Tag: ವಂದಿತಾ

  • ‘ಅಪ್ಪುಗೆ’ ಹಾಡು ರಿಲೀಸ್ ಮಾಡಿದ ಪುನೀತ್ ಪುತ್ರಿ ವಂದಿತಾ

    ‘ಅಪ್ಪುಗೆ’ ಹಾಡು ರಿಲೀಸ್ ಮಾಡಿದ ಪುನೀತ್ ಪುತ್ರಿ ವಂದಿತಾ

    ಯುವರಾಜ್ ಕುಮಾರ್ (Yuvraj Kumar) ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದಿರುವ ಯುವ (Yuva) ಚಿತ್ರದ ಮತ್ತೊಂದು ಹಾಡು ಇಂದು ಬಿಡುಗಡೆ ಆಗಿದೆ. ‘ಅಪ್ಪುಗೆ’ (Appuge) ಹೆಸರಿನಲ್ಲಿ ಮೂಡಿ ಬಂದಿರುವ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಪುನೀತ್ ರಾಜ್ ಕುಮಾರ್ ಪುತ್ರಿ ವಂದಿತಾ ಇಂದು ಬಿಡುಗಡೆ ಮಾಡಿದರು.

    ಅಪ್ಪುಗೆ ಮೇಲೆ ಚಿತ್ರಿತವಾದ ವಿಶೇಷ ಹಾಡು ಇದಾಗಿದ್ದು, ಸಂತೋಶ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ, ಹೊಂಬಾಳೆ ಫಿಲಂಸ್ ನಲ್ಲಿ ಬ್ಯಾನರ್ ಅಡಿ ವಿಜಯ್ ಕಿರಗಂದೂರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಹಾಡು ಬಿಡುಗಡೆ ಆಗಿದೆ.

    ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಯುವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಮಗಳು ವಂದಿತಾ (Vandita) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತಂದೆ ಮಗನ ಬಾಂಧ್ಯವದ ಹಾಡು ಇದಾಗಿದ್ದು, ಯುವ ಸಿನಿಮಾದ ಬಹುಮುಖ್ಯ ಘಟ್ಟದಲ್ಲಿ ಹಾಡು ಇರಲಿದೆ. ಈ ಹಾಡನ್ನು ಬಿಡುಗಡೆ ಮಾಡಿದ ವಂದಿತಾಗೆ ಚಿತ್ರತಂಡದಿಂದ ಅಪ್ಪು ಫೋಟೋ ಉಡುಗೊರೆಯಾಗಿ ನೀಡಲಾಯಿತು. ಅಪ್ಪನ ಫೋಟೋ ನೋಡಿ ವಂದಿತಾ ಭಾವುಕರಾದರು.

     

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿತ್ತು, ವಿಜಯ್ ಪ್ರಕಾಶ್ ಗೀತೆಗೆ ಧ್ವನಿಯಾಗಿದ್ದಾರೆ. ಈ ಹಾಡಿನ ಸಾಹಿತ್ಯ ಸಂತೋಷ್ ಆನಂದ್ ರಾವ್ ಅವರ ಬರವಣಿಗೆಯಲ್ಲಿ ಮೂಡಿ ಬಂದಿದೆ.

  • ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

    ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

    – ಬಿಕ್ಕಿ ಬಿಕ್ಕಿ ಅತ್ತ ಎರಡನೇ ಮಗಳು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡಿರುವ ಅಭಿಮಾನಿಗಳು, ಸ್ಯಾಂಡಲ್‍ವುಡ್ ಸೇರಿದಂತೆ ಇಡೀ ಕುಟುಂಬವೇ ಕಣ್ಣೀರಿಡುತ್ತಿದೆ.

    ಅಪ್ಪು ಅವರ ಸದಾಶಿವನಗದರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ದೊಡ್ಮನೆಯ ಕಿರಿಯ ಪುತ್ರ ಇನ್ನಿಲ್ಲ ಎನ್ನುವ ಆಘಾತದ ಸುದ್ದಿ ಬರುತ್ತಲೇ ಪುನೀತ್ ರಾಜ್‍ಕುಮಾರ್ ಅವರ ಇಡೀ ಕುಟುಂಬ ಕಣ್ಣೀರ ಮಡುವಿನಲ್ಲಿ ಮುಳುಗಿದೆ. ಪುನೀತ್ ಅವರ ನಿವಾಸ, ಕಂಠೀರವ ಸ್ಟೇಡಿಯಂ ಮುಂದೆ ಅಪ್ಪು ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.

    ಜಿಮ್ ಮಾಡುವ ವೇಳೆ ಸುಸ್ತಾಗಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಕುಟುಂಬ, ವೈದ್ಯರ ಸಲಹೆ ಮೇರೆಗೆ ನಿನ್ನೆ 11 ಗಂಟೆಯ ಸುಮಾರಿಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿಧಿ ತನ್ನ ಆಟ ಮುಗಿಸಿತ್ತು. ಪುನೀತ್ ಇನ್ನಿಲ್ಲ ಎನ್ನವ ಸುದ್ದಿ ಬರುತ್ತಲೇ ಇಡಿ ಕುಟುಂಬಕ್ಕೆ ಸಿಡಿಲು ಬಡಿದಂತಾಗಿದೆ. ಪತಿ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ಅಶ್ವಿನಿ ಕಣ್ಣೀರುಡುತ್ತಲೇ ಮೌನಕ್ಕೆ ಶರಣಾಗಿದ್ದಾರೆ. ಇತ್ತ ಮಗಳು ಕೂಡ ಬಿಕ್ಕಿಬಿಕ್ಕಿ ಅಳುತ್ತಿದ್ದು, ಹಿರಿಯ ಮಗಳು ಧೃತಿ ಅಮೆರಿಕಾದಲ್ಲಿ ವಾಸವಾಗಿದ್ದಾರೆ. ಇದೀಗ ಅಂತ್ಯಕ್ರಿಯೆ ನಡೆಸಲು ಇವರ ಬರುವಿಕೆಗಾಗಿ ಕಾಯುತ್ತಿದ್ದಾರೆ.  ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ

    ಪುನೀತ್ ಅವರ ನಿಧನದ ಸುದ್ದಿ ತಿಳಿದ ಸ್ನೇಹಿತರು, ಚಿತ್ರರಂಗದ ಕಲಾವಿದರು, ಗಣ್ಯರು ಆಸ್ಪತ್ರೆಗೆ ದೌಡಾಯಿಸಿದ್ದರು. ಇಂದು ಪುನೀತ್ ಅವರ ಪಾರ್ಥಿವ ಶರೀರವನ್ನು ಅಭಿಮಾನಿಗಳ ದರ್ಶನಕ್ಕೆಂದು ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗಿದೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗುತ್ತದ್ದು, ರಾಜ್ಯದ ಮೂಲೇ ಮೂಲೆಗಳಿಂದ ಅಭಿಮಾನಿ ಬರುತ್ತಿದ್ದಾರೆ. ಇದನ್ನೂ ಓದಿ:   ಚಿಕ್ಕಮಗಳೂರಿನ ನೇಚರ್, ಕಾಫಿ ಅಂದ್ರೆ ಪುನೀತ್‍ಗೆ ತುಂಬಾ ಇಷ್ಟ: ಭರತ್