Tag: ವರಲಕ್ಷ್ಮಿ ಶರತ್‌ ಕುಮಾರ್‌

  • ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮದುವೆ

    ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮದುವೆ

    ಮಿಳಿನ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಬಹುಕಾಲದ ಗೆಳೆಯನ ಜೊತೆ ಜುಲೈ 2ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಬ್ಬರ ವಿವಾಹ ಥೈಲ್ಯಾಂಡ್‌ನಲ್ಲಿ ಅದ್ಧೂರಿಯಾಗಿ ಜರುಗಲಿದೆ. ಈ ಸಂಭ್ರಮದಲ್ಲಿ ತಮಿಳಿನ ಸ್ಟಾರ್ ಕಲಾವಿದರ ದಂಡೇ ಸಾಕ್ಷಿಯಾಗಲಿದೆ. ಇದನ್ನೂ ಓದಿ:ಹ್ಯಾಟ್ರಿಕ್ ಹೀರೋ ಶಿವಣ್ಣ ಫ್ಯಾನ್ಸ್‌ಗೆ ಸಿಹಿಸುದ್ದಿ- ಏನದು?

    ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯುತ್ತಿದೆ. ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಉದ್ಯಮಿ ನಿಕೋಲಾಯ್ (Nicholai Sachdev) ಜೊತೆ ವರಲಕ್ಷ್ಮಿ ಮದುವೆಗೆ (Wedding) ಭರ್ಜರಿ ತಯಾರಿ ನಡೆಯುತ್ತಿದೆ.

    ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲು ಸ್ಟಾರ್ ನಟಿ ನಯನತಾರಾ ದಂಪತಿ, ರವಿತೇಜ, ತಮಿಳು ನಟ ಸಿದ್ಧಾರ್ಥ್, ಎ.ಆರ್ ಮುರುಗದಾಸ್, ಮುರಳಿ ಶರ್ಮಾ, ಸಮಂತಾ, ಕನ್ನಡದ ನಟ ಸುದೀಪ್ ಸೇರಿದಂತೆ ಅನೇಕರಿಗೆ ನಟಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅದಷ್ಟೇ ಅಲ್ಲ, ಪಿಎಂ ನರೇಂದ್ರ ಮೋದಿಗೂ ನಟಿಯ ಕುಟುಂಬ ವಿಶೇಷವಾಗಿ ಆಮಂತ್ರಣ ನೀಡಿದೆ.

    ಅಂದಹಾಗೆ, ಮಾಣಿಕ್ಯ ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ಮುಂಬೈನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.

    ಇನ್ನೂ ‘ಮಾಣಿಕ್ಯ’ ಸಿನಿಮಾದ ನಂತರ ಮತ್ತೆ ಸುದೀಪ್ ಜೊತೆ ನಟಿ ಕೈಜೋಡಿಸಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

  • ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ಕನ್ನಡದ ‘ಮಾಣಿಕ್ಯ’ ನಟಿ

    ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ಕನ್ನಡದ ‘ಮಾಣಿಕ್ಯ’ ನಟಿ

    ಕಾಲಿವುಡ್ ನಟ ಶರತ್ ಕುಮಾರ್ (Sarathkumar) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಪುತ್ರಿ ವರಲಕ್ಷ್ಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಜೊತೆಗೆ ಸೌತ್‌ನ ನಟ- ನಟಿಯರಿಗೆ ಶರತ್‌ಕುಮಾರ್ ಕುಟುಂಬ ಮದುವೆ ಆಮಂತ್ರಣ ನೀಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಜನಿಕಾಂತ್ (Rajanikanth) ಮನೆಗೆ ಭೇಟಿ ನೀಡಿ ಮದುವೆ (Wedding) ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಈ ಕುರಿತು ನಟಿ ವರಲಕ್ಷ್ಮಿ (Varalaxmi) ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ನಮ್ಮ ತಲೈವರ್ ರಜಿನಿಕಾಂತ್ ಸರ್ ಅವರನ್ನು ಭೇಟಿ ಮಾಡಿದೆ. ಅವರನ್ನು ಮತ್ತು ಲತಾ ಆಂಟಿ ಅವರನ್ನು ಮದುವೆ ಆಹ್ವಾನಿಸಿದೆ. ಧನ್ಯವಾದಗಳು ಸರ್ ಎಂದು ವರಲಕ್ಷ್ಮಿ ಬರೆದುಕೊಂಡಿದ್ದಾರೆ. ಭೇಟಿಯಾಗಿರುವ ಫೋಟೋ ಹಂಚಿಕೊಂಡು ನಟಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

    ಅಂದಹಾಗೆ, ಮಾಣಿಕ್ಯ ನಟಿ ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ಎಂಗೇಜ್‌ಮೆಂಟ್ ಅದ್ಧೂರಿಯಾಗಿ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು. ಇದೀಗ ಮದುವೆಗೆ ಸಿದ್ಧತೆ ನಡೆಯುತ್ತಿದೆ.

    ಇನ್ನೂ `ಮಾಣಿಕ್ಯ’ ಸಿನಿಮಾದ ನಂತರ ಮತ್ತೆ ಸುದೀಪ್ ಜೊತೆ ನಟಿ ಕೈಜೋಡಿಸಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

  • ಭಾವಿಪತಿ 14 ವರ್ಷಗಳಿಂದ ಪರಿಚಯ: ಟೀಕೆಗೆ ಉತ್ತರಿಸಿದ ನಟಿ ವರಲಕ್ಷ್ಮಿ

    ಭಾವಿಪತಿ 14 ವರ್ಷಗಳಿಂದ ಪರಿಚಯ: ಟೀಕೆಗೆ ಉತ್ತರಿಸಿದ ನಟಿ ವರಲಕ್ಷ್ಮಿ

    ರಲಕ್ಷ್ಮಿ ಶರತ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಂತರ ಈ ಕುರಿತಂತೆ ಸಾಕಷ್ಟು ನೆಗೆಟಿವ್ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆಲ್ಲ ವರಲಕ್ಷ್ಮಿ ಉತ್ತರ ಕೊಟ್ಟಿದ್ದಾರೆ. ಇದು ದಿಢೀರ್ ಬೆಳವಣಿಗೆ ಅಲ್ಲ, ನನ್ನ ಭಾವಿಪತಿ ನನಗೆ 14 ವರ್ಷಗಳಿಂದಲೂ ಪರಿಚಯ ಎಂದಿದ್ದಾರೆ.

    ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಅವರು ನಿಕೋಲಾಯ್ ಸಚ್‌ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್‌ಲಿಫ್ಟಿಂಗ್‌ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.

    ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

    ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

  • ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯವಾಗಿತ್ತು: ನಟಿ ವರಲಕ್ಷ್ಮಿ

    ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯವಾಗಿತ್ತು: ನಟಿ ವರಲಕ್ಷ್ಮಿ

    ಕ್ಷಿಣದ ಹೆಸರಾಂತ ನಟ ಶರತ್ ಕುಮಾರ್ ಪುತ್ರಿ ವರಲಕ್ಷ್ಮಿ (Varalakshmi Sarath Kumar) ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಶಬರಿ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಅವರು, ಈ ಸಿನಿಮಾದ ಸಂದರ್ಶನದಲ್ಲಿ ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ಬಾಲ್ಯದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು. ಅದನ್ನು ನೆನಪಿಸಿಕೊಂಡರೆ, ಈಗಲೂ ಹಿಂಸೆ ಅನಿಸುತ್ತದೆ ಎಂದಿದ್ದಾರೆ.

    ಈ ಮಾತುಗಳನ್ನು ಅವರು ಆಡೋದಕ್ಕೂ ಕಾರಣವಿದೆ. ಶಬರಿ ಸಿನಿಮಾದಲ್ಲಿ ತಾಯಿಯು ತನ್ನ ಮಗಳನ್ನು ಹೇಗೆ ಕಾಪಾಡಿಕೊಳ್ಳುತ್ತಾಳೆ ಎನ್ನುವ ಕಥೆಯನ್ನು ಆಧರಿಸಿದೆ. ಈ ಸಮಯದಲ್ಲಿ ವರಲಕ್ಷ್ಮಿ ಲೈಂಗಿಕ ದೌರ್ಜನ್ಯದ ಕುರಿತಾದ ಮಾತುಗಳನ್ನು ಆಡಿದ್ದಾರೆ. ತಮ್ಮ ಜೀವನದಲ್ಲೇ ನಡೆದ ಘಟನೆಯನ್ನು ನೆಪಿಸಿಕೊಂಡಿದ್ದಾರೆ.

    ಒಂದು ಕಡೆ ಸಿನಿಮಾ ಮತ್ತೊಂದು ಕಡೆ ಮದುವೆ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ನಿಕೋಲಾಯ್ ಸಚ್‌ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್‌ಲಿಫ್ಟಿಂಗ್‌ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.

    ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

    ವರಲಕ್ಷ್ಮಿ ಶರತ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

  • ಪಂಚ ಭಾಷೆಗಳಲ್ಲಿ ‘ಶಬರಿ’: ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಪಂಚ ಭಾಷೆಗಳಲ್ಲಿ ‘ಶಬರಿ’: ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಥೆ ಆಯ್ಕೆ ವಿಚಾರದಲ್ಲಿ ವಿಭಿನ್ನ ಪ್ರಯತ್ನಗಳತ್ತ ಹೊರಳುವ ನಟಿಯರಲ್ಲಿ ವರಲಕ್ಷ್ಮೀ ಶರತ್‌ಕುಮಾರ್‌ (Varalakshmi Sarath Kumar) ಸಹ ಒಬ್ಬರು. ಈಗ ಇದೇ ನಟಿ ‘ಶಬರಿ’ (Shabari) ಹೆಸರಿನ ಸಿನಿಮಾ ಮೂಲಕ ಆಗಮಿಸಲು ಸಜ್ಜಾಗಿದ್ದಾರೆ. ನಾಯಕಿ ಪ್ರಧಾನ ಈ ಸಿನಿಮಾ ಒಂದೇ ಭಾಷೆಗೆ ಸೀಮಿತವಾಗಿರದೇ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿದ್ದು, ಬಿಡುಗಡೆಗೂ ದಿನಾಂಕ ನಿಗದಿಯಾಗಿದೆ. ಮೇ 3ರಂದು ಈ ಸಿನಿಮಾ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ಮಹಾ ಮೂವೀಸ್‌ ಬ್ಯಾನರ್‌ನಲ್ಲಿ ಮಹೇಂದ್ರ ನಾಥ್‌ ಕೊಂಡ್ಲಾ ಶಬರಿ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಮಹರ್ಷಿ ಕೊಂಡ್ಲಾ ಈ ಸಿನಿಮಾ ಪ್ರಸೆಂಟ್‌ ಮಾಡುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗಲಿರುವ ಈ ಚಿತ್ರವನ್ನು ಅನಿಲ್‌ ಕಾಟ್ಜ್ (Anil Katz) ನಿರ್ದೇಶನ ಮಾಡಿದ್ದಾರೆ. ವಿಶೇಷ ಏನೆಂದರೆ, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾ.

    ಈ ಸಿನಿಮಾ ಬಗ್ಗೆ ನಿರ್ಮಾಪಕ ಮಹೇಂದ್ರನಾಥ್‌ ಕೊಂಡ್ಲಾ ಹೇಳುವುದೇನೆಂದರೆ, “ಶಬರಿ ಸಿನಿಮಾದ ಕಥೆ ಮತ್ತು ಸ್ಕ್ರೀನ್‌ ಪ್ಲೇ ತುಂಬ ವಿಶೇಷವಾಗಿದೆ. ಭಾವುಕ ಎಳೆಯ ಜತೆಗೆ ಸೀಟಿನ ತುದಿಗೆ ತಂದು ಕೂರಿಸುವ ಥ್ರಿಲ್ಲರ್‌ ಶೈಲಿಯೂ ಈ ಸಿನಿಮಾದಲ್ಲಿರಲಿದೆ. ವರಲಕ್ಷ್ಮೀ ಅವರ ಈ ವರೆಗಿನ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ, ಇದು ತುಂಬ ವಿಭಿನ್ನ. ಈ ಸಿನಿಮಾದಲ್ಲಿನ ಅವರ ನಟನೆಯೂ ಅಷ್ಟೇ ರೋಚಕವಾಗಿಯೇ ಮೂಡಿಬಂದಿದೆ” ಎನ್ನುತ್ತಾರೆ.

    ಮುಂದುವರಿದು ಮಾತನಾಡುವ ಅವರು, “ಈಗಾಗಲೇ ತೆಲುಗು ಮತ್ತು ತಮಿಳಿನ ಮೊದಲ ಕಾಪಿಯನ್ನು ನೋಡಿರುವುದರಿಂದ, ಎಲ್ಲರಿಗೂ ಇಷ್ಟವಾಗಲಿದೆ ಎಂದು ನಂಬಿದ್ದೇನೆ. ಈ ನಡುವೆ ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯ ಡಬ್ಬಿಂಗ್‌ ಕೆಲಸಗಳು ನಡೆಯುತ್ತಿದ್ದು, ಮೇ 3ರಂದು ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ರಿಲೀಸ್‌ ಮಾಡಲಿದ್ದೇವೆ” ಎಂದಿದ್ದಾರೆ.

