Tag: ಲೈಬ್ರರಿ

  • ಕೋಲ್ಕತ್ತಾದಲ್ಲಿ ಮೊದಲ ದೋಣಿ ಗ್ರಂಥಾಲಯ ಆರಂಭ

    ಕೋಲ್ಕತ್ತಾದಲ್ಲಿ ಮೊದಲ ದೋಣಿ ಗ್ರಂಥಾಲಯ ಆರಂಭ

    ಕೋಲ್ಕತ್ತಾ: ರಾಜ್ಯದಲ್ಲಿ ದೋಣಿಯಲ್ಲಿ ಪ್ರಯಾಣಿಸುವಾಗ ಸಮಯವನ್ನು ಓದಿನಲ್ಲಿ ಕಳೆಯಲೆಂದು ಮಕ್ಕಳಿಗಾಗಿ ದೋಣಿಯಲ್ಲಿ ಲೈಬ್ರರಿಯನ್ನು ತೆರೆಯುವ ಮೂಲಕ ಸಾರಿಗೆ ನಿಗಮವು ಹೊಸ ಪ್ರಯತ್ನಕ್ಕೆ ಮುಂದಾಗಿದೆ.

     

    ದೋಣಿಯಲ್ಲಿ ಪ್ರಯಾಣ ಬೆಳೆಸುವ ಮಕ್ಕಳಿಗಾಗಿ 500 ಬೇರೆ ಬೇರೆ ಹೆಸರಾಂತ ಲೇಖಕರ ಪುಸ್ತಕಗಳನ್ನು ಹೊಂದಿದ ಲೈಬ್ರರಿಯನ್ನು ಕೊಲ್ಕತ್ತಾದ ಸಾರಿಗೆ ನಿಗಮ ಮತ್ತು ಸ್ಥಳೀಯ ಪುಸ್ತಕ ಮಳಿಗೆಯ ಕೂಡುವಿಕೆಯಲ್ಲಿ ದೋಣಿಯಲ್ಲೇ ಪ್ರಾರಂಭಿಸಿದೆ.

    ಈ ಗ್ರಂಥಾಲಯ ಸ್ಥಾಪನೆಯ ಮುಖ್ಯ ಉದ್ದೇಶ ಏನೆಂದರೆ ಹೊಗ್ಲಿ ನದಿಯಲ್ಲಿ ದೋಣಿಯಲ್ಲಿ ಪ್ರಯಾಣಿಸುವಾಗ ಕೊಲ್ಕತ್ತಾದ ವಿಶೇಷತೆಯನ್ನು ತಿಳಿಸುವ ಸಣ್ಣ ಪ್ರಯತ್ನ ಇದಾಗಿದ್ದು, ದೋಣಿಯಲ್ಲಿ ಸಂಚರಿಸುವ ಮಕ್ಕಳಿಗಾಗಿ 500 ಬೇರೆ ಬೇರೆ ಲೇಖಕರ ಪುಸ್ತಕಗಳನ್ನು ಇಟ್ಟಿದ್ದೇವೆ. ಇದು ಇಂಗ್ಲೀಷ್ ಮತ್ತು ಬೆಂಗಾಳಿ ಭಾಷೆಯಲ್ಲಿದೆ. ಮಿಲೇನಿಯಮ್ ಪಾರ್ಕ್ ನಿಂದ ಬೇಲೂರು ಮಠ ಜೆಟ್ಟಿಗೆ ಪ್ರಯಾಣಿಸಲು 3 ಗಂಟೆಯ ಬೇಕಾಗುತ್ತದೆ ಈ ಹೊತ್ತನ್ನು ಓದಿನಲ್ಲಿ ಕಳೆಯಲಿ ಎಂಬ ಉದ್ದೇಶವನ್ನು ಹೊಂದಿದ್ದೇವೆ. ಪ್ರತಿದಿನ ದೋಣಿಯು ಮೂರು ಬಾರಿ ಈ ಮಾರ್ಗವಾಗಿ ಸಂಚರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೋಣಿ ಲೈಬ್ರರಿಯಲ್ಲಿ ಮಕ್ಕಳಿಗೆ 50 ರೂಪಾಯಿ ಮತ್ತು ಹಿರಿಯರಿಗೆ 100 ರೂಪಾಯಿ ಟಿಕೆಟ್ ದರವನ್ನು ನಿಗದಿ ಪಡಿಸಲಾಗಿದೆ. ಈ ಪುಸ್ತಕಗಳ ಪೈಕಿ ಕಥೆ, ಕಾದಂಬರಿ, ಮತ್ತು ಕವನಗಳನ್ನು ಹೊಂದಿರುವ ಪುಸ್ತಕಗಳನ್ನು ಪ್ರಯಾಣಿಕರಿಗಾಗಿ ಕಲ್ಪಿಸಿಕೊಟ್ಟಿದ್ದಾರೆ. ಇದರೊಂದಿಗೆ ದೋಣಿಯಲ್ಲಿ ಉಚಿತ ವೈಫೈ ಸೌಲಭ್ಯವು ಇದೆ.

