Tag: ಲಾ ವಿದ್ಯಾರ್ಥಿ

  • ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ – ಕಾನೂನು ವಿದ್ಯಾರ್ಥಿ ದುರ್ಮರಣ

    ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ – ಕಾನೂನು ವಿದ್ಯಾರ್ಥಿ ದುರ್ಮರಣ

    ಶಿವಮೊಗ್ಗ: ಡಿವೈಡರ್‌ಗೆ (Divider) ಬೈಕ್‌ (Bike) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಶರಾವತಿ ನಗರದಲ್ಲಿ ನಡೆದಿದೆ.

    ಮೃತ ಸವಾರನನ್ನು ಕಾಶಿಪುರ ನಿವಾಸಿ ಗೌತಮ್ (22) ಎಂದು ಗುರುತಿಸಲಾಗಿದೆ. ಈತ ಎನ್‌ಇಎಸ್ (NES) ಕಾಲೇಜಿನ ಲಾ ವಿದ್ಯಾರ್ಥಿಯಾಗಿದ್ದ. ಕಾಲೇಜಿನಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯುತ್ತಿದ್ದು, ಸಂಭ್ರಮಾಚರಣೆಯ ಸಿದ್ಧತೆಯಲ್ಲಿ ಭಾಗವಹಿಸಿದ್ದ ಈತ ನಸುಕಿನ ಜಾವ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

    ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಗೌತಮ್ ಗಂಭಿರ ಗಾಯಗೊಂಡಿದ್ದ. ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆಯ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಣೆಯಾದ ಕವಿತಾ ಶವವಾಗಿ ಪತ್ತೆ- ಗೆಳೆಯ ಸಲೀಂನಿಂದಲೇ ಹತ್ಯೆ

  • ಸ್ನೇಹಿತನನ್ನು ರೂಮಿನಲ್ಲಿ ಕೂಡಿ ಹಾಕಿ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು

    ಸ್ನೇಹಿತನನ್ನು ರೂಮಿನಲ್ಲಿ ಕೂಡಿ ಹಾಕಿ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು

    – ಅಪಘಾತ ಮಾಡಿ ಆಸ್ಪತ್ರೆಗೆ ಹೋಗದೆ ಮನೆಗೆ ಬಂದು ಸೂಸೈಡ್

    ಬೆಂಗಳೂರು: ಕಾನೂನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ ನಡೆದಿದೆ.

    ಕೌಶಿಕ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ಕೌಶಿಕ್ ಆನೇಕಲ್ಲಿನ ಅಲೈನ್ಸ್ ಕಾಲೇಜಿನಲ್ಲಿ ಲಾ ವ್ಯಾಸಂಗ ಮಾಡುತ್ತಿದ್ದನು. ಕಾಲೇಜು ರಜಾ ಇರುವುದರಿಂದ ಪಕ್ಕದಲ್ಲಿನ ಈಡನ್ ಗಾರ್ಡನ್‍ನಲ್ಲಿ ಮನೆ ಮಾಡಿಕೊಂಡು ವಾಸವಿದ್ದನು.

    ಮೃತ ಕೌಶಿಕ್ ಭಾನುವಾರ ರಾತ್ರಿ ಸ್ನೇಹಿತನ ಜೊತೆ ಹೋಗಿ ಕುಡಿದು ಪಾರ್ಟಿ ಮಾಡಿದ್ದನು. ಪಾರ್ಟಿ ಮುಗಿಸಿ ಹೊಸೂರಿನಿಂದ ಬರುವಾಗ ಕಾರು ಅಪಘಾತಕ್ಕೀಡಾಗಿತ್ತು. ಆನೇಕಲ್-ಹೊಸೂರು ರಸ್ತೆಯ ಗುಡ್ಡನಹಳ್ಳಿಯಲ್ಲಿ ಕಾರು ಅಪಘಾತವಾಗಿದ್ದು, ಪಲ್ಟಿಯಾದ ರಭಸಕ್ಕೆ ಕಾರು ಮೂರು ಪಲ್ಟಿ ಹೊಡೆದಿತ್ತು. ಈ ವೇಳೆ ಸ್ಥಳೀಯರು ಕೌಶಿಕ್‍ನನ್ನು ರಕ್ಷಿಸಿ ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಕೌಶಿಕ್ ಆಸ್ಪತ್ರೆಗೆ ಹೋಗದೆ ಮನೆಗೆ ಬಂದಿದ್ದನು.

    ಮನೆಯ ಮೊದಲ ಮಹಡಿಯಲ್ಲಿ ಬೀಗ ಒಡೆದು ಸ್ನೇಹಿತನ ಜೊತೆ ಕೌಶಿಕ್ ಮನೆಯೊಳಗೆ ಹೋಗಿದ್ದನು. ಮನೆ ಒಳಗೆ ಹೋದ ನಂತರ ಸ್ನೇಹಿತನನ್ನು ರೂಮಿನಲ್ಲಿ ಕೂಡಿ ಹಾಕಿ ಕೌಶಿಕ್ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ರೂಮಿನಲ್ಲಿದ್ದ ಸ್ನೇಹಿತ ಕೂಗಾಡಿಕೊಂಡ ನಂತರ ಸ್ಥಳೀಯರು ಬಂದು ನೋಡಿದ್ದಾರೆ. ಆದರೆ ಅಷ್ಟರಲ್ಲಿ ಕೌಶಿಕ್ ಸಾವನ್ನಪ್ಪಿದ್ದನು.

    ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಕೌಶಿಕ್ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.