Tag: ವಸತಿ ನಿಲಯ

  • Kolar | ವಸತಿ ನಿಲಯದಲ್ಲಿ ಮಂಚಕ್ಕೆ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

    Kolar | ವಸತಿ ನಿಲಯದಲ್ಲಿ ಮಂಚಕ್ಕೆ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

    ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿ (Student) ವಸತಿ ನಿಲಯದಲ್ಲಿ (Hostel) ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಕಾಲೇಜು ಹಾಸ್ಟೆಲ್‌ನ ಈ ಘಟನೆ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಹಾಸ್ಟೆಲ್‌ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದವಳಾಗಿದ್ದು, ಸದ್ಯ ಪೋಷಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ – ಸ್ಫೀಕರ್‌ ವಾರ್ನಿಂಗ್‌ ಬೆನ್ನಲ್ಲೇ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಸಂವಿಧಾನಿಕ ಸಂಘರ್ಷ?

  • ಅಡುಗೆ ಮಾಡುವ ಮುನ್ನ ಅಕ್ಕಿ ತೊಳೆದಿರಲಿಲ್ಲ- 31 ವಿದ್ಯಾರ್ಥಿಗಳು ಅಸ್ವಸ್ಥ

    ಅಡುಗೆ ಮಾಡುವ ಮುನ್ನ ಅಕ್ಕಿ ತೊಳೆದಿರಲಿಲ್ಲ- 31 ವಿದ್ಯಾರ್ಥಿಗಳು ಅಸ್ವಸ್ಥ

    ಹೈದರಾಬಾದ್: ಸರ್ಕಾರಿ ಶಾಲೆಯ (Govt School) ವಸತಿ ನಿಲಯದಲ್ಲಿ (Hostel) ರಾತ್ರಿ ಊಟ (Dinner) ಸೇವಿಸಿದ ಬಳಿಕ 31 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ (Hospital) ಸೇರಿರುವ ಘಟನೆ ತೆಲಂಗಾಣದ (Telangana) ಕುಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಕಾಗಜನಗರ ಪಟ್ಟಣದ ಬಾಲಕರ ವಸತಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಮಾಡಿದ ಬಳಿಕ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಮಾಧ್ಯಮದವರು ಶಾಲೆಗೆ ಬಂದಿದ್ದಾರೆ ಆದರೆ ಸಿಬ್ಬಂದಿ ಅವರನ್ನು ಆವರಣಕ್ಕೆ ಪ್ರವೇಶಿಸಲು ಬಿಡಲಿಲ್ಲ.

    ಬಳಿಕ ವಸತಿ ನಿಲಯದ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಹಿಂಬಾಗಿಲಿನಿಂದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ತಮ್ಮ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲೂ ಇದೆ ಐಸಿಸ್‌ ಗ್ಯಾಂಗ್‌ – ಮೂವರು ಶಂಕಿತ ಉಗ್ರರ ವಿರುದ್ಧ ಎಫ್‌ಐಆರ್

    ವಸತಿ ನಿಲಯದಲ್ಲಿ ಸಿಬ್ಬಂದಿ ಕೊರತೆಯಿರುವುದರಿಂದ ಅಡುಗೆ ಮಾಡುವ ಮುನ್ನ ಅಕ್ಕಿಯನ್ನು ತೊಳೆದಿರಲಿಲ್ಲ. ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಕ್ರಿಮಿ ಕೀಟಗಳು ಕಾಣಿಸಿಕೊಂಡಿರುವ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ, ಘಟನೆಯ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ(ಡಿಎಂಹೆಚ್‌ಒ) ಪ್ರಭಾಕರ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

    Live Tv
    [brid partner=56869869 player=32851 video=960834 autoplay=true]

  • ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಸೋರಿಕೆ (Leaked Videos) ಮಾಡಿದ್ದು, ಇದರ ಹಿನ್ನೆಲೆ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದೆ.

    ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    ಈ ಘಟನೆಯಿಂದಾಗಿ ನೊಂದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಆದರೆ ಈ ವದಂತಿಯನ್ನು ನಿರಾಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

    ಇದೀಗ ನಡೆಯುತ್ತಿರುವ ಭಾರೀ ಪ್ರತಿಭಟನೆಯ ಬಗ್ಗೆ ಶಾಂತಿ ಕಾಪಾಡುವಂತೆ ಪಂಜಾಬ್ ಶಿಕ್ಷಣ ಸಚಿವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತವಾಗಿರಬೇಕು. ನಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಇದು ಅತ್ಯಂತ ಸೂಕ್ಷ್ಮ ವಿಚಾರ. ನಮ್ಮ ಸಹೋದರಿಯರು ಹಾಗೂ ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿರುವುದಾಗಿದೆ. ಸಾಮಾಜಿಕ ಮಾಧ್ಯಮಗಳ ಬಗ್ಗೆ ನಾವು ತುಂಬಾ ಜಾಗರೂಕರಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್

    Live Tv
    [brid partner=56869869 player=32851 video=960834 autoplay=true]

  • ಕಳಪೆ ಆಹಾರ ವಿತರಣೆ ಸಮಸ್ಯೆ ಡಿಸಿಗೆ ಹೇಳಲು 10 ಕಿ.ಮೀ ನಡೆದ ವಿದ್ಯಾರ್ಥಿನಿಯರು

    ಕಳಪೆ ಆಹಾರ ವಿತರಣೆ ಸಮಸ್ಯೆ ಡಿಸಿಗೆ ಹೇಳಲು 10 ಕಿ.ಮೀ ನಡೆದ ವಿದ್ಯಾರ್ಥಿನಿಯರು

    ಯಾದಗಿರಿ: ವಸತಿ ಶಾಲೆಯಲ್ಲಿ ನೀಡುತ್ತಿರುವ ಕಳಪೆ ಆಹಾರ ವಿತರಣೆ ಸಮಸ್ಯೆಯನ್ನು ವಿದ್ಯಾರ್ಥಿನಿಯರು ಡಿಸಿಗೆ ಹೇಳಲು 10 ಕಿ.ಮೀ ನಡೆದು ಜಿಲ್ಲಾಧಿಕಾರಿ ಆಫೀಸ್‍ಗೆ ಬಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಯಾದಗಿರಿ ತಾಲೂಕಿನ ಮುಂಡರಗಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ, ಕಳಪೆ ಆಹಾರ ನೀಡುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಊಟ ಮಾಡದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    ಒಂದು ಕಡೆ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯಾರ್ಥಿನಿಯರು ವಸತಿ ಶಾಲೆಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಹಾಗೂ ಪ್ರಾಂಶುಪಾಲರನ್ನು ಬದಲಾವಣೆ ಮಾಡಬೇಕೆಂದು ಒತ್ತಾಯ ಮಾಡಿದರು. ಸುಮಾರು 10ಕಿ.ಮೀ ವರಗೆ ನಡೆದುಕೊಂಡು ಬಂದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:  ಕಾಂಗ್ರೆಸ್‍ನವರು ಮತದಾರರಿಗೆ ನೇರವಾಗಿ ಹಣ ಹಂಚಿದ್ದಾರೆ: ಈಶ್ವರಪ್ಪ

    ವಸತಿ ಶಾಲೆಯಲ್ಲಿ ಗುಣಮಟ್ಟದ ಆಹಾರ, ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ಕೂಡಲೇ ಸಮಸ್ಯೆ ಬಗೆ ಹರಿಸಬೇಕೆಂದು ಪ್ರತಿಭಟನೆ ನಿರತ ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ವೇಳೆ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕೂಡಲೇ ಸಮಸ್ಯೆ ಬಗೆಹರಿಸಲಾಗುತ್ತದೆಂದು ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ:  ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನ ಸಹಜ ಎನ್ನುವ ರೀತಿ ಬಿಂಬಿಸುವ ಕೆಲಸ ನಡೆಯುತ್ತಿದೆ: ಸಿ.ಟಿ.ರವಿ

  • ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ

    ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ

    – ಪ್ರವಾಸೋದ್ಯಮ ಇಲಾಖೆಯ ವಸತಿಗೃಹಗಳಲ್ಲಿ ಸಾವಿರಾರು ರೂಪಾಯಿ

    ಚಿಕ್ಕಬಳ್ಳಾಪುರ: ಬಡವರ ಪಾಲಿನ ಊಟಿ ಅಂತಲೇ ಪ್ರಖ್ಯಾತಿ. ಅದ್ರೆ ಇದೀಗೆ ಅದೇ ಬಡವರ-ಮಧ್ಯಮ ವರ್ಗದವರ ಪಾಲಿಗೆ ಚಿನ್ನದ ಮೊಟ್ಟೆ ಎಂಬಂತಾಗಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೋಗಿ ಬರಬೇಕಾದ್ರೆ ಈಗ ನೀವು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗಿದ್ದು, ಜೇಬು ತುಂಬಾ ದುಡ್ಡು ಇರಬೇಕು ಎಂಬಂತಾಗಿದೆ ಅಂತ ಪ್ರವಾಸಿಗರು ದೂರುತ್ತಿದ್ದಾರೆ.

    ಬೆಂಗಳೂರಿಗೆ ಸಮೀಪದಲ್ಲರುಬ ಈ ನಂದಿಗಿರಿಧಾಮ ಬೆಂಗಳೂರಿಗರ ಪಾಲಿನ ವಿಕೇಂಡ್ ಹಾಟ್ ಸ್ಪಾಟ್ ಅಂತ ಎಲ್ಲರಿಗೂ ಗೊತ್ತಿರುವ ವಿಚಾವರ. ಇನ್ನೂ ಕೊರೊನಾ ಅನ್‍ಲಾಕ್ ಆಗಿದ್ದೇ ತಡ ಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದುಬರ್ತಿದೆ. ಹೀಗೆ ಬಂದ ಪ್ರವಾಸಿಗರಿಗೆ ಈಗ ಜೇಬು ಸುಡುವಂತಾಗಿದೆ. ಕಾರಣ ತೋಟಗಾರಿಕಾ ಇಲಾಖೆ ಸುಪರ್ದಿಯಲ್ಲಿದ್ದ ನೆಹರು ನಿಲಯ ಸೇರಿದಂತೆ ಇತರೆ ವಸತಿಗೃಹಗಳನ್ನ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪರಿಣಾಮ ನಂದಿಗಿರಿಧಾಮದ ವಸತಿಗೃಹಗಳ ನೂತನ ದರ ಪ್ರವಾಸಿಗರ ಪಾಲಿಗೆ ದುಬಾರಿಯಾಗ್ತಿದೆ.

    ನಂದಿಬೆಟ್ಟದಲ್ಲಿ ನೀವು 1 ದಿನ ತಂಗಬೇಕಾದ್ರೆ ನೆಹರು ನಿಲಯದಲ್ಲಿ ವಿಶೇಷ ವಿವಿಐಪಿ ಸೂಟ್ ವಸತಿ ಗೃಹಗಳು, ಗಾಂಧಿ ನಿಲಯದಲ್ಲಿ ಕೆಎಸ್‍ಟಿಡಿಸಿ ವಸತಿ ಗೃಹಗಳಿವೆ. ಈಗ ಸಾಮಾನ್ಯ ವಸತಿ ಗೃಹಗಳ ಆರಂಭಿಕ ದರ 2,000 ರೂ. ವಿಐಪಿ, ವಿವಿಐಪಿ ರೂಂಗಳ ಬಾಡಿಗೆ ದರ 4,000-5,000 ರೂಪಾಯಿವರೆಗೆ ಆಗಲಿದ್ದು, ವಾರಾಂತ್ಯಗಳಲ್ಲಿ 6,000 ರೂ. ಸಹ ಇರಲಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಪಾಲಿನ ಪ್ರವಾಸಿಗರಿಗೆ ಈ ದರ ದುಬಾರಿಯಾಗಲಿದ್ದು, ಪ್ರವಾಸಿಗರ ಬೇಸರಕ್ಕೆ ಕಾರಣವಾಗ್ತಿದೆ.

    ಇನ್ನೂ ವಸತಿಗೃಹಗಳ ಪರಿ ಇದಾದ್ರೆ, ನಂದಿಗಿರಿಧಾಮಕ್ಕೆ ಬರೋ ಪ್ರವಾಸಿಗರು ಜೇಬು ತುಂಬಾ ಕಾಸಿಟ್ಟುಕೊಂಡು ಬರಬೇಕಿದೆ. ಕಾರಣ ನಂದಿಗಿರಿಧಾಮ ಎಂಟ್ರಿ ಆಗ್ತಿದ್ದಂತೆ ಪ್ರವೇಶ ಶುಲ್ಕ ತಲಾ 20 ರೂ ಆದೂ,್ರ ಬೈಕ್ ಪಾರ್ಕಿಂಗ್ ಶುಲ್ಕ, ಹೆಲ್ಮೆಟ್ ದಾಸ್ತಾನು ಶುಲ್ಕ ಅಂತ ನೂರಾರು ರೂಪಾಯಿ ಖಾಲಿ ಆಗುತ್ತೆ. ಇನ್ನೂ ಬೆಟ್ಟ ಸುತ್ತಾಡಿ ಸುಸ್ತಾಗಿದೆ ಅಂತ ಕಾಫಿ, ಟೀ, ತಿಂಡಿ, ಊಟ ಅಂತ ಹೋದ್ರೆ ಹೋಟೆಲ್ ಗಳಿಗೆ ಹೋದ್ರೆ ಅಲ್ಲೂ ದುಪ್ಪಟ್ಟು ದರ.

    ಸಾಮಾನ್ಯವಾಗಿ 10 ರೂಪಾಯಿ ಕಾಫಿ-ಟೀ ಇಲ್ಲಿ 20 ರೂಪಾಯಿ, ಇಡ್ಲಿ-ವಡೆ-80 ರೂಪಾಯಿ, ಮಸಾಲೆ ದೋಸೆ-80 ರೂಪಾಯಿ, ಉದ್ದಿನ ವಡೆ ಸಹ 80 ರೂಪಾಯಿ ಹೀಗೆ ಎಲ್ಲ ದರಗಳು ಸಹ ದುಬಾರಿ. ಇದರಿಂದ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರು ನೂರು ಅಲ್ಲ ಸಾವಿರಾರು ರೂಪಾಯಿ ಇದ್ರೇ ಮಾತ್ರ ನಂದಿಬೆಟ್ಟದತ್ತ ಬರುವಂತಾಗಿದೆ. ಹಾಗಾಗಿ ಸರ್ಕಾರ ಇಲಾಖೆ ಅದಷ್ಟು ಬಡ ಮಧ್ಯಮ ಪ್ರವಾಸಿ ಸ್ನೇಹಿ ದರ ನಿಗದಿ ಮಾಡಬೇಕು ಅಂತಾರೆ ಪ್ರವಾಸಿಗರು.

    ಓಟ್ಟಿನಲ್ಲಿ ಅಭಿವೃದ್ದಿ ಹೆಸರಲ್ಲಿ ನಂದಿಗಿರಿಧಾಮವನ್ನ ಹೈಟೆಕ್ ಮಾಡುವ ಸಲುವಾಗಿ ಪ್ರವಾಸೋದ್ಯಮ ಇಲಾಖೆ ವಸತಿನಿಲಯಗಳ ಅಂದ ಚೆಂದ ಹೆಚ್ಚಿಸಿದೋರ ಜೊತೆ ಜೊತೆಗೆ ಸ್ವಚ್ಚತೆಗೆ ಆದ್ಯತೆ ಕೊಡ್ತಿದೆ. ಆದ್ರೆ ಈ ವಸತಿ ನಿಲಯಗಳ ಬಾಡಿಗೆ ದರ ಜನ ಸಾಮಾನ್ಯರ ಪಾಲಿಗೆ ಕೈಗೆ ಎಟುಕುದಂತಾಗುತ್ತಿದ್ದು, ಕಣ್ಣಿಗೆ ಕಾಣೋ ನಂದಿಬೆಟ್ಟ ಬಡ ಮಧ್ಯಮದವರ ಪಾಲಿಗೆ ದೂರ ಆಗುವಂತಾಗಿದೆ.

  • ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ

    ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ

    ಮಡಿಕೇರಿ: ಪದವಿ ಪೂರ್ವ ಕಾಲೇಜು ಆರಂಭವಾಗಿ ತಿಂಗಳು ಕಳೆಯುವಷ್ಟರಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ.

    ಕಳೆದ ವಾರವಷ್ಟೇ ವಿದ್ಯಾರ್ಥಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಪೋಷಕರನ್ನು ಕರೆದು ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿಕೊಡಲಾಗಿತ್ತು. ತೀವ್ರ ಜ್ವರ ಇದ್ದಿದ್ದರಿಂದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ವಿದ್ಯಾರ್ಥಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಕಾಲೇಜು ಪ್ರಾಂಶುಪಾಲ ಲೋಕೇಶ್, ಆರೋಗ್ಯ ಇಲಾಖೆ ಸಿಬ್ಬಂದಿ ಕರೆಸಿ ಕಾಲೇಜಿನಲ್ಲೇ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ 24 ವಿದ್ಯಾರ್ಥಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆರೋಗ್ಯ ಸರಿಯಿಲ್ಲವೆಂದು ಮನೆಗೆ ಕಳುಹಿಸಿದ್ದ ವಿದ್ಯಾರ್ಥಿ ಸೇರಿದಂತೆ ಒಟ್ಟು 25 ವಿದ್ಯಾರ್ಥಿಗಳಿಗೆ ಮೊದಲು ಕೋವಿಡ್ ಪಾಸಿಟಿವ್ ಬಂದಿದೆ.

    ಜನವರಿ 11 ರಂದು ಕಾಲೇಜು ಆರಂಭವಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕೊವಿಡ್ ನೆಗೆಟಿವ್ ವರದಿ ಪಡೆದೇ ಕಾಲೇಜಿಗೆ ತರಗತಿಗೆ ಅವಕಾಶ ನೀಡಲಾಗಿತ್ತು. ಆದರೆ ಮೊದಲು ಪಾಸಿಟಿವ್ ಬಂದ ವಿದ್ಯಾರ್ಥಿ ಆರೋಗ್ಯ ಸರಿಯಿಲ್ಲದೆ ಒಮ್ಮೆ ಮನೆಗೆ ಹೋಗಿ ಬಂದಿದ್ದ. ಹೀಗಾಗಿ ಆ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾಲೇಜಿನ ದ್ವಿತೀಯ ಪಿಯುಸಿ ತರಗತಿಯಲ್ಲಿ ಒಟ್ಟು 76 ವಿದ್ಯಾರ್ಥಿಗಳಿದ್ದು, 49 ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಉಳಿದ ಇಬ್ಬರು ಹೆಣ್ಣು ಮಕ್ಕಳಿಗೆ ಶೀತದ ಲಕ್ಷಣವಿದ್ದು ಆ ವಿದ್ಯಾರ್ಥಿನಿಯರನ್ನು ವಸತಿ ನಿಲಯದಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ.

    ಕಾಲೇಜಿನ ಎಲ್ಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ. ಆದರೆ ಎಲ್ಲರೂ ಪಾಸಿಟಿವ್ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿರುವುದರಿಂದ ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಕೊಡಗು ಡಿಎಚ್‍ಓ ಮೋಹನ್ ಕುಮಾರ್ ಹೇಳಿದ್ದಾರೆ.

  • ವಸತಿ ಶಾಲೆ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪೌರತ್ವ ಪಾಠ ಹೇಳಿದ ಶ್ರೀರಾಮುಲು

    ವಸತಿ ಶಾಲೆ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪೌರತ್ವ ಪಾಠ ಹೇಳಿದ ಶ್ರೀರಾಮುಲು

    ಚಿತ್ರದುರ್ಗ: ಗಡಿ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಕನ್ನಡಭ್ಯಾಸ ಮಾಡೋದೆ ವಿರಳ. ಹೀಗಾಗಿ ಕನ್ನಡ ಉಳಿಸುವ ನಿಟ್ಟಿನಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಜೊತೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಯರ್ರೇನಹಳ್ಳಿ ಬಳಿ ರಾಣಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಉದ್ಘಾಟಿಸಿದರು.

    ಈ ವೇಳೆ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು, ಮಕ್ಕಳು ಸಂಸ್ಕೃತಿ ಕಲಿಯಬೇಕು. ಗುರು ಹಿರಿಯರ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ರಾಜ್ಯದಲ್ಲಿ 824 ವಸತಿ ಶಾಲೆಗಳಿದ್ದು, ಇವುಗಳಲ್ಲಿ 1.60 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ 6ರಿಂದ 10ನೇ ತರಗತಿವರೆಗೆ ಮಕ್ಕಳು ಓದುತ್ತಿದ್ದಾರೆ. ಇದೇ ಶಾಲೆಗಳಲ್ಲಿ ಪಿಯುಸಿವರೆಗೂ ವಸತಿ ಶಾಲೆ ಮಾಡಬೇಕೆಂಬ ಬೇಡಿಕೆ ಇದೆ. ಅದನ್ನ ನಾನು ಪೂರೈಸುವ ಕೆಲಸ ಮಾಡುತ್ತೇನೆ. ಜೊತೆಗೆ ವಾಲ್ಮೀಕಿ ವಸತಿ ಶಾಲೆಗಳನ್ನೂ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಯರ್ರೇನಹಳ್ಳಿಯ ಈ ವಸತಿ ಶಾಲೆಗಳಲ್ಲಿ ಮಕ್ಕಳ ಆರೋಗ್ಯ ಪರಿಶೀಲನೆ ಮಾಡಲು ಒಬ್ಬ ವೈದ್ಯರು ಹಾಗೂ ನರ್ಸ್ ನಿಯೋಜನೆ ಮಾಡಲಾಗುವುದು ಎಂದರು.

    ಹಾಗೆಯೇ ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದರಿಂದ ಹಲವೆಡೆ ಗಲಭೆಗಳು ಆಗುತ್ತಿವೆ. ಪೌರತ್ವ ಕಾಯ್ದೆಯ ಬಗ್ಗೆ ಎಲ್ಲಾ ನಾಗರಿಕರು ಓದಿಕೊಳ್ಳಬೇಕು. ಮಕ್ಕಳು ಕೂಡ ಪೌರತ್ವ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಇದು ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, 1977ರಂದು ಜಾರಿಗೆ ತಂದ ಕಾಯ್ದೆಯನ್ನ ಇವತ್ತು ತಿದ್ದುಪಡಿ ಮಾಡಲಾಗಿದೆ. ಹಿಂದೆ ಆದ ಅನ್ಯಾಯ ಸರಿಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಮಕ್ಕಳಿಗೆ ತಿಳಿ ಹೇಳಿದರು.

    ಬೇರೆ ಬೇರೆ ದೇಶಗಳಿಂದ ಬಂದವರು ಇಲ್ಲಿ ನೆಲೆಸಬೇಕಾದರೆ ಕೆಲವು ದಾಖಲೆಗಳನ್ನ ನೀಡಬೇಕು. ಇವತ್ತು ಪಾಕ್, ಬಾಂಗ್ಲಾದೇಶ ಮತ್ತಿತರ ಕಡೆಯಿಂದ ಭಯೋತ್ಪಾದಕರು ಅಕ್ರಮವಾಗಿ ಬಂದು ನೆಲೆಸುತ್ತಿದ್ದಾರೆ. ಏನಾದರೂ ಅನಾಹುತಗಳಾದರೆ ಯಾರು ಹೊಣೆ? ಇದೆಲ್ಲವನ್ನೂ ಗಮನದಲ್ಲಿ ಇಟ್ಕೊಂಡು ಈ ಕಾಯ್ದೆ ಜಾರಿಗೆ ತರಲಾಗಿದೆ. ಹೀಗಾಗಿ ಎಲ್ಲರೂ ಈ ಕಾಯ್ದೆಯ ಒಳಿತನ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದರು ತಿಳಿಸಿದರು.

  • ಚಾಮರಾಜನಗರದಲ್ಲಿ ಹೆಣ್ಣು ಮಕ್ಕಳ ವಸತಿ ನಿಲಯ ಉದ್ಘಾಟನೆ

    ಚಾಮರಾಜನಗರದಲ್ಲಿ ಹೆಣ್ಣು ಮಕ್ಕಳ ವಸತಿ ನಿಲಯ ಉದ್ಘಾಟನೆ

    ಚಾಮರಾಜನಗರ: ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೂತನವಾಗಿ ನಿರ್ಮಾಣ ಮಾಡಲಾಗಿರುವ ಹೆಣ್ಣು ಮಕ್ಕಳ ವಸತಿ ನಿಲಯವನ್ನು ಉದ್ಘಾಟಿಸಿದರು.

    ಸುರೇಶ್ ಕುಮಾರ್ ಅವರಿಗೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ನಾರಾಯಣರಾವ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ನಿಖಿತ ಚಿನ್ನಸ್ವಾಮಿ, ಎಸ್ಪಿ ಆನಂದ್ ಕುಮಾರ್ ಸಾಥ್ ನೀಡಿದರು.

    ಉದ್ಘಾಟನೆಯ ಬಳಿಕ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ವಸತಿ ನಿಲಯಕ್ಕೆ ಅಗತ್ಯವಿರುವ ಪರಿಕರಗಳನ್ನು ಶೀಘ್ರವಾಗಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ನೂತನ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ನೀವು ಯಾವ ಯಾವ ಊರುಗಳಿಂದ ಆಗಮಿಸಿ ವಸತಿ ನಿಲಯದಲ್ಲಿ ದಾಖಲಾಗಿರುವಿರಿ ಎಂದು ಸಚಿವರು ವಿಚಾರಿಸಿದರು.

  • ಎರಡನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

    ಎರಡನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

    ಹಾವೇರಿ: ವಸತಿ ನಿಲಯದ ಎರಡನೇ ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಈಶ್ವರನಗರದಲ್ಲಿರುವ ದೇವರಾಜ್ ಅರಸು ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ.

    ಕಾವ್ಯಾ ಬೆನ್ನೂರ(18) ಮೃತಪಟ್ಟ ವಿದ್ಯಾರ್ಥಿನಿ. ಮೂಲತಃ ರಾಣೇಬೆನ್ನೂರು ತಾಲೂಕಿನ ಹನುಮಾಪುರ ನಿವಾಸಿಯಾಗಿದ್ದು, ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ.

    ಈ ಘಟನೆ ಬಗ್ಗೆ ಕೆಲವರು ಕಾವ್ಯಾ ರಾತ್ರಿ ಶೌಚಾಲಯಕ್ಕೆ ಹೋಗಿ ಹಿಂತಿರುಗಿ ಬರುತ್ತಿದ್ದ ವೇಳೆ ಕಾಲು ಜಾರಿ ಎರಡನೇ ಮಹಡಿಯಿಂದ ಬಿದ್ದಿದ್ದಾಳೆ ಎಂದು ಹೇಳುತ್ತಿದ್ದಾರೆ. ಆದರೆ ಪೋಷಕರು ತಮ್ಮ ಮಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ ಎಂದು ದೂರು ನೀಡಿದ್ದಾರೆ.

    ಈ ಬಗ್ಗೆ ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

  • ವಸತಿ ಶಾಲೆಯಲ್ಲಿ ತಿನ್ನಲು ಅನ್ನ ಸಿಗದೆ ವಿದ್ಯಾರ್ಥಿಗಳ ಕಣ್ಣೀರು

    ವಸತಿ ಶಾಲೆಯಲ್ಲಿ ತಿನ್ನಲು ಅನ್ನ ಸಿಗದೆ ವಿದ್ಯಾರ್ಥಿಗಳ ಕಣ್ಣೀರು

    ಬೀದರ್: ವಸತಿ ಶಾಲೆಯ ಮಕ್ಕಳು ತಿನ್ನಲು ಅನ್ನ ಸಿಗದೆ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದ್ದು, ಪ್ರಾಂಶುಪಾಲರು ಹಾಗೂ ಡಿ ಗ್ರೂಪ್ ನೌಕರರು ವಿದ್ಯಾರ್ಥಿಗಳಿಗೆ ಊಟ ಹಾಕದೆ ದರ್ಬಾರ್ ನಡೆಸುತ್ತಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ನಡೆದಿದೆ.

    ವನಮಾರಪಳ್ಳಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ 450ಕ್ಕೂ ಹೆಚ್ಚು ಮಕ್ಕಳಿಗೆ ತಿನ್ನಲು ಅನ್ನ ಸಿಗದೆ ಪ್ರತಿದಿನ ನರಕಯಾತನೆ ಪಡುತ್ತಿದ್ದಾರೆ. ಸರ್ಕಾರದಿಂದ ಲಕ್ಷಾಂತರ ರೂ. ಅನುದಾನ ಬಂದರೂ ಮಕ್ಕಳಿಗೆ ಮಾತ್ರ ಊಟ, ಆಸನಗಳು ಸೇರಿದಂತೆ ಮೂಲಭೂತ ಸೌಕರ್ಯ ನೀಡದೆ ಮಹಾ ದೋಖಾ ಮಾಡುತ್ತಿದ್ದಾರೆ. ಅನ್ನ ನೀಡಿದರೂ ಅದರಲ್ಲಿ ಹುಳಗಳು ಇಲ್ಲಾ ಕೆಟ್ಟು ಹೋಗಿರುವ ಅನ್ನ ನೀಡುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡುತ್ತಿದ್ದಾರೆ. ಜೊತೆಗೆ ಮಕ್ಕಳಿಗೆ ಆಸನದ ವ್ಯವಸ್ಥೆ ಕೂಡ ಇಲ್ಲದೆ ನೆಲದ ಮೇಲೆ ನಿದ್ದೆ ಮಾಡಬೇಕಾಗಿದೆ.

    ವಸತಿ ಶಾಲೆಯ ಮುಖ್ಯಸ್ಥ ಪ್ರಕಾರ, ಪ್ರತಿದಿನ ಒಂದೊಂದು ವಿವಿಧ ಆಹಾರವನ್ನು ಮಕ್ಕಳಿಗೆ ನೀಡಬೇಕು. ಆದರೆ ಇಲ್ಲಿಯ ಮಕ್ಕಳಿಗೆ ಅನ್ನವನ್ನೇ ಸರಿಯಾಗಿ ನೀಡುತ್ತಿಲ್ಲ. ಪ್ರತಿ ವರ್ಷ ವಸತಿ ಶಾಲೆಗೆ ಲಕ್ಷಾಂತರ ರೂ. ಅನುದಾನ ಬಂದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾತ್ರ ಭ್ರಷ್ಟಾಚಾರಕ್ಕೆ ಆಹುತಿಯಾಗಿ ಬಿಟ್ಟಿದ್ದಾರೆ.

    ಪ್ರತಿದಿನ ವಸತಿ ಶಾಲೆಯ ಮಕ್ಕಳು ಕಣ್ಣೀರಿನಲ್ಲಿ ಕೈತೊಳೆಯುತ್ತಿದರೂ ಸ್ವಕ್ಷೇತ್ರದ ಸಚಿವರಾದ ಪ್ರಭು ಚವ್ಹಾಣ್ ಮಾತ್ರ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಸಚಿವರ ಗ್ರಾಮದಿಂದ ಕೂಗಳತೆ ದೂರದಲ್ಲಿರುವ ಈ ವಸತಿ ನಿಲಯದ ಮಕ್ಕಳ ಗೋಳು ಕೇಳದ ಸಚಿವರು ಏಕೆ ಸಚಿವ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಪ್ರಾಂಶುಪಾಲರನ್ನು ಪ್ರಶ್ನಿಸಿದರೆ, ಇದೆಲ್ಲಾ ಡಿ ಗ್ರೂಪ್ ನೌಕರರ ಸಮಸ್ಯೆಯಿಂದ ಆಗಿದೆ ನನ್ನ ದರ್ಬಾರ್ ಏನು ಇಲ್ಲಾ ಎಂದು ಸಮಜಾಯಿಷಿ ನೀಡುತ್ತಿದ್ದಾರೆ.