Tag: ಲೀಲಾವತಿ

  • ನಟಿ ಲೀಲಾವತಿ 1ನೇ ವರ್ಷದ ಪುಣ್ಯಸ್ಮರಣೆ

    ನಟಿ ಲೀಲಾವತಿ 1ನೇ ವರ್ಷದ ಪುಣ್ಯಸ್ಮರಣೆ

    ಹಿರಿಯ ನಟಿ ಲೀಲಾವತಿ (Leelavathi) ಅವರು ನಿಧನರಾಗಿ ಇಂದಿಗೆ (ಡಿ.8) ಒಂದು ವರ್ಷವಾಗಿದೆ. ಈ ಹಿನ್ನೆಲೆ ಪುತ್ರ ವಿನೋದ್ ರಾಜ್ ಅವರು ಲೀಲಾವತಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರಿಸಿದ್ದಾರೆ. ಇದನ್ನೂ ಓದಿ:ಎಲಿಮಿನೇಷನ್‌ನಲ್ಲಿ ಟ್ವಿಸ್ಟ್- ಚುಚ್ಚು ಮಾತು ಕೇಳಿ ಕಣ್ಣೀರಿಟ್ಟ ಚೈತ್ರಾ

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿನ ನಿವಾಸದಲ್ಲಿ ಪೂಜಾ ವಿಧಾನ ನೆರವೇರಿಸಿದ್ದಾರೆ. ನಟಿಯ ಇಷ್ಟವಾದ ತಿಂಡಿಗಳನ್ನು ಫೋಟೋ ಮುಂದೆ ಇಟ್ಟು ಪೂಜೆ ಮಾಡಿದ್ದಾರೆ ಪುತ್ರ ವಿನೋದ್ ರಾಜ್. ಲೀಲಾವತಿ ಸಮಾಧಿ ಬಳಿ ಅಭಿಮಾನಿಗಳು ಆಗಮಿಸಿ ದರ್ಶನ ಪಡೆದರು.

    ಇನ್ನೂ ಡಿ.5ರಂದು ಅಮ್ಮ ಲೀಲಾವತಿ ಅವರ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ನಟಿಯ ಸ್ಮಾರಕವನ್ನು ಕೆ.ಎಚ್ ಮುನಿಯಪ್ಪ ಉದ್ಘಾಟನೆ ಮಾಡಿದ್ದರು.

  • ಅಮ್ಮ ಲೀಲಾವತಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್‌ ರಾಜ್‌

    ಅಮ್ಮ ಲೀಲಾವತಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್‌ ರಾಜ್‌

    ಹಿರಿಯ ನಟಿ ಡಾ.ಲೀಲಾವತಿ (Leelavathi) ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ (K.H Muniyappa) ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ. ಇದನ್ನೂ ಓದಿ:ಪುಷ್ಪ 2 ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತ; ಓರ್ವ ಮಹಿಳೆ ಸಾವು

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ (Vinod raj) ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.

    ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.

  • Wayanad Landslide| ಪಾಪುವನ್ನು ಹಿಡಿಯುವಷ್ಟರಲ್ಲಿ ಗೋಡೆ ಕುಸಿದು ಬಿತ್ತು: ಕಣ್ಣೀರಿಟ್ಟ ತಾಯಿ

    Wayanad Landslide| ಪಾಪುವನ್ನು ಹಿಡಿಯುವಷ್ಟರಲ್ಲಿ ಗೋಡೆ ಕುಸಿದು ಬಿತ್ತು: ಕಣ್ಣೀರಿಟ್ಟ ತಾಯಿ

    ಮಂಡ್ಯ: ಭೀಕರ ಜಲಪ್ರಳಯಕ್ಕೆ 143 ಮಂದಿ ಬಲಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬವೊಂದು ಸಿಲುಕಿದೆ. ಈ ಕುಟುಂಬದ ಪೈಕಿ ಅಜ್ಜಿ ಮೊಮ್ಮಗ ಸಾವನ್ನಪ್ಪಿದ್ರೆ, ಇನ್ನುಳಿದ ಮೂವರು ಗಾಯಾಳುಗಳಾಗಿ ಪತ್ತೆಯಾಗಿದ್ದಾರೆ. ಭೂಕುಸಿತದ ಭೀಕರತೆ (Wayanad Landslide) ಕುರಿತು ಕುಟುಂಬಸ್ಥರ ನೆನೆದು ಮಗಳು ಮಂಜುಳಾ ಕಣ್ಣೀರಿಟ್ಟಿದ್ದಾರೆ. ತುಂಬಾ ಮಳೆ ಬರುತ್ತಿದೆ ನಾಳೆ ಬರುತ್ತೇವೆ ಎಂದವರು ಬರಲೇ ಗಳಗಳನೆ ಅತ್ತಿದ್ದಾರೆ.

    ಪುತ್ರಿ ಮಂಜುಳಾ (Manjula) ಮಾತನಾಡಿ, ಮಳೆ ಜಾಸ್ತಿ ಆಗ್ತಿದೆ ಅಂತ ಟಿವಿಯಲ್ಲಿ ತೋರಿಸುತ್ತಿದ್ದಾರೆ ಬಂದು ಬಿಡಿ ಅಂದೆ. ಇಲ್ಲಿ ಅಷ್ಟು ಮಳೆ ಇಲ್ಲ ಆದರೆ ನಾಳೆ ಬರುತ್ತೇವೆ. ಬ್ಯಾಗ್ ಪ್ಯಾಕ್ ಮಾಡಿಕೊಳ್ಳುತ್ತೀವೆ ಎಂದರು. ಬೆಳಗ್ಗೆ ಆಗುವ ಮುನ್ನವೇ ನೀರಲ್ಲಿ ಕೊಚ್ಚಿ ಹೋದರು ಎಂದು ಕಣ್ಣೀರಿಟ್ಟಿದ್ದಾರೆ.

    ನಾವು ಹೊಸದಾಗಿ ಮನೆ ಕಟ್ಟಿದ್ದೇವೆ. ಮುಂದಿನ ತಿಂಗಳು ಗೃಹಪ್ರವೇಶ ಇತ್ತು. ಅಷ್ಟರಲ್ಲಿ ನನ್ನ ಅಮ್ಮನಿಗೆ (ಲೀಲಾವತಿ) ಬಂಡೆ ಹೊಡೆದು ಕೊಚ್ಚಿ ಹೋಗಿದ್ದಾರೆ. ಪಾಪು ನಿಹಾಲ್‌ನ ಹಿಡಿದುಕೊಳ್ಳೋಣ ಎಂದು ಅಂದುಕೊಳ್ಳುವಷ್ಟರಲ್ಲಿ ಅವನ ಮೇಲೆ ಗೋಡೆ ಬಿದ್ದಿದೆ. ನನ್ನ ತಂದೆ ಪಾಪುಗಾಗಿ ಹುಡುಕಿದ್ದಾರೆ. ಎಲ್ಲೂ ಸಿಕ್ತಿಲ್ಲ. ನನ್ನ ಅನಿಲ್ ಹೇಗೋ ಬಚಾವ್ ಆಗಿದ್ದಾನೆ. ಅವನಿಗೆ ಕಣ್ಣು, ಮೂಗು, ಶ್ವಾಸಕೋಶಕ್ಕೆ ಮಣ್ಣು ತುಂಬಿದೆ. ಬೆನ್ನು ಮುಳೆ ತುಂಡಾಗಿದೆ ಎಂದು ಮಂಜುಳಾ ಕಣ್ಣೀರಿಟ್ಟಿದ್ದಾರೆ.

    ಅಮ್ಮನ ಬಳಿ ಕಡೆಯದಾಗಿ ಮಾತನಾಡಿದಾಗ, ಬೇಗ ಬನ್ನಿ ಅಂದೆ ನಾಳೆ ಬರುತ್ತೀವಿ ಅಂದ್ರು. ನೀವು ಬರಲಿಲ್ಲ ಅಂದರೆ ಸಾಯಿರಿ ಅಲ್ಲೇ. ಮಗುನಾದರೂ ಕಳುಹಿಸಿ ಅಂದೆ. ಅವರು ಸಾಯುತ್ತಾರೆ ಅಂತ ಗೊತ್ತಿರಲಿಲ್ಲ. ಒಂದೇ ಒಂದು ಸಾರಿ ಅವರನ್ನು ನೋಡಬೇಕು. ಪಾಪುವಿಗಾಗಿ ಸೈಕಲ್, ಬುಕ್ಸ್ ಎಲ್ಲಾ ತೆಗೆದು ಇಟ್ಟೆದ್ದೆ. ಈಗ ನೋಡಿದ್ರೆ ಹೀಗೆ ಆಗಿದೆ. ದೇವರಿಗೆ ಕರುಣೆನೇ ಇಲ್ಲ. ಹೇಗಾದರೂ ಮಾಡಿ ಮೃತದೇಹ ಕರ್ನಾಟಕಕ್ಕೆ ತನ್ನಿ, ಕಡೆ ಬಾರಿ ಮುಖ ನೋಡಿಕೊಳ್ತೀವಿ ಎಂದು ಮಂಜುಳ ಮನವಿ ಮಾಡಿದ್ದಾರೆ.

    ಅಂದಹಾಗೆ, ಕತ್ತರಘಟ್ಟ ಗ್ರಾಮದ ದೇವರಾಜು, ಲೀಲಾವತಿ, ಅನೀಲ್, ಝಾನ್ಸಿ ಹಾಗೂ ಎರಡುವರೆ ವರ್ಷದ ನಿಹಾಲ್ ಅಲ್ಲಿ ನೆನಸಿದ್ದರು. ಗುಡ್ಡ ಕುಸಿತವಾದ ವೇಳೆ, ಇವರು ವಾಸವಿದ್ದ ಮನೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ವೇಳೆ 55 ವರ್ಷದ ಲೀಲಾವತಿ ಗುಡ್ಡದ ಮಣ್ಣಿನ ಕೆಳಭಾಗದಲ್ಲಿ ಸೇರಿಕೊಂಡು ಸಾವನ್ನಪ್ಪಿದ್ದಾರೆ. ಇನ್ನೂ ಎರಡುವರೆ ವರ್ಷದ ನಿಹಾಲ್ ಮಣ್ಣು ಹಾಗೂ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ. ಇದಲ್ಲದೇ ದೇವರಾಜು, ಅನೀಲ್, ಝಾನ್ಸಿ ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ರು. ಬಳಿಕ ಗಾಯಳುಗಳ ಸ್ಥಿತಿಯಲ್ಲಿ ಸಿಕ್ಕಿದ್ದಾರೆ. ಇದೀಗ ಈ ಮೂವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ವಿನೋದ್ ರಾಜ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

    ವಿನೋದ್ ರಾಜ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

    ನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ಗೆ (Vinod Raj) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

    11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್‌ಗೆ (Heart Operation) ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಈ ಪರಿಣಾಮ, ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ.

    ಅಂದಹಾಗೆ, ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್- 55 ಲಕ್ಷ ಮೊತ್ತದಲ್ಲಿ ಲೀಲಾವತಿ ಸ್ಮಾರಕ

    ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್- 55 ಲಕ್ಷ ಮೊತ್ತದಲ್ಲಿ ಲೀಲಾವತಿ ಸ್ಮಾರಕ

    ಹಿರಿಯ ನಟಿ ಲೀಲಾವತಿ (Leelavathi) ಕಳೆದ ವರ್ಷ ಡಿ.8ರಂದು ವಿಧಿವಶರಾದರು. ಈ ಬೆನ್ನಲ್ಲೇ ವಿನೋದ್ ರಾಜ್ (Vinod Raj) ಕುಟುಂಬ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ. ಇಂದು (ಜ.14) ಲೀಲಾವತಿ ಸ್ಮಾರಕಕ್ಕೆ ವಿನೋದ್ ರಾಜ್ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

    ನೆಲಮಂಗಲದ ತೋಟ ಮನೆಯ ಬಳಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ವಿನೋದ್ ರಾಜ್ ಚಾಲನೆ ನೀಡಿದ್ದಾರೆ. ಪೂಜೆಯ ಕಾರ್ಯದಲ್ಲಿ ವಿನೋದ್ ರಾಜ್, ಪತ್ನಿ ಅನು, ಪುತ್ರ ಯುವರಾಜ್ ಭಾಗಿಯಾಗಿದ್ದಾರೆ. ಸ್ಮಾರಕ ಚಾಲನೆಯ ಬಳಿಕ ವಿನೋದ್ ರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಲೀಲಾವತಿ ಅವರ ಸ್ಮಾರಕ 55 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 120 ದಿನಗಳಲ್ಲಿ ಸ್ಮಾರಕ ಕೆಲಸ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:‘ಶನಿ’ ಕಂಟಕ‌ ವರ್ತೂರು ಸಂತೋಷ್ ತಲೆಗೆ ಕಟ್ಟಿದ ಕಾರ್ತಿಕ್‌- ಚಳಿ ಬಿಡಿಸಿದ ಸುದೀಪ್

