Tag: ಲಾಸ್ ಏಂಜಲೀಸ್

  • ಮಕ್ಕಳಿಗೆ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ: ಟಿ.ಎಸ್ ನಾಗಾಭರಣ

    ಮಕ್ಕಳಿಗೆ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ: ಟಿ.ಎಸ್ ನಾಗಾಭರಣ

    ಬೆಂಗಳೂರು: ಅನಿವಾಸಿ ಕನ್ನಡಿಗರು ಎಲ್ಲೇ ಇದ್ದರೂ ತಮ್ಮ ಮಕ್ಕಳಿಗೆ ಕನ್ನಡದ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ. ಕನ್ನಡಿಗರು ಎಲ್ಲಿ ಇದ್ದರೂ ಕೂಡ ತಮ್ಮ ಭಾಷಾ ಕೌಶಲ್ಯವನ್ನು ವೃದ್ಧಿಸಿಕೊಂಡು ಕನ್ನಡದ ಹಿರಿಮೆ-ಗರಿಮೆಯನ್ನು ಎತ್ತಿ ಹಿಡಿದು ಕನ್ನಡ ರಾಯಭಾರಿಗಳಾಗುವವರು ನಮ್ಮ ನಾಡಿನ ಹೆಮ್ಮೆಯ ಪ್ರತೀಕ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್ ನಾಗಾಭರಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಲಾಸ್ ಏಂಜಲೀಸ್‍ನ ಆರೆಂಜ್ ಕೌಂಟಿಯ ಕನ್ನಡ ಶಾಲೆಯ ಗ್ರಾಜ್ಯುಯೇಷನ್ ಡೇ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಇಂದು ಮುಖ್ಯ ಅತಿಥಿಯಾಗಿ ಮಾತನಾಡಿದ ನಾಗಾಭರಣ ಅವರು, ಕನ್ನಡಿಗರು ತಾವಿರುವಲ್ಲಿಯೇ ಕನ್ನಡದ ವಾತಾವರಣ ನಿರ್ಮಿಸಿಕೊಂಡು ತಮ್ಮ ಮಕ್ಕಳಿಗೆ ತಾಯ್ನಾಡಿನ ಸಾಂಸ್ಕೃತಿಕ ವಾತಾವರಣವನ್ನು ಕಟ್ಟಿಕೊಡುವಂತೆ ಸಲಹೆ ನೀಡಿದರು.  ಇದನ್ನೂ ಓದಿ: ಕನ್ನಡಿಗರಿಗೆ ಕಡ್ಡಾಯವಾಗಿ ಕೆಲಸ ಸಿಗುವಂತೆ ಮಾಡಬೇಕಿದೆ: ನಾಗಾಭರಣ

    ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕುವೆಂಪು ಅವರ ಕವಿತೆಯ ಸಾಲುಗಳನ್ನು ಮಕ್ಕಳಿಗೆ ನೆನಪಿಸುವ ಮೂಲಕ ಕನ್ನಡದ ಕಂಪನ್ನು ಪಸರಿಸಿ ಅನಿವಾಸಿ ಕನ್ನಡಿರಿಗರೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ನಟ, ನಾವಿಕ ಸಂಘಟಕರಾದ ವಲ್ಲೀಶ್ ಶಾಸ್ತ್ರಿ, ಆರೆಂಜ್ ಕೌಂಟಿಯ ಶ್ರೀಧರ ರಾಜಣ್ಣ, ಶ್ರೀನಿವಾಸ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿ ಹಲವಾರು ಮಂದಿ ಉಪಸ್ಥಿತರಿದ್ದರು.

  • ಮಗನೊಂದಿಗೆ ಬೋಟಿನಲ್ಲಿ ತೆರಳಿದ್ದ ನಟಿ- 6 ದಿನಗಳ ನಂತ್ರ ಶವವಾಗಿ ಪತ್ತೆ

    ಮಗನೊಂದಿಗೆ ಬೋಟಿನಲ್ಲಿ ತೆರಳಿದ್ದ ನಟಿ- 6 ದಿನಗಳ ನಂತ್ರ ಶವವಾಗಿ ಪತ್ತೆ

    – ಮಗನ ಜೀವ ಉಳಿಸಿ ನೀರಿನಲ್ಲಿ ಮುಳುಗಿದ ನಟಿ

    ಲಾಸ್ ಏಂಜಲೀಸ್: ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದಾಗ ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆಯಾಗಿದ್ದಾರೆ.

    ಹಾಲಿವುಡ್‍ನ ನಟಿ ನಯಾ ರಿವೇರಾ ಮೃತದೇಹ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ನಾಪತ್ತೆಯಾಗಿದ್ದರು. ಆದರೆ ಆರು ದಿನಗಳ ನಂತರ ಸೋಮವಾರ ರಿವೇರಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ.

    ನಟಿ ನಯಾ ರಿವೇರಾ ಕಳೆದ ವಾರ ತಮ್ಮ ನಾಲ್ಕು ವರ್ಷದ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದ ವೇಳೆ ಬೋಟ್‍ ಮಗುಚಿ ಮುಳುಗಿದ್ದರು. ಸದ್ಯಕ್ಕೆ ರಿವೇರಾ ಅವರ ಮೃತದೇಹ ಪತ್ತೆಯಾಗಿದೆ. ಆದರೆ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯಲ್ಲಿ ಇದು ಆತ್ಮಹತ್ಯೆ ಅಲ್ಲ ಎಂದು ತಿಳಿದುಬಂದಿದೆ ಎಂದು ವೆಂಚುರಾ ಕಂಟ್ರಿ ಶೆರಿಫ್ ಬಿಲ್ ಅಯುಬ್ ತಿಳಿಸಿದ್ದಾರೆ.

    ಪತ್ತೆಯಾಗಿರುವ ಮೃತದೇಹದ ಬಟ್ಟೆ ಮತ್ತು ಸ್ಥಿತಿಯನ್ನು ನೋಡಿದರೆ ಅದು ನಟಿ ನಯಾ ರಿವೇರಾ ಶವ ಎಂದು ತಿಳಿಯುತ್ತದೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದರು.

    33 ವರ್ಷದ ರಿವೇರಾ ಲಾಸ್ ಏಂಜಲೀಸ್ ಸುತ್ತಾಡುವುದಕ್ಕೆ ಒಂದು ಗಂಟೆಯ ಅವಧಿಯವರೆಗೂ ಬೋಟ್‍ವೊಂದನ್ನು ಬಾಡಿಗೆಗೆ ಪಡೆದುಕೊಂಡು ಹೋಗಿದ್ದರು. ಈ ವೇಳೆ ನಟಿ ತಮ್ಮ ಕಿರಿಯ ಮಗನನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿದ್ದರು. ನಂತರ ಆಕಸ್ಮಿಕವಾಗಿ ಬೋಟ್ ಮುಳುಗಿದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ನಟಿ ರಿವೇರಾ ಬೋಟ್ ನಾಪತ್ತೆಯಾಗಿತ್ತು. ನಂತರ ಪೆಟ್ರೋಲ್ ಬೋಟ್‍ಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಕಾರ್ಯಚರಣೆಯನ್ನು ನಡೆಸಿದಾಗ ಬೋಟ್ ಮತ್ತು ಮಗ ಪತ್ತೆಯಾಗಿದ್ದಾನೆ. ಆದರೆ ನಟಿ ರಿವೇರಾ ಮಾತ್ರ ಪತ್ತೆಯಾಗಿರಲಿಲ್ಲ ಎಂದು ಅಯುಬ್ ಹೇಳಿದ್ದಾರೆ.

    ಬೋಟ್ ಮುಳುಗುತ್ತಿದ್ದಾಗ ಅಮ್ಮ ನನ್ನನ್ನು ರಕ್ಷಿಸಿ ಬೋಟ್ ಮೇಲೆ ಹತ್ತಿಸಿದ್ದರು. ನಂತರ ನಾನು ಹಿಂದೆ ತಿರುಗಿ ನೋಡಿದಾಗ ಅವರು ನೀರಿನಲ್ಲಿ ಮುಳುಗುತ್ತಿದ್ದರು. ಕೊನೆಗೆ ನೀರಿನಲ್ಲಿ ಮುಳುಗುತ್ತಾ ಕಣ್ಮರೆಯಾಗುವುದನ್ನು ನೋಡಿದೆ ಎಂದು ಮಗ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಹೀಗಾಗಿ ನಟಿ ನಯಾ ರಿವೇರಾ ತಮ್ಮ ಮಗನ ಪ್ರಾಣ ಉಳಿಸಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    “ಬಹುಶಃ ನಟಿ ಬೋಟಿನಲ್ಲಿ ಸುತ್ತಾಡುತ್ತಿದ್ದಾಗ ಕಣಿವೆಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದೆ. ಈ ವೇಳೆ ಬೋಟ್ ನಿಯಂತ್ರಣ ತಪ್ಪಿರುವ ಸಾಧ್ಯತೆ ಇದೆ. ಆಗ ತಮ್ಮ ಮಗನನ್ನು ಬೋಟ್ ಮೇಲೆ ಹತ್ತಿಸಿ ಕಾಪಾಡಿದ್ದಾರೆ. ಆದರೆ ತಮ್ಮನ್ನು ತಾವು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅಯುಬ್ ತಿಳಿಸಿದ್ದಾರೆ.

