Tag: ಲಾಕರ್

  • ಚಿನ್ನದ ಅಂಗಡಿಗೆ ಕನ್ನ – 250 ಗ್ರಾಂ ಚಿನ್ನ, 1.8 ಲಕ್ಷ ರೂ. ಹಣದೊಂದಿಗೆ ಪರಾರಿ

    ಚಿನ್ನದ ಅಂಗಡಿಗೆ ಕನ್ನ – 250 ಗ್ರಾಂ ಚಿನ್ನ, 1.8 ಲಕ್ಷ ರೂ. ಹಣದೊಂದಿಗೆ ಪರಾರಿ

    ಬೆಂಗಳೂರು: ಚಿನ್ನದ ಅಂಗಡಿಗೆ (Gold) ಕನ್ನ ಹಾಕಿದ ಕಳ್ಳರು ಲಾಕರ್‌ನಲ್ಲಿದ್ದ 250 ಗ್ರಾಂ ಚಿನ್ನ, 1.8 ಲಕ್ಷ ರೂ. ನಗದು (Cash) ದೋಚಿ ಪರಾರಿಯಾದ ಘಟನೆ ನೆಟ್ಟಕಲ್ಲಪ್ಪ ಸರ್ಕಲ್‌ ಬಳಿ ನಡೆದಿದೆ.

    ಬಸವನಗುಡಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಬೆನಕ ಗೋಲ್ಡ್‌ನ (Benaka Gold) ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಕೃತ್ಯ ಮಾಡಲಾಗಿದೆ.  ಇದನ್ನೂ ಓದಿ: ಬೆಂಗಳೂರಿಗೆ ಫೆಬ್ರವರಿಯಲ್ಲೇ ಸಮಸ್ಯೆ – ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ

    ಬುಧವಾರ ಎಂದಿನಂತೆ ವ್ಯವಹಾರ ಮಾಡಿದ್ದ ಕಂಪನಿಯ ಸಿಬ್ಬಂದಿ ಗ್ರಾಹಕರಿಂದ ಚಿನ್ನಭರಣ ಖರೀದಿ ಮಾಡಿತ್ತು. ಮಧ್ಯರಾತ್ರಿ ಅಂಗಡಿಗೆ ನುಗ್ಗಿದ ಕಳ್ಳರು ಚಿನ್ನ, ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ ಅನ್ನು ಪುಡಿ ಮಾಡಿದ್ದಾರೆ. ಇದನ್ನೂ ಓದಿ: ಕ್ರಿಶ್ಚಿಯನ್‌ ಶಾಲೆ ಮುಂದೆ ಜೈ ಶ್ರೀರಾಮ್ ಘೋಷಣೆ – ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿ ಐವರ ವಿರುದ್ಧ FIR

    ಕಳೆದ ಬುಧವಾರ ರಾತ್ರಿ ರಾಮಮೂರ್ತಿ ನಗರದಲ್ಲಿದ್ದ ಬೇನಕ ಗೋಲ್ಡ್‌ಗೆ ಕನ್ನ ಹಾಕಿದ್ದರು. ಈಗ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 18 ಗಂಟೆಗಳ ಕಾಲ ಬ್ಯಾಂಕ್ ಲಾಕರ್‌ನಲ್ಲೇ ಸಿಲುಕಿದ್ದ ವೃದ್ಧ

    18 ಗಂಟೆಗಳ ಕಾಲ ಬ್ಯಾಂಕ್ ಲಾಕರ್‌ನಲ್ಲೇ ಸಿಲುಕಿದ್ದ ವೃದ್ಧ

    ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ವೃದ್ಧರೊಬ್ಬರು ಒಂದು ರಾತ್ರಿಯಿಡೀ ಬ್ಯಾಂಕ್ ಲಾಕರ್‌ನಲ್ಲಿ ಸಿಲುಕಿದ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಕೃಷ್ಣಾ ರೆಡ್ಡಿ(85) ಲಾಕರ್‌ನಲ್ಲಿ ಕಳೆದ ವೃದ್ಧ. ಇವರು ಮಧುಮೇಹ ಹಾಗೂ ಇತರ ರೋಗದಿಂದ ಬಳಲುತ್ತಿದ್ದು, ಸತತ 18 ಗಂಟೆಗಳ ಕಾಲ ಲಾಕರ್‌ನಲ್ಲಿ ಕಳೆಯ ಬೇಕಾದ ಪರಿಸ್ಥಿತಿ ಎದುರಾಗಿದೆ.

    ಘಟನೆ ಏನು?: ಜ್ಯುಬಿಲಿ ಹಿಲ್ಸ್‍ನ ನಿವಾಸಿ ಕೃಷ್ಣಾರೆಡ್ಡಿ ಅವರು ಕೆಲವು ದಾಖಲೆಗಳನ್ನು ಪಡೆದುಕೊಳ್ಳಲು ಬಂಜಾರ ಹಿಲ್ಸ್ ಪ್ರದೇಶದ ಯೂನಿಯನ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿದ್ದರು. ಇಗವೆಲ್ಲದರ ಪರಿಶೀಲನೆಯ ನಂತರ ಅವರನ್ನು ಬ್ಯಾಂಕ್ ಲಾಕರ್ ರೂಂಗೆ ಕಳುಹಿಸಲಾಯಿತು. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಕೃಷ್ಣಾ ರೆಡ್ಡಿ ಅವರು ಬ್ಯಾಂಕ್ ಮುಚ್ಚುವ ಸಮಯವಾಗಿದೆ ಎನ್ನುವ ವಿಷಯವನ್ನು ಕೃಷ್ಣಾ ರೆಡ್ಡಿ ಗಮನಿಸಿರಲಿಲ್ಲ. ಮತ್ತೊಂದೆಡೆ ಕೃಷ್ಣಾ ರೆಡ್ಡಿ ಬ್ಯಾಂಕ್ ಲಾಕರ್‍ನಲ್ಲಿರುವುದು ಬ್ಯಾಂಕ್ ಸಿಬ್ಬಂದಿಯ ಗಮನಕ್ಕೆ ಬಾರದೆ ಬೀಗ ಹಾಕಿ ಮನೆಗೆ ತೆರಳಿದ್ದಾರೆ.

    ರಾತ್ರಿಯಾದರೂ ಕೃಷ್ಣಾ ರೆಡ್ಡಿ ಮನೆಗೆ ಬಾರದ ಕಾರಣ ಅವರ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಅವರನ್ನು ಪತ್ತೆ ಹೆಚ್ಚಿದ್ದಾರೆ. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದ ಕೃಷ್ಣಾ ರೆಡ್ಡಿ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಇದನ್ನೂ ಓದಿ: CRPF ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ

  • ಬ್ಯಾಂಕ್‍ಗೆ ಕನ್ನ ಹಾಕಿದ್ರೂ ಲಾಕರ್ ಓಪನ್ ಆಗಿಲ್ಲ

    ಬ್ಯಾಂಕ್‍ಗೆ ಕನ್ನ ಹಾಕಿದ್ರೂ ಲಾಕರ್ ಓಪನ್ ಆಗಿಲ್ಲ

    ಹುಬ್ಬಳ್ಳಿ: ತಾಲೂಕಿನ ಶಿವಳ್ಳಿ ಗ್ರಾಮದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಗೆ ಕನ್ನ ಹಾಕಲು ಯತ್ನಿಸಿದ ಕಳ್ಳರು ಲಾಕರ್ ತೆರೆಯಲಾಗದೆ ನಿರಾಸೆ ಅನುಭವಿಸಿದ್ದಾರೆ.

    ಶಿವಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿಯಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಕಿಟಕಿಯ ಸರಳು ಮುರಿದು ಕಳ್ಳರು ಬ್ಯಾಂಕಿನ ಒಳ ನುಗ್ಗಿ ಕನ್ನ ಹಾಕುವ ಯತ್ನ ವಿಫಲವಾಗಿದೆ. ಬ್ಯಾಂಕಿನ ಹಿಂಭಾಗದ ಕಿಟಕಿಯ ಮೂರು ಸರಳುಗಳನ್ನು ಕಟರ್ ನಿಂದ ಕಟ್ ಮಾಡಿ ಕಳ್ಳರು, ಕಿಟಕಿಯ ಮೂಲಕ ಬ್ಯಾಂಕ್‍ನ ಒಳ ನುಗ್ಗಿದ್ದಾರೆ. ಅದರೆ ಬ್ಯಾಂಕ್ ಲಾಕರ್ ತೆಗೆಯಲು ಕಳ್ಳರು ವಿಫಲವಾಗಿದ್ದು, ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ ತೆರಳಿದ್ದಾರೆ.  ಇದನ್ನೂ ಓದಿ: ಪಾರ್ಕಿಗೆ ಬಾ ಅಂತಿದ್ಳು – ಅಂಕಲ್‍ಗಳೇ ಈಕೆಯ ಟಾರ್ಗೆಟ್!

