Tag: ವರ

  • ಸ್ನೇಹಿತರಿಗೆ ಚಿಕನ್ ನೀಡದ್ದಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ

    ಸ್ನೇಹಿತರಿಗೆ ಚಿಕನ್ ನೀಡದ್ದಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ

    ಹೈದರಾಬಾದ್: ವಧುವಿನ (Bride) ಮನೆಯವರು ಸ್ನೇಹಿತರಿಗೆ ಊಟಕ್ಕೆ ಚಿಕನ್ (Chicken) ನೀಡದ್ದಕ್ಕೆ ವರನೊಬ್ಬ (Groom) ಮದುವೆಯನ್ನೇ (Marriage) ರದ್ದುಗೊಳಿಸಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

    ಹೈದರಾಬಾದ್‍ನ ಜೀಡಿಮೆಟ್ಲಾ ಉಪ ಪ್ರದೇಶವಾದ ಶಹಪುರ್‌ ನಗರದಲ್ಲಿ ಈ ಘಟನೆ ನಡೆದಿದೆ. ತೆಲಂಗಾಣಕ್ಕೆ ಸೇರಿದ ವರನಿಗೆ ಬಿಹಾರ ಮೂಲದ ವಧುವಿನ ಜೊತೆ ಮದುವೆ ನಿಶ್ಚಯವಾಗಿತ್ತು. ವರನ ಕಡೆಯವರು ಮದುವೆಯ ಅಡುಗೆ ಜವಾಬ್ದಾರಿಯನ್ನು ವಧುವಿನ ಕಡೆಯವರಿಗೆ ವಹಿಸಿದ್ದರು. ಆದರೆ ವಧುವಿನ ಮನೆಯವರು ಮನೆ ಕಟ್ಟುನಿಟ್ಟಾದ ಸಸ್ಯಹಾರಿಗಳಾಗಿದ್ದರು.

    ವಿವಾಹಕ್ಕೂ ಮೊದಲು ರಿಸೆಪ್ಶನ್ ಪಾರ್ಟಿ ಏರ್ಪಡಿಸಿದ್ದರು. ಈ ವೇಳೆ ವಧುವಿನ ಕಡೆಯವರು ಸಸ್ಯಹಾರಿಗಳಾಗಿದ್ದರಿಂದ ಅವರು ಊಟಕ್ಕೆ ವಿಶೇಷವಾಗಿ ಸಸ್ಯಹಾರಿಯ ತಿಂಡಿಗಳನ್ನೆ ಮಾಡಿದ್ದರು. ಯಾವುದೇ ಬಗೆಯ ನಾನ್‍ವೆಜ್ ತಿಂಡಿಗಳನ್ನು ಮಾಡಿರಲಿಲ್ಲ.

    ರಿಸೆಪ್ಶನ್ ಮುಗಿಯುತ್ತಿದ್ದಂತೆ ವರನ ಸ್ನೇಹಿತರು ಊಟಕ್ಕೆಂದು ಬಂದರು. ಈ ವೇಳೆ ನಾನ್ ವೆಜ್ ವ್ಯವಸ್ಥೆ ಮಾಡದಿರುವುದನ್ನು ಗಮನಿಸಿ ಆಯೋಜಕರೊಂದಿಗೆ ಜಗಳ ಮಾಡಿದ್ದಾರೆ. ಈ ವಿಷಯ ವಧುವಿನ ಕಡೆಯವರಿಗೂ ತಲುಪಿದೆ. ಈ ವೇಳೆ ವಧುವಿನ ಕಡೆಯವರಿಗೂ ವರನ ಸ್ನೇಹಿತರಿಗೂ ಜಗಳವಾಗಿದೆ. ಇದರಿಂದಾಗಿ ವರನ ಸ್ನೇಹಿತರೂ ಕೋಪಗೊಂಡು ಊಟವನ್ನು ಮಾಡದೇ ಅಲ್ಲಿಂದ ಹಾಗೇ ಹೊರಟಿದ್ದಾರೆ. ಇದನ್ನೂ ಓದಿ: ಗಡಿಪಾರು ಆದೇಶದ ನೋಟಿಸ್ ನೋಡಿದ ಆರೋಪಿ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಈ ವಿಷಯ ತಿಳಿದ ವರ ಹಾಗೂ ಅವನ ಕುಟುಂಬದವರು ವಧುವಿನ ಕುಟುಂಬದವರ ಮೇಲೆ ಕೋಪಗೊಂಡಿದ್ದಾರೆ. ಅಷ್ಟೇ ಅಲ್ಲದೇ ಮದುವೆಯನ್ನು ರದ್ದುಗೊಳಿಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸುವವರೆಗೂ ಸಮಸ್ಯೆ ಬಗೆಹರಿಯಲಿಲ್ಲ. ಇದನ್ನೂ ಓದಿ: ಡಿಸೆಂಬರ್ 1 ರಿಂದ ಮಾರುಕಟ್ಟೆಗೆ ಟಿಜಿಟಲ್ ರುಪಿ – ಬೆಂಗ್ಳೂರಿನಲ್ಲೇ ಮೊದಲ ಪ್ರಯೋಗ

    Live Tv
    [brid partner=56869869 player=32851 video=960834 autoplay=true]

  • ಮದುವೆ ದಿನವೂ ಲ್ಯಾಪ್‍ಟಾಪ್ ಹಿಡಿದುಕೊಂಡು ಕುಳಿತ ವರ!

    ಮದುವೆ ದಿನವೂ ಲ್ಯಾಪ್‍ಟಾಪ್ ಹಿಡಿದುಕೊಂಡು ಕುಳಿತ ವರ!

    ಕೋಲ್ಕತ್ತಾ: ಕೊರೊನಾ (Corona) ಲಾಕ್‍ಡೌನ್ ನಂತರ ಐಟಿ ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ವರ್ಕ್ ಫ್ರಮ್ ಹೋಮ್ (Work From Home) ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವರ (Groom) ತನ್ನ ಮದುವೆಯ ದಿನವೂ ಮಂಟಪದಲ್ಲಿ ಲ್ಯಾಪ್‍ಟಾಪ್ ಹಿಡಿದುಕೊಂಡು ಕೆಲಸ ಮಾಡುತ್ತಿದ್ದಾನೆ.

    ಕೋಲ್ಕತ್ತಾದ (Kolkata) ವರನೊಬ್ಬ ಪುರೋಹಿತರೊಂದಿಗೆ ಕುಳಿತು ತನ್ನ ಮದುವೆ ಕಾರ್ಯದ ಜೊತೆಗೆ ಲ್ಯಾಪ್‍ಟಾಪ್‍ನಲ್ಲಿ (Laptop) ಕೆಲಸವನ್ನು ಮಾಡುತ್ತಿದ್ದಾನೆ. ಇತ್ತ ಪುರೋಹಿತರು ವಿಧಿವಿಧಾನಗಳನ್ನು ನೆರವೇರಿಸಿ ವರನನ್ನು ಆಶೀರ್ವದಿಸುತ್ತಿದ್ದಾರೆ. ಆದರೆ ವರ ಪುರೋಹಿತರ ಕಡೆಗೆ ನೋಡದೇ ಆತ ತನ್ನ ಲ್ಯಾಪ್‍ಟಾಪ್‌ನಲ್ಲಿ ಕೆಲಸ ಮಾಡುತ್ತ ಮಗ್ನನಾಗಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

     

    View this post on Instagram

     

    A post shared by Calcutta Instagrammers (@ig_calcutta)

    ಈ ಫೋಟೋವನ್ನು ಹಂಚಿಕೊಂಡಿರುವ ಇನ್‍ಸ್ಟಾಗ್ರಾಮ್ ಪೇಜ್‌ ಮದುವೆ ಸಮಯದಲ್ಲೂ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುವ ಸ್ನೇಹಿತನನ್ನು ಟ್ಯಾಗ್ ಮಾಡಿ ಎಂದು ತಿಳಿಸಿದೆ. ವರ ಲ್ಯಾಪ್‍ಟಾಪ್‍ನಲ್ಲಿ ನಿಖರವಾಗಿ ಏನು ಕೆಲಸ ಮಾಡುತ್ತಿದ್ದಾನೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕೆಲವರು ಆಫೀಸ್ ಕೆಲಸ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ಮಾಯ

    ಕೆಲವರು ಈ ಫೋಟೋ ನೋಡಿ ಹಾಸ್ಯ ಮಾಡಿದ್ದರೇ, ಇನ್ನೂ ಕೆಲವರು ಟೀಕಿಸಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದು, ಈ ವ್ಯಕ್ತಿಗೆ ತನ್ನ ಸ್ವಂತ ವಿವಾಹವನ್ನು ಆನಂದಿಸಲು ಸಹ ಆಗುತ್ತಿಲ್ಲ ಎಂದು ಹೇಳಿದ್ದಾನೆ. ಮತ್ತೊಬ್ಬ ಕಾಮೆಂಟ್ ಮಾಡಿ, ನನಗೆ ಇದು ತಮಾಷೆಯಾಗಿ ಕಾಣುತ್ತಿಲ್ಲ. ಯಾವುದೇ ಸಂಸ್ಥೆಯು ಉದ್ಯೋಗಿಯನ್ನು ಅವರ ಮದುವೆಯ ದಿನಗಳಲ್ಲಿ ಕೆಲಸ ಮಾಡಲು ಕೇಳುವುದಿಲ್ಲ ಎಂದಾತ ಅವನು ಮದುವೆಯಾಗುವ ಮಹಿಳೆಯನ್ನು ದೇವರು ಆಶೀರ್ವದಿಸುತ್ತಾನೆ ಎಂದು ವ್ಯಂಗ್ಯವಾಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪೊಲೀಸ್ ಪೇದೆ ಪತ್ನಿ ಅನುಮಾನಾಸ್ಪದ ಸಾವು

    Live Tv
    [brid partner=56869869 player=32851 video=960834 autoplay=true]

  • ವರನ ಕಡೆಯವರು ನೀಡಿದ ಲೆಹೆಂಗಾ ಚೀಪ್ ಕ್ವಾಲಿಟಿ – ಮದುವೆ ಬೇಡವೆಂದ ವಧು

    ವರನ ಕಡೆಯವರು ನೀಡಿದ ಲೆಹೆಂಗಾ ಚೀಪ್ ಕ್ವಾಲಿಟಿ – ಮದುವೆ ಬೇಡವೆಂದ ವಧು

    ಡೆಹ್ರಾಡೂನ್: ವರನ (Groom) ಮನೆಯವರು ಉಡುಗೊರೆಯಾಗಿ ನೀಡಿದ್ದ ಲೆಹೆಂಗಾ (Lehenga) ಇಷ್ಟವಾಗದ್ದಕ್ಕೆ ವಧುವೊಬ್ಬಳು (Bride) ಮದುವೆಯನ್ನು (Wedding) ರದ್ದುಗೊಳಿಸಿದ ವಿಲಕ್ಷಣ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದಿದೆ.

    ಉತ್ತರಾಖಂಡದ ಹಲ್ದ್ವಾನಿಯ ಹೆಲ್ತ್‌ ಕೇರ್ ವೃತ್ತಿಯಲ್ಲಿ ಕೆಲಸ ಮಾಡುವ ರಾಣಿಖೇತ್ ಮೂಲದ ಹುಡುಗನೊಂದಿಗೆ ಹುಡುಗಿಯ ಮದುವೆಯನ್ನು ನಿಶ್ಚಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಗೂ ಮೊದಲು ವರನ ತಂದೆ ಲಕ್ನೋದಿಂದ 10,000 ರೂ. ಮೌಲ್ಯದ ಲೆಹಂಗಾವನ್ನು ಸೊಸೆಯಾಗಿ ಬರುವವಳಿಗೆ ಎಂದು ಆರ್ಡರ್‌ ಮಾಡಿದ್ದರು. ಈ ಆರ್ಡರ್‌ ಅನ್ನು ನೇರವಾಗಿ ವಧು ಮನೆಗೆ ಕಳುಸಿದ್ದರು.

    ಆ ಲೇಹಂಗಾವನ್ನು ನೋಡಿದ ವಧುಗೆ ಇಷ್ಟವಾಗಿರಲಿಲ್ಲ. ಈ ಬಗ್ಗೆ ವಧು ಕಡಿಮೆ ಕ್ವಾಲಿಟಿಯ ಲೆಹಂಗಾ ಎಂದು ಜಗಳ ತೆಗೆದಿದ್ದಾಳೆ. ಈ ಜಗಳವೇ ಉಲ್ಬಣಗೊಂಡಿದ್ದು, ವಧು ತನ್ನ ನಿಶ್ಚಿತ ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಘಟನೆಗೆ ಸಂಬಂಧಿಸಿ ಹಲ್ದ್ವಾನಿ ಪೊಲೀಸರ ಗಮನಕ್ಕೂ ತರಲಾಯಿತು. ಹಲ್ದ್ವಾನಿ ಪೊಲೀಸರು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದರೂ ಎಲ್ಲ ಪ್ರಯತ್ನಗಳು ವಿಫಲವಾದವು. ಅದಾದ ಬಳಿಕ 2 ಕುಟುಂಬಗಳ ಸಮ್ಮತಿ ಮೇರೆಗೆ ಮದುವೆಯನ್ನು ರದ್ದುಗೊಳಿಸಲಾಯಿತು. ಇದನ್ನೂ ಓದಿ: ವೇದಿಕೆಯಲ್ಲಿಯೇ ಅನಾರೋಗ್ಯಕ್ಕೀಡಾದ ಸಚಿವ ನಿತಿನ್ ಗಡ್ಕರಿ

    ಈ ವರ್ಷ ಜೂನ್‌ನಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೇ ತಿಂಗಳು ಮದುವೆಯನ್ನು ನಿಗದಿಪಡಿಸಲಾಗಿತ್ತು, ಇದಕ್ಕಾಗಿ ವರನ ಕುಟುಂಬವು ಈಗಾಗಲೇ ಕಾರ್ಡ್‌ಗಳನ್ನು ಮುದ್ರಿಸಿದ್ದರು. ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಸಂಪ್ರದಾಯದಂತೆ ಮರುಮದುವೆಯಾದ್ರು 9 ಮಕ್ಕಳ ತಂದೆ-ತಾಯಿಯಾಗಿರುವ ಮುಸ್ಲಿಂ ದಂಪತಿ

    ಹಿಂದೂ ಸಂಪ್ರದಾಯದಂತೆ ಮರುಮದುವೆಯಾದ್ರು 9 ಮಕ್ಕಳ ತಂದೆ-ತಾಯಿಯಾಗಿರುವ ಮುಸ್ಲಿಂ ದಂಪತಿ

    ಲಕ್ನೋ: ಭಾರತ ಪ್ರವಾಸಕ್ಕೆ ಬಂದಿದ್ದ ಅಮೆರಿಕ ಮುಸ್ಲಿಂ ದಂಪತಿ (Muslim American) ಉತ್ತರಪ್ರದೇಶದ (Uttar Pradesh) ಜಾನ್‍ಪುರದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾದರು. (Marriage)

    ಜೌನ್‍ಪುರದ ತ್ರಿಲೋಚನ್ ಮಹಾದೇವ ದೇವಸ್ಥಾನದಲ್ಲಿ (Temple) ವಿವಾಹ ನೆರವೇರಿತು. ಅಮೆರಿಕ ಮೂಲದ ಮುಸ್ಲಿಂ ದಂಪತಿಯಾದ (couple) ಕಿಯಾಮಾ ದಿನ್ ಖಲೀಫಾ ಹಾಗೂ ಕೇಶಾ ಕಲೀಫಾ ಅವರು ಭಾರತ ಪ್ರವಾಸದಲ್ಲಿದ್ದಾಗ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ಮಾರುಹೋಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮರು ಮದುವೆಯಾಗಲು ನಿರ್ಧರಿಸಿದ್ದಾರೆ.

    ವಾರಣಾಸಿಯ ದೇವಾಲಯಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದಾಗ ದಂಪತಿ ಹಿಂದೂ ಸಂಸ್ಕೃತಿಯಿಂದ ಆಕರ್ಷಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಮಹಾದೇವ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಲ್ಲಿ ಮರುಮದುವೆಯಾದರು. ಇದನ್ನೂ ಓದಿ: ಟೆಕ್‍ಆಫ್ ಆಗಿದ್ದ ವಿಮಾನದಲ್ಲಿ ಕಿಟಕಿ ಒದ್ದು ದಾಂಧಲೆ- ಪಾಕ್‌ ಪ್ರಯಾಣಿಕ ಅರೆಸ್ಟ್‌

    ದಂಪತಿಗೆ 18 ವರ್ಷಗಳ ಹಿಂದೆ ಮುಸ್ಲಿಂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದು, 9 ಮಕ್ಕಳಿದ್ದಾರೆ. ವರ ಕಿಯಾಮಾ ದಿನ್ ಖಲೀಫಾ ಅವರ ಅಜ್ಜ ಭಾರತೀಯ ಮೂಲದ ಹಿಂದೂ ಆಗಿದ್ದರು. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ-ಪಿಯು ಮಂಡಳಿ ವಿಲೀನಕ್ಕೆ ನಿರ್ಧಾರ – ಸಂಪುಟ ಸಭೆಯಲ್ಲಿ ಅನುಮೋದನೆ

    Live Tv
    [brid partner=56869869 player=32851 video=960834 autoplay=true]

  • ವರನ ಎದುರೇ ಲವ್ವರ್‌ಗೆ ಕರೆ ಮಾಡಿದ ಹುಡುಗಿ – ತಾಳಿ ಕಿತ್ತುಕೊಂಡು ಶಾಕ್ ಕೊಟ್ಟ ಪ್ರಿಯತಮ

    ವರನ ಎದುರೇ ಲವ್ವರ್‌ಗೆ ಕರೆ ಮಾಡಿದ ಹುಡುಗಿ – ತಾಳಿ ಕಿತ್ತುಕೊಂಡು ಶಾಕ್ ಕೊಟ್ಟ ಪ್ರಿಯತಮ

    ಚೆನ್ನೈ: ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗುತ್ತಿರುವುದನ್ನು ತಡೆಯಲು 24 ವರ್ಷದ ಯುವಕ ವರನ(Groom) ಕೈ ತಾಳಿಯನ್ನು (Mangalsutra) ಕಿತ್ತುಕೊಂಡು ಪ್ರಿಯತಮೆ ಕೊರಳಿಗೆ ಕಟ್ಟಲು ಯತ್ನಿಸಿದ್ದಾನೆ.

    ಚೆನ್ನೈನ ಐಷಾರಾಮಿ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ ಈ ಮದುವೆ ನಿಲ್ಲಿಸಿ ತನ್ನನ್ನು ಹೇಗಾದರೂ ಕರೆದುಕೊಂಡು ಹೋಗುವಂತೆ ಯುವತಿ ತನ್ನ ಪ್ರಿಯಕರನಿಗೆ ಮೊಬೈಲ್(Mobile) ಮೂಲಕ ಸಂದೇಶ ಕಳುಹಿಸಿದ್ದಳು. ಹೀಗಾಗಿ ಬೆಳಗ್ಗೆಯೇ ಮದುವೆ(Marriage) ಮನೆಗೆ ಎಂಟ್ರಿ ಕೊಟ್ಟ ಯುವಕ ವರ ತನ್ನ ಪ್ರಿಯತಮೆಗೆ ಕಟ್ಟಲು ಮುಂದಾಗುತ್ತಿದ್ದಂತೆ ವೇದಿಕೆ ಏರಿ ತಾಳಿಯನ್ನು (Thali) ಕಿತ್ತುಕೊಂಡಿದ್ದಾನೆ. ನಂತರ ಆಕೆಯ ಕುತ್ತಿಗೆಗೆ ಕಟ್ಟಲು ಪ್ರಯತ್ನಿಸಿದ್ದಾನೆ. ಆದರೆ ಈ ವೇಳೆ ಅಲ್ಲಿದ್ದ ಜನರು ಆತನನ್ನು ತಡೆದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು

    ಶುಕ್ರವಾರ ಬೆಳಗ್ಗೆ ಚೆನ್ನೈನ(Chennai) ಮದುವೆ ಮಂಟಪದಲ್ಲಿ ಈ ಘಟನೆ ನಡೆದಿದ್ದು, ಘಟನೆ ಬಳಿಕ ಪೊಲೀಸರಿಗೆ (Police) ಕರೆ ಮಾಡಿ ಮಾಹಿತಿ ನೀಡಲಾಗಿದೆ. ನಂತರ ತನಿಖೆ ಆರಂಭಿಸಿದ ಪೊಲೀಸರಿಗೆ ಯುವಕ ಮತ್ತು ಯುವತಿ ಪ್ರೀತಿ ಮಾಡುತ್ತಿದ್ದು, ಹುಡುಗಿ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಯಾಗಲು ಮುಂದಾಗಿದ್ದಾಳೆ. ಹೀಗಾಗಿ ಪ್ರಿಯಕರ (Lover) ಮದುವೆ ಮಂಟಪಕ್ಕೆ ಬಂದಿದ್ದಾನೆ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಹಿರಿಯ ಅಧಿಕಾರಿಯಿಂದ ಅವಮಾನವಾಗಿದೆ – ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಪೊಲೀಸ್‌ ಆತ್ಮಹತ್ಯೆ

    ಇದರಿಂದಾಗಿ ವರನ ಕುಟುಂಬಸ್ಥರು ಮತ್ತು ಹುಡುಗಿ ಮನೆಯವರ ನಡುವೆ ಜಗಳವಾಗಿ ಮದುವೆ ರದ್ದುಗೊಳಿಸಲಾಯಿತು. ಇದೀಗ ಕಲ್ಯಾಣ ಮಂಟಪಕ್ಕೆ ಒಳನುಗ್ಗಿದ ಯುವಕನ ಮನೆಯವರು ಮತ್ತು ಹುಡುಗಿಯ ಮನೆಯವರ ನಡುವೆ ಮದುವೆ ಮಾಡಲು ಮಾತುಕತೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗುವಂತೆ ಕೋರಿ ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ವಧು!

    ಮದುವೆಯಾಗುವಂತೆ ಕೋರಿ ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ವಧು!

    ಪಾಟ್ನಾ: ವಧುವೊಬ್ಬಳು ನನ್ನನ್ನು ಮದುವೆಯಾಗು ಎಂದು ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ಘಟನೆ ಬಿಹಾರದಲ್ಲಿ ನಡೆದಿದೆ.

    ಬಿಹಾರದ ನವಾಡದಲ್ಲಿ ಈ ಘಟನೆ ನಡೆದಿರುವ ವೀಡಿಯೋವು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಧುವಿನ ಕುಟುಂಬಸ್ಥರ ಪ್ರಕಾರ, ವಧುವಿಗೂ ಯುವಕನಿಗೂ 3 ತಿಂಗಳ ಹಿಂದೆ ಮದುವೆ ನಿಶ್ಚಯಿಸಲಾಗಿತ್ತು. ಅಷ್ಟೇ ಅಲ್ಲದೇ ಯುವಕನಿಗೆ ಬೈಕ್ ಹಾಗೂ 50 ಸಾವಿರ ನಗದನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೆ ಯುವಕ ಸಬೂಬನ್ನು ಹೇಳಿ ಮದುವೆಯನ್ನು ವಿಳಂಬ ಮಾಡುತ್ತಲೇ ಇದ್ದ. ಈ ಹಿನ್ನೆಲೆಯಲ್ಲಿ ವಧು ಮಾರುಕಟ್ಟೆಯಲ್ಲಿ ನನ್ನನ್ನು ಮದುವೆಯಾಗಿ ಎಂದು ಯುವಕನ ಹಿಂದೆ ಓಡಿದ್ದಾಳೆ.

    ವೀಡಿಯೋದಲ್ಲಿ ಏನಿದೆ?: ನವಡಾದ ಭಗತ್ ಸಿಂಗ್ ಚೌಕ್‍ನಲ್ಲಿ ಯುವಕನೊಬ್ಬ ಹೋಗುತ್ತಿದ್ದ. ಈ ವೇಳೆ ಆತನನ್ನು ನೋಡಿದ ವಧು ನನ್ನನ್ನು ಮದುವೆಯಾಗು ಎಂದು ಅವನ ಕೈಯನ್ನು ಹಿಡಿದು ಅಳುತ್ತಾ ಒತ್ತಾಯಿಸಿದ್ದಾಳೆ. ಇದರಿಂದಾಗಿ ಆತ ವಧುವಿನಿಂದ ತಪ್ಪಿಸಿಕೊಂಡು ಅಲ್ಲಿಂದ ಓಡಲು ಪ್ರಯತ್ನಿಸಿದ್ದಾರೆ. ಆದರೆ ವಧು ಆತನನ್ನು ಹಿಡಿಯಲು ಅವನ ಹಿಂದೆ ಓಡುತ್ತಾಳೆ. ಕೊನೆಗೂ ಆ ಯುವಕನ ಶತಪ್ರಯತ್ನಗಳೆಲ್ಲಾ ವಿಫಲವಾಗಿ ವಧುವಿನ ಕೈಯಲ್ಲಿ ಸಿಕ್ಕಿಬಿಳುತ್ತಾನೆ. ಇದನ್ನೂ ಓದಿ: ಪಂದ್ಯ ಸೋತ್ರೂ ರೋಮ್ಯಾಂಟಿಕ್ ಮೂಡ್- ಗೆಳತಿಗೆ ಪ್ರಪೋಸ್ ಮಾಡಿದ ಕ್ರಿಕೆಟಿಗ

    ಆ ವೇಳೆಗಾಗಲೇ ಅಲ್ಲಿ ಜನರೆಲ್ಲರೂ ಸೇರಿರುತ್ತಾರೆ. ಅವರೆಲ್ಲರ ಎದುರೇ ವಧು, ಅಳುತ್ತಾ, ನನ್ನನ್ನು ಮದುವೆಯಾಗು ಎಂದು ಒತ್ತಾಯಿಸುತ್ತಾಳೆ. ಅಷ್ಟೇ ಅಲ್ಲದೇ ಆತನನ್ನು ಬಿಟ್ಟರೇ ಮತ್ತೆ ಎಲ್ಲಿ ತಪ್ಪಿಸಿಕೊಳ್ಳುತ್ತಾನೋ ಎನ್ನುವ ಭಯದಿಂದ ಆತನ ಕೈಯನ್ನು ಹಿಡಿಕೊಂಡು ಗಲಾಟೆ ಪ್ರಾರಂಭಿಸುತ್ತಾಳೆ. ಆಗ ಪೊಲೀಸರು ಮಧ್ಯಪ್ರವೇಶಿಸಿ, ಘಟನೆಗೆ ಸಂಬಂಧಿಸಿ ಎರಡು ಕಡೆಯವರನ್ನು ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ಮಾಡಿ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ. ಆನಂತರದಲ್ಲಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ದೇವಸ್ಥಾನದಲ್ಲಿ ಇಬ್ಬರು ವಿವಾಹವಾದರು. ಇದನ್ನೂ ಓದಿ: ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    Live Tv
    [brid partner=56869869 player=32851 video=960834 autoplay=true]

  • ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ

    ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ

    ಲಕ್ನೋ: ನೆರೆಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೋರ್ವ ಮದುವೆ ನಿಶ್ಚಿಯವಾಗಿದ್ದ ಯುವತಿಯ ಅಶ್ಲೀಲ ಫೋಟೋಗಳನ್ನು ವರನಿಗೆ ಕಳುಹಿಸಿದ್ದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದಿದೆ.

    ಆರೋಪಿಯನ್ನು ರವಿ ಪ್ರಕಾಶ್ ಎಂದು ಗುರುತಿಸಲಾಗಿದ್ದು, ಈತ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರಿಂದ ತೀವ್ರವಾಗಿ ಮನನೊಂದ ಯುವತಿ ತನ್ನ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗುರುವಾರ ಬೆಳಗ್ಗೆ ಸೀಲಿಂಗ್ ಫ್ಯಾನ್‍ನಲ್ಲಿ ಯುವತಿ ನೇತಾಡುತ್ತಿರುವುದನ್ನು ಕಂಡು ಕುಟುಂಬಸ್ಥರು ಗಾಬರಿಗೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡೇ ಮಾಡ್ತೀವಿ – ಗುಂಡು ಹಾರಿಸ್ತೀರಾ ಹಾರಿಸಿ: ಮುತಾಲಿಕ್

    ಈ ಕುರಿತಂತೆ ಪ್ರತಿಕ್ರಿಯಿಸಿದ ಮೃತ ಯುವತಿಯ ಸಹೋದರ, ಕೆಲವು ದಿನಗಳ ಹಿಂದೆ ಆರೋಪಿ ಆಕೆಯ ಐಡಿಯನ್ನು ಕದ್ದಿದ್ದು, ನಂತರ ಅಶ್ಲೀಲ ಫೋಟೋಗಳನ್ನು ಮಾಡಲು ಬಳಸಿಕೊಂಡಿದ್ದಾನೆ. ಅಲ್ಲದೇ ಆ ಫೋಟೋಗಳನ್ನು ವರ ಮತ್ತು ಆತನ ಕುಟುಂಬಸ್ಥರಿಗೆ ಕಳುಹಿಸಿದ್ದಾನೆ. ಇದರಿಂದಾಗಿ ಮದುವೆ ರದ್ದುಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

    ಇದೀಗ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜೊತೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲಖಿಂಪುರ ಖೇರಿಯ ಹೆಚ್ಚುವರಿ ಎಸ್‍ಪಿ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಚೈಲ್ಡೀಶ್‌, ಅಪ್ರಬುದ್ಧ ನಾಯಕ – ರಾಹುಲ್‌ ಗಾಂಧಿಯಿಂದಲೇ ಕಾಂಗ್ರೆಸ್‌ ಅವನತಿ

  • ನರ್ಸ್, ಫಾರ್ಮಾಸಿಸ್ಟ್ ಜೋಡಿಯ ಟ್ಯಾಬ್ಲೆಟ್ ವೆಡ್ಡಿಂಗ್ ಕಾರ್ಡ್ ವೈರಲ್

    ನರ್ಸ್, ಫಾರ್ಮಾಸಿಸ್ಟ್ ಜೋಡಿಯ ಟ್ಯಾಬ್ಲೆಟ್ ವೆಡ್ಡಿಂಗ್ ಕಾರ್ಡ್ ವೈರಲ್

    ಹೈದರಾಬಾದ್: ಮದುವೆ ಪ್ರತಿಯೊಬ್ಬರ ಜೀವನದಲ್ಲೂ ಮಹತ್ವದ ಘಟ್ಟವಾಗಿದ್ದು, ಈ ಪ್ರಮುಖ ಘಟ್ಟದಲ್ಲಿ ಹಲವಾರು ಕನಸುಗಳನ್ನು ಕಂಡಿರುತ್ತಾರೆ. ಪ್ರತಿಯೊಂದು ಹಂತದಲ್ಲೂ ಕಂಡಿರುವ ಕನಸನ್ನು ನನಸು ಮಾಡಿಕೊಳ್ಳಬೇಕೆಂಬ ಹಂಬಲ ಇರುತ್ತೆ. ಅದೇ ರೀತಿ ಇಲ್ಲೊಂದು ಜೋಡಿ ವಿಶೇಷ ರೀತಿಯಲ್ಲಿ ಮದುವೆ ಕಾರ್ಡ್‍ನ್ನು ಮಾಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಹೌದು.. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ವರ ಎಜಿಲರಸನ್ ಹಾಗೂ ವಿಲ್ಲುಪುರಂ ಜಿಲ್ಲೆಯ ಗೆಂಜಿಯ ವಧು ವಸಂತಕುಮಾರಿ ಇಬ್ಬರೂ ಮುಂದಿನ ತಿಂಗಳು ಅಂದರೆ ಸೆ. 5 ರಂದು ಮದುವೆ ಆಗಲಿದ್ದಾರೆ. ಮೂಲತಃ ಈ ಇಬ್ಬರು ಜೋಡಿಗಳು ವೈದ್ಯಕೀಯ ವೃತ್ತಿಯಲ್ಲಿದ್ದಾರೆ. ವರ ಫಾರ್ಮಾಸಿಸ್ಟ್ ಹಾಗೂ ವಧು ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ತಮ್ಮ ವೃತ್ತಿಗೆ ಅನುಗುಣವಾಗಿಯೇ ಇರಲಿ ಎಂದು ಟ್ಯಾಬ್ಲೆಟ್ ಕಾರ್ಡ್ ಮಾದರಿಯ ಆಮಂತ್ರಣ ಪತ್ರವನ್ನು ಮಾಡಿಸಿದ್ದಾರೆ.

    ಈ ಕಾರ್ಡಿನ ವಿಶೇಷ ಏನೆಂದರೆ ಟ್ಯಾಬ್ಲೆಟ್ ಶಿಟ್‍ನಲ್ಲಿ ಯಾವ ರೀತಿಯಾಗಿ ಬರೆದಿರುತ್ತಾರೋ ಅದೇ ರೀತಿಯಾಗಿ ತಮ್ಮ ಮದುವೆ ಕಾರ್ಡ್‍ನ್ನು ಬರೆಸಿದ್ದಾರೆ. ನೀವು ಒಮ್ಮೆಲೇ ನೋಡಿದರೇ ಅರೇ.. ಇದೇನಪ್ಪ ಈ ಟ್ಯಾಬ್ಲೆಟ್ ಶಿಟ್ ನೀಡಿದ್ದಾರಲ್ಲ ಅಂದುಕೊಳ್ಳಬೇಕು, ಆ ರೀತಿಯೇ ಇದೆ. ಇದನ್ನೂ ಓದಿ: ಷರತ್ತಿನೊಂದಿಗೆ ಗಣೇಶೋತ್ಸವಕ್ಕೆ BBMP ಗ್ರೀನ್ ಸಿಗ್ನಲ್ – ಈದ್ಗಾ ಮೈದಾನ ಗಣಪನಿಗೆ ಸಿಕ್ಕಿಲ್ಲ ಪರ್ಮಿಷನ್

    ಈ ವೆಡ್ಡಿಂಗ್ ಕಾರ್ಡ್‍ನಲ್ಲಿ ಎಲ್ಲ ಸ್ನೇಹಿತರು ಮತ್ತು ಬಂಧುಗಳು ತಪ್ಪದೇ ವಿವಾಹ ಸಮಾರಂಭಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ. ಅಷ್ಟೇ ಅಲ್ಲ, ನೀಲಿ ಬಣ್ಣದಲ್ಲಿ ಮದುವೆ ಮತ್ತು ಆರತಕ್ಷತೆ ನಡೆಯುವ ದಿನಾಂಕ ಮತ್ತು ಸಮಯ ತಿಳಿಸಲಾಗಿದೆ. ಮ್ಯಾನುಫ್ಯಾಕ್ಚರ್ ವಿಭಾಗದಲ್ಲಿ ವರನ ತಂದೆ-ತಾಯಿ, ವಧುವಿನ ತಂದೆ-ತಾಯಿ ಹೆಸರಿನೊಂದಿಗೆ ಅವರ ವಿಳಾಸ ಇದೆ.

    ಟ್ಯಾಬ್ಲೆಟ್ ಕಾರ್ಡ್‍ಗಳಲ್ಲಿ ಸೂಚಿಸುವ ವಾರ್ನಿಂಗ್ ಸ್ಥಳದಲ್ಲಿ ಎಲ್ಲ ಸ್ನೇಹಿತರೇ, ಬಂಧುಗಳೇ ನಮ್ಮ ಮದುವೆಯ ಶುಭಕಾರ್ಯಕ್ರಮಕ್ಕೆ ಮಿಸ್ ಮಾಡದೆ ಬನ್ನಿ ಎಂದು ಕೆಂಪು ಬಣ್ಣದಲ್ಲಿ ಮುದ್ರಿಸಲಾಗಿದೆ. ಇನ್ನು ತಮ್ಮ ಮದುವೆ ದಿನದ ವಿಶೇಷ ದಿನಗಳನ್ನೂ ಸ್ಮರಿಸಿದ್ದು, ಶಿಕ್ಷಕರ ದಿನ ಮತ್ತು ಮದರ್ ತೆರೇಸಾ ಸ್ಮರಣೆ ದಿನವಿದೆ ಎಂದಿದ್ದಾರೆ. ಮದುವೆ ಕರೆಯೋಲೆ ಪತ್ರಿಕೆಯಲ್ಲಿ ವಧು-ವರನ ಹೆಸರು ದೊಡ್ಡ ಅಕ್ಷರದಲ್ಲಿದ್ದು, ಪಕ್ಕದಲ್ಲೇ ಇಬ್ಬರ ಶಿಕ್ಷಣದ ವಿವರವೂ ಇದೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಲು ನೋ ಎಂದ ರಾಹುಲ್ ಗಾಂಧಿ; ಗಾಂಧಿಯೇತರರಿಗೆ ಅವಕಾಶ- ಮೂಲಗಳು

    Live Tv
    [brid partner=56869869 player=32851 video=960834 autoplay=true]

  • ಮಧುಮಗ ಎಸ್ಕೇಪ್ – ಲಗ್ನಪತ್ರಿಕೆ, ಮದುವೆ ಸೀರೆ ಹಿಡಿದು ಠಾಣೆ ಮೆಟ್ಟಿಲೇರಿದ ವಧು

    ಮಧುಮಗ ಎಸ್ಕೇಪ್ – ಲಗ್ನಪತ್ರಿಕೆ, ಮದುವೆ ಸೀರೆ ಹಿಡಿದು ಠಾಣೆ ಮೆಟ್ಟಿಲೇರಿದ ವಧು

    ಕೋಲಾರ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮದುವೆ ದಿನವೇ ಆಕೆಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ನಡೆದಿದೆ.

    ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮದುವೆ ದಿನವೇ ಪ್ರಿಯಕರ ಯುವತಿಯನ್ನು ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಳೆದ 6 ವರ್ಷಗಳಿಂದ ರಾಜಶೇಖರ್ ಹಾಗೂ ದೀಪ್ತಿ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆ ಹೆಬ್ಬಣಿ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಮದುವೆಗೆ ಜಾತಿ ಅಡ್ಡಿಯಾದ ಹಿನ್ನೆಲೆ ವರ ನಾಪತ್ತೆಯಾಗಿದ್ದಾನೆ. ಮದುವೆ ಮನೆಯಲ್ಲಿರಬೇಕಾದ ವಧು ಇದೀಗ ಲಗ್ನ ಪತ್ರಿಕೆ, ಹೊಸ ಸೀರೆಯೊಂದಿಗೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇದನ್ನೂ ಓದಿ: ಹೋಟೆಲ್, ರೆಸ್ಟೋರೆಂಟ್‍ಗಳು ಸೇವಾ ಶುಲ್ಕ ವಿಧಿಸಬಹುದು: ದೆಹಲಿ ಹೈಕೋರ್ಟ್

    ಈ ಹಿಂದೆ ಪೊಲೀಸ್ ಠಾಣೆಯಲ್ಲಿ ಮದುವೆಯಾಗುವುದಾಗಿ ವರ ಮುಚ್ಚಳಿಕೆ ಬರೆದುಕೊಟ್ಟಿದ್ದನು. ಆದರೆ ಇದೀಗ ವರ ನಾಪತ್ತೆಯಾಗಿರುವ ಹಿನ್ನೆಲೆ ಮಧುಮಗಳು ಅಕ್ಕ, ತಾಯಿ ಹಾಗೂ ಸಂಬಂಧಿಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇದನ್ನೂ ಓದಿ: ಶಾಲೆಯಲ್ಲಿ ಗಣೇಶನ ಕೂರಿಸ್ಬೇಡಿ ಅಂದಿಲ್ಲ- ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: BC ನಾಗೇಶ್

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಗೆ ಹೊಸ ಅರ್ಥ ಕೊಟ್ಟ ಅಮೆರಿಕ ವರ-ಆಂಧ್ರ ವಧು

    ಪ್ರೀತಿಗೆ ಹೊಸ ಅರ್ಥ ಕೊಟ್ಟ ಅಮೆರಿಕ ವರ-ಆಂಧ್ರ ವಧು

    ಅಮರಾವತಿ: ಲವ್ ಇಸ್ ಬ್ಲೈಂಡ್ ಎಂಬ ವಾಕ್ಯ ಎಲ್ಲರಿಗೂ ಗೊತ್ತೆ ಇದೆ. ನಾವು ಹಲವು ಉದಾಹರಣೆಗಳನ್ನು ನೋಡಿದ್ದೇವೆ, ಓದಿದ್ದೇವೆ. ಈಗ ಮತ್ತೊಂದು ಉದಾಹರಣೆಯೊಂದು ನಮ್ಮ ಕಣ್ಣ ಮುಂದೆ ಇದ್ದು ಅಮೆರಿಕದ ಯುವಕನನ್ನು ಆಂಧ್ರ ಪ್ರದೇಶದ ಯುವತಿ ಮದುವೆಯಾಗಿ ನಮ್ಮ ಪ್ರೀತಿಗೆ ಹೊಸ ಅರ್ಥ ಕೊಟ್ಟಿದ್ದಾರೆ.

    ಈ ಮುದ್ದು ಜೋಡಿಯನ್ನು ನೋಡಲು ಹಲವು ಜನರು ಮದುವೆಗೆ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿಯ ಫೋಟೋ ವೈರಲ್ ಆಗುತ್ತಿದೆ. ಈ ಜೋಡಿಯನ್ನು ನೋಡಿದ ಜನರು ನಿಜವಾದ ಪ್ರೀತಿಗೆ ಯಾವುದೇ ಬಣ್ಣ, ಗಡಿ ಬೇಕಾಗಿಲ್ಲ ಎಂದು ಶುಭಕೋರುತ್ತಿದ್ದಾರೆ. ಇದನ್ನೂ ಓದಿ: RTPSನಲ್ಲಿ ಕಳಚಿಬಿದ್ದ ಬಂಕರ್‌ಗಳು – ವಿದ್ಯುತ್ ಉತ್ಪಾದನೆ ಸ್ಥಗಿತ 

    ನಿರ್ಮಲವಾದ ಪ್ರೀತಿ ಎರಡು ಹೃದಯಗಳನ್ನು ಒಂದು ಮಾಡುತ್ತೆ ಎಂಬುದಕ್ಕೆ ಆಂಧ್ರ ಯುವತಿ, ಅಮೆರಿಕ ಯುವಕ ನಿರ್ದಶನರಾಗಿದ್ದಾರೆ. ಆಂಧ್ರದ ಟಿ.ಹರ್ಷವಿ ಹಾಗೂ ಅಮೆರಿಕದ ದಮಿಯನ್ ಫ್ರ್ಯಾಂಕ್ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

    ವಧು ಹರ್ಷವಿ, ತಿರುಪತಿಯ ಜಯಚಂದ್ರ ರೆಡ್ಡಿ ಮತ್ತು ರಾಜೇಶ್ವರಿ ದಂಪತಿಯ ಪುತ್ರಿ ಬಿ.ಟೆಕ್ ಪೂರ್ಣಗೊಳಿಸಿರುವ ಹರ್ಷವಿ, ಅಮೆರಿಕದ ಬೋಸ್ಟನ್‍ನಲ್ಲಿರುವ ಫ್ರ್ಯಾಂಕ್ ಪರಿಚಯವಾಗಿದೆ. ನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಹಿರಿಯರ ಒಪ್ಪಿಗೆ ಪಡೆದುಕೊಂಡಿದ್ದಾರೆ. ಎಲ್ಲರ ಒಪ್ಪಿಗೆ ನಂತರ ಇಬ್ಬರು ಸಂಪ್ರದಾಯದ ಪ್ರಕಾರ ಸಪ್ತಪದಿಯನ್ನು ತುಳಿಯುವ ಮೂಲಕ ಸಂಬಂಧಕ್ಕೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ನಿನ್ನ ತರ ನಕಲಿ ಸರ್ಟಿಫಿಕೇಟ್ ಕ್ರಿಯೇಟ್ ಮಾಡಿ ದಂಧೆ ನಡೆಸಿಕೊಂಡು ಬಂದಿಲ್ಲ ನಾನು:  ಹೆಚ್‍ಡಿಕೆ ಕಿಡಿ

    ಅಮೆರಿಕದಲ್ಲಿ ಇಬ್ಬರು ಮದುವೆಯಾಗಿದ್ದಾರೆ. ಆದರೆ ಹರ್ಷವಿ ಕುಟುಂಬದ ಒತ್ತಾಯದ ಮೇರೆಗೆ ತಿರುಪತಿಯಲ್ಲಿ ಮತ್ತೊಮ್ಮೆ ಇವರಿಬ್ಬರ ವಿವಾಹ ಕಾರ್ಯ ನೆರವೇರಿದೆ. ತಿರುಪತಿಯ ಹೋಟೆಲ್ ಒಂದರಲ್ಲಿ ಕಳೆದ ಗುರುವಾರ ರಾತ್ರಿ ಅದ್ಧೂರಿ ಮದುವೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]