ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ
ಪಟ್ಟಣದ ಬಸವ ತೀರ್ಥ ಗುರುಕುಲದ ವಸತಿ ಶಾಲೆಯ ಮಕ್ಕಳಿಗೆ ಬೆಳಿಗ್ಗೆ ತಿಂಡಿಗಾಗಿ ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ನೀಡಲಾಗಿತ್ತು. ಈ ಅನ್ನ ತಿಂದ ಕೆಲವೇ ಹೊತ್ತಿನಲ್ಲಿ ವಾಂತಿ, ಭೇದಿ, ತಲೆ ಸುತ್ತಿನಿಂದ 50 ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರಾದ ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಮಕ್ಕಳಿಗೆ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಸ್ವಸ್ಥರಾದ 50 ಮಕ್ಕಳು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾದ ಕಾಡು ಪ್ರಾಣಿಗಳ ಹಾವಳಿ – ಜೀವ ಭಯದಲ್ಲಿ ದಿನ ಕಳೆಯುತ್ತಿರುವ ಜನ
– ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್
ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ (Hostel Warden) ಯುಮ್ಕೆನ್ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್ ಬಿಂಗೆಪ್, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ
ಕೇಸ್ ಬೆಳಕಿಗೆ ಬಂದಿದ್ದು ಯಾವಾಗ?
2022ರ ನವೆಂಬರ್ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್ ವಾರ್ಡನ್ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.
ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್ಶೀಟ್ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್ಐಟಿ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ
ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದಲ್ಲಿ ಎಲ್ಲಾ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ (Residential School) ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು. ಇದನ್ನೂ ಓದಿ: ಬಿಎಂಟಿಸಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಜಾರಿ
ಈ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ. ಕಳೆದ ಬಾರಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ. ಅವರಿಗೆ ಸರ್ಕಾರದ ಮೇಲೆ ಯಾವುದೇ ಹಿಡಿತವೂ ಇಲ್ಲ. ಅವರು ಆಯವ್ಯಯವನ್ನು ಮಂಡಿಸಿದಾಗಲೇ ಅವರು ಮಂಡಿಸಿದ್ದಲ್ಲ ಎಂದು ಗೊತ್ತಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ
ಅಧಿಕಾರಿಗಳು ಸಚಿವರು, ಮುಖ್ಯಮಂತ್ರಿಗಳನ್ನು ಕೇಳದೆ ಬೇಕಾಬಿಟ್ಟಿಯಾಗಿ ಆದೇಶ ಮಾಡುತ್ತಿದ್ದಾರೆ ಎಂದರೆ, ಇಲ್ಲಿ ಯಾರಿಗೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಮಕ್ಕಳಿಗೆ ಪಾಠ ಅರ್ಥವಾಗಿಲ್ಲ ಎಂದರೆ ಶಿಕ್ಷಕರ ಬಳಿ ಪ್ರಶ್ನೆ ಮಾಡಬೇಕು. ಆದರೆ ಮಕ್ಕಳು ಧೈರ್ಯದಿಂದ ಯಾರಿಗೆ ಪ್ರಶ್ನೆ ಮಾಡಬೇಕು? ಇಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಎಂದು ಎಲ್ಲೂ ಬಳಸಿಲ್ಲ. ಈ ಸರ್ಕಾರ ದಿಕ್ಕು ದೆಸೆ ಇಲ್ಲದೆ ಎಡಬಿಡಂಗಿಯಾಗಿದ್ದು, ಅಧಿಕಾರಿಗಳ ಕೈಗೆ ಅಧಿಕಾರ ನೀಡಿ ಎಲ್ಲರೂ ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಈ ಒಂದು ಉದಾಹರಣೆಯಲ್ಲೇ ಸರ್ಕಾರಿ ಇಲಾಖೆಗಳು ಹೇಗೆ ಕೆಲಸ ಮಾಡುತ್ತಿದೆ ಎಂದು ತಿಳಿಯುತ್ತದೆ ಎಂದು ದೂರಿದರು. ಇದನ್ನೂ ಓದಿ: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
– `ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’; ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು
– ಇದೊಂದು ವಿವಾದದ ಅಂಶವೇ ಅಲ್ಲ ಎಂದ ಸಚಿವರು
ಬೆಂಗಳೂರು: `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಆದ್ರೆ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥ ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.
ಸಚಿವರ ಪ್ರಕಟಣೆಯಲ್ಲಿ ಏನಿದೆ?
ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿರುವ ಸಚಿವರು, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, `ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ’ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ
ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು, ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ. ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಕ್ಕಳು ಅನ್ಯಾಯ ಆದಾಗ ಪ್ರಶ್ನೆ ಮಾಡ್ಬೇಕು, ದೌರ್ಜನ್ಯ ಆದಾಗ ಪ್ರತಿಭಟನೆ ಮಾಡಬೇಕು. ಅನ್ಯಾಯ ಆದವರ ಪರ ದನಿ ಎತ್ತಬೇಕು. ಆ ಸಾಲಿನಲ್ಲಿ ಏನು ಧೈರ್ಯ ತುಂಬಬೇಕು? ಅದನ್ನು ಮಾಡುತ್ತೇವೆ. ಕುವೆಂಪು ಜಾಗೃತಿ ಮೂಡಿಸಿದ್ದಾರೆ, ಸಂವಿಧಾನ ಕಾನೂನು ಮಾತನಾಡುವ ಹಕ್ಕು ಕೊಟ್ಟಿದೆ. ಸುಮ್ಮ-ಸುಮ್ಮನೆ ಇದನ್ನೆಲ್ಲ ಕಾಂಟ್ರವರ್ಸಿ ಮಾಡೋದು ಬೇಡ ಎಂದು ಮನವಿ ಮಾಡಿದ್ರು.
ಬಿಜೆಪಿಯವರು ಕಾಂಟ್ರವರ್ಸಿ ಮಾಡ್ತಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಕಾಂಟ್ರವರ್ಸಿ ಮಾಡದ ವಿಷಯ ಯಾವುದಿದೆ? ಅಭಿವೃದ್ಧಿ ಬಿಟ್ಟು, ಸಂವಿಧಾನದ ಆಶಯ ಬಿಟ್ಟು, ಕುವೆಂಪು ಅವರ ವೈಚಾರಿಕತೆ ನಿಲುವುಗಳನ್ನ ಬಿಟ್ಟು, ಬಸವಣ್ಣನ ಜಾತಿ ವಿನಾಶ ಬಿಟ್ಟು, ಸುಖಿ ರಾಜ್ಯ ಬಿಟ್ಟು ಮಾಡೋಕೆ ಇನ್ನೇನಿದೆ ಎಂದು ಕಿಡಿಕಾರಿದ್ದಾರೆ.
ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
– ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್ನದ್ದು ಎಂದ ಸಚಿವೆ
– ಪ್ರಹ್ಲಾದ್ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ
ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಮರ್ಥಿಸಿಕೊಂಡರು.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ
ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್ನದ್ದು:
ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್ನವರು ಎಂದು ಬೀಗಿದರು.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.
ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.
ವಿಜಯಪುರ: ವಸತಿ ಶಾಲೆಯ ಘೋಷವಾಕ್ಯ ಸಂಬಂಧ ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಬರಹವನ್ನು ಮೊದಲಿನಂತೆಯೇ ಬದಲಾವಣೆ ಮಾಡಲಾಗಿದೆ.
ಈ ಕುರಿತು ಶಾಲೆಯ ಪ್ರಿನ್ಸಿಪಾಲ್ ದುಂಡಪ್ಪ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಮುಖ್ಯ ಕಾರ್ಯದರ್ಶಿಗಳ ಮೌಖಿಕ ಸೂಚನೆಯಂತೆ ಘೋಷವಾಕ್ಯ ಬದಲಾಯಿಸಿದ್ದೆವು. ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಘೋಷವಾಕ್ಯ ಮೊದಲಿನಂತೆಯೇ ಬದಲಾವಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ
ಆಗಿದ್ದೇನು..?: ವಿಜಯಪುರ (Vijayapur) ಜಿ. ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಕೇವಲ ವಿಜಯಪುರ ಮಾತ್ರವಲ್ಲ, ರಾಯಚೂರು ಜಿಲ್ಲೆಯ 36 ವಸತಿ ಶಾಲೆಗ ಪೈಕಿ ಬಹುತೇಕ ಕಡೆಗಳಲ್ಲಿ ಕುವೆಂಪು ವಾಕ್ಯವನ್ನ ಬದಲಾಯಿಸಿ ಬರೆಯಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ, ಮಸ್ಕಿ, ಲಿಂಗಸುಗೂರಿನ ಅಡವಿಬಾವಿ ಸೇರಿ ಜಿಲ್ಲೆಯ ಹಲವೆಡೆ ವಾಕ್ಯ ಬದಲಾವಣೆ ಮಾಡಲಾಗಿದೆ.
ವಿಜಯಪುರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ.
ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಬರೆಯಲಾಗಿದೆ ಎನ್ನಲಾಗಿದೆ.
