Tag: ಲೋಕಾಸಭಾ ಚುನಾವಣೆ

  • ಲೋಕಸಮರಕ್ಕೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ! – ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

    ಲೋಕಸಮರಕ್ಕೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ! – ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

    ಬೆಂಗಳೂರು: ಲೋಕಸಭಾ ಚುನಾವಣೆ ಸಿದ್ಧತೆಗಳು ಆರಂಭಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಕಾಂಗ್ರೆಸ್ಸಿನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಮೈತ್ರಿ ರಾಜಕಾರಣದ ನಡುವೆಯೇ ಕ್ಷೇತ್ರಗಳ ಸಂಭಾವ್ಯ ಪಟ್ಟಿ ರಚನೆಯಾಗಿದ್ದು, ಹೈ ಕಮಾಂಡ್ ಮಟ್ಟದಲ್ಲಿ ಈ ಪಟ್ಟಿಗೆ ರಾಹುಲ್ ಗಾಂಧಿ ಸಮ್ಮತಿ ಸೂಚಿಸುತ್ತುರಾ ಎನ್ನುವುದನ್ನು ಕಾದು ನೋಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಕಳೆದ ಭಾರೀ ಗೆದ್ದು ಬಂದಿದ್ದ, 10 ಸಂಸದರಿಗೆ ಟಿಕೆಟ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

    ಇತ್ತ ತೀವ್ರ ಕುತುಹೂಲ ಮೂಡಿಸಿರುವ ಸಂಭಾವ್ಯ ಪಟ್ಟಿಯಲ್ಲಿ ಮೈಸೂರಿನಿಂದ ಸಿದ್ದರಾಮಯ್ಯ ಅವರ ಬೆಂಬಲಿಗ ವಿಜಯ್ ಶಂಕರ್ ಅಥವಾ ಸೂರಜ್ ಹೆಗ್ಡೆ ಹೆಸರನ್ನು ಕಳುಹಿಸಲಾಗಿದೆ. ಇಂದು ನಡೆದ ಸಭೆಯಲ್ಲಿ ಜೆಡಿಎಸ್ ಗೆ ಹೆಚ್ಚು ಸ್ಥಾನ ಕೊಡುವುದಕ್ಕೆ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದ್ದು, ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಬಿಟ್ಟು ಕೊಟ್ಟರೆ ಪಕ್ಷದ ಮೇಲೆ ಪರಿಣಾಮ ಬೀರುತ್ತೆ. ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಬಿಟ್ಟು ಕೊಡುವುದರಿಂದ ನಷ್ಟವೇ ಜಾಸ್ತಿ ಆಗಲಿದೆ ಎಂಬುವುದು ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್‍ಗೆ ಅರ್ಥವಾಗುವಂತೆ ಮನವರಿಗೆ ಮಾಡಿಕೊಡಿ ಎಂದು ರಾಜ್ಯ ನಾಯಕರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಹಾಲಿ ಸಂಸದರ ಕ್ಷೇತ್ರಗಳನ್ನ ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಸಾಧ್ಯವಿಲ್ಲ ಎನ್ನುವುದು ಕೂಡ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಮಂಡ್ಯ ಮತ್ತು ಹಾಸನ ನಾವು ಕೇಳಿಲ್ಲ. ಆದರೆ ಜೆಡಿಎಸ್ ತುಮಕೂರು, ಚಿಕ್ಕಬಳ್ಳಾಪುರ, ರಾಯಚೂರು ಕೇಳುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಮೈತ್ರಿ ಮಾಡಿಕೊಳ್ಳುತ್ತಿರುವುದು ಬಿಜೆಪಿ ಸೋಲಿಸುವುದಕ್ಕೆ ಹೊರತು, ಕಾಂಗ್ರೆಸ್ ಶಕ್ತಿ ಕಡಿಮೆ ಮಾಡಿಕೊಳ್ಳುವುದಕ್ಕಲ್ಲ ಎಂಬುವುದು ಹಲವು ನಾಯಕರ ಅಭಿಪ್ರಾಯವಾಗಿದೆ. ಅಲ್ಲದೇ ಇದು ಬಿಜೆಪಿಗೆ ಸಹಾಯಕವಾಗುವ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದಾರೆ.

    ಇದರ ನಡುವೆಯೇ ಕಾಂಗ್ರೆಸ್ ಪಕ್ಷ ಮುಸ್ಲಿಂ ಮುಖಂಡರು ಕೂಡ ತಮ್ಮ ಸಮುದಾಯಕ್ಕೆ 3 ಕ್ಷೇತ್ರಗಳನ್ನ ನೀಡುವ ಬಗ್ಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದ್ದು, ಬೆಂಗಳೂರು ಕೇಂದ್ರ, ಬೀದರ್, ಹಾವೇರಿ ಬಿಟ್ಟು ಕೊಡುವಂತೆ ಒತ್ತಾಯ ಹಾಕಿದ್ದಾರೆ. ಉಳಿದಂತೆ ಚಿಕ್ಕಬಳ್ಳಾಪುರ, ಮೈಸೂರು, ರಾಯಚೂರು, ತುಮಕೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕೂಡ ಕುತೂಹಲ ಮೂಡಿಸಿದೆ.

    ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಭೆಯಲ್ಲಿ ಹಾಲಿ ಸಂಸದರಾಗಿ ಇರುವ 12 ಕ್ಷೇತ್ರಗಳನ್ನು ಬಿಟ್ಟು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಒಂದೊಂದು ಕ್ಷೇತ್ರದಲ್ಲಿ ಇಬ್ಬರು, ಮೂವರು, 10 ಮಂದಿ ಆಕಾಂಕ್ಷಿಗಳು ಇದ್ದಾರೆ. ಮತ್ತೊಮ್ಮೆ ಚರ್ಚಿಸಿ ಮೂವರನ್ನ ಆಯ್ಕೆ ಮಾಡ್ತೇವೆ. ಆ ಬಳಿಕಷ್ಟೇ ಹೈಕಮಾಂಡ್ ಸ್ಕ್ರೀನಿಂಗ್ ಕಮಿಟಿಗೆ ಕಳಿಸುತ್ತೇವೆ ಎಂದರು. ಅಲ್ಲದೇ ಮಾರ್ಚ್ 10ರ ಒಳಗೆ ಅಂತಿಮ ಮೈತ್ರಿ ಪಟ್ಟಿ ಬಿಡುಗಡೆ ಆಗಲಿದೆ ಎಂದರು.

    ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಂತಿದೆ:
    ಬೀದರ್ – ಈಶ್ವರ್ ಖಂಡ್ರೆ, ಸಿಎಂ ಇಬ್ರಾಹಿಂ, ವಿಜಯ್ ಸಿಂಗ್
    ಬಾಗಲಕೋಟೆ – ಬಾಯಕ್ಕ ಮೇಟಿ, ವೀಣಾ ಕಾಶಪ್ಪನವರ್, ಅಜಯ್ ಕುಮಾರ್ ಸ್ನಾಯಕ್
    ವಿಜಯಪುರ – ರಾಜು ಅಲಗೂರು, ಪ್ರಕಾಶ್ ರಾಠೋಡ್, ಕಾಂತಾ ನಾಯಕ್
    ಕೊಪ್ಪಳ – ಬಸನಗೌಡ ಬಾದರ್ಲಿ, ಬಸವರಾಜ್ ಹಿಟ್ನಾಳ್, ವಿರುಪಾಕ್ಷಪ್ಪ
    ಬೆಳಗಾವಿ – ಅಂಜಲಿ ನಿಂಬಾಳ್ಕರ್, ಚನ್ನರಾಜ್ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ, ವಿವೇಕ್ ರಾವ್ ಪಾಟೀಲ್

    ಧಾರವಾಡ – ವಿನಯ್ ಕುಲಕರ್ಣಿ, ಶಾಖಿರ್ ಸನದಿ (ಐ ಜಿ ಸನದಿ ಪುತ್ರ), ವೀರಣ್ಣ ಮತ್ತಿಕಟ್ಟಿ
    ಹಾವೇರಿ – ಬಸವರಾಜ್ ಶಿವಣ್ಣವರ, ಸಲೀಂ ಅಹಮದ್, ಡಿ. ಆರ್. ಪಾಟೀಲ್
    ದಾವಣಗೆರೆ – ಎಸ್.ಎಸ್. ಮಲ್ಲಿಕಾರ್ಜುನ, ಹೆಚ್.ಎಂ.ರೇವಣ್ಣ
    ಉತ್ತರ ಕನ್ನಡ – ಪ್ರಶಾಂತ್ ದೇಶಪಾಂಡೆ, ನಿವೇದಿತ್ ಆಳ್ವಾ, ಭೀಮಣ್ಣ ನಾಯ್ಕ್
    ಉಡುಪಿ – ಚಿಕ್ಕಮಗಳೂರು – ಆರತಿ ಕೃಷ್ಣ, ವಿಜಯಕುಮಾರ್, ಪ್ರಮೋದ್ ಮಧ್ವರಾಜ್, ಬಿ.ಕೆ.ಹರಿಪ್ರಸಾದ್

    ಮಂಗಳೂರು – ರಮಾನಾಥ ರೈ, ಐವಾನ್ ಡಿಸೋಜಾ, ಮೋಯುದ್ದೀನ್ ಬಾವಾ, ವಿನಯ ಕುಮಾರ್ ಸೊರಕೆ
    ಬೆಂಗಳೂರು ಕೇಂದ್ರ – ರಿಜ್ವಾನ್ ಅರ್ಷದ್, ಬಿ.ಕೆ. ಹರಿಪ್ರಸಾದ್, ರೋಷನ್ ಬೇಗ್, ಎಚ್.ಟಿ. ಸಾಂಗ್ಲಿಯಾನಾ,ಸಲೀಂ ಅಹಮದ್
    ಬೆಂಗಳೂರು ದಕ್ಷಿಣ – ಪ್ರಿಯಕೃಷ್ಣ, ರಾಮಲಿಂಗರೆಡ್ಡಿ
    ಬೆಂಗಳೂರು ಉತ್ತರ – ಸಿ. ನಾರಾಯಣ ಸ್ವಾಮಿ, ಎಂ. ಆರ್. ಸೀತಾರಾಂ, ಬಿ.ಎಲ್. ಶಂಕರ್
    ಮೈಸೂರು – ವಿಜಯ್ ಶಂಕರ್, ಸೂರಜ್ ಹೆಗ್ಡೆ

    ಹಾಲಿ ಕಾಂಗ್ರೆಸ್ ಸಂಸದರು:
    ಚಿಕ್ಕೋಡಿ – ಪ್ರಕಾಶ್ ಹುಕ್ಕೇರಿ
    ಕಲಬುರಗಿ – ಮಲ್ಲಿಕಾರ್ಜುನ ಖರ್ಗೆ
    ರಾಯಚೂರು – ಬಿ ವಿ ನಾಯಕ್
    ಬಳ್ಳಾರಿ – ವಿ ಎಸ್ ಉಗ್ರಪ್ಪ
    ಚಿತ್ರದುರ್ಗ – ಚಂದ್ರಪ್ಪ
    ತುಮಕೂರು – ಮುದ್ದ ಹನುಮೇಗೌಡ
    ಚಾಮರಾಜನಗರ – ಆರ್ ಧ್ರುವ ನಾರಾಯಣ್
    ಚಿಕ್ಕಬಳ್ಳಾಪುರ – ಡಾ ಎಂ ವೀರಪ್ಪ ಮೊಯಿಲಿ
    ಕೋಲಾರ – ಕೆ ಎಚ್ ಮುನಿಯಪ್ಪ
    ಬೆಂಗಳೂರು ಗ್ರಾಮಾಂತರ – ಡಿ ಕೆ ಸುರೇಶ್

    ಪಟ್ಟಿಯಲ್ಲಿ ಬಹು ಮುಖ್ಯವಾಗಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಸ್ಥಾನ ನೀಡಿ ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಚಿಂತನೆ ಮಾಡಲಾಗಿದೆ. ಅಲ್ಲದೇ ಮಾಜಿ ಸಚಿವ ರಮೇಶ್‍ಜಾರಕಿ ಹೊಳಿ ಹಾಗೂ ಪ್ರಶಾಂತ್ ದೇಶಪಾಂಡೆ ಅವರ ಹೆಸರು ಸಂಭಾವ್ಯ ಪಟ್ಟಿಯಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಷ್ಟು ಜನಕ್ಕೆ ಒಂದು ಲೋಟ ಕುಡಿಯಲು ನೀರು ಕೊಟ್ಟಿದ್ದಾರೆ – ಸುಮಲತಾ ವಿರುದ್ಧ ತಮ್ಮಣ್ಣ ವಾಗ್ದಾಳಿ

    ಎಷ್ಟು ಜನಕ್ಕೆ ಒಂದು ಲೋಟ ಕುಡಿಯಲು ನೀರು ಕೊಟ್ಟಿದ್ದಾರೆ – ಸುಮಲತಾ ವಿರುದ್ಧ ತಮ್ಮಣ್ಣ ವಾಗ್ದಾಳಿ

    ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕೆ ನಿಲ್ಲಲು ಮುಂದಾಗಿರುವ ಸುಮಲತಾ ವಿರುದ್ಧ ಸಚಿವ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದಲ್ಲಿ ಮಾತನಾಡಿದ ತಮ್ಮಣ್ಣ, ಅಂಬರೀಶ್ ಶಾಸಕರು, ಸಚಿವರು ಆಗಿದ್ದಾಗ ಅವರ ಮನೆಗೆ ಹೋದಾಗ ಎಷ್ಟು ಜನ ಸಾಮಾನ್ಯರನ್ನ ಈಯಮ್ಮ ಮಾತಾಡಿಸಿದ್ದಾರೆ. ಎಷ್ಟು ಜನಕ್ಕೆ ಒಂದು ಲೋಟ ಕುಡಿಯಲು ನೀರು ಕೊಟ್ಟಿದ್ದಾರೆ. ನೀನು ಯಾವೂರಪ್ಪ? ಏನಪ್ಪ ನಿಮ್ಮ ಸಮಸ್ಯೆ ಅಂತ ಕೇಳಿದ್ದಾರ ಎಂದು ಪ್ರಶ್ನೆ ಮಾಡಿದ್ದಾರೆ.

    ಇವತ್ತು ಅವರ ಹೆಸರು ಹೇಳಿಕೊಂಡು ಬಂದು ನಾನೇನೋ ಉದ್ಧಾರ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಒಬ್ಬ ಹೆಣ್ಣು ಮಗಳು ಬಂದು ಹೋದಳು, ಏನ್ ಮಾಡಿದ್ಲು ಎಂದು ರಮ್ಮಾ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಣ್ಣದವರ ಮಾತಿಗೆ ಜಿಲ್ಲೆಯ ಜನರು ಬೆರಗು ಆಗೋದು ಬೇಡ. ಯಾರಿಗೆ ಈ ಸಮಾಜದ ಬಗ್ಗೆ ಚಿಂತನೆ ಮಾಡುತ್ತಾರೆ. ಸದಾ ರೈತರ ಬಗ್ಗೆ ಚಿಂತಿಸುತ್ತಾರೆ, ಯಾರು ನಮ್ಮ ನೋವಿಗೆ ಕಷ್ಟಕ್ಕೆ ಸ್ಪಂದಿಸಿ ನಮ್ಮ ಜೊತೆಗೆ ನಿಲ್ಲುತ್ತಾರೆ ಅಂತಹವರನ್ನು ಆಯ್ಕೆ ಮಾಡಿ ಎಂದರು.

    ಬಣ್ಣದ ಮಾತಿಗೆ ಬೆರಗಾಗಿ ನಮ್ಮ ಯುವಕರು ದಾರಿ ತಪ್ಪಿದರೆ, ನಮ್ಮ ಸರ್ವನಾಶಕ್ಕೆ ನಾವೇ ಕಾರಣರಾಗುತ್ತೇವೆ. ಯಾಕೆಂದರೆ ಮತದಾರರು ತಮ್ಮ ಕ್ಷೇತ್ರದ ಹಣೆ ಬರಹವನ್ನು ಬರೆಯುವಂತರು ನೀವು. ರೈತರ ಮಗನಾದ ನಿಖಿಲ್‍ರನ್ನು ಈ ಬಾರಿ ಆಯ್ಕೆ ಮಾಡುವಂತೆ ಕ್ಷೇತ್ರದ ಮತದಾರಿಗೆ ಸಚಿವ ತಮ್ಮಣ್ಣ ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರ್ ಕಣಕ್ಕೆ..?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರ್ ಕಣಕ್ಕೆ..?

    ಮಂಡ್ಯ: ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಖಚಿತ ಎಂಬ ಮಾಹಿತಿ ಬೆನ್ನಲ್ಲೇ, ಇತ್ತ ಜೆಡಿಎಸ್ ಭದ್ರಕೋಟೆ ಮಂಡ್ಯದಿಂದ ದೇವೇಗೌಡರ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ.

    ನಿಖಿಲ್ ಸ್ಪರ್ಧೆಗಾಗಿ ಮಂಡ್ಯದಲ್ಲಿ ದೊಡ್ಡಗೌಡರ ಕುಟುಂಬ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದು, ಇತ್ತ ಈ ಬಾರಿ ಮಂಡ್ಯದಿಂದ ಸ್ವತಃ ದೇವೇಗೌಡರೇ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ.

    ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ನಿಖಿಲ್‍ ರನ್ನ ಕಣಕ್ಕಿಳಿಸಿದರೆ ಮೊಮ್ಮಗನ ರಾಜಕೀಯ ಎಂಟ್ರಿಯನ್ನು ಸುಲಭ ಜಯದೊಂದಿಗೆ ಆರಂಭಿಸಬಹುದು ಅಂತ ದೊಡ್ಡಗೌಡ ಕುಟುಂಬ ಯೋಚಿಸುತ್ತಿದೆ. ಈ ಎಲ್ಲ ಊಹಾಪೋಹಗಳೂ ಸತ್ಯ ಎಂಬಂತೆ ನಾವು ಈಗಾಗಲೇ ನಿಖಿಲ್ ಕುಮಾರಸ್ವಾಮಿಗೆ ಮಂಡ್ಯ ಕ್ಷೇತ್ರದಿಂದ ಟಿಕೆಟ್ ಕೊಡುವಂತೆ ಕೇಳಿಕೊಂಡಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಮಂಡ್ಯದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಮಂಡ್ಯ ಜನರು ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ನಿಖಿಲ್ ಏನಾದರೂ ಮಂಡ್ಯದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುವುದು ನಮ್ಮ ಜವಬ್ದಾರಿ ಎಂದು ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಹೇಳಿದ್ದಾರೆ.

    ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂದು ಖಚಿತವಾಗಿಲ್ಲ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಂಡ್ಯದಿಂದ ದೇವೇಗೌಡರನ್ನು ಸ್ಪರ್ಧೆ ಮಾಡುವಂತೆ ನಾವು ಕೇಳಿಕೊಳ್ಳುತ್ತಿದ್ದೇವೆ. ನಿಖಿಲ್ ಸ್ಪರ್ಧೆ ಮಾಡಿದರೂ ಓಕೆ ಎಂದು ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜು ಹೇಳಿದ್ದಾರೆ. ಇತ್ತ ಮಂಡ್ಯ ಸಂಸದ ಎಲ್‍ಆರ್.ಶಿವರಾಮೇಗೌಡ ಕೂಡ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉತ್ಸಾಹದಲ್ಲಿದ್ದು, ಉಪಚುನಾವಣೆಯಲ್ಲಿ ಗೆದ್ದ ನಾನು ಕೆಲವೇ ತಿಂಗಳಿಗೆ ಸಂಸದನಾಗಿಲ್ಲ. ದೇವೇಗೌಡರು ಮತ್ತೊಮ್ಮೆ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಮಂಡ್ಯ ಸಂಸದರಾಗುವ ಕನಸಲ್ಲಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕಣಕ್ಕಿಳೀತಾರೋ ಅಥವಾ ದೇವೇಗೌಡರು ಕಣಕ್ಕಿಳೀತಾರೋ ಎಂಬ ಚರ್ಚೆ ಜಿಲ್ಲೆಯಾದ್ಯಂತ ಜೋರಾಗೆ ಶುರುವಾಗಿದೆ. ಆದರೆ ಅಂತಿಮವಾಗಿ ಯಾರು ಅಭ್ಯರ್ಥಿ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

    ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

    ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

    ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ ಅವರು, ಪ್ರಣಬ್ ಅವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು. ತಮ್ಮ ಆಹ್ವಾನವನ್ನು ಮನ್ನಿಸಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಈ ಹಿಂದೆ ಕಾಂಗ್ರೆಸ್ 2015 ರಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟವನ್ನು ಏರ್ಪಡಿಸಿತ್ತು. ಆದರೆ ಇದಾದ ಬಳಿಕ ಎರಡು ವರ್ಷ ಕಾರ್ಯಕ್ರಮವನ್ನು ಏರ್ಪಡಿಸಿರಲಿಲ್ಲ. ರಾಹುಲ್ ಗಾಂಧಿ ಅವರು ಎಐಸಿಸಿ ಅಧಕ್ಷರಾದ ಬಳಿಕ ಮೊದಲ ಬಾರಿಗೆ ಇಫ್ತಾರ ಕೂಟವನ್ನು ಏರ್ಪಡಿಸಲಾಗಿದೆ.

    ಈ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಹಾಗೂ ನಾಯಕರು ಭಾಗವಹಿಸಿದ್ದರು.

    ಕಳೆದ ಕೆಲ ದಿನಗಳ ಹಿಂದೆ ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರು ಭಾಗವಹಿಸುವ ಕುರಿತು ಹಲವು ಕಾಂಗ್ರೆಸ್ ನಾಯಕರು ಅಸಮಾಧಾನವನ್ನು ಹೊರಹಾಕಿದ್ದರು. ಸ್ವತಃ ಪ್ರಣಬ್ ಅವರ ಪುತ್ರಿ ಸಹ ಈ ಕುರಿತು ಟ್ವೀಟ್ ಮಾಡಿ ಆರ್ ಎಸ್‍ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.