Tag: ಲಹರಿ ಸಂಸ್ಥೆ

  • ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ (Sanchit Sanjeev) ಇಂದು ಅಧಿಕೃತವಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಸಂಚಿತ್ ಸಂಜೀವ ನಟಿಸಿ, ನಿರ್ದೇಶನ ಮಾಡಲಿರುವ ಚಿತ್ರಕ್ಕೆ ಇಂದು ಬೆಂಗಳೂರಿನ ಗವಿಪುರಂನ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ (Muhurta) ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅತಿಥಿಯಾಗಿ ಆಗಮಿಸಿದ್ದರು.

    ಪ್ರಿಯಾ ಸುದೀಪ್, ಲಹರಿ ಸಂಸ್ಥೆ ಹಾಗೂ ಕೆ.ಪಿ.ಶ್ರೀಕಾಂತ್ (K.P. Srikanth) ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನಟನೆಯ ಜೊತೆ ಸಂಚಿತ್ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ. ಕ್ರೈಂ-ಡ್ರಾಮಾ ಆಧರಿಸಿದ ಸಿನಿಮಾದಲ್ಲಿ ತಂದೆ ಮಗನ ಸೆಂಟಿಮೆಂಟ್ ಇದೆಯಂತೆ. ಸುದೀಪ್ (Kichcha Sudeep) ಸಲಹೆಯಂತೆ ಸಂಚಿತ್ ಈ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರಂತೆ. ಬಹುತೇಕ ಹೊಸಬರೇ ಕೂಡಿಕೊಂಡು ಈ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಇದನ್ನೂ ಓದಿ:‘ಗೀತಾ ಗೋವಿಂದಂ’ ತಂಡದಿಂದ ಹೊಸ ಚಿತ್ರ- ರಶ್ಮಿಕಾ ಬದಲು ವಿಜಯ್‌ಗೆ ನಾಯಕಿಯಾದ ಮೃಣಾಲ್

    ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಅದು ನೆರವೇರಿದೆ. ಹಾಗಂತ ಸಂಚಿತ್ ದಿಢೀರ್ ಅಂತ ಸಿನಿಮಾ ರಂಗಕ್ಕೆ ಬರುತ್ತಿಲ್ಲ. ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಜೊತೆಗೆ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ.

     

    ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್‌ನ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯ ‘ಯುಐ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಮರುಜೀವ ಕೊಟ್ಟಿದ್ದಾರೆ. ಈ ಜೋಡಿಯ ಯಾದಿಗೆ ಇದೊಂದು ಚಿತ್ರ ಸೇರ್ಪಡೆಯಾಗಿದೆ.

  • ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿಯ ಮೂಲಕ ಇಡೀ ದೇಶಕ್ಕೆ ಗೌರವ ತಂದಿದ್ದಾರೆ: ರವಿಚಂದ್ರನ್

    ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿಯ ಮೂಲಕ ಇಡೀ ದೇಶಕ್ಕೆ ಗೌರವ ತಂದಿದ್ದಾರೆ: ರವಿಚಂದ್ರನ್

    ಬೆಂಗಳೂರು: ಲಹರಿ ಸಂಸ್ಥೆಗೆ ದೊಡ್ಡ ಇತಿಹಾಸ ಇದೆ. ಇಂದು ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಅವರು ಇಡೀ ದೇಶಕ್ಕೆ ಗೌರವ ತಂದಿದ್ದಾರೆ ಎಂದು ನಟ ರವಿಚಂದ್ರನ್ ಹೇಳಿದರು.

    ಲಹರಿ ಆಡಿಯೋ ಸಂಸ್ಥೆ ಬಗ್ಗೆ ಮಾತನಾಡಿದ ಅವರು, ಲಹರಿ ಸಂಸ್ಥೆ ಸಂಗೀತಕ್ಕೆ ಕೋಟಿ ಕೋಟಿ ಸುರಿದಿದ್ದಾರೆ. ಲಹರಿ ಸಂಸ್ಥೆಯ ಮಾಲೀಕ ಮನೋಹರ್ ಅವರು ಅಳೆದು ತೂಗಿ ವ್ಯವಹಾರ ಮಾಡುತ್ತಾರೆ. ಅಪ್ಪ ಕೊಟ್ಟ ಕೈ ಇದು, ಆ ಕೈಯಿಂದ ಯಾರನ್ನು ಬೆನ್ನು ತಟ್ಟಿದ್ರೋ ಅವರು ಎತ್ತರಕ್ಕೆ ಹೋಗುತ್ತಾರೆ ಎಂದರು.

    ಕೆಜಿಎಫ್ 2 ಚಿತ್ರವನ್ನು ಸಿನಿಮಾ ಇಂದು ಇಡೀ ವಿಶ್ವ ಮಾತಾಡುತ್ತಿದೆ. ಕೆಜಿಎಫ್ ದಾಖಲೆ ಮುರಿಯೋದೆ ನಮ್ಮೆಲ್ಲರ ಗುರಿ ಆಗಿರಬೇಕು. ಕೆಜಿಎಫ್ ದಾಖಲೆ ಮಾಡಿದೆ. ಕೋಟಿ ಖರ್ಚು ಮಾಡಿದ್ದಾರೆ. ಅವರಿಗೆ ಟಿಕೆಟ್ 2 ಸಾವಿರ ತೆಗೆದುಕೊಳ್ಳುವ ಅಧಿಕಾರ ಇದೆ ಎಂದು ಸಿನಿಮಾ ಬಗ್ಗೆ ನಟ ಹೆಮ್ಮೆ ವ್ಯಕ್ತಪಡಿಸಿದರು.

    ಯಾವಾಗಲೂ ನಾವು ಅದೇ ತರ ದೊಡ್ಡದಾಗಿಯೇ ಯೋಚನೆ ಮಾಡಬೇಕು. 40 ವರ್ಷದ ಹಿಂದೆ ನಾನು ಇದಕ್ಕೆ ಯೋಚನೆ ಮಾಡಿದ್ದು, ಇಂದು ಕೆಜಿಎಫ್ ನಿಂದ ಇಡೀ ಪ್ರಪಂಚ ನಮ್ಮ ಕಡೆ ತಿರುಗಿ ನೋಡಿದೆ. ಕೆಜಿಎಫ್ ಯಶಸ್ಸನ್ನು ನಾವೆಲ್ಲಾ ಸಂಭ್ರಮಿಸೋಣ ಎಂದು ರವಿಚಂದ್ರನ್ ಕರೆ ನೀಡಿದರು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಇದೇ ವೇಳೆ ಲಹರಿ ಸಂಸ್ಥೆ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾತನಾಡಿ, ಲಹರಿ ಸಂಸ್ಥೆ ನಮ್ಮಲ್ಲೂ ಒಳ್ಳೆಯ ಬೆಲೆಗೆ ಆಡಿಯೋ ಕೊಂಡುಕೊಳ್ಳುತ್ತಿದ್ದರು. ಅವರು ಯಾಮಾರಿಸುತ್ತಿರಲಿಲ್ಲ, ಬಹಳ ಸುಲಭವಾಗಿ ಯಾಮಾರಿಸಬಹುದಿತ್ತು. ಆದರೆ ಅವರು ಹಾಗೆ ಮಾಡುತ್ತಿರಲಿಲ್ಲ ಎಂದರು. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ಬಳಿಕ ಶಿವಣ್ಣ ಜನುಮದ ಜೋಡಿ “ಇವಳ್ಯಾರೋ ಮಗಳೋ ಹಿಂಗಳವ್ಳಲ್ಲ” ಎಂಬ ಹಾಡು ಹಾಡಿ ರಂಜಿಸಿದರು. ಅಲ್ಲದೆ “ರಾಜ್ ಕುಮಾರ್ ಮಗನೋ ಶಿವರಾಜ್ ಕುಮಾರ್ “ಎಂದು ತಾವೇ ಲಿರಿಕ್ಸ್ ಬದಲಾಯಿಸಿಕೊಂಡು ಹಾಡಿದರು. ಇದನ್ನೂ ಓದಿ: ಲಿಫ್ಟ್‌ನಲ್ಲಿ ಹೋಗುವುದೆಂದರೆ ನನಗೆ ಭಯ: ಅಜಯ್ ದೇವಗನ್

    ಕನ್ನಡದ ಪ್ರತಿಷ್ಠಿತ ಲಹರಿ ಸಂಸ್ಥೆ ‘ಗ್ರ್ಯಾಮಿ’ ಪ್ರಶಸ್ತಿ ಪಡೆದುಕೊಂಡಿದೆ. ಲಹರಿ ಸಂಸ್ಥೆಯಿಂದ ರಿಲೀಸ್ ಆಗಿದ್ದ “ಡಿವೈನ್ ಟ್ರೈಡ್ಸ್” ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ಲಭಿಸಿದ್ದು, ಈ ವಿಶೇಷ ಆಲ್ಬಂ ಸಂಗೀತ ನಿರ್ದೇಶಕ ‘ರಿಕ್ಕಿಕೇಜ್’ ಅವರಿಗೆ ರಾಜ್ಯ ಸರ್ಕಾರ ಪ್ರಶಸ್ತಿ ಪ್ರದಾನ ಮಾಡಿತ್ತು. ಈ ಸಂಬಂಧ ಇಂದು ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಹಾಗೂ ಲಹರಿ ವೇಲು ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ರಿಕಿ ಕೇಜ್, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್ . ಆರ್ ರಂಗನಾಥ್ ಹಾಗೂ ಸಿಇಓ ಅರುಣ್, ಸಿಎಂ ಬಸವರಾಜ್ ಬೊಮ್ಮಾಯಿ ಲಹರಿಯ ಸಾಧನೆಯನ್ನ ಸ್ಮರಿಸಿದ್ರು.

  • ಲಹರಿ ಸಂಸ್ಥೆ ನಿರ್ಮಿಸಿದ ಆಲ್ಬಂಗೆ 2022ರ ಗ್ರ್ಯಾಮಿ ಪ್ರಶಸ್ತಿ

    ಲಹರಿ ಸಂಸ್ಥೆ ನಿರ್ಮಿಸಿದ ಆಲ್ಬಂಗೆ 2022ರ ಗ್ರ್ಯಾಮಿ ಪ್ರಶಸ್ತಿ

    ಬೆಂಗಳೂರು: ರಿಕ್ಕಿ ಕೇಜ್ ಮತ್ತು ಅಮೆರಿಕದ ರಾಕ್ ಲೆಜೆಂಡ್ ಸ್ಟೀವರ್ಟ್ ಕೋಪ್ಲೆಂಡ್ ಜಂಟಿಯಾಗಿ ಸಂಯೋಜಿಸಿ, ಹಾಡಿರುವ ಡಿವೈನ್ ಟೈಡ್ಸ್ (ದೈವಿಕ ಅಲೆಗಳು) ಆಲ್ಬಂ ವಿಶ್ವದ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದೆ.

    ನ್ಯೂ ಏಜ್ ಆಲ್ಬಂ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದ್ದ ಡಿವೈನ್ ಟೈಡ್ಸ್ ಆಲ್ಬಂ ಎಂಟು ಹಾಡುಗಳನ್ನು ಒಳಗೊಂಡಿದ್ದು, ಇದನ್ನು ಕನ್ನಡದ ಹೆಮ್ಮೆಯ ಆಡಿಯೋ ಸಂಸ್ಥೆ ಲಹರಿ ಸಂಸ್ಥೆ ನಿರ್ಮಾಣ ಮಾಡಿತ್ತು ಮತ್ತು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ರಿಕ್ಕಿ ಕೇಜ್ ಸಂಯೋಜಿಸಿದ್ದರು. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಸಂಗೀತ ಲೋಕದಲ್ಲಿ ಸಾಧನೆ ಮಾಡಿದವರಿಗೆ ಕೊಡುವ ಪ್ರಶಸ್ತಿ ಗ್ರಾಮಿ ಅವಾಡ್ರ್ಸ್ ಆಗಿದ್ದು, ಲಹರಿ ಸಂಸ್ಥೆ ಇದೇ ಮೊದಲ ಬಾರಿಗೆ ಗ್ರಾಮಿ ಪ್ರಶಸ್ತಿ ಪಡೆದ ಸಂತಸದಲ್ಲಿದ್ದರೆ, ರಿಕ್ಕಿ ಅವರು ಎರಡನೇ ಬಾರಿಗೆ ಗ್ರಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಹಿಂದೆ ಅಂದ್ರೆ 2015ರಲ್ಲಿ ವಿಂಡ್ಸ್ ಆಫ್ ಸಂಸಾರ ಆಲ್ಬಂಗೆ ಇದೇ ವಿಭಾಗದಲ್ಲಿ ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿ ಗೆದ್ದಿದ್ದರು. ಇದು ಕೂಡ ಭಕ್ತಿಗೆ ಸಂಬಂಧಿಸಿದ್ದಾಗಿತ್ತು. ಇದನ್ನೂ ಓದಿ: ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

