Tag: ವಚನ

  • ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ

    ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ

    ಬಾಗಲಕೋಟೆ: ವಚನಗಳಲ್ಲಿ ಲಿಂಗದೇವ ಬದಲಾಗಿ ಕೂಡಲಸಂಗಮದೇವ ವಚನಾಂಕಿತ ಬಳಸಲು ನಿರ್ಧಾರ ಮಾಡಲಾಗಿದೆ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದರು.

    25 ವರ್ಷಗಳ ಹಿಂದಿನ ವಚನಗಳ ಅಂಕಿತನಾಮ ವಿವಾದಕ್ಕೆ ಇತಿಶ್ರೀ ಹಾಡಿದ ಗಂಗಾದೇವಿ ಅವರು, ಇಂದು ಸುದ್ದಿಗೋಷ್ಠಿಯಲ್ಲಿ ಬಸವಣ್ಣನವರ ವಚನಗಳ ಅಂಕಿತ ನಾಮ ಗೊಂದಲ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದರು.

    ಈ ವೇಳೆ ಅವರು, ಬಸವಣ್ಣನವರ ವಚನಗಳಿಗೆ ಕೂಡಲಸಂಗಮದೇವ ಬದಲಾಗಿ, ಲಿಂಗದೇವ ಎಂದು ಅಂಕಿತನಾಮ ಬಳಸಲಾಗುತ್ತಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿದಾಗಲೂ ಕೂಡಲ ಸಂಗಮ ದೇವ ಎಂದು ವಚನಾಂಕಿತ ಬಳಸುವಂತೆ ಆದೇಶಿಸಲಾಗಿತ್ತು. ಈ ಬಗ್ಗೆ ಯಾವುದೇ ಗೊಂದಲ ಬೇಡ. ಇನ್ಮುಂದೆ ವಚನಗಳಲ್ಲಿ ಲಿಂಗದೇವ ಬದಲಾಗಿ ಕೂಡಲಸಂಗಮ ದೇವ ವಚನಾಂಕಿತ ಬಳಸಲು ನಿರ್ಧಾರ ಮಾಡಲಾಗಿದೆ ಎಂದು ಅಂಕಿತನಾಮದ ಗೊಂದಲಕ್ಕೆ ತೆರೆ ಎಳೆದರು. ಇದನ್ನೂ ಓದಿ: ನೈಟ್ ಕರ್ಫ್ಯೂ – ಸರ್ಕಾರದ ವಿರುದ್ಧ ಹೋಂಸ್ಟೇ, ರೆಸಾರ್ಟ್ ಮಾಲೀಕರ ಅಸಮಾಧಾನ

    ಮಾತೆ ಮಹಾದೇವಿಯವರು ಬರೆದಿದ್ದ ‘ಬಸವ ವಚನ ದೀಪ್ತಿ’ ಪುಸ್ತಕದಲ್ಲಿ ಬಸವಣ್ಣನವರ ವಚನಾಂಕಿತವನ್ನು ಕೂಡಲಸಂಗಮ ದೇವ ಬದಲಾಗಿ ಲಿಂಗದೇವ ಎಂದು ಬಳಸಲಾಗಿತ್ತು. ಬಸವಣ್ಣನವರ ವಚನಗಳ ಅಂಕಿತನಾಮದಲ್ಲಿ ಕೂಡಲಸಂಗಮ ಬಳಸಬೇಕಾ ಅಥವಾ ಲಿಂಗದೇವ ಬಳಸಬೇಕಾ ಎಂಬ ಗೊಂದಲ ವಚನಗಾರರಲ್ಲಿ ಏರ್ಪಟ್ಟಿತ್ತು. ಹಲವು ಸ್ವಾಮೀಜಿಗಳ ವಿರೋಧದ ಮಧ್ಯೆ 25 ವರ್ಷಗಳ ಹಿಂದೆ ಈ ವಿವಾದ ಹೈಕೋರ್ಟ್ ನಂತರ ಸುಪ್ರಿಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಇಂದು ಅದಕ್ಕೆಲ್ಲ ಮುಕ್ತಿ ಸಿಕ್ಕಿದೆ. ಇನ್ನು ಮುಂದೆ ಹೈಕೋರ್ಟ್ ಆದೇಶದಂತೆ ವಚನಗಳಿಗೆ ಕೂಡಲಸಂಗಮದೇವ ಎಂದು ಬಳಸುತ್ತೇವೆ ಎಂದು ಮಾತೆ ಗಂಗಾದೇವಿ ಸ್ಪಷ್ಟಪಡಿಸಿದ್ದಾರೆ.

  • ವಚನಗಳನ್ನು ಬಳಸಿಕೊಂಡು ಕೈ, ಕಮಲ ಟಾಂಗ್!

    ವಚನಗಳನ್ನು ಬಳಸಿಕೊಂಡು ಕೈ, ಕಮಲ ಟಾಂಗ್!

    ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ಹೆಚ್ಚಳವಾಗುತ್ತಿದೆ. ಇದರ ಬಿಸಿ ಸಾಮಾಜಿಕ ಜಾಲತಾಣದಲ್ಲೂ ಹೆಚ್ಚಾಗಿದ್ದು, ವಚನಗಳನ್ನು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಎರಡು ಪಕ್ಷಗಳು ಪರಸ್ಪರ ಟಾಂಗ್ ನೀಡಿವೆ.

    ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಇಂದು ಮೈಸೂರು ದಲಿತ ಸಂವಾದ ಕಾರ್ಯಕ್ರಮದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ವಿರುದ್ಧ ಅಸಮಾಧಾನವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ವಚನವನ್ನು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.

    ಅಮಿತ್ ಶಾ ರವರೇ, “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ” ಎಂದು ಬಸವಣ್ಣನವರು ಹೇಳಿದ್ದಾರೆ. ಮೊನ್ನೆ ಯಡಿಯೂರಪ್ಪನವರ ಬಗ್ಗೆ ನಿಜ ಹೇಳಿದ್ದ ನೀವು, ಇಂದೇಕೆ ಮತ್ತೆ ಸುಳ್ಳಿನ ಹಾದಿ ಹಿಡಿದಿದ್ದೀರಾ ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಟ್ವೀಟ್‍ಗೆ ಮರು ಟ್ವೀಟ್ ಮಾಡಿ ಉತ್ತರ ನೀಡಿರುವ ಬಿಜೆಪಿ “ಹತ್ತು ಸಾವಿರ ಗೀತವ ಹಾಡಿ ಅರ್ಥವಿಟ್ಟಲ್ಲಿ ಫಲವೇನು ಮುಟ್ಟುವ ತೆರನನರಿಯದನ್ನಕ? ಕಟ್ಟಿದರೇನು ಬಿಟ್ಟರೇನು ಮನವು ಲಿಂಗದಲ್ಲಿ ಮುಟ್ಟದನ್ನಕ? ಮಾತಿನಲೆ ಒಲಿಸಿ ಮಹತ್ತಪ್ಪ ಲಿಂಗವ ಕಂಡೆನೆಂಬ ಪಾತಕರ ಮೆಚ್ಚ ನಮ್ಮ ಕೂಡಲಸಂಗಮದೇವ!” ವಚನವನ್ನು ಟ್ವೀಟ್ ಮಾಡಿ ಟಾಂಗ್ ನೀಡಿದೆ.