Tag: ವಲಸೆ ಕಾರ್ಮಿಕರು

  • ರೈಲ್ವೇ ಮೂಲಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ 13 ಜಿಲ್ಲೆಗಳ ಜನರು

    ರೈಲ್ವೇ ಮೂಲಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ 13 ಜಿಲ್ಲೆಗಳ ಜನರು

    ಹುಬ್ಬಳ್ಳಿ/ಧಾರವಾಡ: ದೆಹಲಿ-ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ಆಗಮಿಸಿದ, ರಾಜ್ಯದ ವಿವಿಧ 13 ಜಿಲ್ಲೆಗಳ 293 ಪ್ರಯಾಣಿಕರು ಇಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇಳಿದುಕೊಂಡರು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತರಾದ ಕೃಷ್ಣಕಾಂತ್, ಎಂ.ಬಿ.ಬಸರಗಿ, ತಹಶೀಲ್ದಾರರಾದ ಶಶಿಧರ್ ಮಾಡ್ಯಾಳ, ಪ್ರಕಾಶ್ ನಾಶಿ, ವಾಕರಸಾಸಂ ಅಧಿಕಾರಿಗಳಾದ ಹೆಚ್.ಆರ್.ರಾಮನಗೌಡರ್, ಅಶೋಕ್ ಪಾಟೀಲ, ರೇಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದೂರದ ಪ್ರಯಾಣದಿಂದ ತವರಿಗೆ ಮರಳಿದ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

    ಶಿವಮೊಗ್ಗ-67, ಬೆಳಗಾವಿ-51, ಚಿಕ್ಕಮಗಳೂರು-05, ಉತ್ತರ ಕನ್ನಡ-09, ಕೊಪ್ಪಳ-10, ಚಿತ್ರದುರ್ಗ-12, ದಕ್ಷಿಣ ಕನ್ನಡ-42, ವಿಜಯಪುರ-32, ಹಾವೇರಿ-14, ಬಾಗಲಕೋಟ-13, ಧಾರವಾಡ-32, ಹಾಸನ -5 ಹಾಗೂ ಗದಗ ಜಿಲ್ಲೆಯ ಒಬ್ಬರು ಸೇರಿ ಒಟ್ಟು 293 ಜನರನ್ನು ಆಯಾ ಜಿಲ್ಲಾಡಳಿತಗಳು ಕಳುಹಿಸಿದ್ದ ಸಾರಿಗೆ ಬಸ್ಸುಗಳು ಹಾಗೂ ಇತರ ವಾಹನಗಳ ಮೂಲಕ ಕಳುಹಿಸಿಕೊಡಲಾಯಿತು.

    ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಸ್ವತಃ ಅಧಿಕಾರಿಗಳೇ ಮುಂದೆ ನಿಂತು ಸಹಾಯ ಮಾಡಿದ ರೀತಿಗೆ ಜನತೆ ಮೆಚ್ಚುಗೆ ಸೂಚಿಸಿದರು. ಬಸ್ಸಿನಲ್ಲಿ ತೆರಳಿದ ಪ್ರಯಾಣಿಕರಿಗೆ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಕುಡಿಯುವ ನೀರು, ಉಪಹಾರ ಪೂರೈಸಲಾಯಿತು. ದೂರದ ಪ್ರಯಾಣದಿಂದ ದಣಿದ ಜೀವಗಳು ಧಾರವಾಡ ಜಿಲ್ಲಾಡಳಿತದ ಶಿಸ್ತು ಮತ್ತು ಕರ್ತವ್ಯ ನಿರ್ವಹಣೆಯ ರೀತಿಗೆ ಹರ್ಷಚಿತ್ತರಾಗಿ ತವರಿನತ್ತ ಮುಖ ಮಾಡಿದರು.

  • ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ

    ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ

    – ಶ್ರಮಿಕ್ ರೈಲು ಮೂಲಕ ಬಿಹಾರಿನತ್ತ 1,452 ವಲಸಿಗರು

    – ಕುಟುಂಬಸ್ಥರಂತೆ ಆದರದಿಂದ ಕಳುಹಿಸಿಕೊಟ್ಟ ಜಿಲ್ಲಾಡಳಿತ

    – ಭಾವುಕರಾದ ವಲಸೆ ಕಾರ್ಮಿಕರು

    ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು ತಮ್ಮ ತವರಿನತ್ತ ತೆರಳಿದರು. ಸುರಕ್ಷಿತವಾಗಿ ಊರು ತಲುಪಿ ಮತ್ತೆ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್‍ಪಿ ಸಿ.ಕೆ.ಬಾಬಾ, ಜಿ.ಪಂ. ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಶುಭಹಾರೈಸಿ ಬೀಳ್ಕೊಟ್ಟರು.

    ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1,452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆಯಿಂದಲೇ ವಿಶೇಷ ವೈದ್ಯಕೀಯ ತಪಾಸಣೆ ನಡೆಸಿ, ಪ್ರಮಾಣ ಪತ್ರ ವಿತರಿಸಿ ಹಾಗೂ ಅಲ್ಲಿಯೇ 840 ರೂ.ಗಳ ಟಿಕೆಟ್ ನೀಡಿ ಬಸ್‍ಗಳ ಮೂಲಕ ರೈಲ್ವೆ ನಿಲ್ದಾಣಕ್ಕೆ ತಲುಪಿಸಲಾಯಿತು. ಅಲ್ಲದೆ ಅವರಿಗೆ ನೀಡಲಾದ ಟಿಕೆಟ್, ಹಿಂಬದಿ ಬರೆದಿದ್ದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ವ್ಯವಸ್ಥಿತವಾಗಿ ಅವರಿಗೆ ಆಸನದ ವ್ಯವಸ್ಥೆ ಕಲ್ಪಿಸಿ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಕುಟುಂಬಸ್ಥರಂತೆ ಆದರದಿಂದ ಕಳುಹಿಸಿಕೊಟ್ಟರು.

    ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಉದುದ್ದೇಶದಿಂದ ಪ್ರತಿಯೊಬ್ಬರಿಗೂ ಎರಡು ಬ್ರೇಡ್ ಪ್ಯಾಕ್, ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿರ್ಚಿ ಬಜಿ ಹಾಗೂ ಇನ್ನಿತರ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಜಿಲ್ಲಾಡಳಿತದ ವತಿಯಿಂದ ವಿತರಿಸಲಾಯಿತು.

    ರೈಲ್ವೆ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದಂತೆ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು. ರೆಡ್‍ಕ್ರಾಸ್ ಸಂಸ್ಥೆಯವರು ಮಾಸ್ಕ್ ಗಳನ್ನು ವಿತರಿಸಿದರು. ಈ ಎಲ್ಲ ಆತಿಥ್ಯವನ್ನು ನೋಡಿದ ವಲಸೆ ಕಾರ್ಮಿಕರು ಭಾವುಕರಾಗಿ ಸಂತಸದಿಂದ ಸಿಬ್ಬಂದಿಯತ್ತ ಕೈ ಬೀಸಿದರು.

    ರೈಲು ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಈ ರೈಲು ಬಿಹಾರದ ಸಹಸ್ರಾಗೆ ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯಾಗಿರಲಿದೆ. ಮಾರ್ಗ ಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.

    ಈಗ ಒಂದು ರೈಲು ಬಿಹಾರಕ್ಕೆ ತೆರಳುತ್ತಿದ್ದು, ಇನ್ನೂ ಹೆಚ್ಚಿನ ವಲಸಿಗರು ಬಿಹಾರಕ್ಕೆ ತೆರಳುವುದಾದರೆ ಅವಕಾಶ ಮಾಡಿಕೊಡಲಾಗುವುದು. ಅಲ್ಲದೆ ಉತ್ತರ ಪ್ರದೇಶಕ್ಕೆ ಎರಡು ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಬೆಳಗ್ಗೆ 10ಕ್ಕೆ ಹೊಸಪೇಟೆ ಮತ್ತು ಬಳ್ಳಾರಿ ರೈಲು ನಿಲ್ದಾಣದ ಮೂಲಕ ಉತ್ತರ ಪ್ರದೇಶದ ವಲಸಿಗರು ತೆರಳಲಿದ್ದಾರೆ. ಈಗಾಗಲೇ ಅವರೆಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಟಿಕೆಟ್ ಸಹ ನೀಡಲಾಗಿದೆ ಎಂದು ವಿವರಿಸಿದರು.

  • ಮಗ ಸಂಕಷ್ಟದಲ್ಲಿದ್ದಾಗ ತಾಯಿ ಸಾಲ ನೀಡುವುದಿಲ್ಲ, ನೆರವು ನೀಡುತ್ತಾಳೆ – ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಲು ‘ರಾಗಾ’ ಒತ್ತಾಯ

    ಮಗ ಸಂಕಷ್ಟದಲ್ಲಿದ್ದಾಗ ತಾಯಿ ಸಾಲ ನೀಡುವುದಿಲ್ಲ, ನೆರವು ನೀಡುತ್ತಾಳೆ – ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಲು ‘ರಾಗಾ’ ಒತ್ತಾಯ

    ನವದೆಹಲಿ : ಕೇಂದ್ರ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಬೇಕು. ವಲಸೆ ಕಾರ್ಮಿಕರು ಮತ್ತು ರೈತರ ಖಾತೆಗಳಿಗೆ ನೇರವಾಗಿ ಹಣ ಹಾಕುವಂತೆ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

    ದೇಶದ ಹಲವು ರಾಜ್ಯಗಳ ಪತ್ರಕರ್ತರ ಜೊತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಂವಾದದಲ್ಲಿ ಮಾತನಾಡಿದ ಅವರು, ಅವಶ್ಯಕತೆ ಇರುವವರ ಖಾತೆಗೆ ಹಣ ಹಾಕಿ, ಬಡವರ ಜೇಬಿಗೆ ನೇರವಾಗಿ ಹಣ ತಲುಪಬೇಕು. ಬಡ ಜನರಿಗೆ ಲೋನ್ ಅವಶ್ಯಕತೆ ಇಲ್ಲ. ಅವರಿಗೆ ಬೇಕಿರುವುದು ಆರ್ಥಿಕ ನೆರವು ಅವರ ಖಾತೆಗಳಿಗೆ, ಕೈಗಳಿಗೆ ನೇರ ಹಣ ವರ್ಗಾಯಿಸಿ ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

    ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಭಾರತದ ಭವಿಷ್ಯದ ಮಕ್ಕಳು ರೋಡ್ ನಲ್ಲಿವೆ. ಪ್ರತಿನಿತ್ಯ ಕಾರ್ಮಿಕರು ವಲಸೆ ಹೋಗುವುದು ನಿಲ್ಲುತ್ತಿಲ್ಲ. ದೇಶ ಅವರ ನೆರವಿಗೆ ನಿಲ್ಲಬೇಕು ಎಂದರು. ಮಗ ಸಂಕಷ್ಟದಲ್ಲಿದ್ದಾಗ ತಾಯಿ ಸಾಲ ನೀಡುವುದಿಲ್ಲ ನೆರವು ನೀಡುತ್ತಾಳೆ. ಹಾಗೇ ಸರ್ಕಾರವು ಜನರ ನೆರವಿಗೆ ಮುಂದಾಗಬೇಕು. ನೇರವಾಗಿ ಹಣದ ವರ್ಗಾವಣೆ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೆಚ್ಚಿಸಲಿದೆ. ಇದರ ಜೊತೆಗೆ ಮನರೇಗಾದಡಿ ಕೂಲಿ ದಿನಗಳನ್ನು 200ಕ್ಕೆ ಹೆಚ್ಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಲಾಕ್‍ಡೌನ್ ಎಚ್ಚರಿಕೆಯಿಂದ ಹಂತ ಹಂತವಾಗಿ ಸಡಿಲಿಸಬೇಕು. ದುರ್ಬಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಲಾಕ್‍ಡೌನ್ ವಿನಾಯತಿ ನೀಡಬೇಕು. ಲಾಕ್‍ಡೌನ್ ವಿನಾಯತಿಯಿಂದ ತೊಂದರೆಗಳಾಗಬಾರದು ಸರ್ಕಾರ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

  • ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

    ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

    – ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

    ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು.

    ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.

    ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಹ ಆಗಿದ್ದಾರೆ. 06 ಸಕ್ರಿಯ ಪ್ರಕರಣಗಳಿದ್ದು ಅವರಲ್ಲಿ ಇಂದು ಸಹ ಇಬ್ಬರು ಡಿಸ್ಚಾರ್ಜ್ ಆಗಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇವಲ 4 ಆ್ಯಕ್ಟೀವ್ ಪ್ರಕರಣಗಳಿರಲಿವೆ ಅಂತ ಸಚಿವ ಸುಧಾಕರ್ ಮಾಹಿತಿ ನೀಡಿದರು.

    ಕೊರೊನಾ ಪರೀಕ್ಷೆಗಳನ್ನ ಮಾಡಿರುವುದರಲ್ಲಿ ಇಡೀ ದೇಶದಲ್ಲಿ ಚಿಕ್ಕಬಳ್ಳಾಪುರ ನಂಬರ್ 1 ಮೊದಲ ಸ್ಥಾನದಲ್ಲಿದೆ. ಕಾರಣ ಜಿಲ್ಲೆಯಲ್ಲಿ ಇದುವರೆಗೂ 6,239 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರಾಸರಿ ಆಧಾರದ ಮೇರೆಗೆ 243 ಮಾದರಿ ಪರೀಕ್ಷೆಗಳಿಗೆ ಒಬ್ಬ ಸೋಂಕಿತರಾಗಿದ್ದಾರೆ. ಹೀಗಾಗಿ ಅತಿ ಹೆಚ್ಚಿನ ಟೆಸ್ಟ್ ಗಳನ್ನ ಮಾಡುವ ಮೂಲಕ ದೇಶದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಿದೆ ಎಂದರು.

    ಈ ಕಷ್ಟಕಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ಅರ್ಥಿಕವಾಗಿ ಪುನಶ್ಚೇತನವಾಗಬೇಕು ಅಂತ ಸರ್ಕಾರ ಹಲವು ಪ್ಯಾಕೇಜ್ ಗಳನ್ನ ಘೋಷಣೆ ಮಾಡಿದೆ. ಇದರ ಜೊತೆ ಜೊತೆ ಎಲ್ಲರ ಜೀವವನ್ನು ಉಳಿಸುವ ಕೆಲಸವನ್ನು ಹೆಲ್ತ್ ವಾರಿಯರ್ಸ್ ಹಾಗೂ ಆಶಾಕಾರ್ಯಕರ್ತೆಯರು, ವೈದ್ಯರು, ಅನೇಕ ಇಲಾಖೆಯ ಆಧಿಕಾರಿಗಳು ಕೊರೊನಾ ನಿಗ್ರಹ ಮಾಡಲು ಭಾಗಿಯಾಗಿದ್ದು ಅವರಿಗೆಲ್ಲಾ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರು.

    ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ಸರ್ಕಾರ ಸ್ಪಂದಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ ರೈತನಿಗೆ 5,000 ಪ್ರೋತ್ಸಾಹ ಧನ. ಆಶಾಕಾಯಕರ್ತೆಯರಿಗೆ 3,000 ಪ್ರೋತ್ಸಾಹ ಧನ ನೀಡಲಾಗುವುದು. ಕೊರೊನಾ ವಾರಿಯರ್ಸ್ ಗೆ ಆರೋಗ್ಯ ವಿಮೆ ಮಾಡಿಸಲಾಗಿದೆ. ಕೊರೊನಾ ಸೋಂಕಿತರು ಹೆಚ್ಚಾಗುತ್ತಾರೆ ಅದಕ್ಕಾಗಿ ಆತಂಕ ಬೇಡ. ಇವತ್ತು ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ವಿದೇಶದಿಂದ ಕನ್ನಡಿಗರು ಆಗಮಿಸುತ್ತಿದ್ದಾರೆ. ಇತರೆ ರಾಜ್ಯಗಳಿಂದಲೂ ನಮ್ಮ ರಾಜ್ಯದವರು ಆಗಮಿಸುತ್ತಿದ್ದಾರೆ. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ಪ್ರಕರಣಗಳ ವರದಿ ಹೆಚ್ಚಾಗುತ್ತಿದೆ. ಉದಾಹರಣೆಗೆ ಹೇಳೋದಾದರೆ ನಿನ್ನೆ ದುಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಅತೀ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಸಮುದಾಯಕ್ಕೆ ಹರಡದಂತೆ ಜನ ಕೂಡ ಎಚ್ಚರ ವಹಿಸಬೇಕು ಎಂದರು.

    ವಲಸೆ ಕಾರ್ಮಿಕರು ವಿಚಾರದಲ್ಲಿ ಕ್ರಮ ಕೈಗೊಳುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೇ ಒಮ್ಮೆಲೆ ಲಕ್ಷಾಂತರ ಮಂದಿ ಕಾರ್ಮಿಕರನ್ನು ಕಳುಹಿಸಬೇಕಾದರೆ ಸಮಸ್ಯೆ ಆಗುತ್ತದೆ. ಹೀಗಾಗಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವುದು. ನಮ್ಮ ಜವಾಬ್ದಾರಿ, ಹಂತ ಹಂತವಾಗಿ ನಾವು ಕಳುಹಿಸಿಕೊಡುತ್ತೇವೆ. ಅಲ್ಲಿಯವರೆಗೂ ವಲಸೆ ಕಾರ್ಮಿಕರು ಆತುರ ಪಡಬೇಡಿ. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನ ಕರೆತರುವುದು ನಮ್ಮ ಕರ್ತವ್ಯ ನಾವು ಅದನ್ನ ಮಾಡ್ತೇವೆ ಎಂದರು.

  • ಬೆಳ್ಳಂಬೆಳಗ್ಗೆ ಭೀಕರ ಅಪಘಾತ- ಟ್ರಕ್‍ಗಳು ಡಿಕ್ಕಿ ಹೊಡೆದು 23 ಪ್ರವಾಸಿ ಕಾರ್ಮಿಕರ ದುರ್ಮರಣ

    ಬೆಳ್ಳಂಬೆಳಗ್ಗೆ ಭೀಕರ ಅಪಘಾತ- ಟ್ರಕ್‍ಗಳು ಡಿಕ್ಕಿ ಹೊಡೆದು 23 ಪ್ರವಾಸಿ ಕಾರ್ಮಿಕರ ದುರ್ಮರಣ

    – ಆಹಾರ ಪ್ಯಾಕೆಟ್ ಸಾಗಿಸ್ತಿದ್ದ ಟ್ರಕ್‍ನಲ್ಲಿ ಪ್ರಯಾಣ

    ಲಕ್ನೋ: ಎರಡು ಟ್ರಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 23 ಮಂದಿ ಪ್ರವಾಸಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ.

    ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ಟ್ರಕ್‍ಗೆ ಮತ್ತೊಂದು ಟ್ರಕ್ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 23 ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಈ ಅಪಘಾತದಲ್ಲಿ 15 ರಿಂದ 20 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

     

    ಕೊರೊನಾ ಲಾಕ್‍ಡೌನ್‍ನಿಂದಾಗಿ ಪ್ರವಾಸಿ ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುತ್ತಿದ್ದರು. ಹೀಗಾಗಿ ಕಾರ್ಮಿಕರು ರಾಜಸ್ಥಾನದಿಂದ ಟ್ರಕ್ ಮೂಲಕ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ತಮ್ಮ ಗ್ರಾಮಗಳಿಗೆ ಹೋಗುತ್ತಿದ್ದರು. ಲಾಕ್‍ಡೌನ್‍ನಿಂದಾಗಿ ತಮ್ಮ ಮನೆಗೆ ಹೋಗಲು ಯಾವುದೇ ಬಸ್ ವ್ಯವಸ್ಥೆಗಳಿರಲಿಲ್ಲ. ಹೀಗಾಗಿ ಕಾರ್ಮಿಕರು ಆಹಾರ ಪ್ಯಾಕೆಟ್‍ಗಳನ್ನು ಸಾಗಿಸುತ್ತಿದ್ದ ಟ್ರಕ್‍ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

    ಈ ಅಪಘಾತ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತವಾದ ತಕ್ಷಣ ಕಾರ್ಮಿಕರಿಗೆ ಸ್ಥಳೀಯರು ಸಹಾಯ ಮಾಡಿದ್ದು, ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಔರೈಯಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ

    ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ

    ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ.

    ಶ್ರಮಿಕ್ ವಿಶೇಷ ರೈಲಿನ ಮೂಲಕ ಮಹಾರಾಷ್ಟ್ರದ ಸಿಂಧದುರ್ಗದಿಂದ ಒಟ್ಟು 1,590 ಕಾರ್ಮಿಕರು ಬೆಳಗಿನ ಜಾವ 4 ಗಂಟೆಗೆ ವಿಜಯಪುರಕ್ಕೆ ಬಂದಿಳಿಯಲಿದ್ದಾರೆ. ಜಿಲ್ಲೆಗೆ ಆಗಮಿಸುವ ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

    ಕಾರ್ಮಿಕರನ್ನು ಅವರ ತಾಲೂಕುಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ರೈಲ್ವೇ ನಿಲ್ದಾಣದಿಂದಲೇ ಕಾರ್ಮಿಕರನ್ನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.

  • ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

    ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

    – ಗೃಹಸಾಲದಲ್ಲಿ ಸಬ್ಸಿಡಿ ಸಹಾಯಧನ

    ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ, ರೈತರಿಗೆ ಸಾಲದ ಬಡ್ಡಿಯಿಂದ ವಿನಾಯಿತಿ – ಇದು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದ ಪ್ಯಾಕೇಜ್ ಗಳ ಮುಖ್ಯಾಂಶಗಳು.

    ಕೈಗಾರಿಕೆ, ಉದ್ಯಮ, ರಿಯಲ್ ಎಸ್ಟೇಟ್, ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದರೆ ಇಂದು ಬಡವರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಪ್ರಕಟ ಮಾಡಿದೆ.

    ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಲಸೆ ಕಾರ್ಮಿಕರು, ರೈತರಿಗೆ ಚೈತನ್ಯ ತುಂಬುವ ಕೆಲಸವನ್ನು ಮಾಡಿದರು. ಒನ್ ನೇಷನ್, ಒನ್ ರೇಷನ್ ಕಾರ್ಡ್ ಮಹತ್ವದ ಘೋಷಣೆಯನ್ನು ಜಾರಿಗೊಳಿಸಿದರು.

    ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು:
    * ಸರ್ಕಾರ ಲಾಕ್‍ಡೌನ್ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದೆ. 25 ಸಾವಿರ ಕೋಟಿಯ 25 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಾಗುವುದು. ಇದು 3 ಕೋಟಿ ರೈತರಿಗೆ ಲಾಭವಾಗಲಿದೆ. * 3 ಕೋಟಿ ರೈತರಿಗೆ ಸಾಲದ ಬಡ್ಡಿಯಿಂದ ಪಾವತಿಯಿಂದ ವಿನಾಯ್ತಿ.

    * ಬೀದಿ ಬದಿ ವ್ಯಾಪಾರಿ, ಮನೆಯಲ್ಲಿ ಕೆಲಸ ಮಾಡೋರಿಗೆ 10 ಸಾವಿರದವರೆಗೆ ಸಾಲ ಯೋಜನೆ. ಒಂದು ತಿಂಗಳಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿಗೆ ತರಲಾಗುವುದು. ಸಾಲ ಪಡೆದ ವ್ಯಾಪಾರಸ್ಥರು ಡಿಜಿಟಲ್ ಮೂಲಕ ವ್ಯವಹರಿಸಿದ್ರೆ ಹೆಚ್ಚು ಲಾಭ ಸಿಗಲಿದೆ. ಇದಕ್ಕಾಗಿ 5 ಸಾವಿರ ಕೋಟಿ ರೂ. ಮೀಸಲು. ಈ ಯೋಜನೆಯಿಂದ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ ಸಿಗಲಿದೆ.

    * ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ 3500 ಕೋಟಿ ರೂ. ಅನುದಾನದಲ್ಲಿ ಉಚಿತ ಪಡಿತರ ವಿತರಣೆ. ಪ್ರತಿ ವ್ಯಕ್ತಿಗೆ ಅಕ್ಕಿ ಅಥವಾ ಗೋಧಿ 5 ಕೆ.ಜಿ ಹಾಗೂ ಕುಟುಂಬಕ್ಕೆ 1 ಕೆ.ಜಿ. ಕಾಳು ರಾಜ್ಯ ಸರ್ಕಾರಗಳಿಂದ ನೀಡಲಾಗುವುದು. ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ವಿತರಣೆ.

    * ನ್ಯಾಷನಲ್ ಪೋರ್ಟಬಿಟಲಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಯಾವುದೇ ರಾಜ್ಯದ ರೇಷನ್ ಕಾರ್ಡ್ ಇದ್ರೂ ಅದನ್ನ ನೀವು ಇರುವ ಸ್ಥಳದಲ್ಲಿ ಬಳಸಬಹುದು.

    * ಕೊರೊನಾ ಸಮಯದಲ್ಲಿ ಕೃಷಿ ಕ್ಷೇತ್ರಕ್ಕೆ 63 ಲಕ್ಷ ಸಾಲವನ್ನು ಮಂಜೂರು ಮಾಡಲಾಗಿದೆ. ಈ ಸಾಲದ ಒಟ್ಟು ಮೊತ್ತ 86,600 ಕೋಟಿ ರೂಪಾಯಿ ಇದೆ.

    * ನಗರ ಪ್ರದೇಶದಲ್ಲಿ ವಾಸವಾಗಿರುವ ಬಡವರಿಗೆ ಎಸ್‍ಡಿಆರ್‍ಎಫ್ ಮೂಲಕ 11 ಸಾವಿರ ಕೋಟಿ ಮಂಜೂರು ಮಾಡಲಾಗುವುದು. ನಿರಾಶ್ರಿತರರಿಗೆ ಸರ್ಕಾರದಿಂದ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಕಲ್ಪಿಸೋದರ ಜೊತೆಗೆ ಹಣದ ವ್ಯವಸ್ಥೆಯನ್ನು ಮಾಡಲಾಗುವುದು. 12 ಸಾವಿರ ಸ್ವಸಹಾಯ ಸಂಘಗಳಿಂದ 3 ಕೋಟಿ ಮಾಸ್ಕ್ ಮತ್ತು 1.20 ಲಕ್ಷ ಲೀಟರ್ ಸ್ಯಾನಿಟೈಸರ್ ಉತ್ಪಾದಿಸಲಾಗುವುದು, ಇದು ಪರೋಕ್ಷವಾಗಿ ನಗರ ಪ್ರದೇಶದಲ್ಲಿ ಉದ್ಯೋಗದ ದಿನಗಳನ್ನು ಹೆಚ್ಚಿಸುತ್ತದೆ.

    * ದೇಶಾದ್ಯಂತ ಪೈಸಾ ಪೋರ್ಟಲ್ ಜಾರಿ. ಹೊಸದಾಗಿ 7,200 ಸ್ವಸಹಾಯ ಸಂಘಗಳು ಕಾರ್ಯ ಆರಂಭಗೊಂಡಿವೆ.
    * ಗ್ರಾಮೀಣ ಬ್ಯಾಂಕುಗಳಿಗೆ ನಬಾರ್ಡ್ ನಿಂದ 29,500 ಕೋಟಿ ಸಹಾಯ.
    * ವಲಸೆ ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದರ ನೇರ ಲಾಭ ತಲುಪಿಸುವ ಗುರಿ ಇದೆ.

    * ನಗರಗಳಿಂದ ಗ್ರಾಮಗಳಿಗೆ ತೆರಳಿರೋ ವಲಸೆ ಕಾರ್ಮಿಕರಿಗೆ ಪಂಚಾಯ್ತಿ ಮೂಲಕ ನರೇಗಾ ಯೋಜನೆ ಅಡಿ ಉದ್ಯೋಗ ಸೃಷ್ಟಿಸಲಾಗುವುದು. ಕನಿಷ್ಠ ವೇತನವನ್ನು 182ರಿಂದ 202 ರೂ.ಗಳಿಗೆ ಹೆಚ್ಚಿಸಲಾಗುತ್ತದೆ. ಪ್ರತಿಯೊಬ್ಬ ದಿನಗೂಲಿ ಕಾರ್ಮಿಕರ ಆರೋಗ್ಯ ತಪಾಸಣೆಗೆ ಪ್ರಾಮುಖ್ಯತೆ ನೀಡಲಾಗುವುದು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗಾಗಿ ಹೊಸ ಮಾರ್ಗದರ್ಶಿ ಪ್ರಕಟ.

    * ಗ್ರಾಮ ಮತ್ತು ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ವಲಸೆ ಕಾರ್ಮಿಕರಿಗೆ ಬಾಡಿಗೆ ಮನೆ. ಈ ಕುರಿತು ಸಂಬಂಧಿಸಿದ ಇಲಾಖೆಯಿಂದ ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ. ನಗರದ ಬಡವರಿಗೆ ಬಾಡಿಗೆ ಮನೆಗಳನ್ನು ಸಂಕೀರ್ಣಗಳಾಗಿ ಮಾಡುವ ಪ್ಲಾನ್

    * ಅತಿ ಸಣ್ಣ ಸಾಲದಾರರಿಗೆ ಮುದ್ರಾ ಶಿಶು ಯೋಜನೆಯಡಿಯ ಸಾಲ. ಮುದ್ರಾ ಯೋಜನೆಗಾಗಿ 15 ಸಾವಿರ ಕೋಟಿ. 12 ತಿಂಗಳು ಮುದ್ರಾ ಯೋಜನೆಯಡಿ (ಶಿಶು ಲೋನ್) ಶೇ.2ರಷ್ಟು ಬಡ್ಡಿ ವಿನಾಯ್ತಿ. ಈ ಯೋಜನೆಯಿಂದ ಸುಮಾರು 3 ಕೋಟಿ ಜನರಿಗೆ ಲಾಭ ಸಿಗಲಿದೆ.

    * ಮಧ್ಯಮ ವರ್ಗಕ್ಕೆ ಗೃಹ ಸಾಲದಲ್ಲಿ ಸಬ್ಸಿಡಿ. ಈ ಸಬ್ಸಿಡಿಯ ಅವಧಿಯನ್ನು ಮಾರ್ಚ್ 2021ರವರೆಗೆ ವಿಸ್ತರಿಸಲಾಗುವುದು. 6 ರಿಂದ 18 ಲಕ್ಷ ಆದಾಯವುಳ್ಳ ಮಧ್ಯಮ ವರ್ಗಕ್ಕೆ ಸಬ್ಸಿಡಿ ಸಿಗಲಿದೆ.

    * ಉದ್ಯೋಗ ಸೃಷ್ಟಿಗಾಗಿ 6 ಸಾವಿರ ಕೋಟಿ ಅನುದಾನ. ಬುಡಕಟ್ಟು ಮತ್ತು ಆದಿವಾಸಿಗಳಿಗೆ ತೋಟಗಾರಿಕೆ ಮತ್ತು ಅರಣ್ಯೀಕರಣದಲ್ಲಿ ಉದ್ಯೋಗ ಸೃಷ್ಟಿ.

    * ನಬಾರ್ಡ್ ಮೂಲಕ ರೈತರಿಗೆ 30 ಸಾವಿರ ಕೋಟಿ ತುರ್ತು ಹಣಕಾಸು ನೆರವು. ಮೀನುಗಾರಿಗೆ ಮತ್ತು ಹೈನುಗಾರಿಕೆ ಸೇರಿದಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ಕೋಟಿ ಸಾಲ ವಿತರಣೆ.

  • ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

    ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

    – ಗೃಹಸಾಲದಲ್ಲಿ ಸಬ್ಸಿಡಿ ಸಹಾಯಧನ

    ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ, ರೈತರಿಗೆ ಸಾಲದ ಬಡ್ಡಿಯಿಂದ ವಿನಾಯಿತಿ – ಇದು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದ ಪ್ಯಾಕೇಜ್ ಗಳ ಮುಖ್ಯಾಂಶಗಳು.

    ಕೈಗಾರಿಕೆ, ಉದ್ಯಮ, ರಿಯಲ್ ಎಸ್ಟೇಟ್, ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದರೆ ಇಂದು ಬಡವರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಪ್ರಕಟ ಮಾಡಿದೆ.

    ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಲಸೆ ಕಾರ್ಮಿಕರು, ರೈತರಿಗೆ ಚೈತನ್ಯ ತುಂಬುವ ಕೆಲಸವನ್ನು ಮಾಡಿದರು. ಒನ್ ನೇಷನ್, ಒನ್ ರೇಷನ್ ಕಾರ್ಡ್ ಮಹತ್ವದ ಘೋಷಣೆಯನ್ನು ಜಾರಿಗೊಳಿಸಿದರು.

    ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು:
    * ಸರ್ಕಾರ ಲಾಕ್‍ಡೌನ್ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದೆ. 25 ಸಾವಿರ ಕೋಟಿಯ 25 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಾಗುವುದು. ಇದು 3 ಕೋಟಿ ರೈತರಿಗೆ ಲಾಭವಾಗಲಿದೆ. * 3 ಕೋಟಿ ರೈತರಿಗೆ ಸಾಲದ ಬಡ್ಡಿಯಿಂದ ಪಾವತಿಯಿಂದ ವಿನಾಯ್ತಿ.

    * ಬೀದಿ ಬದಿ ವ್ಯಾಪಾರಿ, ಮನೆಯಲ್ಲಿ ಕೆಲಸ ಮಾಡೋರಿಗೆ 10 ಸಾವಿರದವರೆಗೆ ಸಾಲ ಯೋಜನೆ. ಒಂದು ತಿಂಗಳಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿಗೆ ತರಲಾಗುವುದು. ಸಾಲ ಪಡೆದ ವ್ಯಾಪಾರಸ್ಥರು ಡಿಜಿಟಲ್ ಮೂಲಕ ವ್ಯವಹರಿಸಿದ್ರೆ ಹೆಚ್ಚು ಲಾಭ ಸಿಗಲಿದೆ. ಇದಕ್ಕಾಗಿ 5 ಸಾವಿರ ಕೋಟಿ ರೂ. ಮೀಸಲು. ಈ ಯೋಜನೆಯಿಂದ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ ಸಿಗಲಿದೆ.

    * ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ 3500 ಕೋಟಿ ರೂ. ಅನುದಾನದಲ್ಲಿ ಉಚಿತ ಪಡಿತರ ವಿತರಣೆ. ಪ್ರತಿ ವ್ಯಕ್ತಿಗೆ ಅಕ್ಕಿ ಅಥವಾ ಗೋಧಿ 5 ಕೆ.ಜಿ ಹಾಗೂ ಕುಟುಂಬಕ್ಕೆ 1 ಕೆ.ಜಿ. ಕಾಳು ರಾಜ್ಯ ಸರ್ಕಾರಗಳಿಂದ ನೀಡಲಾಗುವುದು. ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ವಿತರಣೆ.
    * ನ್ಯಾಷನಲ್ ಪೋರ್ಟಬಿಟಲಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಯಾವುದೇ ರಾಜ್ಯದ ರೇಷನ್ ಕಾರ್ಡ್ ಇದ್ರೂ ಅದನ್ನ ನೀವು ಇರುವ ಸ್ಥಳದಲ್ಲಿ ಬಳಸಬಹುದು.

    * ಕೊರೊನಾ ಸಮಯದಲ್ಲಿ ಕೃಷಿ ಕ್ಷೇತ್ರಕ್ಕೆ 63 ಲಕ್ಷ ಸಾಲವನ್ನು ಮಂಜೂರು ಮಾಡಲಾಗಿದೆ. ಈ ಸಾಲದ ಒಟ್ಟು ಮೊತ್ತ 86,600 ಕೋಟಿ ರೂಪಾಯಿ ಇದೆ.
    * ನಗರ ಪ್ರದೇಶದಲ್ಲಿ ವಾಸವಾಗಿರುವ ಬಡವರಿಗೆ ಎಸ್‍ಡಿಆರ್‍ಎಫ್ ಮೂಲಕ 11 ಸಾವಿರ ಕೋಟಿ ಮಂಜೂರು ಮಾಡಲಾಗುವುದು. ನಿರಾಶ್ರಿತರರಿಗೆ ಸರ್ಕಾರದಿಂದ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಕಲ್ಪಿಸೋದರ ಜೊತೆಗೆ ಹಣದ ವ್ಯವಸ್ಥೆಯನ್ನು ಮಾಡಲಾಗುವುದು. 12 ಸಾವಿರ ಸ್ವಸಹಾಯ ಸಂಘಗಳಿಂದ 3 ಕೋಟಿ ಮಾಸ್ಕ್ ಮತ್ತು 1.20 ಲಕ್ಷ ಲೀಟರ್ ಸ್ಯಾನಿಟೈಸರ್ ಉತ್ಪಾದಿಸಲಾಗುವುದು, ಇದು ಪರೋಕ್ಷವಾಗಿ ನಗರ ಪ್ರದೇಶದಲ್ಲಿ ಉದ್ಯೋಗದ ದಿನಗಳನ್ನು ಹೆಚ್ಚಿಸುತ್ತದೆ.

    * ದೇಶಾದ್ಯಂತ ಪೈಸಾ ಪೋರ್ಟಲ್ ಜಾರಿ. ಹೊಸದಾಗಿ 7,200 ಸ್ವಸಹಾಯ ಸಂಘಗಳು ಕಾರ್ಯ ಆರಂಭಗೊಂಡಿವೆ.
    * ಗ್ರಾಮೀಣ ಬ್ಯಾಂಕುಗಳಿಗೆ ನಬಾರ್ಡ್ ನಿಂದ 29,500 ಕೋಟಿ ಸಹಾಯ.
    * ವಲಸೆ ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದರ ನೇರ ಲಾಭ ತಲುಪಿಸುವ ಗುರಿ ಇದೆ.

    * ನಗರಗಳಿಂದ ಗ್ರಾಮಗಳಿಗೆ ತೆರಳಿರೋ ವಲಸೆ ಕಾರ್ಮಿಕರಿಗೆ ಪಂಚಾಯ್ತಿ ಮೂಲಕ ನರೇಗಾ ಯೋಜನೆ ಅಡಿ ಉದ್ಯೋಗ ಸೃಷ್ಟಿಸಲಾಗುವುದು. ಕನಿಷ್ಠ ವೇತನವನ್ನು 182ರಿಂದ 202 ರೂ.ಗಳಿಗೆ ಹೆಚ್ಚಿಸಲಾಗುತ್ತದೆ. ಪ್ರತಿಯೊಬ್ಬ ದಿನಗೂಲಿ ಕಾರ್ಮಿಕರ ಆರೋಗ್ಯ ತಪಾಸಣೆಗೆ ಪ್ರಾಮುಖ್ಯತೆ ನೀಡಲಾಗುವುದು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗಾಗಿ ಹೊಸ ಮಾರ್ಗದರ್ಶಿ ಪ್ರಕಟ

    * ಗ್ರಾಮ ಮತ್ತು ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ವಲಸೆ ಕಾರ್ಮಿಕರಿಗೆ ಬಾಡಿಗೆ ಮನೆ. ಈ ಕುರಿತು ಸಂಬಂಧಿಸಿದ ಇಲಾಖೆಯಿಂದ ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ. ನಗರದ ಬಡವರಿಗೆ ಬಾಡಿಗೆ ಮನೆಗಳನ್ನು ಸಂಕೀರ್ಣಗಳಾಗಿ ಮಾಡುವ ಪ್ಲಾನ್
    * ಅತಿ ಸಣ್ಣ ಸಾಲದಾರರಿಗೆ ಮುದ್ರಾ ಶಿಶು ಯೋಜನೆಯಡಿಯ ಸಾಲ. ಮುದ್ರಾ ಯೋಜನೆಗಾಗಿ 15 ಸಾವಿರ ಕೋಟಿ. 12 ತಿಂಗಳು ಮುದ್ರಾ ಯೋಜನೆಯಡಿ (ಶಿಶು ಲೋನ್) ಶೇ.2ರಷ್ಟು ಬಡ್ಡಿ ವಿನಾಯ್ತಿ. ಈ ಯೋಜನೆಯಿಂದ ಸುಮಾರು 3 ಕೋಟಿ ಜನರಿಗೆ ಲಾಭ ಸಿಗಲಿದೆ.

    * ಮಧ್ಯಮ ವರ್ಗಕ್ಕೆ ಗೃಹ ಸಾಲದಲ್ಲಿ ಸಬ್ಸಿಡಿ. ಈ ಸಬ್ಸಿಡಿಯ ಅವಧಿಯನ್ನು ಮಾರ್ಚ್ 2021ರವರೆಗೆ ವಿಸ್ತರಿಸಲಾಗುವುದು. 6 ರಿಂದ 18 ಲಕ್ಷ ಆದಾಯವುಳ್ಳ ಮಧ್ಯಮ ವರ್ಗಕ್ಕೆ ಸಬ್ಸಿಡಿ ಸಿಗಲಿದೆ.

    * ಉದ್ಯೋಗ ಸೃಷ್ಟಿಗಾಗಿ 6 ಸಾವಿರ ಕೋಟಿ ಅನುದಾನ. ಬುಡಕಟ್ಟು ಮತ್ತು ಆದಿವಾಸಿಗಳಿಗೆ ತೋಟಗಾರಿಕೆ ಮತ್ತು ಅರಣ್ಯೀಕರಣದಲ್ಲಿ ಉದ್ಯೋಗ ಸೃಷ್ಟಿ.
    * ನಬಾರ್ಡ್ ಮೂಲಕ ರೈತರಿಗೆ 30 ಸಾವಿರ ಕೋಟಿ ತುರ್ತು ಹಣಕಾಸು ನೆರವು. ಮೀನುಗಾರಿಗೆ ಮತ್ತು ಹೈನುಗಾರಿಕೆ ಸೇರಿದಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ಕೋಟಿ ಸಾಲ ವಿತರಣೆ.

  • ನಡೆದು ಹೋಗ್ತಿದ್ದ 6 ವಲಸೆ ಕಾರ್ಮಿಕರ ಮೇಲೆ ಹರಿದ ಬಸ್ – ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು

    ನಡೆದು ಹೋಗ್ತಿದ್ದ 6 ವಲಸೆ ಕಾರ್ಮಿಕರ ಮೇಲೆ ಹರಿದ ಬಸ್ – ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು

    – ಲಾರಿ, ಬಸ್ ನಡುವೆ ಡಿಕ್ಕಿ 8 ಸಾವು, 50 ಮಂದಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು 14 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ, 50 ಮಂದಿ ಗಾಯಗೊಂಡಿದ್ದಾರೆ.

    ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕರು ತಮ್ಮ ಊರಿಗೆ ಹೋಗಿ ಅಲ್ಲಿಯಾದರೂ ಬದುಕೋಣ ಎಂದು ಹೊರಟಿದ್ದರು. ಬಸ್ ಅಥವಾ ಯಾವುದೇ ಸಾರಿಗೆ ವ್ಯವಸ್ಥೆ ಸಿಗದ ಕಾಣರಕ್ಕೆ ನಡೆದುಕೊಂಡು ಊರಿನತ್ತ ಪ್ರಯಣ ಬೆಳೆಸಿದ್ದರು. ಉತ್ತರ ಪ್ರದೇಶ ಮುಜಾಫರ್‍ನಗರ-ಸಹರನ್ಪುರ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಘಲೌಲಿ ಚೆಕ್‍ಪೋಸ್ಟ್ ಬಳಿ 6 ಮಂದಿ ವಲಸೆ ಕಾರ್ಮಿಕರು ನಡೆದು ಬರುತ್ತಿದ್ದರು. ಈ ವೇಳೆ ಚೆಕ್‍ಪೋಸ್ಟ್ ಬಳಿ ವೇಗವಾಗಿ ಬರುತ್ತಿದ್ದ ಬಸ್ಸೊಂದು ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.

    ಇತ್ತ ಮಧ್ಯಪ್ರದೇಶದ ಗುಣದಲ್ಲಿ ಬುಧವಾರ ರಾತ್ರಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಹಾಗೂ ಬಸ್ಸೊಂದರ ನಡುವೆ ಡಿಕ್ಕಿ ಆಗಿ ಅಪಘಾತಕ್ಕಿಡಾಗಿದೆ. ಈ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ 8 ಮಂದಿ ಉತ್ತರ ಪ್ರದೇಶದವರಾಗಿದ್ದು, ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಬಂದಿದ್ದರು. ಆದರೆ ಲಾಕ್‍ಡೌನ್ ಪರಿಣಾಮ ಕೆಲಸವಿಲ್ಲದೆ ಕಷ್ಟದಲ್ಲಿದ್ದ ಕಾರ್ಮಿಕರು ತಮ್ಮೂರಿಗೆ ವಾಪಸ್ ತೆರೆಳುತ್ತಿದ್ದರು. ಈ ವೇಳೆ ಗುಣದಲ್ಲಿ ಈ ದುರಂತ ಸಂಭವಿಸಿದೆ.

  • ಅಂತರರಾಜ್ಯ ವಲಸಿಗರಿಂದ ಹೆಚ್ಚಿದ ಕಂಟಕ-ಗ್ರೀನ್‍ಝೋನ್‍ಗಳಿಗೆ ನುಸುಳಿದ ಕೊರೊನಾ

    ಅಂತರರಾಜ್ಯ ವಲಸಿಗರಿಂದ ಹೆಚ್ಚಿದ ಕಂಟಕ-ಗ್ರೀನ್‍ಝೋನ್‍ಗಳಿಗೆ ನುಸುಳಿದ ಕೊರೊನಾ

    -ಹಾಸನ, ಕೋಲಾರ, ಯಾದಗಿರಿ, ಕಾಲಿಟ್ಟ ಮಹಾಮಾರಿ

    ಬೆಂಗಳೂರು: ಇಷ್ಟು ದಿನ ನೆಮ್ಮದಿಯಿಂದ ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮಹಾಮಾರಿ ಕೊರೊನಾ ಇದೀಗ ಕಾಲಿಟ್ಟಿದೆ. ಮುಂಬೈಯಿಂದ ಹಾಸನಕ್ಕೆ ಆಗಮಿಸಿದ ಒಂದೇ ಕುಟುಂಬದ ನಾಲ್ವರಿಗೆ ಮತ್ತು ಇನ್ನೋರ್ವನಿಗೆ ಕೊರೊನಾ ಸೋಂಕು ಧೃಢಪಟ್ಟಿದೆ.

    ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಕೊಟ್ಟಿದ್ದೇ ಕೊಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗೋದರ ಜೊತೆಗೆ ಈಗ ಗ್ರೀನ್‍ಝೋನ್‍ಗಳಿಗೂ ಕಂಟಕ ಶುರುವಾಗಿಬಿಟ್ಟಿದೆ. ಹೊರ ರಾಜ್ಯದ ವಲಸಿಗರನ್ನು ಒಳಗೆ ಬಿಟ್ಟುಕೊಂಡಿದ್ದೆ ಬಂದು ಹಸಿರು ವಲಯಗಳ ಬಣ್ಣವೇ ಬದಲಾಗಿ ಹೋಗ್ತಿದೆ. ಮೊನ್ನೆ ಮೊನ್ನೆ ಶಿವಮೊಗ್ಗಕ್ಕೆ ಬಂದಿದ್ದ ಕೊರೊನಾ, ಇವತ್ತು ಮೂರು ಜಿಲ್ಲೆಗಳಿಗೆ ಶಾಕ್ ಕೊಟ್ಟಿದೆ.

    ಇಷ್ಟು ದಿನ ಗ್ರೀನ್ ಝೋನ್‍ಗಳಾಗಿದ್ದ ಹಾಸನ, ಕೋಲಾರ ಹಾಗೂ ಯಾದಗಿರಿ ಜಿಲ್ಲೆಗಳಿಗೂ ಇವತ್ತು ಮಹಾಮಾರಿ ಕಾಲಿಟ್ಟಿದೆ. ಹಾಸನ ಜಿಲ್ಲೆಯಲ್ಲಿ ಇಂದು ಒಂದೇ ದಿನ ಐದು ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಸೋಂಕಿತರು ಚನ್ನರಾಯಪಟ್ಟಣ ತಾಲೂಕಿನ ಒಂದೇ ಕುಟುಂಬದವರಾಗಿದ್ದು, ಮೇ 10ರಂದು ಮುಂಬೈನಿಂದ ಬಂದಿದ್ದರು. ಇವರೆಲ್ಲರಿಗೂ ಕೊರೊನಾ ದೃಢವಾಗಿದ್ದು, ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

    ಚಿನ್ನದ ನಾಡು ಕೋಲಾರಕ್ಕೂ ನುಸುಳಿರುವ ಮಹಾಮಾರಿ ಐವರನ್ನ ವಕ್ಕರಿಸಿದೆ. ಸೋಂಕಿತರು ಮುಳಬಾಗಿಲು ತಾಲೂಕು ವ್ಯಾಪ್ತಿಯ ಬೂಸಾಲಕುಂಟೆ, ವಿ.ಹೊಸಹಳ್ಳಿ, ಬೆಳಗಾನಹಳ್ಳಿ ಹಾಗೂ ಬೈರಸಂದ್ರ ಗ್ರಾಮದ ನಿವಾಸಿಗಳಾಗಿದ್ದಾರೆ. ಹೋಮ್ ಕ್ವಾರಂಟೇನ್‍ನಲ್ಲಿದ್ದ ಇವರಲ್ಲಿ, ಇಬ್ಬರು ಒರಿಸ್ಸಾಗೆ ಹೋಗಿ ಬಂದ ಲಾರಿ ಚಾಲಕ ಹಾಗೂ ಕ್ಲೀನರ್ ಆದ್ರೆ, ಚೆನ್ನೈ ಮಾರುಕಟ್ಟೆಗೆ ಹೋಗಿ ಬಂದಿರುವ ವ್ಯಕ್ತಿಯೊಬ್ಬರು ಇದ್ದಾರೆ. ಬೆಂಗಳೂರಿನ ಜೆಪಿ ನಗರದಿಂದ ಬಂದಿದ್ದ ಮಹಿಳೆ ಹಾಗೂ ಬೀದರ್- ಹುಮಾನಾಬಾದ್‍ನಿಂದ ಬಂದಿದ್ದ ವಿದ್ಯಾರ್ಥಿನಿ ಸೇರಿ ಐವರು ಕೊರೊನಾ ಪೀಡಿತರಾಗಿದ್ದಾರೆ.

    ಯಾದಗಿರಿಯಲ್ಲಿ ಸುರಪುರದ ಗಂಡ-ಹೆಂಡ್ತಿ ಇಬ್ಬರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಗುಜರಾತ್‍ನಲ್ಲಿ ಛತ್ರಿ ಮಾರಾಟ ಮಾಡುತ್ತಿದ್ದ ಇವರಿಬ್ಬರು ಬಾಗಲಕೋಟೆಗೆ ಬಂದು ಬಳಿಕ ಅಲ್ಲಿಂದ ಯಾದಗಿರಿಗೆ ಬಂದಿದ್ದರು. ಸದ್ಯ ಇವರಿದ್ದ ಅಸರ್ ಮೊಹಲ್ಲಾ ಏರಿಯಾವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲು ಸಿದ್ಧತೆ ಮಾಡಲಾಗಿದೆ.

    ಹಾಸನ ಹಾಗೂ ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಳ್ಳುತ್ತಿದ್ದಂತೆ ಈ ಎರಡೂ ಜಿಲ್ಲೆಯ ನೆರೆಯ ಪ್ರದೇಶ ಕಾಫಿನಾಡು ಚಿಕ್ಕಮಗಳೂರಿಗರ ನಿದ್ದೆಗೆಡಿಸಿದೆ. ಹೀಗಾಗಿ ಚಿಕಮಗಳೂರು-ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನ ಮತ್ತೆ ಬಂದ್ ಮಾಡುತ್ತಿದ್ದಾರೆ. ಇವತ್ತು ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಗ್ರಾಮೀಣ ಭಾಗದಿಂದ ಸಕಲೇಶಪುರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಮರಗುಂದ-ದೇವಾಲಕೆರೆಯ ಜಪಾವತಿ ಸೇತುವೆ ಮೇಲೆ ಬೃಹತ್ ಬಂಡೆಕಲ್ಲುಗಳನ್ನ ರಸ್ತೆಗೆ ಅಡ್ಡಲಾಗಿ ಹಾಕಿ ಸಂಚಾರವನ್ನ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.