Tag: ಲಿಂಗಾಯತ ಧರ್ಮ

  • ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    – ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ತಳಕು ಹಾಕಬಾರದು

    ಬೆಂಗಳೂರು: ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ. ʻವೀರಶೈವ ಲಿಂಗಾಯತರು (Lingayats) ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ, ಅವರು ಸುಧಾರಿಸಿದ್ರೆ, ಕರ್ನಾಟಕ ಉದ್ಧಾರ ಆಗುತ್ತೆʼ ಅಂತ ಸಾಹಿತಿಯೊಬ್ಬರು ಹೇಳ್ತಾರೆ. ಹಾಗಾಗಿ ಎಲ್ಲರ ಉದ್ಧಾರ ಆಗಬೇಕಾದ್ರೆ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯವಶ್ಯಕವಾಗಿದೆ. ಯಾರಾದ್ರೂ ಈ ಧರ್ಮವನ್ನ ಹಾಳು ಮಾಡಲು ಪ್ರಯತ್ನಿಸಿದ್ರೆ, ಇಡೀ ಕರ್ನಾಟಕವೇ ಹಾಳಾಗುತ್ತೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ಹೇಳಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆಗೆ ಪ್ರತಕ್ರಿಯಿಸಿದ್ದಾರೆ. ಎಂ.ಬಿ.ಪಾಟೀಲ್ ನನಗೆ ಸ್ನೇಹಿತರು ಅವರ ಬಗ್ಗೆ ಮಾತನಾಡಲ್ಲ. ಯಾರಿಂದಲೂ ವೀರಶೈವ ಲಿಂಗಾಯತ (Veerashaiva Lingayat) ಬೇರೆ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದಲೇ ಇದೀವಿ. ಅಲ್ಲದೇ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರನ್ನ ತಳಕು ಹಾಕಬಾರದು. ಈ ಹಿಂದೆಯೂ ಅವರಿಗೆ ಸಂಬಂಧ ಇರಲಿಲ್ಲ, ಈಗಲೂ ಇಲ್ಲ, ನಮ್ಮ ಸರ್ಕಾರಕ್ಕೂ ಇಲ್ಲ. ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯವೇ ಅಂತಿಮ ಎಂದು ಹೇಳಿದ್ದಾರೆ.

    ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ಬೆಂಗಳೂರು: ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ (Veerashaiva Lingayat Religion) ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ಬಸವಣ್ಣನ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗುವ ಕಾಲ ಬಂದೇ ಬರುತ್ತೆ: ಬಸವಲಿಂಗ ಪಟ್ಟದೇವರು ಬಾಂಬ್

    ಬಸವಣ್ಣನ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗುವ ಕಾಲ ಬಂದೇ ಬರುತ್ತೆ: ಬಸವಲಿಂಗ ಪಟ್ಟದೇವರು ಬಾಂಬ್

    ಬೀದರ್: ಬಸವಣ್ಣನವರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗುವ ಕಾಲ ಬಂದೇ ಬರುತ್ತೆ ಎಂದು ಕಲ್ಯಾಣ ಪರ್ವದಲ್ಲಿ ಬಸವಲಿಂಗ ಪಟ್ಟದೇವರು (Basavalinga Pattadevaru) ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬವಣ್ಣನ (Basavanna) ಕರ್ಮಭೂಮಿ ಬಸವಕಲ್ಯಾಣದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ (Lingayat Religion) ಕೂಗು ಮೊಳಗಿದೆ. ಬಸವಕಲ್ಯಾಣದ ಕಲ್ಯಾಣ ಪರ್ವ ವೇದಿಕೆ ಕಾರ್ಯಕ್ರಮದಲ್ಲಿ ಪಟ್ಟದೇವರು ಸ್ವಾಮೀಜಿ ಸ್ವತಂತ್ರ ಧರ್ಮದ ಕೂಗು ಎತ್ತಿದ್ದಾರೆ. ಬಸವಣ್ಣನವರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗಬಾರದು ಅಂತ ಅನೇಕ ಶಕ್ತಿಗಳು ವಿರೋಧ ಮಾಡುತ್ತಿವೆ. ಆದ್ರೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವ ಕಾಲ ಬಂದೇ ಬರುತ್ತೆ ಎಂದು ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ವಾರಣಾಸಿಯಲ್ಲಿ 6,700 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ

    200 ಸ್ವಾಮೀಜಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸರ್ಕಾರ ಕೆಲವೇ ದಿನಗಳಲ್ಲಿ ಬಸವಣ್ಣರನ್ನ ನಾಯಕ ಎಂದು ಘೋಷಣೆ ಮಾಡಿತು. ಅದೇ ರೀತಿ ಲಿಂಗಾಯತ ಸ್ವತಂತ್ರ ಧರ್ಮ ಆಗುವ ಕಾಲ ಬರುತ್ತೆ. ನಾವೆಲ್ಲಾ ನಿರಾಸೆಯಾಗದೇ ಸ್ವತಂತ್ರ ಧರ್ಮಕ್ಕೆ ಹೋರಾಡಬೇಕು ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಲಿಂಗಾಯತ ಜಾಗೃತಿ ಸಮಾವೇಶ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮೀಸಲು ಅರಣ್ಯ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ತಡೆ – ಅರಸೀಕೆರೆ ಕೆರೆಗಳಿಗೆ ಹರಿಯದ ನೀರು

    12ನೇ ಶತಮಾನದಲ್ಲೇ ಅನುಭವ ಮಂಟಪದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮುದ್ರೆ ಬಿದ್ದಿದೆ. ಇನ್ನು ಸರ್ಕಾರದಲ್ಲಿ ಸ್ವತಂತ್ರ ಧರ್ಮದ ಮುದ್ರೆ ಬೀಳಬೇಕಿದೆ. ಲಿಂಗಾಯತ ಸ್ವತಂತ್ರ ಧರ್ಮ ಅಂತ ಘೋಷಣೆ ಆದ್ರೆ ನಮಗೆ, ನಮ್ಮ ಪರಿವಾರಗಳಿಗೆ ಅನುಕೂಲ ಆಗಲಿದೆ. ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ, ಸ್ವತಂತ್ರ ಧರ್ಮ ಹೋರಾಟಕ್ಕೆ ಸ್ವಾಮಿಜೀ ಕರೆ ನೀಡಿದ್ದಾರೆ.

    ಬಸವಣ್ಣನವರ ಕಾಲದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮಕ್ಕೆ ವಿರೋಧ ಮಾಡುವವರು ಇದ್ದೇ ಇದ್ದಾರೆ. ವಿರೋಧದ ಮಧ್ಯೆಯೂ 21ನೇ ಶತಮಾನದವರೆಗೆ ಜಾಗೃತ ಮಾಡುತ್ತಾ ಬಂದಿದ್ದು ಲಿಂಗಾಯತ ಸ್ವತಂತ್ರ ಧರ್ಮ ಮುದ್ರೆ ಪಡೆದೇ ತೀರೋಣ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಇದನ್ನೂ ಓದಿ: ಕ್ಲೋರೇಟ್, ಹೈಡ್ರೋಜನ್ ಪೆರಾಕ್ಸೈಡ್ ಮಿಶ್ರಣ ಮಾಡಿ CRPF ಶಾಲೆ ಬಳಿ ಸ್ಫೋಟ – NIA ತೀವ್ರ ಶೋಧ

  • ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಸಿದ್ದರಾಮಯ್ಯ: ಬಸವಲಿಂಗ ಶ್ರೀ

    ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಸಿದ್ದರಾಮಯ್ಯ: ಬಸವಲಿಂಗ ಶ್ರೀ

    – ಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಆಗ್ರಹ

    ಬೀದರ್: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಯಾರಾದರೂ ಇದ್ದರೆ, ಅದು ಸಿದ್ದರಾಮಯ್ಯ (Siddaramaiah) ಎಂದು ಭಾಲ್ಕಿ ಹೀರೆಮಠ ಸಂಸ್ಥಾನದ ಪೀಠಾಧಿಪತಿ ಬಸವಲಿಂಗ ಪಟ್ಟದೇವರು (Basavalinga Pattadevaru) ಶ್ಲಾಘಿಸಿದ್ದಾರೆ.