    ತಾಯಿ ಅವರ ಸ್ಮಾರಕವನ್ನು ನನ್ನ ಆಸೆಯಂತೆ ನಿರ್ಮಿಸಲು ನಿರ್ಧರಿಸಿದ್ದೇನೆ. ಸುಮಾರು 55 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡ್ತಿದ್ದೇವೆ ಎಂದು ವಿನೋದ್ ಮಾತನಾಡಿದ್ದಾರೆ. ಅವರ ಮೊದಲ ಸಿನಿಮಾದಿಂದ ಕೊನೆಯ ಸಿನಿಮಾದ ವರೆಗೆ ಗ್ಯಾಲರಿಯನ್ನ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದೇವೆ. ಅಮ್ಮನವರ ಸಮಾಧಿ ಕೇವಲ ಸಮಾಧಿ ಅಲ್ಲ ಅದು ಒಂದು ಆಧ್ಯಾತ್ಮಿಕ ಕ್ಷೇತ್ರವನ್ನಾಗಿ ಮಾಡುತ್ತೇವೆ. ತಾಯಿಯ ಸ್ಮಾರಕಕ್ಕಾಗಿ ಸರ್ಕಾರದಿಂದ ಯಾವುದೇ ಅಪೇಕ್ಷೆ, ಹಣ ಪಡೆಯದೆ ನಾವೇ ಸಮಾಧಿ ಕಟ್ಟಲು ತೀರ್ಮಾನ ಮಾಡಿದ್ದೇವೆ ವಿನೋದ್ ರಾಜ್ ಮಾತನಾಡಿದ್ದಾರೆ.

    ಈ ವೇಳೆ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಮಾತನಾಡಿ, ನಟಿ ಲೀಲಾವತಿ ಅವರು ಮಾಡಿರುವ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಲೀಲಾವತಿ ಅವರು ಎಂದೆಂದಿಗೂ ತುಂಬಿದ ಕೊಡ. ಯಾವಾಗಲೂ ಸಿನಿಮಾಗಳಲ್ಲಿ ನೀತಿ ಪಾಠ ಇರಬೇಕು. ಇವತ್ತಿನ ದಿನಗಳ ಸಿನಿಮಾಗಳಲ್ಲಿ ಆ ಕೊರತೆ ಎದ್ದು ಕಾಣುತ್ತಿದೆ ಎಂದು ಮಾತನಾಡಿದ್ದಾರೆ. ನಾವು ಎಂದಿಗೂ ವಿನೋದ್ ರಾಜ್ ಜೊತೆ ಇರುತ್ತೇವೆ ಅವರು ಸ್ಮಾರಕ ಕೆಲಸ ಬೇಗ ಮುಗಿಸಲಿ ಎಂದು ಬೆಂಬಲ ಸೂಚಿಸಿದ್ದರು. ಬಳಿಕ ವಿನೋದ್ ರಾಜ್ ಅವರು ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ದುಡ್ಡಿನ ಸಹಾಯ ಪಡೆದಿಲ್ಲ. ಅವರ ಸ್ವಂತ ದುಡ್ಡಲ್ಲಿ ಸ್ಮಾರಕ ನಿರ್ಮಾಣ ಮಾಡ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

  • ನಟಿ ಲೀಲಾವತಿ ಅವರ ಒಂದು ತಿಂಗಳ ತಿಥಿ ಕಾರ್ಯ

    ನಟಿ ಲೀಲಾವತಿ ಅವರ ಒಂದು ತಿಂಗಳ ತಿಥಿ ಕಾರ್ಯ

    ಕಳೆದ ತಿಂಗಳು ಡಿಸೆಂಬರ್ 9 ರಂದು ಅಗಲಿದ ಕನ್ನಡದ ಹೆಸರಾಂತ ಹಿರಿಯ ನಟಿ ಲೀಲಾವತಿ (Leelavati) ಅವರ ಒಂದು ತಿಂಗಳ ತಿಥಿ ಕಾರ್ಯವನ್ನು ಇಂದು ಅವರ ಸೋಲದೇವನಹಳ್ಳಿ ಮನೆಯಲ್ಲಿ ನೆರವೇರಿಸಲಾಯಿತು. ನಟಿ ಇಷ್ಟದ ಅಡುಗೆ ಮಾಡಿ, ಪೂಜೆ ಸಲ್ಲಿಸುವುದರ ಮೂಲಕ ಒಂದು ತಿಂಗಳ ಕಾರ್ಯವನ್ನು ಪುತ್ರ ವಿನೋದ್ ರಾಜ್  (Vinod Raj) ಮಾಡಿದ್ದಾರೆ.

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ (Soladevanahalli) ತೋಟದ ಮನೆಯಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಅವರಿಗೆ ಇಷ್ಟವಾದ ಸೀರೆ, ಬಳೆ, ಇನ್ನಿತರ ವಸ್ತುಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಲೀಲಾವತಿ ಅವರಿಗೆ ಹಾಡುಗಳೆಂದರೆ ಇಷ್ಟ. ಹಾಗಾಗಿ ಪುತ್ರ ವಿನೋದ್ ರಾಜ್ ಹಾಡಿನ ಮೂಲಕ ತಾಯಿಯನ್ನು ನೆನೆದಿದ್ದಾರೆ.

     

    ಲೀಲಾವತಿ ಅವರ ಫೋಟೋದ ಮುಂದೆ ಅವರ ಪ್ರೀತಿಯ ಶ್ವಾನ ಬ್ಲಾಕಿ ಕೂಡ ಕೂತು ನಮನ ಸಲ್ಲಿಸಿದೆ. ವಿನೋದ್ ರಾಜ್ ಹಾಡುತ್ತಾ ಭಾವುಕರಾದಾಗ, ಬ್ಲಾಕಿ ಕೂಡ ರೋಧಿಸಿದೆ. ಈ ಕಾರ್ಯದಲ್ಲಿ ಊರಿನ ಜನತೆ ಹಾಗೂ ಲೀಲಾವತಿ ಅವರ ಆಪ್ತರು ಭಾಗಿಯಾಗಿದ್ದರು.

  • ಲೀಲಾವತಿ ಜನ್ಮದಿನ- ಸಮಾಧಿ ಬಳಿ ಕೇಕ್ ಕತ್ತರಿಸಿದ ವಿನೋದ್ ರಾಜ್

    ಲೀಲಾವತಿ ಜನ್ಮದಿನ- ಸಮಾಧಿ ಬಳಿ ಕೇಕ್ ಕತ್ತರಿಸಿದ ವಿನೋದ್ ರಾಜ್

    ಹಿರಿಯ ನಟಿ ಲೀಲಾವತಿ (Leelavathi) ಅವರ ಜನ್ಮದಿನಾಚರಣೆ ಪ್ರಯುಕ್ತ ಇಂದು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ತೋಟದ ಅಮ್ಮನ ಸಮಾಧಿ ಬಳಿ ವಿನೋದ್ ರಾಜ್ (Vinod Raj) ಜನ್ಮದಿನ ಆಚರಣೆ ಮಾಡಿದ್ದಾರೆ. ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ನಟ ವಿನೋದ್ ಕೇಕ್ ಕತ್ತರಿಸಿದ್ದಾರೆ.

    ಕನ್ನಡ ಚಿತ್ರರಂಗ ತಾರೆ ಲೀಲಾವತಿ ಸಾವಿನ ನೋವಿನ ಗಾಯ ಹಾಗೆ ಇದೆ. ಇದರ ನಡುವೆ ಅಮ್ಮನ 87 ವರ್ಷದ  ಜನ್ಮದಿನವನ್ನ ವಿನೋದ್ ರಾಜ್ ಆಚರಿಸಿದ್ದಾರೆ. ಇದನ್ನೂ ಓದಿ:ತಮಿಳು ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ನಿಧನ

    ತಾಯಿಯ ನೆನಪು ಮಾಡಿಕೊಂಡು ಕಣ್ಣೀರಿಟ್ಟು ಹಾಡು ಹಾಡಿ, ವಿನೋದ್ ರಾಜ್ ಭಾವುಕರಾಗಿದ್ದಾರೆ. ಅಮ್ಮನಿಲ್ಲದ ನೆನಪಿನೊಂದಿಗೆ ಸಮಾಧಿ ಬಳಿ ಜನ್ಮದಿನ ಆಚರಣೆ ಮಾಡಿದ್ದು, ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ್ದಾರೆ.

  • ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಲೀಲಾವತಿ ಪಿಂಡಪ್ರದಾನ

    ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಲೀಲಾವತಿ ಪಿಂಡಪ್ರದಾನ

    ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನ ಹಿನ್ನೆಲೆ ಇಂದು ಪುತ್ರ ವಿನೋದ್‌ರಾಜ್ (Vinod Raj) ಅವರು ಕಾವೇರಿ ನದಿಯಲ್ಲಿ‌ ತಾಯಿಗೆ ಪಿಂಡಪ್ರದಾನ ಮಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ (Srirangapatna) ಪಶ್ಚಿಮ ವಾಹಿನಿಯಲ್ಲಿ ವೈದಿಕ ಲಕ್ಷ್ಮೀಶ್ ಶರ್ಮ ಅವರ ನೇತೃತ್ವದಲ್ಲಿ ಲೀಲಾವತಿ ಅವರಿಗೆ ಪಿಂಡಪ್ರದಾನ (Pindapradana) ಮಾಡಲಾಯಿತು.

