Tag: ವಲಸಿಗರು

  • ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

    ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

    ಸನಾ: ಇಥಿಯೋಪಿಯನ್ ವಲಸಿಗರಿದ್ದ (Ethiopian Migrants) ಬೋಟ್ ಮುಳುಗಡೆಯಾದ (Boat Capsize) ಪರಿಣಾಮ 76 ಮಂದಿ ವಲಸಿಗರು ಸಾವನ್ನಪ್ಪಿದ್ದು, ಅನೇಕರು ನಾಪತ್ತೆಯಾಗಿರುವ ಘಟನೆ ಯೆಮೆನ್ (Yemen) ಕರಾವಳಿಯಲ್ಲಿ ನಡೆದಿದೆ.

    ಯೆಮೆನ್‌ನ ದಕ್ಷಿಣ ಅಬ್ಯಾನ್ (Abyan) ಪ್ರಾಂತ್ಯದ ಕರಾವಳಿಯಲ್ಲಿ ದೋಣಿ ಮುಳುಗಡೆಯಾಗಿದ್ದು, 32 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ 76 ಮಂದಿ ವಲಸಿಗರ ಮೃತದೇಹ ಪತ್ತೆಯಾಗಿದೆ ಎಂದು ಯೆಮೆನ್ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 157 ಜನರು ಹಡಗಿನಲ್ಲಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಿಬು ಸೊರೇನ್ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು: ಮೋದಿ ಸಂತಾಪ

    ಕಡುಬಡತನದಿಂದ ಆಫ್ರಿಕಾದಿಂದ ನೂರಾರು ವಲಸಿಗರು ಗಲ್ಫ್ ಅರಬ್ ರಾಷ್ಟ್ರಕ್ಕೆ ತೆರಳುತ್ತಿದ್ದರು. ಯೆಮೆನ್‌ಗೆ ಅನಧಿಕೃತ ವಲಸಿಗರ ಹರಿವು ಹೆಚ್ಚಾಗುತ್ತಿದೆ ಎಂದು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ವಲಸೆ ಸಂಘಟನೆ ತಿಳಿಸಿದೆ. ಕಳೆದ ವರ್ಷ ಯೆಮೆನ್‌ಗೆ 60 ಸಾವಿರಕ್ಕೂ ಹೆಚ್ಚು ಮಂದಿ ವಲಸೆ ಹೋಗಿದ್ದರು ಎಂದು ಐಓಎಂ ಮಾಹಿತಿ ನೀಡಿದೆ. ಇದನ್ನೂ ಓದಿ: KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

  • ಪನಾಮದಲ್ಲಿ ಬಂಧಿಯಾಗಿರುವ ಭಾರತೀಯ ವಲಸಿಗರು ಸೇಫ್‌ – ರಾಯಭಾರ ಕಚೇರಿ ಮಾಹಿತಿ

    ಪನಾಮದಲ್ಲಿ ಬಂಧಿಯಾಗಿರುವ ಭಾರತೀಯ ವಲಸಿಗರು ಸೇಫ್‌ – ರಾಯಭಾರ ಕಚೇರಿ ಮಾಹಿತಿ

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸರ್ಕಾರದ ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯರೂ ಸೇರಿದಂತೆ ಸುಮಾರು 300 ಅಕ್ರಮ ವಲಸಿಗರ ಗುಂಪನ್ನು ಪನಾಮದ (Panama) ಡೇರಿಯನ್ ಅರಣ್ಯ ಪ್ರದೇಶದ ಹೋಟೆಲ್‌ನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಭಾರತ ರಾಯಭಾರ ಕಚೇರಿ ಪನಾಮ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದೆ.

    ಹೌದು. ಮುಖ್ಯವಾಗಿ ಭಾರತ (India), ನೇಪಾಳ, ಶ್ರೀಲಂಕಾ, ಇರಾನ್, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಚೀನಾ ಸೇರಿದಂತೆ ಏಷ್ಯಾದ ದೇಶಗಳಿಂದ ಬಂದ ವಲಸಿಗರು ಅಲ್ಲಿ ಬಂಧಿಯಾಗಿದ್ದಾರೆ.‌ ಈ ಕುರಿತ ಚಿತ್ರಗಳು ಜಾಲತಾಣದಲ್ಲಿ ಸದ್ದು ಮಾಡಿದ ಬೆನ್ನಲ್ಲೇ ಭಾರತದ ರಾಯಭಾರ ಕಚೇರಿ (Indian Embassy) ಪನಾಮದಲ್ಲಿನ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಸಾಧಿಸಿದೆ. ಈ ಕುರಿತ ಮಾಹಿತಿಯನ್ನು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದೆ.

    ಭಾರತೀಯರ ಗುಂಪು ಅಮೆರಿಕದಿಂದ ಪನಾಮ ತಲುಪಿದೆ ಅಂತ ಪನಾಮ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹೋಟೆಲ್‌ನಲ್ಲಿ ಸುರಕ್ಷಿತವಾಗಿದ್ದಾರೆ. ಅವರ ಯೋಗಕ್ಷೇಮ ಖಚಿತಪಡಿಸಿಕೊಳ್ಳಲು ನಾವು ಅಲ್ಲಿನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪನಾಮ ರಾಯಭಾರ ಕಚೇರಿ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಅಕ್ರಮ ವಲಸಿಗರ ಕೈಗೆ, ಕಾಲಿಗೆ ಸರಪಳಿ ಹಾಕಿ ದೇಶದಿಂದ ಹೊರದಬ್ಬುತ್ತಿದೆ ಅಮೆರಿಕ -ವಿಡಿಯೋ ನೋಡಿ

    ಏನಾಗಿತ್ತು?
    ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯರು ಸೇರಿದಂತೆ ಸುಮಾರು 300 ಅಕ್ರಮ ವಲಸಿಗರ ಗುಂಪನ್ನು ಪನಾಮದ ಡೇರಿಯನ್ ಅರಣ್ಯ ಪ್ರದೇಶದ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ಮುಖ್ಯವಾಗಿ ಭಾರತ, ನೇಪಾಳ, ಶ್ರೀಲಂಕಾ, ಇರಾನ್, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಚೀನಾ ಸೇರಿದಂತೆ ಏಷ್ಯಾದ ದೇಶಗಳಿಂದ ಬಂದ ವಲಸಿಗರು ಅಲ್ಲಿ ಬಂಧಿಯಾಗಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಏಪ್ರಿಲ್‌ ಒಳಗೆ ಭಾರತದಲ್ಲಿ ಎಲೆಕ್ಟ್ರಿಕ್‌ ಕಾರು‌ ಬಿಡುಗಡೆಗೆ ಟೆಸ್ಲಾ ಪ್ಲ್ಯಾನ್‌ – ಆರಂಭಿಕ ಬೆಲೆ ಎಷ್ಟು?

    ವಲಸಿಗರನ್ನು ಬಂಧಿಸಿಟ್ಟಿರುವ ಹೋಟೆಲ್‌ನಿಂದ ಹೊರಹೋಗಲು ಅನುಮತಿಸುತ್ತಿಲ್ಲ. ಆದರೆ, ಪನಾಮ ಸರ್ಕಾರವು ಅಂತಾರಾಷ್ಟ್ರೀಯ ಅಧಿಕಾರಿಗಳ ಮೂಲಕ ತಮ್ಮ ದೇಶಗಳಿಗೆ ಮರಳಲು ವ್ಯವಸ್ಥೆ ಮಾಡಲು ಕಾಯುತ್ತಿದೆ. ಯುಎಸ್ ಮತ್ತು ಪನಾಮ ನಡುವಿನ ಒಪ್ಪಂದದ ಪ್ರಕಾರ, ಅಕ್ರಮ ವಲಸಿಗರು ವೈದ್ಯಕೀಯ ಚಿಕಿತ್ಸೆ ಮತ್ತು ಆಹಾರವನ್ನು ಪಡೆಯುತ್ತಿದ್ದಾರೆ ಎನ್ನಲಾಗಿತ್ತು. ಇದರಲ್ಲಿ ಆಶ್ರಯ ಪಡೆಯುತ್ತಿದ್ದ ಕೆಲವರು ಹೋಟೆಲ್‌ ಒಳಗಿನಿಂದ ಗಾಜಿನ ಗೋಡೆಗಳ ಮೇಲೆ ʻಸಹಾಯʼ ಮಾಡುವಂತೆ ಬರೆದು ಪ್ಲೇಟ್‌ಕಾರ್ಡ್‌ ಪ್ರದರ್ಶಿಸುತ್ತಿದ್ದರು. ಈ ಬೆನ್ನಲ್ಲೇ ಎಚ್ಚೆತ್ತ ಪನಾಮ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದೆ. ಆದ್ರೆ ವರದಿಗಳ ಹೊರತಾಗಿಯೂ ಪನಾಮ ಅಕ್ರಮವಾಗಿ ಬಂಧನದಲ್ಲಿರಿಸಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದೆ. ಇದನ್ನೂ ಓದಿ: ಅವರು ಯಾರನ್ನಾದರೂ ಆಯ್ಕೆ ಮಾಡಲು ಪ್ರಯತ್ನಿಸುತ್ತಿದ್ದರು: ಭಾರತದ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪದ ಬಗ್ಗೆ ಟ್ರಂಪ್‌ ಸುಳಿವು

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪನಾಮದ ಭದ್ರತಾ ಸಚಿವ ಫ್ರಾಂಕ್ ಅಬ್ರೆಗೊ, ಪನಾಮ ಮತ್ತು ಅಮೆರಿಕ ನಡುವಿನ ವಲಸೆ ಒಪ್ಪಂದದ ಭಾಗವಾಗಿ ಯುಎಸ್‌ನಿಂದ ಬಂದ ಅಕ್ರಮ ವಲಸಿಗರು ಹೋಟೆಲ್‌ನಲ್ಲಿ ವೈದ್ಯಕೀಯ ಆರೈಕೆ ಮತ್ತು ಆಹಾರ ಸೌಲಭ್ಯದೊಂದಿಗೆ ಆಶ್ರಯ ಪಡೆಯುತ್ತಿದ್ದಾರೆ. ಅವರನ್ನು ತಮ್ಮ ಮೂಲ ದೇಶಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ನಡೆಯುವಾಗ ಯಾರನ್ನೂ ಹೊರಗೆ ಬಿಡಲು ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೋನಿ ದಾಖಲೆ ಮುರಿಯಲು ಸಜ್ಜಾದ ಸ್ನೇಹಿತೆ – 1,000 ಪುರುಷರೊಟ್ಟಿಗೆ ಸೆಕ್ಸ್‌ ಮಾಡಲು ಅನ್ನಿ ನೈಟ್ ತಯಾರಿ

  • ಹಾಸನದಲ್ಲಿ ನಕಲಿ ಆಧಾರ್ ತೋರಿಸಿ ಕೆಲಸ ಗಿಟ್ಟಿಸಿಕೊಳ್ಳುವ ಬಾಂಗ್ಲಾ ಅಕ್ರಮ ವಲಸಿಗರು – ತನಿಖೆ ವೇಳೆ ಬೃಹತ್ ಜಾಲ ಬಯಲು

    ಹಾಸನದಲ್ಲಿ ನಕಲಿ ಆಧಾರ್ ತೋರಿಸಿ ಕೆಲಸ ಗಿಟ್ಟಿಸಿಕೊಳ್ಳುವ ಬಾಂಗ್ಲಾ ಅಕ್ರಮ ವಲಸಿಗರು – ತನಿಖೆ ವೇಳೆ ಬೃಹತ್ ಜಾಲ ಬಯಲು

    ಹಾಸನ: ನಕಲಿ ದಾಖಲೆಗಳೊಂದಿಗೆ ಅಸ್ಸಾಂ ಮೂಲದವರೆಂದು ಕಾರ್ಮಿಕರ ರೂಪದಲ್ಲಿ ನೆರೆಯೂರುತ್ತಿರುವ ಬಗ್ಗೆ ಗಂಭೀರ ಆರೋಪ ಹಾಸನ (Hassan) ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ, ಅರಕಲಗೂಡು ಭಾಗದಲ್ಲಿ ಕೇಳಿಬರುತ್ತಿದೆ.

    ಕೂಲಿ ಕೆಲಸಗಾರರ ಸೋಗಿನಲ್ಲಿ ಬಾಂಗ್ಲಾದ ಅಕ್ರಮ ವಲಸಿಗರು ಅಸ್ಸಾಂ (Assam) ಮೂಲದವರೆಂದು ಹೇಳಿಕೊಂಡು ನಕಲಿ ಆಧಾರ್ ಕಾರ್ಡ್ (Adhaar Card) ಬಳಸಿಕೊಂಡು ವಿವಿಧೆಡೆ ಕೆಲಸದ ನೆಪ ಒಡ್ಡಿ ವಲಸೆ ಬರುತ್ತಿದ್ದರು. ಕಾರ್ಮಿಕರ ಕೊರತೆಯನ್ನು ಅರಿತುಕೊಂಡು ಅದನ್ನೇ ಬಂಡವಾಳ ಮಾಡಿಕೊಂಡ ಕೆಲವು ಏಜೆಂಟ್‌ರಿಂದ ನಕಲೆ ದಾಖಲೆ ಸೃಷ್ಟಿಸಿ ಮೋಸ ಮಾಡುತ್ತಿರುವುದು ಕೇಳಿ ಬಂದಿತ್ತು.ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

    ನೂರಾರು ಸಂಖ್ಯೆಯಲ್ಲಿ ಅಪರಿಚಿತರು ರಾತ್ರೋರಾತ್ರಿ ಬಸ್ಸಿನಲ್ಲಿ ಬಂದಿಳಿದು, ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಕೆಲಸ ಹುಡುಕುತ್ತಿದ್ದರು. ಕೆಲ ಮಾಲೀಕರು ಯಾವುದೇ ದಾಖಲೆ ಪರಿಶೀಲನೆ ನಡೆಸದೇ ಕಾರ್ಮಿಕರೆಂಬ ಅನಿವಾರ್ಯತೆಯಿಂದಾಗಿ ಕೆಲಸ ನೀಡುತ್ತಿದ್ದರು. ವಲಸಿಗರು ಸಿಕ್ಕ ಸಿಕ್ಕ ಜಾಗದಲ್ಲಿ ಗುಡಿಸಲು ಹಾಕಿಕೊಂಡು ನೆಲೆಸುತ್ತಿರುವುದನ್ನು ಕಂಡು ಜನರಲ್ಲಿ ಅನುಮಾನ ಹೆಚ್ಚಾಗಿತ್ತು. ಸಾವಿರ ಸಂಖ್ಯೆಯಲ್ಲಿ ವಲಸಿಗರು ಬರುತ್ತಿರುವ ಹಿನ್ನೆಲೆ ಅವರ ಬಗ್ಗೆ ನಿಗಾವಹಿಸುವಂತೆ ಜನರು ಆಗ್ರಹಿಸಿದ್ದರು.

    ಈ ಆರೋಪದ ಬೆನ್ನಲ್ಲೇ ಆಧಾರ್ ವಿಭಾಗದ ಅಧಿಕಾರಿಗಳು ಬೃಹತ್ ಜಾಲದ ಮಾಹಿತಿಯೊಂದು ಬಯಲು ಮಾಡಿದ್ದಾರೆ. 5 ರಿಂದ 10 ಸಾವಿರ ರೂ. ಹಣ ಪಡೆದು ನಕಲಿ ಆಧಾರ್ ಕಾರ್ಡ್ ಸೃಷ್ಟಿ ಮಾಡುತ್ತಿರುವ ಕುರಿತು ಮಾಹಿತಿಯು ಹೊರಬಿದ್ದಿದೆ.

    ಅಕ್ರಮ ವಲಸಿಗರು ಬರುತ್ತಿರುವ ಆರೋಪದ ಹಿನ್ನೆಲೆ ಬೆಂಗಳೂರು (Bengaluru) ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಒಂದೇ ದಾಖಲೆ ಬಳಸಿ ದಿನಾಂಕ, ಹೆಸರು ಬಳಸಿ ಹತ್ತಾರು ಆಧಾರ್ ವಿತರಣೆ ಮಾಡಿರುವುದು ಬಯಲು ಮಾಡಿ ಶಾಕಿಂಗ್ ಮಾಹಿತಿ ಬಯಲಿಗೆಳಿದಿದ್ದಾರೆ.ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ನೀರಿನ ಒಳಹರಿವು – ಭರ್ತಿಗೆ ಕೇವಲ 10

    ಹಾಸನದ ಡಿಸಿ ಕಛೇರಿಯ ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಅನುಶ್ರೀ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸಿ ಸಿ.ಸತ್ಯಭಾಮ (DC C. Satyabhama) ಎದುರೇ ನಕಲಿ ಆಧಾರ್ ವಿತರಣೆ ಮಾಡಿರುವ ಕುರಿತು ಆಧಾರ್ ವಿತರಣೆ ವಿಭಾಗೀಯ ಅಧಿಕಾರಿ ವಿಜಯ್ ಕುಮಾರ್ ರಿವೀಲ್ ಮಾಡಿದ್ದಾರೆ. ನಕಲಿ ಆಧಾರ್ ನೀಡಿರುವ ಮಹಿಳೆಯ ವಿರುದ್ದ ಕೇಸ್ ದಾಖಲಿಸಿ, ತನಿಖೆ ನಡೆಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

  • ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    – 40 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ (Indian Citizenship) ಸಿಕ್ಕಿದೆ.

    ರಾಯಚೂರು (Raichur) ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ಬಾಂಗ್ಲಾ ವಲಸಿಗರು ಇಲ್ಲಿ ಆಶ್ರಯ ಪಡೆದಿದ್ದೇಗೆ?
    1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು. 1971ರ ಬಳಿಕ ಬಂದ ಕುಟುಂಬಗಳಿಗೆ ಪೌರತ್ವ ಹಾಗೂ ಯಾವುದೇ ಸೌಲಭ್ಯ ನೀಡಿರಲಿಲ್ಲ. ಪೌರತ್ವಕ್ಕಾಗಿ ನಿರಾಶ್ರಿತರು ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಇದ್ದರು. ಅದರಂತೆ ಐವರಿಗೆ ಪೌರತ್ವ ಸಿಕ್ಕಿದೆ. ಪೌರತ್ವ ಕೋರಿ ಒಟ್ಟು 146 ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆರ್.ಎಚ್ ಕ್ಯಾಂಪ್‌ನಲ್ಲಿ ವಾಸಿಸುತ್ತಿರುವ ಐವರಿಗೆ ಪೌರತ್ವ ದೊರೆತಿದೆ. ಇದನ್ನೂ ಓದಿ: Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: TB ಡ್ಯಾಮ್‌ ಪರಿಶೀಲನೆಗೆ ಬೆಂಗಳೂರು, ಹೈದರಾಬಾದ್‌, ಚೆನ್ನೈನಿಂದ ತಜ್ಞರ ತಂಡ ಆಗಮನ: ತಂಗಡಗಿ 

  • ಮೆಕ್ಸಿಕೊದಲ್ಲಿ ಟ್ರಕ್‌ ಅಪಘಾತಕ್ಕೆ 10 ವಲಸಿಗರು ಬಲಿ

    ಮೆಕ್ಸಿಕೊದಲ್ಲಿ ಟ್ರಕ್‌ ಅಪಘಾತಕ್ಕೆ 10 ವಲಸಿಗರು ಬಲಿ

    ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕನ್ (Mexico) ರಾಜ್ಯವಾದ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ಮಾಡುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿ 10 ಮಂದಿ ವಲಸಿಗರು ದಾರುಣ ಸಾವಿಗೀಡಾಗಿದ್ದಾರೆ. 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಚಿಯಾಪಾಸ್‌ನಲ್ಲಿರುವ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ವಲಸಿಗರನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ರಾಷ್ಟ್ರೀಯ ವಲಸೆ ಸಂಸ್ಥೆ (ಐಎನ್‌ಎಂ) ತಿಳಿಸಿದೆ. ಇದನ್ನೂ ಓದಿ: 350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’

    ಟ್ರಕ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ. ನಿಯಂತ್ರಣ ತಪ್ಪಿ ಟ್ರಕ್‌ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಮಗು ಸೇರಿದಂತೆ 10 ಮಂದಿ ವಲಸಿಗರು ಮೃತಪಟ್ಟಿದ್ದಾರೆ. ಗಾಯಗೊಂಡ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ವಲಸಿಗರನ್ನು ಒಳಗೊಂಡ ರಸ್ತೆ ಅಪಘಾತಗಳು ಮೆಕ್ಸಿಕೋದಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಮೆಕ್ಸಿಕೊದಿಂದ ಅಮೆರಿಕ ದೇಶಕ್ಕೆ ವಲಸೆ ಹೋಗುವವರ ಸಂಖ್ಯೆ ಹೆಚ್ಚು. ಸೂಕ್ತ ನಿರ್ವಹಣೆ ಇಲ್ಲದ ವಾಹಗಳಲ್ಲೇ ಹೆಚ್ಚಿನ ಮಂದಿ ವಲಸೆ ಹೋಗುತ್ತಾರೆ. ಹೀಗಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    2021ರ ಡಿಸೆಂಬರ್‌ನಲ್ಲೂ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸುಮಾರು 54 ಮಂದಿ ಮೃತಪಟ್ಟಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryan) ತತ್ತರಿಸಿದೆ. ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿದ್ದು, ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಶನಿವಾರವೂ ಅಲ್ಲಲ್ಲಿ ಮಳಿಗೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ಸತತ 3ನೇ ದಿನ ಹರಿಯಾಣದಲ್ಲಿ ಬುಲ್ಡೋಜರ್‌ (Bulldozer) ಕಾರ್ಯಾಚರಣೆ ನಡೆದಿದೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮು ಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ ಶಾಕ್ ನೀಡಿದೆ. ಸತತ 3ನೇ ದಿನವೂ ಭರ್ಜರಿ ಕಾರ್ಯಾಚರಣೆ ಮುಂದುವರಿಸಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

    ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ 24 ಮೆಡಿಕಲ್ ಸ್ಟೋರ್‌ಗಳು ಸೇರಿದಂತೆ 50-60 ಮಳಿಗೆಗಳನ್ನ ಧ್ವಂಸಗೊಳಿಸಲಾಗಿದೆ. ಶುಕ್ರವಾರ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಕ್ರಮ ವಲಸಿಗರು ನಿರ್ಮಿಸಿಕೊಂಡಿದ್ದ 250ಕ್ಕೂ ಅಧಿಕ ಗುಡಿಸಲುಗಳನ್ನ ಕೆಡವಲಾಗಿತ್ತು. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 102 ಕೇಸ್‌ಗಳು ದಾಖಲಾಗಿದ್ದು, 202 ಮಂದಿಯನ್ನ ಬಂಧಿಸಲಾಗಿದೆ. 80 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಘಟನೆ ಹಿಂದೆ ಯಾವುದೇ ಮಾಸ್ಟರ್ ಮೈಂಡಗ್ ಪತ್ತೆಯಾಗಿಲ್ಲ ಎಂದು ನುಹ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryana) ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳನ್ನೂ ಹಾನಿ ಮಾಡಿದ್ದಾರೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ (Bulldozer) ಶಾಕ್ ನೀಡಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ (Haryana Government) ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಭರ್ಜರಿ ತಯಾರಿ – ಶನಿವಾರ `ಕೈ’ನಾಯಕರ ಹೈವೋಲ್ಟೇಜ್ ಮೀಟಿಂಗ್

    ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಆದೇಶದಂತೆ ಗಲಭೆಕೋರರು ವಾಸವಿರುವ ಮನೆಗಳನ್ನ ತೆರವುಗೊಳಿಸಲಾಗಿದೆ. ಬಾಂಗ್ಲಾದೇಶದಿಂದ ಬಂದ ಅಕ್ರಮವಾಗಿ ಮೊದಲು ಅಸ್ಸಾಂನಲ್ಲಿ ವಾಸವಿದ್ದರು. ಅವರೀಗ ನೂಹ್ ಜಿಲ್ಲೆಯ ತೌರು ಪಟ್ಟಣದ ಮಹಮ್ಮದಪುರ ರಸ್ತೆಯ ವಾರ್ಡ್ ನಂ.1 ಹರಿಯಾಣ ನಗರ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದನ್ನೂ ಓದಿ: ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಸುಮಾರು ಒಂದು ಎಕರೆ ಜಮೀನಿನಲ್ಲಿ 250ಕ್ಕೂ ಅಧಿಕ ಗುಡಿಸಲುಗಳನ್ನ ನಿರ್ಮಿಸಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅವರು ಇದೇ ಜಾಗದಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಗುಡಿಸಲುಗಳನ್ನ ನೆಲಸಮಗೊಳಿಸಲಾಗಿದೆ.

    ಇನ್ನೂ ಗುರುಗ್ರಾಮದಲ್ಲಿ ಇವತ್ತೂ ಕೂಡ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ ನಡೆದ ಘರ್ಷಣೆಯಲ್ಲಿ ಐವರು ಬಲಿ ಆಗಿದ್ದಾರೆ. ನಿನ್ನೆ ಮೆವಾತ್‌ನಲ್ಲಿ ವಿಹೆಚ್‌ಪಿ- ಬಜರಂಗದಳದ ಶೋಭಾಯಾತ್ರೆ ವೇಳೆ ನಡೆದ ಮತ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ.

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 41 ಕೇಸ್‌ಗಳು ದಾಖಲಾಗಿದ್ದು, 176 ಮಂದಿಯನ್ನ ಬಂಧಿಸಲಾಗಿದೆ. 90 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯಲ್ಲಿ ಶಿಸ್ತು ಹೋಗಿದೆ – ಕಾಂಗ್ರೆಸ್‌ನಿಂದ ವಲಸೆ ಬಂದವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ಬಿಜೆಪಿಯಲ್ಲಿ ಶಿಸ್ತು ಹೋಗಿದೆ – ಕಾಂಗ್ರೆಸ್‌ನಿಂದ ವಲಸೆ ಬಂದವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ಹುಬ್ಬಳ್ಳಿ: ಬಿಜೆಪಿಯಲ್ಲಿ (BJP) ಶಿಸ್ತು ಹೋಗಿದೆ. ಕಾಂಗ್ರೆಸ್ (Congress) ಗಾಳಿ ನಮ್ಮ ಮೇಲೂ ಬಂದಿದೆ. ವಲಸಿಗರಿಂದ (Immigrants) ಬಿಜೆಪಿ ಹಾಳಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಕಾಂಗ್ರೆಸ್‌ನಿಂದ ವಲಸೆ ಬಂದವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಈಗ ಅನುಭವಿಸುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಅಲ್ಪ ಸ್ವಲ್ಪ ಅಶಿಸ್ತು ಬಂದಿದ್ದು ನಿಜ. ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು. ಮುಂದೆ ನಮ್ಮ ನಾಯಕರು ಬಾಲ ಕಟ್ ಮಾಡ್ತಾರೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಇದನ್ನೂ ಓದಿ: ಎಲ್ಲಾ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ – ಪ್ರಮೋದ್ ಮುತಾಲಿಕ್ ಕಿಡಿ

    ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಬಹಿರಂಗವಾಗಿ ಅಡ್ಜಸ್ಟ್ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಯಾರು ಕೂಡಾ ಈ ರೀತಿ ಮಾತನಾಡಬಾರದು. ಇದು 4 ಗೋಡೆಗಳ ಮಧ್ಯೆ ನಡೆಯಬೇಕಾದ ಚರ್ಚೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಕೇರಳಕ್ಕೆ ತೆರಳಲಿದ್ದಾನೆ ಬೆಂಗಳೂರು ಬಾಂಬ್‌ ಸ್ಫೋಟದ ಆರೋಪಿ ಮದನಿ

  • Greece Boat Tragedyː 300 ಪಾಕ್‌ ಪ್ರಜೆಗಳ ದುರಂತ ಸಾವು – ಬದುಕುಳಿದವರು 12 ಮಂದಿ ಮಾತ್ರ

    Greece Boat Tragedyː 300 ಪಾಕ್‌ ಪ್ರಜೆಗಳ ದುರಂತ ಸಾವು – ಬದುಕುಳಿದವರು 12 ಮಂದಿ ಮಾತ್ರ

    ಇಸ್ಲಾಮಾಬಾದ್‌: ಜೂನ್‌ 14ರಂದು ಗ್ರೀಸ್‌ನ ಕರಾವಳಿ ಪ್ರದೇಶದಲ್ಲಿ ನಡೆದ ಬೋಟ್‌ ದುರಂತದಲ್ಲಿ (Deadliest Shipping Disasters) 300 ಮಂದಿ ಪಾಕ್‌ ಪ್ರಜೆಗಳು (Pakistanis) ದುರಂತ ಸಾವಿಗೀಡಾಗಿದ್ದು, ಕೇವಲ 12 ಮಂದಿ ಮಾತ್ರವೇ ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು ಪಾಕಿಸ್ತಾನ ಸಚಿವಾಲಯ ಹೇಳಿದೆ.

    ಹೌದು. ಪ್ರತಿ ವರ್ಷ ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಯುವ ಸಮೂಹ ಉತ್ತಮ ಜೀವನ ಕಂಡುಕೊಳ್ಳುವ ಸಲುವಾಗಿ ಯೂರೋಪ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಕಳೆದ ವಾರ ವಲಸೆ ಹೋಗುತ್ತಿದ್ದ ವೇಳೆ ಗ್ರೀಸ್‌ ಕರಾವಳಿ ಪ್ರದೇಶದಲ್ಲಿ ನೂರಾರು ಜನರಿದ್ದ ಬೋಟ್‌ ಮುಳುಗಿ 300 ಮಂದಿ ಪಾಕ್‌ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ಪಾಕ್‌ ಪ್ರಜೆಗಳು ಮಾತ್ರ ಬದುಕುಳಿದಿರುವುದಾಗಿ ಪಾಕ್‌ ಸಚಿವಾಲಯ ಹೇಳಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ 10 ಮಂದಿಯನ್ನ ಬಂಧಿಸಲಾಗಿದೆ. ಪಾಕ್‌ ಆಡಳಿತ ಕಾಶ್ಮೀರದ 9 ಜನರನ್ನು ಬಂಧಿಸಲಾಗಿದೆ. ಮತ್ತೊಬ್ಬನನ್ನ ಗುಜರಾತ್‌ನಲ್ಲಿ ಬಂಧಿಸಲಾಗಿದೆ.

    ಶೋಕಾಚರಣೆ:
    ಬೋಟ್‌ ದುರಂತದಲ್ಲಿ ಸುಮಾರು 300 ಪಾಕಿಸ್ತಾನದ ಪ್ರಜೆಗಳ ದುರಂತ ಸಾವಿನ ಸ್ಮರಣಾರ್ಥವಾಗಿ ಸೋಮವಾರ (ಜೂನ್‌ 19) ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಗುತ್ತಿದೆ. ಇದೇ ವೇಳೆ ಪ್ರಧಾನಿ ಶೆಹಬಾಜ್ ಷರೀಫ್ ಅವರು ಕಳ್ಳಸಾಗಣೆಯಲ್ಲಿ ತೊಡಗಿರುವ ಏಜೆಂಟ್‌ಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    ಏನಿದು ಬೋಟ್‌ ದುರಂತ? 
    ಇದೇ ತಿಂಗಳ ಜೂನ್‌ 14ರಂದು ರಾತ್ರಿ ಗ್ರೀಸ್‌ ಕರಾವಳಿಯಿಂದ ಯುರೋಪ್‌ನತ್ತ ಹೊರಟಿದ್ದ ಹಡಗಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಜನರು ತುಂಬಿದ್ದರಿಂದ ಬೋಟ್‌ ಮುಳುಗಿ 79 ಮಂದಿ ಜಲಸಮಾಧಿಯಾಗಿದ್ದರು. ನೂರಾರು ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಸುಮಾರು 400 ರಿಂದ 750 ಮಂದಿ ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ಹಡಗಿನಲ್ಲಿದ್ದ ಹೆಚ್ಚಿನ ಸಂಖ್ಯೆಯ ವಲಸಿಗರು ಈಜಿಪ್ಟ್, ಸಿರಿಯಾ ಮತ್ತು ಪಾಕಿಸ್ತಾನದಿಂದ ಬಂದವರು ಎಂದು ಹೇಳಲಾಗಿತ್ತು. ಗ್ರೀಸ್‌ನಲ್ಲಿ ನಡೆದ ಈ ಹಡಗು ದುರಂತವನ್ನು ಪ್ರಸಕ್ತ ವರ್ಷದ ಮಹಾ ದುರಂತ ಎಂದೇ ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಕ್ಕಟ್ಟಿನ ನಡುವೆ 5 ವರ್ಷಗಳ ಬಳಿಕ ಅಮೆರಿಕ ರಾಜ್ಯ ಕಾರ್ಯದರ್ಶಿ ಚೀನಾಗೆ ಮೊದಲ ಭೇಟಿ

  • Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    ಅಥೆನ್ಸ್‌: ಅಗತ್ಯಕ್ಕಿಂತ ಹೆಚ್ಚು ವಲಸಿಗರು (Migrants) ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 79 ಮಂದಿ ಜಲಸಮಾಧಿಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿರುವ ಘಟನೆ ಗ್ರೀಸ್‌ನ (Greece) ಕರಾವಳಿ ಭಾಗದಲ್ಲಿ ನಡೆದಿದೆ.

    ಜೂನ್‌ 14ರಂದು ರಾತ್ರಿ ಗ್ರೀಸ್‌ ಕರಾವಳಿಯಿಂದ ಯುರೋಪ್‌ನತ್ತ (Europe) ಹೊರಟಿದ್ದ ಹಡಗಿನಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಮೀನುಗಾರಿಕೆ ಹಡಗಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರನ್ನ ಕೂರಿಸಿದ್ದರಿಂದ ಹಡಗು ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೋಟ್ ಮುಳುಗಿ ಮದುವೆಯಿಂದ ಹಿಂದಿರುಗುತ್ತಿದ್ದ 103 ಮಂದಿ ದುರ್ಮರಣ- ಹಲವರು ನಾಪತ್ತೆ

    ಯುರೋಪಿಯನ್ ರಕ್ಷಣಾ ತಂಡದ ಪ್ರಕಾರ ಸುಮಾರು 750 ಮಂದಿ ಹಡಗಿನಲ್ಲಿದ್ದರು ಎನ್ನಲಾಗಿದೆ. ಆದ್ರೆ ಯುಎನ್‌ ವಲಸಿಗ ಏಜೆನ್ಸಿ 400 ಮಂದಿ ಹಡಗಿನಲ್ಲಿದ್ದರು ಎಂದು ಹೇಳಿದೆ. ಹಡಗಿನಲ್ಲಿದ್ದ ಹೆಚ್ಚಿನ ಸಂಖ್ಯೆಯ ವಲಸಿಗರು ಈಜಿಪ್ಟ್, ಸಿರಿಯಾ ಮತ್ತು ಪಾಕಿಸ್ತಾನದಿಂದ ಬಂದವರು ಎಂದು ಹೇಳಲಾಗಿದೆ.

    ಗ್ರೀಸ್‌ನಲ್ಲಿ ನಡೆದ ಈ ಹಡಗು ದುರಂತವನ್ನು ಪ್ರಸಕ್ತ ವರ್ಷದ ಮಹಾ ದುರಂತ ಎಂದೇ ಹೇಳಲಾಗುತ್ತಿದೆ. ಸಮುದ್ರದಲ್ಲಿ ಮುಳುಗಿದ್ದ 104ಕ್ಕೂ ಹೆಚ್ಚು ಜನರನ್ನ ರಕ್ಷಿಸಲಾಗಿದೆ. ಇನ್ನೂ ಸಾಕಷ್ಟು ಮಂದಿ ನೀರಿನಲ್ಲಿ ಮುಳುಗಿದ್ದು ಅವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶವಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

    ಬುಧವಾರ ತಡರಾತ್ರಿ ದುರಂತ ಸಂಭವಿಸಿದ್ದು, ಕೂಡಲೇ ಕರಾವಳಿ ಪಡೆ, ನೌಕಾಪಡೆ ಅಧಿಕಾರಿಗಳು ದುರಂತ ನಡೆದ ಸ್ಥಳಕ್ಕೆ ಧಾವಿಸಿ, ಸಾಧ್ಯವಾದಷ್ಟು ಜನರನ್ನ ರಕ್ಷಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೆದರ್ಲೆಂಡ್‌ನಲ್ಲಿ ಮಹಿಳೆಯರು, ಮಕ್ಕಳು, ವಯಸ್ಕರಿಗೂ ಸನ್ ಕ್ರೀಮ್ ಉಚಿತ, ಎಲ್ಲರಿಗೂ ಖಚಿತ – ಏಕೆ ಗೊತ್ತೇ?