Tag: ಲಾಲ್ ಬಾಗ್

  • Bengaluru | ಆಗಸ್ಟ್‌ 15ರ ವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

    Bengaluru | ಆಗಸ್ಟ್‌ 15ರ ವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

    ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line Metro Route) ಮೂರು ದಿನ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

    ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್‌ ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೀಣ್ಯ ಕೈಗಾರಿಕಾ ಪ್ರದೇಶದಿಂದ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು (Metro Train) ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

    ಆಗಸ್ಟ್‌ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆ ಬದಲಿಗೆ 10 ಗಂಟೆಗೆ ಕೊನೆಯಾಗಲಿದೆ. ಆ. 14 ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6 ಗಂಟೆಗೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆಗೆ ಬದಲಾಗಿ 10 ಗಂಟೆ ವರೆಗೆ ಮಾತ್ರ ಇರಲಿದೆ. ಆ.15ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ 6ಕ್ಕೆ ಸೇವೆ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದೆ.

    ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14ರಂದು ಕೊನೆಯ ರೈಲು ಸೇವೆ ರಾತ್ರಿ 11.05 ಗಂಟೆ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆ ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಇದನ್ನೂ ಓದಿ: ಟಿಬಿ ಡ್ಯಾಂನ 19ನೇ ಗೇಟ್ ಕೊಚ್ಚಿ ಹೋಗಿ 46 ಗಂಟೆ; ಶರವೇಗದಲ್ಲಿ ಹೊಸ ಗೇಟ್‌ಗಳ ನಿರ್ಮಾಣ ಕಾರ್ಯ

    ಆದಾಗ್ಯೂ, ಪೀಣ್ಯ ಕೈಗಾರಿಕಾ ಪ್ರದೇಶದಿಂದ – ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11, 12 ಗಂಟೆವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆ ಆ.14 ಮತ್ತು 15 ರಂದು ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗುತ್ತದೆ. ಆಧಿದರೆ, ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿಗಮ ತಿಳಿಸಿದೆ.

    ಲಾಲ್‌ಬಾಗ್‌ಗೆ ಪೇಪರ್‌ ಟಿಕೆಟ್‌ ವ್ಯವಸ್ಥೆ:
    ಆಗಸ್ಟ್‌ 19ರ ವರೆಗೆ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ವೀಕ್ಷಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ತ್ವರಿತ ಪ್ರಯಾಣಕ್ಕಾಗಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ವಿತರಿಸುತ್ತಿರುವುದಾಗಿ ಬಿಎಂಆರ್‌ಸಿಎಲ್‌ ಹೇಳಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಆ. 15, 17 ಮತ್ತು 18ರಂದು ಮೆಟ್ರೋದಲ್ಲಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಪೇಪರ್‌ ಟಿಕೆಟ್‌ ಲಭ್ಯವಿರಲಿದೆ. ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್‌ ಟಿಕೆಟ್‌ ಪಡೆದು ಪ್ರಯಾಣಿಸಬಹುದು.

    ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ಗಳನ್ನು ಖರೀದಿಸಿದ ದಿನದಂದು ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಟೋಕನ್‌, ಕಾರ್ಡ್‌, ಕ್ಯೂ ಆರ್‌ ಕೋಡ್‌ ಬಳಸಿ ಟಿಕೆಟ್‌ ಪಡೆಯುವ ಮೂಲಕ ಲಾಲ್‌ಬಾಗ್‌ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್‌ ಟಿಕೆಟ್‌, ಕಾರ್ಡ್‌ ಮತ್ತು ಕ್ಯೂ ಆರ್‌ ಕೋಡ್‌ ಟಿಕೆಟ್‌ ಮೂಲಕ ಮಾತ್ರ ಪ್ರಯಾಣಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ 

  • ಕ್ಷಮೆ ಕೇಳಿದ ರಚಿತಾ

    ಕ್ಷಮೆ ಕೇಳಿದ ರಚಿತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದ ರಚಿತಾ ರಾಮ್ ಕಾರು

    ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದ ರಚಿತಾ ರಾಮ್ ಕಾರು

    ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಲಾಲ್ ಬಾಗ್ (Lal Bagh) ನಲ್ಲಿ ಫ್ಲವರ್ ಶೋ (Flower Show) ನಡೆಯುತ್ತಿದೆ. ಇದರಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದಕ್ಕಾಗಿ ನಟಿ ರಚಿತಾ ರಾಮ್ (Rachita Ram) ಇಂದು ಲಾಲ್ ಬಾಗ್ ಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ.

    ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ. ಕಾರು ನಿಲ್ಲಿಸದೇ ಕ್ಷಮೆಯಾಚನೆಯೂ ಮಾಡದೇ ಹೊರಟ ರಚಿತಾ ಹಾಗೂ ಡ್ರೈವರ್ ನಡೆಗೆ ಅಲ್ಲಿದ್ದವರು ಬೇಸರ ಮಾಡಿಕೊಂಡಿದ್ದಾರೆ.

     

    ಆಕಸ್ಮಿಕ ಎನ್ನುವಂತೆ ಘಟನೆ ನಡೆದಿದ್ದರೂ, ರಚಿತಾ ರಾಮ್ ಕನಿಷ್ಠ ಮಾನವೀಯತೆ ದೃಷ್ಟಿಯಿಂದಾರೂ ಕಾರ್ಮಿಕನನ್ನು ಮಾತನಾಡಿಸಬೇಕಿತ್ತು ಎನ್ನುವುದು ಅಲ್ಲಿದ್ದವರ ಪ್ರತಿಕ್ರಿಯೆಯಾಗಿತ್ತು. ಆದರೆ, ರಚಿತಾ ಹಾಗೆ ಮಾಡಿಲ್ಲ ಎನ್ನುವುದೇ ಬೇಸರದ ಸಂಗತಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    ಬೆಂಗಳೂರು: ಲಾಲ್ ಬಾಗ್ ನಾ ಫಲಪುಷ್ಪ ಪ್ರದರ್ಶನಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಗೆ ಅರ್ಪಿಸಿದ್ದ ಫ್ಲವರ್ ಶೋ ವೀಕ್ಷಣೆಗೆ ಜನ ಸಾಗರವೇ ಹರಿದು ಬಂದಿದೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಆಯೋಜನೆ ಮಾಡಿದ್ದ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನಕ್ಕೆ ತೆರೆ ಬಿದ್ದಿದೆ. ಆಗಸ್ಟ್ 5ರಿಂದ 15ರ ವರೆಗೆ 10 ದಿನಗಳ ಕಾಲ ನಡೆದ ಫ್ಲವರ್ ಶೋಗೆ ಕಡೆಯ ದಿನವಾದ ಸೋಮವಾರ ದಾಖಲೆ ಮಟ್ಟದಲ್ಲಿ ಜನ ಸಾಗರ ಹರಿದು ಬಂದಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈ ‘ಪ್ರಣಯ ಪಕ್ಷಿ’ಗಳದ್ದೇ ಮಾತು

    ಕೊರೋನಾ ಬಳಿಕ ಅದ್ಧೂರಿ ಆಗಿ ನಡೆದ ಮತ್ತು ಅಗಲಿದ ಕನ್ನಡ ನಾಡಿನ ಕರುನಾಡ ರತ್ನಗಳಾದ ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್‍ಗೆ ಈ ಬಾರಿ ಫ್ಲವರ್ ಶೋವನ್ನು ಅರ್ಪಿಸಲಾಗಿತ್ತು. ಹೀಗಾಗಿ ಫ್ಲವರ್ ಶೋ ವೀಕ್ಷಿಸಲು ಕಳೆದ 2 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಜನಸ್ತೋಮವೇ ಆಗಮಿಸಿ ಹೂವಿನ ಲೋಕವನ್ನು ಕಣ್ತುಂಬಿಕೊಂಡಿದ್ದಾರೆ. ಹೂವಿನ ಲೋಕಕ್ಕೆ ಮರಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತೋಷ ಪಟ್ಟಿದ್ದಲ್ಲದೇ, ಕರುನಾಡ ರತ್ನ, ನಗುವಿನ ಒಡೆಯ ಡಾ.ಪುನೀತ್ ರಾಜ್‍ಕುಮಾರ್ ರನ್ನು ಕಂಡು ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

    ಕಳೆದ 10 ದಿನಗಳ ಕಾಲ ನಡೆದ ಈ ಪ್ಲವರ್ ಶೋ ವೀಕ್ಷಣೆಗೆ ಸುಮಾರು 10 ಲಕ್ಷ ಕ್ಕೂ ಹೆಚ್ಚು ಜನ ಆಗಮಿಸಿದ್ದಾರಂತೆ. ಇಷ್ಟು ಪ್ರಮಾಣದಲ್ಲಿ ಜನ ಬಂದಿರೋದು ಇದೇ ಮೊದಲು. ಈ ಬಾರಿಯ ಫ್ಲವರ್ ಶೋನಿಂದ ತೋಟಗಾರಿಕೆ ಇಲಾಖೆಗೆ ಬರೋಬ್ಬರಿ 3.36 ಕೋಟಿ ಆದಾಯ ಬಂದಿದೆಯಂತೆ. ಒಟ್ಟಾರೆ 10 ದಿನಗಳ ಫ್ಲವರ್ ಶೋಗೆ ಅದ್ದೂರಿಯಾಗಿ ತೆರೆ ಬಿದ್ದಿದ್ದು ನಗುವಿನ ದೊರೆಗಳಾದ ಡಾ.ರಾಜ್, ಅಪ್ಪುವನ್ನು ಹೂವಿನಲ್ಲಿ ಕಂಡು ಹೂವಿನ ಪ್ರೇಮಿಗಳು ಖುಷಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ಕೊರೊನಾ ಕರಿನೆರಳು – ಈ ಬಾರಿ ಇಲ್ಲ ಫ್ಲವರ್ ಶೋ

    ಬೆಂಗಳೂರಿನಲ್ಲಿ ಕೊರೊನಾ ಕರಿನೆರಳು – ಈ ಬಾರಿ ಇಲ್ಲ ಫ್ಲವರ್ ಶೋ

    ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಇನ್ನೂ ಮೂರು ದಿನ ಬಾಕಿಯಿದೆ. ಆದರೆ ಪ್ರತಿ ವರ್ಷ ಗಣರಾಜ್ಯೋತ್ಸವದ ಪ್ರಯುಕ್ತ ಲಾಲ್‍ಬಾಗ್‍ನಲ್ಲಿ ನಡೆಯುತ್ತಿದ್ದ ಫಲಪುಷ್ಪ ಪ್ರದರ್ಶನ ಈ ಬಾರಿ ರದ್ದಾಗಿದೆ.

    ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ರದ್ದತಿ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಕುಸುಮಾ, ಕೊರೊನಾ ಭೀತಿ ಹಿನ್ನೆಲೆ ಫ್ಲವರ್ ಶೋವನ್ನು ಕೈ ಬಿಟ್ಟಿದ್ದೇವೆ. ಪ್ರತಿವರ್ಷ ಐದು ಲಕ್ಷಕ್ಕೂ ಹೆಚ್ಚು ಮಂದಿ ಫ್ಲವರ್ ಶೋ ವೀಕ್ಷಣೆ ಮಾಡುತ್ತಿದ್ದರು ಎಂದು ಹೇಳಿದರು.

    ಒಂದು ಪ್ರದರ್ಶನಕ್ಕೆ ಎರಡು ಕೋಟಿಗೂ ಅಧಿಕ ವೆಚ್ಚ ತಗುಲುತ್ತಿತ್ತು. ಫ್ಲವರ್ ಶೋ ವೇಳೆ ಹೆಚ್ಚು ಜನ ಉದ್ಯಾನವನಕ್ಕೆ ಬರುತ್ತಾರೆ. ಈ ವೇಳೆ ಕ್ರೌಡ್ ಕಂಟ್ರೋಲ್ ಮಾಡುವುದು ಅಸಾಧ್ಯ. 1912 ರಿಂದ ಆರಂಭವಾದ ಪ್ಲವರ್ ಶೋ ಸುಮಾರು 109 ವರ್ಷಗಳ ಕಾಲ ಸತತವಾಗಿ ಆಚರಿಸಿಕೊಂಡು ಬಂದಿದೆ ಎಂದು ತಿಳಿಸಿದರು.

    ತೋಟಗಾರಿಕೆ ಇಲಾಖೆ ಈ ವರ್ಷ ಆಯೋಜನೆ ಮಾಡುವ ಲೆಕ್ಕಾಚಾರ ಇಟ್ಟುಕೊಂಡಿತ್ತು. ಈ ಬಗ್ಗೆ ಬಿಬಿಎಂಪಿಗೆ ತೋಟಗಾರಿಕೆ ಇಲಾಖೆ ಅಭಿಪ್ರಾಯ ಕೇಳಿತ್ತು. ಇದಕ್ಕೆ ಪ್ರತಿಯಾಗಿ ಬಿಬಿಎಂಪಿ ಫಲಪುಷ್ಪ ಪ್ರದರ್ಶನ ಆಯೋಜಿಸುವುದಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ ಈ ವರ್ಷದ ಫ್ಲವರ್ ಶೋವನ್ನು ತೋಟಗಾರಿಕೆ ಇಲಾಖೆ ಕೈ ಬಿಟ್ಟಿದೆ ಎಂದರು.

    ಕೋವಿಡ್ 19 ನಿಂದಾಗಿ ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಬೇಕಿದ್ದ ಫ್ಲವರ್ ಶೋ ರದ್ದಾಗಿತ್ತು. ಈಗ ಮತ್ತೊಮ್ಮೆ ಕೊರೊನಾ ಕಾರಣದಿಂದಾಗಿ ಫ್ಲವರ್ ಶೋ ರದ್ದಾಗಿದೆ.

  • ವಾಕಿಂಗ್ ಮಾಡಿದ್ರೆ ಸೋಂಕು ಹರಡಲ್ಲ- ಯಾಕ್ರಿ ಪಾರ್ಕ್ ಬಂದ್ ಮಾಡ್ತಿರಿ?

    ವಾಕಿಂಗ್ ಮಾಡಿದ್ರೆ ಸೋಂಕು ಹರಡಲ್ಲ- ಯಾಕ್ರಿ ಪಾರ್ಕ್ ಬಂದ್ ಮಾಡ್ತಿರಿ?

    ಬೆಂಗಳೂರು: ನಗರದ ಪಾರ್ಕ್‌ಗಳಲ್ಲಿ ವಾಕ್ ಮಾಡಿದರೆ ಕೊರೊನಾ ಸೊಂಕು ಹರಡುತ್ತಾ? ಯಾಕ್ರಿ ಪಾರ್ಕ್‌ಗಳನ್ನು ಬಂದ್ ಮಾಡುತ್ತೀರಿ ಎಂದು ಸಿಎಂ ಯಡಿಯೂರಪ್ಪ ಅವರ ಆದೇಶದ ವಿರುದ್ಧ ಲಾಲ್ ಬಾಗ್‍ನಲ್ಲಿ ವಾಯುವಿಹಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.

    ಪಾರ್ಕ್‌ಗಳಲ್ಲಿ ಜನ ಸಂದಣಿ ಇರುತ್ತೆ. ಹೀಗಾಗಿ ಸೋಂಕು ಹರಡಬಹುದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ, ಪಾರ್ಕ್‌ಗಳನ್ನು ಬಂದ್ ಮಾಡಿ ಎಂದು ಸಿಎಂ ಆದೇಶ ಮಾಡಿದ್ದಾರೆ. ಆದರೆ ಸಿಎಂ ಆದೇಶಕ್ಕೆ ಕಿಮ್ಮತ್ತು ನೀಡದ ಲಾಲಾ ಬಾಗ್ ತೋಟಗಾರಿಕೆ ಆಡಳಿತ ಮಂಡಳಿ, ಪಾರ್ಕ್ ಅನ್ನು ಶುರು ಮಾಡಿದೆ. ಹೀಗಾಗಿ ನಿತ್ಯ ಸಾವಿರಾರು ವಾಕರ್ಸ್ ಮಾಸ್ಕ್ ಧರಿಸದೇ ಲಾಲ್ ಬಾಗ್ ಉದ್ಯಾನವನಕ್ಕೆ ಬರುತ್ತಿದ್ದಾರೆ.

    ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಾರ್ಕ್ ನಲ್ಲಿ ಸೂಚನಾ ಫಲಕಗಳನ್ನು ಕೂಡ ಹಾಕಿಲ್ಲ. ಇನ್ನೂ ಸಿಎಂ ಆದೇಶದ ಕ್ರಮವನ್ನು ಕೆಲ ವಾಯು ವಿಹಾರಿಗಳು ಸ್ವಾಗತಿಸಿದರೆ, ಇನ್ನೂ ಕೆಲವರು ಪಾರ್ಕ್ ಗಳಲ್ಲಿ 30-40 ವರ್ಷದಿಂದ ವಾಕ್ ಮಾಡುತ್ತಿದ್ದೇವೆ. ಏಕಾಏಕಿ ಬಂದ್ ಮಾಡಿದರೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತೆ. ಎರಡ್ಮೂರು ಗಂಟೆಯಾದರೂ ಪಾರ್ಕ್ ಓಪನ್ ಇದ್ದರೆ ವಾಕರ್ಸ್‍ಗೆ ಅನುಕೂಲವಾಗುತ್ತೆ ಎಂದು ಕೆಲವರು ಅಭಿಪ್ರಾಯಪಟ್ಟರು.

  • ಲಾಲ್ ಬಾಗ್ ಫ್ಲವರ್ ಶೋ ವೀಕ್ಷಣೆಗೆ ನಮ್ಮ ಮೆಟ್ರೋನಿಂದ ಬಂಪರ್ ಆಫರ್!

    ಲಾಲ್ ಬಾಗ್ ಫ್ಲವರ್ ಶೋ ವೀಕ್ಷಣೆಗೆ ನಮ್ಮ ಮೆಟ್ರೋನಿಂದ ಬಂಪರ್ ಆಫರ್!

    ಬೆಂಗಳೂರು: ವೀಕೆಂಡ್ ನಲ್ಲಿ ಲಾಲ್ ಬಾಗ್ ಫ್ಲವರ್ ಶೋ ನೋಡಲು ಬರುವವರಿಗೆ ನಮ್ಮ ಮೆಟ್ರೋ ಬಂಪರ್ ಆಫರ್  ವೊಂದನ್ನು ನೀಡಿದೆ.

    ನಮ್ಮ ಮೆಟ್ರೋ ಕೇವಲ 30 ರೂಪಾಯಿಯಲ್ಲಿ ಎರಡು ಬದಿಯ ಪ್ರಯಾಣಕ್ಕೆ ಅವಕಾಶ ನೀಡಿದೆ. 30 ರೂ. ಪೇಪರ್ ಟಿಕೆಟ್ ಮೂಲಕ ಲಾಲ್ ಬಾಗ್ ಗೆ ಹೋಗಿ ವಾಪಸ್ ಬರಬಹುದು. ಅಷ್ಟೇ ಅಲ್ಲದೇ ಲಾಲ್ ಬಾಗ್ ನಿಂದ ನಗರದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಹೋಗಿ ವಾಪಸ್ ಆಗಬಹುದು.

    ಈ ಆಫರ್ ವೀಕೆಂಡ್ ನಲ್ಲಿ ಅಂದ್ರೆ ದಿನಾಂಕ 11, 12, 15 ರಂದು ಮಾತ್ರ ಅನ್ವಯವಾಗುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯಂದು 30 ರೂ. ನಲ್ಲಿ ಲಾಲ್ ಬಾಗ್ ಹೋಗಿ ವಾಪಸ್ ಬರಬಹುದು. ಸ್ಮಾರ್ಟ್ ಕಾರ್ಡ್ ಬಳಕೆ ಮಾಡುವರಿಗೂ ಸಾಮಾನ್ಯ ದರ ಅನ್ವಯವಾಗಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • 208ನೇ ಫ್ಲವರ್ ಶೋ- ಒಂದೇ ದಿನದಲ್ಲಿ ಲಕ್ಷಕ್ಕಿಂತ್ಲೂ ಅಧಿಕ ಜನ ಭೇಟಿ

    208ನೇ ಫ್ಲವರ್ ಶೋ- ಒಂದೇ ದಿನದಲ್ಲಿ ಲಕ್ಷಕ್ಕಿಂತ್ಲೂ ಅಧಿಕ ಜನ ಭೇಟಿ

    ಬೆಂಗಳೂರು: ಬಹುನೀರಿಕ್ಷಿತ 208 ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದೆ. ಈ ಹೂಮೇಳ ನೋಡಲು ಜನರು ಸಾಗರದಂತೆ ಹರಿದು ಬಂದಿದ್ದು, ಒಂದೇ ದಿನದಲ್ಲಿ ಒಂದು ಲಕ್ಷಕ್ಕಿಂತ ಅಧಿಕ ಜನರು ಭೇಟಿ ನೀಡಿದ್ದಾರೆ.

    ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ನಡೆಯುತ್ತಿರುವ 208ನೇ ಫ್ಲವರ್ ಶೋ ಎಲ್ಲರ ಮನಸೂರೆಗೊಳಿಸಿದೆ. ದೇಶದ ಗಡಿ ಕಾಯುವ ಸೈನಿಕರಿಗೆ ಗೌರವ ಸೂಚಿಸುವ ಯೋಜನೆ ಜನಮೆಚ್ಚುಗೆಗೆ ಪಾತ್ರವಾಗಿದೆ. ಯುದ್ಧ ವಾಹನಗಳು, ಹಿಮಾಲಯದ ಬೆಟ್ಟ ಗುಡ್ಡಗಳು, ಸಿಯಾಚಿನ್‍ನ ಹಿಮ, ಟ್ಯಾಂಕರ್, ನೌಕಾದಳದ ಹಡಗನ್ನು ಹೂವಿನ ಮಾದರಿಯಲ್ಲಿ ರಚಿಸಲಾಗಿದ್ದು, ಜನ ಆಸಕ್ತಿಯಿಂದ ಆಗಮಿಸಿ ಕಣ್ತುಂಬಿಕೊಂಡಿದ್ದಾರೆ.

    ಲಾಲ್‍ಬಾಗ್ ಹೂಮೇಳದಿಂದಾಗಿ ಸಿಂಗಾರಗೊಂಡ ನವ ವಧುವಿನಂತೆ ಕಂಗೊಳಿಸುತ್ತಿತ್ತು. ಶನಿವಾರ ಮೊದಲ ದಿನವಾದ್ದರಿಂದ ಫ್ಲವರ್ ಶೋಗೆ 15 ಸಾವಿರ ಜನ ಭೇಟಿ ನೀಡಿದ್ದರು. ಭಾನುವಾರ ಆಗಿದ್ದರಿಂದ ಹೆಚ್ಚು ಜನ ಬರುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಜನ ಭೇಟಿ ಕೊಟ್ಟಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಲಾಲ್‍ಬಾಗ್‍ಗೆ ಭೇಟಿ ಕೊಟ್ಟಿದ್ದಾರೆ ಎಂದು ಪ್ರವಾಸಿ ಆರತಿ ಹೇಳಿದ್ದಾರೆ.

    ಗಾಜಿನ ಮನೆ ಪ್ರವೇಶ ಮಾಡುತ್ತಿದ್ದಂತೆಯೇ ನವದೆಹಲಿಯಲ್ಲಿರುವ ಸ್ಮಾರಕ ಅಮರ್ ಜವಾನ್ ಜ್ಯೋತಿಯ ಮಾದರಿಯನ್ನ ನಿರ್ಮಿಸಲಾಗಿದೆ. ಫಲಪುಷ್ಪಗಳ ಜೊತೆ ಸೈನಿಕರ ತ್ಯಾಗ ಬಲಿದಾನ ಕುರಿತು ಮೂಡಿಸುವ ಜಾಗೃತಿಗೆ ಸಾರ್ವಜನಿಕರು ಭೇಷ್ ಅನ್ನುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿರುವ ರೀಲ್ ಚಿತ್ರವೂ ಕೂಡ ಗಾಜಿನ ಮನೆಯಲ್ಲಿ ಗಮನ ಸೆಳೆಯುತ್ತಿದೆ. ಈ ಫಲಪುಷ್ಪ ಪ್ರದರ್ಶನದ ಸೊಬಗು ಆಗಸ್ಟ್ 15 ರವರೆಗೆ ಆಯೋಜನೆಗೊಂಡಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಹದ್ದು ರಕ್ಷಿಸಲು ಹೋಗಿ 25 ಅಡಿ ಎತ್ತರದಿಂದ ಬಿದ್ದು ಯುವಕ ಅಸ್ವಸ್ಥ!

    ಹದ್ದು ರಕ್ಷಿಸಲು ಹೋಗಿ 25 ಅಡಿ ಎತ್ತರದಿಂದ ಬಿದ್ದು ಯುವಕ ಅಸ್ವಸ್ಥ!

    ಬೆಂಗಳೂರು: ಪಕ್ಷಿಯೊಂದನ್ನು ರಕ್ಷಿಸಲು ಹೋಗಿ ಯುವಕ ಮರದಿಂದ ಕೆಳಗೆ ಬಿದ್ದು ಅಸ್ವಸ್ಥಗೊಂಡ ಘಟನೆ ನಗರದ ಲಾಲ್ ಬಾಗ್ ಬಳಿ ನಡೆದಿದೆ.

    ಸದ್ಯ ಘಟನೆಯಲ್ಲಿ ಗಾಯಗೊಂಡ ಯುವಕನನ್ನು ಅಗ್ನಿಶಾಮಕ ದಳದ ವಾಹನದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಏನಿದು ಘಟನೆ?: ಲಾಲ್ ಬಾಗ್ ಸಮೀಪದ ಮರವೊಂದರಲ್ಲಿ ಗಾಳಿಪಟದ ದಾರಕ್ಕೆ ಹದ್ದೊಂದು ಸಿಲುಕಿ ಒದ್ದಾಡುತ್ತಿತ್ತು. ಈ ಪಕ್ಷಿಯನ್ನ ಉಳಿಸಲು ಪಕ್ಷಿ ಪ್ರೇಮಿಗಳು ಶತಪ್ರಯತ್ನ ಮಾಡಿದ್ದರು. ಅಂತೆಯೇ ಇದನ್ನು ಗಮನಿಸಿದ ಯುವಕ ಆ ಹದ್ದನ್ನು ರಕ್ಷಿಸಲೆಂದು ಮರ ಏರಿದ್ದಾನೆ. ಆದ್ರೆ ಸುಮಾರು 25 ಅಡಿ ಎತ್ತರದಿಂದ ಆಯತಪ್ಪಿ ಕೆಳಗೆಬಿದ್ದು ಅಸ್ವಸ್ಥಗೊಂಡಿದ್ದಾನೆ.

    ಸದ್ಯ ಹದ್ದನ್ನು ರಕ್ಷಿಸಲಾಗಿದ್ದು, ಯುವಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.