Tag: ಲೋಕಸಭಾ ಚುನಾವಣೆ 2019

  • ಆಪ್ ಆರೋಪಕ್ಕೆ ಉತ್ತರ ನೀಡಿದ ಗೌತಮ್ ಗಂಭೀರ್

    ಆಪ್ ಆರೋಪಕ್ಕೆ ಉತ್ತರ ನೀಡಿದ ಗೌತಮ್ ಗಂಭೀರ್

    ನವದೆಹಲಿ: ಆಮ್ ಆದ್ಮಿ ಪಾರ್ಟಿಯ ಆರೋಪಕ್ಕೆ ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಗೌತಮ್ ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿದ್ದಾರೆಂದು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಆಪ್ ಅಭ್ಯರ್ಥಿಯಾಗಿರುವ ಅತಿಶಿ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

    ಮಾಧ್ಯಮಗಳ ಜೊತೆ ಮಾತನಾಡಿದ ಗೌತಮ್ ಗಂಭೀರ್, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆಪ್ ಸರ್ಕಾರ ದೆಹಲಿಯಲ್ಲಿ ಯಾವುದೇ ಕೆಲಸವನ್ನು ಮಾಡಿಲ್ಲ. ಹಾಗಾಗಿ ಆಪ್ ಅಭ್ಯರ್ಥಿ ನನ್ನ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸುತ್ತದೆ. ಮತ ಕೇಳಲು ಯಾವುದೇ ವಿಷಯಗಳು ಇಲ್ಲದಿದ್ದಾಗ ಈ ರೀತಿಯ ಆರೋಪಗಳನ್ನು ಮಾಡುತ್ತಾರೆ. ನಕಾರಾತ್ಮಕ ತಂತ್ರಗಳನ್ನು ಬಳಸುವ ಮೂಲಕ ಚುನಾವಣೆಯನ್ನು ಗೆಲ್ಲಲು ಎದುರಾಳಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಖಡಕ್ ಉತ್ತರ ನೀಡಿದ್ದಾರೆ.

    ಗೌತಮ್ ಗಂಭೀರ್ ಬಳಿ ರಾಜೇಂದ್ರ ನಗರ ಮತ್ತು ಕರೋಲ್ ಭಾಗ್ ನಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂಬುವುದು ಅತಿಶಿಯವರ ಆರೋಪವಾಗಿದೆ. ಇತ್ತೀಚೆಗೆ ಪೂರ್ವಾನುಮತಿ ಪಡೆಯದೇ ರೋಡ್ ಶೋ ನಡೆಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿತ್ತು.

  • ಎಲೆಕ್ಷನ್‍ನಲ್ಲಿ ಓಡಾಡಿದ್ದೀರಿ, ರೆಸ್ಟ್ ಮಾಡಿ- ಸುಮಲತಾಗೆ ಚಲುವರಾಯಸ್ವಾಮಿ ಸಲಹೆ

    ಎಲೆಕ್ಷನ್‍ನಲ್ಲಿ ಓಡಾಡಿದ್ದೀರಿ, ರೆಸ್ಟ್ ಮಾಡಿ- ಸುಮಲತಾಗೆ ಚಲುವರಾಯಸ್ವಾಮಿ ಸಲಹೆ

    -ನಮ್ಮ ಪರವೇ ಸಮೀಕ್ಷಾ ವರದಿಗಳಿವೆ ಎಂದ ಮಾಜಿ ಸಚಿವ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಹೋರಾಟ ಕಂಡುಬಂದಿದ್ದ ಮಂಡ್ಯ ಕ್ಷೇತ್ರದಲ್ಲಿ ಸದ್ಯ ಸೋಲು ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ಇದೇ ವೇಳೆ ಇಂದು ಮದುವೆ ಕಾರ್ಯಕ್ರಮವೊಂದರಲ್ಲಿ ಸುಮಲತಾ ಅಂಬರೀಶ್ ಮತ್ತು ಮಾಜಿ ಚಲುವರಾಯಸ್ವಾಮಿ ಅವರು ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಮಂಡ್ಯದ ಕನಕ ಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸುಮಲತಾ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಪರಸ್ಪರ ಭೇಟಿಯಾದರು. ಭೇಟಿ ವೇಳೆ ಚುನಾವಣೆಯ ಸಂದರ್ಭದಲ್ಲಿ ಸಾಕಷ್ಟು ಓಡಾಡಿದ್ದೀರಿ. ಹೀಗಾಗಿ ಈವಾಗ ಸ್ಪಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸುಮಲತಾಗೆ ಚಲುವರಾಯ ಸ್ವಾಮಿ ಸಲಹೆ ನೀಡಿದ್ದಾರೆ.

    ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯ ಸ್ವಾಮಿ, ಸ್ವಾಭಿಮಾನದ ಗೆಲುವು ಎಂದು ಎಲ್ಲಾ ಸರ್ವೆ ರಿಪೋರ್ಟ್ ನಮ್ಮ ಪರ ಬಂದಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸುಮಲತಾ ಪರ ನಿಂತಿದ್ದಾರಾ ಎಂಬ ಅನುಮಾನ ಮೂಡಲು ಕಾರಣರಾದರು.

    ಎಲ್ಲರೂ ಅವರಿಗೆ ಬೇಕಾದಂತೆ ಅಭಿಪ್ರಾಯ ಪಡುತ್ತಿದ್ದಾರೆ. ಸರ್ಕಾರ ಇದ್ದು, ಸಚಿವರು, ಶಾಸಕರು, ಮುಖ್ಯಮಂತ್ರಿ, ಮಾಜಿ ಪ್ರಧಾನಿ, ಮುಖ್ಯಮಂತ್ರಿ ಕುಟುಂಬ ಇಷ್ಟು ಜನ ಮಂಡ್ಯದಲ್ಲಿ ಕೆಲಸ ಮಾಡಿದ್ದಾರೆ. ಇಷ್ಟು ಜನ ಕೆಲಸ ಮಾಡಿ ಫಲಿತಾಂಶ ಬರುವ ಮೊದಲೇ ಗೆಲುವು ನಮ್ಮದು ಅಂದರೆ ಯಾರು ಒಪ್ಪುತ್ತಾರೆ? ಮಂಡ್ಯ ಜನ ತೀರ್ಮಾನ ಮಾಡಿ ಆಗಿದ್ದು, ಅದರ ಪ್ರಕಟಣೆಗಾಗಿ ಕಾಯುತ್ತಿದ್ದೇವೆ. ಅಲ್ಲಿವರೆಗೂ ಕಾಯುವ ತಾಳ್ಮೆಯನ್ನ ಜಿಲ್ಲೆಯ ಜನರು ನಮಗೆ ಕಲಿಸಿದ್ದಾರೆ. ಸುಮಲತಾ ಪರವಾಗಿ ದರ್ಶನ್, ಯಶ್ ಸೇರಿದಂತೆ ಜಿಲ್ಲೆಯ ಹಲವು ಸಂಘಟನೆಗಳು ಹಾಗೂ ಎಲ್ಲ ವರ್ಗದವರು ದುಡಿದಿದ್ದಾರೆ ಎಂದರು. ಇದೇ ವೇಳೆ ಸುಮಲತಾ, ನಿಖಿಲ್ ಪರ ಯಾರು ಬೆಟ್ಟಿಂಗ್ ಕಟ್ಟಬಾರದು. ಯಾರೆ ಸೋತರು ನಮ್ಮ ಜಿಲ್ಲೆಯವರಿಗೆ ನಷ್ಟ ಆಗುತ್ತದೆ. ಹೀಗಾಗಿ ಬೆಟ್ಟಿಂಗ್ ಬೇಡ ಎಂದು ಮನವಿ ಮಾಡಿದರು.

    ದೇಶದ ಫಲಿತಾಂಶವೇ ಬೇರೆ ಬರಲಿದ್ದು, ಮಂಡ್ಯ ಜಿಲ್ಲೆಯ ಫಲಿತಾಂಶವೇ ಬೇರೆಯಾಗಲಿದೆ. ಎಲ್ಲಾ ಮಾಧ್ಯಮದವರು ಮಂಡ್ಯವನ್ನೇ ಹೆಚ್ಚು ತೋರಿಸಿದ್ದಾರೆ. ಈ ಶ್ರಮಕ್ಕೆ ಉತ್ತಮ ಫಲಿತಾಂಶ ಬಂದರೆ ಅರ್ಥ ಸಿಗುತ್ತದೆ. ಮಂಡ್ಯ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರುವ ಬಗ್ಗೆ ನಾನು ಮಾತನಾಡಲ್ಲ. ಫಲಿತಾಂಶ ಬಂದ ಮೇಲೆ ನಾನು ವಿಶ್ಲೇಷಣೆ ಮಾಡುತ್ತೇನೆ ಎಂದರು.

