Tag: ವಾಗ್ದಾಳಿ

  • ಕರಣ್ ಜೋಹಾರ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಕಂಗನಾ

    ಕರಣ್ ಜೋಹಾರ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಕಂಗನಾ

    ಬಾಲಿವುಡ್ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹಾರ್ (Karan Johar) ವಿರುದ್ಧದ ವಾಗ್ದಾಳಿಯನ್ನು ನಟಿ ಕಂಗನಾ ರಣಾವತ್ (Kangana Ranaut) ಮುಂದುವರೆಸಿದ್ದಾರೆ. ನಿರಂತರವಾಗಿ ಕರಣ್ ವಿರುದ್ಧ ಪೋಸ್ಟ್ ಮಾಡುತ್ತಿರುವ ಅವರು, ಇದೀಗ ‘ಚಾಚಾ ಚೌಧರಿ’ ಎಂದು ಜರಿದಿದ್ದಾರೆ. ನಾನು ನಿರ್ಮಾಪಕಿಯಾಗಿ ಯಶಸ್ವಿಯಾದರೆ ನಿನ್ನ ಮುಖಕ್ಕೆ ಉಜ್ಜುತ್ತೇನೆ ಎಂದು ಗುಡುಗಿದ್ದಾರೆ.

    ಕಾಫಿ ವಿತ್ ಕರಣ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಂಗನಾ, ನೇರವಾಗಿ ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ್ದರು. ಅದರಲ್ಲಿ ಕರಣ್ ಕೂಡ ಇದ್ದಾರೆ ಎಂದಿದ್ದಾರೆ. ಈ ಮಾತು ಸಾಕಷ್ಟು ವಿವಾದವನ್ನು (controversy) ಎಬ್ಬಿಸಿತ್ತು. ಅಲ್ಲಿಂದ ಕಂಗನಾ ಮತ್ತು ಕರಣ್ ಹಾವು ಮುಂಗಸಿ ರೀತಿಯಲ್ಲಿ ಕಿತ್ತಾಡುವುದಕ್ಕೆ ಶುರು ಮಾಡಿದರು. ಕರಣ್ ಬಗ್ಗೆ ಯಾರೇ ನೆಗೆಟಿವ್ ಕಾಮೆಂಟ್ ಮಾಡಿದರೂ, ಕಂಗನಾ ಅವರ ಪರವಾಗಿ ನಿಂತುಕೊಳ್ಳುತ್ತಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ಮೊನ್ನೆಯಷ್ಟೇ ಕರಣ್ ವಿಚಾರವಾಗಿ ಅನುಷ್ಕಾ ಶರ್ಮಾ ಬೆನ್ನಿಗೆ ನಿಂತಿದ್ದರು ಕಂಗನಾ.  2016ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನುಷ್ಕಾ ಶರ್ಮಾ (Anushka Sharma) ಮತ್ತು ಕರಣ್ ಜೋಹಾರ್ ವೇದಿಕೆಯ ಮೇಲಿದ್ದರು. ಆ ಸಮಯದಲ್ಲಿ ಕರಣ್ ಮಾತನಾಡುತ್ತಾ, ‘ಅನುಷ್ಕಾಳ ಕರಿಯರ್  ನಾಶ ಮಾಡಬೇಕು ಎಂದುಕೊಂಡಿದ್ದೆ’ ಎನ್ನುತ್ತಾರೆ. ಅದಕ್ಕೆ ಅವರು ಕಾರಣವನ್ನೂ ಕೊಡುತ್ತಾರೆ. ಅನುಷ್ಕಾ ನಟನೆಯ ಚೊಚ್ಚಲು ಚಿತ್ರಕ್ಕೆ ಆಯ್ಕೆ ಆಗುವ ಮುನ್ನ, ಅವರ ಫೋಟೋವನ್ನು ನಿರ್ದೇಶಕರು ನನ್ನ ಬಳಿ ತಂದಿದ್ದರು. ಅನುಷ್ಕಾ ಫೋಟೋ ನೋಡಿ, ಇವರು ಬೇಡ ಅಂದಿದ್ದೆ. ನನ್ನ ಹತ್ತಿರವೇ ಒಬ್ಬಳು ನಾಯಕಿ ಇದ್ದಾಳೆ ಎಂದೂ ಹೇಳಿದ್ದೆ. ಕೊನೆಗೂ ಅನುಷ್ಕಾ ಅವರೇ ಆಯ್ಕೆಯಾದರು’ ಎಂದಿದ್ದರು.

    ಈ ವಿಚಾರವಾಗಿ ಕಂಗನಾ ಉರಿವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದರು. ‘ಕರಣ್ ಜೋಹಾರ್ ಇಂತಹ ಕೆಲಸಗಳನ್ನು ಮಾಡಲು ಫೇಮಸ್. ಯಾರದ್ದೆಲ್ಲ ಕರಿಯರ್ ನಾಶ ಮಾಡಿದ್ದಾರೆ ಎನ್ನುವ ಪಟ್ಟಿ ನನ್ನ ಬಳಿ ಇದೆ. ಇಂತಹ ಕೆಲಸ ಮಾಡಲೆಂದು ಅವರು ಇರುವುದು’ ಎಂದು ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದರು.

    ಕಂಗನಾ ಪ್ರತಿಕ್ರಿಯೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕರಣ್ ಜೋಹಾರ್ ಬಗ್ಗೆ ಮತ್ತಷ್ಟು ನೆಗೆಟಿವ್ ಕಾಮೆಂಟ್ ಗಳನ್ನು ಬರೆಯಲಾಗುತ್ತಿದೆ. ಯಾರಿಗೆಲ್ಲ ಕರಣ್ ತೊಂದರೆ ಕೊಟ್ಟಿದ್ದಾರೆ ಎನ್ನುವ ಒಂದೊಂದೇ ಹೆಸರುಗಳನ್ನು ನೆಟ್ಟಿಗರು ಹಾಕುತ್ತಿದ್ದಾರೆ. ಅಲ್ಲಿಗೆ ಕಂಗನಾ ಹೊಡೆದ ಕಲ್ಲು ಹಲವು ದಿಕ್ಕುಗಳನ್ನು ಆವರಿಸುತ್ತಿದೆ.

  • ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ನವದೆಹಲಿ: ಸಿಪಿಎಂ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯಾ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಾನು ಬಿಜೆಪಿಯನ್ನು ತುಕ್ಡೆ-ತುಕ್ಡೆ( Tukde-Tukde) ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ದೃಢವಾಗಿ ನಂಬಿದ್ದೇನೆ. ಆ ಪಕ್ಷದ ಸೋಲನ್ನು ನಾನು ನೋಡುತ್ತೇನೆ. ಬಿಜೆಪಿ ನನ್ನನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಕರೆಯುತ್ತದೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಬಿಜೆಪಿ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಎಂದು ಪರಿಗಣಿಸುತ್ತದೆ ಹೊರತು, ಗಾಂಧೀಜಿಯನ್ನಲ್ಲ ಎಂದು ಕಿಡಿ ಕಾರಿದ್ದಾರೆ.

    ಮಹಾತ್ಮ ಗಾಂಧೀಯವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಉಲ್ಲೇಖಿಸಿದ ಕನ್ಹಯ್ಯ ಕುಮಾರ್, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತಾ ಶಾ ಅವರನ್ನು ನಾಥೂರಾಮ್- ಬನಾಯಿ ಜೋಡಿ ಎಂದು ಕರೆದಿದ್ದಾರೆ. ಬಿಜೆಪಿ ಪಕ್ಷದ ಸಿದ್ಧಾಂತ ರಾಷ್ಟ್ರಪಿತನ ವಿರುದ್ಧ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

    ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಕನ್ನಯ್ಯ ಕುಮಾರ್ ಈ ಹಿಂದೆ ಹೇಳಿದ್ದರು.

  • ಸಂಸದ ಖೂಬಾಗೆ ಸೊಕ್ಕು ಜಾಸ್ತಿಯಾಗಿದೆ – ರಹೀಂ ಖಾನ್

    ಸಂಸದ ಖೂಬಾಗೆ ಸೊಕ್ಕು ಜಾಸ್ತಿಯಾಗಿದೆ – ರಹೀಂ ಖಾನ್

    – ಮೋದಿಯಿಂದ ನಾನು ಗೆದ್ದಿಲ್ಲ
    – ಮನ್ಸೂರ್‍ ನನ್ನು ಹಿಡಿದು ತರುತ್ತಾರೆ

    ಬೀದರ್: ಸಂಸದ ಭಗವಂತ್ ಖೂಬಾಗೆ ಸೊಕ್ಕು ಜಾಸ್ತಿಯಾಗಿದೆ. ಅವರಿಗೆ ನಾಲಿಗೆ ಮೇಲೆ ಕಂಟ್ರೋಲ್ ಇಲ್ಲ ಎಂದು ಸಚಿವ ರಹೀಂ ಖಾನ್ ತೀವ್ರ ವಾಗ್ದಾಳಿ ಮಾಡಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರಿಗೆ ಪಾಗಲ್ ಅಂತಿದ್ದಾರೆ. ವೈದ್ಯರಿಗೆ ನಾಯಿ ಅನ್ನುತ್ತಿದ್ದಾರೆ. ಮೈತ್ರಿ ಸರ್ಕಾರಕ್ಕೆ ನಾಲಾಯಕ್ ಸರ್ಕಾರ ಎಂದು ಹೇಳುತ್ತಿದ್ದಾರೆ. ಇವೆಲ್ಲವನ್ನು ನೋಡಿದರೆ ಅವರಿಗೆ ಸೊಕ್ಕು ಜಾಸ್ತಿಯಾಗಿದೆ ಎಂದು ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ದೊಡ್ಡ ಸ್ಥಾನದಲ್ಲಿ ಇರುವವರಿಗೆ ನಾಲಿಗೆ ಮೇಲೆ ಹಿಡಿತ ಇರಬೇಕು. ಅವರಿಗೆ ನಾಲಿಗೆ ಮೇಲೆ ಕಂಟ್ರೋಲ್ ಇಲ್ಲ. ನಾನು ಮೂರು ಸಲ ಶಾಸಕನಾಗಿದ್ದೇನೆ. ಆದರೆ ನಾನು ಪ್ರಧಾನಿ ಮೋದಿ ಅವರ ಹೆಸರಿನ ಮೇಲೆ ಮತ ಕೇಳಿಲ್ಲ. ಮೋದಿ ಗಾಳಿ ಮೇಲೆ ನಾನು ಗೆದ್ದಿಲ್ಲ ಎಂದು ಭಗವಂತ್ ಖೂಬಾ ಅವರ ವಿರುದ್ಧ ಕಿಡಿಕಾರಿದರು.

    ಇದೇ ವೇಳೆ ಐಎಂಎ ವಂಚನೆ ಪ್ರಕರಣ ಕುರಿತು ಮಾತನಾಡಿ, ಐಎಂಎ ವಂಚನೆ ಪ್ರಕರಣದ ಮುಖ್ಯಸ್ಥ ಮನ್ಸೂರ್ ಖಾನ್ ದುಬೈನಲ್ಲಿ ಇದ್ದಾನೆ ಎಂದು ಪಬ್ಲಿಕ್ ಟಿವಿ ಎಕ್ಸ್ ಕ್ಲೂಸೀವ್ ಮಾಹಿತಿ ಬಿತ್ತರಿಸಿದ ಹಿನ್ನೆಲೆಯಲ್ಲಿ ನೂರಕ್ಕೆ ನೂರರಷ್ಟು ಹಿಡಿದುಕೊಂಡು ಬರುತ್ತಾರೆ. ದೊಡ್ಡ ದೊಡ್ಡ ಹಗರಣಗಳನ್ನು ಮಾಡಿದ ಎಲ್ಲರನ್ನು ಹಿಡಿದುಕೊಂಡು ಬಂದಿದ್ದಾರೆ. ಹಾಗೇಯೇ ಇವರನ್ನು ಹಿಡಿದುಕೊಂಡು ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಕೆಲಸ ಮಾಡಲು ಆಗದಿದ್ರೆ ಡಿ.ಸಿ ತಮ್ಮಣ್ಣ ರಾಜೀನಾಮೆ ಕೊಡ್ಲಿ: ಸುಮಲತಾ

    ಕೆಲಸ ಮಾಡಲು ಆಗದಿದ್ರೆ ಡಿ.ಸಿ ತಮ್ಮಣ್ಣ ರಾಜೀನಾಮೆ ಕೊಡ್ಲಿ: ಸುಮಲತಾ

    ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ಸಚಿವ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ ವಿಚಾರವಾಗಿ ಸಂಸದೆ ಸುಮಲತಾ ಅವರು ಪ್ರತಿಕ್ರಿಯಿಸಿ, ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಬೇಜಾರಾಗಿದ್ರೆ ರಾಜೀನಾಮೆ ಕೊಡಿ ಎಂದರು. ಬಳಿಕ ಜೆಡಿಎಸ್ ಸೋಲಿಗೆ ಡಿ.ಸಿ ತಮ್ಮಣ್ಣ ಅವರ ಹೇಳಿಯೇ ಕಾರಣ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಅಷ್ಟೇ ಅಲ್ಲದೆ ತಮ್ಮಣ್ಣ ಅವರು ಹೇಳಿಕೆ ನಿಖಿಲ್ ಹೇಳಿಕೆಗೆ ವಿರುದ್ಧವಾಗಿದೆ. ಅವರ ಪಾರ್ಟಿಯಲ್ಲಿ ಇರೋರು ಅವರಿಗೆ ತಿಳಿಸಿ ಹೇಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

    ಡಿ.ಸಿ ತಮ್ಮಣ್ಣ ಹೇಳಿದ್ದೇನು?
    ಮದ್ದೂರು ಗ್ರಾಮಸ್ಥರು ಮದ್ದೂರಮ್ಮನ ಕೆರೆಯಂಗಳದಲ್ಲಿ ನಡೆದ ಕುಡಿಯುವ ನೀರಿನ ಕಾಮಗಾರಿಯ ಶಂಕುಸ್ಥಾಪನೆ ವೇಳೆ ದಲಿತ ಕಾಲೋನಿಗೆ ಚರಂಡಿ ಮತ್ತು ಸಮರ್ಪಕ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಡಿ.ಸಿ ತಮ್ಮಣ್ಣ ಅವರ ಬಳಿ ಕೇಳಿಕೊಂಡಿದ್ದರು.

    ಗ್ರಾಮಸ್ಥರ ಮಾತುಕೇಳಿ ಸಿಟ್ಟಿಗೆದ್ದ ಸಚಿವ ತಮ್ಮಣ್ಣ, ಅಭಿವೃದ್ಧಿಗೆ ನಾವು ಬೇಕು, ಮತ ಹಾಕಲು ವೋಟು ನೀಡಲು ಅವರು ಬೇಕಾ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಣೆಗಾರಿಕೆ ಮಾಡಲು ಬರುತ್ತಾರೆ, ಅಭಿವೃದ್ದಿ ಕೆಲಸಕ್ಕಾಗಿ ನಮ್ಮನ್ನು ಕೇಳುವುದಕ್ಕೆ ನಾಚಿಕೆ ಆಗಲ್ವಾ ಎಂದು ಮದ್ದೂರು ಕ್ಷೇತ್ರದಲ್ಲಿ ನಿಖಿಲ್‍ಗೆ ಮತ ಹಾಕದ ಜನರ ಮೇಲೆ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದರು.

    ಈ ಹಿಂದೆ ಡಿ.ಸಿ ತಮ್ಮಣ್ಣ ಚುನಾವಣೆ ವೇಳೆಯಲ್ಲಿ ತಮ್ಮ ನಾಲಿಗೆ ಹರಿಯಬಿಟ್ಟು ಎಡವಟ್ಟು ಮಾಡಿಕೊಂಡಿದ್ದರು. ತಮ್ಮಣ್ಣ ಅವರು ಹೆಬ್ಬೆರಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಹೋದ ಕಡೆಗಳಲ್ಲಿ ಮತ ಹಾಕದ ಮತದಾರರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

  • ಒಬ್ರು ರಿಮೋಟ್‍ನಿಂದ ಚಲಿಸುವವರು, ಮತ್ತೊಬ್ಬರು ಕುಂಕುಮ ಕಂಡ್ರೆ ಭಯ ಪಡುವವರು: ಸ್ಮೃತಿ ಇರಾನಿ

    ಒಬ್ರು ರಿಮೋಟ್‍ನಿಂದ ಚಲಿಸುವವರು, ಮತ್ತೊಬ್ಬರು ಕುಂಕುಮ ಕಂಡ್ರೆ ಭಯ ಪಡುವವರು: ಸ್ಮೃತಿ ಇರಾನಿ

    ಗದಗ: ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರಕ್ಕೆ ಇದ್ದ ಸ್ಥಿತಿಯೇ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೂ ಬಂದಿದೆ. ಇಲ್ಲಿ ಒಬ್ಬರು ರಿಮೋಟ್‍ನಿಂದ ಚಲಿಸಿದರೆ, ಇನ್ನೊಬ್ಬರು ಕುಂಕುಮ ಕಂಡರೆ ಭಯ ಪಡುತ್ತಾರೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯವಾಡಿದ್ದಾರೆ.

    ಇಂದು ಗದಗ ಜಿಲ್ಲೆಯಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಿಮೋಟ್ ಕಂಟ್ರೋಲ್‍ನಿಂದ ನಡೆಯೋ ಸಿಎಂ ಅವರ ರಿಮೋಟ್ ಯಾವಾಗ ಚಾಲನೆಯಾಗುತ್ತೋ, ಯಾವಾಗ ಬಂದ್ ಆಗುತ್ತೋ ಅಂತ ಗೊತ್ತಿಲ್ಲ. ಇನ್ನೊಂದೆಡೆ ಕುಂಕುಮಧಾರಿಗಳನ್ನು ನೋಡಿದರೆ ಭಯ ಪಡುವ ವ್ಯಕ್ತಿ. ಇವರಿಬ್ಬರು ಸೇರಿ ಕರ್ನಾಟಕವನ್ನು ದುರ್ದೆಸೆಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿದರು.

    ಕಿಸಾನ್ ಸಮ್ಮಾನ್ ಯೋಜನೆಯನ್ನು ರೈತರಿಗೆ ಏಕೆ ತಲುಪಿಸಲು ಇಷ್ಟ ಇಲ್ಲ ಅಂತ ಇಬ್ಬರು ಉತ್ತರಿಸಲಿ. ರಿಮೋಟ್ ಸಿಎಂ ಹಾಗೂ ಕಾಂಗ್ರೆಸ್ ನಾಯಕರು ರಾಜ್ಯದ ಎಲ್ಲಾ ರೈತರ ಸಾಲಮನ್ನಾ ಮಾಡ್ತೀನಿ ಎಂದು ಭರವಸೆ ನೀಡಿದ್ರು. ಆದರೆ ಸಾಲ ಮನ್ನಾ ಆಗಿದೆಯಾ? ಎಲ್ಲಿವರೆಗೂ ಈ ಸುಳ್ಳು ಭರವಸೆ ನಡೆಯುತ್ತೆ? ಇವರಿಗೆ ರೈತರ ಚಿಂತೆಯಿಲ್ಲ, ಒಬ್ಬರಿಗೆ ಅವರ ಹಾಗೂ ಕುಟುಂಬದ ಚಿಂತೆಯಾದರೆ, ಇನ್ನೊಬ್ಬರಿಗೆ ಕುಂಕುಮ ಕಂಡರೆ ಭಯ ಎಂದು ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಹೇಳಿಕೆಗೆ ಸಿಡಿದೆದ್ದ ರಾಜ್ಯ ನಾಯಕರು..!

    ಪ್ರಧಾನಿ ಹೇಳಿಕೆಗೆ ಸಿಡಿದೆದ್ದ ರಾಜ್ಯ ನಾಯಕರು..!

    ಬೆಂಗಳೂರು: ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಎಂ ಕುಮಾರಸ್ವಾಮಿ ಅವರನ್ನು ಕ್ಲರ್ಕ್ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ವಿಚಾರಕ್ಕೆ ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.

    ಈ ವಿಚಾರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ನಮ್ಮ ಉಸಾಬರಿ ಮೋದಿಯವರಿಗೆ ಯಾಕೆ? ಅವರು ಯಾರು ಹೇಳೋದಕ್ಕೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಮಾಡಿಕೊಂಡಿರೋದು, ಮೋದಿ ಅವರು ಮೈತ್ರಿಯಲ್ಲಿ ಇದ್ದಾರಾ? ಮೋದಿಯವರು ರಾಜಕೀಯವಾಗಿ ಹೀಗೆ ಹೇಳಿದ್ದಾರೆ. ಅವರಿಗೇನು ಗೊತ್ತಿಲ್ಲಾ. ಸುಮ್ಮನೆ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅವರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ ಅಂತಾ ಕಿಡಿಕಾರಿದರು.

    ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಮೋದಿಯವರ ಪಾರ್ಟಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ. ಇಂತಹವರ ಸಲಹೆಗಳನ್ನ ನಾವು ತೆಗೆದುಕೊಳ್ತೀವಾ? ಕ್ಯಾಬಿನೆಟ್‍ನಲ್ಲಿ ಅವರ ಪಕ್ಷದವರ ಮಾತನ್ನೇ ಅವರು ಕೇಳಲ್ಲ. ಸುಮ್ಮನೆ ಆರೋಪ ಮಾಡ್ತಾರೆ ಅಂತ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ.

    ಘಟಬಂಧನ ಕಳ್ಳರ ಸಂತೆ ಎಂಬ ಮೋದಿ ಆರೋಪ ವಿಚಾರ ಮಾತನಾಡಿ, ಪ್ರಧಾನಿ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಅವರ ಸ್ಥಾನಕ್ಕೆ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಅವರ ತೂಕಕ್ಕೆ ಸರಿಯಾಗಿ ಮಾತನಾಡಬೇಕು. ಎನ್‍ಡಿಎ ಯಾವುದು, ಅದೂ ಘಟಬಂಧನ ಅಲ್ಲವೇ? ಯುಪಿಎ ಕೂಡ ಘಟಬಂಧನವೇ ಎಂದು ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ ರಫೇಲ್ ವಿಚಾರದಲ್ಲಿ ಯಾಕೆ ಚರ್ಚೆಗೆ ಬರುತ್ತಿಲ್ಲ. ಜವಾಬ್ದಾರಿಯುತವಾಗಿ ಪ್ರಧಾನಿ ನಡೆದುಕೊಳ್ಳಬೇಕು ಎಂದು ಪ್ರಧಾನಿ ಹೇಳಿಕೆಯನ್ನು ವಿರೋಧಿಸಿದ್ದಾರೆ.

    ಈ ಸಂಬಂಧ ಸಿಎಂ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ, ನನ್ನ ಬಗ್ಗೆ ಕೆಲವು ಸುಳ್ಳು ಸುದ್ದಿಗಳು ಓಡಾಡುತ್ತಿದೆ. ಅದನ್ನೇ ನಂಬಿ ಪ್ರಧಾನಿ ಮೋದಿ ಅವರು ನನ್ನ ಬಗ್ಗೆ ತಪ್ಪಾಗಿ ಹೇಳುತ್ತಿದ್ದಾರೆ. ಸಾಲ ಮನ್ನಾ ವಿಚಾರ ಆದ ಮೇಲೆ ಇದು ಎರಡನೇ ಬಾರಿ ಪ್ರಧಾನಿ ಅವರು ಸುಳ್ಳು ಮಾಹಿತಿಗಳಿಗೆ ಪ್ರತಿಕ್ರಿಯಿಸಿದ್ದು. ಇಂತಹ ಹೇಳಿಕೆಗಳು ಮೈತ್ರಿ ಸರ್ಕಾರ ಅಥವಾ ಸರ್ಕಾರದ ಅಭಿವೃದ್ಧಿಯನ್ನು ಬೀಳಿಸಲು ಸಾಧ್ಯವಿಲ್ಲ ಅಂತ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ

    ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ

    – ಕುಮಾರಸ್ವಾಮಿ ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ
    – ಯಾತಕ್ಕೆ ನಿಮಗೆ ಹೊಟ್ಟೆ ಉರಿ: ಬಿಎಸ್‍ವೈಗೆ ಸಿಎಂ ಪಂಚ್

    ಬೆಳಗಾವಿ: ಸಿಎಂ ಕುಮಾರಸ್ವಾಮಿ ಅವರು ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ. ಸದನಕ್ಕೆ ಸಮರ್ಪಕವಾದ ಉತ್ತರ ಕೊಡದೆ ಅಂತೆ-ಕಂತೆ ಕಟ್ಟಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.

    ಸಾಲಮನ್ನಾ ವಿಚಾರವಾಗಿ ಇಂದು ಮಧ್ಯಾಹ್ನ ವಿರಾಮದ ಬಳಿಕ ನಡೆದ ಕಲಾಪದಲ್ಲಿ ಮಾತನಾಡಿದ ಅವರು, ಉತ್ತರ ಕೊಡುವಾಗ ಕುಮಾರಸ್ವಾಮಿ ಅವರು ದುರಹಂಕಾರದಿಂದ ವರ್ತಿಸುತ್ತಾರೆ. ಸಾಲಮನ್ನಾ ಮಾಡಲಾಗದೆ ಬ್ಯಾಂಕ್‍ಗಳ ಮೇಲೆ ಹರಿಹಾಯುತ್ತಿದ್ದಾರೆ ಎಂದು ಆರೋಪಿಸಿದರು.

    ಈ ವೇಳೆ ಗರಂ ಆದ ಸಿಎಂ ಕುಮಾರಸ್ವಾಮಿ ಅವರು, ಸಾಲದ ಹಣ ಪಾವತಿಗೆ ನೀವೇ ಒಪ್ಪಿಗೆ ಕೊಟ್ಟಿರುವಿರಿ. ಅದಕ್ಕೆ ಬೇಕಾಗಿರುವ 6.50 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಅದನ್ನು ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡುವುದಿಲ್ಲ. 1,97,625 ರೈತರ ಬ್ಯಾಂಕ್ ಸಾಲ ಪರಿಶೀಲನೆ ಮಾಡಲಾಗಿದೆ. ನನ್ನ ಸರ್ಕಾರ ಭದ್ರವಾಗಿದೆ. ಹಣ ಪಾವತಿ ಮಾಡಿದ ಮೇಲೆ ಯಾವ ಬ್ಯಾಂಕ್ ಗಳ ಒಪ್ಪಿಗೆಯೂ ಬೇಕಾಗಿಲ್ಲ ಎಂದು ಮೇಜು ತಟ್ಟಿ ಹೇಳಿದರು.

    ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಸದನದಲ್ಲಿ ಸಭ್ಯವಾಗಿ ವರ್ತನೆ ಮಾಡಿ, ಸಾಲಮನ್ನಾ ಮಾಡಲು ನಾಲ್ಕು ವರ್ಷ ಬೇಕು ಅಂತ ಹೇಳಿದ್ದು ನೀವೇ ಎಂದು ಗುಡುಗಿದರು. ಸಿಎಂ ಮಾತು ಮುಂದುವರಿಸಿ, ನಾನು ಹೇಳುವುದನ್ನು ಸಮಾಧಾನವಾಗಿ ಕೇಳಿ. ಏಕೆ ನಿಮಗೆ ಇಷ್ಟು ಹೊಟ್ಟೆ ಉರಿ, ಕುಳಿತುಕೊಳ್ಳಿ ಎಂದು ವ್ಯಂಗ್ಯವಾಡಿದರು. ಆದರೂ ಯಡಿಯೂರಪ್ಪ ಅವರು ಮಾತನಾಡುತ್ತಲೇ ಇದ್ದರು. ಇದರಿಂದ ಕೋಪಗೊಂಡ ಸಿಎಂ ರೀ.. ಕೂಡ್ರಿ… ಎಂದು ಗದರಿಸಿದರು.

    ಜನರ ಮುಂದೆ ಮಾತನಾಡುವ ಸರ್ಕಾರ ಮೇಲೆ ಅನುಮಾನ ಬರುವ ತರಹ ನೀವು ಏಕೆ ಮಾತನಾಡುತ್ತಿರಾ? ಎಂದು ಸಿಎಂ ಗುಡುಗಿದರು. ಈ ವೇಳೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಶಾಸಕರು ಮಾತಿಗೆ ಮಾತು ಬೆಳೆಸಿದರು. ನಾನೊಬ್ಬ ಜವಾಬ್ದಾರಿ ಮುಖ್ಯಮಂತ್ರಿಯಾಗಿ ಇಲ್ಲಿ ಕುಳಿತಿರುವೆ ಎಂದು ಕುಮಾರಸ್ವಾಮಿ ಗುಡುಗಿದರು.

    ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಿಎಂಗೆ ಸಾಥ್ ನೀಡಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಾವು ಕುಳಿತಿದ್ದ ಜಾಗದಿಂದ ಎದ್ದು ಬಂದು ಕುಮಾರಸ್ವಾಮಿ ಅವರನ್ನು ಸಮಾಧಾನ ಪಡಿಸಿದರು. ವಾಗ್ದಾಳಿ ಜೋರಾಗುತ್ತಿದ್ದಂತೆ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಜಾಗವನ್ನು ಬಿಟ್ಟು ಸಭಾಪತಿಗಳ ಮುಂದೆ ಬಂದು ನಿಂತರು. ಅವರ ಹಿಂದೆ ಬಿಜೆಪಿಯ ಶಾಸಕರು ಬಂದರು.

    ಸಿಎಂ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಅವಮಾನ ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಹೀಗೆ ನಡೆದುಕೊಂಡಿದ್ದಾರೆ. ಹೀಗಾಗಿ ಪ್ರತಿ ಪಕ್ಷದ ಸದಸ್ಯರ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ಸದನ ನಡೆಯಲು ಬಿಡಲ್ಲ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.

    ಕೆಲವರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಪಕ್ಷ ಶಾಸಕರು ದಿಕ್ಕಾರ ದಿಕ್ಕಾರ ಎನ್ನುತ್ತಿದ್ದಂತೆ ಕೆಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಕರು ಕೇಂದ್ರ ಸರ್ಕಾರಕ್ಕೆ ಎಂದು ಹೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಯಿಂದ ಬೇಸತ್ತ ಸಭಾಪತಿ ರಮೇಶ್ ಕುಮಾರ್ ಅವರು ಸಭೆಯನ್ನು ಮುಕ್ತಾಯ ಮಾಡಿ ಹೊರನಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಬೀದರ್: ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ. ಇಡೀ ದೇಶಕ್ಕೆ ಆಪರೇಷನ್ ಮಾಡೋಕೆ ಬರುತ್ತೆ ಅಂತ ತೋರಿಸಿದವರೇ ಅವರು ಎಂದು ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪಶು ಇಲಾಖೆ ಸಭಾಂಗಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಆಪರೇಷನ್ ಮಾಡುವುದಕ್ಕೆ ಬರುತ್ತದೆ ಎಂದು ತೋರಿಸಿದ ವ್ಯಕ್ತಿ ಯಡಿಯೂರಪ್ಪ. ನಾನು ಶಾಸಕನಾಗಿದ್ದಾಗ ಆಪರೇಷನ್ ಕಮಲ ಮಾಡಿ, ರಾಜೀನಾಮೆ ಕೊಡಿಸಿ ಮಂತ್ರಿ ಮಾಡಿದರು. ಈಗ ಅವರಿಗೆ ಆಪರೇಷನ್ ಭಯ ಶುರುವಾಗಿದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಕನಸ್ಸು ಕಾಣುತ್ತಿದ್ದಾರೆ. ಈಗಾಗಲೇ ಒಂದು ದಿನ ಮುಖ್ಯಮಂತ್ರಿ ಆಗಿದ್ದು ಆಗಿದೆ. ಆಪರೇಷನ್ ಮಾಡೋದು ಅವರಿಗೆ ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

    ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು ಬೆಂಕಿಯಲ್ಲಿ ಹೊಗೆ ಆಡೋದು ನೋಡಿದ್ದೇನೆ. ಆದರೆ ನೀವು ಬೂದಿಯಲ್ಲಿ ಹೊಗೆ ಹಾರಿಸುತ್ತಿದ್ದೀರಿ ಎಂದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರನ್ನು ಯಾರು ಮೂಲೆ ಗುಂಪು ಮಾಡಿಲ್ಲ. ಎಲ್ಲ ವಿಷಯವು ಅವರ ಬಳಿ ಚರ್ಚೆಯಾಗಿ ಕಾರ್ಯಕ್ಕೆ ಬರುತ್ತವೆ. ಸಿಎಂ ದಂಗೆ ಎನ್ನುವ ಪದವನ್ನು ಬೇರೆ ಅರ್ಥದಲ್ಲಿ ಬಳಸಿದ್ದಾರೆ ಎಂದು ವೆಂಕಟರಾವ್ ನಾಡಗೌಡ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಧಾನಿ ಮೋದಿ ಓರ್ವ ದರೋಡೆಕೋರ: ವೀರಪ್ಪ ಮೊಯ್ಲಿ

    ಪ್ರಧಾನಿ ಮೋದಿ ಓರ್ವ ದರೋಡೆಕೋರ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಮೋದಿ 48,000 ಕೋಟಿ ರೂಪಾಯಿ ದರೋಡೆ ಮಾಡಿದ್ದಾರೆ ಅಂತ ಸಂಸದ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

    ನಗರದ ಶಿಡ್ಲಘಟ್ಟ ವೃತ್ತದಲ್ಲಿ ರಫೆಲ್ ಯುದ್ಧ ವಿಮಾನ ಖರೀದಿ ವಿಚಾರ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಮೊಯ್ಲಿ, ಈ ಹಿಂದೆ ಯುಪಿಎ ಸರ್ಕಾರ ಸರ್ಕಾರಿ ಸ್ವಾಮ್ಯದ ಎಚ್ ಎ ಎಲ್ ಕಂಪೆನಿಗೆ ರಫೆಲ್ ಯುದ್ಧ ವಿಮಾನ ತಯಾರಿಗೆ ಅವಕಾಶ ಮಾಡಿಕೊಟ್ಟಿತ್ತು. ಪ್ರಧಾನಿ ಮೋದಿ ಈಗ ತಮ್ಮ ಸ್ನೇಹಿತ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಂಪೆನಿಗೆ ಯುದ್ಧ ವಿಮಾನ ನಿರ್ಮಾಣ ಗುತ್ತಿಗೆ ಕೊಡಿಸಿದ್ದಾರೆ. ಮೋದಿಯವರೇ ಮುಂದೆ ನಿಂತು ಈ ಕೆಲಸ ಮಾಡಿದ್ದಾರೆ. ಇದು ದೇಶದ ಅತ್ಯಂತ ದೊಡ್ಡ ಹಗರಣವಾಗಿದ್ದು, 48,000 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಮೊಯ್ಲಿ ವಾಗ್ದಾಳಿ ನಡೆಸಿದರು.

    ಈ ಹಗರಣದ ಹಣದಲ್ಲಿ ಮೋದಿ ಏನ್ ಬೇಕಾದರೂ ಮಾಡುತ್ತಾರೆ. ಕರ್ನಾಟಕದಲ್ಲಿ ಅಪರೇಷನ್ ಕಮಲ ಮಾಡೋಕೆ ಒಬ್ಬ ಎಂಎಲ್‍ಎ ಗೆ 50 ಕೋಟಿ ರೂ. ಕೊಡುತ್ತಾರಂತೆ. ಅದಲ್ಲದೆ ಚುನಾವಣೆಗೆ 50 ಕೋಟಿ ಕೊಡುತ್ತಾರಂತೆ. ಹೀಗೆ ಇಂತಹ ಹಣವನ್ನ ಮೋದಿ, ಅಮಿತ್ ಶಾ ಚುನಾವಣೆಗೆ ಬಳಸುತ್ತಾರೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಈ ಹಗರಣದ ಬಗ್ಗೆ ರಾಹುಲ್ ಗಾಂಧಿ ಮೊದಲೇ ಹೇಳುತ್ತಿದ್ದರು. ಆದರೆ ದರೋಡೆಕೋರ ಮೋದಿಗೆ ಯಾವುದೇ ನಾಚಿಕೆ ಗೌರವ ಇಲ್ಲ ಅಂತ ಮೋದಿ ವಿರುದ್ಧ ಖಾರವಾಗಿ ಮಾತನಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಶ್ರೀರಂಗಪಟ್ಟಣ ಜೆಡಿಎಸ್ ಶಾಸಕರನ್ನು ರಸ್ತೆ ಮಧ್ಯದಲ್ಲಿಯೇ ನಿಲ್ಲಿಸಿ ಕಾರ್ಯಕರ್ತರಿಂದ ತರಾಟೆ: ವಿಡಿಯೋ ವೈರಲ್

    ಶ್ರೀರಂಗಪಟ್ಟಣ ಜೆಡಿಎಸ್ ಶಾಸಕರನ್ನು ರಸ್ತೆ ಮಧ್ಯದಲ್ಲಿಯೇ ನಿಲ್ಲಿಸಿ ಕಾರ್ಯಕರ್ತರಿಂದ ತರಾಟೆ: ವಿಡಿಯೋ ವೈರಲ್

    ಮಂಡ್ಯ: ಶ್ರೀರಂಗಪಟ್ಟಣ ಮತಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರನ್ನು ಕಿರಗಂದೂರಿಗೆ ಬರದಂತೆ ಪಕ್ಷದ ಕಾರ್ಯಕರ್ತರೇ ರಸ್ತೆ ಮಧ್ಯದಲ್ಲಿಯೇ ತಡೆದು, ತರಾಟೆಗೆ ತಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್  ಆಗಿದೆ.

    ಇತ್ತೀಚೆಗೆ ಕಿರಗಂದೂರು ಗ್ರಾಮಕ್ಕೆ ಶಾಸಕರು ಅಧಿಕಾರಿಗಳೊಂದಿಗೆ ಭೇಟಿ ನೀಡಲು ಆಗಮಿಸುತ್ತಿದ್ದರು. ತಕ್ಷಣವೇ ಮಾಹಿತಿ ಪಡೆದ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಶಾಸಕರನ್ನು ತಡೆದು, ನೀವು ಬರುವುದನ್ನು ಮೊದಲೇ ಹೇಳಬೇಕಿತ್ತು. ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳುತ್ತಿದ್ದೇವು. ನೀವು ಹಣ ನೀಡುವ ಅಗತ್ಯವಿರಲಿಲ್ಲ, ನಮ್ಮ ಸ್ವಂತ ಹಣದಲ್ಲಿ 5 ಲಕ್ಷ ರೂ. ಖರ್ಚು ಮಾಡಿ ಸ್ವಾಗತ ಮಾಡಿಕೊಳ್ಳುತ್ತಿದ್ದೇವು. ಕಾರ್ಯಕರ್ತರಿಗೆ ತಿಳಿಸದೇ ದಿಢೀರ್ ಗ್ರಾಮಕ್ಕೆ ಭೇಟಿ ನೀಡಲು ಮುಂದಾದ ನಿಮ್ಮ ನಡೆ ಸೂಕ್ತವಲ್ಲ ಎಂದು ದೂರಿದರು.

    ಪಕ್ಷದ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಹೀಗೆ ನಡೆದುಕೊಂಡಿದ್ದರಿಂದ ರೋಸಿ ಹೋದ ಶಾಸಕರು, ಇವತ್ತು ನಿಮ್ಮ ಯೋಗ್ಯತೆಯನ್ನು ತೋರಿಸಿದ್ದೀರಿ. ಇನ್ನು ಮುಂದೆ ನಾನು ಯಾವತ್ತೂ ನಿಮಗೆ ಹತ್ತಿರ ಆಗಿರಲು ಸಾಧ್ಯತೆ ಇಲ್ಲ. ಅಧಿಕಾರಿಗಳನ್ನು ಕರೆದುಕೊಂಡು ಗ್ರಾಮಕ್ಕೆ ಬರುವಾಗ ಹೀಗೆ ನಡೆದುಕೊಂಡಿದ್ದು ಸೂಕ್ತವಲ್ಲ ಎಂದು ಕಾರು ಹತ್ತಿ ಕುಳಿತ ಶಾಸಕರು, ನಾನು ರಾಜಕೀಯ ನೋಡಿರುವೆ, ನಿಮಗೆ ಹೆದರಿ ಹೋಗುತ್ತಿಲ್ಲ. ನೀವು ನನ್ನ ಅಡ್ಡಗಟ್ಟಿ ಮರ್ಯಾದೆ ಕಳೆಯುವ ಕೆಲಸ ಮಾಡಿದ್ದೀರಿ ಎಂದು  ಹೇಳಿ ಜಾಗ ಖಾಲಿ ಮಾಡಿದರು.

    ಕಾರು ಏರಿ ಶಾಸಕರು ಜಾಗ ಖಾಲಿ ಮಾಡುತ್ತಿದ್ದಂತೆ, ನಮ್ಮ ಗ್ರಾಮದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬೇಕು ಅಂತಾ ಗೊತ್ತು. ಹೋಗಿ, ಹೋಗಿ ಎಂದು ಕಾರ್ಯಕರ್ತರು ವ್ಯಂಗ್ಯವಾಡಿದರು. ಶಾಸಕರು ಹಾಗೂ ಕಾರ್ಯಕರ್ತರ ವಾಗ್ದಾಳಿಯನ್ನು ಸ್ಥಳಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೈರಲ್ ಆಗಿದೆ.

    https://youtu.be/oNt9qzy9Bso