    ಕನ್ನಡದ ಸಾಂಸ್ಕೃತಿಕ ನಾಯಕ ಎಂದು ವಿಶ್ವಗುರು ಬಸವಣ್ಣನನ್ನು (Basavanna) ಸರ್ಕಾರ ಘೋಷಣೆ‌ ಮಾಡಿದ ಹಿನ್ನೆಲೆಯಲ್ಲಿ ಬಸವಣ್ಣನ ಕರ್ಮಭೂಮಿ ಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಲಾಯಿತು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ, ಅಖಿಲ ಭಾರತೀಯ ವೀರಶೈವ – ಲಿಂಗಾಯತ ಮಹಾಸಭಾ ಹಾಗೂ ವಿವಿಧ ಮಠಾಧಿಪತಿಗಳ ಒಕ್ಕೂಟದಿಂದ ಪುಷ್ಪಾರ್ಚನೆ‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

    ಬಸವಲಿಂಗ ಪಟ್ಟದ್ದೆವರು, ಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಮಾತೆ, ಹಾರಕೂಡ್ ಶ್ರೀಗಳು, ತಡೋಳ್ ಶ್ರೀಗಳು, ಸಚಿವರಾದ ಎಂ.ಬಿ ಪಾಟೀಲ್ (MB Patil), ಈಶ್ವರ್ ಖಂಡ್ರೆ, ರಹೀಂ ಖಾನ್, ಶಾಮನೂರು ಶಿವಶಂಕರಪ್ಪ ಅವರು ಸಿಎಂಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಸವಕಲ್ಯಾಣ ತೇರು ಮೈದಾನದಲ್ಲಿ ಸಿಎಂ ಅಭಿನಂದನಾ ಸಮಾರಂಭ ನಡೆಯಿತು. ವಿವಿಧ ಮಠಾಧೀಶರು, ಕಾಂಗ್ರೆಸ್ ಮುಖಂಡರು, ಬಸವಣ್ಣನ ಅನುಯಾಯಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲ್ಯಾಣದಲ್ಲಿ ಭಾಲ್ಕಿ ಹೀರೆಮಠ ಸಂಸ್ಥಾನದ ಪೀಠಾಧಿಪತಿ ಬಸವಲಿಂಗ ಪಟ್ಟದೇವರು ಅವರು, ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಯಾರಾದರೂ ಇದ್ದರೆ, ಅದು ಸಿದ್ದರಾಮಯ್ಯ. ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆ ಮಾಡಿದರವರು ಸಿಎಂ ಸಿದ್ದರಾಮಯ್ಯ ಎಂದು ಹಾಡಿಹೊಗಳಿದರು. ಇದನ್ನೂ ಓದಿ: ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ

    ಇದೇ ಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ನಿರ್ಮಾಣ ಮಾಡಬೇಕು, ಅನುಭವ ಮಂಟಪಕ್ಕೆ ಜೀವಂತಿಕೆ ತುಂಬಲು ವಚನ ವಿಶ್ವವಿದ್ಯಾಲಯ ಬೇಕೆ ಬೇಕು ಎಂದು ಆಗ್ರಹಿಸಿದರು.

    ಅಭಿನಂದನಾ ಸಮಾರಂಭವಾದ ಬಳಿಕ ದಾಸೋಹ ಭವನ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ, ಬಳಿಕ ನೂತನ ಅನುಭವ ಮಂಟಪ ಕಾಮಗಾರಿ ವೀಕ್ಷಣೆ ಮಾಡಿ ಕಾಲ ಮಿತಿಯಲ್ಲಿ ಕಾಮಗಾರಿ ಮುಗಿಸುವಂತ್ತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೇಸ್‌; ಪರಪ್ಪನ ಅಗ್ರಹಾರ ಜೈಲು ಸೇರಿದ ನಾಶೀಪುಡಿ

  • ಸ್ವತಂತ್ರ ಲಿಂಗಾಯತ ಧರ್ಮದ ಘೋಷಣೆಯಾಗಬೇಕು: ಖಾಸಾಮಠದ ಶ್ರೀ

    ಸ್ವತಂತ್ರ ಲಿಂಗಾಯತ ಧರ್ಮದ ಘೋಷಣೆಯಾಗಬೇಕು: ಖಾಸಾಮಠದ ಶ್ರೀ

    ಯಾದಗಿರಿ: ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಕೈತೊಳೆದುಕೊಂಡರೆ ಸರಿಯಲ್ಲ, ಸ್ವತಂತ್ರ ಲಿಂಗಾಯತ ಧರ್ಮದ ಘೋಷಣೆ ಮಾಡಬೇಕು ಎಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಖಾಸಾಮಠದ ಪೀಠಾಧಿಪತಿ ಶಾಂತವೀರ ಮುರುಘರಾಜೇಂದ್ರ ಸ್ವಾಮಿ ಒತ್ತಡ ಹಾಕಿದ್ದಾರೆ.

    ಯಾದಗಿರಿ ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಲಿಂಗಾಯತರು ಅಲ್ಪಸಂಖ್ಯಾತರ ಮಾನ್ಯತೆಗೆ ಒಳಪಟ್ಟಿದ್ದಾರೆ. ಹೀಗಾಗಿ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವೆಂದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದರು.

    ರಾಜ್ಯ ಸರ್ಕಾರದಿಂದ ವೀರಶೈವ ಲಿಂಗಾಯತ ನಿಗಮ ರಚನೆ ಹಿನ್ನೆಲೆ ಮತ್ತೆ ಲಿಂಗಾಯತ ಧರ್ಮದ ಕೂಗು ಕೇಳುತ್ತಿದೆ. ಲಿಂಗಾಯತ ಸ್ವತಂತ್ರ ಧರ್ಮಕ್ಕೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಗಟ್ಟಿಯಾಗಿ ಶಿಫಾರಸು ಮಾಡಬೇಕು. ಹಿಂದುಳಿದ ಸಮುದಾಯವನ್ನು ಗುರುತಿಸಿ ಅವರಿಗೆ ಅಲ್ಪಸಂಖ್ಯಾತರ ಅಡಿಯಲ್ಲಿ ಮೀಸಲಾತಿ ನೀಡುವ ಮೂಲಕ, ಸಮಾಜವನ್ನು ಅಭಿವೃದ್ಧಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

  • ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಧಕ್ಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಮ್ಮ ಆತ್ಮಸಾಕ್ಷಿ ಶ್ರೇಷ್ಠವಾಗಿದೆ. ಪೇಜಾವರ ಸ್ವಾಮೀಜಿ ಸವಾಲನ್ನು ಬದ್ಧತೆಯಿಂದ ಸ್ವೀಕರಿಸುತ್ತೇವೆ. ಅವರು ಧೈರ್ಯದ ಬಗ್ಗೆ ಮಾತನಾಡಿದ್ದಾರೆ. ಆ ರೀತಿ ಮಾತನಾಡಬಾರದು. ಬಸವಧರ್ಮದ ಬಗ್ಗೆ ನಮಗಿರುವ ಹೆಮ್ಮೆ, ನಂಬಿಕೆಯನ್ನು ಪೇಜಾವರ ಸ್ವಾಮೀಜಿ ಮುಂದಿಡುತ್ತೇವೆ. ಈ ಮೂಲಕ ಅವರನ್ನು ಕೂಡ ಬಸವ ಧರ್ಮದ ಕಡೆಗೆ ಸೆಳೆದುಕೊಳ್ಳುತ್ತೇವೆ. ಅವರು ಬಸವ ಧರ್ಮವನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಪೇಜಾವರ ಸ್ವಾಮೀಜಿಗಳಿಗೆ ಒಂದು ಕನಿಷ್ಠ ಅರಿವು ಇರಬೇಕಿತ್ತು. ಹಿಂದೂ ಎನ್ನುವುದು ಧರ್ಮವಲ್ಲ. ಅದೊಂದು ಸನ್ಮಾರ್ಗ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಹೇಳಿದ್ದಾರೆ. ಅದನ್ನು ಪೇಜಾವರ ಶ್ರೀ ತಿಳಿದುಕೊಳ್ಳಬೇಕು. ಅದನ್ನು ಬಿಟ್ಟು ಪ್ರಧಾನಿಯಂತೆ ವರ್ತಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಕಳೆದ ತಿಂಗಳು ವೀರಶೈವ ಮತ್ತು ಲಿಂಗಾಯತ ಹಿಂದೂ ಧರ್ಮದ ಅಂಗ ಎಂದು ಪೇಜಾವರ ಶ್ರೀಗಳು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲ್, ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು.

    ಈ ವಿಚಾರ ಸಂಬಂಧ ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ್ದ ಪೇಜಾವರ ಸ್ವಾಮೀಜಿ, ಎಂ.ಬಿ.ಪಾಟೀಲ್ ಅವರು ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿರುವ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶಭರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದ್ದರು.

    ಬಸವಣ್ಣನವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರಿಗೆ ಧೈರ್ಯವಿದ್ದರೆ ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ. ಇಂತಹ ಭಿನ್ನಾಪ್ರಾಯಗಳಿಗೆ ಸಂವಾದ ನಡೆಸುವುದು ಸೂಕ್ತ ಎಂದು ತಿಳಿಸಿದ್ದರು.

  • ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    – ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ

    ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶ ಬರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದರು.

    ಬಸವಣ್ಣನವರ ಬಗ್ಗೆ ನನಗೆ ಬಹಳ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರು ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

  • ಸಿದ್ದರಾಮಯ್ಯ ಏನ್ ಲಿಂಗಾಯತರಾ: ಶ್ಯಾಮನೂರು ಟಾಂಗ್

    ಸಿದ್ದರಾಮಯ್ಯ ಏನ್ ಲಿಂಗಾಯತರಾ: ಶ್ಯಾಮನೂರು ಟಾಂಗ್

    ತುಮಕೂರು: ಲಿಂಗಾಯತ ಧರ್ಮದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದಕ್ಕೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಟಾಂಗ್ ನೀಡಿದ್ದಾರೆ.

    ಗುಬ್ಬಿ ತಾಲೂಕಿನ ಹೇರೂರಿನಲ್ಲಿ ವೀರಶೈವ ಮಹಾಸಭಾದ ತಾಲೂಕಾ ಘಟಕದ ಉದ್ಘಾಟನೆ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮದಲ್ಲಿ ಶಿವಶಂಕರಪ್ಪ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತ, ಲಿಂಗಾಯತರು ಹಿಂದು ಧರ್ಮದ ಒಳಗೂ ಇಲ್ಲ ಹೊರಗೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಏನು ಲಿಂಗಾಯತರಾ? ಅವರ ಅಭಿಪ್ರಾಯ ತೆಗೆದುಕೊಂಡು ನಾವು ಏನು ಮಾಡೋದಿದೆ ಎಂದು ಕಿಡಿಕಾರಿದರು.

    ಸಿದ್ದರಾಮಯ್ಯ ಅವರೇ ಧರ್ಮ ಒಡೆಯಲು ಪ್ರಯತ್ನ ಮಾಡಿದ್ದರು ಆಗಲಿಲ್ಲ. ಅದಕ್ಕೆ ಈಗ ಸುಮ್ಮನ್ನಿದ್ದಾರೆ. ಹೊಸ ಹೊಸ ಹೇಳಿಕೆ ಹುಟ್ಟುಹಾಕುತ್ತಾರೆ. ಅವರ ಬಗ್ಗೆ ಮತ್ತೆ ಮಾತನಾಡಬೇಡಿ ಎಂದು ತಿರುಗೇಟು ನೀಡಿದರು.

    ವೀರಶೈವರು, ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳು. ನಾವೆಲ್ಲಾ ಒಂದೇ ಎನ್ನುವ ಭಾವನೆಯಿಂದ ಬದುಕುತ್ತಿದ್ದೇವೆ. ಅದನ್ನೇ ನಾವು ಫಾಲೋ ಮಾಡಿಕೊಂಡು ಬಂದಿದ್ದೇವೆ. ನಮ್ಮನ್ನು ಬೇರೆ ಮಾಡಲು ಪ್ರಯತ್ನ ಮಾಡಬೇಡಿ ಎಂದು ಹೇಳಿದರು.

  • ಹೋರಾಟ ಮಾಡೋಕೆ ಅವರು ಉಳಿಯಬೇಕಲ್ಲ: ಮಾತೆ ಮಹಾದೇವಿ ಬಗ್ಗೆ ಸಂಗನಬಸವ ಸ್ವಾಮೀಜಿ ವ್ಯಂಗ್ಯ

    ಹೋರಾಟ ಮಾಡೋಕೆ ಅವರು ಉಳಿಯಬೇಕಲ್ಲ: ಮಾತೆ ಮಹಾದೇವಿ ಬಗ್ಗೆ ಸಂಗನಬಸವ ಸ್ವಾಮೀಜಿ ವ್ಯಂಗ್ಯ

    ಬಾಗಲಕೋಟೆ: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮಾಡಲು ಅವರು ಉಳಿಯಬೇಕಲ್ಲ. ಇನ್ನೇನು ಕೆಲ ದಿವಸದಲ್ಲಿ ಲಿಂಗೈಕ್ಯರಾಗುತ್ತಾರೆ ಎಂದು ಮಾತೆ ಮಹಾದೇವಿ ಅವರ ಕುರಿತು ಸಂಗನಬಸವ ಸ್ವಾಮೀಜಿ ವ್ಯಂಗ್ಯವಾಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

    ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಕಳೆದ ಒಂದು ತಿಂಗಳಿಂದ ಕಿಡ್ನಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಹುನಗುಂದ ತಾಲೂಕಿನ ಕೂಡಲಸಂಗಮದ ಶರಣಮೇಳದಲ್ಲಿ ಹಾಜರಾಗಿದ್ದರು. ಈ ವೇಳೆ ವೀರಶೈವರು ಜಾತಿ ವಿಷಬೀಜ ಬಿತ್ತುತ್ತಿದ್ದಾರೆ ನಾವಲ್ಲ. ಪಂಚಪೀಠಾಧೀಶ್ವರರು ಲಿಂಗಾಯತ ಜಂಗಮರನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಹೋರಾಟ ನಡೆಸಿದ್ದರು. ಇವರಿಗೆಲ್ಲ ನಾಚಿಕೆಯಾಗಬೇಕೆಂದು ಮಾತೆ ಮಹಾದೇವಿ ವಾಗ್ದಾಳಿ ನಡೆಸಿದ್ದರು.

