Tag: ಲೋಕಸಭಾ ಚುನಾಚಣೆ

  • 1 ಸೈಟ್, 15 ಲಕ್ಷ ಆಫರ್ – ಜೆಡಿಎಸ್ ವಿರುದ್ಧ ಸುಮಲತಾ ಸ್ಫೋಟಕ ಆರೋಪ

    1 ಸೈಟ್, 15 ಲಕ್ಷ ಆಫರ್ – ಜೆಡಿಎಸ್ ವಿರುದ್ಧ ಸುಮಲತಾ ಸ್ಫೋಟಕ ಆರೋಪ

    ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಜೆಡಿಎಸ್‍ನ ಟಾಪ್ ಲೀಡರ್ ಒಬ್ಬರು ನನ್ನನ್ನು ಸಂಪರ್ಕ ಮಾಡಿದ್ದರು ಎಂದು ಜೆಡಿಎಸ್ ವಿರುದ್ಧ ಆರೋಪ ಮಾಡಿದ್ದಾರೆ.

    ಶ್ರೀರಂಪಟ್ಟಣದ ಕಾಳೇನಹಳ್ಳಿಯಲ್ಲಿ ಪ್ರಚಾರ ಮಾಡುವಾಗ ಸುಮಲತಾ ಅವರು, ಈ ಸಂದರ್ಭದಲ್ಲಿ ನಾನು ಈ ವಿಚಾರವನ್ನು ಈಗ ಹೇಳಬೇಕಾ ಅಥವಾ ಮುಂದೆ ಹೇಳಬೇಕಾ ಗೊತ್ತಾಗುತ್ತಿಲ್ಲ. ಜೆಡಿಎಸ್‍ನ ಟಾಪ್ ಲೀಡರ್ ಒಬ್ಬರು ನನ್ನ ಸಂಪರ್ಕ ಮಾಡಿದ್ದರು. ನನ್ನ ಫೋಟೋ ಮಾರ್ಫ್ ಮಾಡಿ ಏನ್ ಬೇಕಾದರೂ ಮಾಡುವುದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ಜೆಡಿಎಸ್ ಅವರು ನನ್ನ ಖಾಸಗಿ ಜೀವನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಪ್ಲಾನ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಫೋಟೋ ಮಾರ್ಫ್ ಮಾಡಿರುವ ವೀಡಿಯೊಗಳನ್ನ ನೀವು ನೋಡಿದರೂ ನೋಡಬಹುದು ಎಂದು ಜೆಡಿಎಸ್ ವಿರುದ್ಧ ಆರೋಪಿಸಿದ್ದಾರೆ.

    ನಮ್ಮ ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡುವ ಇಬ್ಬರು ಹುಡುಗರನ್ನ ಸಂಪರ್ಕ ಮಾಡಿದ್ದಾರೆ. ಈ ರೀತಿಯಾಗಿ ಮಾಡಬೇಕು ಎಂದು ಹೇಳಿಕೊಟ್ಟಿದ್ದಾರೆ. ಜೊತೆಗೆ ಅವರಿಗೆ ಒಂದು ಸೈಟ್ ಹಾಗೂ 15 ಲಕ್ಷ ಕೊಡುವುದಾಗಿ ಆಮಿಷ ವೊಡ್ಡಿದ್ದಾರೆ. ಅಷ್ಟೇ ಅಲ್ಲದೇ ಫಾರೀನ್‍ಗೆ ಕಳಿಸುವುದಾಗಿ ಹುಡುಗರಿಗೆ ಹೇಳಿದ್ದಾರೆ. ನೀವು ಫಾರೀನ್‍ಗೆ ಹೋಗಿ. ಇಲ್ಲಿ ಯಾವುದೇ ಸಂದರ್ಭ ಬಂದರೂ ನಾವು ನಿಭಾಯಿಸುತ್ತೇವೆ ಎಂದು ಹೇಳಿದ್ದಾರೆ. ಈ ರೀತಿಯಾಗಿ ಜೆಡಿಎಸ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಕೆಳಮಟ್ಟಕ್ಕೆ ಇಳಿಯುವುದಕ್ಕೆ ರೆಡಿಯಾಗಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ.

