Tag: ಲೋಕಸಭೆ ಅಧಿವೇಶನ

  • Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    – ನೂತನ ಸಂಸದರಿಗೆ ಹೃದಯಪೂರ್ವಕ ಸ್ವಾಗತ ಕೋರಿದ ಮೋದಿ

    ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Session) ಸೋಮವಾರ (ಜೂ.24) ಆರಂಭಗೊಂಡಿದ್ದು, ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ (Bhartruhari Mahtab) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣ ವಚನ ಬೋಧಿಸಿದರು. ನಂತರ ಸಂಸತ್‌ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಾರಣಾಸಿ ಕ್ಷೇತ್ರದ ಸಂಸರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಅಧಿವೇಶನದ ಮೊದಲ ದಿನವಾದ ಸೋಮವಾರ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ 264 ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ.

    ಜೂನ್ 27 ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆ ಜೂನ್ 28 ರಂದು ಪ್ರಾರಂಭವಾಗುತ್ತದೆ. ಜುಲೈ 2 ಅಥವಾ 3 ರಂದು ಪ್ರಧಾನಿ ಮೋದಿ ಚರ್ಚೆಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ. ಬಳಿಕ ಎರಡೂ ಸದನಗಳು ಮುಂದೂಡಿಕೆಯಾಗಲಿದ್ದು ಕೇಂದ್ರ ಬಜೆಟ್ ಮಂಡನೆಗಾಗಿ ಜುಲೈ 22 ರಂದು ಮತ್ತೆ ಸೇರಲಿವೆ.

    ಮೋದಿ ಪ್ರತಿಕ್ರಿಯೆ:
    ಸಂಸತ್‌ ಪ್ರವೇಶಿಸುವ ಮುನ್ನ 18ನೇ ಲೋಕಸಭೆ ಅಧಿವೇಶನ ಮೊದಲ ದಿನದ ಹಿನ್ನೆಲೆ ಕಲಾಪಕ್ಕೂ ಮುನ್ನ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ, ಇದು ಅದ್ಭುತವಾದ ದಿನವಾಗಿದೆ. ಸ್ವಾತಂತ್ರ‍್ಯದ ನಂತರ ಮೊದಲ ಬಾರಿಗೆ, ನಮ್ಮದೇ ಹೊಸ ಸಂಸತ್ತಿನ ಕಟ್ಟಡದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯುತ್ತಿದೆ. ಇದು ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆಯುತ್ತಿತ್ತು. ಈ ಮಹತ್ವದ ದಿನದಂದು, ಹೊಸದಾಗಿ ಚುನಾಯಿತರಾದ ಎಲ್ಲಾ ಸಂಸದರಿಗೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ ಎಂದು ಹೇಳಿದರು.

    ಮುಂದುವರಿದು 18ನೇ ಲೋಕಸಭೆ ಕಲಾಪ ಆರಂಭವಾಗುತ್ತಿದ್ದು, ವಿಶ್ವದ ಅತಿದೊಡ್ಡ ಚುನಾವಣೆಯನ್ನು ಅತ್ಯಂತ ಅದ್ಧೂರಿ ಮತ್ತು ವೈಭವಯುತವಾಗಿ ನಡೆಸಲಾಯಿತು. ಈ ಚುನಾವನೆಯು ಬಹಳ ಮಹತ್ವದ್ದಾಗಿತ್ತು. ದೇಶದ ಜನರು ಸತತ 3ನೇ ಬಾರಿಗೆ ಸೇವೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ ಎಂದು ಶ್ಲಾಘಿಸಿದರು.

  • Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ

    Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ

    ನವದೆಹಲಿ: ಮಂಗಳವಾರದಿಂದ ಬಜೆಟ್ ಅಧಿವೇಶನ (Budget Session) ಪ್ರಾರಂಭವಾಗುತ್ತಿದ್ದು, ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ ಐದನೇ ಬಾರಿ ಬಜೆಟ್ (Budget) ಮಂಡಿಸಲಿದ್ದಾರೆ.

    2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸತ್ ಭವನದಲ್ಲಿಂದು ಸರ್ವಪಕ್ಷ ಸಭೆ ಕರೆದಿತ್ತು. ಲೋಕಸಭೆ ಉಪ ನಾಯಕ ರಾಜನಾಥ್ ಸಿಂಗ್ (Rajnath Singh), ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ನೇತೃತ್ವದಲ್ಲಿ ನಡೆದ ಸಭೆಗೆ, ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಮಾರೋಪ ಸಮಾರಂಭದ ಕಾರಣ ಕಾಂಗ್ರೆಸ್ ನಾಯಕರು ಗೈರಾಗಿದ್ದರು. ಉಳಿದಂತೆ, ಡಿಎಂಕೆ, ಟಿಎಂಸಿ, ಬಿಆರ್‌ಎಸ್‌, ವೈಎಸ್‍ಆರ್ ಕಾಂಗ್ರೆಸ್, ಜೆಡಿಯು, ಶಿವಸೇನಾ ಸೇರಿ 27 ಪಕ್ಷಗಳ 37 ನಾಯಕರು ಪಾಲ್ಗೊಂಡಿದ್ರು. ಸುಗಮ ಕಲಾಪಕ್ಕೆ ಅವಕಾಶ ನೀಡ್ಬೇಕೆಂದು ವಿಪಕ್ಷಗಳಿಗೆ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಕೋರಿದ್ರು. ಇದನ್ನೂ ಓದಿ: ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ – ಅವರಿಗೆ ಭಯವಿದೆ: ರಾಹುಲ್ ಗಾಂಧಿ

    ಈ ನಡುವೆ ಹಿಂಡನ್‍ಬರ್ಗ್ ವರದಿಯ ಚರ್ಚೆಗೆ ಅವಕಾಶ ನೀಡ್ಬೇಕೆಂದು ಎಎಪಿ ಆಗ್ರಹಿಸಿತು. ಜಾತಿ ಗಣತಿಗೆ ವೈಎಸ್‍ಆರ್ ಕಾಂಗ್ರೆಸ್ ಒತ್ತಾಯಿಸಿತು. ಈ ಮಧ್ಯೆ, ನಾಳೆ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳು ಮಾಡುವ ಭಾಷಣವನ್ನು ಬಹಿಷ್ಕರಿಸಲು ಬಿಆರ್‌ಎಸ್‌ ನಿರ್ಧರಿಸಿದೆ. ಮಂಗಳವಾರ ಸಂಜೆ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಒಟ್ಟು ಎರಡು ಹಂತದಲ್ಲಿ ಈ ಅಧಿವೇಶನ ನಡೆಯಲಿದೆ. ನಾಳೆಯಿಂದ ಫೆಬ್ರವರಿ 13 ರವರೆಗೆ ಮತ್ತು ಕೊನೆಯ ಹಂತ ಮಾರ್ಚ್ 13 ರಿಂದ ಏಪ್ರಿಲ್ 6ರವರೆಗೆ ಅಧಿವೇಶನ ನಡೆಯಲಿದೆ. ಇದನ್ನೂ ಓದಿ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ: ನಿತೀಶ್ ಕುಮಾರ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k