಸ್ಪರ್ಧಿಗಳ ನಡುವೆ ಮತ್ತೀಗ ಕಿಡಿ ಹೊತ್ತಿಕೊಂಡಿದೆ. ಮನೆಯ ಕ್ಯಾಪ್ಟನ್‌ ಆಗಲು ಅರ್ಹರಾದ ಇಬ್ಬರು ಸದಸ್ಯರನ್ನು ಮನೆಯ ಎಲ್ಲ ಸದಸ್ಯರೂ ಆರಿಸಬೇಕು ಎಂದು ಬಿಗ್‌ಬಾಸ್‌ (Bigg Boss Kannada) ಆದೇಶ ನೀಡಿದ್ದಾರೆ. ಸಂಗೀತಾ, ‘ತಾನು ಲೀಡರ್ ಆಗಬೇಕು ಅಂದುಕೊಂಡಿದ್ದೇನೆ’ ಎಂದು ಘೋಷಿಸಿದ್ದಾರೆ. ಆದರೆ ಅವರ ಆಪ್ತಸ್ನೇಹಿತ ಕಾರ್ತಿಕ್ ಅವರೇ ನಮ್ರತಾ ಮತ್ತು ತನಿಷಾ ಅವರನ್ನು ಕ್ಯಾಪ್ಟನ್ ಆಗಲು ಅರ್ಹರು ಎಂದು ಹೇಳಿ ಸೂಚಿಸಿದರು. ಇದು ಸಂಗೀತಾ ಅವರನ್ನು ಕೆರಳಿಸಿದೆ. ಮನಸಲ್ಲಿದ್ದುದನ್ನು ನೇರವಾಗಿ ಹೇಳಿಬಿಡುವ ಅಭ್ಯಾಸ ಇರುವ ಸಂಗೀತಾ ಈ ವಿಷಯವನ್ನೂ ಕಾರ್ತಿಕ್ ಬಳಿ ನೇರವಾಗಿಯೇ ಕೇಳಿದ್ದಾರೆ.

    ಕಾರ್ತಿಕ್ (Karthik) ಮತ್ತು ಸಂಗೀತಾ (Sangeeta) ಮಧ್ಯ ಕಿಡಿ ಹೊತ್ತಿಕೊಂಡ ದೃಶ್ಯವು JioCinema ಬಿಡುಗಡೆ ಮಾಡಿರುವ ಫ್ರೋಮೊದಲ್ಲಿ ಸೆರೆಯಾಗಿದೆ. ಆಯ್ಕೆ ಸೂಚನಾ ಪ್ರಕ್ರಿಯೆ ಮುಗಿದ ಮೇಲೆ ಸಂಗೀತಾ, ‘ನೀನ್ಯಾಕೆ ನನ್ನನ್ನು ಆಯ್ಕೆ ಮಾಡಿಕೊಂಡಿಲ್ಲ’ ಎಂದು ಕಾರ್ತಿಕ್ ಅವರ ಬಳಿ ಕೇಳಿದ್ದಾರೆ. ಹಾಗೆಯೇ, ‘ಯಾಕೆ ನಮ್ರತಾ?’ ಎಂದೂ ಕೇಳಿದ್ದಾರೆ. ಅದಕ್ಕೆ ಕಾರ್ತಿಕ್ ನೇರವಾಗಿ ಉತ್ತರಿಸದೆ, ‘ಕೋಪ ಯಾಕೆ ಮಾಡ್ಕೋತಿಯಾ?’ ಎಂದು ಅನುನಯಿಸಲು ಹೋಗಿದ್ದಾರೆ

    ‘ನಾನು ಯಾರ ಮೇಲೂ ಡಿಫೆಂಡ್ ಆಗಿ ಬಂದಿಲ್ಲ ಇಲ್ಲಿ. ಜೊತೆಗಿದ್ದೋರೇ ಚುಚ್ಚುವುದು’ ಎಂದೆಲ್ಲ ಜರಿದಿದ್ದಾರೆ. ಕೊನೆಗೆ ‘ಯು ಆರ್ ಫೇಕ್‌’ ಎಂಬ ಮಾತು ಸಂಗೀತಾ ಬಾಯಲ್ಲಿ ಹೊರಬೀಳುತ್ತಿದ್ದಂತೆಯೇ ಕಾರ್ತಿಕ್ ಅಲ್ಲಿಂದ ಎದ್ದು ಹೊರಟುಹೋಗಿದ್ದಾರೆ.

    ಬಿಗ್‌ಬಾಸ್‌ ಮನೆಯ ಬೆಸ್ಟ್‌ ಜೋಡಿ ಅಂತಲೇ ಗುರ್ತಿಸಿಕೊಂಡಿದ್ದ, ಸದಾ ಒಬ್ಬರಿಗೊಬ್ಬರು ಸಪೋರ್ಟ್‌ ಮಾಡುತ್ತ, ಒಬ್ಬರ ಸಲಹೆಯನ್ನು ಇನ್ನೊಬ್ಬರು ಕೇಳುತ್ತ ಬಂದಿದ್ದ ಕಾರ್ತಿಕ್ ಮತ್ತು ಸಂಗೀತಾ ಈ ಕಾರಣಕ್ಕಾಗಿಯೇ ಹಲವು ಸಲ ಉಳಿದವರ ಕೆಂಗಣ್ಣಿಗೆ ಗುರಿಯಾಗಿದ್ದಿದೆ. ಆದರೆ ಅವರ ಸಂಬಂಧದ ಮೇಲೆ ಈಗ ಯಾರದೋ ಕಣ್ಣು ಬಿದ್ದಂತಿದೆ.

    ಯಾವಾಗಲೂ ಹ್ಯಾಪಿಯಾಗಿರುತ್ತಿದ್ದ ಕಾರ್ತಿಕ್ ಮತ್ತು ಸಂಗೀತ ಬೇರೆಯಾಗಿದ್ದಾರೆಯೇ? ಅವರ ನಡುವೆ ಒಡಕು ಮೂಡಿದೆಯೇ? ಪರಸ್ಪರ ಹಳೆಯದನ್ನು ಮರೆತು ಒಂದಾಗುತ್ತಾರಾ? ಅಥವಾ ಅವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಮುಂದುವರಿದುಕೊಂಡೇ ಹೋಗುತ್ತದಾ? ಗೊತ್ತಿಲ್ಲ. ಆದರೆ, ಸಂಗೀತಾರನ್ನು ಕೆರಳಿಸುವುದಕ್ಕಾಗಿ ಮತ್ತೆ ಮತ್ತೆ ಕಾರ್ತಿಕ್ ಅವರು ನಮ್ರತಾ ಜೊತೆ ಹೋಗುತ್ತಿದ್ದಾರೆ. ಅವರೊಂದಿಗೆ ಡಾನ್ಸ್ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada: ಪ್ರೇಮಕ್ಕೂ ಸೈ, ಸ್ನೇಹಕ್ಕೂ ಜೈ: ಇಶಾನಿ-ಮೈಕಲ್ ಲವ್ ಸ್ಟೋರಿ

    Bigg Boss Kannada: ಪ್ರೇಮಕ್ಕೂ ಸೈ, ಸ್ನೇಹಕ್ಕೂ ಜೈ: ಇಶಾನಿ-ಮೈಕಲ್ ಲವ್ ಸ್ಟೋರಿ

    ಬಿಗ್ ಬಾಸ್ ಮನೆಯಲ್ಲಿ ಆಟಕ್ಕಿಂತಲೂ ನೋಟವೇ ಜಾಸ್ತಿಯಾಗಿದೆ. ಆ ನೋಟ ಈಗ ಪ್ರೀತಿ ಪ್ರೇಮವಾಗಿ ಬದಲಾಗುತ್ತದೆ. ಈ ಪ್ರೀತಿ ಪ್ರೇಮ ಎಷ್ಟು ದಿನಗಳ ಕಾಲ ಇರತ್ತೋ ಗೊತ್ತಿಲ್ಲ. ಆದರೆ, ನೋಡುಗರಿಗೆ ಮನರಂಜನೆಯನ್ನಂತೂ ಪಕ್ಕಾ ನೀಡುತ್ತದೆ. ಬಿಗ್ ಬಾಸ್ ಮನೆಯಲ್ಲಿ ಜೋಡಿಯಾದ ಹಕ್ಕಿಗಳು ಮನೆಯಿಂದ ಆಚೆ ಬಂದಾಗ ಮತ್ತೆ ಒಟ್ಟಾಗಿ ರೆಕ್ಕೆ ಬಿಚ್ಚಿದ್ದು ಕಡಿಮೆ. ಮದುವೆ ಆಗಿದ್ದು ಇನ್ನೂ ಕಡಿಮೆ.

    ಸದ್ಯ ಬಿಗ್ ಬಾಸ್ ಮನೆಯಲ್ಲಿ ಕೇಳಿ ಬರುತ್ತಿರುವ ಪ್ರಣಯ ಪಕ್ಷಿಗಳ ಹೆಸರು ಮೈಕಲ್ ಮತ್ತು ಇಶಾನಿ ಅವರದ್ದು. ಇಬ್ಬರೂ ಮೂಲತಃ ಕರ್ನಾಟಕದವರೇ ಆಗಿದ್ದರೂ, ಹುಟ್ಟಿ ಬೆಳದದ್ದು ಬೇರೆ ಬೇರೆ ಕಡೆ. ಮೈಕಲ್ ನೈಜಿರಿಯಾದಲ್ಲಿ ಬೆಳೆದಿದ್ದರೆ, ಇಶಾನಿ ದುಬೈ ಹಾಗೂ ಇತರ ದೇಶಗಳಲ್ಲಿ ಬೆಳೆದಿದ್ದಾರೆ. ಆದರೂ, ಇಬ್ಬರಿಗೂ ಚೆನ್ನಾಗಿ ಕನ್ನಡ ಬರುತ್ತೆ. ಹಾಗಾಗಿಯೇ ಇಬ್ಬರೂ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

    ಇಶಾನಿ ಜೀವನದಲ್ಲಿ ಒಂದಷ್ಟು ಫ್ಲ್ಯಾಶ್ ಬ್ಯಾಕ್ ಇವೆ. ಮೈಕಲ್ ಜೀವನವೂ ಅಷ್ಟೊಂದು ಸರಳವಾಗಿರಲಿಲ್ಲ. ಅದೆಲ್ಲವನ್ನೂ ಬಿಗ್ ಬಾಸ್ ವೇದಿಕೆಯ ಮೇಲೆ ಇಬ್ಬರೂ ಹಂಚಿಕೊಂಡು ಆಗಿದೆ. ಹಾಗಾಗಿಯೇ ಈ ಜೋಡಿಯ ಮೇಲೆ ನೋಡುಗರಿಗೆ ವಿಶೇಷ ಅಭಿಮಾನವಿದೆ. ಇಬ್ಬರೂ ಜೊತೆಯಾದಾಗೆಲ್ಲ, ಹೀಗೆ ಖುಷಿ ಖುಷಿಯಾಗಿರಲಿ ಎಂದು ನೋಡುಗರು ಹಾರೈಸುತ್ತಾರೆ. ಈ ಜೋಡಿಯೂ ಕೂಡ ಬಿಗ್ ಬಾಸ್ ಮನೆಯಲ್ಲಿ ಲವ್ವಿ ಡವ್ವಿ ಶುರು ಮಾಡಿಕೊಂಡಿದೆ.

     

    ಇಶಾನಿ ಮತ್ತು ಮೈಕಲ್ ಜೊತೆಯಾಗಿಯೇ ಇರುತ್ತಾರೆ. ಒಟ್ಟಿಗೆ ಹಲವಾರು ವಿಷಯಗಳನ್ನು ಹಂಚಿಕೊಳ್ಳುತ್ತಾರೆ. ಇಶಾನಿ ಹಿಂದೆಯೇ ಮೈಕಲ್ ಸುತ್ತುತ್ತಾರೆ. ಫ್ಲರ್ಟ್ ಕೂಡ ಮಾಡುತ್ತಿದ್ದಾರೆ. ಈ ಎಲ್ಲವನ್ನೂ ಬಿಗ್ ಬಾಸ್ ಮನೆಯ ಸದಸ್ಯರು ನೋಟಿಸ್ ಕೂಡ ಮಾಡಿದ್ದಾರೆ. ಇಬ್ಬರ ಪ್ರೇಮಕ್ಕೆ ಉತ್ತೇಜಿಸುವಂತ ಕೆಲಸಗಳೂ ಬಿಗ್ ಬಾಸ್ ಮನೆಯಲ್ಲಿ ನಡೆಯುತ್ತಿವೆ. ಮೈಕಲ್ ಕಂಡರೆ ನಿನಗೆ ಇಷ್ಟನಾ? ಎಂದು ಇಶಾನಿ ಕೇಳಿದರೆ, ಪ್ರೇಮ ಮೂಡಿದರೆ ಮೂಡಲಿ ಎಂದು ಹೇಳುವ ಮೂಲಕ ಪ್ರೇಮಕ್ಕೆ ಸೈ ಎಂದಿದ್ದಾರೆ ಇಶಾನಿ. ಈ ಜೋಡಿಯ ಹೊಂದಾಣಿಕೆ ಎಲ್ಲಿತನಕ ಇರತ್ತೋ ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಬಿಗ್ ಬಾಸ್’ಗಾಗಿ ಬ್ರೇಕಪ್ ಮಾಡಿಕೊಂಡಿಲ್ಲ: ವರ್ಷಾ ಕಾವೇರಿ ಸ್ಪಷ್ಟನೆ

    ‘ಬಿಗ್ ಬಾಸ್’ಗಾಗಿ ಬ್ರೇಕಪ್ ಮಾಡಿಕೊಂಡಿಲ್ಲ: ವರ್ಷಾ ಕಾವೇರಿ ಸ್ಪಷ್ಟನೆ

    ವರ್ಷದ ಬಿಗ್ ಬಾಸ್ (Bigg Boss Kannada) ಮನೆಗೆ ಖ್ಯಾತ ಯುಟ್ಯೂಬರ್ ಹಾಗೂ ಇನ್ಸ್ಟಾದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ  ವರ್ಷಾ-ವರುಣ್ (Varun Aradhya) ಜೋಡಿಯಾಗಿ ಬರುತ್ತಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ ಭಾಗವಹಿಸುವುದಕ್ಕಾಗಿಯೇ ಈ ಜೋಡಿ ಬ್ರೇಕ್ ಅಪ್ (Break Up) ನಾಟಕವಾಡಿದೆ ಎಂದು ಆರೋಪವಿತ್ತು. ಇದಕ್ಕೆ ವರ್ಷಾ ಕಾವೇರಿ ಸ್ಪಷ್ಟನೆಯನ್ನು ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಲು ನಾಟಕವಾಡುವ ಅವಶ್ಯಕತೆ ಇಲ್ಲವೆಂದು ಅವರು ಹೇಳಿಕೊಂಡಿದ್ದಾರೆ.

    ಏನಿದು ಬ್ರೇಕ್ ಅಪ್ ಸ್ಟೋರಿ?

    ಖ್ಯಾತ ಯೂಟ್ಯೂಬರ್ಸ್, ಟಿಕ್ ಟಾಕ್ ಸ್ಟಾರ್ಸ್ ವರ್ಷಾ ಕಾವೇರಿ- ವರುಣ್ ಆರಾಧ್ಯ  ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ವರ್ಷಾ (Varsha Kaveri) ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದರು. ಈಗ ವರುಣ್ ಆರಾಧ್ಯ ಬ್ರೇಕಪ್ ಬಗ್ಗೆ ಮೌನ ಮುರಿದ್ದಾರೆ. ಬ್ರೇಕಪ್ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ರಿಯಾಕ್ಟ್ ಮಾಡಿದ್ದಾರೆ.

    ಎಲ್ಲರಿಗೂ ನಮಸ್ಕಾರ ನೀವು ವರ್ಷಾ ಕಾವೇರಿ- ನನಗೆ ತೋರಿಸಿದ ಸಪೋರ್ಟ್‌ಗೆ ತುಂಬಾ ವಂದನೆಗಳು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಲಹೆ ಮತ್ತು ದೃಷ್ಟಿಕೋನವಿದೆ. ಹೀಗಾಗಿ ನಮ್ಮ ನಿರ್ಧಾರವನ್ನು ನೀವು ಒಪ್ಪಿಕೊಂಡು ನಮಗೆ ಸಪೋರ್ಟ್ ಮಾಡಬೇಕು. ವರ್ಷಾ- ನಾನು ಪರಸ್ಪರ ತೀರ್ಮಾನ ಮಾಡಿಕೊಂಡು ದೂರ ಆಗಿರುವುದಕ್ಕೆ ನಮ್ಮ ಸ್ನೇಹಿತರು ಅಥವಾ ನಮ್ಮ ಕುಟುಂಬದವರು ಕಾರಣವಲ್ಲ. ಅವರನ್ನು ಈ ವಿಚಾರದಲ್ಲಿ ಎಳೆಯಬೇಡಿ. ಒಳ್ಳೆಯ ರೀತಿಯಲ್ಲಿ ಸಂಬಂಧ ಶುರು ಮಾಡಿ, ಒಳ್ಳೆಯ ರೀತಿಯಲ್ಲಿ ಅಂತ್ಯವಾಡುತ್ತಿದ್ದೀವಿ. ವರ್ಷಾ ಕಾವೇರಿ ಮುಂದಿನ ಕೆಲಸಗಳಿಗೆ ಒಳ್ಳೆಯದಾಗಲಿ ಎಂದು ಹೇಳಲು ಇಷ್ಟ ಪಡುತ್ತೀನಿ. ಇಲ್ಲಿಯತನಕ ನೀವು ನೀಡಿದ ಪ್ರೋತ್ಸಾಹ ಮತ್ತು ಬೆಂಬಲ ಇನ್ನು ಮುಂದೆನೂ ಸದಾ ಇರಲಿ ಎಂದು ವರುಣ್ ಬರೆದುಕೊಂಡಿದ್ದರು. ಈ ಬೆನ್ನಲ್ಲೇ ನೆಟ್ಟಿಗರು ವರುಣ್‌ಗೆ ಕ್ಲಾಸ್‌ ತೆಗೆದುಕೊಂಡಿದ್ದರು. ವರ್ಷಾ ಗಿಫ್ಟ್‌ ಮಾಡಿದ ಬೈಕ್‌ನಲ್ಲಿ, ಡುಡ್ಡಿನಲ್ಲಿ ಶೋಕಿ ಮಾಡ್ತಿದ್ದೀರಾ. ಅದನ್ನು ಅವರಿಗೆ ವಾಪಾಸ್‌ ಕೊಡಿ. ಪ್ರೀತಿಗೆ ಮೋಸ ಮಾಡಿ ಇನ್ನೊಬ್ಬರ ಹಿಂದೆ ಹೋಗಿದ್ದೀರಾ ಥೂ ಎಂದೆಲ್ಲಾ ಕಾಮೆಂಟ್‌ ಮಾಡಿದ್ದರು.

    ವರುಣ್ ಬ್ರೇಕಪ್ ಬಗ್ಗೆ ಸಹೋದರಿ ಚೈತ್ರಾ ಆರಾಧ್ಯಗೂ ಪ್ರಶ್ನೆ ಮಾಡಿದ್ದರು. ಹಾಗಾಗಿ ಅವರು ಕೂಡ ಸ್ಪಷ್ಟನೆ ನೀಡಿದ್ದರು. ಇಲ್ಲಿ ಯಾರೂ ಯಾರಿಗೂ ಸಪೋರ್ಟ್ ಮಾಡುತ್ತಿಲ್ಲ. ಅವರಾಗಿಯೇ ನಿರ್ಧಾರ ತೆಗೆದುಕೊಂಡಿರುವುದು. ಈ ವಿಚಾರದಲ್ಲಿ ನಮ್ಮನ್ನು ದೂರಬೇಡಿ. ನಮ್ಮನ್ನು ಕೇಳಿ ಹೇಳಿ ಅವರಿಬ್ಬರು ಸಂಬಂಧ ಶುರು ಮಾಡಿಲ್ಲ. ಅವರಿಬ್ಬರೇ ಸೃಷ್ಟಿಸಿಕೊಂಡಿರುವ ಪ್ರಪಂಚ ಮಾಡಿಕೊಂಡಿರುವ ದಾರಿ. ಅವರಿಬ್ಬರೂ ದೂರಾಗುತ್ತಿರುವು ಸರಿಯಲ್ಲ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆದರೆ ಭವಿಷ್ಯದಲ್ಲಿ ಅವರೇ ಒಟ್ಟಿಗಿದ್ದು ಪರಸ್ಪರ ಖುಷಿ ಮತ್ತು ನೋವು ಹಂಚಿಕೊಳ್ಳಬೇಕು. ಅವರಿಬ್ಬರ ಮೇಲೆ ಯಾರೂ ದ್ವೇಷ ಸಾಧಿಸಬೇಡಿ. ಪ್ರತಿಯೊಬ್ಬರಿಗೂ ಪರ್ಸನಲ್ ಸಮಸ್ಯೆ ಇರುತ್ತದೆ. ಪರ್ಸನಲ್ ಜೀವನ ಇರುತ್ತದೆ. ನಮಗೂ ಜೀವನ ಇದೆ. ಅದರ ಮೇಲೆ ಗಮನ ಕೊಟ್ಟು ಮುಂದೆ ಸಾಗೋಣ. ಈ ಸಮಯದಲ್ಲಿ ನಮ್ಮನ್ನು ಅರ್ಥ ಮಾಡಿಕೊಳ್ಳುತ್ತಿರುವ ಪ್ರತಿಯೊಬ್ಬರಿಗೂ ವಂದನೆಗಳು ಎಂದು ಚೈತ್ರಾ ಬರೆದುಕೊಂಡಿದ್ದರು.

     

    ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು, ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ.

    ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ಹೇಳದಿದ್ರೆ ನನಗೆ ನಾನೇ ಮೋಸ ಮಾಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ.

     

    ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಫೇಸ್ ಮಾಡುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

    4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

    ಮೈಸೂರು: ಪ್ರೀತಿಸಿದ ಹುಡುಗ ಮತ್ತೊಬ್ಬಳ ಹಿಂದೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೈಸೂರು ಜಿಲ್ಲೆ ಕೆ.ಆರ್ ನಗರ (KR Nagar) ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಸರ್ಗ(20) ಎಂದು ಗುರುತಿಸಲಾಗಿದೆ. ಈಕೆ ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದವನಿಗೆ ಬಡಿದ ಮರದ ಕೊಂಬೆ- ವ್ಯಕ್ತಿ ದಾರುಣ ಸಾವು

    ಏನಿದು ಪ್ರಕರಣ?: ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

    ಕೈ ಕೊಯ್ದುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಫೋಟೋ ಹಾಕಿದ್ದಳು. ಪ್ರೀತಿ ವಿಚಾರವನ್ನ ಅನನ್ಯಾಳ ಪೋಷಕರಿಗೆ ನಿರ್ಸಗ ತಿಳಿಸಿದ್ದಾಳೆ. ಅನನ್ಯಾ ಪೋಷಕರು ಕೆಟ್ಟದಾಗಿ ನಿಂದಿಸಿ ಸಾಯುವಂತೆ ಪ್ರೇರಣೆ ಕೊಟ್ಟಿದ್ದಾರೆ ಎಂದು ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಕೆ.ಆರ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸುಹಾಸ್ ರೆಡ್ಡಿ, ಅನನ್ಯಾ ಪೋಷಕರ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ನಿಸರ್ಗ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಸುಹಾಸ್ ರೆಡ್ಡಿ ಎಸ್ಕೇಪ್ ಆಗಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮನ್ನಾ ಮೇಲೆ ಹೆಚ್ಚು ಪ್ರೀತಿ ಆಗಿದೆ: ಮತ್ತೆ ಡೇಟಿಂಗ್ ಖಚಿತ ಪಡಿಸಿದ ವಿಜಯ್

    ತಮನ್ನಾ ಮೇಲೆ ಹೆಚ್ಚು ಪ್ರೀತಿ ಆಗಿದೆ: ಮತ್ತೆ ಡೇಟಿಂಗ್ ಖಚಿತ ಪಡಿಸಿದ ವಿಜಯ್

    ಕ್ಷಿಣದ ಖ್ಯಾತ ನಟಿ ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಆದರೂ, ಈ ವಿಚಾರವಾಗಿ ಆಗಾಗ್ಗೆ ಇಬ್ಬರೂ ಸುದ್ದಿ ಆಗುತ್ತಾರೆ. ನಿನ್ನೆಯಷ್ಟೇ ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ  ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ.

    ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್‌ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ ಹಾಕಿದ್ದರು ತಮನ್ನಾ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು.

    ಆದರೆ, ನಂತರದ ದಿನಗಳಲ್ಲಿ ಡೇಟಿಂಗ್ ಕುರಿತು ಭಿನ್ನ ಪ್ರತಿಕ್ರಿಯೆ ನೀಡಿದ್ದರು ತಮನ್ನಾ. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದರು. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್‌ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದರು. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ:ರಿಷಬ್ ನಿರ್ಮಾಣದ ‘ಶಿವಮ್ಮ’ನಿಗೆ ಮತ್ತೆ ಅಂತಾರಾಷ್ಟ್ರೀಯ ಪ್ರಶಸ್ತಿ

    ಪ್ರೇಮಿಗಳ ದಿನದಂದು ತಮನ್ನಾಗೆ ವಿಜಯ್ ವರ್ಮಾ ವಿಶೇಷವಾಗಿ ವಿಶ್ ಮಾಡಿದ್ದರು. ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನು ವಿಜಯ್ ವರ್ಮಾ ಶೇರ್ ಮಾಡಿದ್ದರು.  ವಿಜಯ್ ಅವರು ಕಾಲೊಂದರ ಫೋಟೋವನ್ನು ಶೇರ್ ಮಾಡಿ ಹಾರ್ಟ್ ಇಮೋಜಿ ಇರಿಸಿದ್ದರು. ಅದು ತಮನ್ನಾ ಕಾಲು ಎಂದು ಹೇಳಲಾಗಿತ್ತು. ತಮನ್ನಾ ಧರಿಸಿದ್ದ ಶೋ ಮತ್ತು ಜರ್ಕಿನ್ ಫೋಟೋಗಳನ್ನು ಶೇರ್ ಮಾಡಿ ಇದು ಪಕ್ಕಾ ತಮನ್ನಾ ಅವರ ಕಾಲು ಎಂದಿದ್ದರು.

    ವಿಜಯ್ ವರ್ಮಾ ತಮ್ಮ ಪ್ರೀತಿಯ ವಿಷಯದಲ್ಲಿ ಸ್ಪಷ್ಟವಾಗಿದ್ದರೂ, ತಮನ್ನಾ ಮಾತ್ರ ಅದನ್ನು ಹೇಳಿಕೊಳ್ಳಲು ತಯಾರು ಇರಲಿಲ್ಲ. ಯಾರೇ ಕೇಳಿದರೂ ಅದನ್ನು ಗಾಸಿಪ್ ಎಂದು ತೇಲಿಸಿ ಬಿಡುತ್ತಿದ್ದರು. ನಂತರ ವಿಜಯ್ ಜೊತೆಗಿನ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ಒಂದು ಸಲ ಒಪ್ಪಿಕೊಂಡು ಮತ್ತೊಂದು ಸಲ ಗಾಸಿಪ್ ಎಂದು ಹೇಳುತ್ತಾ ಡೇಟಿಂಗ್ ವಿಚಾರದಲ್ಲಿ ಇಬ್ಬರೂ ಸದಾ ಸುದ್ದಿಯಲ್ಲಿರುತ್ತಾರೆ ಈ ಸ್ಟಾರ್ ಜೋಡಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ

    ‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ

    ವ್‌ ಮಾಕ್ಟೇಲ್‌ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ಮಿಲನಾ ನಾಗರಾಜ್‌ ಹಾಗೂ ಅಮೃತಾ ಅಯ್ಯಂಗಾರ್‌ ಒಟ್ಟಿಗೆ ನಟಿಸಿದ್ದ ಓ ಸಾರಥಿ ಮಹೇಶ್‌ ಸಿ.ಅಮ್ಮಳ್ಳಿದೊಡ್ಡಿ (Mahesh C. Ammallidoddy) ಸದ್ದಿಲ್ಲದೆ ‘ಲವ್’ (Love) ಎಂಬ ಹೊಸ ಸಿನಿಮಾ ಶುರು ಮಾಡಿದ್ದಾರೆ. ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ.

    ಕಣ್ಮಣಿ ಎಂಬ ಮಧುರಪ್ರೇಮ ಗೀತೆ (Song) ಇದಾಗಿದ್ದು, ನಿರ್ದೇಶಕ ಮಹೇಶ್ ಪದಪುಂಜ ಪೋಣಿಸಿರುವ ಹಾಡಿಗೆ ರೋಸಿತ್ ವಿಜಯನ್ ಧ್ವನಿಯಾಗಿರುವುದರ ಜೊತೆಗೆ ಸಾಯಿ ಕಿರಣ್ ಜೊತೆಯಾಗಿ ಸಂಗೀತ ನಿರ್ದೇಶಿಸಿದ್ದಾರೆ. ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಣ್ಮಣಿ ಸಿಂಗಿಂಗ್ ಮಸ್ತಿಯಲ್ಲಿ ಕಾಣಿಸಿಕೊಂಡಿದ್ದಾರೆ.

    ‘ಲವ್’ ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆಯುಳ್ಳ ಸಿನಿಮಾ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ (Prajay Jayaram) ಹಾಗೂ ವೃಷ ಪಾಟೀಲ (Vrisha Patil) ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ ಹಲವರು ಚಿತ್ರದ ಭಾಗವಾಗಿದ್ದಾರೆ. ಇದನ್ನೂ ಓದಿ:ಕಾಲಿವುಡ್ ಸ್ಟಾರ್ ಕಾಮಿಡಿಯನ್‌ಗೆ ಸಾಧು ಕೋಕಿಲ ಪುತ್ರ ಆ್ಯಕ್ಷನ್ ಕಟ್

    ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

    ನೈಜ ಘಟನೆಯಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ,‌ ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿ ಆದಿಲ್ ನನ್ನು ಜೈಲಿಗೆ ಕಳುಹಿಸಿ, ಮತ್ತೊಬ್ಬ ಹುಡುಗನಿಗೆ ಮನಸೋತ ರಾಖಿ

    ಪತಿ ಆದಿಲ್ ನನ್ನು ಜೈಲಿಗೆ ಕಳುಹಿಸಿ, ಮತ್ತೊಬ್ಬ ಹುಡುಗನಿಗೆ ಮನಸೋತ ರಾಖಿ

    ಕೆಲ ದಿನಗಳ ಕಾಲ ದುಬೈಗೆ ಹಾರಿ ಹೋಗಿದ್ದ ಡ್ರಾಮಾ ಕ್ವೀನ್ ರಾಖಿ ಸಾವಂತ್ (Rakhi Sawant), ಇದೀಗ ಭಾರತಕ್ಕೆ ವಾಪಸ್ಸಾಗಿದ್ದಾರೆ. ದುಬೈನಿಂದ ಬರುತ್ತಾ ಹೊಸ ಹುಡುಗನ ಸುದ್ದಿಯೊಂದನ್ನು ತಂದಿದ್ದಾರೆ. ತಮ್ಮ ಜೀವನದಲ್ಲಿ ನಡೆದ ಘಟನೆಗಳಿಂದಾಗಿ ರಾಖಿ ಖಿನ್ನತೆಗೆ ಒಳಗಾಗಿದ್ದರಂತೆ. ಹಾಗಾಗಿ ದುಬೈಗೆ (Dubai) ಅವರು ಹಾರಿದ್ದರು. ಈ ಸಮಯದಲ್ಲಿ ರಾಖಿ ಜೀವನದಲ್ಲಿ ಹುಡುಗನೊಬ್ಬನು ಪ್ರವೇಶ ಮಾಡಿದ್ದಾನಂತೆ. ಈ ವಿಷಯದಲ್ಲಿ ನನಗೆ ಭಯವಾಗುತ್ತಿದೆ ಎಂದು ರಾಖಿ ಹೇಳಿಕೊಂಡಿದ್ದಾರೆ.

    ನನ್ನ ಜೀವನಕ್ಕೆ ಒಳ್ಳೆಯ ಹುಡುಗನ ಪ್ರವೇಶವಾಗಿದೆ. ಆದರೆ, ಈ ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರೆ, ಈ ಹುಡುಗನ ಬಗ್ಗೆಯೂ ಭಯವಾಗುತ್ತಿದೆ. ಆದರೆ, ನನ್ನ ಜೀವನಕ್ಕೆ ಇವನು ಔಷಧಿ ರೂಪದಲ್ಲಿ ಬಂದಿದ್ದಾನೆ ಅನಿಸುತ್ತಿದೆ. ಕೆಲವರು ಗಾಯಕ್ಕೆ ಉಪ್ಪು ಹಾಕುತ್ತಾರೆ. ನೋಯಿಸುತ್ತಾರೆ. ಈ ಹುಡುಗನ ಅಂಥವನಲ್ಲ ಎಂದು ರಾಖಿ ಸಾವಂತ್ ಹುಡುಗನ ಬಗ್ಗೆ ಹಾಡಿಹೊಗಳಿದ್ದಾರೆ. ಇದನ್ನೂ ಓದಿ:ಈ ವಿಚಾರಕ್ಕೆ ನಟನೆಗೆ ಗುಡ್ ಬೈ ಹೇಳ್ತಾರಾ ‌’ಮಗಧೀರ’ ನಟಿ ಕಾಜಲ್?‌

    ಪತಿ ಆದಿಲ್ ಖಾನ್ (Adil Khan) ವಿರುದ್ಧ ರಾಖಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆ ಆದಿಲ್ ಜೈಲಿಂದ (Jail) ಮಸೇಜ್ ಮಾಡಿರುವ ಕುರಿತು ಮಾತನಾಡಿದ್ದರು. ಆತನನ್ನು ಕ್ಷಮಿಸಿದರೆ ಬಹುಶಃ ನನ್ನನ್ನು ಅವನು ಕೊಲ್ಲಬಹುದು ಎಂದು ಹೇಳಿಕೆ ನೀಡಿದ್ದರು. ಜೈಲಿನಿಂದ ಕಳುಹಿಸಿರುವ ಸಂದೇಶದಲ್ಲಿ ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡಿದ್ದಾನೆ ಎಂದೂ ರಾಖಿ ತಿಳಿಸಿದ್ದರು.

    ಕೆಲ ದಿನಗಳ ಹಿಂದೆ ಪತಿ ಆದಿಲ್ ಕುರಿತಾಗಿ ಮತ್ತಷ್ಟು ಆರೋಪಗಳನ್ನೂ ಮಾಡಿದ್ದು, ಮತ್ತೆಂದೂ ತಾವು ಮದುವೆ ಆಗುವುದಿಲ್ಲ ಎಂದು ಘೋಷಿಸಿದ್ದರು ರಾಖಿ. ಆದಿಲ್ ಗೆ ಬುದ್ಧಿ ಕಲಿಸದೇ ತಾವು ಬಿಡುವುದಿಲ್ಲ. ಸದ್ಯ ಆದಿಲ್ ಮೈಸೂರು ಜೈಲಿನಲ್ಲಿದ್ದಾನೆ. ಅಲ್ಲಿಂದಲೇ ರಾಖಿಗೆ ಸಂದೇಶವನ್ನೂ ಕಳುಹಿಸಿದ್ದಾನಂತೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ರಾಖಿ, ‘ನನ್ನಿಂದ ತಪ್ಪಾಗಿದೆ. ಮತ್ತೆ ನಾನು ನಿನ್ನೊಂದಿಗೆ ಬದುಕುವೆ. ನನ್ನ ಮೇಲಿನ ದೂರನ್ನು ವಾಪಸ್ಸು ತಗೆದುಕೊ. ಒಟ್ಟಿಗೆ ಖುಷಿಯಾಗಿ ಬದುಕೋಣ’ ಅಂತ ಆದಿಲ್ ಮಸೇಜ್ ಕಳುಹಿಸಿದ್ದಾನಂತೆ. ಆದರೆ, ಆದಿಲ್ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದಿದ್ದರು ರಾಖಿ.

    ‘ನಾನು ಆದಿಲ್ ಗೆ ಡಿವೋರ್ಸ್ ಕೊಡುವುದಿಲ್ಲ. ಅವನು ನನ್ನಂತೆ ಇನ್ನ್ಯಾರಿಗೂ ಮೋಸ ಮಾಡಬಾರದು. ನಾನೂ ಕೂಡ ಮದುವೆಯಾಗಲಾರೆ. ಮತ್ತೆ ಅವನು ನನ್ನೊಂದಿಗೆ ಬದುಕುತ್ತೇನೆ ಎನ್ನುತ್ತಾನೆ. ಬಹುಶಃ, ಅವನು ನನ್ನನ್ನು ಸಾಯಿಸೋದಕ್ಕೆ ಪ್ಲ್ಯಾನ್ ಮಾಡಿರಬಹುದು. ಹಾಗಾಗಿ ಅವನು ನನ್ನ ಜೊತೆ ಇರುತ್ತೇನೆ ಎಂದು ಹೇಳುತ್ತಿದ್ದಾನೆ. ಆದರೆ, ಅವನನ್ನು ನಾನು ನಂಬುವುದಿಲ್ಲ. ಮತ್ತೆ ಒಟ್ಟಿಗೆ ಬದುಕುವುದಿಲ್ಲ’ ಎನ್ನುತ್ತಾರೆ ರಾಖಿ.

     

    ಆದಿಲ್ ಜೊತೆ ಬೇರೆ ಯಾರೂ ಮದುವೆ ಆಗಬಾರದು ಎನ್ನುವ ಕಾರಣಕ್ಕಾಗಿ ಡಿವೋರ್ಸ್ ನೀಡುವುದಿಲ್ಲ ಎಂದೂ ರಾಖಿ ಘೋಷಣೆ ಮಾಡಿದ್ದಾರೆ. ಡಿವೋರ್ಸ್ ನೀಡಿದರೆ ಅವನು ಮತ್ತೊಂದು ಮದುವೆ ಆಗುತ್ತಾನೆ. ಮತ್ತೆ ಅವನ ಬಾಳಲ್ಲಿ ಯಾವ ಹುಡುಗಿಯೂ ಬರುವುದು ಬೇಡ ಎನ್ನುವುದು ರಾಖಿ ಸಾವಂತ್ ಮಾತಾಗಿತ್ತು. ಇದೀಗ ತಮ್ಮ ಜೀವನದಲ್ಲೇ ಹೊಸ ಹುಡುಗನನ್ನು ಬಿಟ್ಟುಕೊಂಡಿದ್ದಾರೆ ಬಾಲಿವುಡ್ ನಟಿ.

  • ಸ್ಯಾಂಡಲ್ ವುಡ್ ನಲ್ಲಿ ಲವ್, ಸೆಕ್ಸ್, ದೋಖಾ : ದೂರು ದಾಖಲಿಸಿದ ನಟಿ

    ಸ್ಯಾಂಡಲ್ ವುಡ್ ನಲ್ಲಿ ಲವ್, ಸೆಕ್ಸ್, ದೋಖಾ : ದೂರು ದಾಖಲಿಸಿದ ನಟಿ

    ನಗೆ ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಮತ್ತು ಹಾಕಿದ ಬಂಡವಾಳಕ್ಕೆ ಡಬಲ್ ಹಣ ಕೊಡುತ್ತೇನೆ ಎಂದು ಸ್ಯಾಂಡಲ್ ವುಡ್ (Sandalwood) ನಿರ್ಮಾಪಕರೊಬ್ಬರು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ತನ್ನಿಂದ ನಿರ್ಮಾಪಕನೊಬ್ಬ ದುಡ್ಡು ಪಡೆದು, ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಎಂದು ನಟಿಯೊಬ್ಬರು ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಕೊಟಗಾನಹಳ್ಳಿ ರಾಮಯ್ಯ ಅವರ ಕಥೆಯನ್ನು ಆಧರಿಸಿದ ‘ದಿ ಕಲರ್ಸ್ ಆಫ್ ಟೊಮ್ಯಾಟೊ’ (The Colors of Tomato) ಸಿನಿಮಾ ಈ ಹಿಂದೆ ಸೆಟ್ಟೇರಿತ್ತು. 1 ಟು 100 ಡ್ರೀಮ್ ಮೂವೀಸ್ ಬ್ಯಾನರ್ ಅಡಿ ಕುಮಾರ್ ಎನ್ನುವವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಇದೇ ಕುಮಾರ್ ಮಹಿಳೆಯನ್ನು ವಂಚಿಸಿದ್ದಾರೆ ಎಂದು ವಂಚಿತ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಸೆಡ್ಡು ಹೊಡೆದ ನಟಿ- ಐಕಾನ್ ಸ್ಟಾರ್‌ಗೆ ಶ್ರೀಲೀಲಾ ನಾಯಕಿ

    ನಾನು ಸಿನಿಮಾ ರಂಗದಲ್ಲಿ ಬೆಳೆಯಬೇಕು ಎಂದು ಕನಸು ಕಂಡಿದ್ದ ನಟಿ. ಈ ಹೊತ್ತಿನಲ್ಲಿ ಕುಮಾರ್ (Kumar) ಅವರು ನನಗೆ ಪರಿಚಯವಾದರು. ಸಿನಿಮಾಗಳಲ್ಲಿ ಅವಕಾಶ ಕೊಡಿಸುತ್ತೇನೆ ಹಾಗೂ ಸಿನಿಮಾಗೆ 75 ಲಕ್ಷ ರೂಪಾಯಿ ಬಂಡವಾಳ ಹಾಕಿದರೆ, ಸಿನಿಮಾ ಹಿಟ್ ಆದ ನಂತರ ಒಂದು ಕೋಟಿ ಐವತ್ತು ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದರು. ‘50’ ಮತ್ತು ‘ದಿ ಕಲರ್ಸ್ ಆಫ್ ಟೊಮ್ಯಾಟೊ’ ಸಿನಿಮಾ ಮಾಡುತ್ತಿರುವುದರಿಂದ ದುಡ್ಡಿನ ಅವಶ್ಯಕತೆ ಇದೆ ಎಂದು ಹೇಳಿದ್ದರು. ಈ ಕಾರಣದಿಂದಾಗಿ ನಾನು ದುಡ್ಡು ಕೊಟ್ಟಿದ್ದೇನೆ. ನಂತರದ ದಿನಗಳಲ್ಲಿ ದುಡ್ಡು ಕೊಡದೇ ತಮಗೆ ಮೋಸ ಮಾಡಿದ್ದಾರೆ ಎಂದು ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಕೇವಲ ದುಡ್ಡಿನ ವಿಚಾರ ಮಾತ್ರವಲ್ಲ,  ನಂತರದ ದಿನಗಳಲ್ಲಿ ನಿನಗೆ ಬಾಳು ಕೊಡುತ್ತೇನೆ ಎಂದು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನನಗೆ ವಾಪಸ್ಸು ಹಣ ಕೊಡಿ ಎಂದು ಕೇಳಿದಾಗ ಚೆಕ್ ಕೊಡುತ್ತೇನೆ ಬಾ ಎಂದು ಕರೆಯಿಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ನಟಿ ಬರೆದಿದ್ದಾರೆ. ನಟಿ ನೀಡಿದ ದೂರಿನ ಮೇರೆಗೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರೀತಿಸಿದ ಹುಡುಗಿ ಜೊತೆಯೇ ಮದುವೆಯಾದ ಕಾಮಿಡಿ ಕಲಾವಿದ ಸಂಜು ಬಸಯ್ಯ

    ಪ್ರೀತಿಸಿದ ಹುಡುಗಿ ಜೊತೆಯೇ ಮದುವೆಯಾದ ಕಾಮಿಡಿ ಕಲಾವಿದ ಸಂಜು ಬಸಯ್ಯ

    ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನೆಮಾತಾಗಿದ್ದ ರಂಗಭೂಮಿಯ ಹಾಸ್ಯ ಕಲಾವಿದ ಸಂಜು ಬಸಯ್ಯ (Sanju Basayya), ತಾವು ಪ್ರೀತಿಸುತ್ತಿದ್ದ (Love)ಹುಡುಗಿಯ ಜೊತೆ ಮದುವೆಯಾಗಿದ್ದಾರೆ. ಹಲವು ದಿನಗಳಿಂದ ಅವರು ಪಲ್ಲವಿ ಬಳ್ಳಾರಿ (Pallavi Bellary) ಎನ್ನುವವರನ್ನು ಪ್ರೀತಿಸುತ್ತಿದ್ದರು. ಇವರು ಪ್ರೀತಿಸುತ್ತಿದ್ದ ವಿಷಯ ಗಾಸಿಪ್ ಕಾಲಂನಲ್ಲಿ ಕೂಡ ಕಾಣಿಸಿಕೊಂಡಿತ್ತು. ಇದೀಗ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿರುವ ಸಂಜು ಬಸಯ್ಯ, ‘ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು’ ಎಂದು ಶುರು ಮಾಡಿ. ತಮ್ಮ ಲವ್ ಸ್ಟೋರಿಯನ್ನೂ ಕೂಡ ಬಹಿರಂಗಗೊಳಿಸಿದ್ದಾರೆ. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

    ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು  ತೆರೆ ಎಳೆದಿದ್ದೆವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು, ಆ ಪರಿಚಯ ಸ್ನೇಹವಾಗಿ, ಸ್ನೇಹ  ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ. ಈಗ ನಾವಿಬ್ಬರು ಕಾನೂನಬದ್ದವಾಗಿ, ಅಧಿಕೃತವಾಗಿ, ರಿಜಿಸ್ಟರ್ ಮ್ಯಾರೇಜ್ (Marriage) ಆಗಿದ್ದೇವೆ.

    ನಮ್ಮ, ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ. ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ. ನಿಜವಾದ ಪ್ರೀತಿಗೆ ಯಾವುದೇ ಜಾತಿ, ಧರ್ಮ, ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ. ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ ಎನ್ನುವುದಕ್ಕೆ ನಾವೇ ಕಾರಣ ಎಂದು ಸಂಜು ಮತ್ತು ಪಲ್ಲವಿ ಬರೆದುಕೊಂಡಿದ್ದಾರೆ.

  • ಶುಭ್ ಮನ್ ಗಿಲ್-ಸಾರಾ ಅಲಿಖಾನ್ ನಡುವಿನ ಪ್ರೇಮದಲ್ಲಿ ಬಿರುಕು

    ಶುಭ್ ಮನ್ ಗಿಲ್-ಸಾರಾ ಅಲಿಖಾನ್ ನಡುವಿನ ಪ್ರೇಮದಲ್ಲಿ ಬಿರುಕು

    ಬಾಲಿವುಡ್ ನಟ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿ ಖಾನ್ (Sara Ali Khan) ಹಾಗೂ ಕ್ರಿಕೆಟಿಗ ಶುಭ್ ಮನ್ (Shubh Man Gill) ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವುದು ಹಳೆಯ ಸುದ್ದಿ. ಈ ಸುದ್ದಿಗೆ ಪುಷ್ಠಿ ಕೊಡುವಂತೆ ಇಬ್ಬರೂ ಸಾಕಷ್ಟು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ತಾಜಾ ಸಾಮಾಚಾರ ಎಂದರೆ, ಇಬ್ಬರ ನಡುವಿನ ಲವ್ ಬ್ರೇಕ್ ಅಪ್ ಆಗಿದೆ ಎನ್ನುವುದು. ಇಬ್ಬರೂ ಡೇಟ್ (Dating) ಮಾಡುತ್ತಿದ್ದಾರಾ, ಇಲ್ಲವಾ ಎನ್ನುವ ಅನುಮಾನದ ನಡುವೆಯೇ ಇಬ್ಬರೂ ದೂರವಾಗಿದ್ದು ಮಾತ್ರ ನಿಜ.

    ಶುಭ್ ಮನ್ ಗಿಲ್ ಮತ್ತು ಸಾರಾ ಅಲಿಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿದ್ದರು. ಹಲವು ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದರು. ಇದೀಗ ಇಬ್ಬರೂ ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಇಬ್ಬರೂ ಒಬ್ಬರಿಗೊಬ್ಬರು ಅನ್ ಫ್ರೆಂಡ್ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರೀತಿಯ ಪಾರಿವಾಳ ಹಾರಿ ಹೋಗಿದೆ ಎಂದು ಹೇಳಲಾಗುತ್ತಿದೆ.

    ಬಿಟೌನ್‌ನ ಸಾಲು ಸಾಲು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಸೈಫ್ ಅಲಿ ಖಾನ್ ಪುತ್ರಿ ಸಾರಾ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿ ಸುದ್ದಿಯಲ್ಲಿದ್ದರು.  ಮುಂಬೈ ಮತ್ತು ದೆಹಲಿಯಲ್ಲಿ ಶುಭ್ ಮನ್ ಗಿಲ್ ಮತ್ತು ಸಾರಾ ಪದೇ ಪದೇ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಇಬ್ಬರ ಲವ್ವಿ ಡವ್ವಿ ವಿಚಾರವನ್ನು ಬಹಿರಂಗಗೊಳಿಸಿದ್ದರು.

    ಇತ್ತೀಚೆಗೆ ಮುಂಬೈನ ಬಾಸ್ಟಿಯನ್ ರೆಸ್ಟೋರೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಡಿನ್ನರ್ ಮಾಡಿದ್ದರು. ನಂತರ ದೆಹಲಿಯಲ್ಲಿ ಈ ಜೋಡಿ ಕಾಣಿಸಿಕೊಂಡಿತ್ತು. ಕ್ಯಾಶುಯಲ್ ಉಡುಗೆಯಲ್ಲಿ ದೆಹಲಿ ಹೋಟೆಲ್‌ನಿಂದ ಇಬ್ಬರು ನಿರ್ಗಮಿಸಿದ್ದರು. ಬಳಿಕ ವಿಮಾನದಲ್ಲಿ ಅಭಿಮಾನಿಗಳಿಗೆ ಸೆಲ್ಫಿ ಕೊಡುತ್ತಿರುವ ವೀಡಿಯೋವೊಂದು ಸಖತ್ ವೈರಲ್ ಆಗಿತ್ತು.

    ಸದ್ಯ ಬಿಟೌನ್‌ನಲ್ಲಿ ಸಾರಾ ಮತ್ತು ಶುಭಮನ್ ಗಿಲ್ ಲವ್ವಿ ಡವ್ವಿ ಬ್ರೇಕ್ ಅಪ್ (Breakup) ವಿಚಾರವೇ ಸಖತ್ ಸೌಂಡ್ ಮಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ  ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.