    ಮೊದಲಿಗೆ ವಿನೋದ್‌ರಾಜ್ ಅವರು ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಬಳಿಕ ಪಿಂಡಪ್ರದಾನದ ಪೂಜಾ ವಿಧಿವಿಧಾನಗಳನ್ನು ನೇರವೇರಿಸಿದರು. ಈ ವೇಳೆ ಕುಟುಂಬಸ್ಥರು ಹಾಗೂ ಲೀಲಾವತಿ ಅವರು ಪ್ರೀತಿಯಿಯಿಂದ ಸಾಕಿದ್ದ ಎರಡು ನಾಯಿಗಳು ಸಹ ಇದ್ದವು. ಎರಡು ನಾಯಿಗಳನ್ನೂ ಈ ಸಂದರ್ಭದಲ್ಲಿ ಕರೆತಂದಿದ್ದರು ವಿನೋದ್ ರಾಜ್.

    ಪಿಂಡಪ್ರದಾನ ಬಳಿಕ ಮಾತನಾಡಿದ ವಿನೋದ್‌ರಾಜ್, ನಮ್ಮ ತಾಯಿ ಅವರಿಗೆ ಹಳ್ಳಿ ಜೀವನ ಅಂದ್ರೆ ಇಷ್ಟ. ಅದಕ್ಕಾಗಿ ನಾವು ತೋಟದ ಮನೆಯಲ್ಲಿ ವಾಸವಿದ್ದವು. ಪ್ರಾಣಿ-ಪಕ್ಷಿಗಳನ್ನು ಕಂಡರೆ ಬಹಳ ಪ್ರೀತಿ ಮಾಡ್ತಾ ಇದ್ದರು. ಮನೆಗೆ ಯಾರು ಬಂದರು ಹಸಿದು ಕಳಿಸುತ್ತಿರಲಿಲ್ಲ, ಎಲ್ಲರಿಗೂ ಊಟ ಹಾಕಿ ಕಳಿಸುತ್ತಾ ಇದ್ರು. ಇಂದು ನಮ್ಮ ತಾಯಿಗೆ ಕಾವೇರಿ ನದಿಯಲ್ಲಿ ಪಿಂಡಪ್ರದಾನ ಮಾಡಿದ್ದೇನೆ, ಪಕ್ಷಿಗಳ ರೂಪದಲ್ಲಿ ಇದನ್ನು ನಮ್ಮ ತಾಯಿಯೇ ತಿಂದಿದ್ದಾರೆ ಎಂದು ಭಾವಿಸಿದ್ದೇನೆ. ಯಾವಾಗಲೂ ನಮ್ಮ ತಾಯಿ ನಮ್ಮೊಟ್ಟಿಗೆ ಇರುತ್ತಾರೆ ಎಂದು ನಂಬಿದ್ದೇನೆ ಎಂದರು.

  • ನಟಿ ಲೀಲಾವತಿ ನೆನಪಲ್ಲಿ ಕಾರ್ಯಕ್ರಮ: ಕಲಾವಿದರ ಸಂಘ ನಿರ್ಧಾರ

    ನಟಿ ಲೀಲಾವತಿ ನೆನಪಲ್ಲಿ ಕಾರ್ಯಕ್ರಮ: ಕಲಾವಿದರ ಸಂಘ ನಿರ್ಧಾರ

    ರ್ನಾಟಕ ಚಲನಚಿತ್ರ ಕಲಾವಿದರ ಸಂಘವು ಹಿರಿಯ ನಟಿ ಲೀಲಾವತಿ (Leelavati) ಅವರ ನೆನಪಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ ಹಿರಿಯ ನಟ, ಕಲಾವಿದರ ಸಂಘದ ಕಾರ್ಯದರ್ಶಿ  ಸುಂದರ್ ರಾಜ್. ಲೀಲಾವತಿ ಅವರ 11ನೇ ದಿನದ ಕಾರ್ಯಕ್ಕೆ ಆಗಮಿಸಿದ ಸುಂದರ್ ರಾಜ್ (Sundar Raj),  ‘ಹಿರಿಯ ನಟಿ ಲೀಲಾವತಿ ನೆನಪು ಅಮರವಾಗಿಸಲು ಕಲಾವಿದರ ಸಂಘ ಕಾರ್ಯಕ್ರಮ ಮಾಡಲು ನಿರ್ಧಾರ ಮಾಡಿದ್ದು, ಕಲ್ಲರಳಿ ಹೂವಾಗಿ ಅನ್ನೊ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಲೀಲಾವತಿ ಅವರು ಇಂತಹ ಕಲ್ಲು ಬಂಡೆಗಳ ಜಾಗದಲ್ಲೂ ಬರೀ ತೋಟ ಮಾತ್ರ ಮಾಡಿದ್ದಲ್ಲ, ಇದೇ ಜಾಗದಲ್ಲಿ ಬಂದು ಮನೆ ಕಟ್ಟಿದ್ದಾರೆ. ಅಷ್ಟೇ ಅಲ್ಲದೆ ಪ್ರತಿಯೊಬ್ಬರನ್ನೂ ಈ ಜಾಗಕ್ಕೆ ಕರ್ಕೊಂಡು ಬಂದು ತೋರಿಸಿದ್ದಾರೆ. ಹೀಗಾಗಿ ಅವರ ನೆನಪನ್ನು ಅಮರವಾಗಿಸಲು ಪ್ಲಾನ್ ಮಾಡ್ತಿದೇವೆ’ ಎಂದಿದ್ದಾರೆ.

