ಬೆಂಗಳೂರು: ಕಸ್ತೂರಿ ನಗರ ಬಡಾವಣೆಯಲ್ಲಿರುವ (Kasturi Nagar Layout) ಚೆನ್ನಸಂದ್ರ ಕೆರೆ / ಅರಣ್ಯ ಪ್ರದೇಶದಲ್ಲಿ ಕಸ್ತೂರಿ ನಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ, ಸಮಸ್ತ ನಾಗರೀಕರ ಸಮ್ಮುಖದಲ್ಲಿ, ಸಸಿ ನೆಡುವ ಮತ್ತು ಸ್ವಚ್ಛತೆ ಮಾಡುವ ಮೂಲಕ ಸಂಭ್ರಮದಿಂದ ವನಮಹೋತ್ಸವ ಕಾರ್ಯಕ್ರಮವನ್ನು (Van Mahotsav Program) ಆಚರಿಸಲಾಯಿತು.
ಸುಮಾರು ನೂರಕ್ಕೂ ಅಧಿಕ ಬೇರೆ ಬೇರೆ ತಳಿಯ ಸಸಿಗಳನ್ನು ನೆಡಲಾಯಿತು. ಅದರ ಜೊತೆಗೆ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ, ಅರಣ್ಯ ಪ್ರದೇಶದಲ್ಲಿದ್ದ ಪ್ಲಾಸ್ಟಿಕ್, ಬಾಟಲಿ ಮತ್ತು ಇತರ ಮಣ್ಣಿನಲ್ಲಿ ಕರಗದೇ ಇರುವಂತ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಇದನ್ನೂ ಓದಿ: ಬಬಲೇಶ್ವರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ
ಅರಣ್ಯ ಪ್ರದೇಶದ ಸುತ್ತಲಿನ ಬೇಲಿಯನ್ನು ಬಲಪಡಿಸಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಯಿತು. ಸುಮಾರು ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರೀಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದು ವಿಶೇಷವಾಗಿತ್ತು.
ಶಿವಮೊಗ್ಗ: ರಾಜ್ಯದ ಜನರ ಮನದಲ್ಲಿ ಮನೆ ಮಾತಾಗಿರುವ ನಿಮ್ಮ ಪಬ್ಲಿಕ್ ಟಿವಿಗೆ ದಶಮಾನೋತ್ಸವ ಸಂಭ್ರಮ. ಪಬ್ಲಿಕ್ ಟಿವಿ ವಾಹಿನಿ ಆರಂಭವಾಗಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮುನ್ನುಗುತ್ತಿದ್ದು, ದಶಮಾನೋತ್ಸವ ಸಂಭ್ರಮವನ್ನು ವನಮಹೋತ್ಸವ ಆಚರಿಸುವ ಮೂಲಕ ವಿಭಿನ್ನವಾಗಿ ಆಚರಿಸಿದೆ.
ದಶಮಾನೋತ್ಸವ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವನಮಹೋತ್ಸವವಾಗಿ ಆಚರಿಸಲು ಪಬ್ಲಿಕ್ ಟಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದೆ. ಇದರ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಯೋ ಡೈವರ್ಸಿಟಿ ಪಾರ್ಕ್ ಆವರಣದಲ್ಲಿ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠದಲ್ಲಿ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ
ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಬಂದ್ ಆಗಿದ್ದ ವೇಳೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡಿತ್ತು. ಪಬ್ಲಿಕ್ ಟಿವಿಯ ಈ ಕಾರ್ಯಕ್ಕೆ ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಪಬ್ಲಿಕ್ ಟಿವಿಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರದ ಬಗ್ಗೆ ವಾಹಿನಿಗೆ ಇರುವ ಕಾಳಜಿಯನ್ನು ತೋರಿಸುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರವಾರ: ಪಬ್ಲಿಕ್ ಟಿ.ವಿ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಗರಸಭೆ ಉದ್ಯಾನವನ ಹಾಗೂ ರವೀಂದ್ರನಾಥ ಠಾಗೋರ್ ಕಡಲತೀರದ ಬಳಿ ಇರುವ ಮಕ್ಕಳ ಉದ್ಯಾನವನದಲ್ಲಿ ಇಂದು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ನ ಸಂಸ್ಥಾಪಕರಾದ ಗಣೇಶ್ ಹರಿಕಾಂತ್ ಮಾತನಾಡಿ, ಪಬ್ಲಿಕ್ ಟಿ.ವಿ ಹತ್ತುವರ್ಷದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡು ಪ್ರಾಮಾಣಿಕತೆ ಉಳಿಸಿಕೊಂಡು ಬಂದಿದೆ. ಮೊಬೈಲ್ ಇದ್ದವರೇ ಇಂದು ವರದಿಗಾರರಾಗುತ್ತಿರುವ ದಿನಗಳಲ್ಲಿ ಮಾಧ್ಯಮ ತನ್ನತನ ಉಳಿಸಿಕೊಳ್ಳುವುದೇ ದೊಡ್ಡ ವಿಚಾರವಾಗಿದೆ. ಪಬ್ಲಿಕ್ ಟಿವಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತಸದ ವಿಚಾರ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ
ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳು ಹಾಗೂ ಹಿಂದೂ ಹೈಸ್ಕೂಲ್ನ ಮಕ್ಕಳು, ಪತ್ರಕರ್ತರು ನಗರದ ಉದ್ಯಾನವನದಲ್ಲಿ 300 ಗಿಡವನ್ನು ನೆಡುವ ಮೂಲಕ ಮನಮಹೋತ್ಸವಕ್ಕೆ ಮೆರುಗು ತಂದರು. ಈ ಗಿಡಗಳನ್ನು ವರ್ಷವಿಡೀ ರಕ್ಷಿಸಿ ಪಾಲನೆ ಮಾಡುವ ಜವಾಬ್ದಾರಿಯನ್ನು ಪಬ್ಲಿಕ್ ಟಿವಿ ಬಳಗ, ಕಾರವಾರ ನಗರಸಭೆ, ಜೀವಜಲ ಕಾರ್ಯಪಡೆ, ಶಿರಸಿ, ನೇತ್ರಾಣಿ ಅಡ್ವೆಂಚರ್ಸ್ ಮುರುಡೇಶ್ವರದವರು ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ
ಕಾರವಾರ ನಗರಸಭೆ ಅಧ್ಯಕ್ಷರಾದ ಡಾ. ನಿತಿನ್ ಪಿಕಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್, ದಾಂಡೇಲಿ ವಿಭಾಗದ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಕಾಳಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪ್ರಾಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ. ಕಾರವಾರದ ಮರಿಯಾ ಕ್ರಿಸ್ತುರಾಜ, ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಅಥಿತಿಗಳಾಗಿ ನಗರಸಭೆ ಕಮಿಷನರ್ ಆರ್. ಪಿ ನಾಯ್ಕ್ ಕಾರವಾರ-ಅಂಕೋಲ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ, ಜಿಲ್ಲಾ ಮೀನುಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾದ ರಾಜು ತಾಂಡೇಲ್, ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಟಿ.ಬಿ ಹರಿಕಾಂತ್ ಇನ್ನಿತರರು ಉಪಸ್ಥಿತರಿದ್ದರು.
ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.
ದೇವದುರ್ಗದ ಜಾಲಹಳ್ಳಿಯಲ್ಲಿ ಸಸಿ ನೆಡುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನ ಆಚರಿಸಲಾಯಿತು. ಇಲ್ಲಿನ ಜಮೀಯಾ ಮಸೀದಿಯ ಮೌಲಾನ ಮುತ್ತಾಜ್ ರಾಹೀ ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಯಾವ ರೀತಿ ಸಾಕಿ, ಸಾಲಹುತ್ತಾರೋ ಅದೇ ರೀತಿ ಮನೆಯ ಮುಂದೆ ಒಂದು ಗಿಡ ಬೆಳೆಸಬೇಕೆಂದು ನಿರ್ಧರಿಸಿದ್ದು, ಇಂದು ಸಾಂಕೇತಿಕವಾಗಿ ಸಸಿಗಳನ್ನ ನೆಟ್ಟು ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಕೇವಲ ಮುಸ್ಲಿಂ ಬಾಂಧವರಷ್ಟೇ ಅಲ್ಲದೆ ಹಿಂದೂಗಳು ಕೂಡ ಅವರ ಜೊತೆ ಕೈಜೋಡಿಸಿ ಪರಿಸರದ ಮೇಲಿರುವ ಕಾಳಜಿ ಮೆರೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಹಿಂದೂ-ಮುಸ್ಲಿಂ ಜೊತೆಗೂಡಿ ಪರಿಸರ ಕಾಳಜಿ ಮೆರೆದಿರುವುದು ವಿಶೇಷವಾಗಿತ್ತು.
ಪವಿತ್ರ ರಂಜಾನ್ ಆಚರಣೆ ಹಿನ್ನೆಲೆ ಮುಸ್ಲಿಂ ಬಾಂಧವರು ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ ಮೈದಾನ ಸುತ್ತ ಪೋಲಿಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ಪ್ರಾರ್ಥನೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್, ಎಸ್ಪಿ ಡಿ.ಕಿಶೋರ್ ಬಾಬು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದು, ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ರಂಜಾನ್ ಆಚರಿಸಲಾಗುತ್ತಿದೆ.