    ನನಗೆ ಬಂದಿರುವ ಮಾಹಿತಿ ಅನ್ವಯ ಪುಟ್ಟರಾಜು ಎರಡೂವರೆ ಲಕ್ಷ ಮತಗಳ ಅಂತರಕ್ಕಿಂತ ಕಡಿಮೆ ಬಂದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಿಖಿಲ್ ಸೋತರೆ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಲ್ಲ ಎಂದು ನಿವೃತ್ತಿ ಮಾತನ್ನು ಪರೋಕ್ಷವಾಗಿ ನೆನಪಿಸಿದರು. ಇದೇ ವೇಳೆ ಸಮ್ಮಿಶ್ರ ಸರ್ಕಾರ ಬಗ್ಗೆ ನಾನು ಯಾವುದೇ ಕಾಮೆಂಟ್ ಮಾಡಲ್ಲ. ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ನಿರಾಕರಿಸಿದ್ದ ಚಲುವರಾಯಸ್ವಾಮಿ ಅವರು ಮೌನವಹಿಸಿದ್ದರು. ಆದರೆ ಅವರ ಬೆಂಬಲಿಗರು ಸ್ವಾಭಿಮಾನಕ್ಕಾಗಿ ಸುಮಲತಾಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದರು.

    ಇದೇ ವೇಳೆ ಮಾತನಾಡಿದ ಸುಮಲತಾ, ಚುನಾವಣೋತ್ತರ ಸಮೀಕ್ಷೆ ವಿಚಾರವನ್ನು ನಾನು ಹೆಚ್ಚು ಗಭೀರವಾಗಿ ಪರಿಗಣಿಸುವುದಿಲ್ಲ. ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರ ಬರುತ್ತದೆ. ಮೇ 23ವರೆಗೂ ಕಾದು ನೋಡೋಣ ಎಂದರು.

    ಚಲುವರಾಯಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯವಾಗಿ ಏನೂ ಮಾತಾಡಿಲ್ಲ. ಚುನಾವಣೆ ಮುಗಿದಿದೆ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸಲಗೆ ನೀಡಿದ್ದಾರೆ ಎಂದರು. ಇದೇ ವೇಳೆ ದರ್ಶನ್ ಅವರು ರೈತರಿಗೆ ಬೆಂಬಲ ಬೆಲೆ ನೀಡಬೇಕು ಎಂದು ಹೇಳಿಕೆಯನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಯಾವುದೇ ಸರ್ಕಾರ ಇದ್ದರು ಕೂಡ ಇದನ್ನು ಅನುಸರಿಸಬೇಕು ಎಂದರು.

  • ನಾಳೆಯಿಂದ ಮೋದಿಗೆ ಅಸಲಿ ಅಗ್ನಿ ಪರೀಕ್ಷೆ – ಮಹಾಘಟಬಂಧನ್‍ಗೆ ತಡೆ ಹಾಕ್ತಾರಾ ಪ್ರಧಾನಿ?

    ನಾಳೆಯಿಂದ ಮೋದಿಗೆ ಅಸಲಿ ಅಗ್ನಿ ಪರೀಕ್ಷೆ – ಮಹಾಘಟಬಂಧನ್‍ಗೆ ತಡೆ ಹಾಕ್ತಾರಾ ಪ್ರಧಾನಿ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಾ ಎಂಬ ಈ ಪ್ರಶ್ನೆಗೆ ಲೋಕಸಭಾ ಚುನಾವಣೆಯಲ್ಲಿ ಬಾಕಿ ಉಳಿದಿರುವ ನಾಲ್ಕು ಹಂತಗಳು ಉತ್ತರ ನೀಡಲಿವೆ.

    ಈಗಾಗ್ಲೇ ಮೂರು ಹಂತಗಳಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ 302 ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಿದೆ. 230 ಲೋಕಸಭಾ ಕ್ಷೇತ್ರಗಳಿಗಷ್ಟೇ ಮತದಾನ ಬಾಕಿಯಿದೆ. ನಾಳೆ ಲೋಕಸಭೆಯ ಐದನೇ ಹಂತದ ಮತದಾನ ನಡೆಯಲಿದೆ.

    ಬಿಜೆಪಿ ಬಾಹುಳ್ಯದ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಸೋಮವಾರದಿಂದ ಲೋಕ ಕದನಕ್ಕೆ ಚಾಲನೆ ಸಿಗಲಿದ್ದು ಒಡಿಶಾ, ಮಹಾರಾಷ್ಟ್ರದಲ್ಲಿ ಮತದಾನ ಮುಕ್ತಾಯವಾಗಲಿದೆ. ಬಿಹಾರ-5, ಜಾರ್ಖಂಡ್-3, ಮಧ್ಯಪ್ರದೇಶ, ಒಡಿಶಾ-6, ಪಶ್ಚಿಮ ಬಂಗಾಳ, ಮಹಾರಾಷ್ಟ್ರ -17, ರಾಜಸ್ಥಾನ, ಉತ್ತರಪ್ರದೇಶ-ತಲಾ 13 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

    ನಾಳೆಯಿಂದ ಮತದಾನ ಆಗುತ್ತಿರುವ ಕ್ಷೇತ್ರಗಳನ್ನು ಕಳೆದ ಬಾರಿ ಬಿಜೆಪಿ ಗೆದ್ದುಕೊಂಡಿತ್ತು. ಮತ್ತೆ ಅಧಿಕಾರಕ್ಕೆ ಬರಬೇಕಾದ್ರೆ ಈ ಕ್ಷೇತ್ರಗಳನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೋದಿಯವರು ಮಹಾಘಟಬಂಧನ್ ಗೆ ತಡೆ ಹಾಕ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ಸಂಕಷ್ಟದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್

    ಸಂಕಷ್ಟದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್

    ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ್ ಸಂಕಷ್ಟದಲ್ಲಿ ಸಿಲುಕಿದ್ದಾರೆ.

    ಅನುಮತಿ ಪಡೆಯದೆ ಎರಡು ಕಡೆ ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಆದೇಶದ ಮೇರೆಗೆ ದೆಹಲಿ ಪೊಲೀಸರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ಇದಕ್ಕೂ ಮೊದಲು ಗೌತಮ್ ಗಂಭೀರ್ ವಿರುದ್ಧ ಪೂರ್ವ ದೆಹಲಿಯ ಆಪ್ ಅಭ್ಯರ್ಥಿ ಅತಿಶಿ ಮಾರಲೇನಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 155(2) ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಬೇಕೆಂದು ಅತಿಶಿ, ಕೋರ್ಟ್ ಮೊರೆ ಹೋಗಿದ್ದರು.

  • ಕಾಶಿ ವಿಶ್ವನಾಥನ ನಾಡಲ್ಲಿ ‘ನಮೋ’ ಕಹಳೆ-ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ

    ಕಾಶಿ ವಿಶ್ವನಾಥನ ನಾಡಲ್ಲಿ ‘ನಮೋ’ ಕಹಳೆ-ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ

    ನವದೆಹಲಿ: ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ವಾರಣಾಸಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ನಾಳೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ.

    ದೇಶದ ಪ್ರಮುಖ ಪುಣ್ಯಕ್ಷೇತ್ರ, ಪುರಾತನ ನಗರ, ಪಾವನ ಧಾಮ ವಾರಣಾಸಿ. 2014ರ ಲೋಕಸಭೆ ಚುನಾವಣೆಯಲ್ಲಿ ವಡೋದರ ಮತ್ತು ವಾರಣಾಸಿಯಿಂದ ಕಣಕ್ಕೆ ಧುಮುಕಿದ್ದ ಮೋದಿ ಎರಡೂ ಕಡೆ ಭರ್ಜರಿಯಾಗಿ ಗೆದ್ದಿದ್ದರು. ನಂತರ ವಡೋದರಾ ಬಿಟ್ಟುಕೊಟ್ಟು ವಾರಣಾಸಿಯನ್ನು ಉಳಿಸಿಕೊಂಡಿದ್ದರು. ಈ ಬಾರಿ ಕೇವಲ ವಾರಣಾಸಿಯಿಂದ ಮಾತ್ರ ನರೇಂದ್ರ ಮೋದಿ ಕಣಕ್ಕೆ ಧುಮುಕಿದ್ದಾರೆ. ಹೀಗಾಗಿ ವಾರಣಾಸಿಯಲ್ಲಿ ಈಗ ಕಾಶಿ ವಿಶ್ವನಾಥನಿಗಿಂತ ಹೆಚ್ಚು ಮೋದಿಯೇ ಸದ್ದು ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಇವತ್ತು ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಬಿಹಾರದಲ್ಲಿನ ಚುನಾವಣಾ ಪ್ರಚಾರದ ಬಳಿಕ ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಗೆ ಆಗಮಿಸಲಿದ್ದಾರೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆಯ ಬಳಿಕ ಅದ್ಧೂರಿ ರೋಡ್ ಶೋಗೆ ಚಾಲನೆ ನೀಡಲಿದ್ದಾರೆ. ಬಳಿಕ ಲಂಕಾ ಘಾಟ್, ಅಸ್ಸಿ ಘಾಟ್, ಸೋನಾರ್‍ಪುರ, ಮದನಪುರ್, ಗ್ವಾಡಾಲಿಯಾ ಮೂಲಕ ಸಾಗಲಿರುವ ರೋಡ್ ಶೋ ಅಶ್ವಮೇಧ್ ಘಾಟ್‍ನಲ್ಲಿ ಸಂಜೆ ಗಂಗಾರತಿಯೊಂದಿಗೆ ಅಂತ್ಯವಾಗಲಿದೆ.

    ದೇಶವೇ ಬೆರಗುಗಣ್ಣಿನಿಂದ ನೋಡುತ್ತಿರುವ ವಾರಣಾಸಿಯಲ್ಲಿ ರೋಡ್ ಶೋ ಯಶಸ್ವಿಗೊಳಿಸಲು ಬಿಜೆಪಿ ಚಾಣಾಕ್ಯ ಅಮಿತ್ ಶಾ ಪ್ಲಾನ್ ರೂಪಿಸಿದ್ದು, ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತೆರಳಿ ಆಹ್ವಾನಿಸುತ್ತಿದ್ದಾರೆ. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮತ್ತೊಮ್ಮೆ ಮೋದಿಗೆ ಅವಕಾಶ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

    ರೋಡ್ ಶೋ ಬಳಿಕ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿಲಿದ್ದು, ಅದಕ್ಕೂ ಮುನ್ನ ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಶಕ್ತಿ ಪ್ರದರ್ಶನ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ಬಿಹಾರದ ಸಿಎಂ ನಿತಿಶ್ ಕುಮಾರ್, ರಾಮವಿಲಾಸ್ ಪಾಸ್ವಾನ್ ಸೇರಿದಂತೆ ಬಿಜೆಪಿ ಮತ್ತು ಎನ್‍ಡಿಎ ಒಕ್ಕೂಟದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಈ ಮೂಲಕ ವಾರಣಾಸಿ ಇವತ್ತು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ.

  • ಟೀ ಕುಡಿದ ಅಭಿಗೆ ನಿಖಿಲ್ ಕುಮಾರ್ ಟಾಂಗ್- ಸ್ನೇಹಿತರಿಬ್ಬರ ಕದನಕ್ಕೆ ಅಖಾಡವಾದ ಸಕ್ಕರೆನಾಡು

    ಟೀ ಕುಡಿದ ಅಭಿಗೆ ನಿಖಿಲ್ ಕುಮಾರ್ ಟಾಂಗ್- ಸ್ನೇಹಿತರಿಬ್ಬರ ಕದನಕ್ಕೆ ಅಖಾಡವಾದ ಸಕ್ಕರೆನಾಡು

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣೆ ಮುಗಿದರೂ ಚುನಾವಣೆಯ ಕಾವು ಕಡಿಮೆಯಾದಂತೆ ಕಾಣುತ್ತಿಲ್ಲ. ಯಾಕಂದ್ರೆ ಚುನಾವಣೆ ಮುಗಿದ ನಂತರ ಅಭಿಷೇಕ್ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಒಬ್ಬರಿಗೊಬ್ಬರು ಟಾಂಗ್ ಕೊಡುತ್ತಿದ್ದಾರೆ ಅನ್ನೋ ಗುಸು ಗುಸು ಈಗ ಮಂಡ್ಯದಲ್ಲಿ ಕೇಳಿ ಬರುತ್ತಿದೆ.

    ಚುನಾವಣೆ ಬಳಿಕ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಸಿಂಗಾಪುರ್‍ಗೆ ಹೋಗ್ತಾರೆ ಎಂಬ ಗಾಸಿಪ್‍ಗಳೂ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗೇ ಸದ್ದು ಮಾಡಿದ್ದವು. ಈ ಗಾಸಿಪ್‍ಗೆಲ್ಲ ತಮ್ಮ ಪ್ರತಿಸ್ಪರ್ಧಿಗಳೇ ಕಾರಣ ಎಂದು ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದ ಅಭಿಷೇಕ್ ಚುನಾವಣೆ ಮುಗಿದ ನಂತರ ಮಂಡ್ಯದ ಮಹಾವೀರ ಸರ್ಕಲ್‍ಗೆ ಬಂದು ಟೀ ಕುಡಿತೀನಿ ಅಂತಾ ಸವಾಲ್ ಹಾಕಿದ್ದರು. ಅದರಂತೆಯೇ ಚುನಾವಣೆ ಮುಗಿದ ನಂತರ ತಾವು ಹೇಳಿದಂತೆ ಮಹಾವೀರ ಸರ್ಕಲ್‍ನಲ್ಲಿ ಟೀ ಕುಡಿದು ನಾನು ಎಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಅಂತಾ ನಿಖಿಲ್‍ಗೆ ಟಾಂಗ್ ಕೊಟ್ಟಿದ್ದರು

    ಅಂಬಿ ಪುತ್ರ ಅಭಿ ಇಷ್ಟು ಹೇಳಿದ್ದೇ ಹೇಳಿದ್ದು. ಅಭಿಷೇಕ್ ಬೆಂಬಲಿಗರು ನಮ್ಮ ಅಂಬಿ ಅಣ್ಣನ ಮಗ ಇಲ್ಲೇ ಇದ್ದಾರೆ. ಕುಮಾರಣ್ಣನ ಪುತ್ರನೇ ಚುನಾವಣೆ ಮುಗಿಸಿ ವಿದೇಶಕ್ಕೆ ಹೋಗಿದ್ದಾರೆ ಅಂತಾ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾತನಾಡತೊಡಗಿದರು. ಇಷ್ಟೆಲ್ಲ ನಡೆದ ಮೇಲೆ ಏಕಾಏಕಿ ಮಂಡ್ಯದಲ್ಲಿ ಕಾಣಿಸಿಕೊಂಡ ನಿಖಿಲ್, ನಾನು ರಾಜ್ಯ ಬಿಟ್ಟು ಎಲ್ಲೂ ಹೋಗಿಲ್ಲ. ನನ್ನ ಬಗ್ಗೆ ಇಲ್ಲ ಸಲ್ಲದ ಗಾಸಿಪ್ ಹಬ್ಬಿಸೋದನ್ನ ನನ್ನ ವಿರೋಧಿಗಳು ಇನ್ನೂ ಬಿಟ್ಟಿಲ್ಲ. ಅಷ್ಟೇ ಅಲ್ಲದೇ ನಾನು ಈ ಹಿಂದೆ ಹೇಳಿದಂತೆ ಮಂಡ್ಯದಲ್ಲೇ ಜಮೀನು ಖರೀದಿಸಿ, ಮನೆ ಕಟ್ಟಿ ವಾಸ ಮಾಡುತ್ತೇನೆ ಅಂದ್ರು.

  • ಗಂಭೀರ್ ವಿಕೆಟ್ ಪಡೆಯಲು ಹೋಗಿ ಬೌಲ್ಡ್ ಆದ ಆಪ್!

    ಗಂಭೀರ್ ವಿಕೆಟ್ ಪಡೆಯಲು ಹೋಗಿ ಬೌಲ್ಡ್ ಆದ ಆಪ್!

    ನವದೆಹಲಿ: ರಾಜಕಿಯದ ಪಿಚ್‍ನಲ್ಲಿ ಕ್ರಿಕೆಟಿಗ ಗಂಭೀರ್ ಅವರ ವಿಕೆಟ್ ಪಡೆಯಲು ಯತ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ ಪಕ್ಷ ತಾನೇ ಬೌಲ್ಡ್ ಔಟ್ ಆಗಿದೆ.

    ಕ್ರಿಕೆಟಿಗ ಗೌತಮ್ ಗಂಭೀರ್ ಚುನಾವಣಾ ಆಖಾಡಕ್ಕೆ ಇಳಿಯುತ್ತಿದ್ದಂತೆ ದೆಹಲಿ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಭೀರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

    ಬಿಜೆಪಿ ಅಭ್ಯರ್ಥಿಯಾಗಿರುವ ಗೌತಮ್ ಗಂಭೀರ್ ಸಲ್ಲಿಸಿರುವ ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಆಪ್ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಗಂಭೀರ್ ನಾಮಪತ್ರ ಸಲ್ಲಿಸಿದ ದಾಖಲಾತಿಗಳ ನೋಟರಿ ಸ್ಟಾಂಪ್ ಔಟ್ ಡೇಟ್ ಆಗಿದೆ ಎಂದು ಆಪ್ ಆರೋಪಿಸಿತ್ತು.

    ಆಪ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್ ಪರ ವಕೀಲ, ನೋಟರಿ ಸ್ಟಾಂಪ್ ಸರಿಯಾಗಿದೆ. ಆಪ್ ರೋಟರಿ ರಿಜಿಸ್ಟರ್ ನಂಬರ್ ನೋಡಿ ಆರೋಪ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೊನೆಗೆ ಗಂಭೀರ್ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಸ್ವೀಕಾರ ಮಾಡಿದ್ದಾರೆ.

    ಪೂರ್ವ ದೆಹಲಿಯಲ್ಲಿ ಗೌತಮ್ ಗಂಭೀರ್ ಎದುರಾಳಿಯಾಗಿ ಆಪ್ ನಿಂದ ಅತಿಶ್ ಮರ್ಲೆನಾ ಕಣಕ್ಕಿಳಿದಿದ್ದಾರೆ. ಗೌತಮ್ ಗಂಭೀರ್ ಉಮೇದುವಾರಿಕೆಯಲ್ಲಿ 12 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಮಾತನಾಡಿದ್ದ ಗೌತಮ್ ಗಂಭೀರ್, ನಾನು ತುಂಬಾ ಉತ್ಸುಕನಾಗಿದ್ದು, ದೇಶಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ. ದೇಶಕ್ಕಾಗಿ ಒಳ್ಳೆಯದನ್ನು ಮಾಡುವದಕ್ಕಾಗಿ ಬಿಜೆಪಿ ಸೇರಿದ್ದೇನೆ ಎಂದು ಹೇಳಿದ್ದರು.

  • ಕಾಂಗ್ರೆಸ್ ಬೆನ್ನಿಗೆ ಇರೀತಾ ದೋಸ್ತಿ ಜೆಡಿಎಸ್ – ಬಿಜೆಪಿಗೆ ವೋಟ್ ಹಾಕುವಂತೆ ಹಣ ಹಂಚಿದ್ರಾ ಜೆಡಿಎಸ್ ಮುಖಂಡ!

    ಕಾಂಗ್ರೆಸ್ ಬೆನ್ನಿಗೆ ಇರೀತಾ ದೋಸ್ತಿ ಜೆಡಿಎಸ್ – ಬಿಜೆಪಿಗೆ ವೋಟ್ ಹಾಕುವಂತೆ ಹಣ ಹಂಚಿದ್ರಾ ಜೆಡಿಎಸ್ ಮುಖಂಡ!

    ಚಾಮರಾಜನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ.

    ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ.

    ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ವಿರುದ್ಧ ಮತ ಹಾಕುವಂತೆ ಹೇಳಿ ಮಂಜುನಾಥ್ ಅವರು ಪ್ರತಿ ಬೂತ್‍ಗೆ 35 ಸಾವಿರ ರೂಪಾಯಿ ಹಂಚಿದ್ದಾರೆ. ಮುಖಂಡನ ಮಾತು ಕೇಳಿ ಜನರು ಕೂಡ ಬಿಜೆಪಿಗೆ ಮತ ಹಾಕಿದ್ದಾರೆ. ಹೀಗಾಗಿ ಚಾಮರಾಜನಗರದ ಕಾಂಗ್ರೆಸ್ ಆರ್.ಧ್ರುವನಾರಾಯಣ್‍ಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದೆ.

    ತಮ್ಮ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮಂಜುನಾಥ್, ನನ್ನ ಮೇಲೆ ಸುಳ್ಳು ಆರೋಪ ಕೇಳಿಬರುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಜುನಾಥ್ ಅವರು ಹನೂರು ಅಸೆಂಬ್ಲಿಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿ ಸೋತಿದ್ದರು.

  • ಯಾದಗಿರಿ: ಇವಿಎಂ ಯಂತ್ರವನ್ನು ಧ್ವಂಸಗೊಳಿಸಿ ಕಾಂಗ್ರೆಸ್ ಏಜೆಂಟ್ ಪುಂಡಾಟ

    ಯಾದಗಿರಿ: ಇವಿಎಂ ಯಂತ್ರವನ್ನು ಧ್ವಂಸಗೊಳಿಸಿ ಕಾಂಗ್ರೆಸ್ ಏಜೆಂಟ್ ಪುಂಡಾಟ

    ಯಾದಗಿರಿ: ಕಾಂಗ್ರೆಸ್ ಏಜೆಂಟ್ ಓರ್ವ ಮತಗಟ್ಟೆಯಲ್ಲಿ ಇವಿಎಂ ಯಂತ್ರವನ್ನು ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಸುರಪುರ ತಾಲೂಕಿನ ಕರಿಬಾವಿ ಗ್ರಾಮದ ಮತಗಟ್ಟೆ 31ರಲ್ಲಿ ಕಾಂಗ್ರೆಸ್ ಏಜೆಂಟ್ ಪುಂಡಾಟ ಮೆರೆದಿದ್ದಾನೆ.

