Tag: ವಸೀಂ ಪಠಾಣ್

  • ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ

    ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ

    ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್‌ಗೆ ಸಂಬಂಧಿಸಿದಂತೆ ಪ್ರಕ್ಷುಬ್ದಗೊಂಡಿದ್ದ ಹುಬ್ಬಳ್ಳಿ ಇದೀಗ ಸಹಜ ಸ್ಥಿತಿಗೆ ಮರಳಿದೆ. ಗಲಭೆಗೆ ಕಾರಣಿಭೂತನಾದ ವಾಸೀಂ ಪಠಾಣ್ ಹಾಗೂ ಆತನ ಸಹಚರರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಈ ವೇಳೆ ಗಲಭೆಯ ರಾತ್ರಿ ದಾಖಲೆಯ ಫೋನ್ ಕರೆಗಳ ವಿನಿಮಯ ಆಗಿರುವ ಮಹತ್ವದ ವಿಚಾರ ಹೊರಬಿದ್ದಿದೆ.

    ಗಲಭೆ ನಡೆದ ದಿನ ರಾತ್ರಿ 9 ರಿಂದ 12 ಗಂಟೆಯ ವರೆಗೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ ಐದು ಟವರ್‌ಗಳಿಂದ 18,000ಕ್ಕೂ ಅಧಿಕ ಕರೆಗಳು ವಿನಿಮಯಗೊಂಡಿರುವುದು ಪೊಲೀಸರಲ್ಲಿ ಅಚ್ಚರಿ ಮೂಡಿಸಿದೆ. ಬೇರೆ ದಿನಗಳಲ್ಲಿ ಕೇವಲ 6-8 ಸಾವಿರ ಕರೆಗಳು ವಿನಿಮಯ ಆಗ್ತಿದ್ವು ಆದ್ರೆ, ಗಲಭೆ ದಿನ ಮಾತ್ರ ಕರೆಗಳಲ್ಲಿ ದಾಖಲೆಯಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

    ಇದೀಗ ಈ ಕರೆಗಳನ್ನು ಆಧಾರವಾಗಿಟ್ಟುಕೊಂಡು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬಂಧಿತ 146 ಜನರ ಪೈಕಿ 14ಕ್ಕೂ ಹೆಚ್ಚು ಜನ ಕ್ರಿಮಿನಲ್ ಇತಿಹಾಸವನ್ನು ಹೊಂದಿದ್ದಾರೆ. ಹೀಗಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಅವರ ಫೈಲ್ ಮತ್ತೆ ರೀ ಓಪನ್ ಆಗಿವೆ. ಈ ನಡುವೆ ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಗಲಭೆಗೆ ನಾಂದಿ ಹಾಡಿದ್ದ, ಅಭಿಷೇಕ್ ಹಿರೇಮಠ ಹಾಗೂ ಗಲಭೆಯಲ್ಲಿ ಭಾಗಿಯಾಗಿದ್ದ, ಮೊಹಮ್ಮದ್ ಸಾಧಿಕ್ ಕಂಚಗಾರ ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

  • ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಹುಬ್ಬಳ್ಳಿ: ವಿವಾದಿತ ಪೋಸ್ಟ್ನಿಂದ ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಬಳಿಕ ದಿನಕ್ಕೊಂದು ರಹಸ್ಯಗಳು ಬಯಲಾಗುತ್ತಿವೆ. ನೆನ್ನೆಯಷ್ಟೇ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿ ಬಂದಿದ್ದ ಲಾರಿಚಾಲಕನ ಅಸಲಿ ರೂಪ ಬಯಲಾಗಿತ್ತು. ಈ ಬೆನ್ನಲ್ಲೇ ಗಲಭೆಗೆ ಮತ್ತೊಂದು ಪ್ರಮುಖ ಕಾರಣ ಏನೆಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    HUBBALLI INCIDENT

    ಕಳೆದ ಮೂರು ತಿಂಗಳಿನಿಂದಲೂ ಮುಸ್ಲಿಮರ ವಿರುದ್ಧ ನಡೆದ ಸಾಲು ಸಾಲು ಅಭಿಯಾನಗಳೇ ಗಲಾಟೆಗೆ ಕಾರಣ ಎಂದು ಹೇಳಲಾಗುತ್ತಿದೆ. ರಾಮನವಮಿ ದಿನದಂದೇ ಗಲಾಟೆ ನಡೆಯುವ ಸಾಧ್ಯತೆಗಳಿತ್ತು. ಏಕೆಂದರೆ ಹುಬ್ಬಳ್ಳಿಯ ಪೆಂಡಾರ್ ಗಲ್ಲಿಯ ಮಸೀದಿಯ ಮೇಲೆ ಕಿಡಿಗೇಡಿಗಳು `ಜೈಶ್ರೀರಾಮ್’ ಘೋಷಣೆಯನ್ನು ಲೇಸರ್ ಲೈಟ್ ಮೂಲಕ ಹಾಕಿದ್ದರು. ಇದನ್ನು ಮುಸ್ಲಿಂ ಮುಖಂಡರು ತಡೆದಿದ್ದರು. ಈ ಬೆನ್ನಲ್ಲೇ ವಿವಾದಿತ ಪೋಸ್ಟ್ ಹಾಕುತ್ತಿದ್ದಂತೆ ಮುಸ್ಲಿಂ ಸಮುದಾಯದವರು ರೊಚ್ಚಿಗೆದ್ದು, ಗಲಾಟೆ ಹಿಂಸಾತ್ಮಕ ರೂಪ ಪಡೆದಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

    HUBBALLI INCIDENT

    ವಿವಾದಿತ ಪೋಸ್ಟ್ ಹಾಕಿದ್ದ ಅಭಿಷೇಕ್‌ನನ್ನು ಮುಗಿಸಲು ಸ್ಕೆಚ್ ಹಾಕಿದ್ದರು. ಗಲ್ಲಿ-ಗಲ್ಲಿಗಳಲ್ಲೂ ಗಲಾಟೆಗೆ ಪ್ಲಾನ್ ನಡೆದಿತ್ತು. ಆದರೆ, ಅಭಿಷೇಕ್‌ನನ್ನೂ ಪೊಲೀಸರೇ ಬಚಾವ್ ಮಾಡಿದ್ದರು. ಇದರಿಂದ ಪೊಲೀಸರನ್ನೇ ಟಾರ್ಗೆಟ್ ಮಾಡಿದ್ದ ಕಿಡಿಗೇಡಿಗಳು ಇಬ್ಬರು ಪೊಲೀಸರನ್ನು ಕೊಲೆ ಮಾಡುವುಕ್ಕೂ ಯತ್ನಿಸಿದ್ದರು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಮಸೀದಿ ಮೈಕ್ ವಿರುದ್ಧ ಕ್ರಮಕ್ಕೆ ಡೆಡ್‍ಲೈನ್- ರಂಜಾನ್ ಒಳಗೆ ತೆರವಾಗದಿದ್ರೆ ಮಹಾ ಆರತಿ ಎಚ್ಚರಿಕೆ

    HUBBALLI INCIDENT

    ಅದಕ್ಕಾಗಿ ಹುಬ್ಬಳ್ಳಿ ಕಿಂಗ್ಸ್ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ವಸೀಂ ಪಠಾಣ್, ಇರ್ಫಾನ್, ಮೊಹ್ಮದ್ ಆರಿಫ್ ನೀಡಿದ ಕರೆಯ ಮೇರೆಗೆ ಜನ ಜಮಾವಣೆಗೊಂಡಿದ್ದರು. ಇತ್ತ ಎಐಎಂಐಎಂ ಮುಖಂಡ ಇರ್ಫಾನ್ ತನ್ನ ವಾರ್ಡ್ ಜನರನ್ನು ಕರೆತಂದಿದ್ದರು. ಸದ್ಯ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದ ಮೊಹ್ಮದ್ ಆರಿಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.