    ಘಟನೆಯ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಹಾವುಗಳಿಗೆ ಸೋದರಿಯರಿಂದ ರಾಖಿ ಕಟ್ಟಿಸಲು ಹೋಗಿ ಪ್ರಾಣ ಬಿಟ್ಟ ಯುವಕ

  • 10 ಅಡಿ ಕಾಂಪೌಂಡ್ ಹಾರಿ ಕದ್ದ ಲಾಕರ್ ಬಿಚ್ಚಲಾಗದೆ ಎಸೆದು ಹೋದ ಖದೀಮರು

    10 ಅಡಿ ಕಾಂಪೌಂಡ್ ಹಾರಿ ಕದ್ದ ಲಾಕರ್ ಬಿಚ್ಚಲಾಗದೆ ಎಸೆದು ಹೋದ ಖದೀಮರು

    ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕಳ್ಳತನ ಮಾಡಲು ಹೋಗಿದ್ದ ಖದೀಮರ ಗ್ಯಾಂಗ್ 60 ಕೆ.ಜಿ ಲಾಕರ್ ನೊಂದಿಗೆ ಎಸ್ಕೇಪ್ ಆಗಿ ಕೈಚಳಕ ತೋರಿಸಲಾಗದೆ ಬಳಿಕ ಎಸೆದು ಹೋಗಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಜುಲೈ 17 ರಂದು ಖದೀಮರ ಗ್ಯಾಂಗ್ ತಡರಾತ್ರಿ ಅಮೆಜಾನ್ ಪಿಕ್ ಪಾಯಿಂಟ್ ಗೆ ಕಳ್ಳತನ ಮಾಡಲು ನುಗ್ಗಿದೆ. ಅಮೆಜಾನ್ ಪಿಕ್ ಪಾಯಿಂಟ್ ಗೋಡನ್ ನಲ್ಲಿದ್ದ ಲಾಕರ್ ಒಡೆದು ಕಳ್ಳತನಕ್ಕೆ ಯತ್ನಿಸಿದೆ. ಲಾಕರ್ ಒಡೆಯುವುದಕ್ಕೆ ಆಗದೇ ಬರೋಬ್ಬರಿ 60ಕೆ.ಜಿ ಲಾಕರ್ ನೊಂದಿಗೆ ಪರಾರಿಯಾಗಿದೆ. ಘಟನೆ ಸಂಬಂಧ ಸಂಪಿಗೆ ಹಳ್ಳಿ ಪೊಲೀಸರು ಡಾಗ್ ಸ್ಕ್ವಾಡ್ ಜೊತೆಗೆ ತಪಾಸಣೆಗೆ ಹೋಗಿದ್ದಾರೆ. ಡಾಗ್ ಸ್ಕ್ವಾಡ್ ನಿಂದ ಕದ್ದ ಲಾಕರ್ ಅಮೆಜಾನ್ ಪಿಕ್ ಪಾಯಿಂಟ್ ನಿಂದ 500 ಮೀಟರ್ ದೂರದ ಪೊದೆಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ದಿನಾಂಕ ಬಹಿರಂಗಪಡಿಸಿದ ಸುದೀಪ್

    ಕಳ್ಳತನ ಮಾಡಿಕೊಂಡು ಹೋಗಿದ್ದ ಲಾಕರ್ ಬಿಚ್ಚಲಾಗದೆ ಬಿಸಾಡಿ ಹೋಗಿದ್ದಾರೆ. ಪೊಲೀಸರು ಲಾಕರ್ ತಗೆಸಿ ನೋಡಿದಾಗ ಲಾಕರ್ ನಲ್ಲಿದ್ದ 4 ಲಕ್ಷ 80 ಸಾವಿರ ನಗದು ದಾಖಲೆಗಳು ಪತ್ತೆ ಆಗಿದೆ. ಕಳ್ಳರು ಸಿಸಿಟಿವಿ, ಡಿವಿಆರ್ ಎಲ್ಲವನ್ನು ನಾಶ ಮಾಡಿ ಹೋಗಿದ್ದಾರೆ. ಸೆಕ್ಯೂರಿಟಿಗಳು ಇದ್ದರು ಕೂಡ ಇಂತಹ ಕೃತ್ಯ ನಡೆದಿರುವುದು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಘಟನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿಕೊಂಡಿರುವ ಸಂಪಿಗೆ ಹಳ್ಳಿ ಪೊಲೀಸರು ಘಟನೆ ನಡೆದ ಸ್ಥಳದ ಡಿವಿಆರ್ ಸಿಸಿಟಿವಿ ಪಡೆದು ತನಿಖೆ ಆರಂಭಿಸಿದ್ದಾರೆ.

  • ಬೌರಿಂಗ್ ಕ್ಲಬ್ ಸದಸ್ಯತ್ವಕ್ಕೆ ಉದ್ಯಮಿ ಅವಿನಾಶ್ ಅಮರ್ ಲಾಲ್‍ ರಾಜೀನಾಮೆ

    ಬೌರಿಂಗ್ ಕ್ಲಬ್ ಸದಸ್ಯತ್ವಕ್ಕೆ ಉದ್ಯಮಿ ಅವಿನಾಶ್ ಅಮರ್ ಲಾಲ್‍ ರಾಜೀನಾಮೆ

    ಬೆಂಗಳೂರು: ನಗರದ ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ನಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಕುರಿತು ತನಿಖೆ ಚುರುಕುಗೊಂಡ ಬೆನ್ನಲ್ಲೆ, ಕ್ಲಬ್ ಸದಸ್ಯತ್ವಕ್ಕೆ ಉದ್ಯಮಿ ಅವಿನಾಶ್ ಅಮರ್ ಲಾಲ್‍ ರಾಜೀನಾಮೆ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬೋರಿಂಗ್ ಕ್ಲಬ್ ಆಡಳಿತ ಮಂಡಳಿ ಅವೀನಾಶ್‍ಗೆ ಶೋಕಾಸ್ ನೋಟಿಸ್ ನೀಡಿದ್ದು, ಇದಕ್ಕೆ ಸಭೆಯಲ್ಲಿ ಉತ್ತರ ನೀಡುವಂತೆ ತಾಕೀತು ಮಾಡಿತ್ತು. ಆದರೆ ಸಭೆಗೂ ಮುನ್ನವೇ ಮಂಗಳವಾರ ಮಧ್ಯಾಹ್ನ ಕ್ಲಬ್‍ಗೆ ಬಂದ ಅವಿನಾಶ್ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಮರಳಿದ್ದಾರೆ.

    ಅವೀನಾಶ್ ವರ್ತನೆಯಿಂದ ಆಡಳಿತ ಮಂಡಳಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಕ್ಲಬ್ ಮೂಲಗಳು ತಿಳಿಸಿವೆ.

    ಸಿಕ್ಕಿಬಿದ್ದಿದ್ದು ಹೇಗೆ?
    ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ 15 ದಿನಗಳ ಹಿಂದೆ ಅವಿನಾಶ್ ಅಮರ್ ಲಾಲ್‍ಗೆ ಲಾಕರ್ ನಲ್ಲಿ ಇಟ್ಟಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಹೋಗಿ ಒಂದು ವೇಳೆ ಲಾಕರ್ ನಲ್ಲಿರುವ ವಸ್ತು ಕೊಂಡೊಯ್ಯದಿದ್ದರೆ ಲಾಕರ್ ಒಡೆಯುದಾಗಿ ನೋಟಿಸ್ ಕಳುಹಿಸಿದ್ದರು. ಸ್ವಲ್ಪ ಕೆಲಸ ಕಾರ್ಯಗಳಿವೆ. ಆದ್ದರಿಂದ ಅವುಗಳನ್ನು ಒಡೆದು ನವೀಕರಣಗೊಳಿಸಬೇಕಿದೆ ಎಂದು ಬೌರಿಂಗ್ ಆಡಳಿತ ಮಂಡಳಿ ನೋಟಿಸ್ ನಲ್ಲಿ ತಿಳಿಸಿತ್ತು. ಆದರೆ ಉದ್ಯಮಿ ನೋಟಿಸ್ ಬಗ್ಗೆ ತಲೆ ತಲೆಕೆಡಿಸಿಕೊಂಡಿಲ್ಲ. ಕೊನೆಗೆ ಆಡಳಿತ ಮಂಡಳಿ 86, 87ರಲ್ಲಿ ಲಾಕರ್ ಹೊಡೆದಿದೆ. ಆಗ ಈ ಕೋಟಿ ಕೋಟಿ ಆಸ್ತಿ ಪತ್ತೆಯಾಗಿತ್ತು.

    ರಾಜಸ್ಥಾನ ಮೂಲದ ಅವಿನಾಶ್ ಅಮರ್ ಲಾಲ್‍ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರನಾಗಿದ್ದು, ಬೆಂಗಳೂರಲ್ಲಿ 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಉದ್ಯಮಿ ಅವಿನಾಶ್ ಅಮರ್ ಲಾಲ್, ನಗರದ ಟೆನಿಸ್ ಕೋರ್ಟ್ ನಲ್ಲಿ ಕಳೆದ 1 ವರ್ಷದಿಂದ ನಿಧಿಯನ್ನು ಬಚ್ಚಿಟ್ಟಿದ್ದರು. ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ ಅವರು ಬಚ್ಚಿಟ್ಟಿದ್ದ ಲಾಕರ್ ಓಪನ್ ಮಾಡಿದ್ದಾರೆ. 2 ಲಾಕರ್ ಓಪನ್ ಮಾಡಿದ್ದು, ಅದರಲ್ಲಿ 2 ಬ್ಯಾಗ್ ಪತ್ತೆಯಾಗಿತ್ತು. ಈ 2 ಬ್ಯಾಗಿನಲ್ಲಿ ಸುಮಾರು 3.90 ಕೋಟಿ ನಗದು, 5 ಕೋಟಿ ಮೌಲ್ಯದ ವಜ್ರಾಭರಣ ಮತ್ತು 100 ಕೋಟಿ ರೂ. ಆಸ್ತಿ ಪತ್ರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.

  • ಮನೆಯ ಮುಖ್ಯದ್ವಾರದಲ್ಲೇ ಸೇಫ್ಟಿ ಸೆನ್ಸರ್ ಲಾಕರ್ – ಒಳಗಡೆ ಸಿಕ್ತು ಬರೋಬ್ಬರಿ 20 ಲಕ್ಷ ರೂ.

    ಮನೆಯ ಮುಖ್ಯದ್ವಾರದಲ್ಲೇ ಸೇಫ್ಟಿ ಸೆನ್ಸರ್ ಲಾಕರ್ – ಒಳಗಡೆ ಸಿಕ್ತು ಬರೋಬ್ಬರಿ 20 ಲಕ್ಷ ರೂ.

    ಬೆಂಗಳೂರು: ಸಾಮಾನ್ಯವಾಗಿ ಮನೆಯ ಬೆಲೆ ಬಾಳುವ ವಸ್ತುಗಳನ್ನು ಕಾಪಾಡಿಕೊಳ್ಳಲು ಮನೆಯ ಮಲಗುವ ಕೊಠಡಿ, ಅಲ್ಮೆರಾಗಳಲ್ಲಿ ಸೇಫ್ಟಿ ಲಾಕರ್ ಮಾಡಿಸಲಾಗುತ್ತದೆ. ತೀರಾ ಇತ್ತೀಚೆಗೆ ಉದ್ಯಮಿಯೊಬ್ಬರು ತನ್ನ ಮನೆಯ ಬಾತ್‍ರೂಮ್‍ನಲ್ಲಿ ಸೇಫ್ಟಿ ಲಾಕರ್ ಮಾಡಿಸಿ ಸುದ್ದಿಯಾಗಿದ್ದರು. ಆದರೆ ಇಲ್ಲೊಬ್ಬ ಮನೆಯ ಬಾಗಿಲಿನ ವಾಸ್ಕಲ್‍ನಲ್ಲೇ ಸೀಕ್ರೆಟ್ ಲಾಕರ್ ಮಾಡಿಸಿದ್ದಾನೆ.

    ಹೌದು, ಐಟಿ ಅಧಿಕಾರಿಗಳು ಉದ್ಯಮಿ ಚಳ್ಳಕೆರೆಯ ವೀರೇಂದ್ರ ಮನೆ ಮೇಲೆ ದಾಳಿ ಮಾಡಿದಾಗ ಬಾತ್ ರೂಮ್‍ನಲ್ಲಿ ಸೀಕ್ರೆಟ್ ಲಾಕರ್ ಅಳವಡಿಸಿದ್ದ ವಿಚಾರ ದೊಡ್ಡ ಸುದ್ದಿಯಾಗಿತ್ತು. ಆದರೆ ಈಗ ನಗರದ ಯಲಹಂಕದ ರೇಣುಕಾ ಪ್ರಸಾದ್ ಎಂಬಾತ ತನ್ನ ಮನೆಯ ಬಾಗಿಲಿನಲ್ಲೇ ಸೀಕ್ರೆಟ್ ಲಾಕರ್ ಮಾಡಿಸಿಕೊಂಡಿದ್ದಾನೆ.

    ರೇಣುಕಾ ಪ್ರಸಾದ್ ಮನೆಯ ಬಾಗಿಲನ್ನು ದೊಡ್ಡ ಮರದ ದಿಮ್ಮಿಯಿಂದ ಮಾಡಿಸಲಾಗಿದ್ದು, ಇದರಲ್ಲಿ ಲಾಕರ್ ಇದೆ ಎನ್ನುವುದು ಯಾರಿಗೂ ಕೂಡ ಗೊತ್ತಾಗುವುದಿಲ್ಲ. ವಿಶೇಷ ಎಂದರೆ ಈ ಸೀಕ್ರೆಟ್ ಲಾಕರ್ ಗೆ ಸೆನ್ಸರ್ ಸಹ ಮಾಡಿಸಲಾಗಿದ್ದು, ಲಾಕರ್ ಓಪನ್ ಆಗ ಬೇಕು ಎಂದರೆ ರೇಣುಕಾ ಪ್ರಸಾದ್‍ನ ಕಿರುಬೆರಳು ಸ್ಕಾನ್ ಮಾಡಬೇಕಾಗುತ್ತದೆ. ಇಲ್ಲದೇ ಇದ್ದರೆ ಲಾಕರ್ ಓಪನ್ ಮಾಡಲು ಸಾಧ್ಯವೇ ಇಲ್ಲ.

    ಸೀಕ್ರೆಟ್ ಲಾಕರ್ ಬಹಿರಂಗವಾಗಿದ್ದು ಹೇಗೆ?: ಜನವರಿ 11 ರಂದು ಯಲಹಂಕದ ಕೋಟ್ಯಾಧಿಪತಿ ಮಲ್ಲಿಕಾರ್ಜುನ್ ಎಂಬವರನ್ನು ಅಪಹರಣ ಮಾಡಿ 80 ಲಕ್ಷ ಹಣ ಪಡೆದು ಅವರನ್ನು ಬಿಡುಗಡೆ ಮಾಡಿದ್ದರು. ಆದರೆ ಹಣವನ್ನು ಪಡೆದ ಆರೋಪಿಗಳು ತಲಾ 20 ಲಕ್ಷದಂತೆ ಹಣ ಹಂಚಿಕೊಂಡು ಸುಮ್ಮನಾಗಿದ್ದಾರೆ.

    ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ಆರೋಪಿಗಳಿಗಾಗಿ ಬೆನ್ನತ್ತಿದ ಪೊಲೀಸರಿಗೆ ರೇಣುಕಾ ಪ್ರಸಾದ್, ಆರ್ಶಿಯಾ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಾರೆ. ಈ ವೇಳೆ ಪ್ರಕರಣದ ಪೂರ್ಣ ಮಾಹಿತಿ ಪಡೆದ ಪೊಲೀಸರು ಅಪಹರಣ ಮಾಡಿ ಮಲ್ಲಿಕಾರ್ಜುನ್ ಅವರಿಂದ ಪಡೆದ ಹಣವನ್ನು ವಶ ಪಡಿಸಲು ಮುಂದಾಗುತ್ತಾರೆ.

    ಈ ವೇಳೆ ಅಪಹರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರೋಪಿ ರೇಣುಕಾ ಪ್ರಸಾದ್ ಮನೆಗೆ ಪೊಲೀಸರು ಹಣ ವಶಪಡಿಸಿಕೊಳ್ಳಲು ತೆರಳಿದ್ದಾರೆ. ಆದರೆ ಮನೆಯ ಎಲ್ಲಾ ಕಡೆ ಹುಡುಕಿದರೂ ಬಚ್ಚಿಟ್ಟಿದ ಹಣ ಪೊಲೀಸರಿಗೆ ಸಿಕ್ಕಿರಲಿಲ್ಲ. ತದನಂತರ ಆರೋಪಿಯನ್ನು ತೀವ್ರ ವಿಚಾರಣೆ ನಡೆಸಿದ ವೇಳೆ ಸೀಕ್ರೆಟ್ ಲಾಕರ್ ನ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ತನ್ನ ಕಿರುಬೆರಳಿನಿಂದ ಸೀಕ್ರೆಟ್ ಲಾಕರ್ ಓಪನ್ ಮಾಡಿದ್ದು, ಅದರಲ್ಲಿ 20 ಲಕ್ಷ ಹಣ, ಚಿನ್ನಾಭರಣ ಮತ್ತು ಒಂದು ಪರವಾನಗಿ ಹೊಂದಿರುವ ಗನ್ ಪತ್ತೆಯಾಗಿದೆ.

  • ಸೀಕ್ರೆಟ್ ಲಾಕರ್ ತೆಗೆಯಲು ಒಪ್ತಿಲ್ಲ ಡಿಕೆಶಿ – ನಕಲಿ ಕೀ ಮೇಕರ್ ಕರೆಸಿದ ಐಟಿ ಟೀಂ

    ಸೀಕ್ರೆಟ್ ಲಾಕರ್ ತೆಗೆಯಲು ಒಪ್ತಿಲ್ಲ ಡಿಕೆಶಿ – ನಕಲಿ ಕೀ ಮೇಕರ್ ಕರೆಸಿದ ಐಟಿ ಟೀಂ

    ಬೆಂಗಳೂರು/ಮೈಸೂರು: ಬುಧವಾರದಂದು ಇಂಧನ ಸಚಿವ ಡಿಕೆ ಶಿವಕುಮಾರ್‍ಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು ಸತತ ಎರಡನೇ ದಿನವಾದ ಇಂದು ಕೂಡ ಪರಿಶೀಲನೆ ಮುಂದುವರೆಸಿದ್ದಾರೆ. ಆದ್ರೆ ಮನೆಯಲ್ಲಿನ ಲಾಕರ್ ಓಪನ್ ಮಾಡಲು ಡಿಕೆಶಿ ನಿರಾಕರಿಸಿದ್ದು, ಕೀ ಮೇಕರ್‍ಗಳನ್ನ ಕರೆಸಲಾಗಿದೆ.

    ಒಟ್ಟು 5 ಲಾಕರ್‍ಗಳ ಪೈಕಿ ಈಗಾಗಲೇ 2 ಲಾಕರ್‍ಗಳನ್ನ ಓಪನ್ ಮಾಡಲಾಗಿದೆ. ಆದ್ರೆ ಮೂರು ಲಾಕರ್ ಗಳನ್ನು ಓಪನ್ ಮಾಡಲು ಡಿಕೆಶಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ನಕಲಿ ಕೀ ಮೇಕರ್‍ಗಳನ್ನ ಕರೆತಂದು ಲಾಕರ್‍ಗಳನ್ನು ಓಪನ್ ಮಾಡಿಸಿದ್ದಾರೆ. ಮೂರು ಲಾಕರ್‍ಗಳ ಪೈಕಿ ಇಂದು 2 ಲಾಕರ್‍ಗಳು ಓಪನ್ ಆಗಿವೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಐಟಿ ಪರಿಶೀಲನೆ ನಡೆಯುತ್ತಿದೆ. ರಿಯಲ್ ಎಸ್ಟೇಟ್ ಕಂಪನಿಗಳ ದಾಖಲೆಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ದಾಖಲೆಗಳ ಬಗ್ಗೆ ವಿಡಿಯೋ ರೆಕಾರ್ಡಿಂಗ್ ಪ್ರಾರಂಭಿಸಿದ್ದಾರೆ. ವಿಡಿಯೋ ರೆಕಾರ್ಡಿಂಗ್ ನಲ್ಲಿ ಡಿಕೆಶಿ ರಿಯಲ್ ಎಸ್ಟೇಟ್ ಮತ್ತು ಬ್ಯಾಂಕ್ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

    ಅತ್ತ ಮೈಸೂರು ನಗರದ ಇಟ್ಟಿಗೆಗೂಡು ಬಡಾವಣೆಯಲ್ಲಿರುವ ಸಚಿವ ಡಿ.ಕೆ.ಶಿವಕುಮಾರ್ ಮಾವ ತಿಮ್ಮಯ್ಯ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ 2ನೇ ದಿನವೂ ಮುಂದುವರೆದಿದೆ. ಮೈಸೂರಿನ ಇತಿಹಾಸದಲ್ಲೆ ಇಷ್ಟು ಸುದೀರ್ಘ ದಾಳಿ ಇದೇ ಪ್ರಥಮವಾಗಿದೆ. ಬುಧವಾರ ತಡರಾತ್ರಿವರೆಗೂ ದಾಖಲೆ ಪರಿಶೀಲನೆ ಮಾಡಿದ್ದ ಐಟಿ ಅಧಿಕಾರಿಗಳು, ಪರಿಶೀಲನೆ ಮುಗಿಯದ ಕಾರಣ ದಾಳಿ ಮಾಡಿದ ಮನೆಯಲ್ಲೆ ನಿದ್ರೆಗೆ ಜಾರಿದ್ರು. ದೆಹಲಿಯಿಂದ ಆಗಮಿಸಿದ್ದ ಮುಖ್ಯ ಅಧಿಕಾರಿ ಮಾತ್ರ ರಾತ್ರಿ ಮನೆಯಿಂದ ನಿರ್ಗಮಿಸಿದ್ರು. ಡಿಕೆಶಿ ಮಾವನ ಮನೆಯಲ್ಲಿದ್ದ ವ್ಯಕ್ತಿಗಳನ್ನ ಹೊರಬಿಡದೆ ಅಧಿಕಾರಿಗಳು ದಿಗ್ಭಂದನ ಹಾಕಿದ್ರು. ಆದ್ರೆ ಮಕ್ಕಳಿಗೆ ವಿನಾಯ್ತಿ ನೀಡಿದ ಅಧಿಕಾರಿಗಳು ನಿನ್ನೆ ಹಾಗೂ ಇಂದು ಶಾಲೆಗೆ ಹೋಗಲು ವಿನಾಯಿತಿ ನೀಡಿದ್ರು.

    ಡಿಕೆಶಿ ಮಾವನ ಮನೆಯಲ್ಲಿ ಮತ್ತಷ್ಟು ದಾಖಲೆಗಳು ಪತ್ತೆಯಾಗಿವೆ. ರಹಸ್ಯ ಸ್ಥಳದಲ್ಲಿ ಇಟ್ಟಿದ್ದ 4 ಬ್ಯಾಗ್ ದಾಖಲೆಗಳನ್ನ ಐಟಿ ವಶಕ್ಕೆ ಪಡೆದಿದೆ. ಬರಿಗೈಯಲ್ಲಿ ಒಳಗೆ ಹೋದವರು ವಾಪಸ್ ಬಂದಾಗ 4 ಬ್ಯಾಗ್ ತಂದಿದ್ದಾರೆ. ಡಿಕೆಶಿ ಮಾವ ತಿಮ್ಮಯ್ಯನನ್ನು ಅಧಿಕಾರಿಗಳು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸ್ತಿದ್ದಾರೆ. ಬಾಮೈದ ಸತ್ಯನಾರಾಯಣ ಹಾಗೂ ಸೊಸೆಯನ್ನ ಐಟಿ ಟೀಂ ವಾಪಸ್ ಮನೆಗೆ ಕರೆತಂದಿದ್ದಾರೆ.