Tag: ಲೋಕಸಭೆ ಚುನಾವಣೆ

  • ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

    ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

    ಬೆಂಗಳೂರು: ಇಂದು ಬಿಜೆಪಿ ಶಾಸಕ ಶ್ರೀರಾಮುಲು, ನಟ ಸದೀಪ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಪುಸ್ತಕವನ್ನು ಸುದೀಪ್ ಅವರಿಗೆ ನೀಡಿದ್ದಾರೆ.

    ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿರುವ ಶ್ರೀರಾಮುಲು, ರಾಯಚೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ನಿಲ್ಲುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಮತ್ತು ರಾಜುಗೌಡ ಪರವಾಗಿ ಪ್ರಚಾರ ಮಾಡಿದ್ರು. ಬಳ್ಳಾರಿ, ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹುಡುಕಾಟ ನಡೆಸಿದ್ದು, ಶ್ರೀರಾಮುಲು ಅವರು ಗೆಳೆಯ ಸುದೀಪ್ ಮುಂದೆ ಚುನಾವಣೆಗೆ ನಿಲ್ಲುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದಾರಂತೆ.

    ಸುದೀಪ್ ಬಿಜೆಪಿ ನೀಡಿರುವ ಆಫರ್ ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸುದೀಪ್ ಅವರಿಗೆ ಎಲ್ಲ ಪಕ್ಷಗಳಿಂದಲೂ ಟಿಕೆಟ್ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಸುದೀಪ್ ರಾಜಕೀಯ ಪ್ರವೇಶಿಸಲು ಹಿಂದೇಟು ಹಾಕಿದ್ದರು.

    ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ನಾಯಕರು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ನಿವಾಸಕ್ಕೆ ತೆರಳಿ ಮೋದಿ ಸರ್ಕಾರದ ಸಾಧನೆಯ ಕಿರು ಹೊತ್ತಿಗೆಯನ್ನು ನೀಡಿ ಬಂದಿದ್ದರು. ಈ ಬಗ್ಗೆ ಲತಾ ಮಂಗೇಶ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿಕೊಂಡು `ಎಲ್ಲ ನಾಯಕರನ್ನು ಭೇಟಿಯಾಗಿದ್ದು ಖುಷಿ ತಂದಿದೆ’ ಎಂದು ಬರೆದುಕೊಂಡಿದ್ದರು.

    ಲೋಕಸಭಾ ಚುನಾವಣೆ ಪ್ರಚಾರದ ಕೆಲಸದಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರು ಈಗಾಗಲೇ ತೊಡಗಿಕೊಂಡಿದ್ದು, ನಟಿ, ನಟಿ, ಉದ್ಯಮಿಗಳಿಗೆ ಎನ್‍ಡಿಎ ಸರ್ಕಾರದ ಸಾಧನೆ ತಿಳಿಸುವ ಕಿರು ಹೊತ್ತಿಗೆಯನ್ನು ನೀಡುತ್ತಿದ್ದಾರೆ.

  • ಮೈತ್ರಿ ಸರ್ಕಾರದ ರಚನೆ ಸುಳಿವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕ ಚಿದಂಬರಂ

    ಮೈತ್ರಿ ಸರ್ಕಾರದ ರಚನೆ ಸುಳಿವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕ ಚಿದಂಬರಂ

    ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆಯ ತಂತ್ರ ಹಾಗೂ ಭರವಸೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ತೆರೆದಿಟ್ಟಿದ್ದಾರೆ.

    ದೇಶದ 12 ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಸದ್ಯ 48 ಜನ ಸಂಸದರನ್ನು ನಾವು ಹೊಂದಿದ್ದೇವೆ. ಈ ಸಂಖ್ಯೆ 2019ರ ಲೋಕಸಭೆ ಚುನಾವಣೆಯಲ್ಲಿ ಮೂರುಪಟ್ಟು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ)ಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸೀಟ್ ಪಡೆಯುವ ಮೂಲಕ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಹೀಗಾಗಿ ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರ ಮನವೊಲಿಸಿ ಮೈತ್ರಿ ಸರ್ಕಾರ ರಚಿಸುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

    ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿಕೊಂಡು ಆಡಳಿತ ನಡೆಸುತ್ತಿವೆ. ಲೋಕಸಭೆ ಚುನಾವಣೆಗೂ ಎರಡೂ ಪಕ್ಷಗಳ ನಡುವೆ ಮೈತ್ರಿ ಆಗಲಿದೆ ಎಂದು ಹೇಳಲಾಗಿದೆ. ಆದ್ರೆ ಯಾವ ಕ್ಷೇತ್ರಗಳ ಲೆಕ್ಕಾಚಾರದ ಬಗ್ಗೆ ಚರ್ಚೆಗಳು ಎರಡೂ ಪಕ್ಷದಲ್ಲಿ ನಡೆಯುತ್ತಿವೆ.

  • ಬಿಗ್ ಬುಲೆಟಿನ್ | 20-07-2018

    ಬಿಗ್ ಬುಲೆಟಿನ್ | 20-07-2018

    https://www.youtube.com/watch?v=dZhL5fYMyyE

  • ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದಲ್ಲಿ ವಿರೋಧವಿಲ್ಲ: ದಿನೇಶ್ ಗುಂಡೂರಾವ್

    ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದಲ್ಲಿ ವಿರೋಧವಿಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಲೋಕಸಭೆ ಚುನಾವಣೆಯ ಎದುರಿಸುವಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿಗೆ ನಮ್ಮ ಪಕ್ಷದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಪಕ್ಷದ ಮಟ್ಟದಲ್ಲಿ ಇನ್ನೂ ಚರ್ಚೆಯಾಗಿಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ ಎನ್ನುವ ವಿಚಾರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕೂಡಾ ತಿಳಿಸಿದ್ದಾರೆ. ಶನಿವಾರ ನಡೆಯಲಿರುವ ಸಭೆಯಲ್ಲಿ ಪಕ್ಷಕ್ಕೆ ಸಂಬಂಧಿಸಿದ ವಿಚಾರಗಳು, ಮುಂದಿನ ಹಂತದ ನಿರ್ಧಾರಗಳು, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ ನಡೆಸುತ್ತೇವೆ ಎಂದರು.

    ನಾನು ಅಧ್ಯಕ್ಷನಾದ ಮೇಲೆ ಇದೇ ಮೊದಲ ಬಾರಿಗೆ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪ್ರಥಮ ಸಭೆ ನಡೆಯುತ್ತಿದೆ. ಪಕ್ಷದ ಬೆಳವಣಿಗೆಯ ಕುರಿತಾಗಿ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

  • ಕಾಂಗ್ರೆಸ್ ಜೆಡಿಎಸ್‍ಗೆ, ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್: ಹೆಚ್‍ಡಿಡಿಗೆ ಈಶ್ವರಪ್ಪ ಟಾಂಗ್

    ಕಾಂಗ್ರೆಸ್ ಜೆಡಿಎಸ್‍ಗೆ, ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್: ಹೆಚ್‍ಡಿಡಿಗೆ ಈಶ್ವರಪ್ಪ ಟಾಂಗ್

    ಕಲುಬುರಗಿ: ಕಾಂಗ್ರೆಸ್ ಜೆಡಿಎಸ್‍ಗೆ ಸರೆಂಡರ್ ಆಗಿದೆ, ಹಾಗೇ ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್ ಆಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವಕ್ಕೆ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದ ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ದೇವೇಗೌಡರ ಹೇಳಿಕೆಯಲ್ಲಿ ಏನೂ ಹೊಸತಿಲ್ಲ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಸ್ಪರ್ಧಿಸಲಿವೆ. ಇದಕ್ಕೆ ನಾವು ಸಿದ್ಧವಾಗಿದ್ದೇವೆ. ರಾಜ್ಯದಲ್ಲಿ 25 ಮತಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.

    ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಹುಲ್ ಗಾಂಧಿ ಅವರಿಗೆ ಪುಣ್ಯಾತ್ಮ ಎಂದಿದ್ದರು. ಈಗ ಪುಣ್ಯಾತ್ಮನ ಋಣ ತಿರಿಸಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಪುಣ್ಯಾತ್ಮ ಹೌದೋ, ಪಾಪಾತ್ಮ ಹೌದೋ ಎನ್ನುವುದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

  • ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಎದುರೇ ಭುಗಿಲೆದ್ದ ಸಮ್ಮಿಶ್ರ ಸರ್ಕಾರದ ಅಸಮಾಧಾನದ ಹೊಗೆ

    ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಎದುರೇ ಭುಗಿಲೆದ್ದ ಸಮ್ಮಿಶ್ರ ಸರ್ಕಾರದ ಅಸಮಾಧಾನದ ಹೊಗೆ

    ಚಿತ್ರದುರ್ಗ: ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಮೊಟ್ಟ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಈಶ್ವರ ಖಂಡ್ರೆ ಎದುರಲ್ಲೇ ಸಮ್ಮಿಶ್ರ ಸರ್ಕಾರದ ಅಸಮಧಾನದ ಹೊಗೆ ಭುಗಿಲೆದ್ದಿದೆ.

    ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ಸನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಕೂಗು ಸಭೆಯಲ್ಲಿ ಎದ್ದಿತ್ತು. ಇದನ್ನು ಶಮನಗೊಳಿಸಲು ನೂತನ ಕಾರ್ಯಧ್ಯಕ್ಷ ಖಂಡ್ರೆ ಅವರು, ನಮ್ಮ ಕ್ಷೇತ್ರ, ನಮ್ಮ ಪಕ್ಷ ಅದನ್ನು ಹೇಗೆ ಬಿಟ್ಟು ಕೊಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕೈಜೊಡಿಸುವ ಮಾತೇ ಇಲ್ಲ ಎಂದು ಹೇಳಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.

    ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿದೆ. ಆದರೂ ಸಮ್ಮಿಶ್ರ ಸರ್ಕಾರದಲ್ಲಿ ಬಹುಪಾಲು ನಮ್ಮದಾಗಿದೆ. ನಾವು 2019ರ ಲೋಕಸಭೆ ಚುನಾವಣೆಯಲ್ಲಿ ಪುಟಿದೇಳಬೇಕು. ರಾಜ್ಯದ 28 ಲೋಕಸಭೆ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಥವಾ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆಲ್ಲಬೇಕೆಂಬ ಉದ್ದೇಶದಿಂದ ಚುನಾವಣೆ ಮೈತ್ರಿ ಬಗ್ಗೆ ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲಿಯೇ ತೀರ್ಮಾನ ಮಾಡಲಿದ್ದಾರೆ. ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಅನ್ನಭಾಗ್ಯ ಯೋಜನೆ ಅಡಿ 7 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮಾಜಿ ಸಚಿವ ಆಂಜನೇಯ ಅವರನ್ನು ಕಡೆಗಣಿಸಲಾಗಿದೆ ಅಂತಾ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಶವಂತ್ ಆಕ್ಷೇಪ ವ್ಯಕ್ತಪಡಿಸಿದರು. ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಟಿಕೆಟ್ ನೀಡುಬೇಕು ಎಂದು ಮಾಜಿ ಜಿಲ್ಲಾಧ್ಯಕ್ಷ ಸೇತುರಾಂ ಕೂಡ ಆಗ್ರಹಿಸಿದರು.

  • 10 ವರ್ಷ ನನ್ನನ್ನು ಚುಚ್ಚಿದ್ರು, ಈಗ ಜನರೆ ನನ್ನ ಹಣೆಬರಹ ಬದಲಾಯಿಸಿದ್ರು: ಲಕ್ಷ್ಮೀ ಹೆಬ್ಬಾಳ್ಕರ್

    10 ವರ್ಷ ನನ್ನನ್ನು ಚುಚ್ಚಿದ್ರು, ಈಗ ಜನರೆ ನನ್ನ ಹಣೆಬರಹ ಬದಲಾಯಿಸಿದ್ರು: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಕಳೆದ 10 ವರ್ಷ ಕೆಲವರು ನನ್ನನ್ನು ವ್ಯಂಗ್ಯ ಮಾತುಗಳಿಂದ ಚುಚ್ಚಿದರು. ಆದರೆ ಈ ಭಾರೀ ಕ್ಷೇತ್ರ ಮತದಾರರು ನನ್ನ ಹಣೆಬರಹ ಬರೆದಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    2013ರ ವಿಧಾನಸಭೆ ಹಾಗೂ 2014ರ ಲೋಕಸಭೆ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋತಿದ್ದು, ಈ ಬಾರಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಗೆಲವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

    ಅಭಿನಂದನಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಚುನಾವಣೆಯಲ್ಲಿ ಸೋತಾಗ ಚುಚ್ಚು ಮಾತನಾಡಿದ್ದರು. ಆದರೆ ನಾನು ಹಾಗೇ ಮಾಡಲ್ಲ ಎಂದು ಪರೋಕ್ಷವಾಗಿ ಸಂಜಯ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

    ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಶಾಸಕಿ, ಯಾವುದೇ ಕಾರಣಕ್ಕೂ ನಾನು 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬೆಳಗಾವಿ ಗ್ರಾಮೀಣ ಮತಕ್ಷೇತ್ರ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.