Tag: ಲೆಟರ್

  • ದಿವ್ಯಾಗೆ ಅರವಿಂದ್ ಬರೆದ  ಲೆಟರ್‌ಗಳಲ್ಲೇನಿದೆ ಗೊತ್ತಾ?

    ದಿವ್ಯಾಗೆ ಅರವಿಂದ್ ಬರೆದ ಲೆಟರ್‌ಗಳಲ್ಲೇನಿದೆ ಗೊತ್ತಾ?

    ಬಿಗ್‍ಬಾಸ್ ಬಾಯ್ಸ್ ಹಾಸ್ಟೆಲ್‍ನ ಹುಡುಗರು, ಗರ್ಲ್ ಹಾಸ್ಟೆಲ್ ಹುಡುಗಿಯರಿಗೆ ಪತ್ರಗಳನ್ನು ಬರೆದು ನೀಡಬೇಕು ಹಾಗೂ ಹುಡುಗಿಯರು ಅದನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಟಾಸ್ಕ್ ನೀಡಿದ್ದರು. ಅದರಂತೆ ಬಿಗ್‍ಬಾಸ್ ಮನೆಯ ಎಲ್ಲ ಬಾಯ್ಸ್ ಕದ್ದುಮುಚ್ಚಿ ಹುಡುಗಿಯರಿಗೆಲ್ಲಾ ಲೆಟರ್ ಪಾಸ್ ಮಾಡುತ್ತಿದ್ದಾರೆ. ಆದರೆ ಈ ಎಲ್ಲದರ ಮಧ್ಯೆ ವಿಶೇಷವೆನಪ್ಪಾ ಅಂದರೆ ಅರವಿಂದ್ ದಿವ್ಯಾ ಉರುಡುಗಗೆ ಮಾತ್ರ ತಮ್ಮ ಎಲ್ಲ ಲೆಟರ್‌ಗಳನ್ನು ಬರೆದಿದ್ದಾರೆ.

    ನಿನ್ನೆ ಅರವಿಂದ್ ಲೆಟರ್ ಬರೆದು, ರಂಗೋಲಿ ಹಾಕುತ್ತಿದ್ದ ದಿವ್ಯಾ ಉರುಡುಗಗೆ ನೀಡುತ್ತಾರೆ. ಬಳಿಕ ಅದನ್ನು ಕ್ಯಾಮೆರಾ ಮುಂದೆ ದಿವ್ಯಾ, ಪ್ರೀತಿಯ ಕೆ, ಮೊದಲನೇ ದಿನ ನನ್ನ ನಿನ್ನ ಚಿಕ್ಕ ಇಂಟ್ರೋಡಕ್ಷನ್‍ನಲ್ಲಿ ನೀನು ಏನೋ ಹೇಳಲು ಬಂದು, ಹೇಳದೇ ಹೋದ ರೀತಿ, ಈಗ ನಾವು ಇರುವ ಕ್ಲೋಸ್‍ನೆಸ್ ಗೆ ತುಂಬಾನೇ ವ್ಯತ್ಯಾಸ ಇದೆ. ಈ ಮನೆಯಲ್ಲಿ ನನ್ನ ಮೊದಲನೆಯ ಸಪೋರ್ಟರ್, ಶುಭ ಹಾರೈಸುವ ಒಳ್ಳೆಯ ಗೆಳತಿ ನೀನು ಪ್ರೀತಿ ಇರಲಿ ಅರವಿಂದ್ ಕೆಪಿ ಎಂದು ಮೊದಲನೇ ಲೆಟರ್ ಓದುತ್ತಾರೆ.

