Tag: ಲೋನ್

  • ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ: ಗೋವಿಂದ ಬಾಬು ಪೂಜಾರಿ

    ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ: ಗೋವಿಂದ ಬಾಬು ಪೂಜಾರಿ

    ಬೆಂಗಳೂರು: ನಾನು ಹಣವನ್ನ ಲೋನ್ (Loan) ಪಡೆದು ಕೊಟ್ಟಿದ್ದೇನೆ. ಪೂರ್ತಿ ದಾಖಲೆಯನ್ನು ಸಿಸಿಬಿಯವರಿಗೆ ಕೊಟ್ಟಿದ್ದೇನೆ ಎಂದು ಚೈತ್ರಾ ಕುಂದಾಪುರ (Chaitra Kundapura) ಅವರಿಂದ ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೇಳಿದ್ದಾರೆ.

    ಸಿಸಿಬಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿಯವರು (CCB) ಏನೆಲ್ಲಾ ಕೇಳಿದ್ದಾರೆ ಅದನ್ನೆಲ್ಲಾ ಕೊಟ್ಟಿದ್ದೇನೆ. ಪೆನ್ ಡ್ರೈವ್‍ನಲ್ಲಿ ದಾಖಲೆಗಳನ್ನ ಕೊಟ್ಟಿದ್ದೇನೆ. ವಿಚಾರಣೆ ಹಂತದಲ್ಲಿದೆ ಹಾಗಾಗಿ ನಾನು ಹೇಳೊದಿಕ್ಕೆ ಬರಲ್ಲ ಎಂದರು.

    ಹಣ ವಾಪಸ್ ಕೊಡಲು ಟೈಂ ತಗೆದುಕೊಂಡಿದ್ದರು. ಹೀಗಾಗಿ ಆಗಲೇ ದೂರು ಕೊಟ್ಟಿಲ್ಲ. ಆದರೆ ಅವರು ಹಣ ಕೊಡದೆ ಸತಾಯಿಸಿ ಬೆದರಿಕೆ ಹಾಕಿದ್ರು. ಕೊನೆಗೆ ಸತ್ಯ ಹೊರಗೆ ಬರ್ಬೇಕು ಅಂತ ದೂರು ನೀಡಿದೆ. ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ. ಪೂರ್ತಿ ದಾಖಲೆಯನ್ನು ಸಿಸಿಬಿಯವರಿಗೆ ಕೊಟ್ಟಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್‌ ಪ್ರಕರಣಕ್ಕೆ ಟ್ವಿಸ್ಟ್‌ – ಸಲೂನ್‌ ಮಾಲೀಕನಿಗೆ ಬೆದರಿಕೆ ಕರೆ

    ನಾನು ಉದ್ಯಮಿ ರಾಜಕೀಯ ನನಗೆ ಅಷ್ಟೊಂದು ಗೊತ್ತಿಲ್ಲ. ಸಂಪೂರ್ಣವಾಗಿ ನನಗೆ ಸಂಶಯವೇ ಬರದ ರೀತಿ ನಂಬಿಸಿದ್ದರು. ನನಗೆ ಮೋಸ ಆಗಿದೆ ನನಗೆ ಆಗಿದ ರೀತಿ ಬೇರೆ ಯಾರಿಗೂ ಆಗಬಾರದು. ನಾನು ಮನೆ ಮೇಲೆ ಲೋನ್ ತೆಗೆದುಕೊಂಡು ಹಣ ನೀಡಿದ್ದೇನೆ. ಆ ದಾಖಲೆ ಎಲ್ಲವೂ ನೀಡಿದ್ದೇನೆ. ನಾನು ಉದ್ಯಮಿ ಹಾಗಾಗಿ ರಾಜಕೀಯ ನಾಯಕರು ಪರಿಚಯವಿಲ್ಲ. ಮುಂದೆ ಎಲ್ಲ ಸತ್ಯ ಹೊರ ಬರುತ್ತೆ. ಎಲ್ಲವನ್ನು ನಿಮ್ಮ ಬಳಿ ಹೇಳ್ತೇನೆ ಎಂದರು.

    ಇತ್ತ ಸಿಸಿಬಿ ಕಚೇರಿಯಿಂದ ಚೈತ್ರಾ ಕುಂದಾಪುರ ಅವರನ್ನು ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋನ್ ಕೊಡುವುದಾಗಿ ಖಾಸಗಿ ನೌಕರನಿಗೆ ವಂಚನೆ- ಲಕ್ಷಾಂತರ ರೂ. ಪಂಗನಾಮ

    ಲೋನ್ ಕೊಡುವುದಾಗಿ ಖಾಸಗಿ ನೌಕರನಿಗೆ ವಂಚನೆ- ಲಕ್ಷಾಂತರ ರೂ. ಪಂಗನಾಮ

    ಗದಗ: ಬೆಂಗಳೂರಿನ ಇಂಡಸ್ ಆ್ಯಂಡ್ ಬ್ಯಾಂಕ್ ಕಷ್ಟಮರ್ ಕೇರ್ ನಿಂದ ಲೋನ್ ಕೊಡುವುದಾಗಿ ನಂಬಿಸಿ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಕಂಗಾಲಾಗಿದ್ದಾರೆ.

    ಬ್ಯಾಂಕ್ ಅಕೌಂಟ್, ಪಿನ್, ಎಟಿಎಮ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಯಾರಾದರೂ ಅಪರಿಚಿತರು ಕರೆ ಮಾಡಿದರೆ ಅವರಿಗೆ ಉತ್ತರ ನೀಡಬೇಡಿ ಎಂದು ಪೊಲೀಸರು ಎಷ್ಟೇ ಎಚ್ಚರಿಕೆ, ಜಾಗೃತಿ ನೀಡಿದರೂ ಜನ ಮಾತ್ರ ಅದರ ಗಮನ ಹರಿಸುತ್ತಿಲ್ಲ. ಅದರಲ್ಲೂ ವಿದ್ಯಾವಂತರೇ ಮೋಸಕ್ಕೆ ಒಳಗಾಗುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ತಿ ಬಣದ ನಿವಾಸಿ ವಿಕಾಸ್ ಪಾಟೀಲ್ ಎಂಬವರು ಕೂಡ ಇದೀಗ ಇಂಥದ್ದೇ ಮೋಸದ ಕರೆಯನ್ನು ನಂಬಿ ಹಣಕಳೆದುಕೊಂಡಿದ್ದಾರೆ.

    ಬೆಂಗಳೂರಿನ ಇಂಡಸ್ ಇಂಡ್ ಬ್ಯಾಂಕ್ ಕಷ್ಟಮರ್ ಕೇರ್ ನಿಂದ ಮಾತಾಡೋದು ಎಂದು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ನಿಮಗೆ ಲೋನ್ ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಮರುಳಾದ ವಿಕಾಸ್ ಪಾಟೀಲ್, ತಮ್ಮ ಜಕ್ಕಸಂದ್ರ ಶಾಖೆಯ ಅಕೌಂಟ್ ನಂಬರ್ ಕೊಟ್ಟಿದ್ದಾರೆ. ಅಕೌಂಟ್ ನಂಬರ್ ಕೊಟ್ಟಿದ್ದೇ ತಡ ಖದೀಮ ಅದರಲ್ಲಿದ್ದ ಸುಮಾರು 1ಲಕ್ಷ 29 ಸಾವಿರ ಡ್ರಾ ಮಾಡಿಕೊಂಡಿದ್ದಾನೆ.ಇದನ್ನೂ ಓದಿ: ಭೂ ಕುಸಿತದಿಂದ ಮಾರ್ಗ ಬಂದ್ – ಹೆಗಲ ಮೇಲೆ ಬೈಕ್ ಹೊತ್ತು ಸಾಗಿದ ಬಾಹುಬಲಿ

    ಜುಲೈ 11 ರಂದು 49 ಸಾವಿರದಂತೆ 2 ಸಲ ಹಾಗೂ 30 ಸಾವಿರ ರೂ.ಗಳನ್ನು ಕ್ರೆಡಿಟ್ ಕಾರ್ಡ್ ಬಳಸಿ ಆನ್‍ಲೈನ್ ಮೂಲಕ ವಂಚಿಸಿ ಹಣ ಪಡೆದಿದ್ದಾನೆ. ಇದು ಒಂದು ವಾರದ ನಂತರ ವಿಕಾಸ್ ಪಾಟೀಲ್‍ಗೆ ಗೊತ್ತಾಗಿದ್ದು, ವಂಚನೆ ಮಾಡಿದ ಆರೋಪಿ ವಿರುದ್ಧ ಲಕ್ಷ್ಮೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಲೋನ್ ಪಡೆಯಲು ಶ್ಯೂರಿಟಿ ಹಾಕಿ ಅಂದ್ರು, ದಾಖಲೆಗಳೇ ಇರಲಿಲ್ಲ: ಉಮಾಪತಿ

    ಲೋನ್ ಪಡೆಯಲು ಶ್ಯೂರಿಟಿ ಹಾಕಿ ಅಂದ್ರು, ದಾಖಲೆಗಳೇ ಇರಲಿಲ್ಲ: ಉಮಾಪತಿ

    ಬೆಂಗಳೂರು: ಲೋನ್ ಪಡೆಯಲು ಶ್ಯೂರಿಟಿ ಹಾಕುವಂತೆ ಕೇಳಿದ್ದರು. ಆದರೆ ಅವರ ಬಳಿ ಆಸ್ತಿಯ ಕುರಿತು ಯಾವುದೇ ಓರಿಜಿನಲ್ ದಾಖಲೆಗಳು ಇರಲಿಲ್ಲ. ಹೀಗಾಗಿ ಇದು ಫೇಕ್ ಎಂದು ತಿಳಿದು ದೂರು ನೀಡಿದೆವು ಎಂದು ನಿರ್ಮಾಪಕ ಉಮಾಪತಿಯವರು ತಿಳಿಸಿದ್ದಾರೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 25 ಕೋಟಿ ರೂ. ವಂಚನೆ ಪ್ರಕರಣದ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಈ ಕುರಿತು ನಿರ್ಮಾಪಕ ಉಮಾಪತಿ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ಹರ್ಷ ಅವರು ಲೋನ್‍ಗೆ ಅಪ್ಲೈ ಮಾಡಿದ್ದರು, ಶ್ಯೂರಿಟಿ ಹಾಕುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಾನಗೆ ಫೋನ್ ಕರೆ ಬಂದಿತ್ತು. ಇದಾದ ಬಳಿಕ ದರ್ಶನ್ ಅವರು ಹಾಗೂ ನಾನು ಮಾತನಾಡಿಕೊಂಡು ಬಳಿಕ ಡಾಕ್ಯೂಮೆಂಟ್ ವೆರಿಫಿಕೇಶನ್‍ಗೆ ಕರೆಯುತ್ತೇವೆ. ಆಗ ಅವರ ಬಳಿ ಸಂಪೂರ್ಣವಾದ ದಾಖಲೆ ಇಲ್ಲದಿರುವುದು ಹಾಗೂ ಫೇಕ್ ಎನ್ನುವುದು ತಿಳಿಯುತ್ತದೆ. ಇದನ್ನೂ ಓದಿ: ನನಗೆ ಸ್ವಲ್ಪ ಸಮಯ ಕೊಡಿ, ಸತ್ಯ ಹೊರಗೆ ಬರಲಿದೆ: ದರ್ಶನ್

    ಬಳಿಕ ದರ್ಶನ್ ಅವರು ಹಾಗೂ ನಾನು ನಮ್ಮ ಆಫೀಸ್‍ನಲ್ಲಿ ಕುಳಿತು ಮಾತನಾಡಿ, ಬಳಿಕ ನಮ್ಮ ಆಫೀಸ್ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇವೆ. ಆದರೆ ಈ ಆಸ್ತಿ ಮೈಸೂರು ವ್ಯಾಪ್ತಿಗೆ ಬರುತ್ತವೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಬಳಿಕ ತನಿಖೆ ಆರಂಭವಾಗುತ್ತದೆ, ಕೆಲ ಮಾಹಿತಿ ಬೇಕೆಂದು ನನ್ನನ್ನು, ದರ್ಶನ್ ಅವರನ್ನು ಹಾಗೂ ಹರ್ಷ ಅವರನ್ನು ಕರೆದಿದ್ದರು. ಬಳಿಕ ನಾವು ಪೊಲೀಸರಿಗೆ ಮಾಹಿತಿ ನೀಡಿ ಬಂದಿದ್ದೇವೆ ಎಂದು ವಿವರಿಸಿದರು.

    ಯಾವ ಆಸ್ತಿ, ಅದರ ಆಧಾರದ ಕುರಿತು ಯಾವುದೇ ಒರಿಜಿನಲ್ ಡಾಕ್ಯೂಮೆಂಟ್ ಇಲ್ಲ. ಅಲ್ಲದೆ ದರ್ಶನ್ ಅವರಿಗೆ ಸಂಬಂಧಿಸಿದ ದಾಖಲೆಗಳು ಸಹ ಇಲ್ಲ. ಆದರೆ ಯಾವುದೋ ವಿವರ ಬರೆದು ಹಾಕಿದ್ದಾರೆ. ಆಸ್ತಿ ದಾಖಲೆ ಯಾವುದೂ ಇಲ್ಲ ಎಂದಿದ್ದಾರೆ. ಒಟ್ಟು 25 ಕೋಟಿ ರೂ. ಲೋನ್ ಗೆ ಅಪ್ಲೈ ಮಾಡಿ ಶ್ಯೂರಿಟಿ ಹಾಕಲು ನಮ್ಮ ಬಳಿ ಬಂದಿದ್ದರು. ಆದರೆ ಆಸ್ತಿಯ ಯಾವುದೇ ದಾಖಲೆ ಇವರ ಬಳಿ ಇರಲಿಲ್ಲ. ಯಾಕೆ ಹೀಗೆ ಮಾಡಿದರು ಎಂಬುದನ್ನು ತಿಳಿದುಕೊಳ್ಳಲು ದೂರು ನಿಡಿದ್ದೇವೆ. ಇನ್ನೂ ಸರಿಯಾದ ಮಾಹಿತಿಯನ್ನು ಬಾಯ್ಬಿಡುತ್ತಿಲ್ಲ ಎಂದು ತಿಳಿಸಿದ್ದಾರೆ.

    ಪರಿಚಯ ಹೇಗಾಯ್ತು?
    ಅರುಣಾ ಕುಮಾರಿ ಅವರು ಏಪ್ರಿಲ್‍ನಿಂದ ನನಗೆ ಪರಿಚಯವಾಗಿದ್ದರು. ಲೋನ್ ವಿಚಾರವಾಗಿ ನನ್ನ ಬಳಿ ಮಾತನಾಡುತ್ತಿದ್ದರು. ಮೇನಲ್ಲಿ ಈ ಘಟನೆ ನಡೆದಿದೆ, ಜೂನ್‍ನಲ್ಲಿ ದರ್ಶನ್ ಅವರಿಗೆ ಮಾಹಿತಿ ನೀಡಿ, ಇದೀಗ ದೂರು ನೀಡಿದ್ದೇವೆ. ಪರಿಚಯವಾದ ನಂತರ ಲೋನ್ ಬಗ್ಗೆ ಮಾತನಾಡಿದ್ದರು, ಬಳಿಕ ಫೆಸ್ಬುಕ್‍ನಲ್ಲಿ ಅರುಣಾ ಕುಮಾರಿ ಪರಿಚಯವಾಗಿದ್ದರು. ಮ್ಯಾನೇಜರ್ ಎಂದೇ ಪರಿಚಯ ಮಾಡಿಕೊಂಡಿದ್ದರು. ನಮ್ಮಲ್ಲಿ ಪ್ರಾಪರ್ಟಿ ಸೀಜ್ ಆಗುತ್ತಿರುತ್ತದೆ, ತೆಗೆದುಕೊಳ್ಳಲು ಆಸಕ್ತಿ ಇದ್ದರೆ ನಿಮಗೆ ಕೊಡುತ್ತೇನೆ ಎಂದಿದ್ದರು.

    ಇದಾದ ಬಳಿಕ ಲೋನ್ ವಿಚಾರದಲ್ಲಿ ದರ್ಶನ್ ಸರ್ ಹಾಗೂ ನಿಮ್ಮ ಹೆಸರು ಬರುತ್ತಿದೆ, ನೀವು ಲೋನ್‍ಗೆ ಅಪ್ಲೈ ಮಾಡುತ್ತಿದ್ದಿರಂತೆ ಎಂದು ಕೇಳಿದರು. ಆಗ ಇಲ್ಲ ನಾವು ಯಾವುದೇ ಲೋನ್‍ಗೆ ಅಪ್ಲೈ ಮಾಡುತ್ತಿಲ್ಲ. ಶ್ಯೂರಿಟಿನೂ ಹಾಕುತ್ತಿಲ್ಲ ಎಂದು ಹೇಳಿದೆ ಎಂದು ಉಮಾಪತಿಯವರು ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

  • ನನ್ನ, ದರ್ಶನ್ ಹೆಸರು ಬಳಸಿ ಲೋನ್ ವಿಚಾರವಾಗಿ ವಂಚನೆ: ಉಮಾಪತಿ

    ನನ್ನ, ದರ್ಶನ್ ಹೆಸರು ಬಳಸಿ ಲೋನ್ ವಿಚಾರವಾಗಿ ವಂಚನೆ: ಉಮಾಪತಿ

    ಮೈಸೂರು: ನನ್ನ ಮತ್ತು ದರ್ಶನ್ ಅವರ ಹೆಸರನ್ನು ಬಳಸಿಕೊಂಡು ಲೋನ್ ಕೊಡುವುದಾಗಿ ಒರ್ವ ಮಹಿಳೆ ವಂಚನೆ ಮಾಡುತ್ತಿರುವ ಬಗ್ಗೆ ದೂರು ನೀಡಲು ಎಸಿಪಿ ಕಚೇರಿಗೆ ಬಂದಿದ್ದೇವೆ ಎಂದು ನಿರ್ಮಾಪಕರಾದ ಉಮಾಪತಿ ಅವರು ಸ್ಪಷ್ಟಪಡಿಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಮಾಪತಿ ಅವರು, ಲೋನ್ ವಿಚಾರದಲ್ಲಿ ನಟ ದರ್ಶನ್ ಹಾಗೂ ನೀವು ಶ್ಯೂರಿಟಿ ಹಾಕುತ್ತಿದ್ದೀರಂತೆ ಎಂದು ಒಂದು ಕರೆ ಬರುತ್ತದೆ. ಆಗ ನಾನು ದರ್ಶನ್ ಅವರನ್ನು ಕೇಳಿದೆ ನೀವು ಯಾರಿಗಾದರು ಶ್ಯೂರಿಟಿ ಹಾಕಿದ್ದೀರ ಎಂದು ಅವರು ಇಲ್ಲ ಎನ್ನುತ್ತಾರೆ. ಆ ಬಳಿಕ ವಂಚನೆಯ ಬಗ್ಗೆ ತಿಳಿದುಬಂದು ನಾನು ದರ್ಶನ್ ಅವರೊಂದಿಗೆ ಮಾತುಕತೆ ನಡೆಸಿ ನಮ್ಮ ಸ್ನೇಹಿತರ ಹೆಸರು ಸೇರಿದಂತೆ ನಮ್ಮ ಹೆಸರನ್ನು ಬಳಸಿಕೊಂಡು ವಂಚನೆ ಮಾಡುತ್ತಿದ್ದಾರೆ ಎಂದು ಜೂನ್ 16 ರಂದೇ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ.

    ವಂಚನೆಯ ಬಗ್ಗೆ ನಾನು ಮತ್ತು ದರ್ಶನವರು ಕೂತು ಮಾತನಾಡಿ ಈ ಬಗ್ಗೆ ಮೈಸೂರಿನಲ್ಲಿ ದೂರು ದಾಖಲಿಸಿದರೆ ಒಳ್ಳೆಯದು ಎಂದು ಇಲ್ಲಿ ದೂರು ನೀಡಿದ್ದೇವೆ. ವಂಚನೆ ಮಾಡುತ್ತಿರುವ ಮಹಿಳೆ ಬಗ್ಗೆ 2 ತಿಂಗಳ ಹಿಂದೆ ನಮಗೆ ಗೊತ್ತಾಗಿದೆ. ಆಕೆಯನ್ನು ದರ್ಶನ್ ಅವರಿಗೆ ನಾನು ಪರಿಚಯ ಮಾಡಿರುವ ಸುದ್ದಿ ಸುಳ್ಳು. ನಾವು ಈ ಬಗ್ಗೆ ದೂರು ನೀಡಿದ್ದೇವೆ ಇದೀಗ ಮಹಿಳೆಯನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಮುಂದಿನ ವಿಚಾರ ತಿಳಿದುಬರಲಿದೆ ಎಂದರು. ಇದನ್ನೂ ಓದಿ: ನನಗೆ ಸ್ವಲ್ಪ ಸಮಯ ಕೊಡಿ, ಸತ್ಯ ಹೊರಗೆ ಬರಲಿದೆ: ದರ್ಶನ್

    ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ದರ್ಶನ್ ಬಳಿ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ಬಂದಿದ್ದ ಮಹಿಳೆ ಸೇರಿದಂತೆ ಇನ್ನಿಬ್ಬರ ಹೆಸರು ಎಫ್‍ಐಆರ್ ನಲ್ಲಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅರುಣಾ ಕುಮಾರಿ, ಮಧುಕೇಶವ ಮತ್ತು ನಂದೀಶ್ ಎಂಬವರ ವಿರುದ್ಧವೇ ಎಫ್‍ಐಆರ್ ದಾಖಲಾಗಿದೆ. ನಿರ್ಮಾಪಕ ಉಮಾಪತಿ ಗೆಳೆಯ ಹರ್ಷ ಮೆಲಂತಾ ನೀಡಿದ ದೂರಿನಡಿ ಈ ಮೂವರ ವಿರುದ್ಧ ದೂರು ದಾಖಲಾಗಿದೆ.

  • ಲೋನ್ ಹೆಸರಲ್ಲಿ ಪೊಲೀಸಪ್ಪನಿಗೆ ಟೋಪಿ- ಲೋನ್ ಹೆಸರಲ್ಲಿ 34 ಲಕ್ಷ ರೂ ಗುಳುಂ

    ಲೋನ್ ಹೆಸರಲ್ಲಿ ಪೊಲೀಸಪ್ಪನಿಗೆ ಟೋಪಿ- ಲೋನ್ ಹೆಸರಲ್ಲಿ 34 ಲಕ್ಷ ರೂ ಗುಳುಂ

    ಬಳ್ಳಾರಿ: ಲೋನ್ ಕೋಡುತ್ತೇವೆ ಎಂದು ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಗೆ ವಂಚಿಸಿ 34 ಲಕ್ಷರೂಪಾಯಿ ದೋಚಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಆರೋಗ್ಯಪ್ಪ (43) ಖದೀಮರಿಂದ ಮೋಸ ಹೋಗಿರುವ ಹೆಡ್ ಕಾನ್‌ಸ್ಟೇಬಲ್. ಇವರು ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸಂಜಯ್ ಶರ್ಮ ಎಂಬಾತ ಲೋನ್ ಕೊಡಿಸುವುದಾಗಿ ಮೋಸ ಮಾಡಿದ್ದಾನೆ.

    ಲೋನ್ ಬಗ್ಗೆ ರಾಜಸ್ಥಾನದಿಂದ ಕಂಪನಿಯೊಂದರಿಂದ ಕವಿತಾದೇವಿ ಎಂದು ಹೇಳಿಕೊಂಡು ಕರೆ ಮಾಡಿ 50 ಲಕ್ಷ ರೂ. ಹೌಸಿಂಗ್ ಸಾಲದ ಆಫರ್ ಇದೆ. ವರ್ಷಕ್ಕೆ ಎರಡರಷ್ಟು ಬಡ್ಡಿ ಮಾತ್ರ ಎಂದು ಮಾಹಿತಿ ನೀಡುತ್ತಾರೆ. ನಿಜವೆಂದು ನಂಬಿದ ಆರೋಗ್ಯಪ್ಪ, ಅವರು ಹೇಳಿದ ಹಾಗೆ ಕೇಳಿದ್ದಾರೆ. ತಮ್ಮ ಮೂಲ ದಾಖಲೆಗಳನ್ನು ವ್ಯಾಟ್ಸಪ್ ಮೂಲಕ ಆರ್ಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಎಲ್ಲ ಪ್ರತಿಗಳನ್ನು ಕಳಿಸಿದ್ದಾರೆ. ನಿಮಗೆ 50 ಲಕ್ಷ ಹೌಸ್ ಲೋನ್ ಮಂಜೂರಾಗಿದೆ. ಅದಕ್ಕೆ ಶುಲ್ಕ ಭರಿಸಬೇಕು ಎಂದು ತಿಳಿಸಿದ್ದಾರೆ. ಕಾರಣ ಮೊದಲಿಗೆ 93 ಸಾವಿರ ರೂಪಾಯಿಗಳನ್ನು ಅಡ್ವಕೇಟ್ ಮತ್ತು ಶೂರಿಟಿ ಶುಲ್ಕಕ್ಕೆ 2 ಲಕ್ಷ 50 ಸಾವಿರ, ಜಿಎಸ್‍ಟಿ 3 ಲಕ್ಷ 98 ಸಾವಿರ ಜೊತೆಗೆ ಇನ್ನಿತರ ಶುಲ್ಕ ಎಂದು ಒಟ್ಟು 22 ಲಕ್ಷ ರೂ.ಗಳನ್ನು ಹಂತ ಹಂತವಾಗಿ ಆರ್‍ಟಿಜಿಎಸ್ ಮತ್ತು ನೆಫ್ಟ್‍ನಲ್ಲಿ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದರಂತೆ ಆರೋಗ್ಯಪ್ಪ ಹಣವನ್ನು ಕಳುಹಿಸಿದ್ದಾರೆ. ತದನಂತರ ಕರೆ ಮಾಡಿದಾಗ ನಂಬರ್ ಸ್ವಿಚ್ ಆಫ್ ಆಗಿದೆ ಬಳಿಕ ವಂಚನೆಗೊಳಗಾಗಿರುವುದು ತಿಳಿದು ಬಂದಿದೆ.

    ಆರೋಗ್ಯಪ್ಪ ಅವರಿಂದ ಹಂತ ಹಂತವಾಗಿ 12 ಲಕ್ಷರೂ.ಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಒಟ್ಟಾರೆ ಆರೋಗ್ಯಪ್ಪ ಫೋನ್ ಕರೆ ನಂಬಿ 34 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಬಳ್ಳಾರಿ ನಗರ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

  • ಮಹಿಳೆ ಜೊತೆ ಅಕ್ರಮ ಸಂಬಂಧ, ಬ್ಯಾಂಕ್ ಲೋನ್ – 2 ಸಮಸ್ಯೆಗೆ ಪರಿಹಾರ ಅಂತ ಪತ್ನಿಯನ್ನೇ ಕೊಂದ

    ಮಹಿಳೆ ಜೊತೆ ಅಕ್ರಮ ಸಂಬಂಧ, ಬ್ಯಾಂಕ್ ಲೋನ್ – 2 ಸಮಸ್ಯೆಗೆ ಪರಿಹಾರ ಅಂತ ಪತ್ನಿಯನ್ನೇ ಕೊಂದ

    – ಹಾವು ಕಚ್ಚಿದೆ ಅಂತ ನಾಟಕ, ತನಿಖೆ ವೇಳೆ ಸತ್ಯಾಂಶ ಬಯಲು

    ದಾವಣಗೆರೆ: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದರೆ ಬ್ಯಾಂಕ್ ಲೋನ್ ಸಂಪೂರ್ಣವಾಗಿ ಕ್ಲಿಯರ್ ಆಗುತ್ತೆ ಎಂದುಕೊಂಡು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ.

    ರೋಜಾ ಮೃತ ಮಹಿಳೆ. ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದೆ ಎಂದು ಹೇಳಿ ಪತಿ ಅಶೋಕ್ ನಾಟಕವಾಡಿದ್ದನು. ಆದರೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಗಂಡನೇ ಕೊಲೆ ಮಾಡಿರುವ ಸತ್ಯಾಂಶ ಹೊರಗೆ ಬಂದಿದೆ.

    ಏನಿದು ಪ್ರಕರಣ?
    ಸಿಂಗಟಗೆರೆ ಗ್ರಾಮದ ಅಶೋಕ್ ಕಳೆದ ಆರು ವರ್ಷಗಳ ಹಿಂದೆ ಶಿವಮೊಗ್ಗ ತಾಲೂಕಿನ ರಾಮನಗರ ಗ್ರಾಮದ ರೋಜಾಳನ್ನು ಮದುವೆಯಾಗಿದ್ದನು. ಕಳೆದ ಆರು ವರ್ಷಗಳಿಂದ ಗಂಡ-ಹೆಂಡತಿ ಸುಖವಾಗಿ ಸಂಸಾರ ನಡೆಸುತ್ತಾ ಬಂದಿದ್ದರು. ರೋಜಾ ಹೆಸರಿನಲ್ಲಿ ಆರೋಪಿ ಅಶೋಕ್ ಬ್ಯಾಂಕ್ ಒಂದರಲ್ಲಿ 5 ಲಕ್ಷ ಗೃಹ ಸಾಲ ತೆಗೆದುಕೊಂಡಿದ್ದನು. ಆದರೆ ಹಣವನ್ನು ಖರ್ಚು ಮಾಡಿಕೊಂಡಿದ್ದು, ಹೇಗೆ ಸಾಲ ತೀರಿಸೋದು ಎಂದು ಯೋಚನೆ ಮಾಡುತ್ತಿದ್ದನು.

    ಆಗ ಪತ್ನಿ ರೋಜಾಳನ್ನು ಕೊಲೆ ಮಾಡಿದರೆ ಲೋನ್ ಸಂಪೂರ್ಣ ಕ್ಲಿಯರ್ ಆಗುತ್ತೆ. ಮುಂದೆ ಕಟ್ಟುವ ಅವಶ್ಯಕತೆ ಇರೋದಿಲ್ಲ ಎಂದು ಯೋಚನೆ ಮಾಡಿದ್ದಾನೆ. ಅದರಂತೆಯೇ ಪತ್ನಿಯನ್ನು ತನ್ನ ಮೆಕ್ಕೆಜೋಳದ ಹೊಲಕ್ಕೆ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಪತ್ನಿಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡು ರೋಜಾ ಪ್ರಜ್ಞೆ ತಪ್ಪಿದ್ದಾರೆ ಎಂದು ಎಸ್.ಪಿ.ಹನುಮಂತರಾಯ ತಿಳಿಸಿದ್ದಾರೆ. ಆಗ ಮನೆಗೆ ಫೋನ್ ಮಾಡಿ ಹೊಲದಲ್ಲಿ ಕೆಲಸ ಮಾಡುವಾಗ ರೋಜಾಳಿಗೆ ಹಾವು ಕಚ್ಚಿರಬಹುದು. ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಹೇಳಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಜಾ ಸಾವನ್ನಪ್ಪಿದ್ದಾಳೆ.