  • ಲೈಬ್ರರಿ ಆವರಣದಲ್ಲಿ ಕಚೇರಿ- ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ

    ಲೈಬ್ರರಿ ಆವರಣದಲ್ಲಿ ಕಚೇರಿ- ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ

    ಬೆಂಗಳೂರು: ಜಯನಗರ ಸಾರ್ವಜನಿಕ ಲೈಬ್ರರಿ ಆವರಣದಲ್ಲಿ ಕಚೇರಿ ತೆರೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಜಯನಗರ ಶೈಕ್ಷಣಿಕ ಸಮಿತಿಯವರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಹೇಳಿಕೆಯನ್ನು ಟ್ವೀಟ್ ಮಾಡಿ ನಿನ್ನೆಯಿಂದ ಸಂಸದರ ಕಚೇಯಿಂದಾಗಿ ಬಡ ಮಕ್ಕಳ ಟ್ಯೂಷನ್ ಸೆಂಟರ್ ಬಂದಾಗುತ್ತಿದೆ ಎಂದು ಕಾಂಗ್ರೆಸ್‍ನ ಸುಳ್ಳು ಸುದ್ದಿ ಕಾರ್ಖಾನೆ ಅಪಪ್ರಚಾರ ಮಾಡುತ್ತಿದೆ. ಇದರ ಬಗ್ಗೆ ಟ್ಯೂಷನ್ ಸೆಂಟರ್ ನಡೆಸುವ ಶೈಕ್ಷಣಿಕ ಸಮಿತಿಯವರೇ ಸತ್ಯವನ್ನು ಜನರ ಮುಂದಿಟ್ಟಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
    ಜಯನಗರ ಶೈಕ್ಷಣಿಕ ಸಮಿತಿಯು ಕಳೆದ ಹಲವಾರು ವರ್ಷಗಳಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಗತಿಗಳನ್ನು ನಡೆಸಿಕೊಂಡು ಬರುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತಮ್ಮ ಕಚೇರಿಯನ್ನು ಈ ಕಟ್ಟಡದಲ್ಲಿ ಮಾಡುವುದರಿಂದ ಟ್ಯೂಷನ್ ತರಗತಿಗಳಿಗೆ ತೊಂದರೆ ಉಂಟಾಗುತ್ತದೆ ಎಂಬ ಸುದ್ದಿ ಪ್ರಕಟವಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ಸಂಸದರ ಕಚೇರಿಯಿಂದ ಟ್ಯೂಷನ್ ತರಗತಿಗಳಿಗೆ ಹಾಗೂ ಸಾರ್ವಜನಿಕ ಗ್ರಂಥಾಲಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ.

    ಸಂಸದ ಕಚೇರಿ ಇಲ್ಲಿ ನಿರ್ಮಾಣವಾಗುವುದರಿಂದ ಶೈಕ್ಷಣಿಕ ಸಮಿತಿಯ ಕಾರ್ಯಚಟುವಟಿಕೆಗೆ ಮತ್ತಷ್ಟು ಪೂರಕವಾಗುತ್ತದೆ. ಆಧಾರ ರಹಿತ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ಕಿವಿಕೊಡಬಾರದು ಎಂದು ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ.

    ಆರೋಪ ಏನು?:
    ಸಿಎ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಜಯನಗರ ಶೈಕ್ಷಣಿಕ ಸಮಿತಿಯ ಲೈಬ್ರರಿಯಲ್ಲಿ ವಿದ್ಯಾರ್ಥಿಗಳು ನಿತ್ಯ ಓದುತ್ತಾರೆ. ಸಂಸದರ ಕಚೇರಿ ಇಲ್ಲಿ ತೆರೆದರೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಸಂಸದರನ್ನು ನೋಡಲು ನಿತ್ಯ ಬರುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ. ಅಷ್ಟೇ ಅಲ್ಲದೆ ಮುಖ್ಯ ರಸ್ತೆ ಆಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಹೆಚ್ಚಾಗಲಿದೆ. ಇದರಿಂದ ಲೈಬ್ರರಿಗೆ ಬರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತದೆ. ಈ ವಿಚಾರ ತಿಳಿದಿದ್ದರೂ ತೇಜಸ್ವಿ ಸೂರ್ಯ ಅವರು ಇಲ್ಲೇ ಕಚೇರಿ ಮಾಡುತ್ತಿರುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದರು.

    ಅಷ್ಟೇ ಅಲ್ಲದೇ ಈ ಸ್ಥಳವನ್ನು ಕೆಲ ಸಂಘ ಸಂಸ್ಥೆಗಳು ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಬಳಸುತ್ತಿದ್ದವು. ಈ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಾಗಲಿಲ್ಲವೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಎತ್ತಿದ್ದರು.

    ಈ ಕುರಿತು ಶುಕ್ರವಾರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರು, ಸಂಸದರ ಕಚೇರಿ ನಿರ್ಮಾಣವಾಗುತ್ತಿರುವುದು ಜಯನಗರದ ಸಾರ್ವಜನಿಕ ಲೈಬ್ರರಿ ಇರುವ ಕಟ್ಟದ ಗ್ರೌಂಡ್ ಫ್ಲೋರಿನಲ್ಲಿ. ಈ ಕಟ್ಟಡ ಮೊದಲ ಫ್ಲೋರಿನಲ್ಲಿ ಲೈಬ್ರರಿ ಇದೆ. ಅದರ ಕೆಳಗೆ ಇರುವ ಟ್ರಸ್ಟ್ ಕಚೇರಿಯನ್ನು ಸಂಸದರ ಕಚೇರಿಯಾಗಿ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ನನ್ನ ಪರವಿದ್ದಾರೆ. ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ. ಕೆಲವರು ಮೊದಲು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಟ್ರಸ್ಟನ್ನು ಅಲ್ಲಿಂದ ಖಾಲಿ ಮಾಡಿಸಿ ಬೇರೆಯವರಿಗೆ ನೀಡಲು ತೀರ್ಮಾನ ಮಾಡಿದ್ದರು. ಸದ್ಯ ಬಿಬಿಎಂಪಿ ಸಂಸದರ ಕಚೇರಿಗೆ ನೀಡಿದೆ ಎಂದು ಹೇಳಿದ್ದರು.

  • ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

    ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ ಲೈಬ್ರರಿ ಆವರಣದಲ್ಲಿ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ.

    ಇದು ಸರಿಯೇ?
    ಸಿಎ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಈ ಲೈಬ್ರರಿಯಲ್ಲಿ ವಿದ್ಯಾರ್ಥಿಗಳು ನಿತ್ಯ ಓದುತ್ತಾರೆ. ಸದ್ಯ ಸಂಸದರ ಕಚೇರಿ ಇಲ್ಲಿ ತೆರೆದರೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಸಂಸದರನ್ನು ನೋಡಲು ನಿತ್ಯ ಬರುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ. ಅಲ್ಲದೇ ಜೊತೆಗೆ ಮುಖ್ಯ ರಸ್ತೆ ಆಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಹೆಚ್ಚಾಗಲಿದೆ. ಇದರಿಂದ ಲೈಬ್ರರಿಗೆ ಬರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತದೆ. ಈ ವಿಚಾರ ತಿಳಿದಿದ್ದರೂ ತೇಜಸ್ವಿ ಸೂರ್ಯ ಅವರು ಇಲ್ಲೇ ಕಚೇರಿ ಮಾಡುತ್ತಿರುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ.

    ಈ ಸ್ಥಳವನ್ನು ಕೆಲ ಸಂಘ ಸಂಸ್ಥೆಗಳು ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಬಳಸುತ್ತಿದ್ದವು. ಈ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಾಗಲಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರದಲ್ಲಿ ಮೂಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಂಸದ ತೇಜಸ್ವಿ ಸೂರ್ಯ ಅವರು, ಸಂಸದರ ಕಚೇರಿ ನಿರ್ಮಾಣವಾಗುತ್ತಿರುವುದು ಜಯನಗರದ ಸಾರ್ವಜನಿಕ ಲೈಬ್ರರಿ ಇರುವ ಕಟ್ಟದ ಗ್ರೌಂಡ್ ಫ್ಲೋರಿನಲ್ಲಿ. ಈ ಕಟ್ಟಡ ಮೊದಲ ಫ್ಲೋರಿನಲ್ಲಿ ಲೈಬ್ರರಿ ಇದೆ. ಅದರ ಕೆಳಗೆ ಇರುವ ಟ್ರಸ್ಟ್ ಕಚೇರಿಯನ್ನು ಸಂಸದರ ಕಚೇರಿಯಾಗಿ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ನನ್ನ ಪರವಿದ್ದಾರೆ. ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ. ಕೆಲವರು ಮೊದಲು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಟ್ರಸ್ಟನ್ನು ಅಲ್ಲಿಂದ ಖಾಲಿ ಮಾಡಿಸಿ ಬೇರೆಯವರಿಗೆ ನೀಡಲು ತೀರ್ಮಾನ ಮಾಡಿದ್ದರು. ಸದ್ಯ ಬಿಬಿಎಂಪಿ ಸಂಸದರ ಕಚೇರಿಗೆ ನೀಡಿದೆ ಎಂದರು.