Tag: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

  • ಮಿಸ್ಟರ್ ರೇವಣ್ಣ.. ನಿನಗೆ ಒಳ್ಳೆದಾಗಲ್ಲ- ಜಿ.ಎಸ್.ಬಸವರಾಜು ಕಿಡಿ

    ಮಿಸ್ಟರ್ ರೇವಣ್ಣ.. ನಿನಗೆ ಒಳ್ಳೆದಾಗಲ್ಲ- ಜಿ.ಎಸ್.ಬಸವರಾಜು ಕಿಡಿ

    – ಸಮ್ಮಿಶ್ರ ಸರ್ಕಾರವು ಮೂರು ಜಿಲ್ಲೆಗಳಿಗೆ ಸೀಮಿತವಾಗಿದೆ

    ತುಮಕೂರು: ಮಿಸ್ಟರ್ ರೇವಣ್ಣ ನಿನಗೆ ಒಳ್ಳೆದಾಗಲ್ಲ. ನೀರಾವರಿ ಚೇರಮನ್ ಆಗಿ ಹೇಮಾವತಿ ನೀರು ತುಮಕೂರು ಜಿಲ್ಲೆಗೆ ನೀಡುವಲ್ಲಿ ಪಾಪ ಮಾಡುತ್ತಿದ್ದೀಯಾ ಎಂದು ಮಾಜಿ ಸಚಿವ ಜಿ.ಎಸ್.ಬಸವರಾಜು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದಾರೆ.

    ಹೇಮಾವತಿ ನಾಲೆಗೆ ಲಿಂಕಿಂಗ್ ಕೆನಾಲ್ ನಿರ್ಮಾಣ ವಿರೋಧಿಸಿ ಇಂದು ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಮಾಜಿ ಸಚಿವರು, ನೀವು ಮಾಡಿರುವ ಪಾಪ ನಿಮ್ಮ ಕುಟುಂಬಕ್ಕೂ ತಟ್ಟಲಿದೆ. ನನ್ನ ನೀರಗಂಟಿ ಅಂತ ಕರೆಯುತ್ತಿರುವಿರಿ. ತುಮಕೂರು ಜಿಲ್ಲೆಯ ಜನತೆಗೆ ಮೋಸ ಮಾಡುತ್ತೀರುವ ನಿಮಗೆ ಒಳ್ಳೆಯದ ಆಗಲ್ಲ ಎಂದರು.

    ಸಮ್ಮಿಶ್ರ ಸರ್ಕಾರ ರಾಮನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಜಿಲ್ಲೆಯವರು. ಮೊದಲಿಗೆ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಿದ್ದರು. ಆದರೆ ಈಗ ಹಾಗಲಕಾಯಿ, ಬೇವಿನ ಕಾಯಿ ಒಂದಾದಂತೆ ಆಗಿದ್ದು, ರಾಜ್ಯವನ್ನು ಕಡೆಗಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಬಜೆಟ್, ಯೋಜನೆ, ನೀರಾವರಿ ಸೌಲಭ್ಯಗಳು ಮೂರು ಜಿಲ್ಲೆಗಳಿಗೆ ಮಾತ್ರ ಸೇರುತ್ತಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸೇರಿ ಮಾಡಬಾರದ ಪಾಪ ಮಾಡುತ್ತಿವೆ. ಒಂದು ಕಾಲದಲ್ಲಿ ಕಾಲುವೆ ಒಡೆದುಹಾಕಿ ಜೆಡಿಎಸ್‍ನವರು ಪ್ರತಿಭಟನೆ ಮಾಡಿದ್ದರು. ಜಿಲ್ಲೆಯ ಕಾಲುವೆಗಳಿಗೆ ನೀರು ಬಿಡದೇ 15 ದಿನಗಳು ಕಳೆದಿದೆ. ಇದರಿಂದಾಗಿ ಬೆಳೆ ನಾಶವಾಗುತ್ತಿದ್ದು, ರೈತರು ಪರದಾಡುವಂತಾಗಿದೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಎಂ ಯಾಕೆ ಕ್ಷಮೆ ಕೇಳ್ಬೇಕು ಅಂತಾ ಪ್ರಶ್ನಿಸಿ ಮಾಧ್ಯಮಗಳ ಮೇಲೆ ರೇವಣ್ಣ ಕಿಡಿ

    ಸಿಎಂ ಯಾಕೆ ಕ್ಷಮೆ ಕೇಳ್ಬೇಕು ಅಂತಾ ಪ್ರಶ್ನಿಸಿ ಮಾಧ್ಯಮಗಳ ಮೇಲೆ ರೇವಣ್ಣ ಕಿಡಿ

    ಬೆಂಗಳೂರು: ಏನ್ರೀ ತಪ್ಪು? ಯಾವ್ ಮಹಿಳೆಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಮಾನ ಮಾಡಿಲ್ಲ. ಹೀಗಿರುವಾಗ ಅವರು ಯಾಕೆ ಕ್ಷಮೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಮಹಿಳೆಗೆ ತಾಯಿ ಅಂತ ಕುಮಾರಸ್ವಾಮಿ ಅವರು ಪದ ಬಳಸಿಯೇ ಮಾತನಾಡಿದ್ದಾರೆ. ಆದರೆ ಅವರ ಹೇಳಿಕೆಯನ್ನು ತಿರುಚಲಾಗಿದೆ. ಇದು ನಾಲ್ಕು ಕ್ಷೇತ್ರಗಳಲ್ಲಿ ಸೋತಿರುವ ಬಿಜೆಪಿ ಷಡ್ಯಂತ್ರ. ಅವರಿಗೆ ಮಾನ ಮರ್ಯಾದೆ ಇದ್ದರೆ, ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ಅನುದಾನ ತರುವ ಕೆಲಸ ಮಾಡಲಿ ಎಂದು ಆರೋಪಿಸಿದರು.

    ಬೆಳಗ್ಗೆಯಿಂದ ಚಾನೆಲ್‍ಗಳಲ್ಲಿ ಮೈತ್ರಿ ಸರ್ಕಾರವನ್ನು ಹಾಕೊಂಡು ಕುಟ್ಟಿದ್ದೀರಿ. ನಾವು ಯಾರಿಗೂ ಹೆದರಿಕೊಳ್ಳಲ್ಲ ಎಂದ ಸಚಿವರು, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಜೀನಾಮೆ ನೀಡುವುದಿಲ್ಲ. ನನ್ನ ಬಳಿ ಯಾವುದೇ ಸಕ್ಕರೆ ಕಾರ್ಖಾನೆ ಇಲ್ಲ. ಒಂದು ವೇಳೆ ಇದ್ದಿದ್ದರೆ ಉಚಿತವಾಗಿ ಬರೆದುಕೊಡುತ್ತಿದ್ದೆ. ಯಾವುದೇ ಸಚಿವರು ರೈತರ ಹಣ ಬಾಕಿ ಉಳಿಸಿಕೊಂಡಿಲ್ಲ. ಹಾಗೆನಾದರೂ ಇದ್ದರೆ ನಾಳೆ ಚರ್ಚಿಸಿ ಬಾಕಿ ವಾಪಸ್ ಕೊಡಿಸ್ತೀವಿ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews