Tag: ಲಾಲ್ ಸಿಂಗ್ ಚಡ್ಡಾ

  • ‘ಲಾಲ್ ಸಿಂಗ್ ಚಡ್ಡಾ’ ಸೋಲಿನ ಹೊಣೆ ಹೊತ್ತ ನಟ ಆಮೀರ್ ಖಾನ್

    ‘ಲಾಲ್ ಸಿಂಗ್ ಚಡ್ಡಾ’ ಸೋಲಿನ ಹೊಣೆ ಹೊತ್ತ ನಟ ಆಮೀರ್ ಖಾನ್

    ಹಿಂದಿಯ ಸೂಪರ್ ಹಿಟ್ ಟಾಕ್ ಶೋ ಕಾಮಿಡಿ ವಿತ್ ಕಪೀಲ್ (Kapil) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಬಾಲಿವುಡ್ ಹೆಸರಾಂತ ನಟ ಆಮೀರ್ ಖಾನ್ (Aamir Khan). ಅವರು ಈ ಕಾರ್ಯಕ್ರಮದಲ್ಲಿ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಲಾಲ್ ಸಿಂಗ್ ಚಡ್ಡಾ (Lal Singh Chadha) ಸಿನಿಮಾದ ಸೋಲಿನ ಹೊಣೆಯನ್ನೂ ಅವರು ಹೊತ್ತುಕೊಂಡಿದ್ದಾರೆ. ಸೆಟಲ್ ಆಗಿ ಆ ಸಿನಿಮಾದಲ್ಲಿ ನಟಿಸಲಿಲ್ಲ. ಹಾಗಾಗಿ ಜನರು ಅದನ್ನು ಸ್ವೀಕಾರ ಮಾಡಲಿಲ್ಲ ಎಂದಿದ್ದಾರೆ.

    ಅಲ್ಲದೇ, ಅವರ ಮತ್ತೊಂದು ಸೂಪರ್ ಹಿಟ್ ಸಿನಿಮಾ ಪಿಕೆ ಸಿನಿಮಾದ ದೃಶ್ಯವೊಂದರ ಬಗ್ಗೆಯೂ ಅವರು ಮಾತನಾಡಿದ್ದಾರೆ. ಪಿಕೆ ಸಿನಿಮಾದ ದೃಶ್ಯವೊಂದರಲ್ಲಿ ರಿಯಲ್ ಆಗಿ ಬೆತ್ತಲೆಯಾಗಿಯೇ ನಟಿಸಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಪಿಕೆ ಸಿನಿಮಾದಲ್ಲಿ ಖಾಸಗಿ ಅಂಗಾಂಗಕ್ಕೆ  ರೇಡಿಯೋ ಮುಚ್ಚಿಕೊಂಡು ಓಡುವ ದೃಶ್ಯವೊಂದಿದೆ. ಈ ದೃಶ್ಯದಲ್ಲಿ ತಾವು ಸಂಪೂರ್ಣ ಬೆತ್ತಲೆಯಾಗಿಯೇ ನಟಿಸಿದ್ದೆ. ಅದೊಂದು ರೀತಿಯಲ್ಲಿ ಮುಜಗರ ಕೂಡ ತಂದಿತ್ತು. ಮಾಡಲೇಬೇಕಾದ ಅನಿವಾರ್ಯ ಕೂಡ ಎದುರಾಗಿತ್ತು ಎಂದಿದ್ದಾರೆ ಆಮೀರ್.

    ಈ ಮೊದಲು ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಶಾರ್ಟ್ಸ್ ಧರಿಸಿದ್ದರು. ಅದನ್ನು ಹಾಕಿಕೊಂಡು ಓಡಲು ಸಾಧ್ಯವಾಗಲಿಲ್ಲ. ಪದೇ ಪದೇ ಬಿಚ್ಚಿ ಬೀಳುತ್ತಿತ್ತು. ಹಾಗಾಗಿ ಶಾರ್ಟ್ಸ್ ಕಿತ್ತಾಕಿ, ನೈಜವಾಗಿಯೇ ಬೆತ್ತಲೆ ದೃಶ್ಯ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಎಲ್ಲ ವಿಷ್ಯದಲ್ಲಿ ನಾನು ಫರ್ಫೆಕ್ಟ್ ಎಂದಿದ್ದಾರೆ ಆಮೀರ್.

     

    ಹಳ್ಳಿಯೊಂದರಲ್ಲಿ ಚಿತ್ರೀಕರಣ ನಡೆದಿದ್ದರಿಂದ ಜನರೂ ಇರಲಿಲ್ಲ. ಶೂಟಿಂಗ್ ಸ್ಪಾಟ್ ನಲ್ಲೂ ಕಡಿಮೆ ಸದಸ್ಯರು ಇದ್ದರು. ಆದರೂ, ಆತಂಕದಲ್ಲೇ ಆ ದೃಶ್ಯವನ್ನು ಮುಗಿಸಿದೆ ಎಂದು ಆಮೀರ್ ಹೇಳಿಕೊಂಡಿದ್ದಾರೆ.

  • ಸಿನಿಮಾ ರಂಗ ತೊರೆದ ಆಮೀರ್ ಖಾನ್?: ಚಾಂಪಿಯನ್ ಸಿನಿಮಾದಿಂದ ಹೊರ ಬಂದ ನಟ

    ಸಿನಿಮಾ ರಂಗ ತೊರೆದ ಆಮೀರ್ ಖಾನ್?: ಚಾಂಪಿಯನ್ ಸಿನಿಮಾದಿಂದ ಹೊರ ಬಂದ ನಟ

    ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಾವು ಇನ್ಮುಂದೆ ಸಿನಿಮಾದಲ್ಲಿ ನಟಿಸುವುದಿಲ್ಲ. ಕೆಲ ದಿನಗಳ ಕಾಲ ಸಿನಿಮಾ ರಂಗದಿಂದ ದೂರ ಇರುತ್ತೇನೆ ಎಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು ಬಾಲಿವುಡ್ ನಟ ಆಮೀರ್ ಖಾನ್. ನಾನಾ ಕಾರಣಗಳಿಂದಾಗಿ ನಾನು ದೂರ ಉಳಿಯಲೇಬೇಕಿದೆ ಎಂದು ಅವರು ಮಾತನಾಡಿದ್ದರು. ಹೇಳಿದ ಮಾತಿಗೆ ಬದ್ಧನಾಗಿದ್ದಾರೆ ಆಮೀರ್ ಖಾನ್. ಅಂದುಕೊಂಡಂತೆ ಆಗಿದ್ದರೆ ಅವರು ಚಾಂಪಿಯನ್ ರೀಮೇಕ್ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ, ಆ ಸಿನಿಮಾದಿಂದ ಆಮೀರ್ ಹೊರ ಬಂದಿದ್ದಾರೆ.

    ಲಾಲ್ ಸಿಂಗ್ ಚಡ್ಡಾ ಸಿನಿಮಾದ ಸೋಲು ಆಮೀರ್ ಖಾನ್ ಅವರನ್ನು ಭಾರೀ ನಿದ್ದೆಗೆಡಿಸಿದೆಯಂತೆ. ಈ ಸಿನಿಮಾದ ಬಗ್ಗೆ ಅವರಿಗೆ ಅಪಾರ ನಂಬಿಕೆಯಿತ್ತು. ಈ ಸಿನಿಮಾ ಅದ್ಭುತ ಯಶಸ್ಸು ಗಳಿಸುತ್ತದೆ ಎಂದೇ ನಂಬಲಾಗಿತ್ತು. ಬಾಕ್ಸ್ ಆಫೀಸು ತುಂಬುವುದರ ಜೊತೆಗೆ ವಿಮರ್ಶಕರು ಕೂಡ ಮೆಚ್ಚಿ ಮಾತನಾಡುತ್ತಾರೆ ಎಂದು ಆಮೀರ್ ಬಲವಾಗಿ ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಯಿತು. ಅಂದುಕೊಂಡಷ್ಟು ಸಿನಿಮಾ ಗೆಲ್ಲಲಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಕಮಾಯಿ ಮಾಡಲಿಲ್ಲ. ಹಾಗಾಗಿ ಆಮೀರ್ ಅವರಿಗೆ ಹಿನ್ನೆಡೆ ಆಯಿತು. ಇದನ್ನೂ ಓದಿ:ರಣ್ವೀರ್ ಸಿಂಗ್ ಗೂ ಕಾಸ್ಟಿಂಗ್ ಕೌಚ್ ಅನುಭವ : ನಟ ಬಿಚ್ಚಿಟ್ಟ ಕರಾಳ ಸತ್ಯ

    ಸಿನಿಮಾ ರಿಲೀಸ್ ಗೂ ಮುನ್ನ ಟ್ರೇಲರ್ ಭಾರೀ ಸದ್ದು ಮಾಡಿತ್ತು. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಹಾಗಾಗಿಯೇ ಈ ಸಿನಿಮಾದ ಬಗ್ಗೆ ಸಿನಿ ಪಂಡಿತರು ಕೂಡ ತಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕಿದ್ದರು. ದಾಖಲೆಯ ರೀತಿಯಲ್ಲಿ ಈ ಸಿನಿಮಾ ಹಣ ಮಾಡುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಬಾಯ್ಕಾಟ್ ಈ ಸಿನಿಮಾವನ್ನು ಮಕಾಡೆ ಮಲಗಿಸಿತು. ಜನರನ್ನು ಥಿಯೇಟರ್ ಗೆ ಕರೆದುಕೊಂಡು ಬರುವಲ್ಲಿ ತೊಂದರೆ ಮಾಡಿತು.

    ಲಾಲ್ ಸಿಂಗ್ ಚಡ್ಡಾ ಸೋಲು, ಆಮೀರ್ ಅವರಿಗೆ ನೋವು ತಂದಿದೆ. ಇಂಥದ್ದೊಂದು ಸಿನಿಮಾ ಮಾಡಿದಾಗ ಜನ ಸ್ವೀಕರಿಸಲಿಲ್ಲ ಎಂದು ತಮ್ಮನ್ನು ತಾವೇ ಪ್ರಶ್ನಿಸಿಕೊಂಡಿದ್ದಾಗಿದೆ. ಈ ಎಲ್ಲ ಕಾರಣದಿಂದಾಗಿ ಆಮೀರ್ ಖಾನ್ ಸ್ವಲ್ಪ ದಿನ ಸಿನಿಮಾ ರಂಗದಿಂದಲೇ ದೂರ ಉಳಿಯುವಂತಹ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಟನೆಯಿಂದಲೇ ದೂರ ಸರಿಯುವುದಾಗಿ ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರಂತೆ. ಈ ನಿರ್ಧಾರ ಆಮೀರ್ ಅಭಿಮಾನಿಗಳಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ನಟನೆಯಿಂದ ದೂರ ಉಳಿಯಲಿದ್ದಾರಂತೆ ಬಾಲಿವುಡ್ ನಟ ಆಮೀರ್ ಖಾನ್

    ನಟನೆಯಿಂದ ದೂರ ಉಳಿಯಲಿದ್ದಾರಂತೆ ಬಾಲಿವುಡ್ ನಟ ಆಮೀರ್ ಖಾನ್

    ಲಾಲ್ ಸಿಂಗ್ ಚಡ್ಡಾ ಸಿನಿಮಾದ ಸೋಲು ಆಮೀರ್ ಖಾನ್ ಅವರನ್ನು ಭಾರೀ ನಿದ್ದೆಗೆಡಿಸಿದೆಯಂತೆ. ಈ ಸಿನಿಮಾದ ಬಗ್ಗೆ ಅವರಿಗೆ ಅಪಾರ ನಂಬಿಕೆಯಿತ್ತು. ಈ ಸಿನಿಮಾ ಅದ್ಭುತ ಯಶಸ್ಸು ಗಳಿಸುತ್ತದೆ ಎಂದೇ ನಂಬಲಾಗಿತ್ತು. ಬಾಕ್ಸ್ ಆಫೀಸು ತುಂಬುವುದರ ಜೊತೆಗೆ ವಿಮರ್ಶಕರು ಕೂಡ ಮೆಚ್ಚಿ ಮಾತನಾಡುತ್ತಾರೆ ಎಂದು ಆಮೀರ್ ಬಲವಾಗಿ ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಯಿತು. ಅಂದುಕೊಂಡಷ್ಟು ಸಿನಿಮಾ ಗೆಲ್ಲಲಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಕಮಾಯಿ ಮಾಡಲಿಲ್ಲ. ಹಾಗಾಗಿ ಆಮೀರ್ ಅವರಿಗೆ ಹಿನ್ನೆಡೆ ಆಯಿತು.

    ಸಿನಿಮಾ ರಿಲೀಸ್ ಗೂ ಮುನ್ನ ಟ್ರೇಲರ್ ಭಾರೀ ಸದ್ದು ಮಾಡಿತ್ತು. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಹಾಗಾಗಿಯೇ ಈ ಸಿನಿಮಾದ ಬಗ್ಗೆ ಸಿನಿ ಪಂಡಿತರು ಕೂಡ ತಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕಿದ್ದರು. ದಾಖಲೆಯ ರೀತಿಯಲ್ಲಿ ಈ ಸಿನಿಮಾ ಹಣ ಮಾಡುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಬಾಯ್ಕಾಟ್ ಈ ಸಿನಿಮಾವನ್ನು ಮಕಾಡೆ ಮಲಗಿಸಿತು. ಜನರನ್ನು ಥಿಯೇಟರ್ ಗೆ ಕರೆದುಕೊಂಡು ಬರುವಲ್ಲಿ ತೊಂದರೆ ಮಾಡಿತು. ಇದನ್ನೂ ಓದಿ: ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಲಾಲ್ ಸಿಂಗ್ ಚಡ್ಡಾ ಸೋಲು, ಆಮೀರ್ ಅವರಿಗೆ ನೋವು ತಂದಿದೆ. ಇಂಥದ್ದೊಂದು ಸಿನಿಮಾ ಮಾಡಿದಾಗ ಜನ ಸ್ವೀಕರಿಸಲಿಲ್ಲ ಎಂದು ತಮ್ಮನ್ನು ತಾವೇ ಪ್ರಶ್ನಿಸಿಕೊಂಡಿದ್ದಾಗಿದೆ. ಈ ಎಲ್ಲ ಕಾರಣದಿಂದಾಗಿ ಆಮೀರ್ ಖಾನ್ ಸ್ವಲ್ಪ ದಿನ ಸಿನಿಮಾ ರಂಗದಿಂದಲೇ ದೂರ ಉಳಿಯುವಂತಹ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಟನೆಯಿಂದಲೇ ದೂರ ಸರಿಯುವುದಾಗಿ ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರಂತೆ. ಈ ನಿರ್ಧಾರ ಆಮೀರ್ ಅಭಿಮಾನಿಗಳಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್: ನಂ1 ಸ್ಥಾನ

    ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್: ನಂ1 ಸ್ಥಾನ

    ಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ (Lal Singh Chadha) ಸಿನಿಮಾಗೆ ಚಿತ್ರಮಂದಿರಗಳಲ್ಲಿ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಬಾಯ್ಕಾಟ್ ಲಾಲ್ ಸಿಂಗ್ ಚಡ್ಡಾ ಸೇರಿದಂತೆ ಅನೇಕ ತೊಂದರೆಗಳಿಂದಾಗಿ ಸಿನಿಮಾ ಕೂಡ ಬಾಕ್ಸ್ ಆಫೀಸಿನಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ, ಒಟಿಟಿಯಲ್ಲಿ ಮಾತ್ರ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಒಟಿಟಿಯಲ್ಲಿ (OTT) ನೋಡಿದವರು, ಥಿಯೇಟರ್ ನಲ್ಲಿ ಈ ಸಿನಿಮಾ ಯಾಕೆ ಓಡಲಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ಲಾಲ್ ಸಿಂಗ್ ಚಡ್ಡಾ ಇದೀಗ ನೆಟ್ ಫ್ಲಿಕ್ಸ್ ನಲ್ಲಿ ಲಭ್ಯವಿದ್ದು, ಜಗತ್ತಿನ ಇಂಗ್ಲಿಷೇತರ ಸಿನಿಮಾಗಳ ಪಟ್ಟಿಯಲ್ಲಿ ಅದಕ್ಕೆ 2ನೇ ಸ್ಥಾನ ಸಿಕ್ಕಿದೆ. ಅಲ್ಲದೇ, ಭಾರತೀಯ ಪಟ್ಟಿಯಲ್ಲಿ ಇದು ಮೊದಲ ಸ್ಥಾನವನ್ನು (No.1) ತನ್ನದಾಗಿಸಿಕೊಂಡಿದೆ. 6.63 ದಶಲಕ್ಷ ಸ್ಟ್ರೀಮ್ ಆಗುವ ಮೂಲಕ ಹೊಸ ದಾಖಲೆಯನ್ನು ಈ ಸಿನಿಮಾ ಬರೆದಿದೆ. ಹಾಗಾಗಿ ಸಹಜವಾಗಿಯೇ ಅಮೀರ್ ಖಾನ್ (Aamir Khan) ಸಂತಸ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ದೊಡ್ಮನೆಯಲ್ಲಿ ಮಕ್ಕಳ ದರ್ಬಾರ್: ಮಗುವನ್ನು ತಬ್ಬಿ ಗಳಗಳನೆ ಅತ್ತ ಮಯೂರಿ

    ಥಿಯೇಟರ್ (Theatre) ನಲ್ಲಿ ಬಿಡುಗಡೆಯಾದಾಗ ಪ್ರೇಕ್ಷಕ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ನೀಡಲಿಲ್ಲ. ಹಾಗಾಗಿ ಕೇವಲ 88 ಕೋಟಿ ಗಳಿಸುವಲ್ಲಿ ಚಿತ್ರ ಸಫಲವಾಯಿತು. ಅಮೀರ್ ಸಿನಿಮಾವನ್ನು ಬಹಿಷ್ಕರಿಸಿ ಎನ್ನುವ ಟ್ರೆಂಡ್ ನಿಂದಾಗಿ ಚಿತ್ರ ಅಂದುಕೊಂಡಷ್ಟು ದುಡ್ಡು ಮಾಡಲಿಲ್ಲ. ಆದರೆ, ಒಟಿಟಿಯಲ್ಲಿ ಮಾತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೇಶದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಜನರು ಈ ಸಿನಿಮಾವನ್ನು ದಾಖಲೆಯ ರೀತಿಯಲ್ಲೇ ನೋಡಿದ್ದಾರೆ.

    ಇದೊಂದು ರೀಮೇಕ್ ಸಿನಿಮಾವಾಗಿದ್ದು, ಹಾಲಿವುಡ್ ನ ಫಾರೆಸ್ಟ್ ಗಂಪ್ ಚಿತ್ರವನ್ನು ಹಿಂದಿಗೆ ರೀಮೇಕ್ ಮಾಡಿದ್ದರು ಅಮೀರ್ ಖಾನ್. ಫಾರೆಸ್ಟ್ ಗಂಪ್ ಸಿನಿಮಾಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದೆ. ಈ ಸಿನಿಮಾದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಈ ಚಿತ್ರವನ್ನು ಅಮೀರ್ ನಿರ್ಮಾಣ ಮಾಡಿದ್ದರು. ಆಗಸ್ಟ್ 11 ರಂದು ಈ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟ ಅರುಣ್ ಬಾಲಿ ನಿಧನ: ಅಗಲಿದ ಕಲಾವಿದನಿಗೆ ಕಂಬನಿ

    ಖ್ಯಾತ ನಟ ಅರುಣ್ ಬಾಲಿ ನಿಧನ: ಅಗಲಿದ ಕಲಾವಿದನಿಗೆ ಕಂಬನಿ

    ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ (Arun Bali) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರು ಹಾಗೂ ಹಿರಿ ತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.

    79ನೇ ವಯಸ್ಸಿನ ಅರುಣ್ ಬಾಲಿ ಸಿನಿಮಾ ರಂಗದಲ್ಲಿ ನಾನಾ ರೀತಿಯ ಪಾತ್ರಗಳನ್ನು ಮಾಡಿದವರು. ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಆಮಿರ್ ಖಾನ್ (Aamir Khan) ನಟನೆಯ ಲಾಲ್ ಸಿಂಗ್ ಚಡ್ಡಾ (Lal Singh Chadha) ಇವರ ನಟನೆಯ ಕೊನೆಯ ಸಿನಿಮಾ. ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಇವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ಬಾಲಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್ (Bollywood) ಕಂಬನಿ ಮಿಡಿದಿದೆ. ಆಮಿರ್ ಖಾನ್ ಸೇರಿದಂತೆ ಬಾಲಿವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಬಾಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಲಾಲ್ ಸಿಂಗ್ ಚಡ್ಡಾ’ದಿಂದ ಆಮೀರ್ ಖಾನ್ ಕಳೆದುಕೊಂಡಿದ್ದು ಬರೋಬ್ಬರಿ 100 ಕೋಟಿ?

    ‘ಲಾಲ್ ಸಿಂಗ್ ಚಡ್ಡಾ’ದಿಂದ ಆಮೀರ್ ಖಾನ್ ಕಳೆದುಕೊಂಡಿದ್ದು ಬರೋಬ್ಬರಿ 100 ಕೋಟಿ?

    ಬಾಲಿವುಡ್ ನಟ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಸೋಲುತ್ತಿದ್ದಂತೆಯೇ ಅದರ ಲೆಕ್ಕಾಚಾರಗಳು ಶುರುವಾಗಿವೆ. ಸಿನಿಮಾದ ಬಜೆಟ್, ಥಿಯೇಟರ್ ಕಲೆಕ್ಷನ್, ಓಟಿಟಿ ಮಾರಾಟ ಹೀಗೆ ಲಾಭ ಹಾನಿಯ ಎಣಿಕೆ ಪ್ರಾರಂಭವಾಗಿವೆ. ಹಾಗಾಗಿ ಈ ಸಿನಿಮಾದಿಂದ ಆಮೀರ್ ಖಾನ್ ಕಳೆದುಕೊಂಡಿದ್ದು ಎಷ್ಟು ಎನ್ನುವ ಅಂದಾಜು ಸಿಕ್ಕಿದೆ.

    ಲಾಲ್ ಸಿಂಗ್ ಚಡ್ಡಾ ಸಿನಿಮಾ ಅಂದುಕೊಂಡಷ್ಟು ಬಾಕ್ಸ್ ಆಫೀಸಿನಲ್ಲಿ ಗಳಿಕೆ ಮಾಡಲಿಲ್ಲ. ಬಾಯ್ಕಾಟ್ ಬೆದರಿಕೆಗೆ ಅದು ಬಳಲಿ ಬೆಂಡಾಯಿತು. ನಿರೀಕ್ಷೆ ಮಟ್ಟ ತಲುಪುವುದು ಇರಲಿ, ಹಾಕಿದ ಬಂಡವಾಳ ಕೂಡ ವಾಪಸ್ಸು ಆಗಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ನಿರ್ಮಾಪಕರಿಗೆ ಈ ಸಿನಿಮಾ ಭಾರೀ ಹಾನಿಯನ್ನುಂಟು ಮಾಡಿದೆಯಂತೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಒಂದು ಅಂದಾಜಿನ ಪ್ರಕಾರ ಆಮೀರ್ ಖಾನ್ ಈ ಸಿನಿಮಾದಿಂದ ನೂರು ಕೋಟಿ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಿರ್ಮಾಣದಲ್ಲಿ ಆಮೀರ್ ಖಾನ್ ಕೂಡ ತೊಡಗಿಕೊಂಡಿದ್ದರಿಂದ, ಹಾಗಾಗಿ  ಈ ಪ್ರಮಾಣದಲ್ಲಿ ಹಣ ಕೈಬಿಟ್ಟು ಹೋಗಿದೆಯಂತೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದಿಂದಾಗಿ ಆಮೀರ್ ಖಾನ್ ಅವರಿಗೆ ಅವಕಾಶಗಳು ಕೂಡ ಕೈ ತಪ್ಪುತ್ತಿವೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಲಾಲ್ ಸಿಂಗ್ ಚಡ್ಡಾ ಎಫೆಕ್ಟ್ : ಆಮೀರ್ ಖಾನ್ ಸಿನಿಮಾಗಳಿಂದ ದೂರ ಸರಿಯುತ್ತಿರುವ ನಿರ್ಮಾಪಕರು

    ಲಾಲ್ ಸಿಂಗ್ ಚಡ್ಡಾ ಎಫೆಕ್ಟ್ : ಆಮೀರ್ ಖಾನ್ ಸಿನಿಮಾಗಳಿಂದ ದೂರ ಸರಿಯುತ್ತಿರುವ ನಿರ್ಮಾಪಕರು

    ಬಾಲಿವುಡ್ ಸಿನಿಮಾ ರಂಗದಲ್ಲಿ ಬಾಯ್ಕಾಟ್ ವಿಚಾರ ಬಿಟೌನ್ ಸ್ಟಾರ್ ನಟರನ್ನು ನಿದ್ದೆಗೆಡಿಸುತ್ತಿದೆ. ಅಮಿತಾಭ್ ಬಚ್ಚನ್ ಅಂತಹ ದಿಗ್ಗಜ ನಟರೇ ಈ ವಿಚಾರದಲ್ಲಿ ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಮೊನ್ನೆಯಷ್ಟೇ ಇಂತಹ ವಿಷಯಗಳಲ್ಲಿ ಏನು ಮಾತಾಡಬೇಕು ಎಂದು ತಿಳಿಯುತ್ತಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ಬಾಯ್ಕಾಟ್ ಬಾಲಿವುಡ್ ಮಂದಿಯನ್ನು ಕಾಡುತ್ತಿದೆ.

    ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ, ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್, ತಾಪ್ಸಿ ಪನ್ನು ನಟನೆಯ ಸಿನಿಮಾ, ಇದೀಗ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಚಿತ್ರಕ್ಕೂ ಬಾಯ್ಕಾಟ್ ಭೂತ ಕಾಡಿದೆ. ಅದರಲ್ಲೂ ಹೆಚ್ಚು ತೊಂದರೆ ಮಾಡಿದ್ದ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾಗೆ ಎನ್ನುವುದು ಬಾಲಿವುಡ್ ಲೆಕ್ಕಾಚಾರ. ಬಾಕ್ಸ್ ಆಫೀಸಿನಲ್ಲಿ ಸೋಲು ಮಾತ್ರವಲ್ಲ, ಅವರ ಮುಂದಿನ ಚಿತ್ರಗಳಿಗೆ ತೊಂದರೆ ಎದುರಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ

    ಆಮೀರ್ ಖಾನ್ ಅವರು ಈಗಾಗಲೇ ನಾಲ್ಕು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಾಯ್ಕಾಟ್ ಗೆ ಭಯಪಟ್ಟುಕೊಂಡಿರುವ ನಿರ್ಮಾಪಕರು ಒಬ್ಬೊಬ್ಬರೇ ಒಪ್ಪಿಕೊಂಡ ಸಿನಿಮಾಗಳಿಂದ ದೂರ ಸರಿಯುತ್ತಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಆಮೀರ್ ಹೊಸ ಸಿನಿಮಾ ಘೋಷಣೆ ಆಗಬೇಕಿತ್ತು. ಆದರೆ, ಬಾಯ್ಕಾಟ್ ನಿಂದಾಗಿ ಮುಂದೂಡಲಾಗಿದೆ ಎನ್ನುವು ನಯಾ ಸಮಾಚಾರ.

    Live Tv
    [brid partner=56869869 player=32851 video=960834 autoplay=true]

  • ಬಾಯ್ಕಾಟ್ ನಡುವೆಯೂ 100 ಕೋಟಿ ಕ್ಲಬ್ ಸೇರಿದ ‘ಲಾಲ್ ಸಿಂಗ್ ಚಡ್ಡಾ’

    ಬಾಯ್ಕಾಟ್ ನಡುವೆಯೂ 100 ಕೋಟಿ ಕ್ಲಬ್ ಸೇರಿದ ‘ಲಾಲ್ ಸಿಂಗ್ ಚಡ್ಡಾ’

    ಬಾಲಿವುಡ್ ನಟ ಆಮೀರ್ ಖಾನ್ ನಟಿಸಿ, ನಿರ್ಮಾಣ ಮಾಡಿರುವ ಲಾಲ್ ಸಿಂಗ್ ಚಡ್ಡಾ, ಕೊನೆಗೂ 100 ಕೋಟಿ ಕ್ಲಬ್ ಸೇರುವ ಮೂಲಕ ನಿಟ್ಟುಸಿರು ಬಿಟ್ಟಿದೆ. ಆಮೀರ್ ನಟನೆಯ ಹಿಂದಿನ ಸಿನಿಮಾಗಳಿಗೆ ಹೋಲಿಸಿದರೆ, ಇದು ಕಡಿಮೆ ಬಾಕ್ಸ್ ಆಫೀಸ್ ರಿಪೋರ್ಟ್ ಎಂದು ಹೇಳಲಾಗಿದ್ದು, ಬಾಯ್ಕಾಟ್ ನಡುವೆಯೇ ಅದು ನೂರು ಕೋಟಿ ಕ್ಲಬ್ ಸೇರಿದ್ದು ಸಾಧನೆ ಎನ್ನಲಾಗುತ್ತಿದೆ.

    ಸಿನಿಮಾ ಬಿಡುಗಡೆ ಮುನ್ನವೇ ಬಾಯ್ಕಾಟ್ ಅಭಿಯಾನ ಶುರು ಮಾಡಿದ್ದರು ಹಿಂದೂಪರ ಸಂಘಟನೆಯ ಕಾರ್ಯಕರ್ತರು. ದೇಶದ ಪರವಾಗಿ ಮಾತನಾಡದ ಆಮೀರ್ ಖಾನ್ ಸಿನಿಮಾವನ್ನು ನೋಡಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಶುರು ಮಾಡಿದ್ದರು. ದೇಶದಲ್ಲಿ ನೆಮ್ಮದಿಯಾಗಿ ಬದುಕುವುದಕ್ಕೆ ಆಗುವುದಿಲ್ಲ ಎಂದು ಆಮೀರ್ ಖಾನ್ ಹೇಳಿದ್ದರಿಂದ, ಸಿನಿಮಾ ಸೋಲಿಸಿ ಅವರನ್ನು ದೇಶದಿಂದ ಓಡಿ ಹೋಗುವಂತೆ ಮಾಡಿ ಎಂದು ಹಲವರು ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ:ಬಾಲಿವುಡ್ ರಾಧೆ ಆಲಿಯಾ ಭಟ್ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ!

    ಬಾಯ್ಕಾಟ್ ಬಿಸಿ ಜೋರಾಗುತ್ತಿದ್ದಂತೆಯೇ ಅದನ್ನು ತಿಳಿಗೊಳಿಸುವಂತಹ ಪ್ರಯತ್ನವನ್ನೂ ಆಮೀರ್ ಮಾಡಿದ್ದರು. ತಮಗೆ ದೇಶದ ಮೇಲೆ ಅಪಾರ ಗೌರವ ಇದೆ ಎಂದು ಹೇಳಿದ್ದರು. ಈ ಬಾಯ್ಕಾಟ್ ಬಿಟ್ಟು ಸಿನಿಮಾ ನೋಡುವಂತೆ ಮನವಿ ಮಾಡಿದ್ದರು. ಆದರೆ, ನೋಡುಗರು ಆ ಮನವಿಯನ್ನು ಪುರಸ್ಕರಿಸಲೇ ಇಲ್ಲ. ಹಾಗಾಗಿ ಸಿನಿಮಾ ಶುರುವಿನಿಂದಲೇ ಬಾಕ್ಸ್ ಆಫೀಸಿನಲ್ಲಿ ಕುಂಟುತ್ತಲೇ ಸಾಗಿತ್ತು. ಇದೀಗ ನೂರು ಕೋಟಿ ಕ್ಲಬ್ ಸೇರುವ ಮೂಲಕ ಆಮೀರ್ ಗೌರವ ಉಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಯ್ಕಾಟ್ ಟ್ರೆಂಡ್ ಬೆಳೆಯದಂತೆ ಹತ್ತಿಕ್ಕಬೇಕು : ನಟ ಅರ್ಜುನ್ ಕಪೂರ್

    ಬಾಯ್ಕಾಟ್ ಟ್ರೆಂಡ್ ಬೆಳೆಯದಂತೆ ಹತ್ತಿಕ್ಕಬೇಕು : ನಟ ಅರ್ಜುನ್ ಕಪೂರ್

    ಬಾಲಿವುಡ್ ಸಿನಿಮಾಗಳ ಬಗ್ಗೆ, ಅದರಲ್ಲೂ ಖಾನ್ ಕುಟುಂಬದ ಸಿನಿಮಾಗಳ ಬಗ್ಗೆ ವಿಪರೀತ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ಆಮೀರ್ ಖಾನ್ ನಟಿಸಿ, ನಿರ್ಮಾಣ ಮಾಡಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟಿಗೆ ಬಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಸಿನಿಮಾಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಎದ್ದಿದೆ. ಇದರ ಬೆನ್ನಲ್ಲೆ ನಟ ಅರ್ಜುನ್ ಕಪೂರ್ ಈ ಕುರಿತು ಅಸಮಾಧಾನ ಹೊರಹಾಕಿದ್ದಾರೆ.

    ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಕರೀನಾ ಕಪೂರ್ ಕೂಡ ನಾಯಕಿಯಾಗಿ ನಟಿಸಿದ್ದಾರೆ. ಹೀಗಾಗಿ ಕರೀನಾ ಬೆನ್ನಿಗೆ ನಿಂತಿರುವ ಅರ್ಜುನ್ ಕಪೂರ್, ಬಾಯ್ಕಾಟ್ ಟ್ರೆಂಡ್ ಯಾರಿಗೂ ಒಳ್ಳೆಯದಲ್ಲ. ಇದರಿಂದ ಅದೆಷ್ಟು ಕುಟುಂಬಗಳ ನಾಶವಾಗುತ್ತವೆ ಎನ್ನುವ ಅರಿವು ಹೋರಾಟ ಮಾಡುತ್ತಿರುವವರಿಗೆ ಇಲ್ಲ. ಅಲ್ಲದೇ, ಇಂತಿಷ್ಟೇ ಜನರನ್ನೇ ಅವರು ಟಾರ್ಗೆಟ್ ಮಾಡುತ್ತಿದ್ದಾರೆ. ಹೀಗಾಗಿ ಇದನ್ನು ಚಿಗುರಿನಲ್ಲೇ ಚಿವುಟ ಬೇಕು ಎಂದು ಅರ್ಜುನ್ ಕಪೂರ್ ಹೇಳಿದ್ದಾರೆ.  ಇದನ್ನೂ ಓದಿ:ಶಿವಣ್ಣ -ಪ್ರಭುದೇವ ಹೊಸ ಪ್ರಾಜೆಕ್ಟ್‌ಗೆ ಈ ನಾಯಕಿಯರು ಫಿಕ್ಸ್

    ಆಮೀರ್ ಖಾನ್ ಸಿನಿಮಾ ಅಷ್ಟೇ ಅಲ್ಲ, ಇನ್ನೂ ಹಲವು ಸಿನಿಮಾಗಳಿಗೆ ಬಾಯ್ಕಾಟ್ ಬಿಸಿ ತಾಗಿದೆ. ಅಕ್ಷಯ್ ಕುಮಾರ್ ನಟನೆಯ ರಕ್ಷಾ ಬಂಧನ್ ಚಿತ್ರಕ್ಕೂ ಬಾಯ್ಕಾಟ್ ಹೇಳಲಾಗಿತ್ತು. ಶಾರುಖ್ ಖಾನ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎಂಬ ಕೂಗು ಎದ್ದಿದೆ. ಹೀಗೆ ಆದರೆ, ಬಾಲಿವುಡ್ ಸಿನಿಮಾಗಳು ಸೋಲಿನಲ್ಲೇ ಸಾವನ್ನಪ್ಪಬೇಕಾಗುತ್ತವೆ. ಹಾಗಾಗಿ ಇದರ ವಿರುದ್ಧ ದೊಡ್ಡ ಮಟ್ಟದಲ್ಲೇ ಧ್ವನಿ ಎತ್ತಬೇಕು ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಲಾಲ್ ಸಿಂಗ್ ಚಡ್ಡಾ’ ಸೋತಿಲ್ಲ, ನಷ್ಟವೂ ಆಗಿಲ್ಲ ಎಂದ ನಿರ್ಮಾಣ ಸಂಸ್ಥೆ

    ‘ಲಾಲ್ ಸಿಂಗ್ ಚಡ್ಡಾ’ ಸೋತಿಲ್ಲ, ನಷ್ಟವೂ ಆಗಿಲ್ಲ ಎಂದ ನಿರ್ಮಾಣ ಸಂಸ್ಥೆ

    ಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಸೋತಿದೆ, ಬಾಕ್ಸ್ ಆಫೀಸಿನಲ್ಲಿ ಅದು ಮಕಾಡೆ ಮಲಗಿದೆ ಎಂದೆಲ್ಲ ಮಾತುಗಳು ಕೇಳಿ ಬಂದವು. ಥಿಯೇಟರ್ ಖಾಲಿ ಹೊಡೀತಿವೆ ಎಂದೂ ಸುದ್ದಿ ಆಗಿತ್ತು. ಸಾವಿರಾರು ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದೂ ಹೇಳಲಾಗಿತ್ತು. ಹೀಗಾಗಿ ನಿರ್ಮಾಪಕರಿಗೆ ಈ ಸಿನಿಮಾ ಭಾರೀ ನಷ್ಟ ಮಾಡಿದೆ ಎಂದು ವರದಿ ಆಗಿತ್ತು.

    ಆದರೆ, ಅಸಲಿ ವಿಷಯವೇ ಬೇರೆ ಇದೆ ಎಂದು ನಿರ್ಮಾಣ ಸಂಸ್ಥೆ ಹೇಳಿಕೊಂಡಿದೆ. ನಾವು ನಿರೀಕ್ಷೆ ಮಾಡಿದಷ್ಟು ಹಣ ಬಾರದೇ ಇರಬಹುದು. ಆದರೆ, ಸಿನಿಮಾ ನಿರ್ಮಾಣ ಸಂಸ್ಥೆಗೆ ಲಾಸ್ ಮಾಡಿಲ್ಲ. ನಷ್ಟವನ್ನೂ ಮಾಡಿಲ್ಲ. ನಾವು ಹಾಕಿರುವ ಬಂಡವಾಳ ಈಗಾಗಲೇ ಬಂದಿದೆ. ಹಾನಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಹೇಳಿಕೊಂಡಿದೆ. ಕಪೋಕಲ್ಪಿತ ವಿಷಯಗಳನ್ನು ನಂಬಬೇಡಿ ಎಂದು ಹೇಳಿದೆ. ಇದನ್ನೂ ಓದಿ:Bigg Boss: ಗರ್ಲ್‌ಫ್ರೆಂಡ್ ವಿಚಾರಕ್ಕೆ ಬಂದ ಸೋನು ಶ್ರೀನಿವಾಸ್ ಗೌಡ ವಿರುದ್ಧ ಕಿಡಿಕಾರಿದ ಜಶ್ವಂತ್

    ಇತ್ತೀಚಿನ ವರ್ಷಗಳಲ್ಲಿ ಆಮೀರ್ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದ್ದವು. ಆದರೆ, ಲಾಲ್ ಸಿಂಗ್ ಚಡ್ಡಾ ಅಷ್ಟೇನೂ ದುಡ್ಡು ಮಾಡದೇ ಇದ್ದರೂ, ನಿರ್ಮಾಪಕರಿಗೆ ಲಾಸ್ ಅಂತೂ ಮಾಡಿಲ್ಲ ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿದೆ. ಈ ಮೂಲಕ ಈ ಸಿನಿಮಾ ಲಾಭ ಹಾನಿಯ ಬಗ್ಗೆ ಮಾತನಾಡುವವರು ಬಾಯಿ ಮುಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]