Tag: ವರಲಕ್ಷ್ಮಿ

  • ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ನ್ನಡದ ‘ಮಾಣಿಕ್ಯ’ (Maanikya) ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ತಮಗಾದ ಲೈಂಗಿಕ ಕಿರುಕುಳ ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರಿಟ್ಟಿದ್ದಾರೆ. ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪೋಷಕರಿಗೆ ನಟಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ವರಲಕ್ಷ್ಮಿ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದಾರೆ. ಇದೀಗ ಅವರು ‘ಡ್ಯಾನ್ಸ್ ಜೋಡಿ ಡ್ಯಾನ್ಸ್’ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿದ್ದಾರೆ. ಇದರ ಪ್ರೋಮೋ ಇದೀಗ ರಿಲೀಸ್ ಆಗಿದೆ. ಆ ಪ್ರೋಮೋದಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ತಾವು ಎದುರಿಸಿದ ಕಹಿ ಅನುಭವಗಳ ಬಗ್ಗೆ ಡ್ಯಾನ್ಸ್ ಮೂಲಕ ತೋರಿಸಿದ್ದಾರೆ. ಇದನ್ನು ನೋಡಿ ವರಲಕ್ಷ್ಮಿ ಭಾವುಕರಾಗಿದ್ದಾರೆ.

    ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ನನ್ನ ಕಥೆಯೂ ನಿನ್ನ ಕಥೆಯೂ ಒಂದೇ ಎಂದಿದ್ದಾರೆ ನಟಿ. ಪೋಷಕರು ಅವರ ಕೆಲಸದಲ್ಲಿ ನಿರತರಾಗಿದ್ದರು. ಹಾಗಾಗಿ ನಾನು ಚಿಕ್ಕವಳಿದ್ದಾಗ ನನ್ನನ್ನು ಬೇರೆಯವರ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಆಗ 5ರಿಂದ 6 ಜನ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ನಿನ್ನ ಸ್ಟೋರಿ ನನ್ನ ಸ್ಟೋರಿ ಎರಡು ಒಂದೆ. ನನಗೆ ಮಕ್ಕಳಿಲ್ಲ ಆದರೆ ನಾನು ಪೋಷಕರಿಗೆ ಹೇಳುವುದಿಷ್ಟೇ, ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ವೇದಿಕೆಯಲ್ಲಿ ವರಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

    ಅಂದಹಾಗೆ, ಇನ್ನೂ ಕಳೆದ ವರ್ಷ ಜುಲೈನಲ್ಲಿ ಉದ್ಯಮಿ ನಿಕೋಲಾಯ್ ಜೊತೆ ನಟಿ ವರಲಕ್ಷ್ಮಿ ಹೊಸ ಬಾಳಿಗೆ ಕಾಲಿಟ್ಟರು. ವಿದೇಶದಲ್ಲಿ ಇಬ್ಬರ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

  • ಧನುಷ್ ನಟನೆಯ ‘ರಾಯನ್’ ಚಿತ್ರದ ಟ್ರೈಲರ್ ರಿಲೀಸ್- ರಕ್ತಸಿಕ್ತವಾಗಿ ಕಾಣಿಸಿಕೊಂಡ ನಟ

    ಧನುಷ್ ನಟನೆಯ ‘ರಾಯನ್’ ಚಿತ್ರದ ಟ್ರೈಲರ್ ರಿಲೀಸ್- ರಕ್ತಸಿಕ್ತವಾಗಿ ಕಾಣಿಸಿಕೊಂಡ ನಟ

    ನುಷ್ (Dhanush) ನಟಿಸಿ, ನಿರ್ದೇಶಿಸಿರುವ ‘ರಾಯನ್’ (Raayan) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಎಂದೂ ಕಾಣಿಸಿಕೊಂಡಿರದ ಮಾಸ್ ಅವತಾರದಲ್ಲಿ ಧನುಷ್ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ನೋಡಿದವರಿಗೆ ಸಿನಿಮಾ ಬಗ್ಗೆ ಈಗ ಕುತೂಹಲ ಕೆರಳಿಸಿದೆ. ಇದನ್ನೂ ಓದಿ:ರಾಜಿಯಾಗುವ ತನಕ ಅವಕಾಶ ಸಿಗಲ್ಲ: ಕಾಸ್ಟಿಂಗ್ ಕೌಚ್ ಬಗ್ಗೆ ವಿವರಿಸಿದ ‘ಅನಿಮಲ್’ ನಟ

    ಮುಗ್ಧ ಬಾಲಕನೊಬ್ಬ ಕ್ರೂರಿಯಾಗಿ ಬದಲಾಗುವ ಕಹಾನಿ ‘ರಾಯನ್’ ಸಿನಿಮಾದಲ್ಲಿ ಇದೆ ಎಂಬ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಬಾಲಕನಲ್ಲಿನ ಆ ಬದಲಾವಣೆಗೆ ಕಾರಣ ಏನು ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಧನುಷ್ ರಕ್ತಸಿಕ್ತವಾಗಿ ಕಾಣಿಸಿಕೊಂಡಿದ್ದಾರೆ. ಧನುಷ್ ನಟನೆಯ 50ನೇ ಸಿನಿಮಾ ಆಗಿರೋದು ಕಾರಣ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಯಿದೆ.

    ಈ ಚಿತ್ರದಲ್ಲಿ ಧನುಷ್ ಜೊತೆ ಎಸ್.ಜೆ ಸೂರ್ಯ, ಪ್ರಕಾಶ್ ರಾಜ್, ಸೆಲ್ವ ರಾಘವನ್, ಸಂದೀಪ್ ಕಿಶನ್, ವರಲಕ್ಷ್ಮಿ ಶರತ್‌ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ಇದೇ ಜುಲೈ 26ರಂದು ಬಿಡುಗಡೆ ಆಗಲಿದೆ. ತೆಲುಗು, ತಮಿಳು, ಹಿಂದಿಯಲ್ಲಿ ಮೂಡಿ ಬಂದಿದೆ.

  • ವರಲಕ್ಷ್ಮಿ ಶರತ್‌ಕುಮಾರ್ ಅದ್ಧೂರಿ ಆರತಕ್ಷತೆ- ಕಿಚ್ಚ ಸುದೀಪ್ ಕುಟುಂಬ ಭಾಗಿ

    ವರಲಕ್ಷ್ಮಿ ಶರತ್‌ಕುಮಾರ್ ಅದ್ಧೂರಿ ಆರತಕ್ಷತೆ- ಕಿಚ್ಚ ಸುದೀಪ್ ಕುಟುಂಬ ಭಾಗಿ

    ಮಿಳಿನ ಜನಪ್ರಿಯ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಬಹುಕಾಲದ ಗೆಳೆಯ ನಿಕೊಲಾಯ್ ಜೊತೆ ಥೈಲ್ಯಾಂಡ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜು.3ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ (Wedding Reception) ಆಯೋಜಿಸಿದ್ದು, ಕನ್ನಡದ ಸ್ಟಾರ್ ನಟ ಸುದೀಪ್ (Sudeep) ಕುಟುಂಬ ಮತ್ತು ಸೌತ್‌ನ ಸ್ಟಾರ್ ಕಲಾವಿದರ ದಂಡೇ ಭಾಗಿಯಾಗಿತ್ತು.

    ಹಿರಿಯ ನಟ ಶರತ್‌ ಕುಮಾರ್‌ ಮತ್ತು ರಾಧಿಕಾ ದಂಪತಿ ಪುತ್ರಿಯ ಮದುವೆ ಆರತಕ್ಷತೆಗೆ ಸುದೀಪ್ ಫ್ಯಾಮಿಲಿ ಭಾಗಿಯಾಗಿ ನವಜೋಡಿಗೆ ಶುಭಕೋರಿದ್ದಾರೆ. ಸುದೀಪ್ ಜೊತೆ ಪತ್ನಿ ಪ್ರಿಯಾ, ಮಗಳು ಸಾನ್ವಿ ಕೂಡ ಭಾಗಿಯಾಗಿದ್ದರು. ಸುದೀಪ್ ಕುಟುಂಬದ ಜೊತೆ ವರಲಕ್ಷ್ಮಿ ಉತ್ತಮ ಒಡನಾಟ ಹೊಂದಿದ್ದಾರೆ. ಮಾಣಿಕ್ಯ, ರನ್ನ, ಮತ್ತು ಇದೀಗ ಬರಲಿರುವ ಮ್ಯಾಕ್ಸ್ ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದಾರೆ.

    ನಟಿಯ ಆತರಕ್ಷತೆಯಲ್ಲಿ ತಮಿಳು ನಟ ಸಿದ್ಧಾರ್ಥ್, ಬಾಲಯ್ಯ(Balayya), ನಟಿ ತ್ರಿಷಾ ಸೇರಿದಂತೆ ಅನೇಕರು ಭಾಗಿಯಾಗಿ ಹೊಸ ಜೋಡಿಗೆ ಶುಭಕೋರಿದ್ದಾರೆ. ಇದನ್ನೂ ಓದಿ:ಪವಿತ್ರಾಗೌಡ ದರ್ಶನ್‌ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

    ಅಂದಹಾಗೆ, ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ಮುಂಬೈನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.

  • ಸುದೀಪ್ ನಟನೆಯ ‘ಮ್ಯಾಕ್ಸ್’ ಹುಡುಗೀರು

    ಸುದೀಪ್ ನಟನೆಯ ‘ಮ್ಯಾಕ್ಸ್’ ಹುಡುಗೀರು

    ಸುದೀಪ್ (Sudeep) ನಟನೆಯ ಮ್ಯಾಕ್ಸ್  ಸಿನಿಮಾದಲ್ಲಿ ಬರೋಬ್ಬರಿ ಮೂವರು ನಾಯಕಿಯರು ನಟಿಸುತ್ತಿದ್ದಾರೆ. ಮೂವರದ್ದೂ ವಿಭಿನ್ನ ಪಾತ್ರಗಳಾಗಿದ್ದು, ಯಾವ ರೀತಿಯ ಪಾತ್ರಗಳನ್ನು ಅವರು ಮಾಡಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಕನ್ನಡತಿಯರಾದ ಸಂಯುಕ್ತ ಹೊರನಾಡು (Samyukta Horanadu), ಸುಕೃತಾ ವಾಗ್ಲೆ ಮತ್ತು ತಮಿಳಿನ ನಟಿ ವರಲಕ್ಷ್ಮಿ ಶರತ್ ಕುಮಾರ್ (Varalakshmi) ಈ ಸಿನಿಮಾದಲ್ಲಿ ಪಾತ್ರ ಮಾಡುತ್ತಿದ್ದಾರೆ.

    ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.

    ಜೊತೆಗೆ ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

     

    ಸುದೀಪ್ ಅವರ ಹುಟ್ಟು ಹಬ್ಬ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿತ್ತು. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

  • ಸುದೀಪ್ ನಟನೆಯ ‘ಮ್ಯಾಕ್ಸ್’ ಟೀಮ್ ಸೇರಿಕೊಂಡ ವರಲಕ್ಷ್ಮಿ

    ಸುದೀಪ್ ನಟನೆಯ ‘ಮ್ಯಾಕ್ಸ್’ ಟೀಮ್ ಸೇರಿಕೊಂಡ ವರಲಕ್ಷ್ಮಿ

    ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ (Max) ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟಿ ವರಲಕ್ಷ್ಮಿ (Varalakshmi) ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ವರಲಕ್ಷ್ಮಿ ಭಾಗಿಯಾಗಿದ್ದಾರೆ. ಅಧಿಕೃತವಾಗಿಯೇ ಈ ಮಾಹಿತಿಯನ್ನು ಚಿತ್ರತಂಡ ಹೇಳಿಕೊಂಡಿದೆ. ‘ವೆಲ್ ಕಮ್ ಆನ್ ಬೋರ್ಡ್ ಮಹಾಲಕ್ಷ್ಮಿ’ ಎಂದು ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.

    ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.

    ಮುಂದಿನ ಸಿನಿಮಾ ನಿರ್ದೇಶನ?

    ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ಕೆಕೆಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

    ಸುದೀಪ್ ಅವರ ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿತ್ತು. ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

     

    ಮೈ ಆಟೋಗ್ರಾಫ್ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಶೋದಾ ಫಸ್ಟ್ ಗ್ಲಿಂಪ್ಸ್ ರಿಲೀಸ್: ಜೈ ಹೋ ಅಂದ ಸಮಂತಾ ಅಭಿಮಾನಿಗಳು

    ಯಶೋದಾ ಫಸ್ಟ್ ಗ್ಲಿಂಪ್ಸ್ ರಿಲೀಸ್: ಜೈ ಹೋ ಅಂದ ಸಮಂತಾ ಅಭಿಮಾನಿಗಳು

    ಮಂತಾ ಅವರೇ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಯಶೋದಾ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಅಭಿಮಾನಿಗಳು ಸಮಂತಾ ಲುಕ್ ಕಂಡು ಫಿದಾ ಆಗಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಈ ಮೂಲಕ ಸಮಂತ್ ಮತ್ತೊಂದು ಇನ್ನಿಂಗ್ಸ್ ಶುರು ಮಾಡಲಿದ್ದಾರೆ. ಈ ಗ್ಲಿಂಪ್ಸ್ ಜೊತೆಗೆ ಯಶೋದ ಸಿನಿಮಾದ ಸಣ್ಣ ವಿಡಿಯೋ ತುಣುಕನ್ನು ಕೂಡ ಇಂದು ರಿಲೀಸ್ ಮಾಡಲಾಗಿದ್ದು, ಆ ವಿಡಿಯೋ ಕುತೂಹಲ ಮೂಡಿಸುತ್ತಿದೆ. ಸಮಂತಾ ಅವರ ನಟನೆ ಕೂಡ ಕಾಯುವಿಕೆಗೆ ಸಾಕ್ಷಿಯಾಗಿದೆ. ಈಗಾಗಲೇ ಸಿನಿಮಾದ ಶೇ.80ರಷ್ಟು ಶೂಟಿಂಗ್‌ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ ಚಿತ್ರತಂಡ. ಇದನ್ನೂ ಓದಿ : ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ಶ್ರೀದೇವಿ ಪ್ರೊಡಕ್ಷನ್‌ನ 14ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದರೆ, ಶಿವಲೆಂಕಾ ಕೃಷ್ಣ ಪ್ರಸಾದ್‌ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ಹೇಳಿಕೊಳ್ಳುವ ನಿರ್ಮಾಪಕರು, ಫ್ಯಾಮಿಲಿ ಮ್ಯಾನ್‌ 2 ವೆಬ್‌ ಸಿರೀಸ್‌ ಮೂಲಕ ಪ್ಯಾನ್‌ ಇಂಡಿಯಾ ಜನರನ್ನು ಸಮಂತಾ ತಲುಪಿದ್ದಾರೆ. ಆ ಒಂದು ಕಾರಣಕ್ಕೆ ಎಲ್ಲಿಯೂ ಕಾಂಪ್ರಮೈಸ್‌ ಆಗದೇ, ಎಲ್ಲೆಡೆ ಸಲ್ಲುವ ಸಿನಿಮಾ ಮಾಡಿದ್ದೇವೆ. ಈ ಸಿನಿಮಾದಲ್ಲಿನ ಸಮಂತಾ ಅವರ ಡೆಡಿಕೇಷನ್‌ ತೆರೆಮೇಲೆ ಕಾಣಿಸಲಿದೆ. ಅವರ ನಟನೆಯನ್ನು ನೋಡುವುದೇ ಚಂದʼ ಎನ್ನುತ್ತಾರೆ. ಇದನ್ನೂ ಓದಿ : ಸ್ಟಾರ್ ನಟಿ ಪೂಜಾ ಹೆಗಡೆ ನಿದ್ದೆಗೆಡಿಸಿದ ಸಾಲು ಸಾಲು ಸೋಲು

    ಚಿತ್ರೀಕರಣದ ಬಗ್ಗೆಯೂ ಮಾಹಿತಿ ನೀಡುವ ಅವರು, ಚಿತ್ರದ ಕ್ಲೈಮ್ಯಾಕ್ಸ್‌ ಹಂತವನ್ನು ಕೊಡೈಕೆನಾಲ್‌ನಲ್ಲಿ ಏಪ್ರಿಲ್‌ನಲ್ಲಿ ಚಿತ್ರೀಕರಿಸಿದ್ದೇವೆ. ಶೇ. 80 ಭಾಗದ ಶೂಟಿಂಗ್‌ ಮುಕ್ತಾಯವಾಗಿದ್ದು, ಹೈದರಾಬಾದ್‌ನಲ್ಲಿ ಕೊನೇ ಶೆಡ್ಯೂಲ್‌ ನಡೆಯುತ್ತಿದೆ. ಜೂನ್‌ 1ಕ್ಕೆ ಶೂಟ್‌ ಮುಗಿಸಲಿದ್ದೇವೆ. ಇಡೀ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಪ್ರಮುಖ ಪಾತ್ರ ವಹಿಸಲಿದೆ. ನಿರ್ದೇಶಕರ ಕೆಲಸವೂ ಇಂಪ್ರೆಸಿವ್‌ ಆಗಿದೆ ಎಂದರು. ಇದನ್ನೂ ಓದಿ : ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್ : ಆರ್.ಜಿ.ವಿ

    ಅಂದಹಾಗೆ, ಇದು ಕೇವಲ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದ್ದು, ಆಗಸ್ಟ್‌ 12ಕ್ಕೆ ತೆರೆಗೆ ಬರಲಿದೆ. ಚಿತ್ರದಲ್ಲಿ ಸ್ಟಾರ್‌ ನಟರ ದಂಡೇ ಇದೆ. ವರಲಕ್ಷ್ಮೀ ಶರತ್‌ಕುಮಾರ್‌, ಉನ್ನಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಸೇರಿ ಹಲವರಿದ್ದಾರೆ.

  • ಆಗಸ್ಟ್ 12ಕ್ಕೆ ಸಮಂತಾ ನಟನೆಯ ಯಶೋದಾ ರಿಲೀಸ್

    ಆಗಸ್ಟ್ 12ಕ್ಕೆ ಸಮಂತಾ ನಟನೆಯ ಯಶೋದಾ ರಿಲೀಸ್

    ಮಂತಾ ರುತ್‌ಪ್ರಭು ನಟನೆಯ, ನಾಯಕಿ ಪ್ರಧಾನ ಸಿನಿಮಾ ‘ಯಶೋದಾ’ ಸದ್ಯ ಶೂಟಿಂಗ್‌ ಮುಗಿಸಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ ಚಿತ್ರತಂಡ. ಶ್ರೀದೇವಿ ಪ್ರೊಡಕ್ಷನ್‌ನ ೧೪ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದರೆ, ಶಿವಲೆಂಕಾ ಕೃಷ್ಣ ಪ್ರಸಾದ್‌ ನಿರ್ಮಿಸಿದ್ದಾರೆ. ಇದನ್ನೂ ಓದಿ : ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ಸಿನಿಮಾ ಬಗ್ಗೆ ಹೇಳಿಕೊಳ್ಳುವ ನಿರ್ಮಾಪಕರು, ಫ್ಯಾಮಿಲಿ ಮ್ಯಾನ್‌ ೨ ವೆಬ್‌ ಸಿರೀಸ್‌ ಮೂಲಕ ಪ್ಯಾನ್‌ ಇಂಡಿಯಾ ಜನರನ್ನು ಸಮಂತಾ ತಲುಪಿದ್ದಾರೆ. ಆ ಒಂದು ಕಾರಣಕ್ಕೆ ಎಲ್ಲಿಯೂ ಕಾಂಪ್ರಮೈಸ್‌ ಆಗದೇ, ಎಲ್ಲೆಡೆ ಸಲ್ಲುವ ಸಿನಿಮಾ ಮಾಡಿದ್ದೇವೆ. ಈ ಸಿನಿಮಾದಲ್ಲಿನ ಸಮಂತಾ ಅವರ ಡೆಡಿಕೇಷನ್‌ ತೆರೆಮೇಲೆ ಕಾಣಿಸಲಿದೆ. ಅವರ ನಟನೆಯನ್ನು ನೋಡುವುದೇ ಚಂದʼ ಎನ್ನುತ್ತಾರೆ. ಇದನ್ನೂ ಓದಿ : ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್ : ಆರ್.ಜಿ.ವಿ

    ಚಿತ್ರೀಕರಣದ ಬಗ್ಗೆಯೂ ಮಾಹಿತಿ ನೀಡುವ ಅವರು, ಚಿತ್ರದ ಕ್ಲೈಮ್ಯಾಕ್ಸ್‌ ಹಂತವನ್ನು ಕೊಡೈಕೆನಾಲ್‌ನಲ್ಲಿ ಏಪ್ರಿಲ್‌ನಲ್ಲಿ ಚಿತ್ರೀಕರಿಸಿದ್ದೇವೆ. ಶೇ. ೮೦ ಭಾಗದ ಶೂಟಿಂಗ್‌ ಮುಕ್ತಾಯವಾಗಿದ್ದು, ಹೈದರಾಬಾದ್‌ನಲ್ಲಿ ಕೊನೇ ಶೆಡ್ಯೂಲ್‌ ನಡೆಯುತ್ತಿದೆ. ಜೂನ್‌ ೧ಕ್ಕೆ ಶೂಟ್‌ ಮುಗಿಸಲಿದ್ದೇವೆ. ಇಡೀ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಪ್ರಮುಖ ಪಾತ್ರ ವಹಿಸಲಿದೆ. ನಿರ್ದೇಶಕರ ಕೆಲಸವೂ ಇಂಪ್ರೆಸಿವ್‌ ಆಗಿದೆ ಎಂದರು. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಅಂದಹಾಗೆ, ಇದು ಕೇವಲ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದ್ದು, ಆಗಸ್ಟ್‌ 12ಕ್ಕೆ ತೆರೆಗೆ ಬರಲಿದೆ. ಚಿತ್ರದಲ್ಲಿ ಸ್ಟಾರ್‌ ನಟರ ದಂಡೇ ಇದೆ. ವರಲಕ್ಷ್ಮೀ ಶರತ್‌ಕುಮಾರ್‌, ಉನ್ನಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಸೇರಿ ಹಲವರಿದ್ದಾರೆ. ಇದನ್ನೂ ಓದಿ : ಅಮ್ಮನಾಗ್ತಿದ್ದಾರೆ ಕಿರುತೆರೆ ನಟಿ ರಶ್ಮಿ ಜಯರಾಜ್: ಬೇಬಿ ಬಂಪ್ ಫೋಟೋಸ್ ವೈರಲ್

    ತಾಂತ್ರಿಕ ವರ್ಗದಲ್ಲಿ ಮಣಿಶರ್ಮಾ ಸಂಗೀತ, ಪಲ್ಗುಮ್‌ ಚಿನ್ನರಾಯನ, ಡಾ. ಚಲ್ಲ ಭಾಗ್ಯಲಕ್ಷ್ಮಿ ಸಂಭಾಷಣೆ, ಚಂದ್ರಬೋಸ್‌ ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯ, ಎಂ. ಸುಕುಮಾರ್‌ ಛಾಯಾಗ್ರಹಣ ಚಿತ್ರಕ್ಕಿದೆ. ಮಾರ್ತಾಂಡ್‌ ವೆಂಕಟೇಶ್‌ ಸಂಕಲನ ಮಾಡುತ್ತಿದ್ದಾರೆ.

  • ಪ್ರಿಯಕರನ ಜೊತೆ ಸೇರಿ  ಗಂಡನನ್ನೇ ಕೊಲೆ ಮಾಡಿದ್ಳು ಪತ್ನಿ

    ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು ಪತ್ನಿ

    ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿದ್ದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಗಂಗಮ್ಮಗುಡಿ ಪೊಲೀಸರು ಬಂಧಿಸಿದ್ದಾರೆ.

    ವರಲಕ್ಷ್ಮಿ ಮತ್ತು ರಾಕೇಶ್ ಬಂಧಿತ ಆರೋಪಿಗಳು. ಸೆಪ್ಟೆಂಬರ್ 3 ರಂದು ಅನೈತಿಕ ಸಂಬಂಧಕ್ಕೆ ಬಾಬು ಅಡ್ಡಿಯಾಗಿದ್ದಾನೆ ಅಂತ ಹೇಳಿ ವರಲಕ್ಷ್ಮಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿಸಿದ್ದಳು.

    ಕುಡಿದು ಬಂದಿದ್ದ ತನ್ನ ಪತಿ ಬಾಬು ಜೊತೆ ವರಲಕ್ಷ್ಮಿ ಜಗಳ ತೆಗೆದು ಹೊರ ಹೋಗಿದ ಬಳಿಕ ಪ್ರಿಯಕರನಿಗೆ ಹೇಳಿ ತನ್ನ ಗಂಡನನ್ನು ಕೊಲೆ ಮಾಡಿಸಿದ್ದಾಳೆ. ನಂತರ ಪೊಲೀಸರಿಗೆ ಪತಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾನೆ ಎಂದು ದೂರು ನೀಡಿದ್ದಳು.

    ವರಲಕ್ಷ್ಮಿ ಮೇಲೆ ಸಂಶಯ ವ್ಯಕ್ತಪಡಿಸಿದ್ದ ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಕೊಲೆ ರಹಸ್ಯವನ್ನು ಬಗ್ಗೆ ಬಾಯಿ ಬಿಟ್ಟಿದ್ದಾಳೆ.