ಈ ಕುರಿತು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಪ್ರತಿಕ್ರಿಯಿಸಿ, ಸರ್ಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೆÇೀಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ಧೈರ್ಯವಾಗಿ ಮಾತನಾಡಲಿ ಎನ್ನುವ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಬದಲಾಗಿರೋ ಬರಹ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಏ.13ರಿಂದ 23ರ ವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ
ಚಿಕ್ಕಮಗಳೂರು: ವಿದ್ಯುತ್ ಇಲ್ಲದೆ ಸೋಲಾರ್ (Solar) ಬೀದಿ ದೀಪದ ಕೆಳಗೆ ಸರ್ಕಾರಿ ವಸತಿ ಶಾಲೆ ವಿದ್ಯಾರ್ಥಿನಿಯರು (Students) ಓದುವ ಪರಿಸ್ಥಿತಿ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಎನ್.ಆರ್.ಪುರ ಪಟ್ಟಣದ ಕೈಮರದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ವಿದ್ಯುತ್ ಇಲ್ಲದ ಕಾರಣ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗೆ ಉಡುಗೊರೆ, ರೈತರಿಗೆ ಗಾಯದ ಮೇಲೆ ಬರೆ: ಅಶೋಕ್ ಕಿಡಿ
ಮುಂದಿನ ತಿಂಗಳಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವ ವೇಳೆಯೇ ಇಂತಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಕರೆಂಟ್ ತೆಗೆಯುತ್ತಿದ್ದರೆ ಮಕ್ಕಳು ಹೇಗೆ ಓದುತ್ತಾರೆ? ಸರ್ಕಾರಿ ವಸತಿ ಶಾಲೆಯಲ್ಲೇ ಮಕ್ಕಳು ಸಂಜೆ ವೇಳೆ ಶಾಲೆ ಕಟ್ಟಡದಿಂದ ಹೊರಬಂದು ಕಾಂಪೌಂಡ್ ಒಳಗೆ ಬೀದಿ ದೀಪದ ಸೋಲಾರ್ ವಿದ್ಯುತ್ ಕೆಳಗೆ ಓದುತ್ತಿದ್ದಾರೆ. ಇದರಿಂದ ಶಾಲಾ ಆವರಣದಲ್ಲಿ ಹೆಣ್ಣು ಮಕ್ಕಳಿಗೆ ಸಮಸ್ಯೆಯಾದರೆ ಜವಾಬ್ದಾರಿ ಯಾರು ಎಂದು ಸ್ಥಳೀಯರು ಪ್ರಶ್ನಿಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲೇ ಬಡಿದಾಡಿಕೊಂಡ ಕಾರ್ಯಕರ್ತರು
ಇಂಧನ ಸಚಿವ ಜಾರ್ಜ್ ಅವರೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು. ಅಷ್ಟೇ ಅಲ್ಲದೇ ಟಿ.ಡಿ.ರಾಜೇಗೌಡ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿದ್ದಾರೆ. ಈ ಎನ್.ಆರ್.ಪುರ ತಾಲೂಕು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಆಡಳಿತದ ವ್ಯಾಪ್ತಿಗೆ ಸೇರಲಿದೆ. ಹೀಗೆ ಸರ್ಕಾರಿ ವಸತಿ ಶಾಲೆಯಲ್ಲೇ ವಿದ್ಯುತ್ ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೆಣ್ಣು ಮಕ್ಕಳು ಇರುವ ವಸತಿ ಶಾಲೆ ಸರ್ಕಾರ ಕೂಡಲೇ ವಸತಿ ಶಾಲೆಗೆ ಯುಪಿಎಸ್ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ಕೈವಾಕ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ
ಶಿವಮೊಗ್ಗ: ಜಿಲ್ಲೆಯ ಸಾಗರದ (Sagara) ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥ ಮಂಜಪ್ಪ (Manjappa) ಎಂಬುವರ ವಿರುದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ (Pocso Case) ಪ್ರಕರಣ ದಾಖಲಿಸಿ ಅರೆಸ್ಟ್ ಮಾಡಿದ್ದಾರೆ.
ಖಾಸಗಿ ವಸತಿ ಶಾಲೆಯಲ್ಲಿ ಕಳೆದ ಮೂರು ದಿನದ ಹಿಂದೆ ನಡೆದಿದ್ದ 8ನೇ ತರಗತಿ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಪೋಷಕರು ಹಾಗೂ ಸಂಘ ಸಂಸ್ಥೆಯ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಿಂದ UPSC CAPF ತೇರ್ಗಡೆಯಾದ ಮೊದಲ ಮಹಿಳೆ ಸಿಮ್ರಾನ್ ಬಾಲಾ
ಶಾಲೆಯ ಸಂಸ್ಥಾಪಕ, ಮುಖ್ಯಸ್ಥ ಮಂಜಪ್ಪ ವಿರುದ್ದ ಪೋಕ್ಸೋ ಕಾಯ್ಸೆಯಡಿ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪೊಲೀಸರು ಮಂಜಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.