Tag: ವಸತಿ ಕಟ್ಟಡ

  • ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ – 11 ಸಾವು, 8 ಮಂದಿಗೆ ಗಾಯ

    ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ – 11 ಸಾವು, 8 ಮಂದಿಗೆ ಗಾಯ

    ಮುಂಬೈ: ಎರಡು ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿ, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ನಡೆದಿದೆ.

    ಘಟನೆಯಲ್ಲಿ ಈಗಾಗಲೇ 11 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡವರನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ವಸತಿ ಕಟ್ಟಡದ ಸ್ಲ್ಯಾಬ್ ಕುಸಿದು ಆರು ಮಂದಿ ದಾರುಣ ಸಾವು

    ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪಕ್ಕದ 3 ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

    ಸ್ಥಳಕ್ಕೆ ಪೊಲೀಸರು, ಮತ್ತು ರಕ್ಷಣಾ ತಂಡಗಳ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

  • ವಸತಿ ಕಟ್ಟಡದ ಸ್ಲ್ಯಾಬ್ ಕುಸಿದು ಆರು ಮಂದಿ ದಾರುಣ ಸಾವು

    ವಸತಿ ಕಟ್ಟಡದ ಸ್ಲ್ಯಾಬ್ ಕುಸಿದು ಆರು ಮಂದಿ ದಾರುಣ ಸಾವು

    – ಮುಂದುವರಿದ ರಕ್ಷಣಾ ಕಾರ್ಯ

    ಮುಂಬೈ: ವಸತಿ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡು ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ. ಕಟ್ಟಡದಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

    ಉಲ್ಹಾಸ್ ನಗರದ ಮಹಾನಗರ ಪಾಲಿಕೆಯ ಅಧಿಕಾರಿಗಳ ಮಾಹಿತಿ ಪ್ರಕಾರ, ನೆಹರೂ ಚೌಕ್ ಪ್ರದೇಶದ ಸಾಯಿ ಸಿದ್ಧಿ ಕಟ್ಟಡದ ಐದನೇ ಮಹಡಿಯ ಸ್ಲ್ಯಾಬ್ ಕುಸಿದ ಪರಿಣಾಮ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತಪಟ್ಟ ಆರು ಮಂದಿಯನ್ನು ಪುನೀತ್ ಚಂದ್ವಾನಿ, ದಿನೇಶ್ ಚಂದ್ವಾನಿ, ದೀಪಕ್ ಚಂದ್ವಾನಿ, ಮೋಹಿನಿ ಚಂದ್ವಾನಿ, ಕೃಷ್ಣ ಬಜಾಜ್ ಮತ್ತು ಅಮೃತ ಬಜಾಜ್ ಎಂದು ಗುರುತಿಸಲಾಗಿದೆ.

    ಈ ಕಟ್ಟಡವನ್ನು 1995ರಲ್ಲಿ ಕಟ್ಟಡಲಾಗಿದೆ. ಕಟ್ಟಡದ 5ನೇ ಅಂತಸ್ತಿನ ಸ್ಲ್ಯಾಬ್ ಏಕಾಏಕಿ ಕುಸಿತಗೊಂಡಿದೆ. ಈ ಮೂಲಕ ಒಂದೇ ತಿಂಗಳಲ್ಲಿ ನಗರದಲ್ಲಿ ಎರಡನೇ ದುರಂತ ಸಂಭವಿಸಿದೆ. ಮೇ 15ರಂದು ಉಲ್ಹಾಸ್‍ನಗರದಲ್ಲಿ ವಸತಿ ಕಟ್ಟಡ ಕುಸಿತಗೊಂಡು 5 ಮಂದಿ ಮರಣ ಹೊಂದಿದ್ದರು.

  • ಕಳಪೆ ಕಾಮಗಾರಿ – KRIDL ವಿರುದ್ಧ ಬಿಸಿಎಂನಿಂದ ಕ್ರಿಮಿನಲ್ ಕೇಸ್ ದಾಖಲು

    ಕಳಪೆ ಕಾಮಗಾರಿ – KRIDL ವಿರುದ್ಧ ಬಿಸಿಎಂನಿಂದ ಕ್ರಿಮಿನಲ್ ಕೇಸ್ ದಾಖಲು

    ಕಲಬುರಗಿ: ಬಿಸಿಎಂ ವಸತಿ ನಿಲಯದ ಕಟ್ಟಡದ ಕಳಪೆ ಕಾಮಗಾರಿ ಮಾಡಿದ್ದಕ್ಕೆ ಕೆಆರ್‌ಐಡಿಎಲ್‌(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿ.) ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.

    2016ರಲ್ಲಿ ಬಿಸಿಎಂ ಇಲಾಖೆಯಿಂದ ವಸತಿ ನಿಲಯದ ಕಾಮಗಾರಿ ಪಡೆದ ಕೆಆರ್‌ಐಡಿಎಲ್‌ ಅವಧಿ ಮುಗಿದಿದ್ದರೂ ಸಹ ಕಟ್ಟಡ ಕಾಮಗಾರಿ ಮುಗಿಸಿರಲಿಲ್ಲ. ಹೀಗಾಗಿ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ್ ಸಂಗಾ ಅವರು ಸ್ಥಳ ಪರಿಶೀಲನೆಗೆ ತೆರಳಿದ್ದರು. ಮದರಸಹಳ್ಳಿಯ ಜಿಡಿಎ ಲೇಔಟ್ ಬಳಿ 3 ಕೋಟಿ 25 ಲಕ್ಷ ವೆಚ್ಚದಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಸೇರಿದಂತೆ ಕೆಆರ್‌ಐಡಿಎಲ್‌ ನಿರ್ಮಿಸುತ್ತಿರುವ ಜಿಲ್ಲೆಯ ಒಟ್ಟು 11 ವಸತಿ ನಿಲಯಗಳಿಗೆ ರಮೇಶ್ ಸಂಗಾ ಅವರು ಭೇಟಿ ನೀಡಿದರು.

    ಕಟ್ಟಡಗಳ ಕಾಮಗಾರಿ ಕಂಡ ರಮೇಶ್ ಸಂಗಾ ಅವರಿಗೆ ಆಶ್ಚರ್ಯವಾಗಿದೆ. ಒಂದೆಡೆ ಬಹುತೇಕ ಕಟ್ಟದ ಗೋಡೆಗಳು ಸಂಪೂರ್ಣ ಬಿರುಕು ಬಿಟ್ಟಿವೆ. ಇನ್ನೊಂದೆಡೆ ಕಟ್ಟಡ ಛಾವಣಿ ಸಹ ಹಲವೆಡೆ ಸೋರುತ್ತಿವೆ. ಅಷ್ಟೇ ಅಲ್ಲದೆ ಇಡೀ ಕಟ್ಟಡಕ್ಕೆ ಬಳಸಿದ ಎಲೆಕ್ಟ್ರಿಕಲ್ ವೈರಿಂಗ್ ಮತ್ತು ಡ್ರೈನೇಜ್ ಪೈಪ್‍ಗಳು ಐಎಸ್‍ಐ ಮಾರ್ಕ್ ಹೊಂದಿಲ್ಲ. ವಸತಿ ನಿಲಯದ ಬಹುತೇಕ ಬಾಗಿಲುಗಳು ಕಳಪೆ ಗುಣಮಟ್ಟದ್ದಾಗಿದ್ದು, ಈಗಾಗಲೇ ಅವುಗಳು ಮುರಿಯುವ ಹಂತಕ್ಕೆ ಬಂದಿವೆ.

    ಕೈ ಮುಟ್ಟಿದರೆ ಸಾಕು ಕಟ್ಟಡದ ಗೋಡೆಯ ಸಿಮೆಂಟ್ ಕುಸಿದು ಬಿಳುತ್ತಿದೆ. ಹೀಗಿರುವಾಗ ಇದು ವಸತಿಗೆ ಯೋಗ್ಯವಲ್ಲ, ಅವರ ಪ್ರಾಣದ ಜೊತೆ ಚೆಲ್ಲಾಟವಾಡಿ ಬಿಸಿಎಂ ಇಲಾಖೆಗೆ ಕೆಆರ್‌ಐಡಿಎಲ್‌ ಅಧಿಕಾರಿಗಳು ವಂಚಿಸಿದ ಹಿನ್ನೆಲೆಯಲ್ಲಿ ಕೆಆರ್‌ಐಡಿಎಲ್‌ ಕಾರ್ಯನಿರ್ವಾಹಕ ಅಭಿಯಂತರಾದ ಧನ್ಯಕುಮಾರ್ ಹಾಗೂ ಕಾರ್ಯನಿರ್ವಾಹಕ ಅಭಿಯಂತರ ಎಲ್.ಜೆ ಪಾಟೀಲ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಈ ಮೂಲಕ ಕಳಪೆ ಕಾಮಗಾರಿಗೆ ಹೆಸರಾದ ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ ಬೇರೆ ಇಲಾಖೆಯಿಂದ ಮೊದಲ ಬಾರಿಗೆ ಕ್ರಿಮಿನಲ್ ಕೇಸ್ ದಾಖಲಾಗಿದೆ.