Tag: ವಲ್ಲಭಭಾಯಿ ಪಟೇಲ್

  • ಮೋದಿ ಪ್ರಧಾನಿ ಆಗಲು ಕಾಂಗ್ರೆಸ್ ಕಾರಣ: ಸಿದ್ದರಾಮಯ್ಯ

    ಮೋದಿ ಪ್ರಧಾನಿ ಆಗಲು ಕಾಂಗ್ರೆಸ್ ಕಾರಣ: ಸಿದ್ದರಾಮಯ್ಯ

    -ಡಿಜಿಟಲೀಕರಣಕ್ಕೆ ಮೂಲ ರಾಜೀವ್ ಗಾಂಧಿ
    -ಇಂದಿರಾಗಾಂಧಿ ಉಕ್ಕಿನ ಮಹಿಳೆ, ಪಟೇಲ್ ಉಕ್ಕಿನ ಮನುಷ್ಯ
    -ಇಂದಿರಾಗಾಂಧಿ ಜನರ ಮನಸ್ಸಿನಲ್ಲಿ ದೇವರಾಗಿಬಿಟ್ರು
    -ಬಿಜೆಪಿಯಲ್ಲಿ ಹುತಾತ್ಮರೇ ಇಲ್ಲ

    ಬೆಂಗಳೂರು: ಮೋದಿ ಪ್ರಧಾನಿ ಆಗಲು ಕಾಂಗ್ರೆಸ್ ಕಾರಣ. ದೇಶಕ್ಕೆ ಸ್ವತಂತ್ರ ಬರಲು ಕಾಂಗ್ರೆಸ್ ಕಾರಣ. ಸ್ವತಂತ್ರ ಬಂದಿದಕ್ಕೆ ಮೋದಿ ಪ್ರಧಾನಿಯಾಗಿದ್ದು, ದೇಶದಲ್ಲಿ ಡಿಜಿಟಲ್ ವ್ಯವಸ್ಥೆ ಆರಂಭಕ್ಕೆ ಮೂಲ ರಾಜೀವ್ ಗಾಂಧಿ, ಇಂದು ನಾವೆಲ್ಲ ಫೋನ್‍ನಲ್ಲಿ ಮಾತನಾಡುತ್ತಿರುವುದಕ್ಕೆ ಪ್ರಮುಖ ಕಾರಣ ಅವರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಇಂದಿರಾಗಾಂಧಿ ಹುತಾತ್ಮರಾದ ದಿನ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ. ಇಂದಿರಾ ಗಾಂಧಿ ಉಕ್ಕಿನ ಮಹಿಳೆಯಾದರೆ, ಪಟೇಲ್ ಉಕ್ಕಿನ ಮನುಷ್ಯ ಎಂದು ನುಡಿದರು. ಇದನ್ನೂ ಓದಿ: ಒಂದು ದಿನ ಬದುಕಿದ್ರೂ ಅಪ್ಪು ತರ ಬದುಕ್ಬೇಕು: ಸಾಧು ಕೋಕಿಲ

    ಇಂದಿರಾ ಗಾಂಧಿ 16 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದರು. ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬಾಲ್ಯದಿಂದಲೂ ದೇಶ ಭಕ್ತಿ ಬೆಳೆಸಿಕೊಂಡಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಜೊತೆಯೇ ಇಂದಿರಾ ಗಾಂಧಿ ಬೆಳೆದಿದ್ದರು. 1,969 ಇಂಡಿಕೇಟ್, ಸಿಂಡಿಕೇಟ್ ಅಂತ ಕಾಂಗ್ರೆಸ್ ಇಬ್ಭಾಗವಾಯ್ತು. ಇಂದಿರಾಗಾಂಧಿ ಇಂಡಿಕೇಟ್ ಕಾಂಗ್ರೆಸ್ ಮುಖ್ಯಸ್ಥರಾದರು. ಅಲ್ಲಿಂದ ಬಹಳ ಆದರ್ಶ ರೀತಿಯಲ್ಲಿ ದೇಶವನ್ನು ಮುನ್ನಡೆಸಿದ್ದಾರೆ. ಬಡತನ ತೊಲಗಿಸಲು ಇಚ್ಚಾಶಕ್ತಿ ಹೊಂದಿದ್ದರು. ಈ ಹೊತ್ತಿಗಾಗಲೇ ಅಸಮಾನತೆ ದೇಶದಲ್ಲಿ ಶತ ಶತಮಾನದಿಂದ ಬೆಳೆದುಕೊಂಡು ಬಂದಿತ್ತು. ಆರ್ಥಿಕ ಅಸಮಾನತೆ ಹೋಗಲಾಡಿಸಲು 20 ಅಂಶಗಳ ಕಾರ್ಯಕ್ರಮ ತಂದರು. ಗರೀಬಿ ಹಠಾವೋ ಜಾರಿ ಮಾಡಿದ್ರು, ರೈತರು, ಮಹಿಳೆಯರಿಗೆ ಅನೇಕ ಕಾರ್ಯಕ್ರಮ ಜಾರಿ ಮಾಡಿದ್ದರು. ಉಳುವವನೆ ಭೂಮಿ ಒಡೆಯ ಕಾಯ್ದೆ ಪ್ರಮಾಣಿಕವಾಗಿ ಜಾರಿ ಮಾಡಿದ್ದರು. ಬ್ಯಾಂಕ್ ರಾಷ್ಟ್ರೀಕರಣ ಮಾಡಿದ್ರು. ಮೊದಲು ಶ್ರೀಮಂತರಿಗೆ ಮಾತ್ರ ಬ್ಯಾಂಕ್ ಅಕೌಂಟ್, ಸಾಲ, ಡಿಪಾಸಿಟ್ ಅವಕಾಶ ಇತ್ತು. ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ಮೇಲೆ ಬಡವರಿಗೆ ಸೌಲಭ್ಯಗಳು ಸಿಕ್ಕಿತ್ತು. ಇದರಿಂದ ಅವರು ಎಷ್ಟು ಹೆಸರುವಾಸಿಯಾದರು ಎಂದರೆ ಜನರ ಮನಸ್ಸಿನಲ್ಲಿ ದೇವರಾಗಿಬಿಟ್ಟರು ಎಂದರು.

    ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ರು ಅಂತಾ ದಲಿತರನ್ನು ಎತ್ತಿಕಟ್ತಾರೆ. ನರೇಂದ್ರ ಮೋದಿ ಆಗ ಹುಟ್ಟಿರಲಿಲ್ಲ. ದೇಶ ರಕ್ಷಣೆ ಮಾಡೋದು ನಾವೇ ಅಂತಾ ಬಿಂಬಿಸಿಕೊಳ್ಳುತ್ತಿದ್ದಾರೆ. ಒಬ್ಬರೂ ದೇಶಕ್ಕೋಸ್ಕರ ಸತ್ತಿಲ್ಲ, ಬಿಜೆಪಿಯಲ್ಲಿ ಹುತಾತ್ಮರೇ ಇಲ್ಲ. ಸರ್ದಾರ್ ವಲ್ಲಭಭಾಯಿ ಪಟೇಲ್ ವಿಚಾರದಲ್ಲೂ ರಾಜಕೀಯ ಮಾಡ್ತಾರೆ. ಆಗ ದೇಶ ಕಟ್ಟಲು ಎಷ್ಟೋ ಕಾಂಗ್ರೆಸ್ ನಾಯಕರು ಆಸ್ತಿಪಾಸ್ತಿ ಕಳೆದುಕೊಂಡ್ರು ಪ್ರಾಣ ತ್ಯಾಗ ಮಾಡಿದರು. 60 ವರ್ಷ ಏನ್ ಮಾಡಿದ್ದಾರೆ ಅಂತಾ ಮೋದಿ ಕೇಳ್ತಾರಲ್ಲಾ? ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ. ನೀವೆಲ್ಲಾ ಹೆಮ್ಮೆ ಪಡಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ


    ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಉಮಾಶ್ರೀ, ರಾಣಿ ಸತೀಶ್ ಭಾಗಿಯಾಗಿದ್ದರು. ಇದನ್ನೂ ಓದಿ: ರತ್ನನ್ ಪ್ರಪಂಚ ನೋಡಿ ಕರೆ ಮಾಡಿದ್ರು: ಡಾಲಿ ಧನಂಜಯ್

  • ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕೆಲಸ ವೀಕ್ಷಿಸಿದ ಆದಿಚುಂಚನಗಿರಿ ಶ್ರೀ, ಡಿಸಿಎಂ

    ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕೆಲಸ ವೀಕ್ಷಿಸಿದ ಆದಿಚುಂಚನಗಿರಿ ಶ್ರೀ, ಡಿಸಿಎಂ

    ನವದೆಹಲಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ದೆಹಲಿಯಲ್ಲಿ ನಡೆಯುತ್ತಿದೆ. ಈ ನಿರ್ಮಾಣ ಕಾರ್ಯವನ್ನು ರಾಜ್ಯದ ಡಿಸಿಎಂ ಅಶ್ವಥ್‍ನಾರಾಯಣ ಮತ್ತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಾಲಾನಂದನಾಥ ಸ್ವಾಮೀಜಿ ವೀಕ್ಷಿಸಿ ಪರೀಶಿಲನೆ ನಡೆಸಿದ್ದಾರೆ.

    ದೆಹಲಿ ಸಮೀಪದ ನೋಯ್ಡಾದಲ್ಲಿ ಪ್ರಸಿದ್ಧ ಕಲಾವಿದ ರಾಮ್ ಸುತಾರ್ ನೇತೃತ್ವದ ತಂಡ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಥರ್ಮಾಕೋಲ್ ಪ್ರತಿಮೆಯನ್ನು ತಯಾರಿಸುವ ಕಾರ್ಯದಲ್ಲಿ ತೊಡಗಿದೆ. ಮೊದಲ ಹಂತದಲ್ಲಿ ಪ್ರತಿಮೆಯನ್ನು ಥರ್ಮಾಕೋಲ್‍ನಲ್ಲಿ ಮಾಡಿ ಏನಾದರೂ ಬದಲಾವಣೆಗಳು ಇದ್ದಲ್ಲಿ ಆ ಸಂದರ್ಭದಲ್ಲೇ ಅದನ್ನು ಸರಿಪಡಿಸಿ, ನಂತರ ಅಂತಿಮವಾಗಿ ಕಂಚಿನ ಪ್ರತಿಮೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಪ್ರತಿಮೆಯನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಪ್ರತಿಷ್ಠಿಸುವ ಗುರಿಯನ್ನು ಹೊಂದಲಾಗಿದೆ.

    ಪ್ರತಿಮೆ ನಿರ್ಮಾಣ ಕಾರ್ಯವನ್ನು ವೀಕ್ಷಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಕೆಂಪೇಗೌಡರ ಪ್ರತಿಮೆಯು 90 ಅಡಿಯ ವಿಗ್ರಹವಾಗಿದ್ದು, 18 ಅಡಿ ತಳಪಾಯ ಸೇರಿ 108 ಅಡಿ ಎತ್ತರದ ಪ್ರತಿಮೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುಮಾರು 65 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮಾಡಲಾಗುತ್ತಿದ್ದು, ಪ್ರತಿಮೆ ನಿರ್ಮಾಣದ ಗುಣಮಟ್ಟದ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ ಅಚ್ಚುಕಟ್ಟಾಗಿ, ಬಹಳ ವೇಗವಾಗಿ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದರು.

    ನಿರ್ಮಾಲಾನಂದನಾಥ ಸ್ವಾಮೀಜಿ ಮಾತನಾಡಿ ಕೊರೊನಾ ಬಂದಿದ್ದರಿಂದ ಪ್ರತಿಮೆ ನಿರ್ಮಾಣಕ್ಕೆ ತೊಡಕಾಗಿದೆ. ಮುಂದಿನ ವರ್ಷವೇ ಪ್ರತಿಮೆ ಅನಾವರಣ ಮಾಡುವ ಗುರಿ ಇಟ್ಟಿಕೊಂಡಿದ್ದೇವು. ಆದರೆ ಇದೀಗಪೂರ್ಣ ಪ್ರಮಾಣದಲ್ಲಿ ಪ್ರತಿಮೆ ಸಿದ್ಧಗೊಳ್ಳಲು ಇನ್ನು ಎಂಟೊಂಬತ್ತು ತಿಂಗಳು ಬೇಕು. ಪ್ರತಿಮೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಿಸುವತ್ತ ಯೋಜನೆ ರೂಪಿಸಿದ್ದೇವೆ. ಪ್ರತಿಮೆಯ ಜೊತೆಗೆ ಕೆಂಪೇಗೌಡರ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣ ಆಗಲಿದ್ದು, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಮಾಡಿದ್ದ ರಾಮ ಸುತಾರ್ ಅವರೇ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

  • ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಗಾಂಧಿನಗರ: ಸರ್ದಾರ್ ವಲ್ಲಭಭಾಯಿ ಅವರ ಏಕತಾ ಪ್ರತಿಮೆಯನ್ನು ಲೋರ್ಕಾಪಣೆಗೊಳಿಸಲು ಆಗಮಿಸುತ್ತಿರುವ ಪ್ರಧಾನಿ ಮೋದಿಗೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಭಾರೀ ಆಕ್ರೋಶ ವ್ಯಕ್ತಪಡಿಸಿ ಬಹಿಷ್ಕಾರ ಹಾಕಿದ್ದಾರೆ.

    ಕೇವಾಡಿಯಾ ಸೇರಿದಂತೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಬಹಿರಂಗ ಪತ್ರದಲ್ಲಿ ಏನಿದೆ?:
    ನಿಮ್ಮನ್ನು ನಾವು ಸ್ವಾಗತಿಸುವುದಿಲ್ಲ. ನೀವು ನಮಗೆ ಬೇಡವಾಗಿರುವ ಅತಿಥಿ. ಸರ್ದಾರ್ ಸ್ಮಾರಕ ನಿರ್ಮಾಣಕ್ಕಾಗಿ ಅರಣ್ಯ, ನದಿ, ಜಲಪಾತ, ಭೂಮಿ ಮತ್ತು ಕೃಷಿ ಪ್ರದೇಶಗಳನ್ನು ನಾಶಮಾಡಲಾಗಿದೆ. ನಮ್ಮ ಪೂರ್ವಿಕರ ಕಾಲದಿಂದಲೂ ಇವುಗಳನ್ನೇ ನಂಬಿಕೊಂಡು, ಬದುಕು ಕಟ್ಟಿಕೊಂಡು ಬಂದಿದ್ದೇವೆ. ನಮ್ಮ ಬದುಕನ್ನು ಕಸಿಕೊಂಡು, ಸ್ಮಾರಕ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ. ಇದು ನಿಮಗೆ ತೋಚಲಿಲ್ಲವೇ ಎಂದು ಬುಡಕಟ್ಟು ಜನಾಂಗದ ಮುಖಂಡರು ಪ್ರಶ್ನಿಸಿದ್ದಾರೆ.

    ಗುಜರಾತ್ ನಲ್ಲಿ ಅದೆಷ್ಟೋ ಹಳ್ಳಿಗಳಿಗೆ ಶಾಲೆ, ಆಸ್ಪತ್ರೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳೇ ಸಿಗುತ್ತಿಲ್ಲ. ತೆರಿಗೆ ರೂಪದಲ್ಲಿ ಪಡೆದ ಜನರ ಹಣವನ್ನು ಜನರ ಮೂಲ ಅವಶ್ಯಕತೆ ಒದಗಿಸಲು ಬಳಸಬೇಕಿತ್ತು. ಆದರೆ ಹಾಗೆ ಮಾಡಲಿಲ್ಲ. ಒಂದು ವೇಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿ ಈಗಲೂ ಬದುಕಿರುತ್ತಿದ್ದರೆ ಇಂತಹ ಪ್ರತಿಮೆ ನಿರ್ಮಾಣಕ್ಕೆ ಯಾರದರೂ ಮುಂದಾಗಿದ್ದರೆ ಅವರು ಕೂಡ ವಿರೋಧ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದ ಮೂಲಕ ಕಿಡಿಕಾರಿದ್ದಾರೆ.

    ಏಕತಾ ಪ್ರತಿಮೆ ಯೋಜನೆಗೆ ಕಾಂಗ್ರೆಸ್ ಅಷ್ಟೇ ಅಲ್ಲದೆ, ಹಿರಿಯ ಗುಜರಾತ್ ರಾಜಕಾರಣಿ ಶಂಕರ್ ಸಿಂಗ್ ವಘೇಲಾ ಅವರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಭೂಮಿ, ನೆಲೆ ಕಳೆದುಕೊಂಡ 22 ಗ್ರಾಮಗಳ ಬುಡಕಟ್ಟು ಜನಾಂಗದ ನಾಯಕರು ಕಿಡಿ ಹೊರಹಾಕಿದ್ದಾರೆ.

    ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಈ ಯೋಜನೆಯನ್ನು 2010ರಲ್ಲಿ ಘೋಷಣೆ ಮಾಡಿದ್ದರು. 2010ರಲ್ಲೇ ಘೋಷಣೆ ಮಾಡಿದಾಗಲೇ ಈ ಯೋಜನೆಗೆ ಅಲ್ಲಿನ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ವಿಳಂಬವಾಗಿ 2013ರ ಅಕ್ಟೋಬರ್ ನಲ್ಲಿ ನಿರ್ಮಾಣ ಕಾರ್ಯ ಆರಂಭಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv