Tag: ವಾಕ್

  • ಬಿಗ್‍ಬಾಸ್ ಮನೆಯಲ್ಲಿ ಶೈನ್ ಆಗುತ್ತಿರುವ ಶಮಂತ್!

    ಬಿಗ್‍ಬಾಸ್ ಮನೆಯಲ್ಲಿ ಶೈನ್ ಆಗುತ್ತಿರುವ ಶಮಂತ್!

    ಬಿಗ್‍ಬಾಸ್ ಕಾರ್ಯಕ್ರಮಕ್ಕೆ ಬಂದ ಎಲ್ಲ ಸದಸ್ಯರು ಒಂದೊಂದು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಎಲ್ಲರ ಮಧ್ಯೆ ಡಿಫರೆಂಟ್ ಆಗಿ ‘ಬಾ ಗುರು’ ಡೈಲಾಗ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಫೇಮಸ್ ಆಗಿದ್ದ ಶಮಂತ್ ಕೂಡ ಒಬ್ಬರು.

    ಹಲವಾರು ಪ್ರತಿಭೆ ಹೊಂದಿರುವ ‘ಬ್ರೋ ಗೌಡ’ ಶಮಂತ್ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟಾಗಲಿಂದಲೂ ಆದ್ಯಾಕೋ ಸೈಲೆಂಟ್ ಆಗಿದ್ದರು. ಹೀಗಾಗಿ ಮನೆಯ ಎಲ್ಲ ಸ್ಪರ್ಧಿಗಳು ಶಮಂತ್ ಮಾತನಾಡುವುದಿಲ್ಲ, ಸೈಲೆಂಟ್, ಬೆರೆಯುವುದು ಕಡಿಮೆ ಹೀಗೆ ಹಲವಾರು ರೀಸನ್ ಹೇಳುತ್ತಿದ್ದರು. ಆದ್ರೆ ಇದೀಗ ಮನೆಯ ಎಲ್ಲಾ ಸದಸ್ಯರ ಆರೋಪಗಳಿಗೆ ಸೆಡ್ಡು ಹೊಡೆಯುವಂತೆ ಶಮಂತ್ ಈ ವಾರ ಬಿಗ್‍ಬಾಸ್ ಮನೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

    ಯೆಸ್, ಇಷ್ಟು ದಿನ ಸೈಲೆಂಟ್ ಆಗಿದ್ದ ಶಮಂತ್ ಇದೀಗ ರೊಚ್ಚಿಗೆದ್ದು ನಾನು ಯಾರಿಗೂ ಕಡಿಮೆ ಇಲ್ಲ ಎಂಬುವಂತೆ ಎಂರ್ಟಟೈನ್ ಮೆಂಟ್ ನೀಡಲು ಸ್ಟಾರ್ಟ್ ಮಾಡಿದ್ದಾರೆ. ನಿನ್ನೆ ಶಮಂತ್ ಬೆಡ್ ರೂಮ್ ಏರಿಯಾದಲ್ಲಿ ಮನೆಯ ಕೆಲವು ಮಂದಿ ಹೇಗೆ ನಡೆಯುತ್ತಾರೆ ಎಂಬುವುದನ್ನು ಅಭಿನಯ ಮಾಡಿ ತೋರಿಸಿದ್ದಾರೆ.

    ಮೊದಲಿಗೆ ವೈಷ್ಣವಿ ನಡಿಗೆ ತೋರಿಸಿದ ಶಮಂತ್, ಬಳಿಕ ನಿಧಿ ಕೈ ಕಟ್ಟಿ ನಡೆದುಕೊಂಡು ಹೋಗುವಂತೆ ನಡೆಯುತ್ತಾರೆ. ನಂತರ ಚಕ್ರವರ್ತಿ ಜೇಬಿನಲ್ಲಿ ಕೈ ಹಿಡಿದುಕೊಂಡು ನಡೆದುಕೊಂಡು ಹೋಗುವಂತೆ ಹೋಗುತ್ತಾರೆ. ಇದಾದ ಬಳಿಕ ಅರವಿಂದ್, ಪ್ರಶಾಂತ್ ಸಂಬರ್ಗಿ, ಮಂಜು, ವಿಶ್ವನಾಥ್, ಶುಭ ಪೂಂಜಾ ನಡೆಯುವುದನ್ನು ತೋರಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ಎಕೋ ವಾಯ್ಸ್‍ನಲ್ಲಿ ಮಾತನಾಡುವ ಮೂಲಕ ಮನೆಯ ಸದಸ್ಯರ ಮನಗೆದ್ದಿದ್ದರು.

    ಒಟ್ಟಾರೆ ಎಲೆಮರಿ ಕಾಯಿಯಂತೆ ಪ್ರತಿಭೆಗಳನ್ನು ತಮ್ಮಳೊಗೆ ಅಡವಿಸಿಕೊಂಡಿದ್ದ ಶಮಂತ್ ಇದೀಗ ಗರಿಗೆದರಿದ ನವಿಲಿನಂತೆ ಮಿಂಚುತ್ತಿದ್ದಾರೆ ಎಂದರೆ ತಪ್ಪಾಗಲಾರದು.

  • ರಾತ್ರಿ ವೇಳೆ ಹೆಂಡತಿ ಜೊತೆ ವಾಕ್ ಹೋದವ ಆಸ್ಪತ್ರೆಯಲ್ಲಿ ಶವವಾದ

    ರಾತ್ರಿ ವೇಳೆ ಹೆಂಡತಿ ಜೊತೆ ವಾಕ್ ಹೋದವ ಆಸ್ಪತ್ರೆಯಲ್ಲಿ ಶವವಾದ

    – ಬಿಯರ್ ಬಾಟಲ್, ಇಟ್ಟಿಗೆಯಿಂದು ಹೊಡೆದು ಕೊಂದ್ರು

    ಚಂಡೀಗಢ: ರಾತ್ರಿ ವೇಳೆ ಪತ್ನಿ ಹಾಗೂ ತಂದೆಯ ಜೊತೆ ಮನೆಯ ಹೊರಗೆ ವಾಕ್ ಹೋದವ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಶವವಾದ ಘಟನೆ ಪಂಜಾಬ್‍ನ ಪಾಟಿಯಾಲ ಜಿಲ್ಲೆಯಲ್ಲಿ ನಡೆದಿದೆ.

    ಸಾವನ್ನಪ್ಪಿದ ಯುವಕನನ್ನು ಬಿಹಾರ ಮೂಲದ ಮಿಥುನ್ ಪಾಟೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಪಟಿಯಾಲ ಜಿಲ್ಲೆಯ ಶಂಕರ್‍ಪುರ ಗ್ರಾಮದ ಜಗಮೋಹನ್ ಸಿಂಗ್ ಮತ್ತು ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಭೂಪಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ಘಟನೆಯ ನಂತರ ಪರಾರಿಯಾಗಿದ್ದಾರೆ.

    ಘಟನೆ ನಡೆದಾಗ ಸ್ಥಳದಲ್ಲೇ ಇದ್ದ ಮಿಥುನ್ ತಂದೆ ಮಾತನಾಡಿ, ನಾನು, ನನ್ನ ಮಗ ಮತ್ತು ಆತನ ಪತ್ನಿ ಊಟದ ನಂತರ ಸುಮಾರು 12 ಗಂಟೆಗೆ, ಗುರುದ್ವಾರದ ರಸ್ತೆಯಲ್ಲಿ ವಾಕ್ ಮಾಡುತ್ತಿದ್ದೇವೆ. ಈ ವೇಳೆ ಅಲ್ಲಿಗೆ ಬಂದ ಇಬ್ಬರು, ಈ ಸಮಯದಲ್ಲಿ ಹುಡುಗಿಯ ಜೊತೆ ಇಲ್ಲಿ ಏನೂ ಮಾಡುತ್ತಿದ್ದೀರಾ ಎಂದು ಪ್ರಶ್ನೇ ಮಾಡಿದರು. ಆಗ ಮಿಥುನ್ ಆಕೆ ನನ್ನ ಪತ್ನಿ ಎಂದು ಹೇಳಿದ. ಆಗ ವಾಗ್ವಾದ ನಡೆದು ಓರ್ವ ಮಿಥುನ್‍ಗೆ ಬಾಟಲಿಯಲ್ಲಿ ಹೊಡೆದ ನಂತರ ಇಬ್ಬರು ಸೇರಿ ಕಲ್ಲು ಇಟ್ಟಿಗೆಯಿಂದ ಹಲ್ಲೆ ಮಾಡಿದರು ಎಂದು ಹೇಳಿದ್ದಾರೆ.

    ಪೊಲೀಸರು ಹೇಳುವ ಪ್ರಕಾರ, ಮಿಥುನ್ ತನ್ನ ತಂದೆ ಮತ್ತು ಪತ್ನಿಯ ಜೊತೆಗೆ ಪಾಟಿಯಾಲದ ಕಾರ್ಖಾನೆ ಪ್ರದೇಶದಲ್ಲಿ ವಾಸವಿದ್ದ ಎನ್ನಲಾಗಿದೆ. ಜೊತೆಗೆ ಆತನನ್ನು ಬಿಯರ್ ಬಾಟಲ್, ಇಟ್ಟಿಗೆ ಮತ್ತು ಕಲ್ಲುಗಳಿಂದ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಿಥುನ್ ಅನ್ನು ಸರ್ಕಾರಿ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

    ಈ ಸಂಬಂಧ ಗ್ರೇನ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಮಾತನಾಡಿರುವ ಇನ್ಸ್ ಸ್ಪೆಕ್ಟರ್ ಗುರ್ನಮ್ ಸಿಂಗ್, ಹಲ್ಲೆ ಮಾಡಿದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಆದರೆ ಅವರು ಘಟನೆಯ ನಂತರ ಪರಾರಿಯಾಗಿದ್ದು, ಅವರನ್ನು ಶೀಘ್ರದಲ್ಲೇ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.