Tag: ಲಾಂಗ್

  • ವಿಕ್ರಾಂತ್ ರೋಣ ಪ್ರದರ್ಶನದ ವೇಳೆ ಲಾಂಗ್ ಹಿಡಿದು ಯುವಕರ ಮಾರಾಮಾರಿ

    ವಿಕ್ರಾಂತ್ ರೋಣ ಪ್ರದರ್ಶನದ ವೇಳೆ ಲಾಂಗ್ ಹಿಡಿದು ಯುವಕರ ಮಾರಾಮಾರಿ

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಥಿಯೇಟರ್ ನಲ್ಲಿ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಇತ್ತ ಚಿಕ್ಕ ಮಗಳೂರಿನಲ್ಲಿ ಅಹಿತಕರ ಘಟನೆ ನಡೆದಿದೆ. ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

    ಚಿಕ್ಕಮಗಳೂರಿನ ಮಿಲನ ಥಿಯೇಟರ್ ನಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನವಾಗುತ್ತಿತ್ತು. ಈ ಸಮಯದಲ್ಲಿ ಹುಡುಗರ ಗುಂಪೊಂದು ಚಿತ್ರಮಂದಿರದ ಹೊರಗೆ ಲಾಂಗ್ ನೊಂದಿಗೆ ಕಾಣಿಸಿಕೊಂಡಿದೆ. ಸಿನಿಮಾ ನೋಡುವುದಕ್ಕಾಗಿ ಬಂದಿದ್ದ ಭರತ್ ಎನ್ನುವವನ ಮೇಲೆ ಲಾಂಗ್ ನಿಂದ ಹಲ್ಲೆ ಮಾಡಲಾಗಿದೆ. ಥಿಯೇಟರ್ ಹೊರಾಂಗಣದಲ್ಲಿ ಈ ಮಾರಾಮಾರಿ ನಡೆದಿದ್ದು ಹಲ್ಲೆಗೊಳಗಾದ ಭರತ್ ನೆಲಕ್ಕೆ ಬಿದ್ದರೂ, ಬಿಡದ ಗುಂಪು ಮಾರಣಾಂತಿಕ ಹಲ್ಲೆ ಮಾಡಿದೆ. ಇದನ್ನೂ ಓದಿ:ನಿರ್ದೇಶಕ ಹೇಳಿದ ಮಾತು ಕೇಳದೇ ಆಸ್ಪತ್ರೆ ಸೇರಿದ ಕಿರಿಕ್ ನಟಿ ಸಂಯುಕ್ತ ಹೆಗ್ಡೆ

    ನೋಡು ನೋಡುತ್ತಿದ್ದಂತೆಯೇ ಥಿಯೇಟರ್ ಹೊರಾಂಗಣ ರಣರಂಗವಾಗಿ ಮಾರ್ಪಟ್ಟಿದ್ದು, ಥಿಯೇಟರ್ ನಲ್ಲಿ ನೆರದಿದ್ದವರು ಅವರನ್ನು ಬಿಡಿಸುವಂತಹ ಪ್ರಯತ್ನ ಕೂಡ ಮಾಡಿದ್ದಾರೆ. ಹಲ್ಲೆಯ ನಂತರ ತೀವ್ರ ಗಾಯಗೊಂಡಿದ್ದ ಭರತ್ ನನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ್ ಗೆ ರವಾನೆ ಮಾಡಲಾಗಿದೆ. ಹಾಸನದ ಆಸ್ಪತ್ರೆಯಲ್ಲಿ ಭರತ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ಬೆಂಗಳೂರು: ದುಷ್ಕರ್ಮಿಗಳು ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ಯುವಕನಿಗೆ ಲಾಂಗ್ ಮಚ್ಚು ತೋರಿಸಿ ದರೋಡೆ ಮಾಡಿದ ಘಟನೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 12 ಗಂಟೆಗೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಬೈಕ್‍ನಲ್ಲಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ರಾಜು ಎಂಬ ಯುವಕನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದು, ಮಧ್ಯರಾತ್ರಿ ದರೋಡೆ ಮಾಡಿದ್ದಾರೆ. ಪುಂಡರು ಯುವಕನ ಬಳಿ ಇದ್ದ ಮೊಬೈಲ್, ಹಣ ಸೇರಿ ಬೈಕ್ ಸಮೇತ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದಮ್ಮಯ್ಯ ಅಂತ ಬೇಡಿದರೂ ಬಿಡದೇ ಲಾಂಗ್ ಬೀಸಿ ಬೆದರಿಕೆ ಹಾಕಿದ್ದಾರೆ.  ಇದನ್ನೂ ಓದಿ: ಆಫ್‍ಲೈನ್ ಕ್ಲಾಸ್‍ಗೆ ಹೋಗು ಅಂದಿದ್ದಕ್ಕೆ ಹುಡುಗಿ ಆತ್ಮಹತ್ಯೆ

    5 ಮಂದಿ ದುಷ್ಕರ್ಮಿಗಳ ಕೃತ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೈಕ್. ಸರಗಳ್ಳತನ ಮಾಡುತ್ತಿದ್ದ 8 ಜನ ಆರೋಪಿಗಳು ಅರೆಸ್ಟ್

    ಬೈಕ್. ಸರಗಳ್ಳತನ ಮಾಡುತ್ತಿದ್ದ 8 ಜನ ಆರೋಪಿಗಳು ಅರೆಸ್ಟ್

    ಬೆಂಗಳೂರು: ರಾಜಧಾನಿಯಲ್ಲಿ ಬೈಕ್ ಹಾಗೂ ಸರಗಳ್ಳತನ ಮಾಡುತ್ತಿದ್ದ 8 ಜನ ಆರೋಪಿಗಳನ್ನು ನಗರದ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

    ದೊಂಬರಹಳ್ಳಿ ಮಂಜಕಳ್ ಮಂಜ, ದೀಪಕ್ ಪಾಕ, ಮನು, ದಯನಂದ್, ಮುನಿಸ್ವಾಮಿ, ಸತೀಶ್, ಕಳ್ ಮಂಜನ ಜೊತೆ ಸಹಕರಿಸಿದ್ದ ಅವನ ತಾಯಿ ಪ್ರೇಮಾ, ತಂಗಿ ಅನ್ನಪೂರ್ಣ ಬಂಧಿತ ಆರೋಪಿಗಳು.
    ಬಂಧಿತರಿಂದ 44 ಲಕ್ಷ ಬೆಲೆಬಾಳುವ 23 ಬೈಕ್, 2 ಕಾರು ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

    ಈ ಹಿಂದೆ ಬಾಡಿಗೆ ಮನೆ ನೋಡುವ ನೆಪದಲ್ಲಿ ಲಾಂಗ್ ತೋರಿಸಿ ಬೆದರಿಸಿ ಬಾಗಲಗುಂಟೆಯಲ್ಲಿ ಶಿಕ್ಷಕಿಯ ಸರಗಳವು ಮಾಡಿದ್ದರು. ಮಾದನಾಯಕನಹಳ್ಳಿಯಲ್ಲಿ ಬುಲೆಟ್ ಬೈಕ್‍ನಲ್ಲಿ ಮಹಿಳೆಯನ್ನ ಅಡ್ಡಗಟ್ಟಿ ಸರಗಳವು ಮಾಡಿದ್ದರು. ಕಳ್ಳತನ ಮಾಡುವ ವೇಳೆ ಏನೂ ಸಿಕ್ಕಿಲ್ಲ ಅಂದರೆ ಕುರಿ-ಮೇಕೆ, ಸಾಕಿದ್ದ ಹಂದಿಯನ್ನು ಕೂಡಾ ಬಿಡದೇ ಕದಿಯುತ್ತಿದ್ದರು. ಬಳಿಕ ಗ್ಯಾಂಗ್ ಎಲ್ಲರೂ ಸೇರಿ ಭರ್ಜರಿ ಬಾಡೂಟ ಮಾಡಿ ಪಾರ್ಟಿ ಮಾಡುತ್ತಿದ್ದರು. ಕದ್ದ ಚಿನ್ನದ ಸರಗಳನ್ನು ಕಳ್ ಮಂಜನ ಜೊತೆ ಸಹಕರಿಸುತ್ತಿದ್ದ ಅವನ ತಾಯಿ ಹಾಗೂ ತಂಗಿಯ ಮುಖಾಂತರವಾಗಿ ಸೇಠುಗಳಿಗೆ ಮಾರುತ್ತಿದ್ದರು. ಇದನ್ನೂ ಓದಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಆ್ಯಕ್ಟಿವ್ ಆಯ್ತಾ ಇರಾನಿ ಗ್ಯಾಂಗ್?

    ಪೊಲೀಸರ ತಂಡವೊಂದು ಶಿಕ್ಷಕಿಯ ಸರ ಕದ್ದ ಬುಲೆಟ್ ಬೈಕ್ ಹಿಂದೆ ಬಿದ್ದಿದ್ದು ತಂಡಕ್ಕೆ ಇದು ಭರ್ಜರಿ ಪತ್ತೆ ಕಾರ್ಯವಾಗಿತ್ತು. ಆರೋಪಿಗಳು ಬಾಗಲಗುಂಟೆ, ಪೀಣ್ಯಾ, ನೆಲಮಂಗಲ, ಮಾದನಾಯಕನಹಳ್ಳಿ, ಕಾಮಾಕ್ಷಿ ಪಾಳ್ಯ, ವರ್ತೂರು, ನಂದಿನಿಲೇಔಟ್, ರಾಜಗೋಪಾಲ ನಗರ, ಹೆಣ್ಣೂರು, ಸೋಲದೇವನಹಳ್ಳಿ ಸೇರಿದಂತೆ 30 ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯಗಳಲ್ಲಿ ಭಾಗಿಯಾಗಿದ್ದರು.

    ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮದುವೆಯಾಗುವಂತೆ ಒತ್ತಾಯಿಸಿ ಯುವತಿ ಮನೆಗೆ ನುಗ್ಗಿ ಲಾಂಗ್ ಬೀಸಿದ ಯುವಕ

    ಮದುವೆಯಾಗುವಂತೆ ಒತ್ತಾಯಿಸಿ ಯುವತಿ ಮನೆಗೆ ನುಗ್ಗಿ ಲಾಂಗ್ ಬೀಸಿದ ಯುವಕ

    ಬೆಂಗಳೂರು: ಯುವಕನೊಬ್ಬ ಮದುವೆಯಾಗುವಂತೆ ಒತ್ತಾಯಿಸಿ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಗರದ ಕೆ ಆರ್ ಪುರಂ ಮಸೀದಿ ರಸ್ತೆಯಲ್ಲಿ ನಡೆದಿದೆ.

    ಕಳೆದ ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಗ್ಮಾ ಎಂಬಾಕೆಯ ಮೇಲೆ ಆರೋಪಿ ಶಾರುಖ್ ಹಲ್ಲೆಗೆ ಮುಂದಾಗಿದ್ದಾನೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

    ಯುವಕ, ಯುವತಿ ಮೇಲೆ ಲಾಂಗ್ ಬೀಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿಯು ಮನೆ ಗೇಟ್ ಲಾಕ್ ಮಾಡಿಕೊಂಡಿದ್ದರು. ಏರಿಯಾದಲ್ಲಿ ಲಾಂಗ್ ಹಿಡಿದು ರಾಜಾರೋಷವಾಗಿ ಓಡಾಡಿದ್ದಾನೆ.

    ಶಾರುಖ್ ಮನಬಂದಂತೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳ ಮೇಲೆಯೂ ಲಾಂಗ್ ಬೀಸಿದ್ದಾನೆ. ಆರೋಪಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ನಗ್ಮಾರವರು ಕೆ ಆರ್ ಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಶೌಚಾಲಯಕ್ಕೆ ಹೋಗಿ ಬರುತ್ತೇನೆಂದ ವಧು ಪ್ರೀಯಕರನ ಜೊತೆಗೆ ಎಸ್ಕೇಪ್

    ಪ್ರಕರಣ ದಾಖಲಾದ ಬೆನ್ನಲ್ಲೇ ಕೆ ಆರ್ ಪುರಂ ಪೊಲೀಸರು ಆರೋಪಿ ಶಾರುಕ್‍ನನ್ನು ಬಂಧಿಸಿದ್ದಾರೆ.

  • ಮಂಗಳಮುಖಿಯರ ಪಾರ್ಟಿಯಲ್ಲಿ ಗಲಾಟೆ- ವ್ಯಕ್ತಿ ಕೊಲೆ

    ಮಂಗಳಮುಖಿಯರ ಪಾರ್ಟಿಯಲ್ಲಿ ಗಲಾಟೆ- ವ್ಯಕ್ತಿ ಕೊಲೆ

    ರಾಮನಗರ: ಮಂಗಳಮುಖಿಯರ ಪಾರ್ಟಿಯಲ್ಲಿ ಗಲಾಟೆಯಾಗಿದ್ದು, ವ್ಯಕ್ತಿಯೊಬ್ಬ ಕೊಲೆಯಾಗಿರುವ ಘಟನೆ ಚನ್ನಪಟ್ಟಣ ನಗರದ ಲಾಳಘಟ್ಟ ಬಳಿ ನಡೆದಿದೆ.

    ಮಂಗಳಮುಖಿಯರ ತಂಡವೊಂದು ಮನೆಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಅತಿಕ್ರಮಣವಾಗಿ ನಾಲ್ಕೈದು ಜನರ ಪ್ರವೇಶವಾಗಿದೆ. ಮನೆಗೆ ಪ್ರವೇಶ ಮಾಡಿ ಮಂಗಳಮುಖಿಯರ ಜತೆ ಗಲಾಟೆ ಮಾಡಿಕೊಂಡಿದ್ದು, ಮಂಗಳಮುಖಿಯರ ಕಡೆಯವರಿಂದ ಮಚ್ಚಿನಿಂದ ಹಲ್ಲೆ ನಡೆದಿದೆ. ಇದನ್ನೂ ಓದಿ: ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

    ಹಲ್ಲೆಗೊಳಗಾದ ವ್ಯಕ್ತಿಯನ್ನು ಉದ್ದಾಡಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯಗಳಾಗಿವೆ.

    ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:  ಏನಮ್ಮಾ ಯಾರಾದ್ರೂ ಫೋನ್ ಮಾಡಿದ್ರೆ ರಿಸೀವ್ ಮಾಡಲ್ವಾ..?- ಪಿಎಸ್‍ಐಗೆ ಸಿದ್ದರಾಮಯ್ಯ ತರಾಟೆ

     

  • ಕೆಜಿಎಫ್‍ನಲ್ಲಿ ಲಾಂಗ್ ಹಿಡಿದು ಸಿನಿಮಾ ಸ್ಟೈಲ್ ನಲ್ಲಿ ಬೆದರಿಕೆ

    ಕೆಜಿಎಫ್‍ನಲ್ಲಿ ಲಾಂಗ್ ಹಿಡಿದು ಸಿನಿಮಾ ಸ್ಟೈಲ್ ನಲ್ಲಿ ಬೆದರಿಕೆ

    – ಬಿಯರಿಗಾಗಿ ರೌಡಿಶೀಟರ್ ರಂಪಾಟದ ವಿಡಿಯೋ ವೈರಲ್

    ಕೋಲಾರ: ಕೆಜಿಎಫ್‍ನಲ್ಲಿ ರೌಡಿಶೀಟರ್ ಓರ್ವ ಸಿನಿಮಾ ಸ್ಟೈಲ್ ನಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಕುಡಿದ ಅಮಲಿನಲ್ಲಿ ಲಾಂಗ್ ಹಿಡಿದು ದಾರಿ ಹೋಕರಿಗೆ ಬೆದರಿಕೆ ಹಾಕಿದ್ದು ಅಲ್ಲದೇ ಬಾರ್ ಮಾಲೀಕನಿಗೆ ಬಿಯರ್ ನೀಡುವಂತೆ ತಮಿಳಿನಲ್ಲಿ ಒತ್ತಾಯ ಮಾಡಿದ್ದಾನೆ.

    ಕೋಲಾರ ಜಿಲ್ಲೆಯ ಕೆಜಿಎಫ್‍ನಗರದ ಸಲ್ಡಾನಾ ಸರ್ಕಲ್‍ನ ಬಾರ್ ಮುಂದೆ ಎರಡು ದಿನದ ಹಿಂದೆ ಈ ನಡೆದಿದೆ ಎನ್ನಲಾಗಿದೆ. ಸೂಸೈ ಪಾಳ್ಯ ನಿವಾಸಿ ರೌಡಿಶೀಟರ್ ಎಡ್ವಿನ್ ಕುಡಿದ ಅಮಲಿನಲ್ಲಿ ಲಾಂಗ್ ಹಿಡಿದು ರಸ್ತೆಯಲ್ಲಿ ಓಡಾಡುವವರಿಗೆ ಸಿನಿಮಾ ಸ್ಟೈಲ್ ನಲ್ಲಿ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದಾನೆ. 2 ದಿನದ ಹಿಂದೆ ಆರ್.ಎಂ. ವೈನ್ಸ್ ಮುಂದೆ ಕುಡಿದು ರಂಪಾಟ ಮಾಡಿದ್ದ ಎಡ್ವಿನ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಎಡ್ವಿನ್ ಇದೆ ತಿಂಗಳ 27 ರಂದು ಕೆಜಿಎಫ್‍ನಲ್ಲಿ ಕೊಲೆಯಾದ ಸ್ಟಾಲಿನ್ ಅಣ್ಣಾ ಎನ್ನಲಾಗುತ್ತಿದೆ. ತಮ್ಮನ ಅಂತ್ಯಸಂಸ್ಕಾರ ಮಾಡಿದ ಬಳಿಕ ಹುಚ್ಚಾಟವಾಡಿದ್ದಾನೆ. ಎಡ್ವಿನ್ ನನ್ನು ರಾಬರ್ಟ್ ಸನ್ ಪೇಟೆ ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

  • ಲಾಂಗ್‍ನಲ್ಲಿ ಕೇಕ್ ಕತ್ತರಿಸಿ ರೌಡಿಗಳಿಂದ ರಸ್ತೆಯಲ್ಲೇ ಹುಟ್ಟುಹಬ್ಬ ಆಚರಣೆ

    ಲಾಂಗ್‍ನಲ್ಲಿ ಕೇಕ್ ಕತ್ತರಿಸಿ ರೌಡಿಗಳಿಂದ ರಸ್ತೆಯಲ್ಲೇ ಹುಟ್ಟುಹಬ್ಬ ಆಚರಣೆ

    ಬೆಂಗಳೂರು: ಸಿಲಿಕಾನ್ ಸಿಟಿಯ ಡಿಜೆ ಹಳ್ಳಿಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ನಡು ರಸ್ತೆಯಲ್ಲೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಚಾಕುನಿಂದ ಕೇಕ್ ಕತ್ತರಿಸುವ ಬದಲು ಲಾಂಗ್‍ನಿಂದ ಕತ್ತರಿಸಿದ್ದಾರೆ.

    ಪುಡಿ ರೌಡಿ ಅದಿಲ್ ಈ ರೀತಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಪೊಲೀಸರಿಗೂ ಡೋಂಟ್ ಕೇರ್ ಎನ್ನದೇ ನಡುರಾತ್ರಿ ರಸ್ತೆಯಲ್ಲೇ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

    ನಿನ್ನೆ ತಡರಾತ್ರಿ ಹತ್ತಾರು ಪುಂಡರು ಸೇರಿ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿ, ಫುಲ್ ಪಾರ್ಟಿ ಮಾಡಿದ್ದಾರೆ. ಲಾಂಗ್‍ನಲ್ಲಿ ಕೇಕ್ ಕಟ್, ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನೈಟ್ ಬೀಟ್ ಪೊಲೀಸರು ಸಹ ಈ ಕುರಿತು ಹೆಚ್ಚು ಗಮನಹರಿಸಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

  • ಕೈಯಲ್ಲಿ ಲಾಂಗ್ ಹಿಡಿದು ನಡುರಸ್ತೆಯಲ್ಲೇ ರಂಪಾಟ- ಕುಡಿದ ಮತ್ತಿನಲ್ಲಿ ಬಸ್ ಗ್ಲಾಸ್ ಒಡೆದ ಯುವಕರು

    ಕೈಯಲ್ಲಿ ಲಾಂಗ್ ಹಿಡಿದು ನಡುರಸ್ತೆಯಲ್ಲೇ ರಂಪಾಟ- ಕುಡಿದ ಮತ್ತಿನಲ್ಲಿ ಬಸ್ ಗ್ಲಾಸ್ ಒಡೆದ ಯುವಕರು

    ಮಂಡ್ಯ: ಕುಡಿದ ಮತ್ತಿನಲ್ಲಿ ಕೈಯಲ್ಲಿ ಲಾಂಗ್ ಹಿಡಿದುಕೊಂಡು ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವಕರ ತಂಡ ಕೆಎಸ್‍ಆರ್‍ಟಿಸಿ ಬಸ್ ಕಿಟಕಿಯ ಗಾಜನ್ನು ಒಡೆದು ಹಾಕಿರುವ ಘಟನೆ ಮಂಡ್ಯದ ಗೋಪಾಲಪುರ ಗ್ರಾಮದ ಬಳಿ ನಡೆದಿದೆ.

