Tag: ವರುಣಾ

  • ಬಿಜೆಪಿ ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

    ಬಿಜೆಪಿ ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

    ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಇಂದು ಮುಂಜಾನೆ ನಿಧನರಾಗಿದ್ದಾರೆ.

    ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

    2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

    ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

  • ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ (Yatindra) ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ (Election Commission) ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

    ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.  ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಯತೀಂದ್ರ ಹೇಳಿದ್ದೇನು?
    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

    ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ತಿಳಿಸಿದ್ದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್‌ ಬಗ್ಗೆ ಯತೀಂದ್ರ ಮಾಹಿತಿ

    ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್‌ ಬಗ್ಗೆ ಯತೀಂದ್ರ ಮಾಹಿತಿ

    ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) ಅವರು ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಾ? ಇದೇ ಅಂಶವೇ ಅವರ ಗೆಲುವಿಗೆ ಕಾರಣವಾಯ್ತಾ ಎಂಬ ಪ್ರಶ್ನೆಗೆ ಖುದ್ದ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೌದು ಎನ್ನುವ ಉತ್ತರವನ್ನು ಕೊಟ್ಟು, ಬಾಯಿತಪ್ಪಿ ಚುನಾವಣಾ ಸತ್ಯ ಬಹಿರಂಗಪಡಿಸಿದ್ದಾರೆ.

    ವರುಣಾ ಕ್ಷೇತ್ರದ ಚುನಾವಣೆ ವೇಳೆ ಕೊಟ್ಟ ಗಿಫ್ಟ್ ಬಗ್ಗೆ ಬಹಿರಂಗ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಸಾವಿರಾರು ಜನರಿಗೆ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಲಾಗಿತ್ತು ಎಂಬ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ – KRS, ಕಬಿನಿಯಿಂದ 3,000 ಕ್ಯೂಸೆಕ್‌ಗೂ ಅಧಿಕ ನೀರು ಬಿಡುಗಡೆ

    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

    ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ಹೇಳಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಭಾಗಿ – ಅಹವಾಲು ಕೊಡಲು ಮುಗಿಬಿದ್ದ ಜನ

    ಸರ್ಕಾರಿ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಭಾಗಿ – ಅಹವಾಲು ಕೊಡಲು ಮುಗಿಬಿದ್ದ ಜನ

    ಮೈಸೂರು: ವರುಣಾ (Varuna) ಕ್ಷೇತ್ರದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಭಾಗಿಯಾಗಿದ್ದಾರೆ. ಸದ್ಯ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಅವರು ಸರ್ಕಾರಿ (Government) ಕಾರ್ಯಕ್ರಮ ಉದ್ಘಾಟಿಸಿದ್ದಾರೆ.

    ವರುಣಾ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿದ್ದಾರೆ. ಆದರೆ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಅವರು ಪಾಲ್ಗೊಂಡಿದ್ದರು. ಬಳಿಕ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆಯಲ್ಲೂ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ

    ಕಾರ್ಯಕ್ರಮದಲ್ಲಿ ಭಾಗಿಯಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸೇಬಿನ ಹಾರ ಹಾಕಿ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅವರಿಗೆ ಅಹವಾಲು ನೀಡಲು ಸಾರ್ವಜನಿಕರು ಮುಗಿಬಿದ್ದಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ – ಆರೋಗ್ಯ ಇಲಾಖೆ ಆದೇಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆಯಲ್ಲಿ ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದ್ರೆ ಆದೇಶ ಪಾಲಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

    ಲೋಕಸಭೆಯಲ್ಲಿ ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದ್ರೆ ಆದೇಶ ಪಾಲಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದರೆ ಆದೇಶ ಪಾಲಿಸಲು ನಾನು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನುಡಿದಿದ್ದಾರೆ

    ಲೋಕಸಭೆಗೆ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ, ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದ್ರೆ ಆದೇಶ ಪಾಲಿಸಲು ಸಿದ್ಧ ಎಂದಿದ್ದಾರೆ.

    ಚುನಾವಣೆಗೆ ಇನ್ನೂ 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದ್ರೆ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

    ಸರ್ಕಾರಿ ಸ್ಥಾನಮಾನದ ನಿರೀಕ್ಷೆ:
    ವರುಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗದ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಯತೀಂದ್ರ ಅವರು ಇದ್ದಾರೆ. ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಯತೀಂದ್ರ ಸರ್ಕಾರಿ ಸ್ಥಾನಮಾನದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ.

    ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನು ನೋಡಲು ಬರುವ ರಾಜ್ಯದ ಜನರನ್ನೆಲ್ಲ ಅವರು ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಜನರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು ಎಂದರು.

    ನನಗೆ ಯಾವುದಾದರೂ ಚಿಕ್ಕದಾದ ಸ್ಥಾನಮಾನ ನೀಡಿದರೂ ಸಹಕಾರ ಆಗುತ್ತದೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ. ಆದರೂ ಅಂತದ್ದೇ ಸಣ್ಣ ಹುದ್ದೆ ಈ ಬಾರಿ ನೀಡಿದರೂ ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ನನ್ನ ಬಳಿ ದಾಖಲೆ ಇದೆ- ಹೆಚ್‍ಡಿಕೆ ಪೆನ್‍ಡ್ರೈವ್ ಬಾಂಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ವೇಗಳು ಹೇಳ್ತಿರೋವಂತೆ ನಮಗೇ ಬಹುಮತ ಖಚಿತ – ಕರಾವಳಿಯಲ್ಲಿ ಸೀಟು ಹೆಚ್ಚಳ: ಸಿದ್ದರಾಮಯ್ಯ

    ಸರ್ವೇಗಳು ಹೇಳ್ತಿರೋವಂತೆ ನಮಗೇ ಬಹುಮತ ಖಚಿತ – ಕರಾವಳಿಯಲ್ಲಿ ಸೀಟು ಹೆಚ್ಚಳ: ಸಿದ್ದರಾಮಯ್ಯ

    ಮೈಸೂರು: ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೆಗಳೂ ಅದನ್ನೇ ಹೇಳ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಧಾನಸಭಾ ಚುನಾವಣೆ (Assembly Election) ಮತದಾನ ಅಂತಿಮಗೊಂಡು ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಮಾತನಾಡಿದ ಸಿದ್ದರಾಮಯ್ಯ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು ಎಂದು ಹೇಳಿದರು.

    ವರುಣಾದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಪೈಪೋಟಿಯಿದೆ. ಇಲ್ಲಿ ಬಿಜೆಪಿ ಎಲ್ಲೂ ಕೂಡ ನೇರವಾಗಿ ನಮ್ಮ ಜೊತೆ ಪೈಪೋಟಿ ಇಲ್ಲ. ಸೋಮಣ್ಣ ಅವರಿಗೆ ವರುಣಾದ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ. ವರುಣಾದಲ್ಲಿ ಜೆಡಿಎಸ್‌ನವರೆಲ್ಲರೂ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಕ್ಸಿಟ್ ಪೋಲ್‍ನಲ್ಲಿ ನಂಬಿಕೆ ಇಲ್ಲ, 141 ಸ್ಥಾನ ಗೆಲ್ತೀವಿ: ಡಿಕೆ ಶಿವಕುಮಾರ್

    ರೆಸಾರ್ಟ್ ರಾಜಕೀಯದ ಅವಶ್ಯಕತೆ ಇದೆಯಾ? ನಿಮ್ಮ ಶಾಸಕರನ್ನು ಹೇಗೆ ರಕ್ಷಿಸಿಕೊಳ್ಳುತ್ತೀರಾ? ಎಂಬ ವರದಿಗಾರರೊಬ್ಬರ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಎಲ್ಲರೂ ಬಹುಮತ ಕೊಡುತ್ತಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತದೆ? ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ? ನೀನು ಬಿಜೆಪಿ ವ್ಯಕ್ತಿನಾ? ನಿನಗೇಕೆ ಇಂತಹ ಅನುಮಾನಗಳು ಬರಬೇಕು? ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ಗೆ ಬಹುಮತ ಇದೆ. ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನು ಕೇಳಿ ಗೊಂದಲದ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಗುಡುಗಿದರು. ಇದನ್ನೂ ಓದಿ: ಟುಡೇಸ್‌ ಚಾಣಕ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರ

  • ಕಾರಿನ ಮೇಲೆ ನಿಂತಿದ್ದ ಸಚಿವ ಸೋಮಣ್ಣರನ್ನು ಕೆಳಗೆ ಬೀಳಿಸಿದ ಸುದೀಪ್ ಅಭಿಮಾನಿ

    ಕಾರಿನ ಮೇಲೆ ನಿಂತಿದ್ದ ಸಚಿವ ಸೋಮಣ್ಣರನ್ನು ಕೆಳಗೆ ಬೀಳಿಸಿದ ಸುದೀಪ್ ಅಭಿಮಾನಿ

    ಚಾಮರಾಜನಗರ: ಬಿಜೆಪಿ (BJP) ಪಕ್ಷದಿಂದ ನಟ ಸುದೀಪ್ (Sudeep) ಸಚಿವ ವಿ.ಸೋಮಣ್ಣ (V Somanna) ಪರವಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಶುಕ್ರವಾರ ಚಾಮರಾಜನಗರದಲ್ಲಿ (Chamarajanagar) ನಾಯಕರು ರೋಡ್ ಶೋ (Road Show) ನಡೆಸುತ್ತಿದ್ದ ವೇಳೆ ಸುದೀಪ್ ಹತ್ತಿರ ಹೋಗಲು ಧಾವಿಸಿದ ಅಭಿಮಾನಿ (Fan) ಸೋಮಣ್ಣ ಅವರನ್ನು ಬಿಳಿಸಿರುವ ಪ್ರಸಂಗ ನಡೆದಿದೆ.

    ಸಚಿವ ಸೋಮಣ್ಣ, ಕೊಳ್ಳೇಗಾಲ ಎನ್ ಮಹೇಶ್, ಗುಂಡ್ಲುಪೇಟೆ ನಿರಂಜನ್ ಕುಮಾರ್, ಹನೂರು ಪ್ರೀತನ್ ನಾಗಪ್ಪ ಪರ ಸುದೀಪ್ ಚಾಮರಾಜನಗರಲ್ಲಿ ರೋಡ್ ಶೋ ನಡೆಸಿದ್ದಾರೆ. ಗುಂಡ್ಲುಪೇಟೆ ಮೂಲಕ ರೋಡ್ ಶೋ ಆರಂಭ ಮಾಡಲಾಗಿದ್ದು, ಚಾಮರಾಜನಗರ, ಕೊಳ್ಳೇಗಾಲ, ಹನೂರು ಕ್ಷೇತ್ರದಲ್ಲಿ ರೋಡ್ ಶೋ ನಡೆದಿದೆ.

    ರೋಡ್ ಶೋ ವೇಳೆ ಸಚಿವ ಸೋಮಣ್ಣ ಹಾಗೂ ಸುದೀಪ್ ಕಾರಿನ ಮೇಲೆ ನಿಂತು ಜನರತ್ತ ಕೈ ಬೀಸುತ್ತಿದ್ದರು. ಆಗ ಸುದೀಪ್ ಬಳಿ ತೆರಳಲು ಅಭಿಮಾನಿಯೊಬ್ಬ ಕಾರಿನ ಮೇಲೆ ಹತ್ತಿದ್ದಾನೆ. ಬಳಿಕ ಆತ ಆಯತಪ್ಪಿದ್ದು, ಸಚಿವ ಸೋಮಣ್ಣ ಅವರನ್ನು ಹಿಡಿದುಕೊಂಡು ಕೆಳಕ್ಕೆ ಬಿದ್ದಿದ್ದಾನೆ. ಈ ವೇಳೆ ಸೋಮಣ್ಣ ಕೂಡಾ ಬಿದ್ದಿದ್ದು, ಅವರನ್ನು ಸುದೀಪ್ ಕಾರಿನ ಟಾಪ್‌ನಿಂದ ಕೆಳಕ್ಕೆ ಬೀಳದಂತೆ ಹಿಡಿದಿದ್ದರು. ಇದನ್ನೂ ಓದಿ: ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ಅಬ್ಬರದ ಪ್ರಚಾರದಲ್ಲಿ ನಟ ಸುದೀಪ್‌ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಸಂತೇಮರಹಳ್ಳಿಯ ವೃತ್ತದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ರೋಡ್ ಶೋನಿಂದ ಒಬ್ಬ ವಿದ್ಯಾರ್ಥಿಗೂ ತೊಂದರೆಯಾಗಬಾರದು ಅಂದ್ರು ಪ್ರಧಾನಿ: ಶೋಭಾ ಕರಂದ್ಲಾಜೆ

  • ನಾನೂ ಕೂಡ ಶಿವಣ್ಣನ ಅಭಿಮಾನಿ : ಉಲ್ಟಾ ಹೊಡೆದ ಸಂಸದ ಸಿಂಹ

    ನಾನೂ ಕೂಡ ಶಿವಣ್ಣನ ಅಭಿಮಾನಿ : ಉಲ್ಟಾ ಹೊಡೆದ ಸಂಸದ ಸಿಂಹ

    ಟ ಶಿವರಾಜ್ ಕುಮಾರ್ ವಿರುದ್ಧ ನಿನ್ನೆಯಷ್ಟೇ ಪ್ರತಾಪ್ ಸಿಂಹ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದರು ಎನ್ನುವ ಕಾರಣಕ್ಕಾಗಿ ಪುನೀತ್ ರಾಜ್ ಕುಮಾರ್ ಹೆಸರನ್ನೂ ಅವರು ಎಳೆತಂದಿದ್ದರು. ಈ ನಡೆ ಡಾ.ರಾಜ್ ಕುಟುಂಬದ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಸ್ವತಃ ಶಿವರಾಜ್ ಕುಮಾರ್ ಕೂಡ ಪ್ರತಿಕ್ರಿಯಿಸಿದ್ದರು. ಇದೀಗ ಪ್ರತಾಪ್ ಸಿಂಹ ಮಾತು ಬದಲಾಯಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಂಹ, ‘ನನಗೆ ಡಾ.ರಾಜ್ ಕುಮಾರ್ ಕುಟುಂಬದ ಬಗ್ಗೆ ಗೌರವವಿದೆ. ನಾನೂ ಕೂಡ ಶಿವರಾಜ್ ಕುಮಾರ್ ಅಭಿಮಾನಿ. ಅವರ ಕುಟುಂಬವನ್ನು ನಾವು ರಾಜಕೀಯ ಹೊರತಾಗಿ ನೋಡುತ್ತೇವೆ. ಶಿವಣ್ಣ ಕೂಡ ಅದಕ್ಕೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಧನ್ಯವಾದಗಳನ್ನು ಹೇಳುತ್ತೇನೆ’ ಎಂದಿದ್ದಾರೆ.

    ಇದೇ ವಿಷಯವಾಗಿ ಶಿವರಾಜ್ ಕುಮಾರ್ ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದರು. ಪರೋಕ್ಷವಾಗಿಯೇ ಅಸಮಾಧಾನ ಹೊರಹಾಕಿದ್ದರು. ‘ಪ್ರತಾಪ್ ಸಿಂಹ ಮತ್ತು ಸೋಮಣ್ಣ ಇಬ್ಬರೂ ನನ್ನ ಆತ್ಮೀಯರು. ಹಾಗೆ ಹೇಳಬಾರದಿತ್ತು. ಅಲ್ಲದೇ, ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನನಗೆ ಗೊತ್ತೇ ಇರಲಿಲ್ಲ’ ಎಂದಿದ್ದರು. ಇದನ್ನೂ ಓದಿ:ಬಣ್ಣದ ಲೋಕಕ್ಕೆ ಡಾ ಬ್ರೋ- ‘ಡೇರ್ ಡೆವಿಲ್ ಮುಸ್ತಾಫಾ’ಗೆ ಬೆಂಬಲ

    ವರುಣಾ ಕ್ಷೇತ್ರದಲ್ಲಿ ನಿನ್ನೆ ಶಿವಣ್ಣ ಪ್ರಚಾರದಲ್ಲಿ ತೊಡಗಿದ್ದರ ಕುರಿತು ಪ್ರತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದಿದ್ದರು.

    ಕಳೆದ ಮೂರು ದಿನಗಳಿಂದ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ, ನಿಶ್ವಿಕಾ ನಾಯ್ಡು, ದುನಿಯಾ ವಿಜಯ್ ಸೇರಿದಂತೆ ಹಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

    ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.

  • ರಾಜಕೀಯ ಅಖಾಡಕ್ಕೆ ಅಪ್ಪು ಎಳೆತಂದ ಪ್ರತಾಪ್ ಸಿಂಹ : ನಟ ಶಿವಣ್ಣ ಪ್ರತಿಕ್ರಿಯೆ

    ರಾಜಕೀಯ ಅಖಾಡಕ್ಕೆ ಅಪ್ಪು ಎಳೆತಂದ ಪ್ರತಾಪ್ ಸಿಂಹ : ನಟ ಶಿವಣ್ಣ ಪ್ರತಿಕ್ರಿಯೆ

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರವಾಗಿ ನಟ ಶಿವರಾಜ್ ಕುಮಾರ್ (Shivaraj Kumar) ಪ್ರಚಾರ ಮಾಡಿದರು ಎನ್ನುವ ಕಾರಣಕ್ಕಾಗಿ ಶಿವಣ್ಣನಿಗೆ ನಿನ್ನೆ ಟಾಂಗ್ ಕೊಟ್ಟಿದ್ದರು ಸಂಸದ ಪ್ರತಾಪ್ ಸಿಂಹ. ಈ ವಿಷಯದಲ್ಲಿ ಪುನೀತ್ ರಾಜ್ ಕುಮಾರ್ ಹೆಸರನ್ನು ಅವರು ಎಳೆತಂದಿದ್ದರು. ಸಿಂಹ ನಡೆಗೆ ಅಪ್ಪು ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದರು. ಈ ಕುರಿತಂತೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪರೋಕ್ಷವಾಗಿಯೇ ಅಸಮಾಧಾನ ಹೊರಹಾಕಿದ ಶಿವಣ್ಣ, ‘ಪ್ರತಾಪ್ ಸಿಂಹ ಮತ್ತು ಸೋಮಣ್ಣ ಇಬ್ಬರೂ ನನ್ನ ಆತ್ಮೀಯರು. ಹಾಗೆ ಹೇಳಬಾರದಿತ್ತು. ಅಲ್ಲದೇ, ಸೋಮಣ್ಣ ವರುಣಾ (Varuna) ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನನಗೆ ಗೊತ್ತೇ ಇರಲಿಲ್ಲ’ ಎಂದಿದ್ದಾರೆ.

    ವರುಣಾ ಕ್ಷೇತ್ರದಲ್ಲಿ ನಿನ್ನೆ ಶಿವಣ್ಣ ಪ್ರಚಾರದಲ್ಲಿ ತೊಡಗಿದ್ದರ ಕುರಿತು ಪ್ರತಾಪ್ ಸಿಂಹ (Pratap Simha) ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದಿದ್ದರು. ಇದನ್ನೂ ಓದಿ:‘ಶಾಕುಂತಲಂ’ ಸಿನಿಮಾ ಸೋಲೊಪ್ಪಿಕೊಂಡ ನಿರ್ಮಾಪಕ ದಿಲ್ ರಾಜು

    ಕಳೆದ ಮೂರು ದಿನಗಳಿಂದ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ, ನಿಶ್ವಿಕಾ ನಾಯ್ಡು, ದುನಿಯಾ ವಿಜಯ್ ಸೇರಿದಂತೆ ಹಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

    ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.

  • ಶಿವರಾಜ್ ಕುಮಾರ್ ಗೆ ಟಾಂಗ್ ಕೊಟ್ಟ ಸಂಸದ ಪ್ರತಾಪ್ ಸಿಂಹ

    ಶಿವರಾಜ್ ಕುಮಾರ್ ಗೆ ಟಾಂಗ್ ಕೊಟ್ಟ ಸಂಸದ ಪ್ರತಾಪ್ ಸಿಂಹ

    ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ (Siddaramaiah) ಪರವಾಗಿ ಇಂದು ಶಿವರಾಜ್ ಕುಮಾರ್ (Shivaraj Kumar) ಪ್ರಚಾರ ಮಾಡುತ್ತಿದ್ದಾರೆ. ವರುಣಾ (Varuna) ಕ್ಷೇತ್ರಕ್ಕೆ ಆಗಮಿಸಿರುವ ಶಿವಣ್ಣ, ಬೆಳಗ್ಗೆಯಿಂದಲೇ ಸಿದ್ಧರಾಮಯ್ಯನವರ ಪರವಾಗಿ ಮತಯಾಚನೆ ಮಾಡುತ್ತಿದ್ದರು. ಈ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನನ್ನು ಹೊಗಳುವ ಮೂಲಕ ಶಿವಣ್ಣನಿಗೆ ಟಾಂಗ್ ನೀಡಿದ್ದಾರೆ.

    ಪ್ರತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲ್ಯಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಲವ್ ಅಗೇನ್’ ಎನ್ನುತ್ತಾ ಪತಿಯ ಎದುರಲ್ಲೇ ಪ್ರಿಯಾಂಕಾ ಬೇರೆ ನಟನ ಜೊತೆ ಕಿಸ್

    ಕಳೆದ ಎರಡು ದಿನಗಳಿಂದ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ ಕೂಡ ಮಂಡ್ಯದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ದುನಿಯಾ ವಿಜಯ್ ಕೇವಲ ಸಿದ್ಧರಾಮಯ್ಯನವರ ಪರವಾಗಿಯಷ್ಟೇ ಪ್ರಚಾರ ಮಾಡಲಿದ್ದಾರಂತೆ.

    ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.