    ಈ ಎಲ್ಲ ಮಾಹಿತಿ ನನಗೆ ಅವರ ಕುಟುಂಬದವರು ಹೇಳಿದ್ದಾರೆ. ಜೆಡಿಎಸ್ ಅವರ ಇಂತಹ ಕೀಳುಮಟ್ಟದ ರಾಜಕೀಯವನ್ನು ನಾನು ನೋಡಿರಲಿಲ್ಲ. ಮುಂದಿನ ದಿನಗಳಲ್ಲಿ ನನ್ನ ಫೋಟೋ ಮಾರ್ಫ್ ಮಾಡಿ ರುವ ವಿಡಿಯೋಗಳ ಬರಬಹುದು. ನೋಡೋಣ ಏನು ಬರುತ್ತೊ ಅದನ್ನ ಫೇಸ್ ಮಾಡುವುದಕ್ಕೆ ನಾನು ರೆಡಿ ಇದ್ದೇನೆ ಎಂದು ಸುಮಲತಾ ಹೇಳಿದ್ದಾರೆ.

  • ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್!

    ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್!

    ಗದಗ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಗದಗ ರಾಜಕಾರಣದಲ್ಲಿ ಬಿಗ್ ಶಾಕ್ ಎದುರಾಗಿದೆ.

    ಗದಗದಲ್ಲಿ ಕಾಂಗ್ರೆಸ್ ನಾಯಕರು ರಾತ್ರೋರಾತ್ರಿ ನಡೆಸಿದ ಆಪರೇಷನ್ ಹಸ್ತ ಸಕ್ಸಸ್ ಆಗಿದೆ. ಬಿಜೆಪಿ ಮತಬ್ಯಾಂಕ್‍ಗೆ ಗಾಳ ಹಾಕಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಗದಗ ಲಿಂಗಾಯತ ಪ್ರಭಾವಿ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಮಲ ಬಿಟ್ಬು ಕೈ ಹಿಡಿಯಲು ಬಿಜೆಪಿ ಮಾಜಿ ಶಾಸಕ ಮತ್ತು ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರ ಸಜ್ಜಾಗಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀಶೈಲಪ್ಪ ಬಿದರೂರ ಅವರು ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ತಟಸ್ಥವಾಗಿ ಉಳಿದಿದ್ದರು. ಈಗ ಬಿಜೆಪಿ ಸೋಲಿಸಲು ಕಾಂಗ್ರೆಸ್ ಜೊತೆ ಕೈ ಮಿಲಾಯಿಸಲು ಶ್ರೀಶೈಲಪ್ಪ ಮುಂದಾಗಿದ್ದಾರೆ. ಶ್ರೀಶೈಲಪ್ಪ ಬಿದರೂರ ಅವರು ಗದಗ ಮತ್ತು ರೋಣ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ಅಪಾರ ಅಭಿಮಾನಿ, ಕಾರ್ಯಕರ್ತರನ್ನು ಹೊಂದಿದ್ದಾರೆ.

    ಈಗಾಗಲೇ ಶ್ರೀಶೈಲಪ್ಪ ಬಿದರೂರ, ಕೆಪಿಸಿಸಿ ಪ್ರಚಾರಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಮಾತುಕತೆ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಸೇರಲು ಲಿಂಗಾಯತ ನಾಯಕ ಬಿದರೂರ ಒಲವು ತೋರಿದ್ದು, ಇದರಿಂದ ಬಿಜೆಪಿಗೆ ಸಂಕಷ್ಟ ಸಾಧ್ಯತೆ ಇದೆ.

  • ಗೆದ್ದ ಮೇಲೆ ಬಿಜೆಪಿ ಸೇರುವ ಬಗ್ಗೆ ಸುಮಲತಾ ಸ್ಪಷ್ಟನೆ

    ಗೆದ್ದ ಮೇಲೆ ಬಿಜೆಪಿ ಸೇರುವ ಬಗ್ಗೆ ಸುಮಲತಾ ಸ್ಪಷ್ಟನೆ

    ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹಬ್ಬದ ದಿನವೂ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿದ್ದು, ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಇದೀಗ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

    ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ ಎಂದರು.

    ನಾನು ಜನರಿಗಾಗಿ ನಿಂತಿದ್ದೇನೆ. ಯಾವ ನಿರ್ಧಾರ ತೆಗೆದುಕೊಳ್ಳಬೇಕಾದರೂ ಜನರ ಅಭಿಪ್ರಾಯವನ್ನು ಕೇಳುತ್ತೇನೆ. ಜೆಡಿಎಸ್ ನವರ ತಂತ್ರ-ಪ್ರತಿತಂತ್ರಗಳಿಗೆ ಜನತಂತ್ರವೇ ಉತ್ತರವಾಗಿದೆ. ತುಂಬಾ ಕಡಿಮೆ ಸಮಯವಿದೆ ಹೀಗಾಗಿ ಹಬ್ಬದ ದಿನವೂ ಪ್ರಚಾರಕ್ಕೆ ಬಂದಿದ್ದೀನಿ ಎಂದರು.

    ಆರೋಪಗಳು ಆರೋಪಗಳಾಗಿಯೇ ಉಳಿದುಕೊಳ್ಳುತ್ತವೆ. ಮಂಡ್ಯದಲ್ಲಿ ಇರಲೇಬೇಕು ಎಂದು ಜನರ ಅಭಿಪ್ರಾಯದ ಮೇಲೆ ಚುನಾವಣೆಗೆ ನಿಂತಿದ್ದೇನೆ. ಗೆದ್ದ ಮೇಲೆ ಮಂಡ್ಯ ಬಿಟ್ಟು ಹೋದರೆ ನಾನು ಚುನಾವಣೆಗೆ ನಿಲ್ಲುತ್ತಿರಲಿಲ್ಲ. ಚುನಾವಣೆ ಬಂದರೆ ಸಾಕು ಆರೋಪ ಮಾಡುವುದು ಕೆಲವರಿಗೆ ಅಭ್ಯಾಸವಾಗಿದೆ. ಮಂಡ್ಯ ಬಿಟ್ಟು ಹೋಗಲೂ ಕಾರಣವೇ ಇಲ್ಲ. ಗೆದ್ದು ಮನೆಯಲ್ಲಿ ಕುಳಿತುಕೊಳ್ಳಲು ಅರ್ಥವೇ ಇಲ್ಲ. ಅವರು ಇದ್ದಾಗ ಒಳ್ಳೆಯ ಕೆಲಸ ಮಾಡಿದ್ದಾರೆ. ಇನ್ನೂ ಒಳ್ಳೆಯ ಕೆಲಸ ಮಾಡಬೇಕು ಎಂಬ ಆಸೆ ಅವರಿಗಿತ್ತು. ಹೀಗಾಗಿ ಅವರು ಆಸೆ ನೆರವೇರಿಸಲು ಬಂದಿದ್ದೇನೆ ಎಂದರು.

    ಆದಾಯ ತೆರಿಗೆ ಇಲಾಖೆಯವರಿಗೆ ಹಣ ಎಲ್ಲಿದೆ ಎಂದು ಮಾಹಿತಿ ತಿಳಿಯುತ್ತದೋ ಅಲ್ಲಿ ಹೋಗಿ ರೇಡ್ ಮಾಡುತ್ತಾರೆ. ನಮ್ಮ ಮನೆ ಮೇಲೆ ದಾಳಿ ಮಾಡಿದರೆ ಅವರಿಗೆ ಏನೂ ಸಿಗಲ್ಲ. ಐಟಿ ಅಧಿಕಾರಿಗಳು ಟೀ, ಕಾಫಿ ಕುಡಿದುಕೊಂಡು ವಾಪಸ್ ಹೋಗಬೇಕಷ್ಟೆ ಎಂದರು.