Tag: ವರ್ತೂರ ಪ್ರಕಾಶ್

  • ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ: ಸುಧಾಕರ್

    ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ: ಸುಧಾಕರ್

    ಬೆಂಗಳೂರು: ಜಿನೋಮಿಕ್ ಸೀಕ್ವೆನ್ಸ್ ಫಲಿತಾಂಶಕ್ಕೆ ಕನಿಷ್ಠ 7-8 ದಿನಗಳು ಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಅವರು ತಿಳಿಸಿದರು.

    ಕೋವಿಡ್ ಹೊಸ ತಳಿ ಓಮಿಕ್ರಾನ್ ಕುರಿತು ಮಾತನಾಡಿದ ಅವರು, ಈಗಾಗಲೇ ಜಿನೋಮಿಕ್ ಸೀಕ್ವೆನ್ಸ್ ಗೆ ಕಳಿಸಿದ್ದೇವೆ. ಡಿಸೆಂಬರ್ 1ರ ವೇಳೆಗೆ ನಮಗೆ ಹೊಸ ತಳಿಯ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ನಿನ್ನೆಯೂ ಕೂಡ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಓಮಿಕ್ರಾನ್ ಇರೋ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ: ಸಿಎಂ

    ಕೋಲಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಸುಧಾಕರ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದರು. ಇವರೊಡನೆ ಚರ್ಚೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ವರ್ತೂರು ಪ್ರಕಾಶ್ ಅವರನ್ನು ಕರೆದುಕೊಂಡು ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್ ಅವರ ಜೊತೆಗೆ ಮಾತುಕತೆ ನಡೆಸುತ್ತೇವೆ. ಮುಂದಿನ ತೀರ್ಮಾನಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

    ವಿಧಾನಸಭೆಗೆ ಕೋಲಾರ ಭಾಗದಲ್ಲಿ 16 ಕ್ಷೇತ್ರಗಳು ಬರುತ್ತವೆ. ಆದರೆ ಆ ಭಾಗದಲ್ಲಿ ಬಿಜೆಪಿ ಸ್ವಲ್ಪ ವೀಕ್ ಇದೆ. ಈಗ ಒಬ್ಬರೇ ಶಾಸಕರಿದ್ದಾರೆ. ಹೀಗಾಗಿ ಮುಂದಿನ ಚುನಾವಣೆ ಹೊತ್ತಿಗೆ 7-8 ಸ್ಥಾನಗಳನ್ನಾದರೂ ಬಿಜೆಪಿ ಗೆಲ್ಲಬೇಕು. ಹೀಗಾಗಿ ರಾಜ್ಯಾಧ್ಯಕ್ಷರು, ಸಿಎಂ ಹಾಗೂ ಹೈಕಮಾಂಡ್ ಜೊತೆ ಚರ್ಚೆ ಮಾಡ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಖುಣ ತೀರಿಸಲು ಮುಂದಾದ್ರಾ ಸುಮಲತಾ?

    ಇದೇ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ಪರಿಷತ್ ಅಭ್ಯರ್ಥಿ ಗೆಲ್ಲಿಸುವ ಕುರಿತು ಮಾತುಕತೆ ಮಾಡಿದ್ದೇವೆ. ನಮ್ಮ ಬೆಂಬಲಿಗರು ಅಭ್ಯರ್ಥಿಗೆ ಬೆಂಬಲ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಮಧ್ಯಾಹ್ನ ಬೊಮ್ಮಾಯಿ ಹಾಗೂ ಕಟೀಲ್ ಅವರನ್ನು ಭೇಟಿ ಮಾಡುತ್ತಿದ್ದೇವೆ. ಬಿಜೆಪಿ ಸೇರುವ ಬಗ್ಗೆ ಕೂಡ ಚರ್ಚೆ ಮಾಡುತ್ತೇನೆ. ಬಿಜೆಪಿ ನಾಯಕರ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರುತ್ತೇನೆ ಎಂದು ತಿಳಿಸಿದರು.

    bjp - congress

    ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತವನ್ನು ಬಿಜೆಪಿ ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ನಿನ್ನೆಯಷ್ಟೇ ಕೋಲಾರದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರ ರೆಡ್ಡಿ ಬಿಜೆಪಿ ಸೇರ್ಪಡೆಗೊಂಡಿದ್ದು, ಈಗ ವರ್ತೂರು ಪ್ರಕಾಶ್ ಅವರ ಜೊತೆಗೂ ಸುಧಾಕರ್ ಹಾಗೂ ಮುನಿರತ್ನ ಮಾತುಕತೆ ನಡೆಸಿದ್ದಾರೆ. ಕೋಲಾರ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕೋಲಾರ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಸಚಿವ ಸುಧಾಕರ್ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ.

  • ಮೇಟಿ ಸಿಡಿ ನೋಡಿದ್ರಾ? ನನ್ನದು ಸೆಕ್ಸ್ ಸಿಡಿ ಇದೆಯಂತೆ, ನಾನು ಗಂಡಸು ತಾನೇ: ಶಾಸಕ ವರ್ತೂರು ಪ್ರಕಾಶ್

    ಮೇಟಿ ಸಿಡಿ ನೋಡಿದ್ರಾ? ನನ್ನದು ಸೆಕ್ಸ್ ಸಿಡಿ ಇದೆಯಂತೆ, ನಾನು ಗಂಡಸು ತಾನೇ: ಶಾಸಕ ವರ್ತೂರು ಪ್ರಕಾಶ್

    ಕೋಲಾರ: ಒಂದಿಲ್ಲೊಂದು ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಕೋಲಾರದ ಪಕ್ಷೇತರ ಶಾಸಕ ಆರ್.ವರ್ತೂರು ಪ್ರಕಾಶ್ ಹೊಸತೊಂದು ಬಾಂಬ್ ಸಿಡಿಸಿದ್ದಾರೆ.

    ನನ್ನದು ಅಶ್ಲೀಲ ಸಿಡಿ ಇದೆಯಂತೆ, ಅದನ್ನ ನನ್ನ ವಿರೋಧಿಗಳು ಬಿಡುಗಡೆ ಮಾಡ್ತೀನಿ ಅಂತಾ ಹೇಳಿತ್ತಿದ್ದಾರಂತೆ, ರಿಲೀಸ್ ಮಾಡಲಿ ಬಿಡಿ ನಾನು ಗಂಡಸೇ ಅಲ್ವಾ ಅಂತಾ ಹೇಳಿದ್ದಾರೆ.

    ಕೋಲಾರದ ಬೈರೇಗೌಡ ನಗರದ ತಮ್ಮ ನಿವಾಸ ಸಮೀಪ ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನ ಕರೆದಿರುವ ಶಾಸಕ ವರ್ತೂರು ಪ್ರಕಾಶ್ ಹೀಗೊಂದು ಗೊಂದಲದ ಹೇಳಿಕೆ ನೀಡಿದ್ದಾರೆ. ನನ್ನ ವಿರೋಧಿಗಳು ಹಾಗೂ ವಿರೋಧ ಪಕ್ಷದವರು ಕ್ಷೇತ್ರದಲ್ಲಿ ಹೀಗೊಂದು ಸುದ್ದಿ ಹರಡಿಸಿದ್ದಾರೆ ಎಂದು ಹೇಳಿದ್ದಾರೆ.

    ರಿಲೀಸ್ ಮಾಡ್ಲಿ ಬಿಡಿ ನಾನು ಗಂಡಸು ಆಲ್ಲವಾ? ಸಿಡಿಯಲ್ಲಿ ಏನಿದೆ ಅಂಥ ನೋಡೋಣ ಎಂದು ಸ್ವತಃ ಸಿಡಿ ಇರುವ ಬಗ್ಗೆ ಹೇಳಿಕೆ ನೀಡಿದರಲ್ಲದೆ, ಸಿಡಿ ಬಿಡುಗಡೆ ಮಾಡಲಿ ನೋಡೋಣ ಎಂದು ಶಾಸಕರು ಸವಾಲು ಎಸೆದಿದ್ದಾರೆ.

    ಅಶ್ಲೀಲ ಸಿಡಿ ಬಿಡುಗಡೆಯಾದ ಶಾಸಕರು ಮತ್ತೊಮ್ಮೆ ಶಾಸಕರಾಗಿದ್ದಾರೆ ಎನ್ನುವ ಮೂಲಕ ಸಿಡಿ ಬಿಡುಗಡೆಯಾದ ಶಾಸಕರ ಪರವಾಗಿ ಬ್ಯಾಟ್ ಬೀಸಿದರು. ಮಾಜಿ ಸಚಿವ ಹೆಚ್.ವೈ.ಮೇಟಿ ಸಿಡಿ ನೋಡಿದ್ದಿರಲ್ಲ, ಸಿಡಿ ಹೊರಗಡೆ ಬಂದ ಮೇಲೆ ಮೇಟಿ ಎಪಿಎಂಸಿ ಗೆದ್ದಕೊಂಡ್ರು ಮತ್ತೆ ಬಾಗಲಕೋಟೆಯಲ್ಲಿ ಎಂಎಲ್‍ಎ ಅಗುತ್ತಾರೆ ಎಂದು ಭವಿಷ್ಯ ನುಡಿದ್ರು.

    ನನ್ನ ವಿರೋಧಿಗಳು ರಾಜಕೀಯವಾಗಿ ನನ್ನನ್ನು ಮುಗಿಸಲು ಹಲವು ಪ್ರಯತ್ನಗಳನ್ನ ಮಾಡುತ್ತಿದ್ದಾರೆ, ನನ್ನ ವಿರುದ್ಧ ಜಾತಿ ನಿಂದನೆ ಸೇರಿದಂತೆ ಲೋಕಾಯುಕ್ತ, ಭೂ-ಕಬಳಿಕೆ ಪ್ರಕರಣಗಳನ್ನ ದಾಖಲಿಸಿದ್ದಾರೆ. ಕ್ಷೇತ್ರದ ಜನರು ತಲೆ ತಗ್ಗಿಸುವಂತಹ ಕೆಲಸವನ್ನು ನಾನು ಮಾಡಿಲ್ಲ ಮತ್ತು ಮುಂದೆಯೂ ಮಾಡೋದಿಲ್ಲ. ಏನೇ ಆದ್ರೂ ಕ್ಷೇತ್ರದ ಜನ ನನ್ನ ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    https://youtu.be/fB20oIuMqSc