    ನಾಗಮಂಗಲ-ಮಂಡ್ಯ ರಸ್ತೆಯಲ್ಲಿ ಬರುವ ಗೋಪಾಲಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಮೂವರು ಯುವಕರು ಕುಡಿದ ಮತ್ತಿನಲ್ಲಿ, ನಡು ರಸ್ತೆಯಲ್ಲೇ ಮಚ್ಚು ಹಿಡಿದುಕೊಂಡು ರಂಪಾಟ ನಡೆಸುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಕೆಎಸ್‍ಆರ್‍ಟಿಸಿ ಬಸ್‍ನ ಕಿಟಕಿ ಗಾಜನ್ನು ಕೂಡ ಒಡೆದು ಹಾಕಿದ್ದಾರೆ.

    ಸ್ವಲ್ಪ ಸಮಯದ ನಂತರ ಮೂವರು ಯುವಕರು ಬೈಕ್ ಹತ್ತಿ ತಮ್ಮ ಪಾಡಿಗೆ ತಾವು ಹೊರಟು ಹೋಗಿದ್ದಾರೆ. ಯುವಕರ ರಂಪಾಟವನ್ನು ಬಸ್‍ನಲ್ಲಿದ್ದವರೊಬ್ಬರು ತಮ್ಮ ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದಾರೆ.

    ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆತಂಕ ಸೃಷ್ಟಿಸುವ ಯುವಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    https://www.youtube.com/watch?v=-rLICI9NxMc

  • ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

    ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

    ಮಡಿಕೇರಿ: ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನಾರಾರುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿಯೊಬ್ಬರು ಲಾಂಗ್ ಹಿಡಿದು ಪುಂಡಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಪಟ್ಟಣದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ.

    ತೇಜ್ ಕುಮಾರ್ ಈ ಕೃತ್ಯವೆಸಗಿದ ಕಾಂಗ್ರೆಸ್ ಮುಖಂಡ. ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿರುವ ತೇಜ್ ಕುಮಾರ್ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಚೀಟಿ ಹಣದ ವಿಚಾರಕ್ಕೆ ಸ್ಥಳೀಯರಿಗೆ ಲಾಂಗ್ ತೋರಿಸಿ ರೌಡಿಸಂ ಮಾಡಿದ್ದಾರೆ ಎನ್ನಲಾಗಿದೆ.

    ತೇಜ್ ಕುಮಾರ್ ಕೊಡ್ಲಿಪೇಟೆ ಎಸ್‍ಆರ್ ಪೆಟ್ರೋಲ್ ಬಂಕ್ ಮಾಲಿಕರಾಗಿದ್ದು, ಕೆಲವು ತಿಂಗಳ ಹಿಂದೆ ಚೀಟಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ತೇಜ್ ಕುಮಾರ್ ತನ್ನ ಪೆಟ್ರೋಲ್ ಬಂಕ್ ಬಳಿ ನಿಂತು ಕಾರಿನಿಂದ ಲಾಂಗ್ ತೆಗೆದು ಅವಾಜ್ ಹಾಕಿದ್ದಾರೆ. ಲಾಂಗ್ ಹಿಡಿದು ಹಣ ಕೇಳಲು ಬಂದವರನ್ನು ಬೆದರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ತೇಜ್‍ ಕುಮಾರ್, ಈ ಘಟನೆ ನಡೆದು ಕೆಲವು ತಿಂಗಳುಗಳೇ ಕಳೆದಿದೆ. ಈಗ ಚುನಾವಣೆ ವೇಳೆಯಲ್ಲಿ ಮತ್ತೆ ವಿಡಿಯೋ ವೈರಲ್ ಮಾಡಿದ್ದಾರೆ. ಈ ಬಗ್ಗೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ನಾನೇನೂ ಮಾತನಾಡಲು ಆಗಲ್ಲ. ಒಂದೇ ವಿಡಿಯೋವನ್ನ ಪದೇ ಪದೇ ವೈರಲ್ ಮಾಡ್ತಿದ್ದಾರೆ. ಇದು ವಿರೋಧ ಪಕ್ಷದವರ ಕೈವಾಡ ಎಂದು ಹೇಳಿದ್ರು.

