Tag: ಲಾಲ್ ಬಹದ್ದೂರ್ ಶಾಸ್ತ್ರಿ

  • ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ

    ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ

    ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಸಿಎಂ ಮಾತನಾಡಿದರು.

    ಅ.2 ರಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು. ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಶಾಸ್ತ್ರಿ ಅವರನ್ನು ಸಿಎಂ ಸ್ಮರಿಸಿದರು.

    ಕಾಕತಾಳೀಯ ಎಂಬಂತೆ ಇಂದು ವಿಜಯದಶಮಿಯೂ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

  • ಮಹಾತ್ಮಾ ಗಾಂಧಿ, ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನ – ಮೋದಿ, ಕೋವಿಂದ್ ನಮನ

    ಮಹಾತ್ಮಾ ಗಾಂಧಿ, ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನ – ಮೋದಿ, ಕೋವಿಂದ್ ನಮನ

    ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿಗೆ ಹೂವಿನ ಗೌರವ ಸಲ್ಲಿಸಿದ್ದಾರೆ.

    ರಾಜ್‍ಘಾಟ್‍ಗೆ ತೆರಳಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ಮೋದಿ ಅವರು ಗಾಂಧಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ್ದಾರೆ. ರಾಷ್ಟ್ರಪಿತ ಗಾಂಧೀಜಿ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, “ಮಹಾತ್ಮಾ ಗಾಂಧೀಜಿಯವರ ಜೀವನ ಮತ್ತು ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸಲು ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ” ಎಂದು ಮೋದಿ ಹೇಳಿದ್ದಾರೆ.

    ರಾಷ್ಟ್ರಪಿತ ಗಾಂಧಿಯವರ ಸತ್ಯ, ಅಹಿಂಸೆ ಮತ್ತು ಪ್ರೀತಿಯ ಸಂದೇಶವು ಸಮಾಜದಲ್ಲಿ ಸಾಮರಸ್ಯವನ್ನು ತುಂಬುತ್ತದೆ. ವಿಶ್ವದ ಕಲ್ಯಾಣಕ್ಕೆ ದಾರಿ ಮಾಡಿಕೊಡುತ್ತದೆ. ಅವರು ಮಾನವೀಯತೆಯ ಪ್ರತೀಕವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.

    ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಹೀಗಾಗಿ ವಿಜಯ್ ಘಾಟ್‍ಗೆ ಹೋಗಿ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.

    https://twitter.com/narendramodi/status/1311843987532050437

    ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸ್ಥಿರ ಮತ್ತು ಅತ್ಯಂತ ದೃಢ ನಿಲುವಿನ ವ್ಯಕ್ತಿಯಾಗಿದ್ದರು. ಸರಳತೆಯನ್ನು ನಿರೂಪಿಸಿದ್ದರು. ಅಲ್ಲದೇ ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದ್ದರು. ಅಷ್ಟೇ ಅಲ್ಲದೇ ಅವರು ಭಾರತಕ್ಕಾಗಿ ಮಾಡಿದ ಎಲ್ಲದಕ್ಕೂ ಆಳವಾದ ಕೃತಜ್ಞತೆಗಳೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ” ಎಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಗೆ ಶುಭಾಶಯ ಕೋರಿದ್ದಾರೆ.

  • ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

    ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

    ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಅಂಗವಾಗಿ ಗದಗ್ ನಲ್ಲಿ ನಡೆದ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚರಂಡಿ ಸ್ವಚ್ಛಗೊಳಿಸುವ ಮೂಲಕ ಚಾಲನೆ ನೀಡಿದರು.

    ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಹಿರೇಮಠ ಹ್ಯಾಂಡ್ ಗ್ಲೌಸ್ ಹಾಗೂ ಮಾಸ್ಕ್ ಹಾಕಿಕೊಂಡು ಪೊರಕೆ ಹಿಡಿದು ಮುಂದಾಳತ್ವ ವಹಿಸಿ ಕ್ಲೀನ್ ಮಾಡಲು ಮುಂದಾದರು. ನಗರ ಮುಳಗುಂದ ನಾಕಾ, ಹಸಿರುಕೆರಿ, ಚನ್ನಮ್ಮ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

    ಈ ಮೂಲಕ ಸ್ಥಳೀಯ ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು. ಪ್ರತಿಯೊಬ್ಬರೂ ಕಾಳಜಿ ನಿಷ್ಠೆಯಿಂದ ಸ್ವಚ್ಛತೆ ಕೆಲಸ ಮಾಡಬೇಕು. ಮನೆ, ಓಣಿ, ಊರು ಸುತ್ತಲಿನ ಪರಿಸರ ಹಾಗೂ ಮಾಲಿನ್ಯ ಹಾಳಾಗದಂತೆ ನೋಡಿಕೊಳ್ಳಬೇಕು. ಇದು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್, ಉಪವಿಭಾಗಾಧಿಕಾರಿ ಪಿ.ಎಸ್ ಮಂಜುನಾಥ್, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಇದರಲ್ಲಿ ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

    ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

    ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ.

    ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಈ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಅಂಡರ್‍ಪಾಸ್ ರಸ್ತೆ ನಿರ್ಮಾಣವು ವಿಮಾನಗಳ ರನ್‍ವೇಯನ್ನು, ವಿಮಾನಗಳ ನಿಲ್ದಾಣ ಪಥ ಹಾಗು ಹೆದ್ದಾರಿಯನ್ನು ನಾಲ್ಕು ರಸ್ತೆಗಳಾಗಿ ಪರಿವರ್ತಿಸುತ್ತದೆ.

    ಅಂಡರ್‍ಪಾಸ್ ರಸ್ತೆಗಳ ನಿರ್ಮಾಣ ಹಾಗೂ ವಿಮಾನಗಳ ರನ್‍ವೇ ವಿಸ್ತರಣೆ ಕಾರ್ಯ ವಾರಣಾಸಿ-ಲಖ್ನೋ ರಾಷ್ಟ್ರೀಯ ಹೆದ್ದಾರಿ 56 ರೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದೆ. ಈಗಿರುವ ರನ್‍ವೇ 2750 ಮೀ. ಗಳಾಗಿದ್ದು ಸರಕು ಸಾಗಾಣಿಕೆ ಹಾಗೂ ಬೋಯಿಂಗ್ ವಿಮಾನಗಳನ್ನು ಇಳಿಸಲು ಅನುಕೂಲವಾಗುವಂತೆ 4075ಮೀ ಗೆ ವಿಸ್ತರಿಸಬೇಕೆಂದು ಪ್ರಸ್ತಾಪಿಸಿದೆ. ಅದರಂತೆಯೇ ಈ ರನ್‍ವೇ ಹಾಗೂ ಅಂಡರ್‍ಪಾಸ್ ಕಾಮಗಾರಿಗಳೆರೆಡೂ ಏಕಕಾಲಕ್ಕೆ ಪ್ರಾರಂಭವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕ್ರಿಯೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಕುರಿತಂತೆ ಇರುವ ದೀರ್ಘಾವಧಿ ಸಮಸ್ಯೆಗಳು ಪರಿಹಾರವಾಗಲಿವೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಇರುವ ಹೆದ್ದಾರಿಗಳನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಎಸ್.ಬಿ ಸಿಂಗ್ ಹೇಳಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 56 ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮಾಡಲು ಉತ್ತರ ಪ್ರದೇಶ ಸರಕಾರ 2013 ರಲ್ಲಿ ಅನುಮತಿ ನೀಡಿದ್ದರೂ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೆದ್ದಾರಿ ಪ್ರಾಧಿಕಾರವೂ ವಾರಣಾಸಿ- ಸುಲ್ತಾನ್‍ಪುರ ಗಳಲ್ಲಿ ಕಾಮಗಾರಿ ಪ್ರಾರಂಭಿಸಿತ್ತಾದರೂ ಪೂರ್ಣಗೊಳಿಸಲಾಗಲಿಲ್ಲ.  2014ರಲ್ಲಿ ಕೇಂದ್ರದಲ್ಲಾದ ಸಿಬ್ಬಂದಿ ಬದಲಾವಣೆ, ಭೂಸ್ವಾಧೀನ ಪ್ರಕ್ರಿಯೆಗಳಿಂದಾಗಿ ಕಾಮಗಾರಿ ಭರದಿಂದ ಸಾಗಿದೆ.

    2014ರ ಮಾರ್ಚ್ 27 ರಂದು ನಾಗರಿಕ ವಿಮಾನಯಾನ ನಿರ್ದೇಶಕರು ಉತ್ತರ ಪ್ರದೇಶ ಸರಕಾರಕ್ಕೆ ಈ ಕುರಿತು ಪತ್ರವೊಂದನ್ನು ಕಳುಹಿಸಿದ್ದರು. ಆದರೆ ಅದನ್ನು ನಿರ್ಲಕ್ಷಿಸಲಾಗಿತ್ತು. 2017 ರಲ್ಲಿ ಪ್ರಾಧಿಕಾರವು ಕಾಮಗಾರಿಗೆ ಅಗತ್ಯ ಭೂಮಿಯನ್ನು ಗುರುತಿಸಿದ ನಂತರ ಈಗ ಕಾಮಗಾರಿ ವೇಗವನ್ನು ಪಡೆದಿದೆ.