    ಬಳಿಕ ಮತ್ತೊಂದು ಲೆಟರ್‌ನಲ್ಲಿ ಪ್ರೀತಿಯ ಕೆ, ಈ ಬಿಗ್‍ಬಾಸ್ ಮನೆಯ ಪಯಣ ನಿನ್ನ ಗೆಳೆತನದಿಂದ ಇನ್ನಷ್ಟು ಮಜಾ ಹಾಗೂ ಸಂತೋಷಕರವಾಗಿದೆ. ನಿನ್ನ ಪ್ರೆಸೆನ್ಸ್ ಇರುವುದರಿಂದ  ಟಾಸ್ಕ್‌ಗಳಲ್ಲಿ, ದೈನಂದಿನ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಸಾಗುತ್ತಿದೆ. ನಿನ್ನ ಎಲ್ಲ ವಿಚಾರಗಳು ನನಗೆ ಇಷ್ಟ, ನೀನು ನಗುವಾಗ ತುಂಬಾನೇ ಇಷ್ಟ. ಪ್ರೀತಿ ಇರಲಿ ಅರವಿಂದ್ ಕೆ.ಪಿ. ಎಂದು ಬರೆದಿದ್ದಾರೆ. ಇದನ್ನು ಓದಿದ ದಿವ್ಯಾ ಸೋ ಕ್ಯೂಟ್ ಎಂದು ಪ್ರತಿಕ್ರಿಯಿಸುತ್ತಾರೆ.

    ಇದಾದ ನಂತರ ಗಾರ್ಡನ್ ಏರಿಯಾ ಕ್ಯಾಮೆರಾ ಬಳಿ ದಿವ್ಯಾ ಅರವಿಂದ್ ಬರೆದ ಇನ್ನೊಂದು ಲೆಟರ್ ಓದುತ್ತಾರೆ. ಪ್ರೀತಿಯ ಕೆ ನನ್ನ ಲೋವೆಸ್ಟ್ ಪಾಯಿಂಟ್‍ನಲ್ಲಿ ನನ್ನೊಂದಿಗೆ ನಿಂತು ನಡೆಸುವ ಸಪೋರ್ಟ್ ತುಂಬಾನೇ ಶ್ರೇಷ್ಠವಾದದ್ದು, ಬೇರೆ ಯಾವ ಸಂದರ್ಭದಲ್ಲಿಯೂ ಅಷ್ಟು ಬೇಜಾರು ಮಾಡಿಕೊಂಡಿಲ್ಲ. ನನ್ನ ಫ್ರೆಂಡ್ಸ್ ನನ್ನ ನಿರ್ಣಯವನ್ನು ತಪ್ಪು ಎಂದು ಭಾವಿಸಿದ್ದರು. ಆಗ ನನಗೆ ನೀನು, ನಿನಗೆ ನಾನು ಸಮಾಧಾನ ಹೇಳಿಕೊಂಡು ಕಳೆದಿರುವ ದಿನಗಳನ್ನು ಮರೆಯಲು ಸಾಧ್ಯವಿಲ್ಲ. ಪ್ರೀತಿ ಇರಲಿ ಅರವಿಂದ್ ಕೆ.ಪಿ ಎಂದು ಓದುತ್ತಾರೆ. ಈ ವೇಳೆ ದಿವ್ಯಾ ಪತ್ರ ಓದುವಾಗ ಮನೆಯ ಇತರ ಸದಸ್ಯರು ಸಹಾಯ ಮಾಡುವ ಮೂಲಕ ಸಾಥ್ ನೀಡಿದ್ದಾರೆ.

    ಮಧ್ಯರಾತ್ರಿ ಲಿವಿಂಗ್ ಏರಿಯಾದಲ್ಲಿ ಕ್ಯಾಮೆರಾ ಮುಂದೆ ಅರವಿಂದ್ ಲೆಟರ್ ಬರೆದುಕೊಡುತ್ತಾರೆ. ಈ ವೇಳೆ ದಿವ್ಯಾ, ಪ್ರೀತಿಯ ಕೆ ನೀನು ನಗುತ್ತೀಯಾ ಹೃದಯದಿಂದ ನನಗೆ ಕೇಳುತ್ತದೆ. ಬಹಳ ದೂರದಿಂದ ನಿನ್ನ ಕಣ್ಣುಗಳು ಹೇಳುತ್ತಿದೆ ಮಾತೊಂದ.. ಬೇಗ ಓದು ಗಾರ್ಡನ್ ಏರಿಯಾಗೆ ವಾರ್ಡನ್ ಬರುವ ಮುನ್ನ. ಪ್ರೀತಿ ಇರಲಿ ಅರವಿಂದ್ ಕೆ ಪಿ ಎಂದು ಹಾಸ್ಯವಾಗಿರುವ ಲೆಟರ್ ಓದಿ ಜೋರಾಗಿ ನಗುತ್ತಾರೆ.

    ಒಟ್ಟಾರೆ ಅರವಿಂದ್ ದಿವ್ಯಾಗೆ ಬರೆದಿರುವ ಇಂಟ್ರೆಸ್ಟಿಂಗ್ ಲೆಟರ್‌ನಲ್ಲಿ ಅವರಿಬ್ಬರ ಇರುವ ಪ್ರೀತಿ ಭಾವನೆಗಳು ಎದ್ದು ಕಾಣಿಸುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು.

  • ದಿಶಾ ಸಾಲಿಯನ್ ಗೆಳೆಯನಿಗೆ ಭದ್ರತೆ ನೀಡಿ – ಅಮಿತ್ ಶಾಗೆ ನಿತೇಶ್ ರಾಣೆ ಪತ್ರ

    ದಿಶಾ ಸಾಲಿಯನ್ ಗೆಳೆಯನಿಗೆ ಭದ್ರತೆ ನೀಡಿ – ಅಮಿತ್ ಶಾಗೆ ನಿತೇಶ್ ರಾಣೆ ಪತ್ರ

    – ದಿಶಾ, ಸುಶಾಂತ್ ಸಾವಿಗೂ ಲಿಂಕ್ ಇದೆ
    – ದೊಡ್ಡ ವ್ಯಕ್ತಿಗಳಿಂದ ಆತನ ಜೀವಕ್ಕೆ ಅಪಾಯವಿದೆ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಪ್ರಿಯಕರನಿಗೆ ಭದ್ರತೆ ನೀಡಬೇಕೆಂದು ಮುಂಬೈ ಬಿಜೆಪಿ ಶಾಸಕ ನಿತೇಶ್ ರಾಣೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 28 ವರ್ಷದ ದಿಶಾ ಸಾಲಿಯನ್ ಕಳೆದ ಜೂನ್ 8 ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಮುಂಬೈನ ಮಲಾಡ್ ಪ್ರದೇಶಲ್ಲಿರುವ ಮನೆಯ 14ನೇ ಮಹಡಿಯಿಂದ ಕಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಐದು ದಿನಗಳ ನಂತರ ಜೂನ್ 14ರಂದು ಸುಶಾಂತ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಎರಡು ಸಾವಿಗೂ ಸಂಬಂಧವಿದೆ ಎನ್ನಲಾಗಿದೆ.

    ಈಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಎಂಎಲ್‍ಎ ನಿತೇಶ್ ರಾಣೆ, ದಿಶಾ ಸಾವನ್ನಪ್ಪಿದ ದಿನ ಅವಳ ಗೆಳೆಯ ರೋಹನ್ ರೈ ಆಕೆಯ ಜೊತೆಯಲ್ಲಿ ಇದ್ದು, ಆತನಿಗೆ ಕೆಲ ಸೂಕ್ಷ್ಮ ವಿಚಾರಗಳು ಗೊತ್ತಿದೆ. ಆದರೆ ಆತ ಯಾವುದೋ ಪ್ರಭಾವಿ ವ್ಯಕ್ತಿಗಳಿಗೆ ಭಯಪಟ್ಟು ಯಾವ ವಿಚಾರವನ್ನು ಹೊರಗೆ ಹೇಳುತ್ತಿಲ್ಲ. ಆತನಿಗೆ ಭರವಸೆ ಮತ್ತು ಭದ್ರತೆ ಬೇಕಿದೆ. ಹೀಗಾಗಿ ಅವನಿಗೆ ಭದ್ರತೆ ನೀಡಿ ಎಂದು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ದಿಶಾ ಸಾಲಿಯನ್ ಸಾವಿಗೂ ಮತ್ತು ಸುಶಾಂತ್ ಸಿಂಗ್ ಸಾವಿಗೂ ಲಿಂಕ್ ಇದೆ. ಇದರಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳ ಕೈವಾಡವಿದೆ. ಹೀಗಾಗಿಯೇ ರೋಹನ್ ಮುಂಬೈ ಬಿಟ್ಟು ಹೋಗಿದ್ದಾನೆ. ಆತನನ್ನು ಯಾರೋ ಬಲವಂತವಾಗಿ ಮುಂಬೈ ಬಿಟ್ಟು ಹೋಗುವಂತೆ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವಾಗ ಆತ ಮುಂಬೈಗೆ ಬರಲು ಹೆದರುತ್ತಿದ್ದಾನೆ ಎಂದು ನಾನು ಭಾವಿಸುತ್ತೇನೆ. ಜೊತೆಗೆ ಇದರಲ್ಲಿ ಪ್ರಭಾವಶಾಲಿ ಜನರ ಒತ್ತಡವು ಇದೆ ಎಂದು ರಾಣೆ ಆರೋಪ ಮಾಡಿದ್ದಾರೆ.

