Tag: ವಸಿಷ್ಟ ಸಿಂಹ

  • ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಜಂಟಲ್ ಮನ್ ಚಿತ್ರವೀಗ ಬಿಡುಗಡೆಯ ಹಂತದಲ್ಲಿದೆ. ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಇದೀಗ ಬಿಡುಗಡೆಯಾಗಿದೆ. ವಿಶೇಷವೆಂದರೆ ಈ ಹಾಡಿನ ಮೂಲಕವೇ ನಾಯಕ ಪ್ರಜ್ವಲ್ ದೇವರಾಜ್ ಅವರ ಒಂದಷ್ಟು ಗೆಟಪ್ಪುಗಳನ್ನೂ ಅನಾವರಣಗೊಳಿಸಿದೆ. ಪ್ರತಿಯೊಬ್ಬರಿಗೂ ಆಪ್ತವಾಗುವಂಥಾ ಆವೇಗದ ಸಾಲುಗಳನ್ನೊಳಗೊಂಡ ಈ ಹಾಡು ನಟ ವಸಿಷ್ಠ ಸಿಂಹ ಅವರ ಕಂಠಸಿರಿಯಲ್ಲಿ ರಗಡ್ ಶೈಲಿಯಲ್ಲಿ ಮೂಡಿ ಬಂದಿದೆ.

    ‘ನಡುಗುತಿದೆ ಎದೆಗೂಡು ಸುಡುಗಾಡು ಬರಿ ಮೌನ. ತೆವಳುತಿದೆ ವಾತ್ಸಲ್ಯ ಬರಿ ಮೋಸ ದ್ವೇಷ ಇದೇ ಜಮಾನ’ ಅಂತ ಶುರವುವಾಗೋ ಈ ಹಾಡನ್ನು ಧನಂಜಯ್ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಅದಕ್ಕೆ ವಿಶಿಷ್ಟ ಅನ್ನಿಸುವಂಥಾ ಶೈಲಿಯಲ್ಲಿಯೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರತಿ ಸಾಲುಗಳಲ್ಲಿಯೂ ಬಹುತೇಕರಿಗೆ ಆಪ್ತವಾಗುವಂಥಾ ಸಾಲುಗಳೊಂದಿಗೆ, ವಸಿಷ್ಠ ಸಿಂಹ ಅವರ ಬೇಸ್ ವಾಯ್ಸ್ ನೊಂದಿಗೆ ಮೂಡಿ ಬಂದಿರೋ ಈ ಹಾಡಿನಲ್ಲಿಯೇ ಕಥೆಯ ಝಲಕ್ಕುಗಳಿವೆ. ಅದು ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ ಚಿತ್ರವೆಂಬುದನ್ನೂ ಋಜುವಾತುಗೊಳಿಸುವಂತಿವೆ.

    ಈ ಲಿರಿಕಲ್ ವಿಡಿಯೋ ಸಾಂಗ್‍ನಲ್ಲಿಯೇ ಅದು ಮೂಡಿ ಬಂದಿರೋ ರೀತಿ ಮತ್ತು ಮೇಕಿಂಗ್ ಮಜಲುಗಳನ್ನೂ ತೆರೆದಿಡಲಾಗಿದೆ. ವಿಜಯಲಕ್ಷ್ಮಿ ಮುರುಗೇಶ್ ನಾಯ್ಡು ಅವರ ಆಶೀರ್ವಾದದೊಂದಿಗೆ, ಬಿ.ಟಿ ಮಂಜುನಾಥ್ ಅರ್ಪಿಸುವ ಈ ಚಿತ್ರವನ್ನು ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಾಮಾನ್ಯವಾಗಿ ಗುರು ದೇಶಪಾಂಡೆ ನಿರ್ದೇಶನದ ಯಾವುದೇ ಸಿನಿಮಾಗಳನ್ನು ನೋಡಿದರೂ ಅದರಲ್ಲಿ ಹಾಡುಗಳಿಗೆ ಕಥೆಯಷ್ಟೇ ಮಹತ್ವ ಕೊಟ್ಟು ರೂಪಿಸಿದ್ದಾರೆ. ಅವರು ನಿರ್ಮಾಣ ಮಾಡಿರುವ ಜಂಟಲ್ ಮನ್ ಕೂಡಾ ಅದಕ್ಕೆ ತಕ್ಕುದಾಗಿಯೇ ರೂಪುಗೊಳ್ಳುತ್ತಿದೆ.

    ಅಜನೀಶ್ ಲೋಕನಾಥ್ ಗುರು ದೇಶಪಾಂಡೆಯವರ ಇಂಗಿತದಂತೆಯೇ ಈ ಸಿನಿಮಾದ ಎಲ್ಲ ಹಾಡುಗಳಿಗೂ ಭಿನ್ನವಾದ ಸಂಗೀತದ ಪಟ್ಟುಗಳನ್ನು ಹಾಕಿದ್ದಾರಂತೆ. ಅಂದಹಾಗೆ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಈ ವರೆಗೆ ನಟಿಸಿರದಂಥ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದು ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆಯ ಬೇಸಿನ ಗುಣಲಕ್ಷಣಗಳನ್ನು ಹೊಂದಿರುವ ಪಾತ್ರ. ಇದರ ಸುತ್ತಾ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಜಂಟಲ್ ಮನ್‍ನನ್ನು ರೂಪಿಸಲಾಗಿದೆ. ಇದರಲ್ಲಿ ಕ್ರೈಂ ಅಂಶಗಳೂ ಸೇರಿಕೊಂಡಿವೆಯಾ ಎಂಬ ಕುತೂಹಲ ಮೂಡಿಸುವಲ್ಲಿಯೂ ಇದೀಗ ಬಿಡುಗಡೆಯಾಗಿರುವ ಲಿರಿಕಲ್ ವಿಡಿಯೋ ಯಶ ಕಂಡಿದೆ. ಈ ಚಿತ್ರ ಮುಂದಿನ ವರ್ಷದ ಆರಂಭದ ತಿಂಗಳುಗಳಲ್ಲಿಯೇ ಬಿಡುಗಡೆಯಾಗಲಿದೆ.

  • ಲಂಡನ್‍ನಲ್ಲಿ ಅರೆಸ್ಟ್ ಆಗಿದ್ದು ಹೇಗೆ: ವಸಿಷ್ಟ ಸಿಂಹ ಹೇಳ್ತಾರೆ ಓದಿ

    ಲಂಡನ್‍ನಲ್ಲಿ ಅರೆಸ್ಟ್ ಆಗಿದ್ದು ಹೇಗೆ: ವಸಿಷ್ಟ ಸಿಂಹ ಹೇಳ್ತಾರೆ ಓದಿ

    ಬೆಂಗಳೂರು: ಲಂಡನ್ ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸಿಷ್ಠ ಸಿಂಹ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

    ಲಂಡನ್ ನಲ್ಲಿ ಬಕ್ಹಿಂಗ್ ಹ್ಯಾಮ್ ಪ್ಯಾಲೇಸ್ ಮುಂದೆ ನಾನು ಮತ್ತೆ ಮಾನ್ವಿತಾ ಹರೀಶ್ ಹಾಡಿ ಕುಣಿದಿದ್ದೇವು. ಆಗ ಅಲ್ಲಿನ ಪಾದಚಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ದಾಖಲೆಗಳನ್ನು ಪರೀಶಿಲಿಸಿ ಚಿತ್ರಿಕರಣಕ್ಕೆ ಅವಕಾಶ ಮಾಡಿಕೊಟ್ಟರು ಎಂದು ವಸಿಷ್ಟ ಸಿಂಹ ಸ್ಪಷ್ಟನೆ ನೀಡಿದ್ದಾರೆ.

    ಏನಿದು ಪ್ರಕರಣ?
    ಲಂಡನ್ ನಲ್ಲಿ ಬಕ್ಹಿಂಗ್ ಹ್ಯಾಮ್ ಪ್ಯಾಲೇಸ್ ಮುಂದೆ ಹಾಡಿ ಕುಣಿದಿದ್ದಕ್ಕೆ ಪೊಲೀಸರು ಮಾನ್ವಿತಾ ಹಾಗೂ ವಸಿಷ್ಟರನ್ನು ಬಂಧಿಸಿದ್ದರು. ಬಳಿಕ ಸಿನಿಮಾ ಶೂಟಿಂಗ್ ಎಂದು ಹೇಳಿದ್ದಕ್ಕೆ ಇಬ್ಬರನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿಕೊಂಡಿದ್ದಾರೆ. ಜೊತೆಗೆ ಮಾನ್ವಿತಾ ಹರೀಶ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

    ಲಂಡನ್ ಪೊಲೀಸರು ಮಾನ್ವಿತಾ ಮತ್ತು ವಸಿಷ್ಠ ಸಿಂಹ ಅವರನ್ನು ಬಂಧಿಸಿದ್ದಾರೆ. ಅವರು ಬಕ್ಹಿಂಗ್ ಹ್ಯಾಮ್ ಪ್ಯಾಲೇಸ್ ಮುಂದೆ ಹಾಡು, ನೃತ್ಯ ಜೊತೆಗೆ ಪ್ರೀತಿ ಮಾಡುತ್ತಿದ್ದರು. ಅದಕ್ಕಾಗಿ ಪೊಲೀಸರು ಬಂಧಿಸಿದ್ದರು. ಬಳಿಕ ಮಾನ್ವಿತಾ ಅವರ ಸುಂದರ ಸ್ಮೈಲ್ ಜೊತೆಗೆ ಇದು ಸಿನಿಮಾ ಶೂಟಿಂಗ್ ಎಂದು ಹೇಳಿದ್ದಾಗ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ನಾಗತಿಹಳ್ಳಿ ನಿರ್ದೇಶನದ ಹೊಸ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾ ಚಿತ್ರೀಕರಣಕ್ಕಾಗಿ ಚಿತ್ರತಂಡ ವಿದೇಶಕ್ಕೆ ತೆರಳಿದೆ. ಚಿತ್ರದ ಬಹುತೇಕ ಶೂಟಿಂಗ್ ಲಂಡನ್ ನಲ್ಲಿ ಮಾಡಲಾಗಿದ್ದು, 40 ದಿನಗಳ ಕಾಲ ಲಂಡನ್ ನಲ್ಲಿ ಚಿತ್ರತಂಡ ಉಳಿದುಕೊಂಡಿದೆ. ಲಂಡನ್ ನ ಪ್ರಮುಖ ಸ್ಥಳಗಳಲ್ಲಿ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಲಂಡನ್ ಬ್ರಿಡ್ಜ್ ಮೇಲೆ ಮಾನ್ವಿತಾ ಮಾಡಿದ ಡ್ಯಾನ್ಸ್ ವಿಡಿಯೋವನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು “ಮುಂಜಾನೆ ಮಾನ್ವಿತಾ ಮಂಗಾಟ” ಎಂದು ಬರೆದು ಟ್ವೀಟ್ ಮಾಡಿದ್ದರು.

    ಚಂದ್ರಶೇಖರ್ ಅವರು ಬರೆದಿರುವ ಮಗಳು ಕನಸು ಕತೆಯನ್ನೇ ಸಿನಿಮಾ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಚಿತ್ರದ ಟೈಟಲ್ ಇನ್ನು ಖಚಿತವಾಗಿಲ್ಲ. ಈ ಸಿನಿಮಾದಲ್ಲಿ ಮಾನ್ವಿತಾ ಬೋಲ್ಡ್ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ವಸಿಷ್ಠ ಸಿಂಹ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews