Tag: ವರ

  • ವಿವಾಹ ಸಮಾರಂಭದಲ್ಲಿ ವಧು-ವರರ ನಡುವೆ ವಿವಾದ- ವಿಷ ಕುಡಿದು ವರ ಸಾವು, ವಧು ಗಂಭೀರ

    ವಿವಾಹ ಸಮಾರಂಭದಲ್ಲಿ ವಧು-ವರರ ನಡುವೆ ವಿವಾದ- ವಿಷ ಕುಡಿದು ವರ ಸಾವು, ವಧು ಗಂಭೀರ

    ಭೋಪಾಲ್: ವಿವಾಹ (Wedding) ಸಮಾರಂಭದಲ್ಲಿ ವಧು (Bride) ಮತ್ತು ವರನ (Groom) ನಡುವೆ ವಿವಾದ ಏರ್ಪಟ್ಟು ಇಬ್ಬರೂ ವಿಷ (Poison) ಕುಡಿದಿದ್ದು, ವರ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್ (Indore) ನಗರದಲ್ಲಿ ನಡೆದಿದೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಸ್‌ಐ (SI) ರಂಜಾನ್ ಖಾನ್, ಕನಾಡಿ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಮದುವೆ ಸಮಾರಂಭದ ವೇಳೆ ವಧು-ವರನ ನಡುವೆ ಜಗಳ ನಡೆದಿದ್ದು, ವರ ವಿಷ ಕುಡಿದು ಈ ವಿಷಯವನ್ನು ವಧುವಿಗೆ ತಿಳಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಧು ಸಹ ವಿಷ ಕುಡಿದಿದ್ದಾಳೆ ಎಂದರು. ಇದನ್ನೂ ಓದಿ: ಪ್ರೇಯಸಿ ಮೇಲೆ ಅತ್ಯಾಚಾರ, ಖಾಸಗಿ ಅಂಗಕ್ಕೆ ಕಾರದಪುಡಿ ಹಾಕಿ ವಿಕೃತಿ – ಆರೋಪಿ ಅರೆಸ್ಟ್

    ವಿಷ ಕುಡಿದ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ, ವರ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ. ವಧು ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ – ಪಿಎಫ್‍ಐ ಸದಸ್ಯ ಅರೆಸ್ಟ್

    ವರನ ಕುಟುಂಬಸ್ಥರು ಹೇಳಿದ ಪ್ರಕಾರ, ವಧು ವರನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ತನ್ನ ಜೀವನ ವೃತ್ತಿಯಿಂದಾಗಿ ವರ ಎರಡು ವರ್ಷಗಳ ಕಾಲಾವಕಾಶವನ್ನು ಕೇಳಿದ್ದ. ಆದರೆ ವಧು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದಿದ್ದಾರೆ. ಇದನ್ನೂ ಓದಿ: ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ

    ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ – ಬೆಂಗ್ಳೂರಲ್ಲಿ ಇಳಿಯುತ್ತಿದ್ದಂತೆ ಪೊಲೀಸರಿಗೆ ಲಾಕ್‌

  • ಡಿಜೆ, ರೋಡ್‍ಲೈಟ್ ಇಲ್ಲದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವರ

    ಡಿಜೆ, ರೋಡ್‍ಲೈಟ್ ಇಲ್ಲದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವರ

    ಲಕ್ನೋ: ಡಿಜೆ ಹಾಗೂ ರಸ್ತೆ ಲೈಟ್ ವಿಚಾರದಲ್ಲಿ ವಧುವಿನ ಕುಟುಂಬದವರೊಂದಿಗೆ ವಾದ, ವಿವಾದ ನಡೆದ ಹಿನ್ನೆಲೆಯಲ್ಲಿ ವರನೊಬ್ಬ (Groom) ಮದುವೆಯನ್ನು (Wedding) ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಅಲಹಾಬಾದ್‍ನ ಬರಹುಲಾ ಗ್ರಾಮದಲ್ಲಿ ವರದಿಯಾಗಿದೆ.

    ಮಿಜಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಲಿಯಾ ಮೂಲದ ವರನಿಗೆ ಬರಹುಲಾದ ವಧುವನ್ನು ಮದುವೆಯಾಗಲು ನಿಶ್ಚಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವರನ ಕಡೆಯವರು ಬರಹುಲಾದ ವಧುವಿನ ಮನೆಗೆ ಮೆರವಣಿಗೆಯ ಮೂಲಕ ಬರುತ್ತಿದ್ದರು. ಆದರೆ ಈ ವೇಳೆ ಆರ್ಕೆಸ್ಟ್ರಾ ಕಲಾವಿದರು ತಡವಾಗಿ ಬಂದಿದ್ದಾರೆ. ಜೊತೆಗೆ ರಸ್ತೆ ದೀಪವು (Road Light) ಇರಲಿಲ್ಲ. ಇದರಿಂದಾಗಿ ವರ ಹಾಗೂ ವಧುವಿನ ಕಡೆಯವರ ನಡುವೆ ವಾಗ್ವಾದ ನಡೆದಿದೆ.

    ಈ ವೇಳೆ ವರ ಮದುವೆಯನ್ನು ರದ್ದು ಪಡಿಸಿದ್ದಾನೆ. ಆದರೆ ಅಲ್ಲಿದ್ದ ಗ್ರಾಮಸ್ಥರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅಷ್ಟರಾಗಲೇ ವರ ಹೊರಟು ಹೋಗಿದ್ದ. ಇದರಿಂದಾಗಿ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ನನ್ನ ಜೊತೆಗೇ ಇದ್ದು ಬೆನ್ನಿಗೆ ಚೂರಿ ಹಾಕಿದ್ರು: ಪರಾಜಿತ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಸ್ವ ಪಕ್ಷದ ವಿರುದ್ಧ ಕಿಡಿ

    ಅಷ್ಟೇ ಅಲ್ಲದೇ ವರನಿಗೆ ವರದಕ್ಷಿಣೆ ಹಾಗೂ ಬೈಕ್ ನೀಡಲು ಜಮೀನನ್ನು ಅಡವಿಟ್ಟಿರುವುದಾಗಿ ವಧುವಿನ ಸಹೋದರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ವರನ ತಂದೆಯನ್ನು ಕರೆಸಿದ್ದಾರೆ. ಈ ವೇಳೆ ವರನ ತಂದೆ ಕೂಡ ಪೊಲೀಸ್ ಠಾಣೆಗೆ ಬಂದು ತನ್ನ ಮಗ ವಧುವನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

  • ಧರ್ಮಸ್ಥಳದಲ್ಲಿ ಮದುವೆಯಾಗಿ ಹಾಸನಕ್ಕೆ ಬಂದು ಮತ ಚಲಾಯಿಸಿದ ವರ

    ಧರ್ಮಸ್ಥಳದಲ್ಲಿ ಮದುವೆಯಾಗಿ ಹಾಸನಕ್ಕೆ ಬಂದು ಮತ ಚಲಾಯಿಸಿದ ವರ

    ಹಾಸನ: ವಿಧಾನಸಭಾ ಚುನಾವಣೆ (Assembly Election) ದಿನವೇ ತನ್ನ ಮದುವೆಯಿದ್ದರೂ ವರನೊಬ್ಬ (Groom) ಮದುವೆ ಮುಗಿಸಿಕೊಂಡು ಬಂದು ಮತ ಚಲಾಯಿಸಿ (Vote) ಮತಾಭಿಮಾನ ಮೆರೆದಿರುವ ಘಟನೆ ಹಾಸನ (Hassana) ಜಿಲ್ಲೆಯಲ್ಲಿ ನಡೆದಿದೆ.

    ನವ ವಿವಾಹಿತ ರೋಹಿತ್ ಧರ್ಮಸ್ಥಳದಲ್ಲಿ ವಿವಾಹವಾಗಿ, ಬಳಿಕ ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ ಮತಗಟ್ಟೆ 85ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಮಳೆ – ತುಂತುರು ಮಳೆಯಲ್ಲೇ ಮತಗಟ್ಟೆಗೆ ಬಂದ ಮತದಾರ

    ರೋಹಿತ್ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ. ಬುಧವಾರ ನಂದಿನಿ ಜೊತೆ ವಿವಾಹವಾದ ರೋಹಿತ್ ತಕ್ಷಣವೇ ಸಕಲೇಶಪುರಕ್ಕೆ ವಾಪಸಾಗಿ ಮತ ಚಲಾಯಿಸಿದ್ದಾರೆ. ನವವಿವಾಹಿತನ ಮತಾಭಿಮಾನಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

  • ತಾಳಿ ಕಟ್ಟಿ ನೇರವಾಗಿ ಮದುವೆ ಡ್ರೆಸ್‌ನಲ್ಲೇ ಮತಗಟ್ಟೆಗೆ ಬಂದು ಮತದಾನ ಮಾಡಿದ ವರ

    ತಾಳಿ ಕಟ್ಟಿ ನೇರವಾಗಿ ಮದುವೆ ಡ್ರೆಸ್‌ನಲ್ಲೇ ಮತಗಟ್ಟೆಗೆ ಬಂದು ಮತದಾನ ಮಾಡಿದ ವರ

    ಬೀದರ್ : ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಆರೋಪದ ಮಧ್ಯೆ ತಾಳಿ ಕಟ್ಟಿ ನೇರವಾಗಿ ಮದುವೆ ಡ್ರೆಸ್‌ನಲ್ಲೇ ವರ ಮತದಾನ ಕೇಂದ್ರಕ್ಕೆ ಬಂದು ತನ್ನ ಮತದಾನದ (Vote) ಹಕ್ಕು ಚಲಾಯಿಸಿದ್ದಾರೆ.

    ವರ ಕಾರ್ತಿಕ್‌ ಪಾಟೇಲ್‌ ಮತದಾನ ಮಾಡಿದ ವ್ಯಕ್ತಿ. ಬೀದರ್‌ನ (Bidar) ಓಲ್ಡ್ ನಾವದಗಿಯಲ್ಲಿರುವ ತಮ್ಮ ಮನೆಯಲ್ಲೇ ಮದುವೆಯಿತ್ತು. ಈ ವೇಳೆ ಕಾರ್ತಿಕ್‌ ವಧುವಿಗೆ ತಾಳಿ ಕಟ್ಟಿ ಬಳಿಕ ಕುಟುಂಬ ಸಮೇತರಾಗಿ ನೇರವಾಗಿ ಮತಗಟ್ಟೆಗೆ ಬಂದಿದ್ದಾರೆ. ನಂತರ ಮತದಾನ ಮಾಡಿದರು. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ಈ ವೇಳೆ ಮಾತನಾಡಿದ ಕಾರ್ತಿಕ್‌ ಪಾಟೀಲ್‌ ಅವರು, ಇದು ಪ್ರಜಾಪ್ರಭುತ್ವದ ಹಬ್ಬ. ಹೀಗಾಗಿ ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ನಾನು ಕೂಡಾ ತಾಳಿ ಕಟ್ಟಿ ನೇರವಾಗಿ ಮತಗಟ್ಟೆ ಬಂದು ಮತದಾನ ಮಾಡಿದ್ದು ನಾವು ಅಭಿವೃದ್ಧಿಗಾಗಿ ಮತದಾನ ಮಾಡೋಣ ಎಂದು ವರ ಸಮಾಜಕ್ಕೆ ಮತದಾನ ಮಹತ್ವದ‌ ಸಂದೇಶ ನೀಡಿದರು. ಇದನ್ನೂ ಓದಿ: ಚುನಾವಣಾ ಕರ್ತವ್ಯದಿಂದ ಎಸ್ಕೇಪ್ ಆಗಲು ನಕಲಿ ಕೋವಿಡ್ ರಿಪೋರ್ಟ್ – ಶಿಕ್ಷಕಿ ವಿರುದ್ಧ ಎಫ್‌ಐಆರ್

  • ಮೋಸ ಮಾಡಿದ್ದಕ್ಕೆ ಮದ್ವೆ ಮಂಟಪಕ್ಕೆ ಬಂದು ವರನಿಗೆ ಆ್ಯಸಿಡ್‌ ಎರಚಿದ ಮಾಜಿ ಗೆಳತಿ

    ಮೋಸ ಮಾಡಿದ್ದಕ್ಕೆ ಮದ್ವೆ ಮಂಟಪಕ್ಕೆ ಬಂದು ವರನಿಗೆ ಆ್ಯಸಿಡ್‌ ಎರಚಿದ ಮಾಜಿ ಗೆಳತಿ

    ರಾಂಚಿ: ತನಗೆ ಪ್ರಾಮಿಸ್‌ ಮಾಡಿ ಬೇರೆ ಯುವತಿಯೊಡನೆ ಮದುವೆಯಾಗುತ್ತಿರುವುದನ್ನು ಕಂಡು 23ರ ಯುವತಿಯೊಬ್ಬಳು (Woman) ತನ್ನ ಮಾಜಿ ಪ್ರಿಯಕರನಿಗೆ ಮದುವೆ ಮಂಟಪದಲ್ಲೇ ಆ್ಯಸಿಡ್‌ (Acid) ಎರಚಿ, ಹಲ್ಲೆ ಮಾಡಿರುವ ಘಟನೆ ಛತ್ತಿಸ್‌ಗಢದ‌ಲ್ಲಿ (Chhattisgarh) ನಡೆದಿದೆ.

    ಛತ್ತೀಸ್‌ಗಢದ ಛೋಟೆ ಅಮಾಬಲ್ ಗ್ರಾಮದಲ್ಲಿ ವಿವಾಹ ನಡೆಯುತ್ತಿದ್ದ ವೇಳೆ ಆ್ಯಸಿಡ್ ದಾಳಿ ನಡೆದಿದೆ. ದಾಳಿಯಲ್ಲಿ ವರ, ವಧು ಸೇರಿದಂತೆ 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ದೃಶ್ಯಾವಳಿಯನ್ನು ಆಧಾರಿಸಿ ಬಸ್ತಾರ್‌ ಠಾಣಾ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ.

    ಏನಿದು ಹಳೆಯ ಪ್ರೇಮಕತೆ?: 23ರ ಯುವತಿಯೊಂದಿಗೆ ಕಳೆದ ಹಲವು ವರ್ಷಗಳಿಂದ ದಮೃತ್‌ ಬಘೇಲ್‌ ಎಂಬಾತ ಸಂಬಂಧವನ್ನು ಹೊಂದಿದ್ದ. ಯುವತಿಯನ್ನು ಮದುವೆಯಾಗುವುದಾಗಿಯೂ ನಂಬಿಸಿ, ಮಾತು ಕೊಟ್ಟಿದ್ದ. ಆದ್ರೆ ಆಕೆಯನ್ನ ನಿರಾಕರಿಸಿ ಬೇರೊಬ್ಬಳು ಯುವತಿಯೊಂದಿಗೆ ಮದುವೆಯಾಗಲು ಮುಂದಾಗಿದ್ದ. ಅವನ ಮದುವೆ ವಿಚಾರ ತಿಳಿದ ಮಾಜಿ ಪ್ರಿಯತಮೆ ಹಲವು ಬಾರಿ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಈ ನಡುವೆ ಕ್ರೈಂ ಸೀರಿಯಲ್‌ ನೋಡುತ್ತಿದ್ದ ಯುವತಿ ತನ್ನ ಮಾಜಿ ಪ್ರಿಯಕರನ ಮೇಲೆ ಆ್ಯಸಿಡ್‌ ದಾಳಿ ಮಾಡಲು ಪ್ಲ್ಯಾನ್‌ ಮಾಡಿದ್ದಾಳೆ.

    ಕೊನೆಗೆ ಸೇಡು ತೀರಿಸಿಕೊಳ್ಳಲು ಯೋಚಿಸಿ, ತಾನು ಕೆಲಸ ಮಾಡುತ್ತಿದ್ದ ಮೆಣಸಿನಕಾಯಿ ಫಾರ್ಮ್‌ನಿಂದ ಆ್ಯಸಿಡ್ ಕದ್ದಿದ್ದಾಳೆ. ಅದಾದ ಬಳಿಕ ಮದುವೆ ಸಮಾರಂಭಕ್ಕೆ ಬಂದಿದ್ದ ಆಕೆ, ಮಾಜಿ ಪ್ರಿಯಕರನ ಮುಖಕ್ಕೆ ಆ್ಯಸಿಡ್ ಎರೆಚಿದ್ದಾಳೆ. ಘಟನೆಯ ಬಳಿಕ ಆಕೆ ಅಲ್ಲಿಂದ ಪರಾರಿಯಾಗಿದ್ದಾಳೆ. ಅಷ್ಟೇ ಅಲ್ಲದೇ ತನ್ನ ಗುರುತು ಯಾರಿಗೂ ತಿಳಿಯಬಾರದೆಂದು ಯುವಕನ ವೇಷದಲ್ಲಿ ಬಂದಿದ್ದಳು.

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯ ನಂತರ ಪ್ಯಾಂಟ್ ಮತ್ತು ಸೂಟ್ ಧರಿಸಿದ್ದ ವ್ಯಕ್ತಿ ಓಡಿಹೋದ ಬಗ್ಗೆ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದರು. ಘಟನೆ ತಡರಾತ್ರಿ ಸಂಭವಿಸಿದ್ದರಿಂದ ಜನರು ಆರೋಪಿಗಳನ್ನು ನೋಡಲಾಗಲಿಲ್ಲ ಮತ್ತು ಆ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ್ರೆ ನಂದಿನಿ ಸಂಸ್ಥೆ ಗಟ್ಟಿಯಾಗುತ್ತೆ: ಪ್ರಿಯಾಂಕಾ ಗಾಂಧಿ

    ಸ್ಥಳೀಯರ ಮಾಹಿತಿ ಹಾಗೂ ಸಿಸಿ ಕ್ಯಾಮಾರಾದ ಜಾಡು ಹಿಡಿದು ತನಿಖೆ ನಡೆಸಿದ್ದ ಪೊಲೀಸರಿಗೆ ವರನ ಮಾಜಿ ಗೆಳತಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ವೇಳೆ ಅಸಲಿ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಾಲಕಿಯ ಪಲ್ಲವಗಳ ಪಲ್ಲವಿಯಲ್ಲಿ ಹಾಡನ್ನು ಕೊಂಡಾಡಿದ ಮೋದಿ

  • ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಪ್ರಿಯತಮ!

    ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಪ್ರಿಯತಮ!

    ತಿರುವನಂತಪುರಂ: ವರ (Groom) ನಿಗೆ ವಧು (Bride) ವಿನ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ವಿಜಿನ್ (22) ಎಂದು ಗುರುತಿಸಲಾಗಿದೆ. ಕಡುಕ್ಕಮೂಡುವಿನ ವೆಲ್ಲನಾಡು ನಿವಾಸಿಯಾಗಿರುವ ಈತ ಇದೀಗ ಕೇರಳ ಪೊಲೀಸ (Kerala Police) ರ ಬಂಧನದಲ್ಲಿದ್ದಾನೆ.

    ವಿಜಿನ್ ಹಾಗೂ ವಧು ಸುಮಾರು 4 ವರ್ಷಗಳ ಕಾಲ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತ ಹುಡುಗಿಯ ಕುಟುಂಬಸ್ಥರು ಆಕೆಗೆ ಬೇರೊಬ್ಬನ ಜೊತೆ ಮದುವೆ ಫಿಕ್ಸ್ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಪ್ರಿಯತಮ ವಿಜಿನ್, ಆಕೆಯ ಜೊತೆಗಿದ್ದ ಅಶ್ಲೀಲ ಫೋಟೋಗಳನ್ನು ವಾಟ್ಸಾಪ್ ಮೂಲಕ ವರನಿಗೆ ಕಳುಹಿಸಿದ್ದಾನೆ.

    ಇಷ್ಟು ಮಾತ್ರವಲ್ಲದೆ ವರನ ಮನೆಗೆ ತೆರಳಿ ಆತನ ಪೋಷಕರಿಗೆ ಕೂಡ ತೋರಿಸಿದ್ದಾನೆ. ವಧುವಿನ ಫೋಟೋ (Bride Photos) ಗಳನ್ನು ನೋಡಿದ ವರನ ಕಡೆಯವರು ಅಂದೇ ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

    ಇತ್ತ ಪ್ರಕರಣ ಸಂಬಂಧ ವಿಜಿನ್ ನನ್ನು ಬಂಧಿಸಿ, ಆತನ ಮೇಲೆ ಕೆಸ್ ದಾಖಲಿಸಲಾಗಿದೆ. ಮದುವೆ ತಪ್ಪಿಸಲೆಂದೇ ಈ ಕೃತ್ಯ ಎಸಗಿರುವುದಾಗಿ ವಿಜಿನ್ ಪೊಲೀಸರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

  • ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವಧುವಿಗೆ ಬಂತು ಕುತ್ತು- ಪೊಲೀಸರಿಂದ ಹುಡುಕಾಟ

    ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವಧುವಿಗೆ ಬಂತು ಕುತ್ತು- ಪೊಲೀಸರಿಂದ ಹುಡುಕಾಟ

    ಲಕ್ನೋ: ಮದುವೆಯ ಸಂಭ್ರಮದಲ್ಲಿದ್ದ ವಧುವೊಬ್ಬಳು (Bride) ವೇದಿಕೆಯ ಮೇಲೆ ರಿವಾಲ್ವರ್‌ನಿಂದ 4 ಬಾರಿ ಗುಂಡು ಹಾರಿಸಿದ್ದಾಳೆ. ಇದೀಗ ಈ ಸಂಭ್ರಮವೇ ಆಕೆಯ ಪಾಲಿಗೆ ಕುತ್ತು ತಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಗಾಗಿ ಹುಡುಕಾಟ ನಡೆಸುತ್ತಿರುವ ಘಟನೆ ನಡೆದಿದೆ.

    ಉತ್ತರ ಪ್ರದೇಶದ (Uttar Pradesh) ಹತ್ರಾಸ್ (Hathras) ಜಂಕ್ಷನ್ ಪ್ರದೇಶದ ಸೇಲಂಪುರ ಗ್ರಾಮದಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಈ ವೇಳೆ ವಧು, ವರ (Groom) ಪರಸ್ಪರ ಹಾರ ಹಾಕಿಕೊಂಡು ಸಂಬಂಧಿಕರಿಂದ ಆಶೀರ್ವಾದ ಪಡೆದಿದ್ದಾರೆ. ಅದಾದ ಬಳಿಕ ಅವರಿಬ್ಬರು ಫೋಟೋಗೆ ಪೋಸ್ ನೀಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬ ವಧುವಿಗೆ ರಿವಾಲ್ವರ್ ಅನ್ನು ನೀಡಿದ್ದಾನೆ. ಆ ರಿವಾಲ್ವರನ್ನು ತೆಗೆದುಕೊಂಡ ವಧು 5 ಸೆಕೆಂಡುಗಳಲ್ಲಿ ನಾಲ್ಕು ಗುಂಡು ಹಾರಿಸಿ ಸಂಭ್ರಮಿಸಿದ್ದಾಳೆ. ಈ ವೀಡಿಯೋವನ್ನು ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?: ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ವೇದಿಕೆಯ ಮೇಲೆ ಹತ್ತಿ ವಧುವಿನ ಬಳಿ ನಿಂತಿದ್ದಾನೆ. ಸ್ವಲ್ಪ ಸಮಯದ ನಂತರ ಆತ ತನ್ನ ಬಳಿಯಿದ್ದ ಲೋಡ್ ಮಾಡಿದ ರಿವಾಲ್ವರ್ (Revolver) ಹೊರತೆಗೆದು ವಧುವಿನ ಕೈಗೆ ಕೊಟ್ಟಿದ್ದಾನೆ. ನಂತರ ವರನ ಜೊತೆಗೆ ವೇದಿಕೆಯ ಮೇಲೆ ಕುಳಿತಿದ್ದ ವಧು ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸುತ್ತಾಳೆ. ಈ ವೇಳೆ ಗನ್‍ನಿಂದ ನಿರಂತರವಾಗಿ 4 ಬಾರಿ ಗುಂಡನ್ನು ಹಾರಿಸುತ್ತಾಳೆ. ಇದಾದ ಬಳಿಕ ವಧು ಆ ವ್ಯಕ್ತಿಗೆ ಗನ್‍ನನ್ನು ವಾಪಸ್ ನೀಡುತ್ತಾಳೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ

    ವೀಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಪ್ರಕರಣ ದಾಖಲಾಗುತ್ತಿದ್ದಂತೆ ವಧು ನಾಪತ್ತೆ ಆಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಎಎಸ್‍ಪಿ ಮಾತನಾಡಿ, ವೀಡಿಯೋ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ವಧುವಿನ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಗುವುದು. ರಿವಾಲ್ವರ್ ಹಿಡಿದಿದ್ದ ವ್ಯಕ್ತಿಯನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರೀ ಟೀಕೆಯ ಬಳಿಕ ಬಾಲಕನ ಬಳಿ ಕ್ಷಮೆ ಕೇಳಿದ ದಲೈ ಲಾಮಾ

  • 10 ರೂ.ನ 30 ನೋಟು ಎಣಿಸಲು ಸಾಧ್ಯವಾಗದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು

    10 ರೂ.ನ 30 ನೋಟು ಎಣಿಸಲು ಸಾಧ್ಯವಾಗದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು

    ಲಕ್ನೋ: ಹಣ ಎಣಿಸಲು ವರನಿಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ವಧು ಮದುವೆಯನ್ನೇ ಕ್ಯಾನ್ಸಲ್ (Marriage Cancel) ಮಾಡಿದ ಘಟನೆ ಉತ್ತರಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ತಾಳಿ ಕಟ್ಟುವ ಶಾಸ್ತ್ರದ ವೇಳೆ ವರನ ವರ್ತನೆಯಿಂದ ಅರ್ಚಕರಿಗೆ ಸಂಶಯ ಬಂದಿದೆ. ಅಲ್ಲದೆ ಅರ್ಚಕ ಈ ವಿಚಾರವನ್ನು ವಧುವಿನ ಮನೆಯವರಿಗೆ ತಿಳಿಸಿದ್ದಾರೆ. ಇದನ್ನು ಅರಿತ ವಧು ಧೈರ್ಯದಿಂದ ಹೆಜ್ಜೆ ಇಟ್ಟಿದ್ದಾಳೆ.

    ವಧುವಿನ ಮನೆಯವರು ವರನಿಗೆ ಪರೀಕ್ಷೆಯೊಂದನ್ನು ನೀಡುವುದಾಗಿ ಹೇಳಿತ್ತು. ಇದಕ್ಕೆ ವರನ ಕಡೆಯವರು ಒಪ್ಪಿಕೊಂಡರು. ಅಂತೆಯೇ ವಧುವಿನ ಮನೆಯವರು ವರನಿಗೆ 10 ರೂ.ವಿನ 30 ನೋಟುಗಳನ್ನು ಎಣಿಸುವಂತೆ ಕೊಟ್ಟಿದ್ದಾರೆ. ಈ ವೇಳೆ ವರಣಿಗೆ ಹಣ ಎಣಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ವರ ಮಾನಸಿಕ ಅಸ್ವಸ್ಥ ಎಂಬುದು ಬಯಲಾಯಿತು.

    ವರ ಮಾನಸಿಕ ಅಸ್ವಸ್ಥ ಎಂಬುದನ್ನು ವಧುವಿನ ಕಡೆಯವರಿಗೆ ಹೇಳದೆ ಮುಚ್ಚಿಟ್ಟಿದ್ದರು. ಹೀಗಾಗಿ ಕೋಪಗೊಂಡ ವಧು ತಕ್ಷಣವೇ ವೇದಿಕೆಯಿಂದ ಹೊರನಡೆದಿದ್ದಾಳೆ. ಇದು ಎರಡು ಕುಟುಂಬಗಳ ನಡುವೆ ಗೊಂದಲಕ್ಕೆ ಕಾರಣವಾಯಿತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಸ್ಥಳೀಯ ಪೊಲೀಸರನ್ನು ಕರೆಸಲಾಯಿತು. ಇದನ್ನೂ ಓದಿ: ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಸೂಸೈಡ್

    ವರನ ಕುಟುಂಬವು ಅವನ ಮಾನಸಿಕ ಅಸ್ವಸ್ಥತೆಯನ್ನು ಮರೆಮಾಚಿದೆ ಎಂದು ವಧುವಿನ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ ವಧು ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಹೀಗಾಗಿ ಮದುವೆಯನ್ನೇ ಕ್ಯಾನ್ಸಲ್ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ವರ ಮತ್ತು ಅವರ ಕುಟುಂಬ ಬರಿಗೈಯಲ್ಲಿ ಮರಳಬೇಕಾಯಿತು.

    ಈ ಸಂಬಂಧ ವಧುವಿನ ಸಹೋದರ ಮಾಧ್ಯಮದವರೊಂದಿಗೆ ಮಾತನಾಡಿ, ಸಾಮಾನ್ಯವಾಗಿ ಮದುವೆಗಳು ಉತ್ತಮ ನಂಬಿಕೆಯಲ್ಲಿ ನಡೆಯುತ್ತವೆ. ಅಲ್ಲದೆ ಈ ಯುವಕ ಬ್ರೋಕರ್ ನ ಹತ್ತಿರದ ಸಂಬಂಧಿಯಾಗಿದ್ದರು. ಹಾಗಾಗಿ ಆತನನ್ನು ನಂಬಿ ನಾವು ಭೇಟಿಯಾಗಿರಲಿಲ್ಲ. ಆದರೆ ಮದುವೆ ದಿನ ಅರ್ಚಕರು, ವರನ ವಿಚಿತ್ರ ವರ್ತನೆಯ ಬಗ್ಗೆ ನಮಗೆ ತಿಳಿಸಿದಾಗ ವಿಚಾರ ಬೆಳಕಿಗೆ ಬಂತು. ಹೀಗಾಗಿ ನನ್ನ ಸಹೋದರಿ ಕೂಡ ಅವನನ್ನು ಮದುವೆಯಾಗಲು ನಿರಾಕರಿಸಿದಳು ಎಂದು ತಿಳಿಸಿದರು.

  • ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ

    ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ

    ಭುವನೇಶ್ವರ: ಚಾಲಕರ ಮುಷ್ಕರದ (Driver Strike) ಹಿನ್ನೆಲೆ ವಾಹನದ ವ್ಯವಸ್ಥೆ ಮಾಡಲಾಗದೇ ಮದುವೆ ದಿಬ್ಬಣವೊಂದು ರಾತ್ರಿಯಿಡೀ ಬರೋಬ್ಬರಿ 28 ಕಿ.ಮೀ ನಡೆದುಕೊಂಡೇ ಹೋಗಿ ವಧು (Bride) ಮನೆ ಸೇರಿರುವ ಘಟನೆ ಒಡಿಶಾದ (Odisha) ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ, ಕಲ್ಯಾಣಸಿಂಗ್‌ಪುರ ಬ್ಲಾಕ್‌ನ ಸುನಖಂಡಿ ಪಂಚಾಯಿತಿಯಿಂದ ವರ ಸೇರಿದಂತೆ ಇಡೀ ಮದುವೆ ದಿಬ್ಬಣ ಗುರುವಾರ ರಾತ್ರಿಯಿಡೀ ನಡೆದುಕೊಂಡೇ ಹೋಗಿ ದಿನಳಪಾಡು ಗ್ರಾಮಕ್ಕೆ ತಲುಪಿದೆ. ಇದಾದ ಬಳಿಕ ಶುಕ್ರವಾರ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

     

    ವರ (Groom), ಕೆಲ ಮಹಿಳೆಯರು ಹಾಗೂ ಅವರ ಕುಟುಂಬದ ಸದಸ್ಯರು ರಾತ್ರಿಯಿಡೀ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಚಾಲಕರ ಮುಷ್ಕರದಿಂದಾಗಿ ಬೇರೆ ಯಾವುದೇ ಸಾರಿಗೆ ಲಭ್ಯವಿಲ್ಲದ ಕಾರಣ ರಾತ್ರಿಯಿಡೀ ನಡೆದುಕೊಂಡು ಹೋಗಿ ವಧು ಮನೆಯನ್ನು ಸೇರಿದ್ದೇವೆ. ನಮಗೆ 28 ಕಿ.ಮೀ ನಡೆದುಕೊಂಡು ಹೋಗುವುದರ ಹೊರತು ಬೇರೆ ಯಾವುದೇ ದಾರಿಯಿರಲಿಲ್ಲ ಎಂದು ವರನ ಕುಟುಂಬದವರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ

    ವಿಮೆ, ಪಿಂಚಣಿ, ಕಲ್ಯಾಣ ಮಂಡಳಿ ರಚನೆ ಹಾಗೂ ಇತರ ಸಮಾಜ ಕಲ್ಯಾಣ ಕ್ರಮಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘ ಬುಧವಾರದಿಂದ ಒಡಿಶಾ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ. ವಾಣಿಜ್ಯ ವಾಹನ ಚಾಲಕರು ನಡೆಸುತ್ತಿದ್ದ ಮುಷ್ಕರಕ್ಕೆ ರಾಜ್ಯ ಸರ್ಕಾರ ಅವರ ಎಲ್ಲಾ ಬೇಡಿಕೆಗಳನ್ನು 90 ದಿನಗಳ ಒಳಗಾಗಿ ಈಡೇರಿಸುವುದಾಗಿ ಭರವಸೆ ನೀಡಿದೆ. ಈ ಬಳಿಕ ಮುಷ್ಕರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: `ಕೈ’ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ತವಾ ವಿತರಣೆ- ಉಡುಗೊರೆ ಸಿಗದ ಮಹಿಳೆಯರು ಗರಂ

  • ಕಂಠಪೂರ್ತಿ ಕುಡಿದು ತನ್ನ ಮದುವೆಗೆ ಹೋಗುವುದನ್ನೇ ಮರೆತ ವರ – ನೀನು ಬೇಡ ಎಂದ ವಧು

    ಕಂಠಪೂರ್ತಿ ಕುಡಿದು ತನ್ನ ಮದುವೆಗೆ ಹೋಗುವುದನ್ನೇ ಮರೆತ ವರ – ನೀನು ಬೇಡ ಎಂದ ವಧು

    ಪಾಟ್ನಾ: ಬಿಹಾರದ (Bihar) ವರನೊಬ್ಬ (Groom) ಕಂಠಪೂರ್ತಿ ಕುಡಿದು ಮರುದಿನ ಮದುವೆಗೆ (Wedding) ಹಾಜರಾಗಲು ಮರೆತಿರುವ ವಿಲಕ್ಷಣ ಘಟನೆ ನಡೆದಿದೆ.

    ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಹಿಂದಿನ ರಾತ್ರಿ ಖುಷಿಯಲ್ಲಿ ವರ ಮದ್ಯ ಸೇವಿಸಿದ್ದ. ಆದರೆ ಮರುದಿನ ಮದ್ಯದ ಅಮಲಿನಲ್ಲಿ ತನ್ನ ಮದುವೆಯಿದೆ ಎಂಬುದನ್ನ ಮರೆತು ಮದುವೆಗೆ ಗೈರಾಗಿದ್ದಾನೆ.

    ಮದುವೆ ಸ್ಥಳದಲ್ಲಿ ವಧು ಮತ್ತು ಆಕೆಯ ಕುಟುಂಬದವರು ವರನಿಗಾಗಿ ಕಾಯುತ್ತಿದ್ದರೂ ಆತ ಬಂದಿರಲಿಲ್ಲ. ಅದಾದ ಒಂದು ದಿನದ ನಂತರ ವರನಿಗೆ ಪ್ರಜ್ಞೆ ಬಂದು ವಧುವಿನ ಮನೆಗೆ ಬಂದಿದ್ದಾನೆ. ಈ ವೇಳೆ ವಧು ನನಗೆ ನೀನು ಬೇಡ ಎಂದು ಮದುವೆಯಾಗಲು ನಿರಾಕರಿಸಿದ್ದಾಳೆ. ಇದನ್ನೂ ಓದಿ: ಅಜ್ಜನಿಂದ ಮೊಮ್ಮಗಳ ಮೇಲೆ ರೇಪ್ – ಯಾರಿಗೂ ಹೇಳ್ಬೇಡ ಎಂದು 10 ರೂ. ಕೊಟ್ಟ

    ಅಷ್ಟೇ ಅಲ್ಲದೇ ತನ್ನ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳದ ವ್ಯಕ್ತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾಳೆ. ವಧುವಿನ ಮನೆಯವರು ಕೂಡ ವರನ ಕುಟುಂಬಕ್ಕೆ ಮದುವೆಯ ವ್ಯವಸ್ಥೆಗೆ ಖರ್ಚು ಮಾಡಿದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.

    ಈ ವೇಳೆ ವಧುವಿನ ಸಂಬಂಧಿಕರು ವರನ ಕಡೆಯವರನ್ನು ಒತ್ತೆಯಾಳಾಗಿ ಇರಿಸಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಇತ್ಯರ್ಥಗೊಳಿಸಿದರು. ಇದನ್ನೂ ಓದಿ: ಟ್ರ್ಯಾಕ್ಟರ್, ಬರೋಬ್ಬರಿ 3 ಕೋಟಿ ಹಣವನ್ನೇ ಗಿಫ್ಟ್ ಪಡೆದ ವಧು!