     

    ವರಲಕ್ಷ್ಮೀ ಶರತ್‌ ಕುಮಾರ್‌, ಗಣೇಶ್‌ ವೆಂಕಟರಮಣನ್‌, ಶಶಾಂಕ್‌, ಮೈಮ್‌ ಗೋಪಿ, ಸುನಯನಾ, ರಾಜಶ್ರೀ ನಾಯರ್‌, ಮಧುನಂದನ್‌, ರಶಿಕಾ ಬಾಲಿ (ಬಾಂಬೆ), ವಿವಾ ರಾಘವ್‌, ಪ್ರಭು, ಭದ್ರಮ್‌, ಕೃಷ್ಣ ತೇಜ, ಬಿಂದು ಪಜಿದಿಮರ್ರಿ, ಅಸ್ರಿತಾ ವೆಮುಗಂಟಿ, ಹರ್ಷಿಣಿ ಕೊಡುರು. ಅರ್ಚನ್‌ ಅನಂತ್‌, ಪ್ರಮೋದಿನಿ, ಬೇಬಿ ನಿವೇಕ್ಷಾ, ಬೇಬಿ ಕೃತಿಕಾ ತಾರಾಗಣದಲ್ಲಿದ್ದಾರೆ.

  • D50: ಧನುಷ್ ನಿರ್ದೇಶನದ ‘ರಾಯನ್’ ಸಿನಿಮಾದಲ್ಲಿ ಮಾಣಿಕ್ಯ ಚಿತ್ರದ ನಟಿ

    D50: ಧನುಷ್ ನಿರ್ದೇಶನದ ‘ರಾಯನ್’ ಸಿನಿಮಾದಲ್ಲಿ ಮಾಣಿಕ್ಯ ಚಿತ್ರದ ನಟಿ

    ಮಿಳಿನ ಖ್ಯಾತ ನಟ ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾದಲ್ಲಿ ಖ್ಯಾತ ನಟ ಎಸ್.ಜೆ ಸೂರ್ಯ ವಿಲನ್ ಪಾತ್ರ ನಿರ್ವಹಿಸುವ ಬಗ್ಗೆ ಮಾಹಿತಿಯನ್ನು ಸ್ವತಃ ಧನುಷ್ (Dhanush) ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಚಿತ್ರದ ಮತ್ತೊಂದು ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಕನ್ನಡದ ಮಾಣಿಕ್ಯ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಚಿತ್ರದಲ್ಲಿ ನಟಿಸಿದ್ದಾರೆ.

    ಮಾಣಿಕ್ಯ (Maanikya) ಸಿನಿಮಾದಲ್ಲಿ ಸುದೀಪ್‌ಗೆ (Sudeep) ನಾಯಕಿ ನಟಿಸಿದ್ದ ವರಲಕ್ಷ್ಮಿ ಸದ್ಯ ಧನುಷ್ ಜೊತೆ ಹೊಸ ಸಿನಿಮಾ ಮಾಡ್ತಿದ್ದಾರೆ. ಈ ಚಿತ್ರದ ಲುಕ್ ಕೂಡ ರಿವೀಲ್ ಆಗಿದ್ದು, ಹಳ್ಳಿ ಹುಡುಗಿಯ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ & ವೈಟ್ ಶೇಡ್‌ನಲ್ಲಿ ವರಲಕ್ಷ್ಮಿ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಧನುಷ್ ಅವರ ಮಹತ್ವಾಕಾಂಕ್ಷಿ ಈ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು, ಚಿತ್ರಕ್ಕೆ ‘ರಾಯನ್’ ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇತ್ತೀಚೆಗೆ ರಿಲೀಸ್ ಮಾಡಿತ್ತು ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿತ್ತು. ಇದನ್ನೂ ಓದಿ:100 ಕೋಟಿ ಕೊಟ್ರು ನಟಿಸಲ್ಲ ಎಂದು ಆ ಹೀರೋಗೆ ನಯನತಾರಾ ಹೇಳಿದ್ದೇಕೆ?

    2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ. ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

    ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.