    ಈ ಕುರಿತು ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಶಿವಯೋಗಮಂದಿರ ಸಂಸ್ಥೆ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಮಾತೆ ಮಹಾದೇವಿ ಕುರಿತು ವ್ಯಂಗ್ಯವಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜನವರಿ 13ರಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಂದುವರಿಸುವುದಾಗಿ ಮಾತೆ ಮಹಾದೇವಿ ಹೇಳಿದ್ದಾರೆ. ಆದರೆ ಹೋರಾಟ ಮಾಡಲು ಅವರು ಉಳಿಯಬೇಕಲ್ಲ. ಅನಾರೊಗ್ಯದಿಂದ ಬಳಲುತ್ತಿರುವ ಮಾತೆ ಮಹಾದೇವಿ ಕೆಲ ದಿನಗಳಲ್ಲಿ ಲಿಂಗೈಕ್ಯರಾಗುತ್ತಾರೆ. ಇನ್ನು ಅವರೇನು ಹೋರಾಟ ಮಾಡ್ತಾರೆ ಅಂತ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಚಿವ ಶಾಮನೂರು ವಿರುದ್ಧ ಎಂ.ಬಿ ಪಾಟೀಲ್ ಕಿಡಿ

    ಮಾಜಿ ಸಚಿವ ಶಾಮನೂರು ವಿರುದ್ಧ ಎಂ.ಬಿ ಪಾಟೀಲ್ ಕಿಡಿ

    ಹುಬ್ಬಳ್ಳಿ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನನ್ನ ತಂದೆಗೆ ಸಮಾನ. ನಾನು ಯಾರಿಗೂ ಹೆದರುವ ಮಾತಿಲ್ಲ. ನನ್ನ ಮೈಯಲ್ಲಿ ಹರಿಯುವುದು ನನ್ನ ತಂದೆಯ ರಕ್ತ. ನನಗೆ ಯಾರದ್ದು ಅಂಜಿಕೆ ಇಲ್ಲ. ಈ ವಿವಾದವನ್ನು ಇಲ್ಲಿಗೆ ನಿಲ್ಲಿಸಿದ್ರೆ ಉತ್ತಮ. ನನಗೆ ಎಲ್ಲವೂ ಗೊತ್ತಿದೆ. ಅವರ ಬಗ್ಗೆ ಎಲ್ಲವನ್ನೂ ಮಾತನಾಡಬೇಕಾದಿತು. ಇಲ್ಲವಾದರೆ ನಾನು ಮುಂದುವರಿಯುವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಸಿದ್ದಾರೆ.

    ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮ ನಮ್ಮ ಅಸ್ಮಿತೆ. ಲಿಂಗಾಯತ ಧರ್ಮ ಒಂದು ಮೇಲು ಕೀಳು ಎಂದು ವಿಭಿನ್ನವಾಗಿದೆ. ಲಿಂಗಾಯತ ಧರ್ಮದ ಮೇಲೆ ನನ್ನ ಅಧಿಕಾರದ ಪ್ರಭಾವ ಬೀರುವುದಿಲ್ಲ ಹೇಳಿದರು.

    ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡುವವರು ಇದ್ದಾರೆ. ಅವರು ಹೋರಾಟವನ್ನ ಮುಂದುವರಿಸುತ್ತಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರಿಗೆ ವೀರಶೈವ ರತ್ನ ಪ್ರಶಸ್ತಿ ಕೊಟ್ಟಿದ್ದಾರೆ. ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆ. ಶಿವಶಂಕರಪ್ಪನವರು ನಮ್ಮ ತಂದೆಯ ಸಮನಾದವರು. ಅವರು ಸ್ವಾರ್ಥಿಗಳು, ಕೀಳು ಮಟ್ಟದ ಹೇಳಿಕೆ ಕೊಡುತ್ತಿದ್ದಾರೆ. ಅವರಿಗೆ ತಮ್ಮ ಕುಟುಂಬದ ಏಳಿಗೆ ಬಗ್ಗೆ ಯೋಚನೆ ಮಾಡುತ್ತಾರೆ. ಮತ್ತೊಬ್ಬರ ಬಗ್ಗೆ ಅಸಹ್ಯವಾಗಿ ಮಾತನಾಡುತ್ತಾರೆ. ಅವರು ಸ್ವಾರ್ಥ ಜೀವನ ನಡೆಸಿದವರು. ಅವರು ಇಲ್ಲಿಯವರೆಗೆ ಯಾರಿಗೆ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲು ಹಾಕಿದರು.

    ಲಂಚದ ಹಣದಿಂದ ಲಿಂಗಾಯತ ಸಮಾವೇಶ ನಡೆಸಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬೀದರ್ ಮತ್ತು ಬೆಳಗಾವಿಯಲ್ಲಿ ಲಿಂಗಾಯತ ಹೋರಾಟ ಪ್ರಾರಂಭವಾದಾಗ ನಾನು ಇರಲೇ ಇಲ್ಲ. ಶಿವಶಂಕರಪ್ಪ ಮೊದಲು ಏನಾಗಿದ್ದರು ಎಂಬುದು ಅರ್ಥ ಮಾಡಿಕೊಳ್ಳಬೇಕು. ಮೊದಲು ಕಿರಾಣಿ ಅಂಗಡಿ ಮತ್ತು ದಲ್ಲಾಳಿ ಮಾಡಿದವರು. ಬೇರೊಬ್ಬರ ಬಿ ಫಾರ್ಮ್ ಹರಿದು ಚುನಾವಣೆ ಗೆದ್ದವರಾಗಿದ್ದಾರೆ. ಮತ್ತೊಬ್ಬರನ್ನ ತುಳಿದು ಬಾಪೂಜಿ ಶಿಕ್ಷಣ ಸಂಸ್ಥೆ ಕಟ್ಟಿದ್ದಾರೆ. ಇವರು ಬೇರೆಯವರು ಸೋತ ಬಗ್ಗೆ ಮಾತನಾಡುತ್ತಾರೆ. ಅವರ ಮಗ ಸೋತಾಗ ಇವರ ವೀರಶೈವ ಹೋರಾಟ ಎಲ್ಲಿ ಹೋಗಿತ್ತು. ಅವರು ಸ್ಪರ್ಧೆ ಮಾಡುವ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದೆ. ಈ ಬಾರಿ ಮುಸ್ಲಿಂ ಸಮುದಾಯದ ಅತಿ ಹೆಚ್ಚು ಮತ ಕಾಂಗ್ರೆಸ್‍ಗೆ ಬಂದಿರುವುದರಿಂದ ಗೆದ್ದಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡಬಾರದು. ಇವರ ಜನ್ಮ ದಾಖಲೆಗಳನ್ನ ತೆಗೆದು ನೋಡಿದ್ರೆ ಹಿಂದೂ ಲಿಂಗಾಯತ ಅಂತಾ ಇದೆ. ನೀವು ಮಾತಾನಾಡಿದ್ರೆ ಪರವಾಗಿಲ್ಲ, ನಾನು ಮಾತಾನಾಡಿದರೆ ನಿಮ್ಮ ಮರ್ಯಾದೆ ಹೋಗುತ್ತದೆ ಅಂತ ವಾಗ್ದಾಳಿ ನಡೆಸಿದ್ರು.

    ಲಿಂಗಾಯತ ಧರ್ಮದ ಬಗ್ಗೆ ಹೋರಾಟದ ಹಾದಿ ಅಲ್ಲ. ನಮ್ಮ ಮುಂದೆ ಇರುವುದು ಕಾನೂನು ಹೋರಾಟ. ಎಲ್ಲಾ ನಿರ್ಣಯಗಳನ್ನ ನಮ್ಮ ಲಿಂಗಾಯತ ಜಾಗತಿಕ ಸಮಾವೇಶ ತೆಗೆದುಕೊಳ್ಳುತ್ತದೆ. ಕೆಲವೊಂದು ಶಕ್ತಿಗಳು ಇದನ್ನ ವಿರೋಧಿಸುತ್ತವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ನಮಗೆ ಬೆಂಬಲ ನೀಡುತ್ತದೆ. ಪ್ರಧಾನಮಂತ್ರಿಗಳು ಈ ಘಟಬಂಧನ್ ಮುರಿದು ಬೀಳಬೇಕು ಎಂದು ಕಾಯ್ತಾ ಇದ್ದಾರೆ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv