Tag: ವಶ

  • ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿಗಳು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

    ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿಗಳು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

    ಚಾಮರಾಜನಗರ: ಸುಳ್ವಾಡಿ ಕಿಚ್‍ಕುತ್ ಮಾರಮ್ಮ ದೇವಿ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ಮಾರಮ್ಮ ದೇವಾಲಯ ಪ್ರಸಾದ ಸೇವನೆಯಿಂದಾಗಿ 15 ಮಂದಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಪ್ರಸಾದಕ್ಕೆ ವಿಷ ಪ್ರಾಶನ ಮಾಡಿದ್ದ ಪ್ರಮುಖ ರೂವಾರಿಗಳಾಗಿದ್ದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಹದೇವಸ್ವಾಮಿ ಹಾಗೂ ಮಾದೇಶ್ ಎಂಬ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಇಂದು ಸಂಜೆ ಕೊಳ್ಳೇಗಾಲದ ಅಂಬೇಡ್ಕರ್ ರಸ್ತೆಯಲ್ಲಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಶ್ರೀಕಾಂತ್ ಅವರ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.

    ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ವಿಚಾರ ತಿಳಿಯುತ್ತಿದ್ದಂತೆ, ನ್ಯಾಯಾಧೀಶರ ಮನೆ ಮುಂದೆ ಜನರು ಜಮಾಯಿಸಿದ್ದರು. ಇದರ ಮಾಹಿತಿ ಪಡೆದ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಧೀಶರ ಮನೆ ಸುತ್ತ ಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದರು. ಇದನ್ನೂ ಓದಿ : ಮಹದೇವ ಸ್ವಾಮಿಯೇ ಸುಳ್ವಾಡಿಯ ವಿಷ ಸರ್ಪ -ಸ್ವಾಮಿಯ ಸಂಚನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

    ಘಟನಾ ವಿವರ:
    ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಕ್ ಕುತ್ ಮಾರಮ್ಮ ದೇವಸ್ಥಾನದಲ್ಲಿ ಕಳೆದ ಶುಕ್ರವಾರ ಗೋಪುರದ ಶಂಕುಸ್ಥಾಪನೆ ಕಾರ್ಯಕ್ರಮ ನೇರವೇರಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದ ಬಳಿಕ, ಭಕ್ತರು ಪ್ರಸಾದದ ರೂಪದಲ್ಲಿ ರೈಸ್ ಬಾತ್ ಸೇವಿಸಿದ್ದರು. ಆದರೆ ಸ್ವಲ್ಪ ಸಮಯದ ನಂತರ ರೈಸ್ ಬಾತ್ ಸೇವಿಸಿದ್ದ 100 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯರು ಕೂಡಲೇ 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಿದ್ದರು. ಅಸ್ವಸ್ಥರನ್ನು ಪರೀಕ್ಷಿಸಿದ್ದ ವೈದ್ಯರು, ಪ್ರಸಾದಲ್ಲಿ ವಿಷ ಬೆರೆತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೇ ವಿಧಿವಿಜ್ಞಾನ ವರದಿಯ ಪ್ರಕಾರ ಪ್ರಸಾದದಲ್ಲಿ ಆರ್ಗಾನ್ ಪಾಸ್ಫರಸ್ ಕಾಂಪೌಂಡ್ ಮೋನೋಕ್ರೋಟೋಫೋಸ್ ಎಂಬ ಕ್ರಿಮಿನಾಶಕ ಮಿಶ್ರಣವಾಗಿರುವುದಾಗಿ ಹೇಳಿತ್ತು. ಈ ಕ್ರಿಮಿನಾಶಕ ಮಿಶ್ರಣ ಮಾಡಿದ್ದ ಪ್ರಸಾದ ಸೇವಿಸಿದ್ದರ ಪರಿಣಾಮ ಇದುವರೆಗೂ 15 ಮಂದಿ ಮೃತಪಟ್ಟಿದ್ದರು.

    ತನಿಖಾ ವಿವರ:
    ವಿಷ ಪ್ರಸಾದ ಸೇವನೆ ಬಳಿಕ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗುತ್ತಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‍ಪಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಪೊಲೀಸ್ ಅಧೀಕ್ಷಕರರಾದ ಶ್ರೀಮತಿ ಗೀತಪ್ರಸನ್ನ ಹಾಗೂ ಕೊಳ್ಳೇಗಾಲ ಡಿವೈಎಸ್‍ಪಿ ಪುಟ್ಟಮಾದಯ್ಯ, ಜಿಲ್ಲಾಡಳಿತದ ಸಹಕಾರದೊಂದಿಗೆ ಮುತುವರ್ಜಿ ವಹಿಸಿ ಯಾವುದೇ ಕಾನೂನು ವ್ಯವಸ್ಥೆಗೆ ಭಂಗವಾಗುವಂತಹ ಘಟನೆ ನಡೆಯದಂತೆ ನೋಡಿಕೊಳ್ಳುತ್ತಾರೆ.

    ರೈಸ್ ಬಾತ್‍ನಲ್ಲಿ ವಿಷವನ್ನು ಬೆರೆಸಿದ್ದ ಆಸಾಮಿಗಳನ್ನು ಪತ್ತೆ ಮಾಡುವ ಸಲುವಾಗಿ ಕೊಳ್ಳೇಗಾಲ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪುಟ್ಟಮಾದಯ್ಯ ಅವರ ನೇತೃತ್ವದ 5 ವಿವಿಧ ತಂಡಗಳನ್ನು ರಚಿಸಿದರು. ತನಿಖೆ ಕೈಗೊಂಡಿದ್ದ 5 ತಂಡಗಳು ಕೌಶಲ್ಯದಿಂದ ಪ್ರತಿಯೊಂದು ಅಂಶಗಳನ್ನು ಗಣನೆಗೆ ತೆಗೆದುಕೊಂಡು ಲಭ್ಯವಿದ್ದ ಮಾಹಿತಿಯನ್ನು ವಿಶ್ಲೇಷಿಸಿ ಹಲವಾರು ಜನರನ್ನು ವಿಚಾರಣೆಗೆ ಒಳಪಡಿಸಿ ವಿಧಿ ವಿಜ್ಞಾನ ಪ್ರಯೋಗಾಲಯದ ಪರಿಣತರ ತಂಡದ ನೆರವನ್ನು ಬಳಸಿಕೊಂಡು ಈ ಘೋರ ನರಹತ್ಯೆ ನಡೆಸಿರುವ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

    ಆರೋಪಿಗಳ ವಿವರ:
    1. ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ (52) @ ದೇವಣ್ಣಬುದ್ದಿ ವೀರಬಸಪ್ಪ
    2. ಕೊಳ್ಳೇಗಾಲ ತಾಲೂಕಿನ ಮಾರ್ಟಳ್ಳಿ ಗ್ರಾಮದ (ಸ್ವಂತ ಸ್ಥಳ ಶ್ಯಾಗ) ಅಂಬಿಕಾ ಮಾದೇಶ ಮಹದೇವಸ್ವಾಮಿ (35)
    3. ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದ ವ್ಯವಸ್ಥಾಪಕ ಮಾದೇಶ ಮಹದೇವಸ್ವಾಮಿ (46) @ ಶ್ಯಾಗ ಮಾದೇಶ
    4. ಈ ಹಿಂದೆ ನಾಗರಕಲ್ಲಿನ ಅರ್ಚಕನಾಗಿದ್ದ ಸುಳ್ವಾಡಿ ಗ್ರಾಮ ದೊಡ್ಡಯ್ಯತಂಬಡಿ (35) ದೊಡ್ಡಯ್ಯ ಬಿನ್ ಕಾಳತಂಬಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಂಬ್ ಬೆದರಿಕೆ – ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

    ಬಾಂಬ್ ಬೆದರಿಕೆ – ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

    ಸಾಂದರ್ಭಿಕ ಚಿತ್ರ

    ಮುಂಬೈ: ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ಉತ್ತರಪ್ರದೇಶದ ಲಕ್ನೋಗೆ ತೆರಳಬೇಕಿದ್ದ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ.

    ಶನಿವಾರ ಬೆಳಗ್ಗೆ 6.05ಕ್ಕೆ ಇಂಡಿಗೋ ಸಂಸ್ಥೆಯ ಗೋ ಏರ್ ಫ್ಲೈಟ್ ಜಿ8 329 ವಿಮಾನ ಮುಂಬೈ ವಿಮಾನ ನಿಲ್ದಾಣದಿಂದ ಲಕ್ನೋಗೆ ಹೊರಟಿತ್ತು. ಈ ವೇಳೆ ವಿಮಾನ ನಿಲ್ದಾಣದಲ್ಲಿದ್ದ ಓರ್ವ ಮಹಿಳೆ ಲಕ್ನೋಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇದೆ ಎಂದು ರಂಪಾಟ ನಡೆಸಿದ್ದರು. ಅಲ್ಲದೇ ಕೆಲವು ವ್ಯಕ್ತಿಗಳ ಫೋಟೋಗಳನ್ನು ಹಿಡಿದುಕೊಂಡು ಇವರು ದೇಶದ ಭದ್ರತೆಗೆ ಅಪಾಯವುಂಟುಮಾಡುತ್ತಾರೆಂದು ಹೇಳಿದ್ದರು.

    ಕೂಡಲೇ ಅಧಿಕಾರಿಗಳು ವಿಮಾನದ ಹಾರಾಟವನ್ನು ತಡೆದು ತುರ್ತು ಭೂಸ್ಪರ್ಷ ಮಾಡಿಸಿದ್ದಾರೆ. ಸ್ಥಳಕ್ಕೆ ಬಂದ ಬಾಂಬ್ ತಪಾಸಣಾ ಅಧಿಕಾರಿಗಳು ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಯಾವುದೇ ಬಾಂಬ್ ಇಲ್ಲ ವಿಮಾನ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಸಂಬಂಧ ಕೇಂದ್ರೀಯ ಕೈಗಾರಿಕಾ ಭದ್ರತಾ ದಳ(ಸಿಐಎಸ್‍ಎಫ್) ಮಹಿಳೆಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಬರೋಬ್ಬರಿ 3,200 ಕೆ.ಜಿಗೂ ಅಧಿಕ ಗಾಂಜಾ ಬೆಳೆ ಪತ್ತೆ..!

    ಬರೋಬ್ಬರಿ 3,200 ಕೆ.ಜಿಗೂ ಅಧಿಕ ಗಾಂಜಾ ಬೆಳೆ ಪತ್ತೆ..!

    ಬಳ್ಳಾರಿ: ಗಣಿನಾಡು ಬಳ್ಳಾರಿ ಅದಿರು ಗಣಿಗಾರಿಕೆಗೆ ಫೇಮಸ್ಸು. ಆದರೆ ಗಣಿಗಾರಿಕೆಗೆ ಸ್ಥಗಿತವಾದ ನಂತರ ಇದೀಗ ಗಾಂಜಾಗೆ ಫೇಮಸ್ ಆಗಿದೆ. ಒಂದಲ್ಲ ಎಡರಲ್ಲ ಬರೋಬ್ಬರಿ 3,200 ಸಾವಿರ ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾ ಬೆಳೆಯನ್ನ ಸಂಡೂರು ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಗಾಂಜಾ ಬೆಳೆಯನ್ನ ಹಿಂದೆ ನಕಲಿ ಚಿನ್ನ ಮಾರಾಟ ಮಾಡಿ ವಂಚಿಸುತ್ತಿದ್ದ ತಂಡ ಬೆಳೆದು ಮಾರಾಟಕ್ಕೆ ಮುಂದಾಗಿತ್ತು ಅನ್ನೋದು ಇದೀಗ ಬಯಲಾಗಿದೆ. ಸಂಡೂರಿನ ತಾರಾನಗರದ ಬಳಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆಯಿದ್ದ ಅಪಾರ ಪ್ರಮಾಣದ ಗಾಂಜಾ ಬೆಳೆಯನ್ನ ಸಿಪಿಐ ಘೋಪಡೆ ನೇತೃತ್ವದ ತಂಡ ಜಪ್ತಿ ಮಾಡಿ ವಶಪಡಿಸಿಕೊಂಡಿದೆ.

    ಈ ಗಾಂಜಾ ಬೆಳೆ ಬೆಳೆಯುತ್ತಿದ್ದ ಕೊರಚರಹಟ್ಟಿಯ ರುದ್ರೇಶ್, ಎಂಪಿಎಂಸಿಯ ಮಾಜಿ ಸದಸ್ಯ ಹಂಪಣ್ಣ ಹಾಗೂ ಗಂಗಾಧರನನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಗಾಂಜಾ ಬೆಳೆಯನ್ನ ಕೆ.ಜಿಗೆ ಸಾವಿರ ರೂಪಾಯಿಯಂತೆ ಹಸಿಯಾಗಿಯೇ ಮಾರಾಟ ಮಾಡಲಾಗುತ್ತಿತ್ತು.

    ಕಳೆದೆರಡು ದಿನಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿದ ಸಂಡೂರು ಪೊಲೀಸರು ಎಸ್.ಪಿ ಅರುಣ ರಂಗರಾಜನ್ ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 100 ಲಾಕರ್‌ನಲ್ಲಿತ್ತು 25 ಕೋಟಿ ರೂ. ಹಣ!

    100 ಲಾಕರ್‌ನಲ್ಲಿತ್ತು 25 ಕೋಟಿ ರೂ. ಹಣ!

    ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆಯು ಖಾಸಗಿ ವ್ಯಕ್ತಿಗಳಿಗೆ ಸಂಬಂಧಿಸಿದ ಕಟ್ಟಡಗಳ ಮೇಲೆ ದಾಳಿ ನಡೆಸಿ 100 ಲಾಕರ್ ಗಳಲ್ಲಿದ್ದ ಬರೋಬ್ಬರಿ 25 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದೆ.

    ದೆಹಲಿಯ ಚಾಂದನಿಚೌಕ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಒಟ್ಟು 8 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಬೃಹತ್ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಹವಾಲಾ ವ್ಯಾಪಾರಿಗಳು ತಮ್ಮ ಹಣವನ್ನು ಭದ್ರವಾಗಿ ಕಾಪಾಡಿಕೊಳ್ಳಲು ಈ ರೀತಿ ಖಾಸಗಿ ಲಾಕರ್ ಗಳನ್ನು ಬಳಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದ್ದು, 100 ಲಾಕರ್ ಗಳಲ್ಲಿ 25 ಕೋಟಿ ರೂ. ನಗದನ್ನು ಐಟಿ ಇಲಾಖೆ ವಶಪಡಿಸಿಕೊಂಡಿದೆ.

    ತಂಬಾಕು ವ್ಯಾಪಾರಿಗಳು, ರಾಸಾಯನಿಕ ವ್ಯಾಪಾರಿಗಳು ಮತ್ತು ಒಣ ಹಣ್ಣಿನ ವಿತರಕರು ಸೇರಿದಂತೆ ದೆಹಲಿ ಪ್ರಮುಖ ವ್ಯಕ್ತಿಗಳಿಗೆ ಸಂಬಂಧಿಸಿದ ಹಣ ಎನ್ನುವ ವಿಚಾರ ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಉದ್ಯಮಿಗಳು ಹವಾಲಾ ವ್ಯವಹಾರ ನಡೆಸುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.

    ಸದ್ಯಕ್ಕೆ ಐಟಿ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ತನಿಖೆ ಶುರುಮಾಡಿದ್ದಾರೆ. ಈ ವರ್ಷದಲ್ಲಿ ತನಿಖಾ ಸಂಸ್ಥೆಗಳು ನಡೆಸಿದ ಮೂರನೇ ಪ್ರಮುಖವಾದ ‘ಲಾಕರ್ ಕಾರ್ಯಾಚರಣೆ’ ಇದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡ್ತಿದ್ದವ ಅರೆಸ್ಟ್ – 15 ವಾಹನಗಳು ವಶಕ್ಕೆ

    ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡ್ತಿದ್ದವ ಅರೆಸ್ಟ್ – 15 ವಾಹನಗಳು ವಶಕ್ಕೆ

    ಕೋಲಾರ: ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಹಲವೆಡೆ ದ್ವಿಚಕ್ರ ವಾಹನ ಕದಿಯುತ್ತಿದ್ದ ಬೈಕ್ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಶ್ರೀನಿವಾಸಪುರದ ಶೇಖ್ ಯಾಸೀನ್ ಅರ್ಪತ್ ಬಂಧಿತ ಆರೋಪಿ. ಈತ ಮೆಕ್ಯಾನಿಕ್ ಆಗಿದ್ದು, ನಕಲಿ ಕೀಲಿಗಳನ್ನ ಬಳಸಿಕೊಂಡು ಬೈಕ್‍ ಗಳನ್ನ ಕದಿಯುತ್ತಿದ್ದ ಎನ್ನಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಕದ್ದ ಬೈಕ್ ಗಳನ್ನ ಬೆಂಗಳೂರು ಸೇರಿದಂತೆ ವಿವಿಧೆಡೆ ಮಾರಾಟ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

    ಸದ್ಯ ಬಂಧಿತನಿಂದ 10 ಲಕ್ಷ ರೂಪಾಯಿ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ವಶದಲ್ಲಿರುವ ಆರೋಪಿಯನ್ನ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

    ಬಂಧಿತನಿಂದ ವಶಪಡಿಸಿಕೊಂಡ ಬೈಕ್‍ ಗಳನ್ನ ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಕಳವು ಮಾಡಿದ್ದ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಕೋಲಾರ ಎಸ್.ಪಿ ರೋಹಿಣಿ ಕಟೋಜ್  ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 289 ಮದ್ಯದ ಬಾಕ್ಸ್ ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

    289 ಮದ್ಯದ ಬಾಕ್ಸ್ ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

    ಕಾರವಾರ: ಮನೆಯ ನೆಲಮಾಳಿಗೆಯಲ್ಲಿ ಅಡಗಿಸಿಟ್ಟು ಮಾರಾಟ ಮಾಡುತಿದ್ದ ಗೋವಾ ಮದ್ಯವನ್ನು ಬೆಂಗಳೂರು ಮೂಲದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ 20 ಲಕ್ಷ ರೂ. ಮೌಲ್ಯದ 289 ಮದ್ಯದ ಬಾಕ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ರಾಮನಗರದ ನಾಗನಾಥ ಗಲ್ಲಿ ಹಾಗೂ ಗಣೇಶ್ ಗಲ್ಲಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಬೆಂಗಳೂರಿನಿಂದ ಆಗಮಿಸಿದ ವಿಶೇಷ ತಂಡ ನೆಲ ಮಾಳಿಗೆಯಲ್ಲಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದೆ. ನಾಗನಾಥ ಗಲ್ಲಿಯ ಚಂದ್ರಕಾಂತ್ ಹಾಗೂ ಗಣೇಶ್ ಗಲ್ಲಿಯ ಹರ್ಷ ಗಾಂವ್ಕರ್, ಪರುಶುರಾಮ್ ಎಂಬವರನ್ನು ಅಕ್ರಮ ಮದ್ಯ ಸಂಗ್ರಹಣೆ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

    ರಾಮನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲ ಹಬ್ಬಿದ್ದು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಜರುಗಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಸ್ಥಳೀಯರು ಬೆಂಗಳೂರಿನ ಅಬಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಂಗಳೂರಿನಿಂದ ಆಗಮಿಸಿದ ಅಬಕಾರಿ ಅಧಿಕಾರಿ ರವಿ ಕುಮಾರ್ ನೇತ್ರತ್ವದ ತಂಡ ದಾಳಿ ನಡೆಸಿ ದೊಡ್ಡ ಮೊತ್ತದ ಗೋವಾ ಮದ್ಯ ವಶಪಡಿಸಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವ್ಯಕ್ತಿಯ ಬೆಲ್ಟ್, ಶೂಗಳಲ್ಲಿ 3 ಕೋಟಿ ಮೌಲ್ಯದ ಚಿನ್ನ ಪತ್ತೆ!

    ವ್ಯಕ್ತಿಯ ಬೆಲ್ಟ್, ಶೂಗಳಲ್ಲಿ 3 ಕೋಟಿ ಮೌಲ್ಯದ ಚಿನ್ನ ಪತ್ತೆ!

    ಕೊಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆದಾಯ ತೆರಿಗೆ ಗುಪ್ತಚರ ನಿರ್ದೇಶನಾಲಯವು(ಡಿಆರ್‍ಐ) ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಚಿನ್ನದ ಬಿಸ್ಕತ್ ನನ್ನು ವಶಪಡಿಸಿಕೊಂಡಿದೆ.

    ಡಿಆರ್ ಐ  ಅಧಿಕಾರಿಗಳು ನ್ಯೂ ಜಲ್‍ಪಾಲ್‍ಗುರಿ ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಅನುಮಾನ ಮೇರೆಗೆ ಪರಿಶೀಲನೆ ನಡೆಸಿದಾಗ ಆತನ ಬಳಿ 56 ಚಿನ್ನದ ಬಿಸ್ಕತ್ ಪತ್ತೆಯಾಗಿದ್ದು, ಸುಮಾರು 9.2 ಕೆ.ಜಿ ತೂಕ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಚಿನ್ನವನ್ನು ಮ್ಯಾನ್ಮಾರ್ ದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ವ್ಯಕ್ತಿ ಅಸ್ಸಾಂನ ಗುವಾಹಾಟಿಯಲ್ಲಿನ ಮಣಿಪುರಿ ವ್ಯಕ್ತಿಯಿಂದ ಚಿನ್ನದ ಬಿಸ್ಕತ್ ಗಳನ್ನು ಪಡೆದುಕೊಂಡಿದ್ದನು ಎಂದು ತನಿಖೆ ಸಂಸ್ಥೆ ತಿಳಿಸಿದೆ.

    ಸದ್ಯಕ್ಕೆ ಡಿಆರ್‍ಐ ಕಳ್ಳಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದೆ. ಈತ ಪಶ್ಚಿಮ ಬಂಗಾಳದ ಹೂಗ್ಲಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಈತ ಕಳ್ಳಸಾಗಾಣಿಕೆಯ ಚಿನ್ನದ ಬಿಸ್ಕತ್ ಗಳನ್ನು ತನ್ನ ಸೊಂಟದ ಸುತ್ತಲೂ ವಿಶೇಷವಾದ ಬಟ್ಟೆಯಿಂದ ತಯಾರಿಸಿದ್ದ ಬೆಲ್ಟ್ ನಲ್ಲಿ ಮತ್ತು ಸ್ಪೋರ್ಟ್ಸ್ ಶೂಗಳ ಒಳಭಾಗದಲ್ಲಿ ಅಡಗಿಸಿಕೊಂಡಿದ್ದನು ಎಂದು ಡಿಆರ್ ಐ ಹೇಳಿಕೆ ನೀಡಿದೆ.

    ಸದ್ಯಕ್ಕೆ ಡಿಆರ್‍ಐಯೂ ಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದೆ. ಆತನಿಂದ ವಿದೇಶಿ ಮೂಲದ 9.296 ಕೆಜಿ ಚಿನ್ನದ ಬಿಸ್ಕತ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 3.08 ಕೋಟಿ ರೂ. ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಲಕ್ಷಾಂತರ ರೂ. ಮೌಲ್ಯದ 223 ಕೆಜಿ ಗಾಂಜಾ ವಶ

    ಲಕ್ಷಾಂತರ ರೂ. ಮೌಲ್ಯದ 223 ಕೆಜಿ ಗಾಂಜಾ ವಶ

    ಬೆಂಗಳೂರು: ದೇವನಹಳ್ಳಿಯ ಟೋಲ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 223 ಕೆಜಿ ಗಾಂಜಾವನ್ನು ಮಾದಕವಸ್ತು ನಿಯಂತ್ರಣ ವಿಭಾಗಾಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

    ಆಂಧ್ರಪ್ರದೇಶದ ನೋಂದಣಿ ಹೊಂದಿದ್ದ ಕಾರಿನಲ್ಲಿ ಮೂವರು ವ್ಯಕ್ತಿಗಳು ಗಾಂಜಾವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಪಡೆದ ಮಾದಕವಸ್ತು ನಿಯಂತ್ರಣ ಅಧಿಕಾರಿಗಳು ದೇವನಹಳ್ಳಿ ಟೋಲ್ ಬಳಿ ದಾಳಿ ನಡೆಸಿ, ಕಿಂಗ್ ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 223 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಕೊಂಡಿದ್ದಾರೆ. ಬಂಧಿತರು ಕರ್ನಾಟಕ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಗಾಂಜಾ ಸಪ್ಲೈ ಮಾಡುತ್ತಿದ್ದ ಕಿಂಗ್ ಪಿನ್ ಗಳೆಂದು ತಿಳಿದು ಬಂದಿದೆ.

    ಆರೋಪಿಗಳು ವಿಶಾಖಪಟ್ಟಣಂನಿಂದ ಮಹಾರಾಷ್ಟ್ರಕ್ಕೆ ಬೆಂಗಳೂರು ಮಾರ್ಗವಾಗಿ ಗಾಂಜಾ ಸಾಗಿಸುತ್ತಿದ್ದರು. ತೆಲಂಗಾಣದಲ್ಲಿ ಚುನಾವಣೆ ನಿಮಿತ್ತ ಬಿಗಿಭದ್ರತೆ ಕೈಗೊಳ್ಳಲಾಗಿತ್ತು. ಹೀಗಾಗಿ ಆರೋಪಿಗಳು ಬೆಂಗಳೂರು ಮಾರ್ಗವಾಗಿ ಸಾಗಿಸುವ ಯತ್ನ ಮಾಡಿದ್ದರು ಎನ್ನಲಾಗುತ್ತಿದೆ.

    ಘಟನೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಉಡುಪಿಯಲ್ಲಿ ದಾಖಲೆ ಇಲ್ಲದ ಎರಡು ಚೀಲದಲ್ಲಿದ್ದ 1.65 ಕೋಟಿ ರೂ. ವಶ

    ಉಡುಪಿಯಲ್ಲಿ ದಾಖಲೆ ಇಲ್ಲದ ಎರಡು ಚೀಲದಲ್ಲಿದ್ದ 1.65 ಕೋಟಿ ರೂ. ವಶ

    ಉಡುಪಿ: ಶಿವಮೊಗ್ಗ ಉಪಚುನಾವಣೆ ಹಿನ್ನೆಲೆಯಲ್ಲಿ ಕೋಟಿ ಕೋಟಿ ಕಾಂಚಾಣ ಹರಿದಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿತ್ತು. ಇಂತಹ ಆರೋಪಕ್ಕೆ ಪುಷ್ಟಿ ನೀಡುವಂತೆ ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ದಾಖಲೆ ಇಲ್ಲದ 1.65 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ.

    1.65 ಕೋಟಿ ರೂ. ಮೊತ್ತ ಶಿವಮೊಗ್ಗ ಉಪ ಚುನಾವಣೆ ಹಂಚಿಕೆಗೆ ಬಂದಿತ್ತಾ ಎಂಬ ಸಂಶಯ ಶುರುವಾಗಿದೆ. ಉಡುಪಿ ರೈಲ್ವೆ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ರಾಜಸ್ಥಾನದ ಇಬ್ಬರು ಹಾಗೂ ಕಣ್ಣೂರಿನ ಮತ್ತೊರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಹಣ ವಶಕ್ಕೆ ಪಡೆದು, ರೈಲ್ವೇ ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

    ವಶದಲ್ಲಿರುವ ಮೂರು ಮಂದಿ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆರೋಪಿಗಳು ರಾಜಸ್ಥಾನದಿಂದ ಮುಂಬೈ ಮೂಲಕ ಕೇರಳದ ಎರ್ನಾಕುಲಂಗೆ ಟಿಕೆಟ್ ಪಡೆದಿದ್ದರು ಎನ್ನಲಾಗಿದೆ. ನೇತ್ರಾವತಿ ಏಕ್ಸ್ ಪ್ರೆಸ್ ರೈಲಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾಗ ಕುಮುಟಾದಲ್ಲಿ ಪೊಲೀಸರಿಗೆ ಅನುಮಾನ ಬಂದಿದೆ. ವಿಚಾರಿಸಿದಾಗ ದುಡ್ಡಿರುವ ಎರಡು ಚೀಲಗಳು ಪತ್ತೆಯಾಗಿದೆ. ರಾಜಸ್ಥಾನದಿಂದ ಬಂದ ಹಣ ಪಡೆಯಲು ಕಣ್ಣೂರಿನ ವ್ಯಕ್ತಿ ಮಂಗಳೂರಿಗೆ ಬಂದಿದ್ದ. ಆತನನ್ನು ಉಡುಪಿಗೆ ಕರೆಸಿ ವಶಕ್ಕೆ ಪಡೆಯಲಾಗಿದೆ. ರೈಲ್ವೇ ಪೊಲೀಸರು ಸಂಶಯ ಬಂದು ಟಿಕೆಟ್ ಕೇಳಿದಾಗ ಅಕ್ರಮ ಹಣಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಉಡುಪಿ, ಮಂಗಳೂರಿನ ಐಟಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಉಡುಪಿ ರೈಲ್ವೇ ರಕ್ಷಣಾ ದಳದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಉಪಚುನಾವಣೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ತೀವ್ರ ವಿಚಾರಣೆ ಮಾಡಿದ್ದಾರೆ.

    ಆರೋಪಿಗಳಲ್ಲಿ ಇಬ್ಬರು ಜಮೀನು ಖರೀದಿಗಾಗಿ ಹಣ ತಂದಿರುವ ಮಾಹಿತಿ ನೀಡಿದ್ದಾರೆ. ಕಣ್ಣೂರಿನ ವ್ಯಕ್ತಿ ಮನೆ ಬಳಕೆ ವಸ್ತು ಖರೀದಿಗಾಗಿ ಹಣ ಸಾಗಿಸಲಾಗಿದೆ ಎಂದು ಹೇಳಿದ್ದಾನೆ. ಬೇರೆ ಬೇರೆ ಉತ್ತರ,  ಅಧಿಕಾರಿಗಳು ಹಾಗೂ ಪೊಲೀಸರನ್ನು ಮತ್ತಷ್ಟು ಸಂಶಯಕ್ಕೆ ತಳ್ಳಿದೆ.

    ಸಂಶಯಕ್ಕೆ ಎಡೆ: ದಾಖಲೆಯಿಲ್ಲದೆ ಇಷ್ಟು ದೊಡ್ಡ ಮೊತ್ತ ಸಾಗಿಸುವುದು ತಪ್ಪು. ಉಪ ಚುನಾವಣೆ ಹಿನ್ನೆಲೆಯಲ್ಲಿ ತನಿಖೆ ತೀವ್ರವಾಗಿ ನಡೆಯುತ್ತಿದೆ. ವಶದಲ್ಲಿರುವ ಸಂಶಯಾಸ್ಪದ ವ್ಯಕ್ತಿಗಳು ಬೇರೆ ಬೇರೆ ಕಾರಣ ಕೊಡುತ್ತಿರುವುದು ಕೂಡಾ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳೂರು ಐಟಿ ಅಧಿಕಾರಿಗಳು ಹಣ ವಶಕ್ಕೆ ಪಡೆಯುತ್ತಾರೆ. ಸೂಕ್ತ ದಾಖಲೆ ಕೊಡಲು ಅವಕಾಶ ಕೂಡ ಇದೆ ಎಂದು ಉಡುಪಿ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾತ್ರೋರಾತ್ರಿ KSRTC  ಬಸ್ಸಿನಲ್ಲಿ 11 ಲಕ್ಷ ರೂ. ಪತ್ತೆ

    ರಾತ್ರೋರಾತ್ರಿ KSRTC ಬಸ್ಸಿನಲ್ಲಿ 11 ಲಕ್ಷ ರೂ. ಪತ್ತೆ

    ಬಳ್ಳಾರಿ: ದಾಖಲೆಗಳಿಲ್ಲದೇ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಹಣ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 11 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಜಿಟಿಟಿಸಿ ಬಳಿ ಸ್ಥಾಪಿಸಲಾಗಿರುವ ಸ್ಥಿರ ಕಣ್ಗಾವಲು ಪಡೆ(ಎಸ್‍ಎಸ್ಟಿ) ಚೆಕ್‍ಪೋಸ್ಟ್ ಬಳಿ ಶುಕ್ರವಾರ ರಾತ್ರಿ ಹಣವನ್ನು ಜಪ್ತಿ ಮಾಡಲಾಗಿದೆ. ದಾವಣಗೆರೆಯಿಂದ ಸೋಲಾಪುರಕ್ಕೆ (ಕೆಎ-17,ಎಫ್-1673) ನಂಬರ್ ನ ಕೆಎಸ್‍ಆರ್ ಟಿಸಿ ಬಸ್ ಹೋಗುತ್ತಿತ್ತು. ಈ ವೇಳೆ ಸ್ಥಿರ ಕಣ್ಗಾವಲು ಪಡೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಆಗ ಬಸ್ಸಿನಲ್ಲಿ 11,05,200 ರೂ. ಹಣ ಪತ್ತೆಯಾಗಿದೆ.

    ಈ ಕುರಿತು ವಿಚಾರಿಸಿದಾಗ ಸರಿಯಾದ ದಾಖಲೆ ನೀಡದ ಹಿನ್ನೆಲೆಯಲ್ಲಿ ಹಣವನ್ನು ವಶಪಡಿಸಿಕೊಂಡು ಹಗರಿಬೊಮ್ಮನಹಳ್ಳಿ ಖಜಾನೆಯಲ್ಲಿಡಲಾಗಿದೆ. ಈ ಹಣವು ಜೂಟುರು ಹನುಮೇಶ ಕುವೆಂಪು ಬಡಾವಣೆ ಗಂಗಾವತಿ(ಶ್ರೀ ರಾಮಾಂಜನೇಯ ಕಮರ್ಷಿಯಲ್ ಕಾರ್ಪೊರೇಷನ್ ಸಿಬಿಎಸ್ ಗಂಜ್ ಆರ್‍ಜಿ ರೋಡ್ ಅಂಗಡಿ ಮಾಲೀಕ) ಎಂಬವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

    ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಜಹೀರ್ ಅಬ್ಬಾಸ್, ತಾಲೂಕು ನೋಡಲ್ ಅಧಿಕಾರಿ ರಾಜಪ್ಪ, ತಹಸೀಲ್ದಾರ್ ರೆಹಮಾನ್ ಪಾಷ್ ಮತ್ತು ಎಂಸಿಸಿ ನೋಡಲ್ ಅಧಿಕಾರಿ ವಿಶ್ವನಾಥ್ ಕಾರ್ಯಚರಣೆ ನಡೆಸುತ್ತಿದ್ದರು.

    ಈ ಸಂಬಂಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv