Tag: ಲಾಠಿ ಚಾರ್ಚ್

  • ಗಣೇಶ ವಿಸರ್ಜನೆ ವೇಳೆ ಗಲಾಟೆ – ಪೊಲೀಸರಿಂದ ಲಾಠಿ ಚಾರ್ಚ್

    ಗಣೇಶ ವಿಸರ್ಜನೆ ವೇಳೆ ಗಲಾಟೆ – ಪೊಲೀಸರಿಂದ ಲಾಠಿ ಚಾರ್ಚ್

    ಕೋಲಾರ: ಜಿಲ್ಲೆಯಲ್ಲಿ ಭಜರಂಗದಳ ಹಾಗೂ ಶ್ರೀರಾಮ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

    ಕೋಲಾರ ನಗರದ ಅಮ್ಮವಾರಿಪೇಟೆ ಸರ್ಕಲ್ ಬಳಿ ಗಣೇಶನ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಮೆರವಣಿಗೆ ವೇಳೆ ಆಟೋ ಚಾಲಕನೊಬ್ಬ ಅನಗತ್ಯವಾಗಿ ಅಡ್ಡಿ ಉಂಟು ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಮಧ್ಯೆ ಪ್ರವೇಶಿಸಿ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

    ಭಜರಂಗದಳ ಹಾಗೂ ಶ್ರೀರಾಮ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಗಣೇಶ್ ವಿಸರ್ಜನೆ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಈ ವೇಳೆ ಆಟೋ ಚಾಲಕನೊಬ್ಬ ಮೆರವಣಿಗೆಗೆ ಅಡ್ಡಿಪಡಿಸಿದ್ದಾನೆ. ಆಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಎರಡು ಗುಂಪುಗಳ ನಡುವೆ ಗುಂಪು ಘರ್ಷಣೆ ನಡೆದಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಎರಡು ಗುಂಪುಗಳನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv