Tag: ವಕೀಲೆ

  • ಯುವ ವಕೀಲೆ ಅನುಮಾನಸ್ಪದ ಸಾವು – ಮನನೊಂದು ಯುವಕ ಆತ್ಮಹತ್ಯೆ

    ಯುವ ವಕೀಲೆ ಅನುಮಾನಸ್ಪದ ಸಾವು – ಮನನೊಂದು ಯುವಕ ಆತ್ಮಹತ್ಯೆ

    ನೆಲಮಂಗಲ: ಯುವ ವಕೀಲೆಯೊಬ್ಬರು (Lawyer) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.

    ರಮ್ಯ(27) ಸಾವನ್ನಪ್ಪಿದ ವಕೀಲೆ. ನೆಲಮಂಗಲ ಬಳಿಯ ಶ್ರೀನಿವಾಸಪುರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ನಿಧನ

    ವಕೀಲೆ ಮನೆಯಲ್ಲೇ ವಾಸವಿದ್ದ ಪುನೀತ್(22) ಎಂಬ ಯುವಕನೂ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವುಡ್ ವರ್ಕ್ ಕೆಲಸ ಮಾಡ್ಕೊಂಡಿದ್ದ ಪುನೀತ್, ವಕೀಲೆಯ ಮನೆಯಲ್ಲಿ ವಾಸವಿದ್ದ. ವಕೀಲೆಯ ಮನೆಯಲ್ಲಿ ಸಾಕುಮಗನಂತೆ ಜೀವನ ನಡೆಸುತ್ತಿದ್ದ ಪುನೀತ್, ಆಕೆಯ ಸಾವು ನೋಡಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ಹೀಗೆ ನಡೆಸಿಕೊಳ್ಳುತ್ತೀರಾ ? – ರಾಹುಲ್‌ಗೆ ಸುಪ್ರೀಂ ತರಾಟೆ


    ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಘಟನೆಯ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಂದನ್- ನಿವೇದಿತಾ ವಿಚ್ಚೇದನಕ್ಕೆ ನಿಜವಾದ ಕಾರಣ ರಿವೀಲ್!

    ಚಂದನ್- ನಿವೇದಿತಾ ವಿಚ್ಚೇದನಕ್ಕೆ ನಿಜವಾದ ಕಾರಣ ರಿವೀಲ್!

    ನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Chandan Shetty- Niveditha Gowda) ಅವರ ವಿಚ್ಛೇದನ ಶುಕ್ರವಾರ ಭಾರೀ ಸುದ್ದಿಯಾಗಿತ್ತು. ಚಂದನವನದಲ್ಲಿ ಕ್ಯೂಟ್ ಕಪಲ್ ಆಗಿದ್ದ ದಂಪತಿ ಏಕಾಏಕಿ ಬೇರೆಯಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತು. ಅಲ್ಲದೇ ಹಲವರು ಇದಕ್ಕೆ ಕಾರಣವನ್ನೂ ಹುಡುಕಲು ಮುಂದಾಗಿದ್ದರು. ಈ ಸಂಬಂಧ ಸೋಶಿಯಲ್ ಮಿಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದವು. ಆದರೆ ಇದೀಗ ಚಂದನ್ ಪರ ವಕೀಲೆ ಅನಿತಾ ಅವರು ವಿಚ್ಛೇದನಕ್ಕೆ ನಿಜವಾದ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ.

    ವಕೀಲೆ ಅನಿತಾ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಒಂದು ವರ್ಷದಿಂದ ದೂರ ಇರುವುದನ್ನೇ ತೋರಿಸಿ ಪರಸ್ಪರ ಮ್ಯೂಚುವಲ್ ಅಂಡರ್ ಸ್ಟಾಂಡಿಂಗ್ ಮೂಲಕ ವಿಚ್ಛೇದನ ಪಡೆದಿದ್ದಾರೆ. ಪತಿ-ಪತ್ನಿಯಾಗಿ ಮುಂದುವರಿಯಲು ಪರಸ್ಪರ ಹೊಂದಾಣಿಕೆ ಇಲ್ಲದಿರುವುದೇ ಮುಖ್ಯ ಕಾರಣ ಕೊಟ್ಟು ವಿಚ್ಛೇದನ ಪಡೆದಿದ್ದಾರೆ ಎಂದರು. ಇದನ್ನೂ ಓದಿ: ಡಿವೋರ್ಸ್ ವಿಚಾರ ಅಧಿಕೃತವಾಗಿ ಬಹಿರಂಗಪಡಿಸಿದ ಚಂದನ್- ನಿವೇದಿತಾ

    ಡಿವೋರ್ಸ್‌ ಪ್ರೊಸೆಸ್‌ ಬೇಗ ಆಗಿದ್ದೇಗೆ..?: ಸಂಧಾನ ಮಾಡುವ ಪ್ರಯತ್ನ ಮಾಡಿದರೂ ಇಬ್ಬರೂ ಯಾವುದೇ ಕಾರಣಕ್ಕೂ ಡಿವೋರ್ಸ್ ಪರಿಹಾರದ ಮಾತಿಗೇ ಬರಲಿಲ್ಲ. ಉತ್ತಮ ಫ್ರೆಂಡ್ಸ್ ಆಗಿ ಮುಂದುವರಿಯಲು ಇಚ್ಛಿಸಿದ್ದಾರೆ. ಆದರೆ ಗಂಡ-ಹೆಂಡತಿಯಾಗಲು ಇಷ್ಟಪಡಲಿಲ್ಲ. ಡಿಸ್ಪ್ಯೂಟ್ ಇದ್ದಲ್ಲಿ ಪ್ರೊಸೆಸ್ ತಡವಾಗುತ್ತೆ. ಆದರೆ ಇವರ ಕೇಸ್ ನಲ್ಲಿ ಇಬ್ಬರದ್ದೂ ಒಂದೇ ಮಾತಾಗಿತ್ತು. 13-ಬಿ ಪ್ರಕಾರ ವಿಚ್ಛೇದನ ಧಾವೆಯಲ್ಲಿ ಒಂದು ವರ್ಷದಿಂದ ಪರಸ್ಪರ ದೂರ ಇರುವುದು ಹಾಗೂ ಹೊಂದಾಣಿಕೆ ಇಲ್ಲದಿರೋದನ್ನ ತೋರಿಸಿದ್ದರಿಂದ ವಿಚ್ಛೇದನದ ಪ್ರೊಸೆಸ್ ಬೇಗ ಆಗಿದೆ ಎಂದು ಹೇಳಿದರು.

    ಕಳೆದ ಮೂರು ತಿಂಗಳಿಂದ ಸಮಯಾವಕಾಶ ಕೊಟ್ಟು ಕೌನ್ಸೆಲಿಂಗ್ ಕೂಡ ಮಾಡಲಾಯಿತು. ಆದರೂ ಇಬ್ಬರ ನಿರ್ಧಾರ ಒಂದೇ ಇರೋದ್ರಿಂದ ಜೂನ್ 7 ರ ಶುಕ್ರವಾರದಂದು ವಿಚ್ಛೇದನ ಪ್ರಕ್ರಿಯೆ ಸಂಪೂರ್ಣವಾಗಿದೆ ಎಂದು ಅನಿತಾ ತಿಳಿಸಿದರು.

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಬಳಿಕ 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪ್ರೋಸ್ ಮಾಡಿದ್ದರು. ಅಲ್ಲದೇ 2020 ಫೆಬ್ರವರಿಯಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

    ಇದಾದ ಬಳಿಕ ಚೆನ್ನಾಗಿಯೇ ಇದ್ದ ಜೋಡಿ, ಸೊಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದರು. ನಿವೇದಿತಾ ರಿಯಾಲಿ ಶೋದಲ್ಲಿ ಕೂಡ ಕೆಲ ಸಮಯದ ಹಿಂದೆ ಕಾಣಿಸಿಕೊಂಡಿದ್ದರು. ಸದ್ಯ ಮೂವಿಯಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ಶುಕ್ರವಾರ ದಿಢೀರ್ ಎಂದು ಶಾಂತಿನಗರದ ಫ್ಯಾಮಿಲಿ ಕೋರ್ಟ್‍ಗೆ ಹಾಜರಾಗಿ ಅಭಿಮಾನಿಗಳಿಗೆ ಶಾಕ್ ನೀಡಿ ಗೊಂದಲಕ್ಕೀಡು ಮಾಡಿದ್ದರು. ನಂತರ ಸಂಜೆಯ ವೇಳೆಗೆ ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕ ವಿಚ್ಛೇದನ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದರು.

  • ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

    ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

    ನವದೆಹಲಿ: ಸುಪ್ರೀಂಕೋರ್ಟ್ (SupremeCourt) ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.

    ರೇಣು ಸಿನ್ಹಾ (Renu Sinha) ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

    ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು ಮತ್ತು ಮುಂಗಡವನ್ನೂ ತೆಗೆದುಕೊಂಡಿದ್ದರು ಎಂದು ಒಪ್ಪಿಕೊಂಡರು. ಆದರೆ ತಮ್ಮ ನಿರ್ಧಾರಕ್ಕೆ ಪತ್ನಿ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಮತ್ತು ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ, ಕ್ಯಾನ್ಸರ್ ಮುಕ್ತವಾಗಿದ್ದರು ಎಂದು ವಿಚಾರಣೆ ವೇಳೆ ಅಜಯ್ ನಾಥ್ ಹೇಳಿದ್ದಾರೆ.

    ಪ್ರಾಥಮಿಕ ತನಿಖೆಯ ವೇಳೆ ಅತಿಯಾದ ರಕ್ತ ಸೋರಿಕೆಯಿಂದ ರೇಣು ಸಾವನ್ನಪ್ಪಿರಬಹುದು ಎಂದು ತಿಳಿದು ಬಂದಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದ ಮೊದಲ ತೃತೀಯಲಿಂಗಿ ವಕೀಲರಾಗಿ ಪದ್ಮಲಕ್ಷ್ಮಿ ಆಯ್ಕೆ

    ಕೇರಳದ ಮೊದಲ ತೃತೀಯಲಿಂಗಿ ವಕೀಲರಾಗಿ ಪದ್ಮಲಕ್ಷ್ಮಿ ಆಯ್ಕೆ

    ಕೇರಳ: ಕೇರಳ (Kerala) ರಾಜ್ಯದ ಬಾರ್ ಕೌನ್ಸಿಲ್‌ನ ಮೊದಲ ತೃತೀಯಲಿಂಗಿ (Transgender) ವಕೀಲರಾಗಿ (Lawyer) ಪದ್ಮಲಕ್ಷ್ಮಿ (Padma Lakshmi) ಅವರು ಆಯ್ಕೆಯಾಗಿದ್ದಾರೆ.

    ಈ ವಿಚಾರವನ್ನು ರಾಜ್ಯದ ಕೈಗಾರಿಕಾ ಸಚಿವ ಪಿ.ರಾಜೀವ್  (P.Rajeev) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೀವನದ ಎಲ್ಲಾ ಅಡೆತಡೆಗಳನ್ನು ಎದುರಿಸಿ ಕೇರಳದ ಮೊದಲ ತೃತೀಯಲಿಂಗಿ ವಕೀಲರಾಗಿ ಆಯ್ಕೆಯಾದ ಪದ್ಮಲಕ್ಷ್ಮಿಯವರಿಗೆ ಅಭಿನಂದನೆಗಳು. ಮೊದಲಿಗರಾಗುವುದು ಇತಿಹಾಸದಲ್ಲಿ ಕಠಿಣವಾಗಿದೆ. ಗುರಿಯ ಹಾದಿಯಲ್ಲಿ ಅಡೆತಡೆಗಳಿರುತ್ತದೆ. ಅಲ್ಲಿ ನಿರುತ್ಸಾಹಗೊಳಿಸುವ ಜನರು ತುಂಬಾ ಇರುತ್ತಾರೆ. ಆದರೆ ಪದ್ಮಲಕ್ಷ್ಮಿಯವರು ಇವೆಲ್ಲವನ್ನೂ ಮೀರಿ ಕಾನೂನು ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಇವರ ಜೀವನವು ಉಳಿದ ಮಂಗಳಮುಖಿಯರು ವಕೀಲ ವೃತ್ತಿಗೆ ಬರಲು ಸ್ಫೂರ್ತಿಯಾಗಲಿ ಎಂದು ಪಿ.ರಾಜೀವ್ ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿರುವ ಶೇ.90 ರಷ್ಟು ಮುಸ್ಲಿಮರು ಮತಾಂತರ ಆದವ್ರು – ಬಿಹಾರ ಸಚಿವ

     

    View this post on Instagram

     

    A post shared by P Rajeev (@prajeevofficial)


    ಬಾರ್ ಕೌನ್ಸಿಲ್ ಆಫ್ ಇಂಡಿಯಾ (Bar Council Of India), ಬಾರ್ ಎನ್‌ರೋಲ್‌ಮೆಂಟ್ (Bar Enrollment) ಪ್ರಮಾಣಪತ್ರವನ್ನು ಪಡೆದ 1,500ಕ್ಕೂ ಹೆಚ್ಚು ಕಾನೂನು ಪದವೀಧರರಲ್ಲಿ ಪದ್ಮಲಕ್ಷ್ಮಿಯವರು ಕೂಡಾ ಒಬ್ಬರು. ಇವರು ಎರ್ನಾಕುಲಂನ (Ernakulam) ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪದವಿಯನ್ನು ಪಡೆದಿದ್ದಾರೆ. ಇದನ್ನೂ ಓದಿ: ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ಚಿಂತಿಸುತ್ತಿದ್ದೇವೆ- ಸಿಜೆಐ

    ಭಾರತದ ಮೊದಲ ತೃತೀಯಲಿಂಗಿ ನ್ಯಾಯಾಧೀಶೆ (Judge) ಎಂಬ ಹೆಗ್ಗಳಿಕೆಗೆ ಜೋಯಿತಾ ಮೊಂಡಲ್ (Joyita Mondal) ಪಾತ್ರರಾಗಿದ್ದಾರೆ. ಇವರು 2017ರಲ್ಲಿ ಪಶ್ಚಿಮ ಬಂಗಾಳದ (West Bengal) ಇಸ್ಲಾಂಪುರದ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶೆಯಾಗಿ ನೇಮಕಗೊಂಡರು.

    2018ರ ಆರಂಭದಲ್ಲಿ ಮಹಾರಾಷ್ಟ್ರದ (Maharashtra) ನಾಗಪುರದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ತೃತೀಯಲಿಂಗಿ ಕಾರ್ಯಕರ್ತೆ ವಿದ್ಯಾ ಕಾಂಬ್ಳೆ ಅವರನ್ನು ಸದಸ್ಯ ನ್ಯಾಯಾಧೀಶರಾಗಿ  ನೇಮಿಸಲಾಯಿತು. ಅದೇ ವರ್ಷ ಭಾರತದ ಮೂರನೇ ತೃತೀಯಲಿಂಗಿ ನ್ಯಾಯಾಧೀಶರಾಗಿ ಗುವಾಹಟಿಯ ಸ್ವಾತಿ ಬಿದಾನ್ ಅವರನ್ನು ನೇಮಕಗೊಳಿಸಲಾಯಿತು. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

  • ವಕೀಲೆ ಜೊತೆ ಅಸಭ್ಯ ವರ್ತನೆ ಮಾಡಿದ್ದ ಸಿಪಿಐ ಮೇಲೆ ಪ್ರಕರಣ ದಾಖಲು

    ವಕೀಲೆ ಜೊತೆ ಅಸಭ್ಯ ವರ್ತನೆ ಮಾಡಿದ್ದ ಸಿಪಿಐ ಮೇಲೆ ಪ್ರಕರಣ ದಾಖಲು

    ಧಾರವಾಡ: ವಕೀಲೆಯೊಬ್ಬರು (Lawyer) ಠಾಣೆಗೆ ಬಂದಾಗ ಅವರ ಜೊತೆಗೆ ಸಿಪಿಐ (CPI) ಒಬ್ಬರು ಅನುಚಿತ ವರ್ತನೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಧಾರವಾಡದಲ್ಲಿ (Dharwad) ಸಿಪಿಐ ಮೇಲೆ ಪ್ರಕರಣ ದಾಖಲಾಗಿದೆ.‌

    ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ ಕುಸಗಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ವಕೀಲೆ‌ ಒಂದು ಪ್ರಕರಣಕ್ಕೆ ಸಂಬಂಧಿಸಿ ಧಾರವಾಡ ಗ್ರಾಮೀಣ ಠಾಣೆಗೆ ಹೋಗಿದ್ದರು. ಆದರೆ ಈ ವೇಳೆ ವಕೀಲೆಗೆ ಕಣ್ಣು ಹೊಡೆದು, ತನ್ನ ತುಟಿಗೆ ತನ್ನದೇ ಕೈಗೆ ಮುತ್ತು ಕೊಟ್ಟು ವಕೀಲೆಗೆ ಅದನ್ನು ಫ್ಲೈಯಿಂಗ್ ಕಿಸ್ ಮಾಡಿದ್ದರು.‌ ಈ ವೇಳೆ ವಕೀಲೆ ಈ‌ ಬಗ್ಗೆ ಪ್ರಶ್ನೆ ಮಾಡಿದ್ದರೂ ಅದಕ್ಕೆ ಇದು ಮಾಡಿದ್ದು ಏನು ತಪ್ಪು ಎಂದು ಸಿಪಿಐ ಕುಸುಗಲ್ ಪ್ರಶ್ನೆ ಮಾಡಿ ಅನುಚಿತವಾಗಿ ವರ್ತಿಸಿದ್ದ. ಇದನ್ನೂ ಓದಿ: ಭವಾನಿ ಅಕ್ಕ, ಪ್ರಜ್ವಲ್ ರೇವಣ್ಣ ನಶೆಯಲ್ಲಿರ್ತಾರೆ; ಥರ್ಟಿ, ಸಿಕ್ಸ್ಟಿ ಅಲ್ಲ 2 ಬಾಟ್ಲಿ ಕುಡಿತಾರೆ – ಪ್ರೀತಂ ಗೌಡ

    ಈ ಸಂಬಂಧ ವಕೀಲೆ ದೂರು ಕೊಡಲು ಠಾಣೆಗೆ ಹೋದಾಗ ದೂರು ಪಡೆಯುವುದಕ್ಕೂ ಪೊಲೀಸರು ಹಿಂದೇಟು ಹಾಕಿದ್ದರು. ಪೊಲೀಸರ ವರ್ತನೆ ಖಂಡಿಸಿ ಪ್ರತಿಭಟಿಸಿದ್ದ ಧಾರವಾಡ ವಕೀಲರು, ಎಸ್ಪಿ ಲೋಕೇಶ್ ಜಗಲಾಸರ್ ಅವರಿಗೆ ಮನವಿ ಕೊಟ್ಟು ಕ್ರಮ‌ ಕೈಗೊಳ್ಳಲು ಹೇಳಿದ್ದರು. ಇಲ್ಲದೇ ಹೋದಲ್ಲಿ ಉಗ್ರ ಪ್ರತಿಭಟನೆ ಮಾಡೋ ಎಚ್ಚರಿಕೆ ನೀಡಿದ್ದ ವಕೀಲರು 3 ಗಂಟೆ ಧಾರವಾಡ ಜುಬ್ಲಿ ವೃತ್ತದಲ್ಲಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಈಗ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಇಬ್ಬರ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಒತ್ತುವರಿ ತೆರವಿಗೆ ಮುಂದಾದ ತಹಶೀಲ್ದಾರ್‌ಗೆ ವಕೀಲೆಯಿಂದ ಆವಾಜ್‌

    ಅಕ್ರಮ ಒತ್ತುವರಿ ತೆರವಿಗೆ ಮುಂದಾದ ತಹಶೀಲ್ದಾರ್‌ಗೆ ವಕೀಲೆಯಿಂದ ಆವಾಜ್‌

    ಬೆಂಗಳೂರು: ಅಕ್ರಮ ಒತ್ತುವರಿ(Encroachment) ತೆರವಿಗೆ ಮುಂದಾದ ನೆಲಮಂಗಲ ತಹಶೀಲ್ದಾರ್‌ಗೆ (Nelamangala Tahsildar) ವಕೀಲೆಯೊಬ್ಬರು ಆವಾಜ್‌ ಹಾಕಿದ್ದಾರೆ.

    ಡಾಬಸ್ ಪೇಟೆಯ ಸರ್ವೇ ನಂಬರ್ 91 ರಲ್ಲಿ  ವಸೀಂ ಎಂಬುವರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಒಂದು ವಾರದ ಹಿಂದೆ ವಾಸೀಂ ಅವರಿಗೆ  ನೋಟಿಸ್ ನೀಡಿ ತೆರವುಗೊಳಿಸುವಂತೆ ತಾಲೂಕು ಆಡಳಿತ ಸೂಚನೆ ನೀಡಿತ್ತು.

    ಜಾಗ ತೆರವುಗೊಳಿಸದ ಹಿನ್ನೆಲೆಯಲ್ಲಿ ಇಂದು ಸೋಂಪುರ ಹೋಬಳಿಯ ಅಗಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಂದನಹೊಸಹಳ್ಳಿ ಹಾಗೂ ಸೋಂಪುರ ಗಡಿ ಭಾಗಕ್ಕೆ ತಹಶೀಲ್ದಾರ್‌ ಮಂಜುನಾಥ್ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ಇನ್ನೂ ಯಾಕೆ ಜಾಗವನ್ನು ತೆರವು ಮಾಡಿಲ್ಲ ಎಂದು ಕೇಳಿದ್ದಕ್ಕೆ ವಾಸೀಂ ಪರ ವಕೀಲೆ ಆಸ್ಮಾ ತಹಶೀಲ್ದಾರ್ ಮೇಲೆ ಏಕಾಏಕಿ, ನೀನು ಯಾವನೋ? ನಿನಗೆ ತೆರವುಗೊಳಿಸಲು ಅನುಮತಿ ಕೊಟ್ಟವರು ಯಾರು? Who the hell are you ಎಂದು ಆವಾಜ್ ಹಾಕಿದ್ದಾರೆ.

    ವಕೀಲೆ ತಹಶೀಲ್ದಾರ್‌ಗೆ ಆವಾಜ್ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಹಶೀಲ್ದಾರ್‌ ಮಂಜುನಾಥ್ ಅವರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಏಕವಚನದಲ್ಲಿ ನಿಂದನೆ ಮಾಡಿದ ಆರೋಪದಡಿ ವಕೀಲೆ ಆಸ್ಮಾ ವಿರುದ್ಧ ಡಾಬಸ್ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಒತ್ತುವರಿಯಾದ ಜಾಗದಲ್ಲಿ ಅನಧಿಕೃತ ಕಟ್ಟಡಗಳಿದ್ದರೂ ಯಾವುದೇ ಮುಲಾಜಿಗೆ ಒಳಗಾಗದೆ ತೆರವು ಗೊಳಿಸಲಾಗುವುದು. ಸೂಕ್ತ ಭದ್ರತೆ ಮೇರೆಗೆ ಈ ಕಾರ್ಯ ನಡೆಯಲಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ. ಈ ವೇಳೆ ಹೋಟೆಲ್ ನಿರ್ಮಿಸಿ ಬಾಡಿಗೆ ನೀಡಿರುವ ವಾಸೀಂಗೆ ಎರಡು ದಿನದಲ್ಲಿ ಹೋಟೆಲ್ ತೆರವುಗೊಳಿಸುವಂತೆ ಖಡಕ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ‘ಕಬ್ಬಿಣದ ಕಾಲುಗಳ ವ್ಯಕ್ತಿ’ ಭಾರತಕ್ಕೆ ಗರಬಡಿಸಿದ್ದಾನೆ: ಮೋದಿಯನ್ನು ವ್ಯಂಗ್ಯವಾಡಿದ ಕಾಂಗ್ರೆಸ್

    ಆರೋಪ ಏನು?
    ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಅಗಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಂದನಹೊಸಹಳ್ಳಿ ಹಾಗೂ ಸೋಂಪುರ ಗಡಿ ಭಾಗವಾಗಿರುವ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಸರ್ವೆ ನಂಬರ್ 91 ರಲ್ಲಿ 34 ಗುಂಟೆ ಸರ್ಕಾರಿ ಗುಂಡು ತೋಪು ಇತ್ತು. ಅದರಲ್ಲಿ 7 ಗುಂಟೆ ರಾಷ್ಟ್ರೀಯ ಹೆದ್ದಾರಿಗೆ ಹಂಚಿಕೆಯಾಗಿದ್ದು, 10 ಗುಂಟೆ ರೈತ ಸಂಪರ್ಕ ಕೇಂದ್ರಕ್ಕೆ ನೀಡಲಾಗಿದೆ.

    5 ಗುಂಟೆ ಜಮೀನನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ BDCC ಬ್ಯಾಂಕಿಗೆ ಕಾಯ್ದಿರಿಸಲಾಗಿದೆ. ಇನ್ನುಳಿದ ಸರ್ಕಾರಿ ಗುಂಡು ತೋಪಿನ ಜಾಗದಲ್ಲಿ 2.08 ಗುಂಟೆ ಒತ್ತುವರಿ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇಲ್ಲಿನ ಪಕ್ಕದ ಜಮೀನು ಮಾಲೀಕ ವಾಸೀಂ ಒತ್ತುವರಿ ಮಾಡಿ ಹೋಟೆಲ್‌ ನಡೆಸಲು ಬಾಡಿಗೆ ನೀಡಿದ್ದಾರೆ ಎಂಬ ಆರೋಪ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಹಾಡಹಗಲೇ ವಕೀಲೆ ಮೇಲೆ ದುಷ್ಕರ್ಮಿಯಿಂದ ಕುಡುಗೋಲಿನಲ್ಲಿ ಅಟ್ಯಾಕ್

    ಹಾಡಹಗಲೇ ವಕೀಲೆ ಮೇಲೆ ದುಷ್ಕರ್ಮಿಯಿಂದ ಕುಡುಗೋಲಿನಲ್ಲಿ ಅಟ್ಯಾಕ್

    ಚೆನ್ನೈ: ಹಾಡಹಗಲಲ್ಲೇ ಮಹಿಳಾ ವಕೀಲೆಯೊಬ್ಬರ(Woman advocate) ಮೇಲೆ ದುಷ್ಕರ್ಮಿಯೋರ್ವ ಕುಡುಗೋಲಿನಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಮಹಿಳೆಯ ಮುಖ ಹಾಗೂ ಕೈಗಳಿಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿದೆ.

    ತಮಿಳುನಾಡಿನ(Tamil Nadu) ತಿರುಪ್ಪೂರ್ ಜಿಲ್ಲೆಯಲ್ಲಿ (Tiruppur district) ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಮಹಿಳೆಯನ್ನು  ಕುಮಾರನ್ ಸಲೈನಲ್ಲಿರುವ (mahila court in Kumaran Salai) ಮಹಿಳಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜಮೀಲಾ ಬಾನು (Jameela Banu) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇಂದು ಬ್ರಿಟನ್ ರಾಣಿ ಎಲಿಜಬೆತ್-2 ಅಂತ್ಯಕ್ರಿಯೆ – ದ್ರೌಪದಿ ಮುರ್ಮು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಭಾಗಿ

    ತಾವು ನಿರ್ವಹಿಸುತ್ತಿರುವ ಹಿಂದಿನ ಪ್ರಕರಣಗಳ (Case) ಬಗ್ಗೆ ಕೆಲವು ಫೈಲ್‍ಗಳನ್ನು ತೆಗೆದುಕೊಳ್ಳಲು ಅವರು ತಮ್ಮ ಮಗಳೊಂದಿಗೆ ವಕೀಲರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಏಕಾಏಕಿ ಕಚೇರಿಗೆ ನುಗ್ಗಿದ ವ್ಯಕ್ತಿಯೋರ್ವ ಜಮೀಲಾ ಬಾನು ಅವರ ಮೇಲೆ ಕುಡುಗೋಲಿನಿಂದ(sickle) ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ತಾಯಿಯನ್ನು ರಕ್ಷಿಸಲು ಬಂದ ಮಗಳು ಕೂಡ ಗಾಯಗೊಂಡಿದ್ದಾರೆ(Injured). ಇದನ್ನೂ ಓದಿ: ಕಾರಿಗೆ ನಾಯಿಯನ್ನು ಕಟ್ಟಿ ನಡುರಸ್ತೆಯಲ್ಲಿ ಎಳೆದಾಡಿದ – ಕ್ರೂರಿ ವೈದ್ಯನ ವಿರುದ್ಧ ಕೇಸ್

    ನಂತರ ಜಮೀಲಾ ಬಾನು ಅಳುತ್ತಿರುವ ಶಬ್ಧ ಕೇಳಿಸಿಕೊಂಡು ಸ್ಥಳೀಯರು ಆಗಮಿಸಿದಾಗ, ಆರೋಪಿ ತನ್ನ ಕುಡುಗೋಲನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ತಲೆ ಮತ್ತು ಕೈಗಳಿಗೆ ಗಾಯಗೊಂಡಿದ್ದ ಜಮೀಲಾರನ್ನು ಚಿಕಿತ್ಸೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್

    ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್

    ಬಾಗಲಕೋಟೆ: ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್ ಆಗಿದೆ.

    ಈ ಹಿಂದೆ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಆದರೆ ಈಗ ಮಹಾಂತೇಶ್ ಚೊಳಚಗುಡ್ಡ ಅವರ ಮೇಲೆ ಸಂಗೀತಾ ಅವರು ಚಪ್ಪಲಿಯಲ್ಲಿ ಹೊಡೆದ ವೀಡಿಯೋ ವೈರಲ್ ಆಗಿದೆ.

    ನಿಜವಾಗಿ ನಡೆದಿದ್ದೇನು?
    ಮಹಾಂತೇಶ್ ಚೊಳಚಗುಡ್ಡ ಅವರ ಗಿಫ್ಟ್ ಸೆಂಟರ್ ವಾಗ್ವಾದದಿಂದ ಜಗಳ ಶುರುವಾಗಿತ್ತು. ಮೊದಲು ಸಂಗೀತಾ, ಮಹಾಂತೇಶ್ ಅವರಿಗೆ ಚಪ್ಪಲಿಯಲ್ಲಿ ಹೊಡೆದು, ಚಪ್ಪಲಿ ಎಸೆದಿದ್ದಾರೆ. ಅದಾದ ಬಳಿಕ ಮಹಾಂತೇಶ್ ಸಹ ಮಹಿಳೆಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದರು. ಇದನ್ನೂ ಓದಿ: ನಡುರಸ್ತೆಯಲ್ಲೇ ವಕೀಲೆ, ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ

    ಪ್ರಸ್ತುತ ಸಂಗೀತಾ ಚಪ್ಪಲಿಯಲ್ಲಿ ಹೊಡೆಯುವ ಹಾಗೂ ಮಹಾಂತೇಶ್ ಆಕೆಗೆ ಒದೆಯುವ ಎರಡೂ ವೀಡಿಯೋಗಳು ವೈರಲ್ ಆಗಿದೆ. ಬಾಗಲಕೋಟೆಯಲ್ಲಿ ಮೇ 14 ರಂದು ಈ ಪ್ರಕರಣ ನಡೆಯಿತ್ತು. ಆದರೆ ಈವರೆಗೂ ಮಹಾಂತೇಶ್ ಮಹಿಳೆಗೆ ಹಲ್ಲೆ ಮಾಡಿರುವ ವೀಡಿಯೋ ಅಷ್ಟೇ ವೈರಲ್ ಆಗಿತ್ತು. ಆರಂಭದಲ್ಲಿ ಸಂಗೀತಾ, ಮಹಾಂತೇಶ್ ಮೇಲೆ ಹಲ್ಲೆ ಮಾಡಿರುವ ತುಣುಕನ್ನು ಕಟ್ ಮಾಡಿ ವೀಡಿಯೋ ಹರಿಬಿಡಲಾಗಿತ್ತು.

  • ಮೊಬೈಲ್ ಚಾರ್ಜರ್ ವಯರ್‌ನಿಂದ ಪತಿಯ ಕೊಲೆ – ವಕೀಲೆಗೆ ಜೀವಾವಧಿ ಶಿಕ್ಷೆ

    ಮೊಬೈಲ್ ಚಾರ್ಜರ್ ವಯರ್‌ನಿಂದ ಪತಿಯ ಕೊಲೆ – ವಕೀಲೆಗೆ ಜೀವಾವಧಿ ಶಿಕ್ಷೆ

    – ನಾನು ಕೊನೆಯವರೆಗೂ ಹೋರಾಡುತ್ತೇನೆ

    ಕೋಲ್ಕತ್ತಾ: ಮೊಬೈಲ್ ಚಾರ್ಜರ್ ವಯರ್‌ನಿಂದ ಪತಿಯ ಕತ್ತು ಬಿಗಿದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ವಕೀಲೆಗೆ ಪಶ್ಚಿಮ ಬಂಗಾಳದ ಪ್ರಥಮ ದರ್ಜೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

    ವಕೀಲೆ ಅನಿಂದಿತಾ ಪಾಲ್‍ಗೆ ಶಿಕ್ಷೆಗೆ ಒಳಗಾಗಿದ್ದು, ಜೀವಾವಧಿ ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಲಾಗಿದೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ತ್ವರಿತ ನ್ಯಾಯಾಲಯವು ವಕೀಲೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

    ಅಪರಾಧಿ ಸಾಕ್ಷ್ಯಗಳ ನಾಶಕ್ಕೂ ಕಾರಣ ಆಗಿದ್ದಾಳೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಭಾಸ್ ಚಟರ್ಜಿ, ಇದು ಪೂರ್ವನಿಯೋಜಿತ ಕೊಲೆ ಎಂದು ಆರೋಪಿಸಿ ಮರಣದಂಡನೆ ಶಿಕ್ಷೆ ವಿಧಿಸುವಂತೆ ವಾದ ಮಾಡಿಸಿದ್ದರು. ಆದರೆ ಅಪರಾಧಿ ಮೂರು ವರ್ಷದ ಮಗುವನ್ನು ಹೊಂದಿದ್ದರಿಂದ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೇ ಪ್ರತ್ಯಕ್ಷ ದರ್ಶಿಗಳಿಲ್ಲದ ಕಾರಣ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆಕೆಯನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ.

    ನ್ಯಾಯಾಲಯದಿಂದ ಅನಿಂದಿತಾಳನ್ನು ಜೈಲು ವ್ಯಾನ್‍ಗೆ ಕರೆದುಕೊಂಡು ಹೋಗುತ್ತಿದ್ದಾಗ “ನಾನು ಕೊನೆಯವರೆಗೂ ಈ ಪ್ರಕರಣದಲ್ಲಿ ಹೋರಾಡುತ್ತೇನೆ” ಎಂದು ಹೇಳಿದ್ದಾಳೆ.

    ಏನಿದು ಪ್ರಕರಣ?
    ವಕೀಲೆಯಾಗಿದ್ದ ಅನಿಂದಿತಾ ಪಾಲ್, ರಜತ್ ಡೇ ಜೊತೆ ವಿವಾಹವಾಗಿದ್ದಳು. ಪತಿಯೂ ಕೂಡ ವಕೀಲರಾಗಿದ್ದರು. ಆದರೆ 2018ರ ನವೆಂಬರ್ 24 ಮಧ್ಯರಾತ್ರಿ ಕೊಲ್ಕತ್ತಾದ ತಮ್ಮ ನ್ಯೂ ಟೌನ್ ಫ್ಲ್ಯಾಟ್‍ನಲ್ಲಿ ಮೊಬೈಲ್ ಫೋನ್ ಚಾರ್ಜರ್ ವಯರ್‌ನಿಂದ ಪತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಳು. ದಂಪತಿಯ ಮಧ್ಯೆ ವೈಮನಸ್ಸು ಉಂಟಾಗಿತ್ತು. ಇದೇ ರಜತ್ ಡೇ ಕೊಲೆಗೆ ಕಾರಣವಾಗಿತ್ತು.

    ಅನಿಂದಿತಾ ಬೇರೆ ರೂಮಿನಲ್ಲಿ ಮಲಗಿದ್ದಳು. ಆಗ ಪತಿಯ ರೂಮಿನಿಂದ ಏನೋ ಶಬ್ದ ಕೇಳಿದಾಗ ಓಡಿ ಹೋಗಿ ನೋಡಿದ್ದಳು. ಆಗ ಆಕೆಯ ಪತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಅನಿಂದಿತಾ ಪಾಲ್ ಪರ ವಕೀಲ ಪಿನಾಕ್ ಮಿತ್ರಾ ವಾದ ಮಂಡಿಸಿದ್ದರು.

    ರಜತ್ ಡೇ ಅವರ ತಂದೆ ಅನಿಂದಿತಾ ಪಾಲ್ ತನ್ನ ಮಗನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿ ಎಫ್‍ಐಆರ್ ದಾಖಲಿಸಿದ್ದರು. ನಂತರ ಪೊಲೀಸರು ವಿಚಾರಣೆ ಮಾಡಿ ನವೆಂಬರ್ 29 ರಂದು ಆಕೆಯನ್ನು ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ಮತ್ತು ವಾದಗಳು ಈ ವರ್ಷದ ಮಾರ್ಚ್ ನಲ್ಲಿ ಪೂರ್ಣಗೊಂಡಿತ್ತು. ಅಪರಾಧಿ ಅನಿಂದಿತಾ ಪಾಲ್ ಮತ್ತು ಅವರ ಪತಿ ಇಬ್ಬರೂ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಕಾನೂನು ಅಭ್ಯಾಸ ಮಾಡುತ್ತಿದ್ದರು.

  • ನಿರ್ಭಯಾ ಬದುಕಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು: ವಕೀಲೆ ಸೀಮಾ

    ನಿರ್ಭಯಾ ಬದುಕಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು: ವಕೀಲೆ ಸೀಮಾ

    -ತಡವಾದ್ರೂ ನ್ಯಾಯ ಸಿಕ್ತು

    ನವದೆಹಲಿ: ನಿರ್ಭಯಾಳನ್ನು ಬದುಕಿಸುತ್ತಿದ್ದರೆ ನನಗೆ ತುಂಬಾ ಖುಷಿಯಾಗುತ್ತಿತ್ತು ಎಂದು ನಿರ್ಭಯಾ ತಾಯಿ ಪರ ವಾದ ಮಾಡಿದ್ದ ವಕೀಲೆ ಸೀಮಾ ಕುಶ್‍ವಾಹಾ ಪ್ರತಿಕ್ರಿಯಿಸಿದ್ದಾರೆ.

    ಅಪರಾಧಿಗಳನ್ನು ಗಲ್ಲಿಗೇರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೀಮಾ, ನಿರ್ಭಯಾಳನ್ನು ಬದುಕಿದ್ದರೆ, ನನಗೆ ಹೆಚ್ಚು ಖುಷಿಯಾಗುತ್ತಿತ್ತು. ಆದರೆ ನಾವು ಆಕೆಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ದೇಶದ ಕಾನೂನು ಸುವ್ಯವಸ್ಥೆ ಇದರಲ್ಲಿ ಫೇಲ್ ಆಗಿದೆ. ದೇಶದ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ. ಆದರೆ ಹಂತಕರನ್ನು ಗಲ್ಲಿಗೇರಿಸುವ ಮೂಲಕ ನಿರ್ಭಯಾಗೆ ನ್ಯಾಯ ಸಿಕ್ಕಿದೆ. ಆ ವಿಷಯದ ಬಗ್ಗೆ ಸಮಾಧಾನ ಇದೆ ಎಂದು ಹೇಳಿದರು.

    ನಾನು ಒಂದು ವಿಷಯ ಹೇಳಲು ಇಷ್ಟಪಡುತ್ತೇನೆ. ಅಪರಾಧಿಗಳು ನಿರ್ಭಯಾ ಮೇಲೆ ಕೇವಲ ಅತ್ಯಾಚಾರ ಮಾಡಿಲ್ಲ, ಹತ್ಯೆ ಮಾಡಿದ್ದಾರೆ. ನಿರ್ಭಯಾಳನ್ನು ಕೊಲೆ ಮಾಡಿ ಆಕೆಯ ದೇಹವನ್ನು ಸಂಪೂರ್ಣವಾಗಿ ನಾಶ ಮಾಡಿದ್ದರು. ಯಾವ ರೀತಿ ನಿರ್ಭಯಾಯನ್ನು ಹತ್ಯೆ ಮಾಡಿದ್ದಾರೋ, ಪ್ರಾಣಿಗಳು ಕೂಡ ಆ ರೀತಿ ಮಾಡಲ್ಲ. ಆದರೆ ಇಂದು ನಾಲ್ವರು ಅಪರಾಧಿಗಳನ್ನು ಗಲ್ಲುಗೇರಿಸಲಾಗಿದೆ ಎಂದು ವಕೀಲೆ ಸೀಮಾ ಕುಶ್‍ವಾಹಾ ತಿಳಿಸಿದರು.

    ನಿರ್ಭಯಾ ವೈದ್ಯಕೀಯ ಶಿಕ್ಷಣ ಮುಗಿಸಿ ಇಂರ್ಟನ್‍ಶಿಪ್ ಮಾಡಲು ಇಲ್ಲಿಗೆ ಬಂದಿದ್ದಳು. ಈ ಘಟನೆ ನಡೆದ ಮರುದಿನ ನಿರ್ಭಯಾ ತನ್ನ ಇಂರ್ಟನ್‍ಶಿಪ್‍ಗೆ ಹೋಗಬೇಕಿತ್ತು. ಅದು ಆಕೆಯ ಕನಸ್ಸಾಗಿತ್ತು. ಆದರೆ ಈ ಘಟನೆ ನಡೆದ ನಂತರ ಆಕೆಯ ಕನಸ್ಸು ನುಚ್ಚು ನುರಾಯಿತು. ಒಂದು ಕ್ಷಣದಲ್ಲಿ ಎಲ್ಲವೂ ಬದಲಾಯಿತು ಎಂದರು. ಅಲ್ಲದೆ ಇಂತಹ ಪ್ರಕರಣದಲ್ಲಿ ಬೇರೆ ಹೆಣ್ಣು ಮಕ್ಕಳಿಗೂ ನ್ಯಾಯ ಸಿಕ್ಕಿಲ್ಲ ಎಂಬುದು ನನಗೆ ಮೊದಲಿನಿಂದಲೂ ಗೊತ್ತಿದೆ. ಇಂತಹ ಹಲವು ಪ್ರಕರಣಗಳು ಬಾಕಿ ಇದೆ ಎಂಬುದು ನನಗೆ ಗೊತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಕರಣ ಇಷ್ಟು ವರ್ಷ ನಡೆಯಿತು. ತಡವಾದರೂ ನಿರ್ಭಯಾಗೆ ನ್ಯಾಯ ಸಿಕ್ಕಿದೆ ಎಂದು ತಿಳಿಸಿದರು.

    ದೇಶದಲ್ಲಿ ಹಲವು ಹೆಣ್ಣು ಮಕ್ಕಳ ಜೊತೆ ನಿರ್ಭಯಾದಂತಹ ಪ್ರಕರಣ ನಡೆದಿದೆ. ಅವರು ಕೂಡ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಮಾಧ್ಯಮದವರು ಅಂತಹ ಪ್ರಕರಣಗಳನ್ನು ಬೆಳಕಿಗೆ ತಂದು ಅವರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.