    ಹೊನ್ನಾಳಿ ಪೊಲೀಸರು ಸಹಜ ಸಾವು ಎಂದು ಕೇಸ್ ದಾಖಲಿಸಿ ನಂತರ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ರೋಜಾಳ ತವರು ಮನೆಯವರು ಮೃತದೇಹವನ್ನು ಪಡೆದು ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗಳ ಸಾವಿನ ಬಗ್ಗೆ ಅನುಮಾನವಿದ್ದ ರೋಜಾಳ ತಂದೆ ಹಾಲೇಶಪ್ಪ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಮಗಳ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಹೊನ್ನಾಳಿ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಸತ್ಯ ಹೊರಗೆ ಬಂದಿದೆ.

    ಆರೋಪಿ ಅಶೋಕನಿಗೆ ಬೇರೆ ಮಹಿಳೆಯ ಜೊತೆ ಅಕ್ರಮ ಸಂಬಂಧ ಕೂಡ ಇದ್ದು, ಇದೇ ಕಾರಣಕ್ಕೆ ರೋಜಾಳ ಜೊತೆ ಮನೆಯಲ್ಲಿ ಸಾಕಷ್ಟು ಬಾರಿ ಜಗಳವಾಗಿತ್ತು. ಲೋನ್‍ನ ಹಣವನ್ನು ಕೂಡ ಬಳಕೆ ಮಾಡಿಕೊಂಡು ಕಟ್ಟಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ರೋಜಾಳನ್ನು ಸಾಯಿಸಿದರೆ ಮಾತ್ರ ಎರಡು ಸಮಸ್ಯೆಗಳಿಗೆ ಪರಿಹಾರ ಎಂದು ತಿಳಿದಿದ್ದನು. ಅದರಂತೆಯೇ ಮೆಕ್ಕೆಜೋಳದ ಹೊಲಕ್ಕೆ ಕರೆದುಕೊಂಡು ಹೋಗಿ ಹೊಡೆದಿದ್ದಾನೆ. ಅಲ್ಲದೆ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

  • ಲೋನ್ ರಿಕವರಿಗೆ ಬಂದವನ ಎದೆ ಸೀಳಿದ ಉದ್ಯಮಿ

    ಲೋನ್ ರಿಕವರಿಗೆ ಬಂದವನ ಎದೆ ಸೀಳಿದ ಉದ್ಯಮಿ

    ಬೆಂಗಳೂರು: ಲೋನ್ ರಿಕವರಿಗೆ ಬಂದವನ ಮೇಲೆ ಉದ್ಯಮಿಯೊಬ್ಬರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಲಿವಿಂಗ್‍ವಾಲ್ ಅಪಾರ್ಟ್‍ಮೆಂಟ್ ಬಳಿ ನಡೆದಿದೆ.

    ಐಟಿ ಉದ್ಯಮಿ ಮಯೂರೇಶ್ ಹಾರ್ಲೆ ಡೇವಿಡ್ಸನ್ ಬೈಕ್ ಖರೀದಿಸುವಾಗ ಹೆಚ್.ಡಿಎ.ಫ್‍ಸಿ ಬ್ಯಾಂಕ್‍ನಲ್ಲಿ ಲೋನ್ ಪಡೆದಿರುತ್ತಾರೆ. ಮಯೂರೇಶ್ ಪಡೆದಿರುವ ಲೋನ್ ಹಣದಲ್ಲಿ ಕೇವಲ 32 ಸಾವಿರ ಮಾತ್ರ ಬಾಕಿ ಉಳಿಸಿಕೊಂಡಿದ್ದರು. 32 ಸಾವಿರ ಲೋನ್ ಕ್ಲೀಯರ್ ಮಾಡುವಂತೆ ಸಯ್ಯದ್ ಅರ್ಪಾದ್ ಮಯೂರೇಶ್ ಜೊತೆ ಫೋನ್ ನಲ್ಲಿ ವಾಗ್ವಾದ ನಡೆಸಿದ್ದಾನೆ.

    ವಾಗ್ವಾದ ವಿಕೋಪಕ್ಕೆ ಹೋದಾಗ ಸಯ್ಯದ್ ಅರ್ಪಾದ್ ಉದ್ಯಮಿ ವಾಸವಿರುವ ಲಿವಿಂಗ್‍ವಾಲ್ ಅಪಾರ್ಟ್‍ಮೆಂಟ್ ಮುಂದೆ ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಆಗುತ್ತಿದ್ದಂತೆ ಅರ್ಪಾದ್ ಸಂಬಂಧಿ ಅಬ್ದುಲ್ ಸಲೀಂ ಅಂಡ್ ಟೀಂನನ್ನ ಅಪಾರ್ಟ್‍ಮೆಂಟ್ ಬಳಿ ಕರೆಸಿಕೊಂಡಿದ್ದಾರೆ. ಮಯೂರೇಶ್ ಸಹಾಯಕ್ಕೆ ಗೆಳೆಯ ಉದ್ಯಮಿ ಅಮರೇಂದರ್ ಬಂದು ಗಲಾಟೆಯನ್ನು ನಿಲ್ಲಿಸಲು ಮುಂದಾಗಿದ್ದಾರೆ. ಅರ್ಪಾದ್ ಮತ್ತು ಸಲೀಂ ಟೀಂ ಉದ್ಯಮಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅರ್ಪಾದ್ ಅಂಡ್ ಟೀಂ ಹಲ್ಲೆಗೆ ಮುಂದಾಗುತ್ತಿದ್ದಂತೆ ಉದ್ಯಮಿ ಅಮರೇಂದರ್ ತನ್ನ ಬಳಿ ಇದ್ದ ಪಿಸ್ತೂಲ್‍ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

    ಗಾಳಿಯಲ್ಲಿ ಗುಂಡು ಹಾರಿಸಿದ ಮೇಲೆ ಹಲ್ಲೆಗೆ ಮುಂದಾಗಿದ್ದಕ್ಕೆ ಅರ್ಪಾದ್ ಸಂಬಂಧಿ ಸೈಯ್ಯದ್ ಸಲೀಂ ಎದೆಯ ಭಾಗಕ್ಕೆ ಅಮರೆಂದರ್ ಗುಂಡು ಹೊಡೆದಿದ್ದಾರೆ. ಘಟನೆಯಲ್ಲಿ ಸಯ್ಯದ್ ಸಲೀಂ ಎದೆಯ ಭಾಗಕ್ಕೆ ಗುಂಡು ತಗುಲಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉದ್ಯಮಿಗಳಾದ ಮಯೂರೇಶ್, ಅಮರೇಂದರ್ ಹಾಗೂ ಅರ್ಪಾದ್ ನನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    ಪೊಲೀಸರು ಗಲಾಟೆ ಮಾಡಿದ ಎರಡು ಗ್ಯಾಂಗ್ ಅನ್ನು ವಶಕ್ಕೆ ಪಡೆದು ಘಟನೆಯ ಸತ್ಯಾಸತ್ಯತೆ ತಿಳಿದುಕೊಳ್ಳು ಮುಂದಾಗಿದ್ದಾರೆ. ಪ್ರಕರಣದ ವಿಶೇಷ ಅಂದರೆ ಸಾಲ ಪಡೆದುಕೊಂಡವನ ಸಹಾಯಕ್ಕೆ ಬಂದ ಅಮರೇಂದರ್ ಬ್ಯಾಂಕ್ ಸಿಬ್ಬಂದಿಯ ಬೆಂಬಲಕ್ಕೆ ಬಂದ ಸಯ್ಯದ್ ಸಲೀಂ ಅನ್ನು ಶೂಟ್ ಮಾಡಿದ್ದಾರೆ.

  • ಲೋನ್ ಕೊಡಿಸೋದಾಗಿ ಜಾಹೀರಾತು- ಲಕ್ಷ-ಲಕ್ಷ ಪೀಕಿದ ಗ್ಯಾಂಗ್ ಅರೆಸ್ಟ್

    ಲೋನ್ ಕೊಡಿಸೋದಾಗಿ ಜಾಹೀರಾತು- ಲಕ್ಷ-ಲಕ್ಷ ಪೀಕಿದ ಗ್ಯಾಂಗ್ ಅರೆಸ್ಟ್

    – ಮಹಿಳೆಯರೇ ಇವರ ಟಾರ್ಗೆಟ್

    ಬೆಂಗಳೂರು: ಕೋಟಿ ಕೋಟಿ ಲೋನ್ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಲಕ್ಷ-ಲಕ್ಷ ವಂಚನೆ ಮಾಡುತ್ತಾ ಇದ್ದ ನಟೋರಿಯಸ್ ಗ್ಯಾಂಗ್ ಒಂದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

    ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹಮದ್ ಬಂಧಿತ ಆರೋಪಿಗಳು. ಇವರು ರಾಷ್ಟ್ರೀಯ ಬ್ಯಾಂಕಿನಲ್ಲಿ 33 ಕೋಟಿ ಹಣ ಬ್ಯಾಂಕ್ ಸಾಲ ಕೊಡಿಸುವುದಾಗಿ 26 ಲಕ್ಷ ಹಣ ಪಡೆದು ವಂಚಿಸಿದ್ದಾರೆ.

    ಬ್ಯಾಂಕ್ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು 3 ಲಕ್ಷ ಪಡೆದು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳನ್ನು ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆ ವೇಳೆ ಮತ್ತೊಂದು ಪ್ರಕರಣ ಬಯಲಾಗಿದೆ.

    ಈ ಮೂವರು ಆರೋಪಿಗಳು ಕೇರಳ ಮೂಲದ ಪತ್ರಿಕೆಗಳಲ್ಲಿ ಜಾಹೀರಾತನ್ನು ನೀಡುತ್ತಾ ಇದ್ದರು. ಜಾಹೀರಾತನ್ನು ನೀಡಿದ ಬಳಿಕ ಸಂಪರ್ಕ ಮಾಡಿದ ಜನರಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಾ ಇದ್ದ ಗ್ಯಾಂಗ್, ಕೋಟಿ ಕೋಟಿ ಹಣ ಸಿಗಬೇಕು ಅಂದರೆ ಪ್ರೊಷಿಜರ್ ಫೀ ಅಂತ ಲಕ್ಷಾಂತರ ರೂಪಾಯಿಯನ್ನು ಕೊಡಬೇಕು ಎಂದು ಹಣ ಪೀಕಿ ಯಾಮಾರಿಸುತ್ತಿದ್ದರು. ಇದೇ ರೀತಿ ವಂಚನೆ ಮಾಡಿದ ಗ್ಯಾಂಗ್ ಸಾಕಷ್ಟು ಜನರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

  • ಲೋನ್ ನೀಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ ಕಪಾಳಕ್ಕೆ ಬಾರಿಸಿದ ಗ್ರಾಹಕ

    ಲೋನ್ ನೀಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ ಕಪಾಳಕ್ಕೆ ಬಾರಿಸಿದ ಗ್ರಾಹಕ

    ವಿಜಯಪುರ: ಹಲವು ದಿನಗಳಿಂದ ಲೋನ್‍ಗಾಗಿ ಅಲೆದಾಡಿ ರೋಸಿ ಹೋದ ಗ್ರಾಹಕರೊಬ್ಬರು ತಮ್ಮನ್ನು ಸತಾಯಿಸಿದ ಬ್ಯಾಂಕ್  ಮ್ಯಾನೇಜರ್​ಗೆ ಕಪಾಳಮೋಕ್ಷ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ಈ ಘಟನೆ ನಡೆದಿದ್ದು, ಗ್ರಾಹಕ ಶರಣು ಮಾಮನೆ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಬಿ.ವಿ. ಕುಲಕರ್ಣಿಗೆ ಕಪಾಳಮೋಕ್ಷ ಮಾಡಿದ್ದಾರೆ. ಎರಡು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಹಲವು ದಿನಗಳಿಂದ ಲೋನ್‍ಗಾಗಿ ಶರಣು ಅವರು ಬ್ಯಾಂಕಿಗೆ ಅಲೆದಾಡಿ ರೋಸಿ ಹೋಗಿದ್ದರು. ಹೀಗಾಗಿ ಲೋನ್ ನೀಡಲು ಸತಾಯಿಸುತ್ತಿದ್ದ ಮ್ಯಾನೇಜರ್ ಮೇಲೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಈ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆದರೆ ಬ್ಯಾಂಕಿನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ಈ ವಿಚಾರ ಬಯಲಾಗಿದೆ. ಕಪಾಳಮೋಕ್ಷ ಮಾಡಿದ ದೃಶ್ಯಗಳು ಬ್ಯಾಂಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕ್‍ನಲ್ಲಿ ಸಿಗಲ್ಲ ಲೋನ್

    ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕ್‍ನಲ್ಲಿ ಸಿಗಲ್ಲ ಲೋನ್

    ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಆರಂಭವಾದ ನಂತರ ಹೊಸ ವರಸೆ ಶುರುವಾಗಿದೆ. ಇಲ್ಲಿನ ಜನರು ಜೆಡಿಎಸ್‍ಗೆ ವೋಟ್ ಹಾಕಿದವರಾದರೆ ಅಂತಹವರಿಗೆ ಲೋನ್ ಕ್ಯಾನ್ಸಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

    ಮಧುಗಿರಿ ತಾಲೂಕಿನ ಡಿಸಿಸಿ ಬ್ಯಾಂಕ್‍ನಲ್ಲಿ ಲೋನ್ ಬೇಕು ಎಂದು ಯಾರಾದರೂ ಹೋದರೆ ಅವರ ಪೂರ್ವಾಪರ ವಿಚಾರಿಸಲಾಗುತ್ತಿದೆಯಂತೆ. ಒಂದು ವೇಳೆ ಅವರು ಜೆಡಿಎಸ್‍ಗೆ ವೋಟ್ ಹಾಕಿದವರಾದರೆ ಅಂತಹವರಿಗೆ ಲೋನ್ ನೀಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಕಳೆದ ವಿಧಾಸಭಾ ಚುನಾವಣೆಯಲ್ಲಿ ತುಮಕೂರಿನ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸೋಲಿನ ಪ್ರತಿಕಾರವನ್ನು ಮತದಾರರ ಮೇಲೆ ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಮಧುಗಿರಿಯ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾಗಿರೋ ಕೆ.ಎನ್.ರಾಜಣ್ಣ ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕಲ್ಲಿ ಸಾಲ ಕೊಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

    ಮಧುಗಿರಿ ತಾಲೂಕು ಗುಟ್ಟೆ ಗ್ರಾಮದ ಮಹಿಳಾ ಸಂಘದ ಸದಸ್ಯೆಯರಿಗೆ ಕೊಡಿಗೇನಹಳ್ಳಿಯ ಡಿಸಿಸಿ ಬ್ಯಾಂಕ್‍ನಲ್ಲಿ ಸಾಲ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬಳಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ರಾಜಣ್ಣ ಪತ್ನಿ ಶಾಂತಲಾ ಕೂಡ ನೀವು ನಮಗೆ ಬೆಂಬಲಿಸಿಲ್ಲ, ಜೆಡಿಎಸ್‍ಗೆ ಬೆಂಬಲಿಸಿದ್ದೀರಿ ಹೀಗಾಗಿ ನಿಮಗೆ ಸಾಲ ಕೊಡಲು ಸಾಧ್ಯವಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ ಎಂದು ಮಹಿಳಾ ಸಂಘದ ಸದಸ್ಯೆಯರು ಆರೋಪಿಸಿದ್ದಾರೆ.

    ಮಧುಗಿರಿ ಕ್ಷೇತ್ರದಲ್ಲಿ ಯಾರೇ ಡಿಸಿಸಿ ಬ್ಯಾಂಕಲ್ಲಿ ಲೋನ್ ಕೇಳಲು ಹೋದರೂ ಮೊದಲು ಆ ವ್ಯಕ್ತಿಯ ಫೋಟೋವನ್ನು ವಾಟ್ಸಾಪ್ ಮೂಲಕ ಅಧ್ಯಕ್ಷ ರಾಜಣ್ಣ ಅವರಿಗೆ ಕಳುಹಿಸಬೇಕಂತೆ. ಆಗ ರಾಜಣ್ಣ ಆ ವ್ಯಕ್ತಿಯ ಪೂರ್ವಾಪರ ವಿಚಾರಿಸಿ, ಯಾವ ಬೂತ್ ಹಾಗೂ ಆ ಬೂತಲ್ಲಿ ಎಷ್ಟು ಮತ ತಮಗೆ ಬಂದಿದೆ ಎಂಬುದನ್ನು ತಾಳೆ ಹಾಕುತ್ತಾರೆ. ಬಳಿಕ ಆ ಊರಿನ ತಮ್ಮ ಮುಖಂಡರ ಬಳಿ ಚರ್ಚಿಸಿ ಬಳಿಕ ಲೋನ್ ಮಂಜೂರು ಮಾಡುತ್ತಿದ್ದಾರೆ. ಜೆಡಿಎಸ್‍ಗೆ ಮತ ಹಾಕಿದ್ದಾರೆ ಅನ್ನೋದು ಗೊತ್ತಾದರೆ ಅವರಿಗೆ ಲೋನ್ ಸಿಗಲ್ಲ. ಬಳಿಕ ಮನೆಗೆ ಕರೆಯಿಸಿಕೊಂಡು ನೀವು ಜೆಡಿಎಸ್ ಪರ ಕೆಲಸ ಮಾಡಿದ್ದೀರಾ? ಲೋನ್ ಕೋಡೊಕೆ ಮಾತ್ರ ನಾವು ಬೇಕಾ ಎಂದು ಅವಮಾನಿಸುತ್ತಾರೆ ಎನ್ನುವ ದೂರುಗಳು ಕೇಳಿ ಬಂದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]