Tag: ವರ್ತೂರು ಕೆರೆ

  • ಮಾಂಸ ತ್ಯಾಜ್ಯದಿಂದ ತುಂಬುತ್ತಿದೆ ವರ್ತೂರು ಕೆರೆ- ವಾಸನೆಗೆ ಬೇಸತ್ತ ಸ್ಥಳೀಯರು

    ಮಾಂಸ ತ್ಯಾಜ್ಯದಿಂದ ತುಂಬುತ್ತಿದೆ ವರ್ತೂರು ಕೆರೆ- ವಾಸನೆಗೆ ಬೇಸತ್ತ ಸ್ಥಳೀಯರು

    ಆನೇಕಲ್: ಕೆರೆಯಲ್ಲಿ ಬೆಂಕಿ ಹಾಗೂ ನೊರೆಯಿಂದ ಕುಖ್ಯಾತಿಗೆ ಒಳಗಾಗಿದ್ದ ವರ್ತೂರು ಕೆರೆಗೆ ಇದೀಗ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೋಳಿ, ದನದ ಮಾಂಸದ ಕಸ ತುಂಬಿಕೊಂಡು ಗಬ್ಬು ನಾರುತ್ತಿದೆ.

    ವರ್ತೂರು ಗ್ರಾಮದಿಂದ ಕೆರೆಯ ಕೋಡಿವರೆಗೂ ಅಳವಡಿಸಿರುವ ತಂತಿ ಬೇಲಿ ಅಲ್ಲಲ್ಲಿ ತೆರೆದಿದೆ. ಇದನ್ನು ದುರ್ಬಳಕೆ ಮಾಡಿಕೊಂಡು ಕೆಲವು ಕೋಳಿ, ಕಸಾಯಿಖಾನೆ ಅಂಗಡಿಗಳ ಮಾಲೀಕರು ಮಾಂಸದ ತ್ಯಾಜ್ಯವನ್ನು ರಾತ್ರೋ ರಾತ್ರಿ ತಂದು ಕೆರೆಗೆ ಸುರಿದು ಹೋಗುತ್ತಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ನಾಯಿ ಹಾಗೂ ಹದ್ದುಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

    ಅಧಿಕಾರಿಗಳು, ಮಂತ್ರಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದಾಗ ಕೆಲವು ಬಿಬಿಎಂಪಿ ಕಾರ್ಮಿಕರು ದಂಡೆಯ ಮೇಲಿದ್ದ ಕಸವನ್ನು ಕೆರೆಗೆ ನೂಕುತ್ತಿದ್ದು, ಸ್ಥಳಾಂತರ ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಲ್ಲಿ ಬಿದ್ದ ಮಾಂಸವನ್ನು ತಿನ್ನಲು ಹಾವುಗಳು ಬರುತ್ತಿವೆ. ಹೀಗಾಗಿ ನಮಗೆ ಹುಲ್ಲು ಕಟಾವ್ ಮಾಡಲು ಹೆದರಿಕೆ ಆಗುತ್ತಿದೆ. ಕೆರೆಗೆ ಕಸ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರ್ತೂರು ನಿವಾಸಿ ಲೋಕೇಶ್ ಆಗ್ರಹಿಸಿದ್ದಾರೆ.

    ಸ್ಥಳೀಯರಿಗೆ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಕೆರೆಯ ದಂಡೆ ಮಾರ್ಗವಾಗಿ ಸಂಚಾರ ಮಾಡಿದರೆ ಗಬ್ಬುನಾಥಕ್ಕೆ ವಾಂತಿ ಬರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದ್ದು, ತಕ್ಷಣವೇ ಕಸ ತೆರವು ಮಾಡಲು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳ್ಳಂದೂರು, ವರ್ತೂರು ಕೆರೆ ಆಯ್ತು ಈಗ ಭೈರಸಂದ್ರ ಕೆರೆ ಸರದಿ- ವಿಷಪೂರಿತ ನೊರೆಯಿಂದ ಗಬ್ಬೆದ್ದು ನಾರುತ್ತಿದೆ ಬೃಹತ್ ಕೆರೆ

    ಬೆಳ್ಳಂದೂರು, ವರ್ತೂರು ಕೆರೆ ಆಯ್ತು ಈಗ ಭೈರಸಂದ್ರ ಕೆರೆ ಸರದಿ- ವಿಷಪೂರಿತ ನೊರೆಯಿಂದ ಗಬ್ಬೆದ್ದು ನಾರುತ್ತಿದೆ ಬೃಹತ್ ಕೆರೆ

    ಬೆಂಗಳೂರು: ಬೆಳ್ಳಂದೂರು, ವರ್ತೂರು ಕೆರೆಯಲ್ಲಿನ ನೊರೆಯ ವಿಚಾರದಲ್ಲಿ ಈಗಾಗಲೇ ಉದ್ಯಾನ ನಗರಿ ಬೆಂಗಳೂರಿನ ಮಾನ ಹರಾಜಾಗಿದೆ. ಈಗ ಮತ್ತೊಂದು ಕೆರೆಯ ಸರದಿ.

    900 ಎಕರೆಯ ಬಿಡದಿ ಬಳಿಯ ಭೈರಸಂದ್ರ ಕೆರೆಯೂ ಈಗ ಗಬ್ಬೆದ್ದು ನಾರುತ್ತಿದೆ. ವಿಷಪೂರಿತ ಗಾಳಿ ಕೆರೆ ಸುತ್ತಲಿನ ಪ್ರದೇಶವನ್ನ ಅವರಿಸಿಕೊಂಡಿದೆ. ಈ ಕೆರೆಯ ದುರ್ವಾಸನೆಗೆ ಕೆರೆಯ ಬಳಿಗೆ ಬರೋದಕ್ಕೆ ಇಲ್ಲಿನ ಜನ ಭಯ ಪಡುವಂತಾಗಿದೆ. ಹಲವು ವರ್ಷಗಳ ಹಿಂದೆ ಈ ಕೆರೆಯ ನೀರನ್ನ ವ್ಯವಸಾಯಕ್ಕೆ ಬಳಸಿಕೊಳ್ಳುತ್ತಿದ್ರು. ಅದ್ರೀಗ ಈ ಕೆರೆ ದುಸ್ಥಿತಿ ತಲುಪಿದೆ.

    ಇದಕ್ಕೆ ಕಾರಣ ಈ ಕೆರೆಯ ಸುತ್ತಮುತ್ತ ಸುಮಾರು ಇರುವ 248 ಕಾರ್ಖಾನೆಗಳು. ಬಹುತೇಕ ಎಲ್ಲಾ ಕಾರ್ಖಾನೆಗಳು ರಾಸಾಯನಿಕ ತ್ಯಾಜ್ಯವನ್ನು ಫೀಲ್ಟರ್ ಮಾಡದೇ ಕೆರೆಗೆ ಬೀಡೋದ್ರಿಂದಲೇ ಈ ರೀತಿ ಅಗಿದೆ ಅನ್ನೋದು ಸ್ಥಳೀಯರ ಆರೋಪ.

  • ಬೆಳ್ಳಂದೂರು, ವರ್ತೂರು ಕೆರೆಯಲ್ಲಿ ಮತ್ತೆ ನೊರೆ

    ಬೆಳ್ಳಂದೂರು, ವರ್ತೂರು ಕೆರೆಯಲ್ಲಿ ಮತ್ತೆ ನೊರೆ

    ಬೆಂಗಳೂರು: ತಿಂಗಳ ಹಿಂದೆ ಬೆಂಕಿ ಉಗುಳಿದ್ದ ಬೆಳ್ಳಂದೂರು ಕೆರೆ ಈಗ ನೊರೆ ಉಗುಳುತ್ತಿದೆ. ಬೆಂಗಳೂರು ಸೇರಿದಂತೆ ನಗರದ ಸುತ್ತಮುತ್ತ ಕಳೆದೆರೆಡು ದಿನಗಳಿಂದ ಧಾರಾಕಾರ ಮಳೆ ಆಗ್ತಿದ್ದು, ಪರಿಣಾಮ ಬೆಳ್ಳಂದೂರು ಕೆರೆಯಲ್ಲಿ ಆಳೆತ್ತರಕ್ಕೆ ನೊರೆ ಏರಿದೆ.

    ಇದರಿಂದ ಕೆರೆಯ ಸುತ್ತ ದುರ್ವಾಸನೆ ಹಬ್ಬಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಮಳೆಯಿಂದಾಗಿ ರಭಸವಾಗಿ ನೀರು ಹರಿಯುತ್ತಿರೋದ್ರಿಂದ ಇಂದು ಮತ್ತಷ್ಟು ನೊರೆ ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ವರ್ತೂರು ಕೆರೆಯಲ್ಲೂ ಕೂಡ ಇದೇ ಪರಿಸ್ಥಿತಿ ಇದೆ.

    ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ, ಬಿಡಿಎ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿತ್ತು. ಎರಡು ವಾರಗಳಲ್ಲಿ ಉತ್ತರಿಸುವಂತೆ ತಾಕೀತು ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಆರು ಜನರ ತಂಡದ ಕಮಿಟಿ ರಚನೆ ಮಾಡಿದೆ. ಕಮಿಟಿಯಲ್ಲಿ ಸೀನಿಯರ್ ಸೈಂಟಿಫಿಕ್ ಆಫೀಸರ್‍ಗಳಿದ್ದು, ಮುಂದಿನ ವಾರ ವರದಿ ನೀಡಲಿದ್ದಾರೆ. ಮತ್ತೆ ಮಾರ್ಚ್ 20 ರಂದು ವಿಚಾರಣೆ ನಡೆಯಲಿದ್ದು ಎನ್‍ಜಿಟಿ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡಬೇಕು.

    ಕಳೆದ ಬಾರಿ ಬೆಂಕಿ, ನೊರೆ ಕಾಣಿಸಿಕೊಂಡಾಗ ಬಿಬಿಎಂಪಿ ಮೇಯರ್ ಪದ್ಮಾವತಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ರು. ಆದ್ರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹೀಗೆ ಬೇಸಿಗೆಯಲ್ಲಿ ಬೆಂಕಿ, ಮಳೆಗಾಲದಲ್ಲಿ ನೊರೆ ಮತ್ತೆ ಮತ್ತೆ ಕಾಣಿಸ್ತಿರೋದು ಸ್ಥಳೀಯರನ್ನು ತೀವ್ರ ಆತಂಕಕ್ಕೀಡು ಮಾಡಿದೆ.