    ಗುರುನಾಥ್ ಎಂಬಾತನೇ ಇವಿಎಂ ಧ್ವಂಸಗೊಳಿಸಿದ ಕಾಂಗ್ರೆಸ್ ಚುನಾವಣೆ ಏಜೆಂಟ್. ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ್ ಪರ ನೇಮಕವಾಗಿದ್ದ ಗುರುನಾಥ್ ಚುನಾವಣೆ ಏಜೆಂಟ್ ನಾಗಿ ಮತಗಟ್ಟೆಯಲ್ಲಿ ನಿಯೋಜನೆಗೊಂಡಿದ್ದ.

    ಮತಗಟ್ಟೆಯಲ್ಲಿ ಬಿಜೆಪಿ ಏಜೆಂಟ್ ಮತದಾರರಿಗೆ ಕಮಲದ ಗುರುತಿಗೆ ಮತ ಹಾಕಿ ಎಂದು ಹೇಳುತ್ತಿದ್ದಾನೆ ಎಂದು ಆರೋಪಿಸಿ ಇವಿಎಂ ಯಂತ್ರವನ್ನು ಧ್ವಂಸಗೊಳಿಸಿದ್ದಾನೆ. ಇವಿಎಂ ಯಂತ್ರದಲ್ಲಿನ ಕಂಟ್ರೋಲ್ ಯೂನಿಟ್ ಧ್ವಂಸವಾಗಿತ್ತು.

    ಕೂಡಲೇ ಚುನಾವಣೆ ಸಿಬ್ಬಂದಿ ಕೆಲ ಸಮಯ ಮತದಾನ ನಿಲ್ಲಿಸಿ ಕಂಟ್ರೋಲ್ ಯುನಿಟ್ ಸರಿಪಡಿಸಿ ಮತದಾನ ಪುನಾರಂಭಿಸಿದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಗುರುನಾಥ್ ನನ್ನು ಬಂಧಿಸಿದ್ದಾರೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ವಿವಿ ಪ್ಯಾಟ್‍ನಲ್ಲಿ ಸೇರಿಕೊಂಡ ನಾಗ!

    ವಿವಿ ಪ್ಯಾಟ್‍ನಲ್ಲಿ ಸೇರಿಕೊಂಡ ನಾಗ!

    ತಿರುವನಂತಪುರಂ: ಹಾವುಗಳು ಚಿಕ್ಕ ಸ್ಥಳ ಸಿಕ್ಕರೂ ಸಾಕು ಸೇರಿಕೊಳ್ಳುತ್ತವೆ. ಬೈಕ್, ಕಾರ್ ಡಿಕ್ಕಿ, ಗ್ಯಾಸ್ ಸಿಲಿಂಡರ್ ಕೆಳಗೆ, ಶೂಗಳಲ್ಲಿ ಹೀಗೆ ಹಾವುಗಳು ಎಲ್ಲೆಂದರಲ್ಲಿ ಸೇರಿಕೊಳ್ಳುತ್ತವೆ. ಇದೀಗ ಕೇರಳದ ಕಣ್ಣೂರಿನ ಮತಗಟ್ಟೆಯ ವಿವಿ ಪ್ಯಾಟ್‍ನಲ್ಲಿ ಹಾವು ಸೇರಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿ ಮಾಡಿತ್ತು.

    ಕಣ್ಣೂರು ಲೋಕಸಭಾ ಕ್ಷೇತ್ರದ ಮಯ್ಯಿಲ್ ಕಂದಕ್ಕಯಿ ನಿರ್ವಾಚನದ ಬೂತ್ ನಲ್ಲಿ ಇಂದು ಬೆಳಗ್ಗೆ ವಿವಿ ಪ್ಯಾಟ್ ತೆರೆಯುತ್ತಿದ್ದಂತೆ ಚಿಕ್ಕ ಹಾವು ಕಾಣಿಸಿಕೊಂಡಿತ್ತು. ಕೂಡಲೇ ಚುನಾವಣಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಹಾವನ್ನು ಓಡಿಸಿ ಮತದಾನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

    ಕನ್ನೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ಪಿ.ಕೆ.ಶ್ರೀಮತಿ (ಸಿಪಿಐ+ಎಲ್‍ಡಿಎಫ್) ಮತ್ತು ಕೆ.ಸುರೇಂದ್ರನ್ (ಕಾಂಗ್ರೆಸ್+ಯುಡಿಎಫ್) ಸ್ಪರ್ಧೆ ಮಾಡಿದ್ದಾರೆ. ಕೇರಳದ ಎಲ್ಲ 20 ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.