Tag: ಲಾಟರಿ ಟಿಕೆಟ್

  • ಕೇರಳ ರಾಜ್ಯದ ಲಾಟರಿ ಮಾರಾಟ – ಬಡವರು, ಕೂಲಿ ಕಾರ್ಮಿಕರೇ ಟಾರ್ಗೆಟ್!

    ಕೇರಳ ರಾಜ್ಯದ ಲಾಟರಿ ಮಾರಾಟ – ಬಡವರು, ಕೂಲಿ ಕಾರ್ಮಿಕರೇ ಟಾರ್ಗೆಟ್!

    ಚಾಮರಾಜನಗರ: ರಾಜ್ಯದಲ್ಲಿ ಬಡವರ ಬದುಕಿಗೆ ಕೊಳ್ಳಿ ಇಟ್ಟಿದ್ದ ಲಾಟರಿ ನಿಷೇಧಿಸಿ 15 ವರ್ಷಗಳೇ ಕಳೆದಿವೆ. ಆದರೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಕೇರಳ ರಾಜ್ಯದ ಲಾಟರಿ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಹೊರರಾಜ್ಯದ ಲಾಟರಿ ಆಮಿಷಕ್ಕೆ ಬಲಿ ಬೀಳುತ್ತಿರುವ ಬಡವರು, ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗುತ್ತಿದೆ.

    ಬಡಬಗ್ಗರು, ಕೂಲಿ ಕಾರ್ಮಿಕರು ಬೆವರು ಸುರಿಸಿ ದುಡಿದ ಹಣವನ್ನೆಲ್ಲಾ ಲಾಟರಿಗೆ ಸುರಿದು ಜೀವನ ಹಾಳು ಮಾಡಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ 2007ರಲ್ಲಿ ಅಂದಿನ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು ರಾಜ್ಯದಲ್ಲಿ ಲಾಟರಿ ನಿಷೇಧಿಸಿತ್ತು. ರಾಜ್ಯದಲ್ಲಿ ಲಾಟರಿ ನಿಷೇಧವಷ್ಟೇ ಅಲ್ಲ ಹೊರರಾಜ್ಯಗಳ ಮಾರಾಟವನ್ನು ನಿರ್ಬಂಧಿಸಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹೊರ ರಾಜ್ಯಗಳ ಲಾಟರಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ 

    ಬಸ್‍ಗಳಲ್ಲಿ ಕೇರಳಕ್ಕೆ ಹೋಗುವ ದಂಧೆಕೋರರು ಅಲ್ಲಿನ ಲಾಟರಿಗಳನ್ನು ತಂದು ಕಾಡಂಚಿನ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಲಾಟರಿ ಆಸೆಗೆ ಬಲಿ ಬಿದ್ದು ಬಡಜನರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಅವರು ಈ ಕುರಿತು ಮಾತನಾಡಿದ್ದು, ಸೆನ್ ಹಾಗು ಜಿಲ್ಲೆಯ ವಿವಿಧ ಠಾಣೆಗಳ ಪೆÇಲೀಸರು ಇತ್ತೀಚಿನ ದಿನಗಳಲ್ಲಿ ಹೊರರಾಜ್ಯಗಳ ಲಾಟರಿ ದಂಧೆ ಪತ್ತೆ ಹಚ್ಚಿ 12 ಪ್ರಕರಣ ದಾಖಲಿಸಿಕೊಂಡು ಹಲವರನ್ನು ಬಂಧಿಸಲಾಗಿದೆ. ಇದರ ಜೊತೆಗೆ ಲಕ್ಷಾಂತರ ರೂ. ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ಮಲೆಮಹದೇಶ್ವರಬೆಟ್ಟ, ಕೊಳ್ಳೇಗಾಲ ಗುಂಡ್ಲುಪೇಟೆ ಸೇರಿದಂತೆ ಗಡಿಯಂಚಿನ ಗ್ರಾಮಗಳಲ್ಲಿ ಕೇರಳ ರಾಜ್ಯದ ಲಾಟರಿಗಳನ್ನು ಕದ್ದುಮುಚ್ಚಿ ಮಾರಾಟ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಲಾಟರಿ ದಂಧೆ ವಿರುದ್ಧ ತೀವ್ರ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಾಮಾ ಜ್ಯೂನಿಯರ್ ನೋಡಲು ಮನೆ ಬಿಟ್ಟು ಬೆಂಗಳೂರಿನತ್ತ ಬಂದ 4 ಮಕ್ಕಳು 

    12 ಪ್ರಕರಣ ದಾಖಲಾಗಿದ್ದರೂ ಕೇರಳ ಲಾಟರಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಕೇರಳದಿಂದ ನಿತ್ಯ ಚಾಮರಾಜನಗರ ಜಿಲ್ಲೆಗೆ ಬರುವವರ ಮೇಲೆ ನಿಗಾ ವಹಿಸಬೇಕು. ಲಾಟರಿ ದಂಧೆಯಲ್ಲಿ ತೊಡಗಿರುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಬಂಧಿಸಬೇಕು. ಆ ಮೂಲಕ ಗಡಿಯಂಚಿನ ಜನರ ಬದುಕಿಗೆ ಮಾರಕವಾಗಿರುವ ಹೊರರಾಜ್ಯಗಳ ಲಾಟರಿ ದಂಧೆಗೆ ಕಡಿವಾಣ ಹಾಕಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

  • ಮಾಲು ಸಮೇತ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ!

    ಮಾಲು ಸಮೇತ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ!

    ಮಡಿಕೇರಿ: ಅಕ್ರಮವಾಗಿ ಮಾರಾಟ ಮಾಡಲು ಲಾಟರಿಯನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.

    ಸೈನಾಫ್ (34) ಬಂಧಿತ ವ್ಯಕ್ತಿ. ಈತನನ್ನು ವಿಶೇಷ ಅಪರಾಧ ಪತ್ತೆದಳದ ಸಿಬ್ಬಂದಿ ಮಾಲು ಸಮೇತ ಬಂಧಿಸಿದ್ದಾರೆ. ಈತ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಮೆಟ್ನಹಳ್ಳ ನಿವಾಸಿ ಮೊಹಮ್ಮದ್ ಎಂಬವರ ಮಗ ಎಂದು ತಿಳಿದುಬಂದಿದೆ.

    ಬಂಧಿತ ಸೈನಾಫ್ ಕೇರಳದ ಇರಿಟಿಯಿಂದ ಕಾರಿನಲ್ಲಿ ರೂ.76,000 ಮೌಲ್ಯದ 2,300 ಲಾಟರಿ ಟಿಕೆಟ್ ಗಳನ್ನು ಮಾರಾಟ ಮಾಡಲು ಏಳನೇ ಹೊಸಕೋಟೆಯತ್ತ ತರುತ್ತಿದ್ದನು. ಈ ಸಂದರ್ಭ ಜಿಲ್ಲಾ ಎಸ್‍ಪಿ ಸುಮನ್ ಡಿ ಪೆನ್ನಕರ್, ಸೋಮವಾರಪೇಟೆ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ಸಿಪಿಐ ದಿನೇಶ್ ಕುಮಾರ್, ಸುಂಟಿಕೊಪ್ಪ ಪಿಎಸ್‍ಐ ಜಯರಾಮ್ ಅವರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಸೈನಾಫ್ ಅನ್ನು ಬಂಧಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ಮತ್ತೆ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕೇರಳದ ರಾಜ್ಯದ ಲಾಟರಿಗಳ ಮಾರಾಟ ಹೆಚ್ಚಾಗಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

  • ಲಾಟರಿ ಟಿಕೆಟ್ ಮಾರಿ ವಂಚಿಸುತ್ತಿದ್ದ ನಾಲ್ವರಿಗೆ ಹಿಗ್ಗಾಮುಗ್ಗಾ ಥಳಿತ

    ಲಾಟರಿ ಟಿಕೆಟ್ ಮಾರಿ ವಂಚಿಸುತ್ತಿದ್ದ ನಾಲ್ವರಿಗೆ ಹಿಗ್ಗಾಮುಗ್ಗಾ ಥಳಿತ

    ಚಿಕ್ಕೋಡಿ: ಲಾಟರಿ ಟಿಕೆಟ್ ಮಾರಿ ವಂಚನೆ ಮಾಡುತ್ತಿದ್ದ ನಾಲ್ವರನ್ನು ದೇವಸ್ಥಾನದಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ನಡೆದಿದೆ.

    ಆದರ್ಶ ಫೌಂಡೇಶನ್ ಗ್ರೂಪ್ ಹೆಸರಿನಲ್ಲಿ ಕಳೆದ ಎರಡು ತಿಂಗಳಿನಿಂದ ಲಾಟರಿ ಟಿಕೆಟ್ ಮಾರಾಟ ಮಾಡಲಾಗಿತ್ತು. ಆದರೆ ಇಂದು ಟಿಕೆಟ್ ಡ್ರಾ ಮಾಡುವ ವೇಳೆ ಗ್ರಾಮದ ಯಾರಿಗೂ ಬಹುಮಾನ ದೊರೆತಿಲ್ಲ ಅಂತಾ ನಾಲ್ವರನ್ನು ಹಿಡಿದು ಗ್ರಾಮಸ್ಥರು ಥಳಿಸಿದ್ದಾರೆ.

    ಏನಿದು ಲಾಟರಿ ಆಟ:
    ಆದರ್ಶ ಫೌಂಡೇಶನ್ ಗ್ರೂಪ್ ಹೆಸರಿನಲ್ಲಿ ಕಳೆದ ಎರಡು ತಿಂಗಳಿಂದ ಲಾಟರಿ ಟಿಕೆಟ್ ಮಾರುತ್ತಿದ್ದರು. ತಾವು ಪ್ರಚಾರಕ್ಕಾಗಿ ತಂದಿದ್ದ ಪಾಂಪ್ಲೆಟ್‍ನಲ್ಲಿ ದುಬಾರಿ ಬೆಲೆಯ ಬೈಕ್, ಗೃಹೋಪಯೋಗಿ ವಸ್ತುಗಳನ್ನು ಟಿಕೆಟ್ ವಿಜೇತರಿಗೆ ನೀಡಲಾಗುತ್ತದೆ ಎನ್ನಲಾಗಿತ್ತು. ಹೀಗಾಗಿ ಪ್ರತಿ ಟಿಕೆಟ್‍ಗೆ 200 ರೂ. ಶುಲ್ಕ ನಿಗದಿ ಮಾಡಿದ್ದರು. ಕೆರೂರು ಗ್ರಾಮಸ್ಥರು ಸುಮಾರು 6 ರಿಂದ 7 ಸಾವಿರ ಟಿಕೆಟ್ ಖರೀದಿ ಮಾಡಿದ್ದರು.

    ಬುಧವಾರ ಲಕ್ಕಿ ಡ್ರಾ ಕಾರ್ಯಕ್ರಮವನ್ನು ಗ್ರಾಮದ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು. ಆದರೆ ಯಾರೋಬ್ಬರಿಗೂ ಬಹುಮಾನ ಸಿಗಲಿಲ್ಲ. ಹೀಗಾಗಿ ಲಾಟರಿ ಟಿಕೆಟ್ ಮಾರಾಟಗಾರರ ಜೊತೆಗೆ ಗ್ರಾಮಸ್ಥರು ಮಾತಿಗಿಳಿದಿದ್ದು, ಬಳಿಕ ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಲಘು ಲಾಠಿ ಪ್ರಹಾರ ನಡೆಸಿದರು.

    ಗ್ರಾಮಸ್ಥರಿಂದ ಸಾಮೂಹಿಕ ಹಲ್ಲೆಗೆ ಒಳಗಾದ ಲಾಟರಿ ವ್ಯಾಪಾರಿಗಳು ಗಾಯಗೊಂಡಿದ್ದು, ಅವರನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅವರ ಮೂಲಗಳ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಲಾಟರಿ ವ್ಯಾಪಾರಿಗಳು ಸುತ್ತಮುತ್ತಲಿನ ಗ್ರಾಮದಲ್ಲಿಯೂ ಲಾಟರಿ ಮಾರಾಟ ಮಾಡಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

  • ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ದುಬೈ: ಭಾರತೀಯ ಮೂಲದ 25 ವರ್ಷದ ಯುವಕನಿಗೆ ಒಂದು ಮಿಲಿಯನ್(6.5 ಕೋಟಿ ರೂ.) ಯುಎಸ್ ಡಾಲರ್ ಬಹುಮಾನ ಲಾಟರಿ ಹೊಡೆದಿದೆ.

    ದುಬೈ ಡ್ಯೂಟಿ ಫ್ರೀ (ಡಿಡಿಎಫ್) ಅವರು ನಡೆಸಿದ ಮಿಲೆನಿಯಮ್ ಮಿಲಿಯನೇರ್ ಸ್ಪರ್ಧೆಯಲ್ಲಿ ಭಾರಿ ಮೊತ್ತದ ಬಹುಮಾನ ಧಾನೀಶ್ ಕೋಥರಂಬನ್ ಅವರಿಗೆ ಸಿಕ್ಕಿದೆ.

    ಧಾನೀಶ್ ಮೂಲತಃ ಕೇರಳದವರಾಗಿದ್ದು, ದುಬೈನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವಾರಗಳ ಹಿಂದೆ ಧಾನೀಶ್ ರಜೆಗೆಂದು ಕೇರಳಗೆ ಹೋಗುತ್ತಿದ್ದಾಗ ತಮ್ಮ ಮಿಲೆನಿಯಮ್ ಡಾಲರ್ ನ ಮೊದಲ ಟಿಕೆಟ್ ತೆಗೆದುಕೊಂಡಿದ್ದರು.


    ಈ ಕುರಿತು ಧಾನೀಶ್ ಅವರು ಕೇರಳದಲ್ಲಿ ಮಾತನಾಡಿ, ಡಿಡಿಎಫ್ ಪ್ರತಿನಿಧಿಗಳಿಂದ ಮಿಲಿಯನ್ ಡಾಲರ್ ನಲ್ಲಿ ಗೆದ್ದಿರುವುದಾಗಿ ಕರೆ ಬಂದಾಗ ನನಗೆ ತಕ್ಷಣ ಆಶ್ಚರ್ಯವಾಯಿತು. ನಿಜವಾಗಿ ನಾನು ಗೆದ್ದಿರುವುದನ್ನು ನನಗೆ ನಂಬಲು ಸಾಧ್ಯವಾಗಲಿಲ್ಲ. ಚಿಕ್ಕ ವಯಸ್ಸಿನಲ್ಲಿಯೇ ನಾನು ಈ ದೊಡ್ಡ ಗೆಲುವು ಸಾಧಿಸಬಹುದೆಂದು ನಾನು ಭಾವಿಸಿರಲಿಲ್ಲ! ಈ ಅದ್ಭುತ ಕೊಡುಗೆಗಾಗಿ ದೇವರಿಗೆ ಮತ್ತು ದುಬೈ ಡ್ಯೂಟಿ ಫ್ರೀ ಧನ್ಯವಾದಗಳು” ಎಂದು ತಮ್ಮ ಖುಷಿಯನ್ನ ಹೇಳಿಕೊಂಡಿದ್ದಾರೆ.

    ಈ ಹಿಂದೆ ಜನವರಿಯಲ್ಲಿ ಅಬುದಾಬಿಯಲ್ಲಿ ಯು.ಎ.ಇ.ನಲ್ಲಿ ಭಾರತೀಯ ಮೂಲದ ವ್ಯಕ್ತಿಗಳಿಗೆ ಭಾರೀ ಮೊತ್ತದ ಬಹುಮಾನ ಬಂದಿತ್ತು. ಕಳೆದ ವರ್ಷ ಅಕ್ಟೋಬರ್ ನಲ್ಲಿ ನಡೆದ ಮೆಗಾ ರಾಫೆಲ್ ಡ್ರಾನಲ್ಲಿ ಪ್ರತಿವರ್ಷ 1 ಮಿಲಿಯನ್ ಡಾಲರ್ (ಯುಎಸ್‍ಡಿ 2.7 ಲಕ್ಷ) ಗೆದ್ದುಕೊಂಡ 10 ಜನರ ಪೈಕಿ ಎಂಟು ಭಾರತೀಯರು ಸೇರಿದ್ದರು. ಈಗ ಧಾನೀಶ್ ಕೋಥರಂಬನ್ ಸುಮಾರು 6.5 ಕೋಟಿ ರೂ. ಬಹುಮಾನವನ್ನು ಗೆದ್ದಿದ್ದಾರೆ.

    ಮಿಲೆನಿಯಮ್ ಮಿಲಿಯನೇರ್ ಎರಡನೇ ವಿಜೇತ ಯಾಝನ್ ಕ್ಯೂರ್ಔಟ್ ಆಗಿದ್ದು, ಇದು ತಮ್ಮ ಮದುವೆ ಆದ ನಂತರ ಎರಡನೇ ಖುಷಿ ಸಮಯ ಎಂದು ಹೇಳಿಕೊಂಡಿದ್ದಾರೆ.