  • ಕೈಯಲ್ಲಿ ಮಚ್ಚು, ಲಾಂಗು ಹಿಡಿದ ಪಾಲಿಕೆ ಸದಸ್ಯ – ಕೇಳಿದ್ರೆ ಏನ್ ತಪ್ಪು ಅಂದ್ರು ಇಮ್ರಾನ್ ಪಾಷಾ

    ಕೈಯಲ್ಲಿ ಮಚ್ಚು, ಲಾಂಗು ಹಿಡಿದ ಪಾಲಿಕೆ ಸದಸ್ಯ – ಕೇಳಿದ್ರೆ ಏನ್ ತಪ್ಪು ಅಂದ್ರು ಇಮ್ರಾನ್ ಪಾಷಾ

    ಬೆಂಗಳೂರು: ಬಿಬಿಎಂಪಿ ಹಾಲಿ ಸದಸ್ಯರೊಬ್ಬರು ಈದ್ ಮಿಲಾದ್ ಆಚರಣೆ ವೇಳೆ ಲಾಂಗ್ ಪ್ರದರ್ಶನ ಮಾಡಿರೋ ಘಟನೆ ಇಂದು ಬೆಳಕಿಗೆ ಬಂದಿದೆ.

    ಈ ಘಟನೆ ಬ್ಯಾಟಾರಾಯನಪುರದ ಗೋರಿಪಾಳ್ಯದಲ್ಲಿ ಶನಿವಾರ ನಡೆದಿದ್ದು, ವಾರ್ಡ್ ನಂಬರ್ 135ರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರು ಓರ್ವ ಜನಪ್ರತಿನಿಧಿಯಾಗಿ ಸಾರ್ವಜನಿಕರ ಮುಂದೆಯೇ ಈ ರೀತಿ ವರ್ತನೆ ಮಾಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಇಮ್ರಾನ್ ಪಾಷಾ ಅವರನ್ನು ಮಾತನಾಡಿಸಿದಾಗ, ಸಾವಿರಾರು ಮಂದಿ ನಮ್ಮ ಮನೆ ಮುಂದೆ ನೆರೆದಿದ್ದರು. ಹಲವು ಕಡೆ ನನ್ನ ಆಮಂತ್ರಿಸಿದ್ದರು. ಹೀಗಾಗಿ ನಾನು ಅಲ್ಲಿ ಅನ್ನದಾನ ಮಾಡಿ ಹಿಂತಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಹಲವು ಮಂದಿ ಯುವಕರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ಇದ್ದರು. ಆದ್ರೆ ಯಾರಿಗೂ ತೊಂದರೆ ಮಾಡೋ ಉದ್ದೇಶದಿಂದ ಅವರು ಲಾಂಗ್ ಹಿಡಿಕೊಂಡಿಲ್ಲ. ಈ ವೇಳೆ ಅವರು ಅಣ್ಣ ಬನ್ನಿ ಅಂತ ಕರೆದ್ರು. ಹೀಗಾಗಿ ನಾನು ಕೂಡ ಕೈಯಲ್ಲಿ ಲಾಂಗ್ ಹಿಡಿದೆ. ಅಂತೆಯೇ ಅವರೆಲ್ಲರೂ ನನ್ನ ಎತ್ತಿಕೊಂಡು ಕುಣಿದ್ರು ಅಂತ ಅವರು ಹೇಳಿದ್ರು.

    ಅಂದು ಈದ್ ಮಿಲಾದ್ ಆಗಿದ್ದುದರಿಂದ ಹಿಂದೂಸ್ತಾನದ ಎಲ್ಲಾ ರಾಜಕೀಯ ನಾಯಕರುಗಳು ಕೂಡ ಮೆರವಣಿಗೆ ಹೋಗಿ ಅವರ ಅಭಿಮಾನಿಗಳ ಜೊತೆ ಖುಷಿಯಿಂದ ಆಚರಣೆ ಮಾಡುತ್ತಾರೆ. ಅಷ್ಟಕ್ಕೂ ಅಲ್ಲಿ ನಾನು ಒಬ್ಬನೇ ಲಾಂಗ್ ಹಿಡಿದುಕೊಂಡಿಲ್ಲ. ಅಲ್ಲಿ ನೆರೆದಿದ್ದ ಹಲವರು ಹಿಡಿದುಕೊಂಡಿದ್ದರು. ಒಟ್ಟಿನಲ್ಲಿ ನಾನೇನು ತಪ್ಪು ಕೆಲಸ ಮಾಡಿಲ್ಲ ಅಂತ ಅವರು ಸಮರ್ಥಿಸಿಕೊಂಡ್ರು.

    ಸದ್ಯ ಕಾರ್ಪೋರೇಟರ್ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತ್ರೀವ ಆಕ್ರೋಶ ವ್ಯಕ್ತವಾಗುತ್ತಿದೆ.