    ಇಂದು ಬೆಳಗ್ಗೆಯಿಂದ ಲೀಲಾವತಿ ಅವರ 11ನೇ ದಿನದ ಸ್ಮರಣೆ ಕಾರ್ಯ  ಅವರ ಮನೆಯಲ್ಲಿ ನಡೆಯುತ್ತಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಮಗ ವಿನೋದ್ ರಾಜ್ ಮತ್ತು ಕುಟುಂಬ 11ನೇ ದಿನದ ಕಾರ್ಯವನ್ನು ನೆರವೇರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪೂಜೆ ಕಾರ್ಯಗಳು ಶುರುವಾಗಿದ್ದು, ನಟರಾದ ಸುಂದರ್ ರಾಜ್, ದೊಡ್ಡಣ್ಣ, ಪದ್ಮಾ ವಾಸಂತಿ, ಗಿರೀಜಾ ಲೋಕೇಶ್ ಸೇರಿದಂತೆ ಹಲವಾರು ಕಲಾವಿದರು ಇದರಲ್ಲಿ ಭಾಗಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಟಿ ಗಿರೀಜಾ ಲೋಕೇಶ್, ‘ಶ್ರದ್ಧಾಂಜಲಿ ಅನ್ನೋದು ಭೂಮಿಯಲ್ಲಿ ಇರುವ ಪದ್ಧತಿ ಅಷ್ಟೇ. ಅವರ ಆತ್ಮ ಎಲ್ಲೂ ಹೋಗಿಲ್ಲ ಈ ತೋಟದಲ್ಲಿ ಸುತ್ತುತಿದೆ. ಚಿತ್ರರಂಗದ ಕಲಾವಿದರು ಅಮರರು, ಅವರಿಗೆ ಸಾವಿಲ್ಲ. ಒಂದು ಹೆಣ್ಣು ಹೇಗೆ ಬದುಕಬೇಕು ಅನ್ನೋದು ತೋರಿಸಿದ್ದಾರೆ ಲೀಲಮ್ಮ’ ಎಂದರು.

     

    ‘ಕನ್ನಡ ಚಿತ್ರರಂಗದಲ್ಲಿ ನನಗೆ ಅಕ್ಕ ಇರೋದು ಅಂದ್ರೆ ಲೀಲಾವತಿ. ಅವರ ಜೀವನವನ್ನ ಶ್ರೀಗಂಧಕ್ಕೆ ಹೋಲಿಸೋಕೆ ಇಷ್ಟ ಪಡ್ತೀನಿ. ಯಾಕಂದ್ರೆ ಇಟ್ಟರು ಸುಗಂಧದ ವಾಸನೆ, ಸುಟ್ಟರು ಸುಗಂಧದ ವಾಸನೆ. ವಿನೋದ್ ರಾಜ್ ಗು ಲೀಲಮ್ಮ ಗುಣ ಇದೆ. ಮನೆಗೆ ಬಂದ ಅತಿಥಿಗಳಿಗೆ ಊಟ ಮಾಡಿಸದೇ ಕಳಿಸಲ್ಲ. ಮಗನೇ ನಿನಗೆ ಊಟ ಇಲ್ಲ ಅಂದರೂ‌ ಪರವಾಗಿಲ್ಲ ಬಂದವರಿಗೆ ಊಟ ಕೊಡಿ ಎಂದು ಲೀಲಾವತಿ ಹೇಳುತ್ತಿದ್ದರು. ಅದನ್ನೇ ಮಗನು ಮಾಡುತ್ತಿದ್ದಾನೆ ಎಂದರು ನಟ ದೊಡ್ಡಣ್ಣ.

  • ಹಿರಿಯ ನಟಿ ಲೀಲಾವತಿಯವರ 11ನೇ ದಿನದ ಸ್ಮರಣೆ

    ಹಿರಿಯ ನಟಿ ಲೀಲಾವತಿಯವರ 11ನೇ ದಿನದ ಸ್ಮರಣೆ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಾ ನಂತರ ಮನೆಯಲ್ಲಿ 11ನೇ ದಿನದ ಸ್ಮರಣೆ ಕಾರ್ಯ ನಡೆಯುತ್ತಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ 9Soladevanahalli) ತೋಟದ ಮನೆಯಲ್ಲಿ ಮಗ ವಿನೋದ್ ರಾಜ್ (Vinod Raj) ಮತ್ತು ಕುಟುಂಬ 11ನೇ ದಿನದ ಕಾರ್ಯವನ್ನು ನೆರವೇರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪೂಜೆ ಕಾರ್ಯಗಳು ಶುರುವಾಗಿದ್ದು, ಸಿನಿಮಾ ರಂಗದ ಗಣ್ಯರು ಆಗಮಿಸುವ ಸಾಧ್ಯತೆಯಿದೆ.

    ಚಿತ್ರರಂಗದ ನಂದಾದೀಪ

    ಕನ್ನಡ ಸಿನಿಮಾ ರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಲೀಲಾವತಿ (Leelavati) ಅವರು, ಆನಂತರ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ನಟಿಸಿದವರು. ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. 1949ರಲ್ಲಿ ತೆರೆ ಕಂಡ ಶಂಕರ್ ಸಿಂಗ್ ಅವರ ನಾಗಕನ್ನಿಕ ಇವರ ಮೊದಲ ಚಿತ್ರ. ಇದಕ್ಕೂ ಮೊದಲು ಲೀಲಾವತಿ ಅವರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು.

    ಕಯಾದುವಿನ ಸಖಿ, ಭಕ್ತ ಪ್ರಹ್ಲಾದ ಸೇರಿದಂತೆ ಸಾಕಷ್ಟು ನಾಟಕಗಳಲ್ಲಿ ಇವರು ಅಭಿನಯಿಸಿದ್ದಾರೆ. ಸಿನಿಮಾ ರಂಗಕ್ಕೆ ಬಂದ ನಂತರ, ಭಕ್ತ ಕುಂಬಾರ ಮನೆ ಮೆಚ್ಚಿದ ಸೊಸೆ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿಕ್ಕಚಿಕ್ಕ ಪಾತ್ರಗಳನ್ನೇ ಮಾಡುತ್ತಾ ಬಂದಿದ್ದ ಲೀಲಾವತಿ ಅವರು, ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ಮಾಂಗಲ್ಯ ಯೋಗ. ನಂತರ ಡಾ.ರಾಜ್ ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ರಣಧೀರ ಕಂಠೀರವ ಸಿನಿಮಾದಲ್ಲಿ ನಟಿಸಿದರು.

    ಡಾ.ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಆ ಕಾಲದಲ್ಲಿ ಫೇಮಸ್. ಡಾ.ರಾಜ್ ಕುಮಾರ್ ಅವರ ಸಾಕಷ್ಟು ಸಿನಿಮಾಗಳಿಗೆ ನಾಯಕಿಯಾಗಿ, ತಾಯಿಯಾಗಿ, ಅತ್ತೆಯಾಗಿ ಹಲವಾರು ರೀತಿಯ ಪಾತ್ರಗಳನ್ನು ಇವರು ಮಾಡಿದ್ದಾರೆ. ಜೊತೆಗೆ ಸಾಕಷ್ಟು ತಾರೆಯರ ಜೊತೆ ತೆರೆ ಹಂಚಿಕೊಂಡಿದ್ದಾರೆ.

    ಅಂದಹಾಗೆ ಲೀಲಾವತಿ ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಅವರು. ನಟನೆಯ ಮೇಲಿನ ಆಸಕ್ತಿಯಿಂದಾಗಿ ಚಿಕ್ಕವಯಸ್ಸಿನಲ್ಲೇ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು. ಮೈಸೂರಿನಿಂದ ವೃತ್ತಿ ಆರಂಭಿಸಿ, ಮದ್ರಾಸ್, ಬೆಂಗಳೂರು ಹೀಗೆ ಹಲವು ಕಡೆ ಪ್ರಯಾಣ ಮಾಡಿದ್ದಾರೆ. ಯಶಸ್ವಿ ನಟಿಯಾಗಿ ಬೆಳೆದಿದ್ದಾರೆ.

     

    ಲೀಲಾವತಿ ಅವರು ಸಾಧನೆಗೆ ಹತ್ತು ಹಲವಾರು ಪುರಸ್ಕಾರಗಳೂ ಸಂದಿವೆ. ಕರ್ನಾಟಕ ಸರಕಾರ ಕೊಡಮಾಡುವ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ತುಮಕೂರ ವಿಶ್ವವಿದ್ಯಾಲಯ ಇವರಿಗೆ ಡಾಕ್ಟರೇಟ್  ಪದವಿ ನೀಡಿ ಗೌರವಿಸಿದೆ.