  • RRR ಆಡಿಯೋ ಖರೀದಿ -ಒಪ್ಪಂದಕ್ಕೆ ಸಹಿ ಹಾಕಿದ ಲಹರಿ ಸಂಸ್ಥೆ

    RRR ಆಡಿಯೋ ಖರೀದಿ -ಒಪ್ಪಂದಕ್ಕೆ ಸಹಿ ಹಾಕಿದ ಲಹರಿ ಸಂಸ್ಥೆ

    ಬೆಂಗಳೂರು: ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರ ಬಹುನಿರೀಕ್ಷಿತ RRR ಚಿತ್ರದ ಆಡಿಯೋ ಪಡೆದುಕೊಂಡ ಒಪ್ಪಂದಕ್ಕೆ ಲಹರಿ ಸಂಸ್ಥೆ ಇಂದು ಸಹಿ ಹಾಕಿದೆ.

    ಕೆಲದಿನಗಳ ಹಿಂದೆ ಲಹರಿ ಸಂಸ್ಥೆ ಆರ್‍ಆರ್‍ಆರ್ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿತ್ತು. ಇದೀಗ ಲಹರಿ ಸಂಸ್ಥೆಯು ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಆರ್‍ಆರ್‍ಆರ್ ಅಗ್ರಿಮೆಂಟ್ ಗೆ ಸೈನ್ ಮಾಡಿರುವ ಅಧಿಕೃತವಾಗಿ ಪತ್ರವನ್ನು ಪಡೆಯುವ ಮೂಲಕ ಹಕ್ಕನ್ನು ಪಡೆದುಕೊಂಡಿದೆ. ಆಗಸ್ಟ್ 1ರ ಬೆಳಗ್ಗೆ 11 ಗಂಟೆಗೆ ಆರ್‍ಆರ್‍ಆರ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಲಿದೆ. ಇದನ್ನೂ ಓದಿ: RRR ಆಡಿಯೋ ರೈಟ್ಸ್ ಲಹರಿ ಪಾಲು

    ಲಹರಿ ಸಂಸ್ಥೆ ಹೈದರಾಬಾದ್‍ನಲ್ಲಿ ಲಿಖಿತವಾಗಿ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದ್ದು, ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕೀರವಾಣಿ ಜೊತೆ ಸಭೆಯಲ್ಲಿ ಭಾಗಿಯಾಗಿದ್ದರು. 28 ಕೋಟಿ ರೂ.ಗೆ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಖರೀದಿಸಿದೆ ಎಂದು ತಿಳಿದು ಬಂದಿದೆ.

    ಆರ್‌ಆರ್‌ಆರ್‌ ಚಿತ್ರದ ಆಡಿಯೋ ಹಕ್ಕನ್ನು ಭಾರೀ ಮೊತ್ತಕ್ಕೆ ಖರೀದಿಸಲಾಗಿದೆ. ಒಟ್ಟು 5 ಭಾಷೆಗಳಲ್ಲಿ ಆರ್‌ಆರ್‌ಆರ್‌ ತೆರೆಕಾಣುತ್ತಿದ್ದು, ಐದೂ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಹಾಗೂ ಟಿ ಸಿರೀಸ್ ತಮ್ಮ ಜೋಳಿಗೆಗೆ ಹಾಕಿಕೊಂಡಿವೆ. ಬಾಹುಬಲಿ ಚಿತ್ರದ ಆಡಿಯೋ ಹಕ್ಕನ್ನೂ ಇದೇ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿತ್ತು.  ಇದನ್ನೂ ಓದಿ: RRR ಸಿನಿಮಾದ ಒಂದು ಸಾಂಗ್ ಶೂಟ್‍ಗೆ ರಾಜಮೌಳಿ ಬೃಹತ್ ಪ್ಲಾನ್

    ಈಗಾಗಲೇ ಆರ್‌ಆರ್‌ಆರ್‌ ಸಿನಿಮಾದ ಚಿತ್ರೀಕರಣ ಕೊನೇಯ ಹಂತ ತಲುಪಿದ್ದು, ಇದೇ ಆಗಸ್ಟ್ 1 ರಂದು ವಿಶೇಷ ಹಾಡನ್ನು ಬಿಡುಗಡೆಗೊಳಿಸಲು ಚಿತ್ರ ತಂಡ ಸಿದ್ಧತೆ ನಡೆಸಿದೆ. ಇದರ ಮಧ್ಯೆಯೇ ಜುಲೈ 15ರಂದು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲು ಸಹ ತಯಾರಿ ನಡೆದಿದೆ. ಈ ಮೇಕಿಂಗ್ ವೀಡಿಯೋ ನಿಮ್ಮನ್ನು ಆರ್‍ಆರ್‍ಆರ್ ಪ್ರಪಂಚಕ್ಕೆ ಕೊಂಡೊಯ್ಯಲಿದ್ದು, ಈ ಮೂಲಕ ಚಿತ್ರವನ್ನು ಹೇಗೆ ನಿರ್ಮಿಸಲಾಗಿದೆ ಎಂಬುದರ ಝಲಕ್ ತೋರಿಸಲಾಗುತ್ತಿದೆ.

    ಹೀಗೆ ಆರ್‌ಆರ್‌ಆರ್‌ ಸಿನಿಮಾ ಕುರಿತು ಚಿತ್ರ ತಂಡ ಬ್ಯಾಕ್ ಟು ಬ್ಯಾಕ್ ಅಪ್‍ಡೇಟ್ ನೀಡುತ್ತಿದೆ. ಅಂದಹಾಗೆ ಬಹುನಿರೀಕ್ಷಿತ ಆರ್‍ಆರ್‍ಆರ್ ಸಿನಿಮಾ ಅಕ್ಟೋಬರ್ 13ರಂದು ವಿಶ್ವಾದ್ಯಂತ ತೆರೆಗಪ್ಪಳಿಸುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ. ಹೀಗಾಗಿ ಅಭಿಮಾನಿಗಳು ಆರ್‍ಆರ್‍ಆರ್ ಅಪ್‍ಡೇಟ್ಸ್‍ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

  • ಐದು ಭಾಷೆ, 65 ಸಿಂಗರ್ಸ್, ಒಂದು ಹಾಡು – ಲಹರಿ ಸಂಸ್ಥೆಯಿಂದ ವಿಶೇಷ ಗೀತೆ ಬಿಡುಗಡೆ

    ಐದು ಭಾಷೆ, 65 ಸಿಂಗರ್ಸ್, ಒಂದು ಹಾಡು – ಲಹರಿ ಸಂಸ್ಥೆಯಿಂದ ವಿಶೇಷ ಗೀತೆ ಬಿಡುಗಡೆ

    – ಕನ್ನಡಿಗರು ಎಂದೆಂದಿಗೂ ಭಾರತಕ್ಕಾಗಿ ನಿಲ್ಲುವೆವು

    ಬೆಂಗಳೂರು: ಲಹರಿ ಸಂಸ್ಥೆಯಿಂದ ಸ್ವಾತಂತ್ರ ದಿನಾಚರಣೆಗೆ ವಿಶೇಷವಾದ ‘ಒಟ್ಟಿಗೆ ಒಂದಾಗಿ..’ ಎಂಬ ಹಾಡೊಂದನ್ನು ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗಿದೆ.

    ಈ ಹಾಡನ್ನು ಸುಮಾರು 65 ಸಿಂಗರ್‍ಗಳು ಹಾಡಿದ್ದು, 5 ಭಾಷೆಯಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡು ಕನ್ನಡ, ಹಿಂದಿ, ತಮಿಳು, ತೆಲಗು ಹಾಗೂ ಮಲಯಾಳಂ ಭಾಷೆಯಲ್ಲಿ ಹಾಡಲಾಗಿದೆ. ಈ ಹಾಡು ಲಹರಿ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಹಾಡು ಭಾರತದವರಾದ ನಾವು ಎಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದೆ.

    ಈ ಹಾಡನ್ನು ರಾಕಿಂಗ್ ಸ್ಟಾರ್ ಯಶ್, ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್, ನಟ ರಾಮ್‍ಚರಣ್ ಮತ್ತು ಮಾಲಿಯಾಳಂ ನಟ ಮೋಹನ್ ಲಾಲ್ ಬಿಡುಗಡೆ ಮಾಡಿದ್ದಾರೆ. ಕನ್ನಡದ ಹೆಸರಾಂತ ಸಿಂಗರ್‍ಗಳಾದ ವಿಜಯ್ ಪ್ರಕಾಶ್ ಮತ್ತು ರಾಜೇಶ್ ಕೃಷ್ಣನ್ ಸೇರಿದಂತೆ ಹಲವಾರು ಗಾಯಕ ಮತ್ತು ಗಾಯಕಿಯರು ದನಿಗೂಡಿಸಿದ್ದಾರೆ. ದಿಗ್ಗಜ ಗಾಯಕ ಎಸ್‍ಪಿ ಬಾಲಸುಬ್ರಮಣ್ಯಂ ಅವರು ಮೊದಲ ಸಾಲನ್ನು ಹಾಡಿದ್ದಾರೆ. ಜೊತೆಗೆ ಬೇರೆ ಬೇರೆ ಭಾಷೆಯ ಹಲವಾರು ಯುವ ಮತ್ತು ಹಿರಿಯ ಗಾಯಕರು ಈ ಹಾಡಿಗೆ ದನಿಯಾಗಿದ್ದಾರೆ.

    ಈ ಹಾಡನ್ನು ಇಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬಿಡುಗಡೆ ಮಾಡಿದ್ದು, ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಕಿಂಗ್ ಸ್ಟಾರ್ ಯಶ್, ಯುನೈಟೆಡ್ ಸಿಂಗರ್ಸ್ ಚಾರಿಟೇಬಲ್ ಟ್ರಸ್ಟ್ ಒಂದು ದೊಡ್ಡ ಕಾರಣಕ್ಕಾಗಿ ಈ ಹಾಡನ್ನು ಮಾಡಿದೆ. ಈ ಕಷ್ಟದ ಸಮಯದಲ್ಲಿ ಅನೇಕ ಅದ್ಭುತ 65 ಗಾಯಕರು ಸೇರಿ ಈ ಒಟ್ಟಿಗೆ ಒಂದಾಗಿ ಎಂಬ ಹಾಡನ್ನು ತಯಾರಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿ ಹಾಡಿನ ಯುಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

    ರಾಮ್‍ಚರಣ್ ಅವರು ಕೂಡ ಟ್ವೀಟ್ ಮಾಡಿದ್ದು, ಈ ಕಷ್ಟದ ಸಮಯದಲ್ಲಿ ಏಕತೆಯನ್ನು ತೋರಿಸುವ ‘ಒಟ್ಟಿಗೆ ಒಂದಾಗಿ..’ ಎಂಬ ಹಾಡನ್ನು ಬಿಡುಗಡೆ ಮಾಡುತ್ತಿರುವುದು ಸಂತೋಷವಾಗಿದೆ. 65 ಗಾಯಕರು ಒಟ್ಟಾಗಿ ಇದನ್ನು ಒಂದು ಪ್ರಮುಖ ಕಾರಣಕ್ಕಾಗಿ ಹಾಡಿದ್ದಾರೆ ಎಂದಿದ್ದಾರೆ. ಎ.ಆರ್ ರೆಹಮಾನ್ ಮತ್ತು ಮೋಹನ್ ಲಾಲ್ ಕೂಡ ಟ್ವೀಟ್ ಮಾಡಿದ್ದು, ಈ ಹಾಡನ್ನು ಬಿಡುಗಡೆ ಮಾಡಿದಕ್ಕೆ ಸಂತೋಷವಾಗಿದೆ. ಒಂದು ಒಳ್ಳೆಯ ಕಾರಣಕ್ಕೆ 65 ಜನ ಗಾಯಕರು ಈ ಹಾಡನ್ನು ಹಾಡಿದ್ದಾರೆ ಎಂದಿದ್ದಾರೆ.

  • ವಿಧಿ ಎಷ್ಟು ಕ್ರೂರಿ – ‘ಖಾಕಿ’ ವೇಳೆ ಚಿರು ಜೊತೆಗಿನ ಅನುಭವ ಹಂಚಿಕೊಂಡ ಲಹರಿ ವೇಲು

    ವಿಧಿ ಎಷ್ಟು ಕ್ರೂರಿ – ‘ಖಾಕಿ’ ವೇಳೆ ಚಿರು ಜೊತೆಗಿನ ಅನುಭವ ಹಂಚಿಕೊಂಡ ಲಹರಿ ವೇಲು

    ಬೆಂಗಳೂರು: ತುಂಬಾ ಹೃದಯವಂತಿಕೆಯಿಂದ ಇದ್ದರು. ವಿಧಿ ಎಷ್ಟು ಕ್ರೂರಿ, ಜೀವನ ಎಂದರೆ ಇಷ್ಟೆನಾ ಎನಿಸುತಿದೆ ಎಂದು ಲಹರಿ ಸಂಸ್ಥೆಯ ಮುಖ್ಯಸ್ಥ ನೋವಿನಿಂದ ಮಾತನಾಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು, ನನಗೆ ಚಿರಂಜೀವಿ ಸಾವಿನ ಸುದ್ದಿ ಬಂದಾಗ ತಮಾಷೆ ಮಾಡುತ್ತಿದ್ದೀರ ಎಂದು ಕೋಪ ಮಾಡಿಕೊಂಡೆ. ನಂತರ ಮಾಧ್ಯಮ ನೋಡಿದಾಗ ನನಗೂ ಶಾಕ್ ಆಯಿತು. ಇದನ್ನೂ ಈಗಲೂ ನಂಬಲು ನನಗೆ ಸಾಧ್ಯವಾಗುತ್ತಿಲ್ಲ. ನನ್ನಿಂದ ಮಾತ್ರವಲ್ಲ ಈಗಾಗಲೇ ನೂರಾರು ಜನರು ನನಗೆ ಫೋನ್ ಮಾಡಿ ಇದು ನಿಜನಾ ಎಂದು ಕೇಳುತ್ತಿದ್ದಾರೆ ಎಂದು ಹೇಳಿದರು.

    ಎರಡು ತಿಂಗಳ ಹಿಂದೆಯಷ್ಟೆ ಚಿರಂಜೀವಿ ಸರ್ಜಾರ ಅಭಿನಯದ ‘ಖಾಕಿ’ ಸಿನಿಮಾದಲ್ಲಿ ನಾನು ಮಾಡಿದ್ದೆ. ಸುಮಾರು 15 ದಿನಗಳ ಕಾಲ ಅವರ ಜೊತೆ ಒಟ್ಟಿಗೆ ಕೆಲಸ ಮಾಡಿದ್ದೇನೆ. ತುಂಬಾ ಹೃದಯವಂತಿಕೆಯಿಂದ ಇದ್ದರು. ಜೀವನ ಎಂದರೆ ಇಷ್ಟೆನಾ, ವಿಧಿ ಎಷ್ಟು ಕ್ರೂರವಾಗಿದೆ ಎಂದು ನೋವಿನಿಂದ ಮಾತನಾಡಿದರು.

    ‘ಖಾಕಿ’ ಸಿನಿಮಾ ಚಿತ್ರೀಕರಣದ ವೇಳೆ ನೀವು ತುಂಬಾ ಫಿಟ್ ಆಗಿದ್ದೀರ. ನಾನು ಕೂಡ ಜಿಮ್ ಮಾಡುತ್ತಿದ್ದೀನಿ. ಫಿಟ್ ಆಗುತ್ತೇನೆ ಎಂದಿದ್ದರು. ಪ್ರತಿಯೊಬ್ಬರ ಜೊತೆಯೂ ಒಂದೇ ರೀತಿ ಇದ್ದರು. ನಟ ಎಂಬ ಯಾವುದೇ ಅಹಂ ಇರಲಿಲ್ಲ. ಈ ಕೊರೊನಾ ಬಂದು ಎಲ್ಲರನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿದೆ. ಮೊನ್ನೆ ನಿಸಾರ್ ಅಹಮದ್ ನಮ್ಮನ್ನು ಅಗಲಿ ಹೋದರು. ಈಗ ಚಿರಂಜೀವಿ. ಮೊನ್ನೆ ಮೊನ್ನೆಯವರೆಗೆ ನಮ್ಮ ಜೊತೆ ಇದ್ದವರು ನಿಧನರಾಗುತ್ತಿರುವುದನ್ನು ನೋಡಿ ಶಾಕ್ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಮಹಾಮಾರಿ ಕೊರೊನಾ ಬಂದ ಸಂದರ್ಭದಲ್ಲಿ ಇಫ್ರಾನ್ ಖಾನ್, ನಂತರ ವಾಜೀದ್ ಖಾನ್, ಈಗ ಚಿರಂಜೀವಿ ಸರ್ಜಾ ಅಗಲಿದ್ದಾರೆ. ಹೀಗಾಗಿ ಈ ಮಾಹಾಮಾರಿ ಕೊರೊನಾ ಬಂದು ಒಬ್ಬೊಬ್ಬರಂತೆ ಕರೆದುಕೊಂಡು ಹೋಗುತ್ತಿದೆ ಎಂದು ಕೊರೊನಾ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

  • ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

    ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

    ಟಾಲಿವುಡ್‍ನ ‘ಸೈರಾ ನರಸಿಂಹ ರೆಡ್ಡಿ’ ಭಾರತೀಯ ಚಿತ್ರರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾವಾಗಿದೆ. ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಇದು ತೆರೆ ಕಾಣಲಿದೆ. ಸದ್ಯ ಆಡಿಯೋ ಹಕ್ಕುಗಳ ವಿಚಾರವಾಗಿ ಎಲ್ಲರ ಚಿತ್ತವಿತ್ತು. ಈಗ ಈ ಸಿನಿಮಾದ ಆಡಿಯೋ ಹಕ್ಕು ಯಾರ ಪಾಲಾಗಲಿದೆ ಎಂಬ ನಿರೀಕ್ಷೆಗೆ ತೆರೆ ಬಿದ್ದಿದೆ. ಕನ್ನಡದ ಅತಿ ಹೆಚ್ಚು ಹಾಡುಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಲಹರಿ ಸಂಸ್ಥೆ ‘ಸೈರಾ’ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತ ಕೊಟ್ಟು ಖರೀದಿಸಿದೆ.

    ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯ ಸೈರಾ ಸಿನಿಮಾದ ಆಡಿಯೋ ಹಕ್ಕು ಲಹರಿ ಸಂಸ್ಥೆ ಮಡಿಲಿಗೆ ಬಿದ್ದಿದೆ. ಈ ಹಕ್ಕುಗಳನ್ನು ಕೊಳ್ಳಲು ಹಲವಾರು ಕಂಪನಿಗಳು ತುದಿಗಾಲಲ್ಲಿ ನಿಂತಿದ್ದವು. ಆದರೆ ಎಲ್ಲರನ್ನು ಹಿಮ್ಮೆಟ್ಟಿಸಿ ಮತ್ತೊಂದು ಬಿಗ್‍ಬಜೆಟ್ ಸಿನಿಮಾವನ್ನು ಈ ಸಂಸ್ಥೆ ತನ್ನದಾಗಿಸಿಕೊಂಡಿದೆ. ಲಹರಿ ಸಂಸ್ಥೆ ಬರೋಬ್ಬರಿ ಐದು ಕೋಟಿಗೆ ಸಿನಿಮಾದ ಆಡಿಯೂ ಹಕ್ಕನ್ನು ಖರೀದಿ ಮಾಡಿದೆ ಎಂದು ವರದಿಯಾಗಿದೆ.

    ಈಗಾಗಲೇ ಲಹರಿ ಆಡಿಯೋ ಸಂಸ್ಥೆ ಪಂಚಭಾಷೆಗಳ ಹಲವಾರು ಸ್ಟಾರ್‌ಗಳ ಸಿನಿಮಾ ಆಡಿಯೋ ಹಕ್ಕು ಖರೀದಿಸಿದೆ. ಹಾಗೇ ಯೂಟ್ಯೂಬ್ ಗೋಲ್ಡ್ ಮೆಂಬರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಲ್ಲೂ ಕನ್ನಡದ ಸಕ್ಸಸ್ ಫುಲ್ ಸಿನಿಮಾಗಳಾದ ಕೆ.ಜಿ.ಎಫ್, ಕುರುಕ್ಷೇತ್ರ, ಜಾಗ್ವಾರ್, ಕಿಲ್ಲಿಂಗ್ ವೀರಪ್ಪನ್, ಪೈಲ್ವಾನ್ ಸೇರಿದಂತೆ ಬಿಗ್ ಸ್ಟಾರ್‌ಗಳ ಸಿನಿಮಾದ ಆಡಿಯೋ ಹಕ್ಕನ್ನು ಕೊಂಡಿದೆ.