Tag: ವಾಟ್ಸಾಪ್ ಗ್ರೂಪ್

  • ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಬೆಂಗಳೂರು: ನಗರದ ಸಂಚಾರಿ ಪೊಲೀಸರ (Traffic Police) ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಸಂಚಾರಿ ಪೊಲೀಸರ ಗ್ರೂಪ್‍ನಲ್ಲಿ ಚರ್ಚೆ ಆಗಿರುವ ಮೇಸೆಜ್‍ಗಳಿಂದ ರಿವೀಲ್ ಆಗಿದೆ. ಹಿರಿಯ ಅಧಿಕಾರಿಗಳ ದಬ್ಬಾಳಿಕೆ ಬಗ್ಗೆ ಕಿರಿಯ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

    ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ (Cubban Park Police Station) ಸಂಚಾರಿ ಪೊಲೀಸರ ವಾಟ್ಸಾಪ್ ಗ್ರೂಪ್‍ನಲ್ಲಿ (Whatsapp Group) ಎಎಸ್‍ಐಗಳ ದಬ್ಬಾಳಿಕೆ ಬಗ್ಗೆ ಕಿರಿಯ ಸಹೋದ್ಯೋಗಿಗಳು ಅಸಮಾಧಾನ ಹೊರಹಾಕಿದ್ದಾರೆ. ಎಷ್ಟರ ಮಟ್ಟಿಗೆ ಅಂದರೆ ಎಎಸ್‍ಐಗಳಿಗೆ ಲಂಗು ಲಗಾಮು ಇಲ್ಲ. ಎಸ್‍ಐಗಳು ಠಾಣೆಗಳನ್ನು ತಾವೇ ಬರೆಸಿಕೊಂಡವಂತೆ ನಡೆದುಕೊಳುತ್ತಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ: ಬೊಮ್ಮಾಯಿ

    ನಾವುಗಳು ಸ್ವಲ್ಪ ತಡವಾಗಿ ಠಾಣೆಗೆ ಬಂದರೆ ಡೈರಿ ಬರೆಸಿಕೊಳ್ಳುತ್ತಾರೆ. ಅವರು ಮಾತ್ರ ಬೇಕಾಬಿಟ್ಟಿಯಾಗಿ ಬರುತ್ತಾರೆ. ಕೆಲಸದ ಸಮಯದಲ್ಲಿ ನಾವು ಒಂದು ಕೇಸ್ ಹಾಕುವುದಕ್ಕೆ ಹೋದರೆ ಸೈಡಿಗೆ ಕಳಿಸಿಕೊಡುತ್ತಾರೆ. ಎಎಸ್‍ಐಗಳು ಸತ್ಯ ಹರಿಶ್ಚಂದ್ರರ ತುಂಡುಗಳ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಇದು ಇಲ್ಲಿಗೆ ನಿಲ್ಲಬೇಕೆಂದು ಕಿರಿಯ ಸಹೋದ್ಯೋಗಿಗಳು ವಾಟ್ಸಾಪ್ ಗ್ರೂಪ್‍ನಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: 8 ವರ್ಷದ ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

    Live Tv
    [brid partner=56869869 player=32851 video=960834 autoplay=true]

  • ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ಮಂಗಳೂರು: ಸಾಮಾಜಿಕ ಜಾಲತಾಣವನ್ನು ಬಳಸಿ ಕ್ರೈಂ ಮಾಡುವ ಜನರ ಮಧ್ಯೆ ಬೆಳ್ತಂಗಡಿಯ ಒಂದು ವಾಟ್ಸಪ್ ಗ್ರೂಪ್ ಸಂಘಟನೆ ಸದ್ದಿಲ್ಲದೆ ಸಮಾಜ ಸೇವೆ ಕಾರ್ಯ ಮಾಡುತ್ತಿದೆ.

    ವೀರ ಕೇಸರಿ ಎಂಬ ವಾಟ್ಸಪ್ ಗ್ರೂಪಿನ ಸದಸ್ಯರು ಕಳೆದ ಮೂರೂವರೆ ವರ್ಷದಲ್ಲಿ 42 ಲಕ್ಷ ರೂ. ಹಣವನ್ನು ಸಂಗ್ರಹಿಸಿ ಬಡವರಿಗೆ ನೀಡಿದೆ. 40ನೇ ತಿಂಗಳ 100ನೇ ಯೋಜನೆಯನ್ನು ಈ ವಾಟ್ಸಪ್ ಗುಂಪಿನ ಸದಸ್ಯರು ಸೇರಿ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಅರ್ಥಪೂರ್ಣಗೊಳಿಸಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸೂರು ಇಲ್ಲದ ಕುಟುಂಬಕ್ಕೆ ಮನೆ ಕಟ್ಟಿ ನೀಡಿದ್ದಾರೆ. ಈ 100ನೇ ಯೋಜನೆಯನ್ನು ಅದ್ಧೂರಿಯಿಂದ ಮಾಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಯುವ ಉದ್ಯಮಿ ಅಶ್ವಥ್ ಬಳಂಜ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮನೆ ಹಸ್ತಾಂತರಿಸಿದ್ದಾರೆ.

    ಮಧ್ಯಮ ಕುಟುಂಬದ ಜನರೇ ಈ ವಾಟ್ಸಪ್ ಗುಂಪಿನ ಸದಸ್ಯರಾಗಿದ್ದು, ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಮಾಜದ ಬಡಬಗ್ಗರಿಗೆ ನೆರವಾಗಿ ಮಾದರಿಯಾಗಿದ್ದಾರೆ.

  • ತುಂಗಭದ್ರ ನದಿ ಪಾತ್ರವನ್ನು ಸ್ವಚ್ಛಗೊಳಿಸಲು ಪಣ ತೊಟ್ಟ ಹರಿಹರ ಯುವಜನತೆ

    ತುಂಗಭದ್ರ ನದಿ ಪಾತ್ರವನ್ನು ಸ್ವಚ್ಛಗೊಳಿಸಲು ಪಣ ತೊಟ್ಟ ಹರಿಹರ ಯುವಜನತೆ

    ದಾವಣಗೆರೆ: ವಾಟ್ಸಪ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ ಅನಾವಶ್ಯಕ ಚರ್ಚೆಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಾರೆ. ಆದರೆ ದಾವಣಗೆರೆಯ ಹರಿಹರ ತಾಲೂಕಿನ ಯುವ ಸಮೂಹ ಈ ವಾಟ್ಸಪ್ ಗ್ರೂಪ್ ನಿಂದ ತುಂಗಭದ್ರ ನದಿಯನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಪಣ ತೊಟ್ಟಿದ್ದಾರೆ.

    ತುಂಗಭದ್ರ ನದಿ ದಾವಣಗೆರೆಯ ಹಲವು ತಾಲೂಕುಗಳ ಜೀವನಾಡಿಯಾಗಿದ್ದು, ಹರಿಹರ ತಾಲೂಕಿನ ಪಕ್ಕದಲ್ಲೇ ತುಂಗಭದ್ರ ನದಿ ಹರಿಯುತ್ತಿದ್ದು, ನದಿಯ ಪಾತ್ರದಲ್ಲಿ ಸಾಕಷ್ಟು ಪ್ರವಾಸಿಗರು ಬಂದು ಎಂಜಾಯ್ ಮಾಡಿ ಹೋಗ್ತಾರೆ. ಆದರೆ ಅದರ ಸ್ವಚ್ಛತೆ ಬಗ್ಗೆ ಯಾರೂ ಕೂಡ ಕಾಳಜಿ ವಹಿಸುವುದಿಲ್ಲ.

    ಹರಿಹರದ ಪಟ್ಟಣದ ಯುವ ಸಮೂಹ ವಾಟ್ಸಪ್ ನಲ್ಲಿ ‘ನನ್ನ ಊರು ನನ್ನ ಹೊಣೆ’ ಎಂಬ ಗ್ರೂಪ್ ಕ್ರಿಯೇಟ್ ಮಾಡಿದ್ದಾರೆ. ಅದರ ಉದ್ದೇಶ ಕೇವಲ ಪರಿಸರ ಜಾಗೃತಿ ಹಾಗೂ ಪರಿಸರ ಸ್ವಚ್ಛತೆ ಎಂಬ ಧ್ಯೇಯ. ತಮ್ಮ ಸ್ನೇಹಿತರನ್ನು ಆ ಗ್ರೂಪ್‍ನಲ್ಲಿ ಸೇರ್ಪಡೆ ಮಾಡಿ ವಾರಕ್ಕೆ ಒಮ್ಮೆ ನದಿಯ ಪಾತ್ರದಲ್ಲಿ ಇರುವ ಕಸವನ್ನು ಸ್ವಚ್ಛ ಮಾಡುವುದಕ್ಕೆ ಪಣ ತೊಟ್ಟು ಕೆಲಸ ಮಾಡುತ್ತಿದ್ದಾರೆ.

    ಈಗ ಸಂಕ್ರಾಂತಿ ಹಬ್ಬ ಕೂಡ ಹತ್ತಿರ ಬಂದಿದೆ. ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಪುಣ್ಯಸ್ನಾನ, ಪೂಜೆ ಮಾಡುವುದು ಇಲ್ಲಿನ ವಾಡಿಕೆ. ಪ್ರತಿ ವರ್ಷ ಮಕರ ಸಂಕ್ರಾಂತಿಗೆ ಪುಣ್ಯಸ್ನಾನ ಹಾಗೂ ಪೂಜೆಗೆಂದು ಸಾವಿರಾರು ಭಕ್ತರು ಹರಿಹರದ ತುಂಗಭದ್ರಾ ದಂಡೆಯಲ್ಲಿ ಸೇರುತ್ತಾರೆ. ಆ ಸಂದರ್ಭದಲ್ಲಿ ನದಿ ಪಾತ್ರ ಸ್ವಚ್ಛವಾಗಿರಬೇಕಂಬ ಸಂಕಲ್ಪದಿಂದ ನದಿ ಪಾತ್ರ ಸ್ವಚ್ಛತೆ ಆಂದೋಲನ ಆರಂಭಿಸಿದ್ದಾರೆ. ವಾರಕ್ಕೆ ಒಮ್ಮೆ ಬೆಳಗ್ಗೆ ನದಿಪಾತ್ರ ಸ್ವಚ್ಛತೆ ಗ್ರೂಪ್‍ನಲ್ಲಿಂದ ಸದಸ್ಯರು ಮಾತ್ರವಲ್ಲದೇ, ನಗರದ ಜನಪ್ರತಿನಿಧಿಗಳು, ನಾಗರಿಕರು, ಮಹಿಳೆಯರು, ಮಕ್ಕಳು ಕೈಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

  • ರಾಮನಗರದ ‘ನಮೋ’ ವಾಟ್ಸಪ್ ಗ್ರೂಪ್‍ನಲ್ಲಿ ಅಶ್ಲೀಲ ವಿಡಿಯೋ ಶೇರ್

    ರಾಮನಗರದ ‘ನಮೋ’ ವಾಟ್ಸಪ್ ಗ್ರೂಪ್‍ನಲ್ಲಿ ಅಶ್ಲೀಲ ವಿಡಿಯೋ ಶೇರ್

    ರಾಮನಗರ: ನರೇಂದ್ರ ಮೋದಿ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

    ಇತ್ತೀಚೆಗೆ ರಾಜ್ಯದ 30 ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಹಾಗೂ ನರೇಂದ್ರ ಮೋದಿಯವರ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ಹಾಗೂ ಸಂಘಟನೆ ದೃಷ್ಟಿಯಿಂದ ವಾಟ್ಸಪ್ ಗ್ರೂಪ್‍ಗಳನ್ನು ಮಾಡಲಾಗಿದೆ. ಆದರೆ ಸೋಮವಾರ ನಮೋ ಸೇನೆ ರಾಮನಗರ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ.

    ಅಶ್ಲೀಲ ವಿಡಿಯೋ ನೋಡಿದ ಗ್ರೂಪಿನ ಸದಸ್ಯರು ವಿಡಿಯೋ ಶೇರ್ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಆತನನ್ನು ಗ್ರೂಪಿನಿಂದ ಹೊರಹಾಕುವಂತೆ ತಿಳಿಸ್ತಿದ್ದಂತೆ ಗ್ರೂಪ್ ಅಡ್ಮಿನ್ ಆತನನ್ನು ಗ್ರೂಪಿನಿಂದ ತೆಗೆದಿದ್ದಾರೆ. ಈ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಸಹ ಇದ್ದು, ಅಶ್ಲೀಲ ವಿಡಿಯೋ ಶೇರ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರೂಪ್‍ನ ಅಡ್ಮಿನ್ ಬ್ಯಾಡರಹಳ್ಳಿ ಕುಮಾರ್ ಈ ಬಗ್ಗೆ ಮಾತನಾಡಿ ಆತ ಅನ್ಯ ಕೋಮಿನವನು ಸೋಮವಾರ ಗ್ರೂಪ್‍ಗೆ ಬಂದಿದ್ದು ರಾತ್ರಿ ಈ ರೀತಿಯ ವಿಡಿಯೋಗಳನ್ನು ಹಾಕಿದ್ದಾನೆ. ಈ ರೀತಿ ವಿಡಿಯೋ ಶೇರ್ ಮಾಡೋದಕ್ಕೆ ಬೇರೆ ಗ್ರೂಪ್‍ಗಳಿವೆ ಅದರಲ್ಲಿ ಶೇರ್ ಮಾಡ್ಕೊ ಎಂದೇಳಿ ಗ್ರೂಪ್‍ನಿಂದ ಹೊರ ಹಾಕಿರುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಾಟ್ಸಾಪ್ ಗ್ರೂಪಿನಲ್ಲಿ 100ಕ್ಕೂ ಹೆಚ್ಚು ಸೆಕ್ಸ್ ಫೋಟೋ ಕಳಿಸಿದ ಅಧಿಕಾರಿ..!

    ವಾಟ್ಸಾಪ್ ಗ್ರೂಪಿನಲ್ಲಿ 100ಕ್ಕೂ ಹೆಚ್ಚು ಸೆಕ್ಸ್ ಫೋಟೋ ಕಳಿಸಿದ ಅಧಿಕಾರಿ..!

    ಬೆಂಗಳೂರು: ಅಧಿಕಾರಿಯೊಬ್ಬ ಶಿಕ್ಷಕರ ಹಾಗೂ ಹೆಡ್ ಮಾಸ್ಟರ್ ವಿರುವ ವಾಟ್ಸಾಪ್ ಗ್ರೂಪಿನಲ್ಲಿ ನೂರಕ್ಕೂ ಹೆಚ್ಚು ಸೆಕ್ಸ್ ಹಾಗೂ ಬೆತ್ತಲೆ ಫೋಟೋಗಳನ್ನು ಕಳುಹಿಸಿದ್ದಾನೆ.

    ಬೆಂಗಳೂರು ದಕ್ಷಿಣ ವಿಭಾಗ 2ರ ವಲಯ ಸಂಪರ್ಕ ಅಧಿಕಾರಿ ಅಣ್ಣೇಗೌಡ, ತಮ್ಮ ವಯಲದ ಶಾಲೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ಶಿಕ್ಷಕರಿಗೆ ಹಾಗೂ ಹೆಡ್ ಮಾಸ್ಟರ್ ಗಳಿಗೆ ವಿಚಾರ ತಿಳಿಸುವ ಉದ್ದೇಶದಿಂದ ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡಿದ್ದಾರೆ.

    ಶುಕ್ರವಾರ ಬೆಳಗ್ಗೆ ಅಣ್ಣೇಗೌಡ ಸೆಕ್ಸ್ ಫೋಟೋಗಳನ್ನು ಹಾಗೂ ಒಂದರ ಮೇಲೋಂದರಂತೆ ನೂರಕ್ಕೂ ಹೆಚ್ಚು ಬೆತ್ತಲೆ ಫೋಟೋಗಳನ್ನು ವಾಟ್ಸಾಪ್ ಗ್ರೂಪಿಗೆ ಸೆಂಡ್ ಮಾಡಿದ್ದಾನೆ. ಇದರಿಂದ ಕಂಗಾಲಾದ ಕೆಲ ಮಹಿಳಾ ಶಿಕ್ಷಕರು ಈ ಗ್ರೂಪ್ ಸಹವಾಸನೇ ಬೇಡ ಅಂತಾ ಎಗ್ಸಿಟ್ ಆಗಿದ್ದಾರೆ. ಈ ಕೆಲಸ ಮಾಡಿದ ಅಣ್ಣೇಗೌಡ ಗ್ರೂಪ್ ನಲ್ಲಿ ಉಳಿದುಕೊಂಡಿದ್ದ ಶಿಕ್ಷಕರಿಗೆ ಕರೆ ಮಾಡಿ ಆ ಫೋಟೋಗಳನ್ನು ಡಿಲೀಟ್ ಮಾಡುವಂತೆ ವಾರ್ನಿಂಗ್ ಕೂಡ ನೀಡಿದ್ದಾರೆ.

    ಇದೀಗ ಈ ಸಂಬಂಧ ಶಿಕ್ಷಕರೂ ಅಣ್ಣೇಗೌಡನ ವಿರುದ್ಧ ಬಿಇಓ ಮತ್ತೆ ಡಿಡಿಪಿಐಗೆ ದೂರು ನೀಡಲು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪಘಾತದಲ್ಲಿ ಮೃತಪಟ್ಟ ಪೇಪರ್ ಮಾರೋ ಹುಡ್ಗನ ಕುಟುಂಬಕ್ಕೆ ಪತ್ರಕರ್ತರ ವಾಟ್ಸಪ್  ಗ್ರೂಪ್ ಆಸರೆ

    ಅಪಘಾತದಲ್ಲಿ ಮೃತಪಟ್ಟ ಪೇಪರ್ ಮಾರೋ ಹುಡ್ಗನ ಕುಟುಂಬಕ್ಕೆ ಪತ್ರಕರ್ತರ ವಾಟ್ಸಪ್ ಗ್ರೂಪ್ ಆಸರೆ

    ರಾಯಚೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೀ ಚರ್ಚೆ, ಕಾಲೆಳೆಯೋದೆ ಹೆಚ್ಚಾಗುತ್ತಿದೆ. ಆದ್ರೆ ಇದಕ್ಕೆ ವಿರುದ್ಧವಾಗಿ `ಕರ್ನಾಟಕ ಪತ್ರಿಕಾ ಬಳಗ’ ಹೆಸರಿನ ವಾಟ್ಸಪ್   ಗ್ರೂಪ್ ಸಾಮಾಜಿಕ ಕಳಕಳಿಯನ್ನ ಮೆರೆದಿದೆ. ಗ್ರೂಪ್ ಗೆ ಬಂದ ಒಂದು ಮೆಸೇಜ್ ಗೆ ಸ್ಪಂದಿಸಿದ ಸದಸ್ಯರು ಕಷ್ಟದಲ್ಲಿನ ಕುಟುಂಬವೊಂದಕ್ಕೆ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.

    2017 ಮಾರ್ಚ್ 20 ರಂದು ರಾಯಚೂರಿನ ಗೋಶಾಲಾ ರಸ್ತೆಯಲ್ಲಿ ಸೈಕಲ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ ಪಟ್ಟ ಮನೆ, ಮನೆಗೆ ಪತ್ರಿಕೆ ಹಾಕುವ ಬಡ ಹುಡುಗ ಉಪೇಂದ್ರನ ಕುಟುಂಬಕ್ಕೆ ವಾಟ್ಸಪ್   ಗ್ರೂಪ್ ನ ಸದಸ್ಯರೆಲ್ಲಾ ಸೇರಿ 41,001ರೂ. ಚೆಕ್ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

    ಎಲ್ಲಾ ಗ್ರೂಪ್ ಗಳಂತೆ ಹುಟ್ಟಿಕೊಂಡ ಕರ್ನಾಟಕ ಪತ್ರಿಕಾ ಬಳಗ ಸಮಾಜಕ್ಕೆ ಒಳಿತು ಮಾಡುವ ಉದ್ದೇಶದೊಂದಿಗೆ ಮೊದಲ ಹೆಜ್ಜೆ ಇಟ್ಟಿದೆ. ಕರ್ನಾಟಕದ ವಿವಿಧ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಕೆಲಸ ಮಾಡುವ ಜಾಹಿರಾತು, ಪ್ರಸರಣ, ವರದಿಗಾರಿಕೆ ಸೇರಿ ವಿವಿಧ ವಿಭಾಗಗಳ ವಿವಿಧ ಜಿಲ್ಲೆಯ 214 ಜನ ಈ ಗ್ರೂಪ್ ನ ಸದಸ್ಯರಾಗಿದ್ದಾರೆ.

    ಸಂಜೀವ್ ಕುಮಾರ್, ಮಹಾರುದ್ರಲಿಂಗ ಪಟ್ಟಣಶೆಟ್ಟಿ, ಮಂಜುನಾಥ್ ದ್ಯಾವನಗೌಡ್ರು, ಶಂಕರಲಿಂಗ ಮಾಳಗಿ ಅವರ ಆಸಕ್ತಿಯಿಂದ ಈ ಗ್ರೂಪ್ ಸಮಾಜ ಮುಖಿಯಾಗಿ ಮುಂದುವರೆಯಲು ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಹುಬ್ಬಳಿ ವಿಭಾಗದಲ್ಲಿ ಈ ಗ್ರೂಪ್ ನ್ನ ನೋಂದಣಿ ಮಾಡಿಸುವ ಮೂಲಕ ಹೆಚ್ಚು ಜವಾಬ್ದಾರಿ ಹೊತ್ತುಕೊಳ್ಳಲು ಈ ಗೆಳೆಯರ ಗುಂಪು ಆಸಕ್ತಿ ಹೊಂದಿದೆ.