Tag: ವಾಟರ್ ಟ್ಯಾಂಕ್

  • ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

    ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

    ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

    ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ ವಿಷದ ಬಾಟೆಲ್ ಮೇಲೆಕ್ಕೆತ್ತಲಾಗಿದ್ದು, ಟ್ಯಾಂಕ್ ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ.

    ಸದ್ಯ ಗ್ರಾಮಕ್ಕೆ ಡಿವೈಎಸ್‍ಪಿ ಹಾಲಮೂರ್ತಿರಾವ್ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕತ್ತಿದ್ದಾರೆ. ಇನ್ನು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಸಕ ಕರುಣಾಕರ್ ರೆಡ್ಡಿ ಸೂಚನೆ ನೀಡಿದ್ದಾರೆ.

  • ಕುಡಿದು ವಾಟರ್ ಟ್ಯಾಂಕ್ ಏರಿದ ಭೂಪ- ಪತ್ನಿ ಬಂದು ಕಾಪಾಡುವಂತೆ ಬೇಡಿಕೆ

    ಕುಡಿದು ವಾಟರ್ ಟ್ಯಾಂಕ್ ಏರಿದ ಭೂಪ- ಪತ್ನಿ ಬಂದು ಕಾಪಾಡುವಂತೆ ಬೇಡಿಕೆ

    – ಶೋಲೆ ಸಿನಿಮಾದಿಂದ ಪ್ರೇರಣೆ

    ಲಕ್ನೋ: ಕಂಠಪೂರ್ತಿ ಮದ್ಯ ಕುಡಿದು ವಾಟರ್ ಟ್ಯಾಂಕ್ ಮೇಲೆ ಹೋಗಿ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಕುಡುಕನೋರ್ವ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶ ಅಲಿಗರ್ ಪ್ರದೇಶದಲ್ಲಿ ನಡೆದಿದೆ.

    ಸುಮಾರು 40 ದಿನಗಳ ನಂತರ ಮದ್ಯದಂಗಡಿಗಳು ಓಪನ್ ಆಗಿರುವುದು ಮದ್ಯಪ್ರಿಯರಿಗೆ ಬಿಡುಗಡೆ ಸಿಕ್ಕಿದಂತೆ ಆಗಿದೆ. ಅಂತೆಯೇ ಉತ್ತರ ಪ್ರದೇಶದಲ್ಲಿ ಮದ್ಯಪಾನ ಮಾಡಿದ ಕುಡುಕನೋರ್ವ ಶೋಲೆ ಸಿನಿಮಾದಿಂದ ಪ್ರೇರಣೆ ಪಡೆದು ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾನೆ. ಕುಡುಕನನ್ನು ಶಶಿ ಎಂದು ಗುರುತಿಸಲಾಗಿದೆ.

    ಮದ್ಯಪಾನ ಮಾಡಿ ಬಂದ ಶಶಿ, ನಗರದ ದೊಡ್ಡ ವಾಟರ್ ಟ್ಯಾಂಕ್ ಮೇಲೆ ಹೋಗಿ ನಾನು ಸಾಯುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸ್ಥಳೀಯರು ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಪೊಲೀಸರು ಮತ್ತು ಮಾಜಿ ಬಿಜೆಪಿ ಮೇಯರ್ ಆದ ಶಕುಂತಲ ಭಾರತಿ ಬಂದು ಆತನ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ. ಮಾಜಿ ಮೇಯರ್ ಮತ್ತು ಪೊಲೀಸರು ಎಷ್ಟೇ ಕೇಳಿಕೊಂಡರೂ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಶಶಿ ಬೆದರಿಕೆ ಹಾಕಿದ್ದಾನೆ.

    ಪೊಲೀಸರು ಮೈಕ್ ಹಿಡಿದು ಆತನನ್ನು ಮನವೊಲಿಸಿದ್ದಾರೆ. ಆತನನ್ನು ಕರೆತರಲು ಮೇಲೆ ಹೋದರೆ ಅದೇ ಭಯದಲ್ಲಿ ಅವನು ಮೇಲಿಂದ ಜಿಗಿದು ಬೀಡುತ್ತಾನೆ ಎಂಬ ಭಯದಿಂದ ಪೊಲೀಸರು ಮೇಲೆ ಹೋಗದೆ ಕೆಳಗೆ ನಿಂತು ಆತನ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ. ಜೊತೆಗೆ ನಿನ್ನ ಪ್ರೀತಿಯಿಂದ ಕಾಣುವ ಪತ್ನಿ ನಿನಗಾಗಿ ಕಾಯುತ್ತಿದ್ದಾರೆ. ನೀನು ಆತ್ಮಹತ್ಯೆ ಮಾಡಿಕೊಂಡರೆ ಅವರು ಸಾಯುತ್ತಾರೆ ಎಂದು ಹೇಳಿ ಮನವರಿಕೆ ಮಾಡಿ ಕೊನೆಗೆ ಕೆಳಗೆ ಇಳಿಸಿದ್ದಾರೆ.

    ಕೆಳಗೆ ಬಂದ ಶಶಿಯನ್ನು ಪೊಲೀಸರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಎಣ್ಣೆ ಕಿಕ್ ಇಳಿದ ಬಳಿಕ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಆತ ನಾನು ಮದ್ಯಪಾನ ಮಾಡಿದ ನಂತರ ನಾನು ಶೋಲೆ ಸಿನಿಮಾದ ಧರ್ಮೇಂದ್ರನಂತೆ ಭಾಸವಾಗಿತು. ನಾನು ಸೂಸೈಡ್ ಮಾಡಿಕೊಳ್ಳಲು ಹೋದಾಗ ನನ್ನ ಹೆಂಡತಿ ಬಂದು ಕಾಪಾಡುತ್ತಾಳೆ ಎಂದು ನಾನು ಹಾಗೆ ಮಾಡಿದೆ ಎಂದು ಒಪ್ಪಿಕೊಂಡಿದ್ದಾನೆ.

  • ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿತ – ಮೂವರ ದುರ್ಮರಣ

    ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿತ – ಮೂವರ ದುರ್ಮರಣ

    – ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

    ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ವಾಟರ್ ಟ್ಯಾಂಕ್ ಕುಸಿತ ಸಂಭವಿಸಿ ಮೂರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ರಕ್ಷಣೆ ಮಾಡಿರುವ ಘಟನೆ ನಗರದ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಲೇಔಟ್‍ನಲ್ಲಿ ಘಟನೆ.

    ನೀರು ಶುದ್ಧೀಕರಣ ಘಟಕ ನಿರ್ಮಿಸಲು ಸುಮಾರು 8 ವಾಟರ್ ಟ್ಯಾಂಕ್ ಗಳನ್ನು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿತ್ತು. ಇಂದು ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಸೆಂಟ್ರಿಂಗ್ ಕಾರ್ಯದಲ್ಲಿ ತೊಡಗಿದ್ದರು. ಆದರೆ ಈ ವೇಳೆ ಏಕಾಏಕಿ ಕಟ್ಟದ ಸೆಂಟ್ರಿಂಗ್ ಕುಸಿತ ಆಗಿದೆ. ಪರಿಣಾಮ ಸುಮಾರು 80 ಅಡಿ ಅಳಕ್ಕೆ ಉರುಳಿ ಬಿದ್ದಿದ್ದಾರೆ.

    ಘಟನೆ ನಡೆಯುತ್ತಿದಂತೆ ಮಾಹಿತಿ ಪಡೆದ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಘಟನೆಯಲ್ಲಿ 20 ಜನರನ್ನು ರಕ್ಷಣೆ ಮಾಡಿದ್ದು, ಇನ್ನು ಹಲವು ಮಂದಿ ಸೆಂಟ್ರಿಂಗ್ ಕೆಳಗೆ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಈಗಾಗಲೇ ರಕ್ಷಣೆ ಮಾಡಿರುವ ಮಂದಿಯಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭಿಸಿದೆ.

    ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಬಹುತೇಕ ಮಂದಿ ಉತ್ತರ ಕರ್ನಾಟಕ ಮೂಲದವರು ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಕೆಲ ಉತ್ತರ ಭಾರತದ ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಘಟನೆಯಲ್ಲಿ ಜೀವ ಉಳಿಸಿಕೊಂಡ ಕೆಲ ಕಾರ್ಮಿಕರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಕೊಲಂಬಿಯ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಿರ್ಮಾಣ ಹಂತದಲ್ಲಿದ್ದ ವಾಟರ್ ಟ್ಯಾಂಕ್ ಬಿಡಬ್ಲೂಎಸ್‍ಎಸ್‍ಬಿ ಕಚೇರಿಗೆ ಸೇರಿದೆ ಎಂಬ ಮಾಹಿತಿ ಲಭಿಸಿದೆ. ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಲು ಬೃಹತ್ 8 ವಾಟರ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿತ್ತು. ಸುಮಾರು 30 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ.

  • ಧರೆಗುರುಳಿತು 34 ವರ್ಷಗಳ ಹಿಂದಿನ ಬೃಹತ್ ವಾಟರ್ ಟ್ಯಾಂಕ್

    ಧರೆಗುರುಳಿತು 34 ವರ್ಷಗಳ ಹಿಂದಿನ ಬೃಹತ್ ವಾಟರ್ ಟ್ಯಾಂಕ್

    ತುಮಕೂರು: ಹತ್ತಾರು ವರ್ಷಗಳಿಂದ ಶಿಥಿಲಗೊಂಡು ಬೀಳುವ ಸ್ಥಿತಿಯಲಿದ್ದ ನೀರಿನ ಟ್ಯಾಂಕ್‍ವೊಂದು ಕೊನೆಗೂ ಧರೆಗುರುಳಿದಿದೆ.

    ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಆತಂಕ ಸೃಷ್ಟಿ ಮಾಡಿದ್ದ ಓವರ್ ಹೆಡ್ ಟ್ಯಾಂಕ್ ಕೊನೆಗೂ ಧರೆಗುರುಳಿದೆ. ಬೃಹದಾರಾಕಾರದ ಈ ಟ್ಯಾಂಕ್ ಉರುಳಿಸಿವ ದೃಶ್ಯ ಮೈಜುಂ ಎನ್ನುವಂತಿದೆ.

    34 ವರ್ಷಗಳ ಹಿಂದೆ ಕಟ್ಟಿದ ಈ ಟ್ಯಾಂಕ್ ಹತ್ತಾರು ವರ್ಷಗಳ ಹಿಂದೆಯೇ ಶಿಥಿಲಗೊಂಡಿತ್ತು. ಪರಿಣಾಮ ಗಾಳಿ ಮಳೆ ಬಂದಾಗ ಅಕ್ಕ ಪಕ್ಕದ ಮನೆಯವರು ಜೀವ ಕೈಯಲ್ಲಿಡಿದು ಬದುಕುತ್ತಿದ್ದರು. ಗ್ರಾಮ ಪಂಚಾಯತಿಯವರಿಗೆ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಟ್ಯಾಂಕ್ ತೆರವುಗೊಳಿಸುವ ಪ್ರಯತ್ನ ಮಾಡಿರಲಿಲ್ಲ.

    ಕೊನೆಗೆ ಹೋರಾಟದ ಎಚ್ಚರಿಕೆ ಕೊಟ್ಟಾಗ ದಾವಣಗೆರೆ ಮೂಲದ ಉಜ್ಜಾನ್ ಅವರು ನಾಲ್ಕು ಜನರ ನೇತೃತ್ವದ ತಂಡ ಕರೆತಂದು ಟ್ಯಾಂಕ್ ಉರುಳಿಸಿದ್ದಾರೆ. ಟ್ಯಾಂಕ್‍ನ ಶಿಥಿಲಗೊಂಡ ಭಾಗದ ಕಂಬಕ್ಕೆ ಬಲವಾಗಿ ಹೊಡೆದು ಟ್ಯಾಂಕ್ ಉರುಳಿಸಲಾಗಿದೆ. ಟ್ಯಾಂಕ್ ಬೀಳುತ್ತಿರುವ ದೃಶ್ಯ ನಿಜಕ್ಕೂ ಎದೆ ಝಲ್ ಎನ್ನಿಸುವಂತಿದೆ.

  • ಕಾಲು, ಸೊಂಟಕ್ಕೆ ಸ್ವಾಧೀನ ಇಲ್ಲದಿದ್ರೂ ಬದುಕುವ ಛಲ-ಬಡವರು, ನಿರ್ಗತಿಕರ ಪಾಲಿನ ಸೇವಕ

    ಕಾಲು, ಸೊಂಟಕ್ಕೆ ಸ್ವಾಧೀನ ಇಲ್ಲದಿದ್ರೂ ಬದುಕುವ ಛಲ-ಬಡವರು, ನಿರ್ಗತಿಕರ ಪಾಲಿನ ಸೇವಕ

    ನೆಲಮಂಗಲ: ಇವರು ಹುಟ್ಟು ವಿಕಲಚೇತನ. ಎರಡೂ ಕಾಲು ಹಾಗೂ ಸೊಂಟದ ಸ್ವಾಧೀನ ಇಲ್ಲ. ಆದರೆ ಅಂಗವಿಕಲತೆ ಸಮಾಜ ಸೇವೆ ಮಾಡೋದಕ್ಕೆ ಯಾವತ್ತೂ ಅಡ್ಡಿಯಾಗಿಲ್ಲ. ತೆವಳಿಕೊಂಡೇ ಓಡಾಡುತ್ತಾ ಸಮಾಜಸೇವೆ ಮಾಡೋ ನೆಲಮಂಗಲದ ಗಂಗಾಧರ್ ನಮ್ಮ ಪಬ್ಲಿಕ್ ಹೀರೋ.

    ಹೀಗೆ ರಸ್ತೆಯಲ್ಲಿ ತೆವಳಿಕೊಂಡು ತನ್ನ ದಿನನಿತ್ಯದ ಕೆಲಸದಲ್ಲಿ ತೊಡಗಿರುವ ಈ ಯುವಕನ ಹೆಸರು ಗಂಗಾಧರ. 7ನೇ ತರಗತಿಯವರೆಗೆ ಓದಿದ್ದಾರೆ. ಆದರೆ ಪೊಲಿಯೋ ಅಟ್ಯಾಕ್ ಆಗಿ ಕಾಲು, ಹಾಗೂ ಸೊಂಟದ ಸ್ವಾಧೀನ ಇಲ್ಲ. ಮೂಲತಃ ಆಂಧ್ರ್ರದವರು ಆದರೆ ಅಪ್ಪಟ ಕನ್ನಡಿಗ. ಬೆಂಗಳೂರು ಹೊರವಲಯ ನೆಲಮಂಗಲದ ಚನ್ನಪ್ಪ ಕಲ್ಯಾಣಿಯ ನಿವಾಸಿ. ಯಾರು ಯಾವುದೇ ಕೆಲಸ ಹೇಳಿದ್ದರು ಚಾಚುತಪ್ಪದೇ ಮಾಡುತ್ತಾರೆ.

    ಜೀವನೋಪಾಯಕ್ಕಾಗಿ ವಾಟರ್ ಟ್ಯಾಂಕ್ ಹಾಗೂ ನೀರಿನ ಸಂಪ್ ಕ್ಲೀನ್ ಮಾಡಿಸುತ್ತಾರೆ. ಇವರ ಜೊತೆ 8 ಮಂದಿ ಯುವಕರ ತಂಡವಿದೆ. ಗಂಗಾಧರ್ ಅವರಿಗೆ ಬಡವರಿಗೆ, ಅಸಹಾಯಕರಿಗೆ, ಅವಿದ್ಯಾವಂತರಿಗೆ ಏನಾದರೂ ಸಹಾಯ ಮಾಡೋ ದೊಡ್ಡ ಮನಸ್ಸಿದೆ. ಹೀಗಾಗಿ ತಾಲೂಕು ಕಚೇರಿಯಲ್ಲಿ ಜನರಿಗೆ ಸಿಗಬೇಕಾದ ಪಾಣಿ, ಮುಟೇಷನ್‍ಗಳನ್ನು ಕೊಡಿಸುತ್ತಾರೆ. ವಿಧವಾ ವೇತನ, ವಿಕಲಚೇತನರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಕೊಡಿಸಲು ಸಹಾಯ ಮಾಡುತ್ತಾರೆ.

    ಒಟ್ಟಾರೆ ದುಡಿದು ಜೀವನ ನಡೆಸುವ ಹಂಬಲದಲ್ಲಿರುವ ಗಂಗಾಧರ್ ಯಾರ ಮುಂದೆನೂ ಕೈ ಚಾಚಿಲ್ಲ. ಇವರ ಸ್ವಾಭಿಮಾನ, ಛಲ ಬದುಕು ಕಟ್ಟಿಕೊಂಡ ಪರಿ ಇತರೆ ವಿಕಲಚೇತನರಿಗೆ ಮಾದರಿಯಾಗಿದೆ.