    ದಿಶಾ ಸಾಲಿಯನ್ ಪ್ರಕರಣದಲ್ಲಿ ಮುಂಬೈ ಪೊಲೀಸರು ನಾಟಕವಾಡುತ್ತಿದ್ದಾರೆ. ಆಕೆ ಪ್ರಕರಣದಲ್ಲಿ ಅತೀ ಮುಖ್ಯ ಸಾಕ್ಷಿಯಾದ ರೋಹನ್ ಅವರನ್ನು ಪೊಲೀಸರು ತನಿಖೆ ಮಾಡಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಸುಶಾಂತ್ ಕೇಸ್ ತನಿಖೆ ಮಾಡುತ್ತಿರುವ ಸಿಬಿಐ ಕೂಡ ರೋಹನ್ ಹೇಳಿಕೆಯನ್ನು ಪಡೆಯಬಹುದು. ಈ ಎರಡು ಪ್ರಕರಣಗಳಿಗೆ ಲಿಂಕ್ ಇದೆ. ಹೀಗಾಗಿ ಆತನಿಗೆ ಭದ್ರತೆ ಕೊಟ್ಟು ವಿಚಾರಣೆ ಮಾಡಬೇಕು. ಈ ವಿಚಾರದಲ್ಲಿ ನಾನು ಕೂಡ ಸಿಬಿಐಗೆ ಹೇಳಿಕೆ ನೀಡಲು ಸಿದ್ಧವಿದ್ದೇನೆ ಎಂದು ರಾಣೆ ಪತ್ರ ಬರೆದಿದ್ದಾರೆ. ಇದನ್ನು ಓದಿ: ಸಾರಾ, ರಿಯಾ, ಸುಶಾಂತ್ ಸೇರಿ ತೋಟದ ಮನೆಯಲ್ಲಿ ಪಾರ್ಟಿ ಮಾಡ್ತಿದ್ರು: ಮ್ಯಾನೇಜರ್

    ಮೊದಲಿಗೆ ಸುಶಾಂತ್ ಜೊತೆ ಕೆಲಸ ಮಾಡುತ್ತಿದ್ದ ದಿಶಾ ಸಾಲಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ನಂತರ ಸುಶಾಂತ್ ಕೂಡ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡಿದ್ದರು. ಹೀಗಾಗಿ ಈ ಪ್ರಕರಣಗಳು ಹಲವಾರು ತಿರುವುಗಳನ್ನು ಪಡೆದುಕೊಂಡಿವೆ. ಸುಶಾಂತ್ ಅನ್ನು ಕೊಲೆ ಮಾಡಲಾಗಿದೆ ಎಂದು ಕೆಲವರ ಆರೋಪಿಸಿದ್ದಾರೆ. ಇದರ ಮಧ್ಯೆ ಡ್ರಗ್ ಕೇಸ್ ಕೂಡ ಈ ಪ್ರಕರಣಕ್ಕೆ ತಳುಕು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್ ಕೂಡ ಆಗಿದ್ದಾರೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ – ರಿಯಾ ಚಕ್ರವರ್ತಿಗೆ ಜೈಲೇ ಗತಿ

    ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್, ಬಾಲಿವುಡ್ ಮತ್ತು ಮಹಾರಾಷ್ಟ್ರ ಸರ್ಕಾರಗಳ ಮಧ್ಯೆ ಜಟಾಪಟಿ ಮುಂದುವರೆದಿದೆ. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಹಾರದಲ್ಲಿ ಬಿಜೆಪಿ ಪಕ್ಷ ಸುಶಾಂತ್ ಅವರ ಹೆಸರನ್ನು ತೆಗೆದುಕೊಂಡು ರಾಜಕೀಯ ಮಾಡಿದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ ರಿಯಾ ಚಕ್ರವರ್ತಿಯನ್ನು ಬೆಂಬಲಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.