  • ಬಾಗ್ದಾದ್‍ನಲ್ಲಿರುವ ಅಮೆರಿಕ ಸೇನಾ ವಾಯುನೆಲೆ ಮೇಲೆ ಕ್ಷಿಪಣಿ ದಾಳಿ

    ಬಾಗ್ದಾದ್‍ನಲ್ಲಿರುವ ಅಮೆರಿಕ ಸೇನಾ ವಾಯುನೆಲೆ ಮೇಲೆ ಕ್ಷಿಪಣಿ ದಾಳಿ

    ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿರುವ ಅಮೆರಿಕ ಸೇನೆ ಬೀಡು ಬಿಟ್ಟಿರುವ ಅಲ್-ಬಲಾದ್ ವಾಯುನೆಲೆ ಮೇಲೆ ಇರಾನ್ ಎರಡು ರಾಕೆಟ್ ದಾಳಿ ನಡೆಸಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಅಮೆರಿಕದ ಸೈನಿಕರು ನೆಲೆಸಿರುವ ಬಾಗ್ದಾದ್‍ನ ಉತ್ತರದ ಬಾಲಾಡ್ ವಾಯುನೆಲೆಗೆ ಎರಡು ಕತ್ಯುಷಾ ರಾಕೆಟ್‍ಗಳು ಅಪ್ಪಳಿಸಿವೆ ಎಂದು ಭದ್ರತಾ ಮೂಲಗಳು ಹಾಗೂ ಇರಾಕಿ ಮಿಲಿಟರಿ ತಿಳಿಸಿದೆ. ಅಮೆರಿಕ ವಾಯುಪಡೆಯ ಶುಕ್ರವಾರ ನಡೆಸಿದ ದಾಳಿಗೆ ಇರಾನ್‍ನ ಸೇನಾ ಮುಖ್ಯಸ್ಥ ಜನರಲ್ ಖಾಸಿಂ ಸೊಲೇಮನಿ ಸಾವನ್ನಪ್ಪಿದ ಬಳಿಕ ಯುದ್ಧ ಭೀತಿ ಎದುರಾಗಿದೆ. ಇದೀಗ ಅಮೆರಿಕ ಸೇನೆ ತಂಗಿದ್ದ ಸ್ಥಳದಲ್ಲೇ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

    ಬಾಗ್ದಾದ್‍ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮತ್ತು ದೇಶಾದ್ಯಂತ ಬೀಡುಬಿಟ್ಟಿರುವ 5,200 ಅಮೆರಿಕದ ಸೈನಿಕರು ರಾಕೆಟ್ ದಾಳಿಯನ್ನು ಎದುರಿಸುತ್ತಿದ್ದಾರೆ. ಇರಾನ್‍ನ ಸೇನಾಧಿಕಾರಿಯನ್ನು ಬಾಗ್ದಾದ್‍ನಲ್ಲಿ ರಾಕೆಟ್ ದಾಳಿಯ ಮೂಲಕ ಕೊಂದ ಕೆಲವೇ ಗಂಟೆಗಳ ಬಳಿಕ ಅಮೆರಿಕ ಮತ್ತೆ ವಾಯುದಾಳಿ ನಡೆಸಿತ್ತು. ಶನಿವಾರ ಬೆಳಗ್ಗೆ ಇರಾಕ್‍ನ ಹಶೆಬ್ ಅಲ್ ಶಾಬಿ ಅರೆಸೇನಾ ಪಡೆಯ ವಾಹನಗಳ ಅಮೆರಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು ಆರು ಜನರು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು.

    ಅಮೆರಿಕ ಶುಕ್ರವಾರ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿ ಬಿಗಿ ಭದ್ರತೆಯಲ್ಲಿದ್ದ ಸುಲೈಮನಿಯನ್ನು ಹತ್ಯೆ ಮಾಡಲಾಗಿತ್ತು. ಇರಾಕ್‍ನ ಮಿಲಿಟರಿ ಕಮಾಂಡರ್ ಅಬು ಮಹ್ದಿ ಅಲ್ ಮುಹಾಂದಿಸ್ ಜೊತೆ ಇರಾಕ್ ರಾಜಧಾನಿ ಬಾಗ್ದಾದ್‍ನ ಏರ್‍ಪೋರ್ಟಿಗೆ ಇರಾನ್ ಸೇನಾ ಮುಖ್ಯಸ್ಥರಾಗಿದ್ದ ಸುಲೈಮನಿ ಕಾರಿನಲ್ಲಿ ತೆರಳುತ್ತಿದ್ದರು. ಈ ಇಬ್ಬರು ತೆರಳುತ್ತಿದ್ದ ಕಾರನ್ನು ಟಾರ್ಗೆಟ್ ಮಾಡಿದ ಅಮೆರಿಕ ಸೇನೆಗಳು ಡ್ರೋನ್ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಿ ಏರ್ ಸ್ಟ್ರೈಕ್ ಮಾಡಿತ್ತು. ದಾಳಿಯ ತೀವ್ರತೆಗೆ ಇಬ್ಬರು ತೆರಳುತ್ತಿದ್ದ ಕಾರುಗಳು ಛಿದ್ರ-ಛಿದ್ರವಾಗಿದ್ದವು.

    ಘಟನೆಯ ಕುರಿತು ಫ್ಲೋರಿಡಾದಲ್ಲಿ ಮಾತನಾಡಿದ್ದ ಟ್ರಂಪ್, ಇತ್ತೀಚೆಗೆ ಅಮೆರಿಕವನ್ನು ಟಾರ್ಗೆಟ್ ಮಾಡಿ ಇರಾಕ್ ನಡೆಸಿದ ದಾಳಿಗಳಲ್ಲಿ ದೇಶದ ಸೈನಿಕ ಸಾವನ್ನಪ್ಪಿದ್ದರು. ಅಲ್ಲದೇ ರಾಕೆಟ್ ದಾಳಿಯಲ್ಲಿ ನಾಲ್ವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದರು. ಬಾಗ್ದಾದ್‍ನ ನಮ್ಮ ವಿದೇಶಾಂಗ ಕಚೇರಿಯ ಮೇಲೆ ಸುಲೈಮನಿ ನಿರ್ದೇಶನದಂತೆ ದಾಳಿ ನಡೆಸಲಾಗಿತ್ತು ಎಂದು ಹೇಳಿದ್ದರು.  ಜೊತೆಗೆ ಇರಾನ್ ಸೇನಾ ಮುಖ್ಯಸ್ಥ ಖಾಸೀಂ ಸುಲೈಮನಿಯನ್ನು ಅಮೆರಿಕ ಏರ್ ಸ್ಟ್ರೈಕ್ ನಡೆಸಿ ಕೊಂದಿರುವುದನ್ನು ಸಮರ್ಥಿಸಿಕೊಂಡಿದ್ದರು.

  • ದೆಹಲಿ ದಾಳಿಗೆ ನೆರವು ನೀಡಿದ್ದ ಸುಲೈಮನಿಯನ್ನು ಹತ್ಯೆ ಮಾಡಿದ್ದೇವೆ – ಡೊನಾಲ್ಡ್ ಟ್ರಂಪ್

    ದೆಹಲಿ ದಾಳಿಗೆ ನೆರವು ನೀಡಿದ್ದ ಸುಲೈಮನಿಯನ್ನು ಹತ್ಯೆ ಮಾಡಿದ್ದೇವೆ – ಡೊನಾಲ್ಡ್ ಟ್ರಂಪ್

    – ಲಂಡನ್, ದೆಹಲಿಯಲ್ಲಿ ಸುಲೈಮನಿಯಿಂದ ದಾಳಿ
    – ಯುದ್ಧ ನಿಲ್ಲಿಸಲು ಅಮೆರಿಕದಿಂದ ಏರ್ ಸ್ಟ್ರೈಕ್
    – ಕೃತ್ಯವನ್ನು ಸಮರ್ಥಿಸಿಕೊಂಡ ಡೊನಾಲ್ಡ್ ಟ್ರಂಪ್

    ಲಾಸ್ ಏಂಜಲೀಸ್: ಇರಾನ್ ಸೇನಾ ಮುಖ್ಯಸ್ಥ ಖಾಸೀಂ ಸುಲೈಮನಿಯನ್ನು ಅಮೆರಿಕ ಏರ್ ಸ್ಟ್ರೈಕ್ ನಡೆಸಿ ಕೊಂದಿರುವುದನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದು, ಹತ್ಯೆಯಾದ ಖಾಸೀಂ ಸುಲೈಮನಿ, ಲಂಡನ್ ಸೇರಿದಂತೆ ಭಾರತದ ನವದೆಹಲಿಯಲ್ಲಿ ಭಯೋತ್ಪಾದನ ದಾಳಿ ನಡೆಸಲು ನೆರವು ನೀಡಿದ್ದ ಎಂದು ಹೇಳಿದ್ದಾರೆ.

    ಅಮೆರಿಕ ಶುಕ್ರವಾರ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿ ಬಿಗಿ ಭದ್ರತೆಯಲ್ಲಿದ್ದ ಸುಲೈಮನಿಯನ್ನು ಹತ್ಯೆ ಮಾಡಲಾಗಿತ್ತು. ಇರಾಕ್‍ನ ಮಿಲಿಟರಿ ಕಮಾಂಡರ್ ಅಬು ಮಹ್ದಿ ಅಲ್ ಮುಹಾಂದಿಸ್ ಜೊತೆ ಇರಾಕ್ ರಾಜಧಾನಿ ಬಾಗ್ದಾದ್‍ನ ಏರ್‍ಪೋರ್ಟಿಗೆ ಇರಾನ್ ಸೇನಾ ಮುಖ್ಯಸ್ಥರಾಗಿದ್ದ ಸುಲೈಮನಿ ಕಾರಿನಲ್ಲಿ ತೆರಳುತ್ತಿದ್ದರು. ಈ ಇಬ್ಬರು ತೆರಳುತ್ತಿದ್ದ ಕಾರನ್ನು ಟಾರ್ಗೆಟ್ ಮಾಡಿದ ಅಮೆರಿಕ ಸೇನೆಗಳು ಡ್ರೋನ್ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಿ ಏರ್ ಸ್ಟ್ರೈಕ್ ಮಾಡಿತ್ತು. ದಾಳಿಯ ತೀವ್ರತೆಗೆ ಇಬ್ಬರು ತೆರಳುತ್ತಿದ್ದ ಕಾರುಗಳು ಛಿದ್ರ-ಛಿದ್ರವಾಗಿದ್ದವು.

    ಘಟನೆಯ ಕುರಿತು ಫ್ಲೋರಿಡಾದಲ್ಲಿ ಮಾತನಾಡಿದ್ದ ಟ್ರಂಪ್, ಇತ್ತೀಚೆಗೆ ಅಮೆರಿಕವನ್ನು ಟಾರ್ಗೆಟ್ ಮಾಡಿ ಇರಾಕ್ ನಡೆಸಿದ ದಾಳಿಗಳಲ್ಲಿ ದೇಶದ ಸೈನಿಕ ಸಾವನ್ನಪ್ಪಿದ್ದರು. ಅಲ್ಲದೇ ರಾಕೆಟ್ ದಾಳಿಯಲ್ಲಿ ನಾಲ್ವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದರು. ಬಾಗ್ದಾದ್‍ನ ನಮ್ಮ ವಿದೇಶಾಂಗ ಕಚೇರಿಯ ಮೇಲೆ ಸುಲೈಮನಿ ನಿರ್ದೇಶನದಂತೆ ದಾಳಿ ನಡೆಸಲಾಗಿತ್ತು ಎಂದು ಹೇಳಿದ್ದಾರೆ.

    ಸುಲೈಮನಿನ ಕ್ರೂರ ಮನಸ್ಸಿನ ಕಾರಣ ಅಮಾಯಕ ಜನರು ಸಾವನ್ನಪ್ಪಿದ್ದಾರೆ. ಲಂಡನ್ ಸೇರಿದಂತೆ ಭಾರತದ ದೆಹಲಿವರೆಗೂ ಭಯೋತ್ಪಾದಕ ದಾಳಿಗಳಿಗೆ ಸುಲೈಮನಿ ನೆರವು ನೀಡಿದ್ದಾನೆ. ಇಂದು ನಾವು ಸುಲೈಮನಿ ದೌರ್ಜನ್ಯಗಳಿಂದ ಉಂಟಾದ ಸಂತ್ರಸ್ತರನ್ನು ಗೌರವದಿಂದ ನೆನಪಿಸಿಕೊಳ್ಳಬೇಕಿದೆ. ಸುಲೈಮನಿ ಭಯೋತ್ಪಾದನೆಯ ಆಳ್ವಿಕೆ ಅಂತ್ಯವಾಗಿದೆ ಎಂದು ತಿಳಿಸಿದ್ದಾರೆ.

    ಕಳೆದ 20 ವರ್ಷದಗಳಿಂದ ಸುಲೇಮನಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಭಯೋತ್ಪಾದನ ದಾಳಿಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಟ್ರಂಪ್ ಆರೋಪ ಮಾಡಿದ್ದು, ಅಮೆರಿಕ ಸೇನಾಪಡೆ ಇಂತಹ ದಾಳಿ ಬಹಳ ಹಿಂದೆಯೇ ನಡೆಸಬೇಕಿತ್ತು. ಇದರಿಂದ ಸಾವಿರಾರು ಜನರ ಜೀವವನ್ನು ರಕ್ಷಿಸಬಹುದಿತ್ತು. ಇತ್ತೀಚೆಗಷ್ಟೇ ಸುಲೇಮನಿ ಇರಾನ್ ನಲ್ಲಿ ಕ್ರೂರ ಪ್ರತಿಭಟನೆಗಳನ್ನು ನಡೆಸಲು ಕಾರಣನಾಗಿದ್ದ. ಈ ಪ್ರತಿಭಟನೆಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಕ್ರೂರವಾಗಿ ಹಿಂಸಿಸಿ ಕೊಲೆ ಮಾಡಿದ್ದಾನೆ. ಆದರೆ ಸುಲೇಮನಿ ಹತ್ಯೆಯೂ ಯುದ್ಧಕ್ಕೆ ದಾರಿ ಮಾಡಿಕೊಡುವುದಿಲ್ಲ. ಯುದ್ಧವನ್ನು ನಿಲ್ಲಿಸಲು ನಾವು ದಾಳಿಯನ್ನು ನಡೆಸಿದ್ದೇವೆ. ಇರಾನಿನ ಜನರ ಬಗ್ಗೆ ನನಗೆ ಅಪಾರ ಗೌರವಿದ್ದು, ಅವರು ವೈಭವದ ಪರಂಪರೆ ಹಾಗೂ ಸಾಮಥ್ರ್ಯವನ್ನು ಹೊಂದಿದ್ದಾರೆ. ಅಮೆರಿಕ ಅಲ್ಲಿನ ಆಡಳಿತ ಬದಲಾವಣೆಯನ್ನು ಬಯಸುವುದಿಲ್ಲ ಎಂದು ದಾಳಿಗೆ ತಮ್ಮ ಸಮರ್ಥನೆಗಳನ್ನು ಟ್ರಂಪ್ ಬಲವಾಗಿ ಮುಂದಿಟ್ಟಿದ್ದಾರೆ.

    ಅಮೆರಿಕದ ಈ ದಾಳಿಯಿಂದ ವಿಶ್ವದಲ್ಲಿ 3ನೇ ಮಹಾಸಮರದ ಕಾರ್ಮೋಡ ಆವರಿಸಿದೆ. ಅಮೆರಿಕದ ದಾಳಿಯನ್ನು ಇರಾನ್ ಉಗ್ರವಾಗಿ ಖಂಡಿಸಿ, ನಿಮ್ಮ ದುಸ್ಸಾಹಸಗಳಿಗೆ ತಕ್ಕ ಬೆಲೆ ತೆರಲಿದ್ದೀರಿ. ಕಟು ಪ್ರತೀಕಾರ ನಿಮಗೆ ಕಾದಿದೆ ಎಂದು ಎಚ್ಚರಿಕೆಯನ್ನು ರವಾನಿಸಿದೆ. ಇದರ ಬೆನ್ನಲ್ಲೇ ಇರಾನ್, ಇರಾಕ್‍ನಲ್ಲಿ ಪ್ರಕ್ಷುಬ್ಧ ವಾತಾವರಣದಿಂದ ಅಮೆರಿಕ ತನ್ನ ಪ್ರಜೆಗಳಿಗೆ ವಾಪಸ್ ಬರುವಂತೆ ಸೂಚನೆ ನೀಡಿದೆ. ಇರಾಕ್‍ನಲ್ಲಿರುವ ತನ್ನ ಸೇನಾಪಡೆಗಳಿಗೂ ಎಚ್ಚರಿಕೆ ವಹಿಸಲು ಸೂಚಿಸಿದೆ.

    ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ವಿಶ್ವ ರಾಷ್ಟ್ರಗಳ ಮೇಲೆ ಬೀರುವ ಸಾಧ್ಯತೆ ಹೆಚ್ಚಿದೆ. ಇರಾನ್-ಇರಾಕ್‍ನಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಭಾರತದಲ್ಲೂ ತೈಲ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ಎಂಬಾಂತೆ ನಿನ್ನೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ದಿನ 760 ರೂ. ಏರಿಕೆಯಾಗಿತ್ತು. ಪರಿಣಾಮ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 41,130 ರೂ. ಗಾಡಿ ದಾಟ್ಟಿತ್ತು.

    2012ರ ದೆಹಲಿಯಲ್ಲಿ ದಾಳಿ:
    ನವದೆಹಲಿಯ ಪ್ರಧಾನಮಂತ್ರಿಗಳ ನಿವಾಸ ಬಳಿ ಕಾರಿನಲ್ಲಿ ಸ್ಫೋಟ ನಡೆಸಲಾಗಿತ್ತು. ಈ ಕಾರು ಇಸ್ರೇಲ್ ರಾಯಭಾರಿ ಕಚೇರಿಗೆ ಸೇರಿದಾಗಿತ್ತು. ಘಟನೆಯಲ್ಲಿ ಇಸ್ರೇಲ್‍ನ ರಾಯಭಾರಿ ಕಚೇರಿಯ ಅಧಿಕಾರಿಯ ಪತ್ನಿ ಸೇರಿದಂತೆ ಇಬ್ಬರು ಭಾರತೀಯರು ಗಾಯಗೊಂಡಿದ್ದರು. ಇಸ್ರೇಲ್ ಅಧಿಕಾರಿಗಳಿದ್ದ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದ ಮೇಟಾರು ಸೈಕಲ್‍ನಲ್ಲಿ ಸ್ಫೋಟಕ ಇರಿಸಿ ದಾಳಿ ನಡೆಸಲಾಗಿತ್ತು. ಈ ವೇಳೆ ಭಾರತದ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದ್ದ ಅಮೆರಿಕ ದಾಳಿಯ ಹಿಂದೆ ಇರಾನ್ ಪಾತ್ರವಿರುವ ಬಗ್ಗೆ ತಿಳಿಸಿತ್ತು. ದೆಹಲಿಯ ದಾಳಿಯ ದಿನವೇ ಜಾರ್ಜಿಯಾದಲ್ಲಿ ನಡೆದ ದಾಳಿಯಲ್ಲಿ ಇಸ್ರೇಲ್ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಮರುದಿನ ಥೈಲ್ಯಾಂಡ್‍ನಲ್ಲಿ ನಡೆದ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದರು. ಈ ವೇಳೆ ಪೊಲೀಸರು ಇಬ್ಬರು ಇರಾನ್ ಪ್ರಜೆಗಳನ್ನು ಬಂಧಿಸಿತ್ತು. 2013ರಲ್ಲಿ ಇಬ್ಬರಿಗೂ ಶಿಕ್ಷೆ ವಿಧಿಸಲಾಗಿತ್ತು.

    ಇಸ್ರೇಲ್ ಉಪ ಪ್ರಧಾನಿ ಅಂದು ಸುಲೈಮನಿ ದೆಹಲಿಯ ದಾಳಿ ಹಿಂದಿನ ಪ್ರಮುಖ ವ್ಯಕ್ತಿ ಎಂದು ತಿಳಿಸಿದ್ದರು. ಅಲ್ಲದೇ ಥೈಲ್ಯಾಂಡ್, ಜಾರ್ಜಿಯಾ ಹಾಗೂ ದೆಹಲಿಯಲ್ಲಿ ನಡೆದ ಸ್ಫೋಟಕಗಳು ಒಂದೇ ಮಾದರಿಯಾದ್ದು ಎಂದು ತನಿಖೆಯ ವೇಳೆ ಬಯಲಾಗಿತ್ತು. ಅಂದು ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ಯದ್ಧದ ಹಿನ್ನೆಲೆಯಲ್ಲಿ ಸುಲೈಮನ್ ದೆಹಲಿಯಲ್ಲಿ ದಾಳಿ ನಡೆಸುವ ಸಂಚು ರೂಪಿಸಿದ್ದ. ಇರಾನ್‍ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕುಡ್ಸ್ ಫೋರ್ಸ್ ಮೇಲೆ ಸುಲೈಮನ್ ನಿಯಂತ್ರಣ ಹೊಂದಿದ್ದ. ಈ ಪಡೆ ಇರಾನ್ ಸೇರಿದಂತೆ ವಿಶ್ವದ ವಿವಿಧ ಸ್ಥಳಗಳಲ್ಲಿ ಭಯೋತ್ಪಾದನ ದಾಳಿ ನಡೆಸುವುದು ಸೇರಿದಂತೆ, ಇತರೆ ಸಂಘಟನೆಗಳಿಗೆ ನೆರವು ನೀಡುತ್ತಿತ್ತು. ಇಸ್ರೇಲ್ ಈ ಸಂಘಟನೆಯ ಪ್ರಮುಖ ಟಾರ್ಗೆಟ್ ಆಗಿತ್ತು.

  • 20 ಅಡಿ ಉದ್ದದ ಭಯಾನಕ ಶಾರ್ಕ್ ಜೊತೆ ಮಹಿಳೆ ಈಜಾಟ- ವಿಡಿಯೋ ವೈರಲ್

    20 ಅಡಿ ಉದ್ದದ ಭಯಾನಕ ಶಾರ್ಕ್ ಜೊತೆ ಮಹಿಳೆ ಈಜಾಟ- ವಿಡಿಯೋ ವೈರಲ್

    ಲಾಸ್ ಏಂಜಲೀಸ್: ಸಮುದ್ರದ ಆಳದಲ್ಲಿ ಬರೋಬ್ಬರಿ 20 ಅಡಿ ಉದ್ದದ ಭಯಾನಕ ಬಿಳಿ ಶಾರ್ಕ್ ಒಂದರ ಜೊತೆ ಮಹಿಳೆ ಈಜಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತ ಫುಲ್ ವೈರಲ್ ಆಗಿದೆ.

    ಹವಾಯ್ ಕಡಲ ತೀರದಲ್ಲಿ ಕಂಡುಬಂದಿದ್ದ ಅತೀ ದೊಡ್ಡ ಬಿಳಿ ಶಾರ್ಕ್ ಒಂದರ ಜೊತೆಯಲ್ಲಿ ಮಹಿಳೆ ಈಜಿದ್ದಾರೆ. ಈ ಅಪರೂಪದ ದೃಶ್ಯವನ್ನು ಮಹಿಳೆ ಜೊತೆಗಿದ್ದ ಈಜುಗಾರರೊಬ್ಬರು ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದು, ವಿಡಿಯೋ ನೋಡಿದವರು ಅಬ್ಬಾ! ಎಂಥಾ ದೃಶ್ಯ ಅಂತ ಅಚ್ಚರಿ ಪಟ್ಟಿದ್ದಾರೆ.

    ಈ ದೈತ್ಯಾಕಾರದ ಬಿಳಿ ಶಾರ್ಕ್ ಇದುವರೆಗೂ ಕಂಡು ಬಂದಿರುವ ಶಾರ್ಕ್ ಗಳಲ್ಲಿ ಅತೀ ದೊಡ್ಡ ಗಾತ್ರದಾಗಿದ್ದು, ಡೀಪ್ ಬ್ಯ್ಲೂ ಎಂದು ಹೆಸರು ಪಡೆದಿದೆ. ಈ ಶಾರ್ಕ್ 5 ವರ್ಷಗಳ ಹಿಂದೆ ಮೆಕ್ಸಿಕೋದ ಸಮುದ್ರಾಳದಲ್ಲಿ ಕಂಡುಬಂದಿತ್ತು. ಈಗ ಮತ್ತೆ ಹಲವು ವರ್ಷಗಳ ಬಳಿಕ ಮಂಗಳವಾರ ಹವಾಯ್ ಸಮುದ್ರದಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ಶಾರ್ಕ್ ಕಂಡ ಈಜುಗಾರರು ಬೆಳಗ್ಗೆಯಿಂದ ಸಂಜೆವರೆಗೂ ಅದರೊಂದಿಗೆ ಸಮಯ ಕಳೆದಿದ್ದಾರೆ ಅಂತ ಪ್ರತಿಕೆಯೊಂದರಲ್ಲಿ ಪ್ರಕಟವಾಗಿದೆ.

    https://www.instagram.com/p/BstzkcZlZHg/?utm_source=ig_embed&utm_campaign=embed_video_watch_again

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಡಿಯೋ: ಆ ಚಿತ್ರದ ಬದಲು ಬೇರೊಂದು ಚಿತ್ರಕ್ಕೆ ಪ್ರಶಸ್ತಿ- ಆಸ್ಕರ್‍ನಲ್ಲಿ ಎಡವಟ್ಟು

    ವಿಡಿಯೋ: ಆ ಚಿತ್ರದ ಬದಲು ಬೇರೊಂದು ಚಿತ್ರಕ್ಕೆ ಪ್ರಶಸ್ತಿ- ಆಸ್ಕರ್‍ನಲ್ಲಿ ಎಡವಟ್ಟು

    ಲಾಸ್ ಏಂಜಲೀಸ್: ಅಮೆರಿಕಾದ ಲಾಸ್ ಏಂಜಲೀಸ್‍ನಲ್ಲಿ ಸಿನಿಮಾ ರಂಗದಲ್ಲೇ ಬಹುದೊಡ್ಡ ಪ್ರಶಸ್ತಿಯಾದ ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಈ ವೇಳೆ ಅತ್ಯುತ್ತಮ ಚಿತ್ರದ ಹೆಸರು ಘೋಷಣೆ ಮಾಡುವಲ್ಲಿ ಗೊಂದಲವುಂಟಾಗಿದೆ.

    89ನೇ ಆಸ್ಕರ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಚಿತ್ರವೆಂದು `ಮೂನ್‍ಲೈಟ್’ ಬದಲು `ಲಾ ಲಾ ಲಾಂಡ್’ಗೆ ಪ್ರಶಸ್ತಿ ನೀಡಲಾಗಿದೆ. ತದನಂತರ ಮೂನ್‍ಲೈಟ್ ಚಿತ್ರ ಅತ್ಯುತ್ತಮವೆಂದು ಘೋಷಣೆ ಮಾಡಿದ್ದರು. ಈ ವೇಳೆ ಪ್ರಶಸ್ತಿ ಸ್ವೀಕರಿಸಿದ್ದ ಲಾ ಲಾ ಲಾಂಡ್ ಚಿತ್ರದ ನಿರ್ಮಾಪಕ ವೇದಿಕೆಯಲ್ಲೇ ಪ್ರಶಸ್ತಿಯನ್ನು ಹಿಂದಕ್ಕೆ ಕೊಡಬೇಕಾದ ಪ್ರಸಂಗ ಎದುರಾಯಿತು. ಬಳಿಕ ಮೂನ್‍ಲೈಟ್ ತಂಡಕ್ಕೆ ಆಸ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ವಾರೆನ್ ಬೆಟ್ಟಿ ಎಂಬವರು ಪ್ರಶಸ್ತಿ ನೀಡುವ ವೇಳೆ ಈ ಎಡವಟ್ಟು ಮಾಡಿದ್ದಾರೆ. ಇದು ಹಾಲಿವುಡ್ ಚಿತ್ರರಂಗದಲ್ಲೇ ಅತ್ಯಂತ ದೊಡ್ಡ ಕಾರ್ಯಕ್ರಮದಲ್ಲಿ ನಡೆದಿರುವುದು ವಿಷಾದನೀಯ ಸಂಗತಿಯಾಗಿದೆ.

    ಪ್ರಶಸ್ತಿ ನೀಡುವಿಕೆಯಲ್ಲಿ ಗೊಂದಲ ಉಂಟಾಂದಂತೆಯೇ ಕರಣ್ ಜೋಹರ್, ರಿಷಿ ಕಪೂರ್ ಹಾಗೂ ಶಬಾನಾ ಆಜ್ಮಿ ಟ್ವೀಟ್ ಮಾಡಿದ್ದು, ಸಿನಿಮಾ ರಂಗದ ಬಹುದೊಡ್ಡ ಕಾರ್ಯಕ್ರಮದಲ್ಲೇ ಇಂತಹ ಎಡವಟ್ಟಾಗಿರುವುದು ನಾಚಿಗೇಡಿನ ಸಂಗತಿ ಅಂತಾ ಕಿಡಿಕಾರಿದ್ದಾರೆ.

    https://twitter.com/karanjohar/status/836087243689312256?ref_src=twsrc%5Etfw